Mangalore

ಮಂಗಳೂರು: ತಲೆಮರೆಸಿಕೊಂಡಿದ್ದ ಆರೋಪಿಯ ಬಂಧನ ➤ 6 ತಿಂಗಳು ಜೈಲು ಶಿಕ್ಷೆ

(ನ್ಯೂಸ್ ಕಡಬ)newskadaba.com ಮಂಗಳೂರು, ಮಾ.27. ನ್ಯಾಯಾಲಯದಿಂದ ವಾರೆಂಟ್ ಜಾರಿಯಾಗಿದ್ದರೂ ತಲೆಮರೆಸಿಕೊಂಡಿದ್ದ ಆರೋಪಿಯನ್ನು ಪೊಲೀಸರನ್ನು ಬಂಧಿಸಿದ್ದು, ಆತನಿಗೆ ನ್ಯಾಯಾಲಯ 6 ತಿಂಗಳು ಜೈಲು ಶಿಕ್ಷೆ ಹಾಗೂ 10,000 ರೂ. ದಂಡ ವಿಧಿಸಿದೆ. ಕಡಬ ಗ್ರಾಮದ ಲಿಗೋರಿ ಡಿಸೋಜ ಪುತ್ರ ವಿಲ್ಫ್ರೇಡ್ ಡಿಸೋಜ (34) ಬಂಧಿತ ಆರೋಪಿ ಎಂದು ಗುರುತಿಸಲಾಗಿದೆ. ಈತ ಪ್ರಸ್ತುತ ಮಂಗಳೂರು ಕುಲಶೇಖರ ದುರ್ಗಾಪರಮೇಶ್ವರಿ ದೇವಸ್ಥಾನದ ಬಳಿ ಸಿರ್ಲಾ ಪಡ್ಪು ಹೆವೆನ್ ಅಪಾರ್ಟ್ ಮೆಂಟ್ ನಲ್ಲಿ ವಾಸವಾಗಿದ್ದು, ಈತನ ವಿರುದ್ಧ conviction warrent ಹೊರಡಿಸಿದ ನಂತರ ಆತ […]

ಮಂಗಳೂರು: ತಲೆಮರೆಸಿಕೊಂಡಿದ್ದ ಆರೋಪಿಯ ಬಂಧನ ➤ 6 ತಿಂಗಳು ಜೈಲು ಶಿಕ್ಷೆ Read More »

ಕರಾವಳಿ

ಪಡುಬಿದ್ರಿ: ದಾಖಲೆ ಇಲ್ಲದೆ ಸಾಗಿಸುತ್ತಿದ್ದ 5 ಲಕ್ಷ ರೂ. ನಗದು ಜಪ್ತಿ ➤ ಕಾರು ವಶಕ್ಕೆ

(ನ್ಯೂಸ್ ಕಡಬ)newskadaba.com ಪಡುಬಿದ್ರೆ, ಮಾ.27. 2023ರ ವಿಧಾನಸಭಾ ಸಾರ್ವತ್ರಿಕ ಚುನಾವಣೆ ಹಿನ್ನೆಲೆ ಹೆಜ ಮಾಡಿ ಚೆಕ್ ಪೋಸ್ಟ್ ಗಳಲ್ಲಿ ಪೊಲೀಸರು ನಡೆಸಿದ ತಪಾಸಣೆ ವೇಳೆ ವೇಳೆ ದಾಖಲೆ ಇಲ್ಲದೆ ಸಾಗಿಸುತ್ತಿದ್ದ 5 ಲಕ್ಷ ರೂ. ಹಣವನ್ನು ವಶಕ್ಕೆ ಪಡೆದ ಘಟನೆ ನಡೆದಿದೆ. ಪಡುಬಿದ್ರಿ ಪೊಲೀಸ್ ಠಾಣಾ ಪೊಲೀಸ್‌ ಉಪನಿರೀಕ್ಷಕರ ಪುರುಷೋತ್ತಮ ಎ ಇವರು ಹೆಜಮಾಡಿ ಚೆಕ್ ಪೋಸ್ಟ್ ನಲ್ಲಿ ಕರ್ತವ್ಯದಲ್ಲಿರುವಾಗ ಮಂಗಳೂರು ಕಡೆಯಿಂದ ಉಡುಪಿ ಕಡೆಗೆ ಬರುತ್ತಿದ್ದ ಟೊಯೆಟಾ ಗ್ಲಾಂಝಾ ಬಿಳಿ ಬಣ್ಣದ ಕಾರನ್ನು ನಿಲ್ಲಿಸಿ ತಪಾಸಣೆ

ಪಡುಬಿದ್ರಿ: ದಾಖಲೆ ಇಲ್ಲದೆ ಸಾಗಿಸುತ್ತಿದ್ದ 5 ಲಕ್ಷ ರೂ. ನಗದು ಜಪ್ತಿ ➤ ಕಾರು ವಶಕ್ಕೆ Read More »

ಕರಾವಳಿ

ಪ್ರವೀಣ್ ನೆಟ್ಟಾರು ಹತ್ಯೆ ಪ್ರಕರಣ ➤ ಸುಳ್ಯ PFI ಕಚೇರಿ ಸಂಪೂರ್ಣ ಜಪ್ತಿ ಮಾಡಿದ NIA

(ನ್ಯೂಸ್ ಕಡಬ)newskadaba.com ಮಂಗಳೂರು, ಮಾ.27. ಬಿಜೆಪಿ ಮುಖಂಡ ಪ್ರವೀಣ್ ನೆಟ್ಟಾರು ಹತ್ಯೆ ಪ್ರಕರಣದ ತನಿಖೆ ನಡೆಸುತ್ತಿರುವ ರಾಷ್ಟ್ರೀಯ ತನಿಖಾ ದಳ ಭಯೋತ್ಪಾದಕ ಚಟುವಟಿಕೆಗೆ ಬಳಸಲಾಗುತ್ತಿದ್ದ  ಸುಳ್ಯ ಪಿಎಫ್ ಕಚೇರಿ ಸಂಪೂರ್ಣ ಜಪ್ತಿ ಮಾಡಿದ್ದಾರೆ ಎನ್ನಲಾಗಿದೆ. ದಕ್ಷಿಣ ಕನ್ನಡ ಜಿಲ್ಲೆಯ ಸುಳ್ಯ ತಾಲೂಕಿನ ಗಾಂಧಿನಗರ ಅಲೆಟ್ಟಿ ರಸ್ತೆಯ ತಾಹಿರಾ ಕಾಂಪ್ಲೆಕ್ಸ್  ಮೊದಲ ಮಹಡಿಯಲ್ಲಿದ್ದ ಕಚೇರಿಯನ್ನು ಜಪ್ತಿ ಮಾಡಲಾಗಿದೆ ಎಂದು ತಿಳಿದುಬಂದಿದೆ.  

ಪ್ರವೀಣ್ ನೆಟ್ಟಾರು ಹತ್ಯೆ ಪ್ರಕರಣ ➤ ಸುಳ್ಯ PFI ಕಚೇರಿ ಸಂಪೂರ್ಣ ಜಪ್ತಿ ಮಾಡಿದ NIA Read More »

ಕರಾವಳಿ

ರೈಲ್ವೇ ಸಿಬ್ಬಂದಿಯನ್ನು ನಿಂದಿಸಿ, ಜೀವ ಬೆದರಿಕೆ                   ➤ಆರೋಪಿ ವಶಕ್ಕೆ..!

(ನ್ಯೂಸ್ ಕಡಬ)newskadaba.com ಮಂಗಳೂರು: ಮಾ,27 ಮಂಗಳೂರು ಸೆಂಟ್ರಲ್ ನ ಲೋಕಮಾನ್ಯ ತಿಲಕ್ ಎಕ್ಸ್‌ಪ್ರೆಸ್ ಜನರಲ್ ಕೋಚ್‌ನಲ್ಲಿ ಕರ್ತವ್ಯ ನಿರತ ರೈಲ್ವೇ ಪೊಲೀಸ್ ಸಿಬ್ಬಂದಿಯನ್ನು ನಿಂದಿಸಿ ಜೀವ ಬೆದರಿಕೆ ಹಾಕಿದ ಆರೋಪದ ಮೇಲೆ ಇಲ್ಲಿನ ರೈಲ್ವೆ ನಿಲ್ದಾಣದಲ್ಲಿ ಪ್ರಯಾಣಿಕನೊಬ್ಬನನ್ನು ರೈಲ್ವೇ ಪೊಲೀಸರು ಬಂಧಿಸಿದ್ದಾರೆ.  ಸಮೀರ್ ಬಿವಾಜೆ ಶಿಂದು ಬಂಧಿತ ಆರೋಪಿಯಾಗಿದ್ದಾನೆ . ಕೊಂಕಣ ರೈಲ್ವೆಯಲ್ಲಿ ಕಾನ್‌ಸ್ಟೆಬಲ್ ಆಗಿ ಝೋನಾ ಪಿಂಟೋ ರೈಲ್ವೆ ನಿಲ್ದಾಣದಲ್ಲಿ ಕರ್ತವ್ಯ ನಿರ್ವಹಿಸುತ್ತಿದ್ದು, ಲೋಕಮಾನ್ಯ ತಿಲಕ್ ಎಕ್ಸ್‌ಪ್ರೆಸ್ ರೈಲಿನ ಜನರಲ್ ಕೋಚ್‌ನಲ್ಲಿ ಕೆಲವರು ಗಲಾಟೆ ಮಾಡುತ್ತಿರುವ

ರೈಲ್ವೇ ಸಿಬ್ಬಂದಿಯನ್ನು ನಿಂದಿಸಿ, ಜೀವ ಬೆದರಿಕೆ                   ➤ಆರೋಪಿ ವಶಕ್ಕೆ..! Read More »

ಕರ್ನಾಟಕ

ಪುತ್ತೂರಿನ ಯುವಕ ಬಂಟ್ವಾಳದಲ್ಲಿ ನೇತ್ರಾವತಿ ನದಿಗೆ ಹಾರಿ ಆತ್ಮಹತ್ಯೆ

(ನ್ಯೂಸ್ ಕಡಬ)newskadaba.com ಬಂಟ್ವಾಳ, ಮಾ.27. ನೇತ್ರಾವತಿ‌ ನದಿಗೆ ಹಾರಿ ಪುತ್ತೂರಿನ ಯುವಕನೋರ್ವ ಆತ್ಮಹತ್ಯೆ ಮಾಡಿಕೊಂಡ ಘಟನೆ ನಡೆದಿದೆ. ವಿಠ್ಠಲ್ ಕಾಮತ್ ಅವರ ಪುತ್ರ ವಿಘ್ನೇಶ್ ಕಾಮತ್(32) ಆತ್ಮಹತ್ಯೆ ಮಾಡಿಕೊಂಡವರು ಎಂದು ಗುರುತಿಸಲಾಗಿದೆ. ಪುತ್ತೂರು ಕೋರ್ಟ್ ರೋಡ್ ನಲ್ಲಿ ಜಿನಸಿ ಅಂಗಡಿಯನ್ನು ಕಳೆದ ಹಲವು‌ ವರ್ಷಗಳಿಂದ ನಡೆಸುತ್ತಿದ್ದರು ಎನ್ನಲಾಗಿದೆ. ವಿಘ್ನೇಶ್ ಈ ಮೊದಲು ಕೂಡ ಆತ್ಮಹತ್ಯೆಗೆ ಯತ್ನಿಸಿದ್ದರು ಎನ್ನಲಾಗಿದೆ. ನೇತ್ರಾವತಿ ನದಿ ಬಳಿ ಸಂಶಯಾಸ್ಪದ ನೆಲೆಯಲ್ಲಿ ವಾಹನ‌ ಕಂಡ ಹಿನ್ನೆಲೆ ಸ್ಥಳೀಯರು ಹುಡುಕಾಟ ನಡೆಸಿದಾಗ ಮೃತದೇಹ ಪತ್ತೆಯಾಗಿದೆ.

ಪುತ್ತೂರಿನ ಯುವಕ ಬಂಟ್ವಾಳದಲ್ಲಿ ನೇತ್ರಾವತಿ ನದಿಗೆ ಹಾರಿ ಆತ್ಮಹತ್ಯೆ Read More »

ಕರಾವಳಿ, ಕ್ರೈಮ್ ನ್ಯೂಸ್

ಮಂಗಳೂರು: ಕಾರ್ಯಕ್ರಮವೊಂದಕ್ಕೆ ನುಗ್ಗಿ ದಾಂಧಲೆ ಪ್ರಕರಣ ➤ ಆರು ಮಂದಿ ಭಜರಂಗದಳದ ಕಾರ್ಯಕರ್ತರ ಬಂಧನ..!

(ನ್ಯೂಸ್ ಕಡಬ)newskadaba.com ಮಂಗಳೂರು, ಮಾ.27. ನಗರದ ಮರೋಳಿಯಲ್ಲಿ ನಡೆದ ಹೋಳಿ ಕೂಟಕ್ಕೆ ಅಡ್ಡಿಪಡಿಸಲು ಯತ್ನಿಸಿದ ಆರೋಪದ ಮೇಲೆ ಬಜರಂಗದಳದ ಆರು ಕಾರ್ಯಕರ್ತರನ್ನು ಮಂಗಳೂರು ನಗರ ಪೊಲೀಸರು ವಶಕ್ಕೆ ಪಡೆದಿರುವ ಬಗ್ಗೆ ವರದಿಯಾಗಿದೆ. ಘಟನೆಗೆ ಸಂಬಂಧಿಸಿದಂತೆ ಗಣೇಶ್ ಅತ್ತಾವರ, ಜೈ ಪ್ರಶಾಂತ್, ಬಾಲಚಂದ್ರ, ಅಕ್ಷಯ್, ಚಿರಾಗ್, ಮಿಥುನ್ ಎಂಬವರ ವಿರುದ್ಧ ಪ್ರಕರಣ ದಾಖಲಿಸಿರುವ ಪೊಲೀಸರು ತನಿಖೆ ನಡೆಸುತ್ತಿದ್ದಾರೆ.  

ಮಂಗಳೂರು: ಕಾರ್ಯಕ್ರಮವೊಂದಕ್ಕೆ ನುಗ್ಗಿ ದಾಂಧಲೆ ಪ್ರಕರಣ ➤ ಆರು ಮಂದಿ ಭಜರಂಗದಳದ ಕಾರ್ಯಕರ್ತರ ಬಂಧನ..! Read More »

ಕರಾವಳಿ

ಬಂಟ್ವಾಳ: ಸಾರ್ವಜನಿಕ ಸ್ಥಳದಲ್ಲಿ ಮಾದಕ ವಸ್ತು ಸೇವನೆ ➤ ಆರೋಪಿಯನ್ನು ವಶಕ್ಕೆ ಪಡೆದ ಪೊಲೀಸರು..!

(ನ್ಯೂಸ್ ಕಡಬ)newskadaba.com ಬಂಟ್ವಾಳ, ಮಾ.27. ಸಾರ್ವಜನಿಕ ಸ್ಥಳದಲ್ಲಿ ಮಾದಕ ವಸ್ತು ಸೇವಿಸಿ ಅಮಲಿನಲ್ಲಿದ್ದ ವ್ಯಕ್ತಿಯನ್ನು ಬಂಟ್ವಾಳ ಗ್ರಾಮಾಂತರ ಠಾಣಾ ಪೊಲೀಸರು ವಶಕ್ಕೆ ಪಡೆದುಕೊಂಡಿದ್ದಾರೆ. ಬಂಟ್ವಾಳ ಗ್ರಾಮಾಂತರ ಠಾಣಾ ಪೊಲೀಸ್ ಉಪ-ನಿರೀಕ್ಷಕ ಜಯಶ್ರೀ ಪ್ರಭಾಕರ ರವರು ರೌಂಡ್ಸ್‌ ಕರ್ತವ್ಯದಲ್ಲಿದ್ದ ವೇಳೆ ತುಂಬೆ ಸಾರ್ವಜನಿಕ ಬಸ್‌ ತಂಗುದಾಣದ ಬಳಿ ಓರ್ವ ವ್ಯಕ್ತಿ ಯಾವುದೋ ಮಾದಕ ವಸ್ತುವನ್ನು ಸೇವಿಸಿ ಅಮಲಿನಲ್ಲಿ ಸಾರ್ವಜನಿಕರಿಗೆ ತೊಂದರೆಯಾಗುವ ರೀತಿಯಲ್ಲಿ ವರ್ತಿಸುತ್ತಿದ್ದ ಎನ್ನಲಾಗಿದೆ.

ಬಂಟ್ವಾಳ: ಸಾರ್ವಜನಿಕ ಸ್ಥಳದಲ್ಲಿ ಮಾದಕ ವಸ್ತು ಸೇವನೆ ➤ ಆರೋಪಿಯನ್ನು ವಶಕ್ಕೆ ಪಡೆದ ಪೊಲೀಸರು..! Read More »

ಕರ್ನಾಟಕ

ಕಾರು, ಬೈಕ್ ಮತ್ತು ಬಸ್ ನಡುವೆ ಸರಣಿ ಅಪಘಾತ ➤ ಯುವಕ ಮೃತ್ಯು..!

(ನ್ಯೂಸ್ ಕಡಬ)newskadaba.com ಕುಂದಾಪುರ, ಮಾ.27. ಕುಂಭಾಶಿಯಿಂದ ಕುಂದಾಪುರ ಕಡೆಗೆ ಬೈಕ್ ನಲ್ಲಿ ಹೋಗುತ್ತಿದ್ದ ಯುವಕನಿಗೆ ಕುಂಭಾಶಿ ಪಾಕಶಾಲಾ ಸಮೀಪದ ಕಡೆಯಿಂದ ಬಂದ ಕಾರೊಂದು ಡಿಕ್ಕಿ ಹೊಡೆದ ಪರಿಣಾಮ ಯುವಕನೋರ್ವ ಮೃತಪಟ್ಟ ಘಟನೆ ಕುಂಭಾಶಿಯಲ್ಲಿ ನಡೆದಿದೆ. ಕುಂಭಾಶಿ ಗ್ರಾಮ ಪಂಚಾಯತ್ ವ್ಯಾಪ್ತಿಯ ಹೊಳೆಕಟ್ಟು ನಿವಾಸಿ ಪ್ರಶಾಂತ್ ಹಾಗೂ ಅವರ ಸ್ನೇಹಿತ ವಿಘ್ನೇಶ್ ಕೆಲಸದನಿಮಿತ್ತ ಕುಂದಾಪುರ ಕಡೆಗೆ ಹೋಗುವಾಗ ಈ ಅಪಘಾತ ಸಂಭವಿಸಿದ್ದು ಬೈಕ್ ಚಾಲನೆ ಮಾಡುತ್ತಿದ್ದ ಯುವಕ ಪ್ರಶಾಂತ್ ಪೂಜಾರಿ (25) ತೀವ್ರ ಸ್ವರೂಪದ ಗಾಯಗಳಾಗಿದ್ದು ಚಿಕಿತ್ಸೆ ಫಲಕಾರಿಯಾಗದೆ

ಕಾರು, ಬೈಕ್ ಮತ್ತು ಬಸ್ ನಡುವೆ ಸರಣಿ ಅಪಘಾತ ➤ ಯುವಕ ಮೃತ್ಯು..! Read More »

ಕರಾವಳಿ, ಕ್ರೈಮ್ ನ್ಯೂಸ್

ಮನೆ ಕಾಮಗಾರಿ ವೇಳೆ ತಡೆಗೋಡೆ ಕುಸಿತ    ➤  ಮೂವರು ಕಾರ್ಮಿಕರ ಮೃತ್ಯು…!          

(ನ್ಯೂಸ್ ಕಡಬ)newskadaba.com  ಮಂಗಳೂರು, ಮಾ.25. ತಡೆಗೋಡೆ ಕಾಮಗಾರಿ ಮೇಳೆ ಗುಡ್ಡದ ಮಣ್ಣು ಜರಿದು ಮೂವರು ಮಣ್ಣಿನಡಿ ಸಿಲುಕಿ ಮೃತಪಟ್ಟ ಘಟನೆ ಸುಳ್ಯದ ಗಾಂಧಿನಗರ ಬಳಿ ನಡೆದಿದೆ. ಮೃತರನ್ನು ಸೋಮಶೇಖರ (45), ಪತ್ನಿ ಶಾಂತ (40) ಮತ್ತು ಇನ್ನೋರ್ವ ಕಾರ್ಮಿಕ ಎಂದು ಗುರುತಿಸಲಾಗಿದೆ. ಸೋಮಶೇಖರ್ ಮತ್ತು ಶಾಂತಾ ಗದಗ ಮೂಲದ ಮುಂಡರಗಿ ತಾಲೂಕಿನವರು ಎಂದು ತಿಳಿದು ಬಂದಿದೆ. ಗಾಂಧಿನಗರ-ಆಲೆಟ್ಟಿ ರಸ್ತೆಯಲ್ಲಿ ಕಾರ್ಮಿಕರು ಸೆಂಟರಿಂಗ್ ಕೆಲಸ ಮಾಡುತ್ತಿದ್ದ ವೇಳೆ ಗುರುಂಪು ಬಳಿ ಬರೆ ಜರಿದು ಕೆಲಸ ಮಾಡುತ್ತಿದ್ದ ಕಾರ್ಮಿಕರ ಮೇಲೆ

ಮನೆ ಕಾಮಗಾರಿ ವೇಳೆ ತಡೆಗೋಡೆ ಕುಸಿತ    ➤  ಮೂವರು ಕಾರ್ಮಿಕರ ಮೃತ್ಯು…!           Read More »

ಕರಾವಳಿ, ಕ್ರೈಮ್ ನ್ಯೂಸ್

`PSI’ ನೇಮಕಾತಿ ಪ್ರಕರಣ   ➤  ವಿಚಾರಣೆ ಎದುರಿಸಿದ್ದ ಗಣಪತಿ ಭಟ್ ಆತ್ಮಹತ್ಯೆ..!

(ನ್ಯೂಸ್ ಕಡಬ)newskadaba.com  ಕಾರವಾರ, ಮಾ.25. 545 ಪಿಎಸ್‌ಐ ಅಕ್ರಮ ನೇಮಕಾತಿ ಪ್ರಕರಣಕ್ಕೆಸಂಬಂಧಿಸಿದಂತೆ ವಿಚಾರಣೆ ಎದುರಿಸಿದ್ದ ಸಿದ್ದಾಪುರ ತಾಲೂಕಿನ ನೆಲೆಮಾವು ಗ್ರಾಮದ ಗಣಪತಿ ಭಟ್ ನೇಣು ಬಿಗಿದುಕೊಂಡು ಆತ್ಮಹತ್ಯೆಗೆ ಶರಣಾಗಿದ್ದಾರೆ. ಗಣಪತಿ ಭಟ್ ಕಳೆದ ಜುಲೈ 13 ರಂದು ಸಿಐಡಿ ವಿಚಾರಣೆ ಎದುರಿಸಿದ್ದರು. ತಟ್ಟೀಕೈ ಎಂ.ಆರ್‌.ಭಟ್ಟ ಅವರ ತೋಟದ ಮನೆಯಲ್ಲಿ ಆತ್ಮಹತ್ಯೆ ಮಾಡಿಕೊಂಡಿದ್ದಾರೆ.  

`PSI’ ನೇಮಕಾತಿ ಪ್ರಕರಣ   ➤  ವಿಚಾರಣೆ ಎದುರಿಸಿದ್ದ ಗಣಪತಿ ಭಟ್ ಆತ್ಮಹತ್ಯೆ..! Read More »

ಕರಾವಳಿ, ಕ್ರೈಮ್ ನ್ಯೂಸ್
Scroll to Top