Mangalore

ಮಂಗಳೂರು: ನೀತಿ ಸಂಹಿತೆ ಹಿನ್ನೆಲೆ         ➤ ಕರಾವಳಿಯಾದ್ಯಂತ ಪೊಲೀಸರ ಹದ್ದಿನಕಣ್ಣು

(ನ್ಯೂಸ್ ಕಡಬ)newskadaba.com ಮಂಗಳೂರು, ಮಾ.30. ರಾಜ್ಯ ವಿಧಾನಸಭಾ ಚುನಾವಣೆಗೆ ದಿನಾಂಕ ಘೋಷಣೆಯಾದ ಬೆನ್ನಲ್ಲೇ ಚುನಾವಣಾ ನೀತಿ ಸಂಹಿತೆಯೂ ಜಾರಿಗೊಂಡಿದೆ. ಇದರಿಂದ ಕರಾವಳಿ ಭಾಗದಲ್ಲಿ ತರಾತುರಿಯಲ್ಲಿ ನಡೆಯುತ್ತಿದ್ದ ವಿವಿಧ ಯೋಜನೆಗಳ ಶಿಲಾನ್ಯಾಸ, ಉದ್ಘಾಟನೆ, ಹಕ್ಕುಪತ್ರ ವಿತರಣೆಯಂತಹ ಸರ್ಕಾರಿ ಕಾರ್ಯಕ್ರಮಗಳಿಗೆ ಬುಧವಾರದಿಂದಲೇ ಬ್ರೇಕ್ ಹಾಕಲಾಗಿದೆ. ಕರ್ನಾಟಕ ವಿಧಾನಸಭೆಗೆ ಮೇ.10ರಂದು ಚುನಾವಣೆ ನಡೆಯಲಿದೆ. ಚುನಾವಣೆ ದಿನಾಂಕ ಘೋಷಣೆಯೊಂದಿಗೆ ಚುನಾವಣಾ ಮಾದರಿ ನೀತಿ ಸಂಹಿತೆಯೂ ಜಾರಿಗೊಂಡಿದೆ. ನೀತಿ ಸಂಹಿತೆ ಜಾರಿಯಲ್ಲಿರುವಾಗ ಯಾವುದೇ ಸರ್ಕಾರಿ ಕಾರ್ಯಕ್ರಮಗಳನ್ನು ನೆರವೇರಿಸುವಂತಿಲ್ಲ. ಹೀಗಾಗಿ ವಿವಿಧ ಯೋಜನೆಗಳ ಶಿಲಾನ್ಯಾಸ, ಹಕ್ಕುಪತ್ರ […]

ಮಂಗಳೂರು: ನೀತಿ ಸಂಹಿತೆ ಹಿನ್ನೆಲೆ         ➤ ಕರಾವಳಿಯಾದ್ಯಂತ ಪೊಲೀಸರ ಹದ್ದಿನಕಣ್ಣು Read More »

ಕರಾವಳಿ

ಮಂಗಳೂರು: ನಿಷೇಧಿತ ಇ-ಸಿಗರೇಟ್‌ ಮಾರಾಟ ➤ ಐವರು ಆರೋಪಿಗಳು ಅರೆಸ್ಟ್

(ನ್ಯೂಸ್ ಕಡಬ)newskadaba.com ಮಂಗಳೂರು, ಮಾ.30. ಲಾಲ್‌ ಭಾಗ್‌ನ ವಾಣಿಜ್ಯ ಸಂಕೀರ್ಣವೊಂದರ ಅಂಗಡಿಗಳಲ್ಲಿ ಅಕ್ರಮವಾಗಿ ಶೇಖರಿಸಿಡಲಾಗಿದ್ದ ನಿಷೇಧಿತ ಇ-ಸಿಗರೇಟ್‌ ಮತ್ತು ವಿದೇಶಿ ಸಿಗರೇಟ್‌ಗಳನ್ನು ಪೊಲೀಸರು ವಶಪಡಿಸಿಕೊಂಡಿದ್ದು, ಐದು ಮಂದಿಯನ್ನು ಬಂಧಿಸಿದ್ದಾರೆ ಬಂಧಿತರನ್ನು ರೆಹಮತ್ತುಲ್ಲಾ, ಸಂತೋಷ, ಶಿವು ಯಾನೆ ಶಿವಾನಂದ, ಹಸನ್ ಶರೀಫ್, ಇರ್ಷಾದ್ ಎಂದು ಗುರುತಿಸಲಾಗಿದೆ. ಇ-ಸಿಗರೇಟ್ ಮಾರಾಟ ಮಾಡುತ್ತಿರುವ ಬಗ್ಗೆ ಖಚಿತ ಮಾಹಿತಿ ಮೇರೆಗೆ ವಾಣಿಜ್ಯ ಸಂಕೀರ್ಣವೊಂದರ ಅಂಗಡಿಗಳ ಮೇಲೆ ದಾಳಿ ಒಟ್ಟು 1,50,000 ಮೌಲ್ಯದ 273 ಇ-ಸಿಗರೇಟ್ ಗಳನ್ನು ಹಾಗೂ ಕೊಟ್ಟಾ ಕಾಯ್ದೆಯಡಿ ಪ್ರಕರಣವನ್ನು ದಾಖಲಿಸಿ

ಮಂಗಳೂರು: ನಿಷೇಧಿತ ಇ-ಸಿಗರೇಟ್‌ ಮಾರಾಟ ➤ ಐವರು ಆರೋಪಿಗಳು ಅರೆಸ್ಟ್ Read More »

ಕರಾವಳಿ, ಕ್ರೈಮ್ ನ್ಯೂಸ್

ಕುಂದಾಪುರ: ಅಕ್ರಮ ಹಣ ಸಾಗಾಟ..! ➤ 13 ಲಕ್ಷ.ರೂ ವಶಕ್ಕೆ

(ನ್ಯೂಸ್ ಕಡಬ)newskadaba.com ಕುಂದಾಪುರ, ಮಾ.30. ದ್ವಿಚಕ್ರ ವಾಹನದಲ್ಲಿ ಸವಾರನೋರ್ವ ದಾಖಲೆಯಿಲ್ಲದೆ, ಅಕ್ರಮವಾಗಿ ಹಣ ಸಾಗಿಸುತ್ತಿದ್ದ ಆರೋಪದಲ್ಲಿ ಕುಂದಾಪುರ ಪೊಲೀಸರು 13 ಲಕ್ಷ ರೂ. ವಶಕ್ಕೆ ಪಡೆದ ಘಟನೆ ಸಂಗಮ್‌ ಬಳಿಯ ಚೆಕ್ ಪೋಸ್ಟ್ ನಲ್ಲಿ ನಡೆದಿದೆ. ಮೂಲತಃ ಮಹಾರಾಷ್ಟ್ರದ, ಪ್ರಸ್ತುತ ಕೋಟೇಶ್ವರ ಸಮೀಪದ ನಿವಾಸಿ ದಿಲೀಪ್ ಗೋಡ್ಸೆ (47) ಎಂಬಾತ ತನ್ನ ಬೈಕಿನಲ್ಲಿ ಯಾವುದೇ ದಾಖಲೆಗಳಿಲ್ಲದೆ 13 ಲಕ್ಷ ಸಾಗಿಸುತ್ತಿದ್ದ. ಕುಂದಾಪುರ ಸಂಗಮ್ ಜಂಕ್ಷನ್ ಬಳಿ ಪೊಲೀಸ್ ಚೆಕ್ ಪೊಸ್ಟ್ ಬಳಿ ಪೊಲೀಸರು ವಾಹನ ತಪಾಸಣೆಯಲ್ಲಿ ತೊಡಗಿದ್ದಾಗ

ಕುಂದಾಪುರ: ಅಕ್ರಮ ಹಣ ಸಾಗಾಟ..! ➤ 13 ಲಕ್ಷ.ರೂ ವಶಕ್ಕೆ Read More »

ಕರಾವಳಿ, ಕರ್ನಾಟಕ, ಕ್ರೈಮ್ ನ್ಯೂಸ್

ಕಡಬ: ದೈವ ನರ್ತನ ಮಾಡುತ್ತಿದ್ದಾಗಲೇ ಕುಸಿದು ಬಿದ್ದು ಮೃತ್ಯು

(ನ್ಯೂಸ್ ಕಡಬ)newskadaba.com ಕಡಬ, ಮಾ.30. ದೈವ ನರ್ತನ ಮಾಡುತ್ತಿದ್ದಾಗಲೇ ಕುಸಿದು ಬಿದ್ದು ದೈವ ನರ್ತಕರೊಬ್ಬರು ಇಹಲೋಕ ತ್ಯಜಿಸಿದ ಘಟನೆ ಮಾ.30 ರಂದು ಕಡಬ ಸಮೀಪದ ಎಡಮಂಗಲ ಗ್ರಾಮದಿಂದ ವರದಿಯಾಗಿದೆ. ಗ್ರಾಮದಲ್ಲಿ ದೈವ ನರ್ತಕರಾಗಿ ಹೆಸರುವಾಸಿಯಾಗಿದ್ದ ಕಾಂತು ಅಜಿಲ ಮೂಲಂಗೀರಿ ಮೃತಪಟ್ಟವರು ಎಂದು ಗುರುತಿಸಲಾಗಿದೆ. ಹಲವಾರು ವರ್ಷಗಳಿಂದ ಎಡಮಂಗಲ ಗ್ರಾಮದ ಕೂಡುಗಟ್ಟಿಗೆ ಸಂಬಂಧಿಸಿದಂತೆ ದೈವಾರಾದಕರಾಗಿ ಗ್ರಾಮದೈವಗಳ ಪರಿಚಾರಕರಾಗಿ ಸೇವೆ ಸಲ್ಲಿಸುತ್ತಿದ್ದರು. ಮಾ.30 ರಂದು ಎಡಮಂಗಲ ಗ್ರಾಮದ ಇಡ್ಯಡ್ಕದಲ್ಲಿ ಗ್ರಾಮಕ್ಕೆ ಸಂಬಂಧಿಸಿದ ನೇಮೊತ್ಸವ ನಡೆಯುತ್ತಿತ್ತು. ದೈವ ನರ್ತನ ಮಾಡುತ್ತಿರುವಾಗಲೇ ಕುಸಿದು

ಕಡಬ: ದೈವ ನರ್ತನ ಮಾಡುತ್ತಿದ್ದಾಗಲೇ ಕುಸಿದು ಬಿದ್ದು ಮೃತ್ಯು Read More »

ಕರಾವಳಿ, ಕ್ರೈಮ್ ನ್ಯೂಸ್

ಬೆಳ್ತಂಗಡಿ: ಬೆಳಕು ಯೋಜನೆಯಲ್ಲಿ ಎಳನೀರಿನ 33 ಮನೆಗಳಿಗೆ ವಿದ್ಯುತ್ ಬೆಳಕು

(ನ್ಯೂಸ್ ಕಡಬ)newskadaba.com ಬೆಳ್ತಂಗಡಿ, ಮಾ.29. ಸರಕಾರದ ಬೆಳಕು ಯೋಜನೆಯಲ್ಲಿ ದುರ್ಗಮ ಪ್ರದೇಶವಾದ ಬೆಳ್ತಂಗಡಿ ತಾಲೂಕಿನ ಮಲವಂತಿಗೆ ಗ್ರಾಮದ ಎಳನೀರು ಪ್ರದೇಶದ ಒಟ್ಟು 33 ಮನೆಗಳಿಗೆ ವಿದ್ಯುತ್ ಸಂಪರ್ಕ ಕಲ್ಪಿಸುವ ಯೋಜನೆ ಪೂರ್ಣಗೊಂಡಿದ್ದು , ಉದ್ಘಾಟನೆಗೊಳ್ಳುವ ಮೂಲಕ ಇಲ್ಲಿನ ಮನೆಗಳಲ್ಲಿ ವಿದ್ಯುತ್ ಬೆಳಕು ಚೆಲ್ಲಲಿದ್ದು, ಸರಿ ಸುಮಾರು 75 ವರ್ಷಗಳ ಬಳಿಕ‌ ವಿದ್ಯುತ್ ಸಂಪರ್ಕ ಸಿಗುತ್ತಿದೆ. ಬೆಳ್ತಂಗಡಿಯಿಂದ 120 ಕಿಮೀ ದೂರದಲ್ಲಿರುವ ಎಳನೀರು ಪ್ರದೇಶದಲ್ಲಿ 150 ರಷ್ಟು ಮನೆಗಳು ಹಾಗೂ 600ಕ್ಕಿಂತ ಅಧಿಕ ಜನಸಂಖ್ಯೆ ಇದೆ. ಜಲಪಾತಗಳ ಸಹಿತ

ಬೆಳ್ತಂಗಡಿ: ಬೆಳಕು ಯೋಜನೆಯಲ್ಲಿ ಎಳನೀರಿನ 33 ಮನೆಗಳಿಗೆ ವಿದ್ಯುತ್ ಬೆಳಕು Read More »

ಕರಾವಳಿ

ಮಂಗಳೂರು: ಗಾಂಜಾ ಮಾರಾಟಕ್ಕೆ ಯತ್ನ    ➤ ಇಬ್ಬರು ಆರೋಪಿಗಳ ಬಂಧನ

(ನ್ಯೂಸ್ ಕಡಬ)newskadaba.com ಸುರತ್ಕಲ್, ಮಾ.29. ಗಾಂಜಾ ಮಾರಾಟ ಮಾಡಲು ಯತ್ನಿಸುತ್ತಿದ್ದ ಇಬ್ಬರನ್ನು ಸುರತ್ಕಲ್ ಪೊಲೀಸರು ಬಂಧಿಸಿ ಅಪಾರ ಪ್ರಮಾಣದ ಗಾಂಜಾವನ್ನು ವಶಕ್ಕೆ ಪಡೆದಿದ್ದಾರೆ. ಬಂಧಿತರನ್ನು ಒರಿಸ್ಸಾ ಮೂಲದ ಚಿಂತಾಮಣಿ ಮತ್ತು ಎಂದು ಪೊಲೀಸರು ಮಾಹಿತಿ ನೀಡಿದ್ದು, ಇವರಿಂದ 3.180 ಕೆಜಿ ಗಾಂಜಾವನ್ನು ವಶಕ್ಕೆ ಪಡೆಲಾಗಿದೆ ಎಂದು ತಿಳಿಸಿದ್ದಾರೆ. ಬಂಧಿತರು ಇಲ್ಲಿನ ಇಡ್ಯಾ ಗ್ರಾಮದ ಗೋವಿಂದದಾಸ ಕಾಲೇಜು ಬಳಿ ಗಾಂಜಾವನ್ನು ಮಾರಾಟ ಮಾಡಲು ಯತ್ನಿಸುತ್ತಿರುವ ಕುರಿತ ಖಚಿತ ವರ್ತಮಾನದ ಹಿನ್ನೆಲೆಯಲ್ಲಿ ಸುರತ್ಕಲ್ ಪೊಲೀಸ್ ನಿರೀಕ್ಷಕ ಮಹೇಶ್ ಪ್ರಸಾದ ನೇತೃತ್ವದ

ಮಂಗಳೂರು: ಗಾಂಜಾ ಮಾರಾಟಕ್ಕೆ ಯತ್ನ    ➤ ಇಬ್ಬರು ಆರೋಪಿಗಳ ಬಂಧನ Read More »

ಕರಾವಳಿ

ಉಡುಪಿ: ಶಿವರಾಮ ಕಾರಂತರ ಆಪ್ತ ಸಹಾಯಕಿ ಮಾಲಿನಿ ಮಲ್ಯ ನಿಧನ

(ನ್ಯೂಸ್ ಕಡಬ)newskadaba.com ಉಡುಪಿ, ಮಾ.29. ಕೋಟ ಡಾ. ಶಿವರಾಮ ಕಾರಂತ ಅಧ್ಯಯನ ಕೇಂದ್ರದ ಅಧ್ಯಕ್ಷೆಯಾಗಿದ್ದ ಮಾಲಿನಿ ಮಲ್ಯ ಬೆಂಗಳೂರು ಆಸ್ಪತ್ರೆಯಲ್ಲಿ ಅಸೌಖ್ಯದಿಂದ ನಿಧನರಾಗಿದ್ದಾರೆ. ದೀರ್ಘ ಕಾಲದಿಂದಲೂ ಪಾರ್ಕಿನ್ಸನ್ ರೋಗದಿಂದ ಬಳಲುತ್ತಿದ್ದ ಅವರನ್ನು ಸಾಲಿಗ್ರಾಮದಿಂದ ಇತ್ತೀಚಿಗಷ್ಟೆ ಬೆಂಗಳೂರಿಗೆ ಕರೆದುಕೊಂಡು ಹೋಗಲಾಗಿತ್ತು. ಸಾಲಿಗ್ರಾಮದಲ್ಲಿ ಕಾರಂತ ಸ್ಮೃತಿ ಭವನ ನಿರ್ಮಿಸಿ ಕಾರಂತ ಕಾರ್ಯಕ್ರಮ ಆಯೋಜನೆ‌ ಮಾಡುತ್ತಿದ್ದರು.  

ಉಡುಪಿ: ಶಿವರಾಮ ಕಾರಂತರ ಆಪ್ತ ಸಹಾಯಕಿ ಮಾಲಿನಿ ಮಲ್ಯ ನಿಧನ Read More »

ಕರಾವಳಿ

ಬೆಳ್ತಂಗಡಿ: ಹೆಂಡತಿಗೆ ಕತ್ತಿಯಿಂದ ಕಡಿದ ಪಾಪಿ ಗಂಡ..!  ➤ ಪತ್ನಿ ಆಸ್ಪತ್ರೆಗೆ, ಪತಿ ರಕ್ತದೊತ್ತಡದಿಂದ ಮೃತ್ಯು

(ನ್ಯೂಸ್ ಕಡಬ)newskadaba.com ಧರ್ಮಸ್ಥಳ, ಮಾ.29. ಪತಿ ಮತ್ತು ಪತ್ನಿ ನಡುವೆ ಜಗಳ ನಡೆದು, ಪತಿ ಮೃತಪಟ್ಟ ಘಟನೆ ಧರ್ಮಸ್ಥಳ ಗ್ರಾಮದ ಕನ್ಯಾಡಿ ಹತ್ತಿರ ಗಂಗೆತ್ಯಾರ್ ಎಂಬಲ್ಲಿ ಎಂಬಲ್ಲಿ ನಡೆದಿದೆ. ರಾಮಣ್ಣ ಗೌಡ ಮೃತಪಟ್ಟ ವ್ಯಕ್ತಿ ಎಂದು ಗುರುತಿಸಲಾಗಿದೆ. ಚೆನ್ನಕ್ಕ ಗಂಭೀರ ಗಾಯಗೊಂಡು ಮಂಗಳೂರು ಖಾಸಗಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ. ಪತ್ನಿಯೊಂದಿಗೆ ಜಗಳವಾಡಿದ ರಾಮಣ್ಣ ಗೌಡ ಚೆನ್ನಕ್ಕನಿಗೆ ಹಲ್ಲೆ ನಡೆಸಿ ಕತ್ತಿಯಿಂದ ಕಡಿದು ಗಾಯಗೊಳಿಸಿದ್ದಾರೆ. ತತ್ ಕ್ಷಣ ಅವರನ್ನು ಮಂಗಳೂರು ಆಸ್ಪತ್ರೆಗೆ ದಾಖಲಿಸಲಾಗಿದೆ. ಘಟನೆ ಬಗ್ಗೆ ಧರ್ಮಸ್ಥಳ ಪೊಲೀಸರು

ಬೆಳ್ತಂಗಡಿ: ಹೆಂಡತಿಗೆ ಕತ್ತಿಯಿಂದ ಕಡಿದ ಪಾಪಿ ಗಂಡ..!  ➤ ಪತ್ನಿ ಆಸ್ಪತ್ರೆಗೆ, ಪತಿ ರಕ್ತದೊತ್ತಡದಿಂದ ಮೃತ್ಯು Read More »

ಕರಾವಳಿ

ಆಟೋದಲ್ಲಿ ಬಾಡಿಗೆ ಹೋದ ವ್ಯಕ್ತಿ ನಾಪತ್ತೆ..!

(ನ್ಯೂಸ್ ಕಡಬ)newskadaba.com ಉಡುಪಿ, ಮಾ.29.  ಶಿರ್ವ ಕುತ್ಯಾರ್ ಶಾಲೆಯೊಂದರ ಬಸ್‌ನಲ್ಲಿ ಚಾಲಕರಾಗಿ ಕೆಲಸ ಮಾಡುತ್ತಿದ್ದ ಕುತ್ಯಾರು ಬ್ಯಾಂಕ್‌ ಆಫ್‌ ಬರೋಡಾ ಶಾಖೆಯ ಬಳಿಯ ಬಾಡಿಗೆ ಮನೆ ನಿವಾಸಿ ಶೈಲೇಶ್‌ ಕೆ. ಪ್ರಭು (44) ಏಕಾಎಕಿ ನಾಪತ್ತೆಯಾಗಿದ್ದಾರೆ. ಬೆಳಗ್ಗಿನಿಂದ ನಾಪತ್ತೆಯಾಗಿದ್ದು ಈ ಸಂಬಂಧ ದೂರು ದಾಖಲಾಗಿದೆ. ಕುತ್ಯಾರಿನಲ್ಲಿ ತಿಂಗಳ ಹಿಂದೆ ಖರೀದಿಸಿದ ರಿಕ್ಷಾದಲ್ಲಿ ಚಾಲಕನಾಗಿ ಕೂಡ ಶೈಲೇಶ್ ದುಡಿಯುತ್ತಿದ್ದು, ಮಾ. 27ರಂದು ಬೆಳಗ್ಗೆ 9.30ರ ವೇಳೆಗೆ ಬಾಡಿಗೆಗೆ ಹೋದವರು ಮಧ್ಯಾಹ್ನ ಊಟಕ್ಕೆ ಬಾರದೆ ಇದ್ದಾಗ ಪತ್ನಿ ಕರೆ ಮಾಡಿದ್ದಾರೆ.

ಆಟೋದಲ್ಲಿ ಬಾಡಿಗೆ ಹೋದ ವ್ಯಕ್ತಿ ನಾಪತ್ತೆ..! Read More »

ಕರಾವಳಿ

ಸುಳ್ಯ ವೃತ್ತ ನಿರೀಕ್ಷಕರಾಗಿದ್ದ ನವೀನ್ ಚಂದ್ರ ಜೋಗಿಗೆ ಮುಖ್ಯಮಂತ್ರಿ ಚಿನ್ನದ ಪದಕ

(ನ್ಯೂಸ್ ಕಡಬ)newskadaba.com ಸುಳ್ಯ, ಮಾ.29. ಸುಳ್ಯ ವೃತ್ತ ನಿರೀಕ್ಷಕರಾಗಿದ್ದ ನವೀನ್ ಚಂದ್ರ ಜೋಗಿ ಅವರು ಮುಖ್ಯಮಂತ್ರಿಗಳ ಚಿನ್ನದ ಪದಕ ಪುರಸ್ಕಾರಕ್ಕೆ ಭಾಜನರಾಗಿದ್ದಾರೆ. ಗುಪ್ತವಾರ್ತೆಯಲ್ಲಿ ಇನ್ಸ್ ಪೆಕ್ಟರ್ ಆಗಿದ್ದ ನವೀನ್ ಚಂದ್ರ ಜೋಗಿ ಮೂರು ವರ್ಷಗಳ ಹಿಂದೆ ಸುಳ್ಯ ಪೊಲೀಸ್ ವೃತ್ತ ನಿರೀಕ್ಷಕರಾಗಿ ಆಗಮಿಸಿದ್ದರು. ಸುಳ್ಯದಲ್ಲಿ ಕರ್ತವ್ಯದಲ್ಲಿದ್ದ ವೇಳೆ ಹಲವಾರು ಪ್ರಕರಣಗಳನ್ನು ಭೇದಿಸುವಲ್ಲಿ ಯಶಸ್ವಿಯಾಗಿದ್ದರು.  

ಸುಳ್ಯ ವೃತ್ತ ನಿರೀಕ್ಷಕರಾಗಿದ್ದ ನವೀನ್ ಚಂದ್ರ ಜೋಗಿಗೆ ಮುಖ್ಯಮಂತ್ರಿ ಚಿನ್ನದ ಪದಕ Read More »

ಕರಾವಳಿ
Scroll to Top