Mangalore

ನಾಳೆ(ಮಾ.26) ಪುತ್ತೂರು ಬಸ್ ನಿಲ್ದಾಣಕ್ಕೆ ಕೋಟಿ-ಚೆನ್ನಯ್ಯ ನಾಮಕರಣ

(ನ್ಯೂಸ್ ಕಡಬ)newskadaba.com ಪುತ್ತೂರು, ಮಾ.25. ಕರ್ನಾಟಕ ರಾಜ್ಯ ರಸ್ತೆ ಸಾರಿಗೆ ನಿಗಮದ ಪುತ್ತೂರು ಬಸ್ ನಿಲ್ದಾಣಕ್ಕೆ ಕೋಟಿ- ಚೆನ್ನಯ್ಯ ಎಂಬ ನಾಮಕರಣ ಸಮಾರಂಭವು ಮಾ.26ರ(ನಾಳೆ.) ಬೆಳಗ್ಗೆ 10 ಗಂಟೆಗೆ ಪುತ್ತೂರಿನ ಬಸ್ ನಿಲ್ದಾಣದಲ್ಲಿ ಹಮ್ಮಿಕೊಳ್ಳಲಾಗಿದೆ. ಸಾರಿಗೆ ಮತ್ತು ಪರಿಶಿಷ್ಟ ಪಂಗಡಗಳ ಕಲ್ಯಾಣ ಸಚಿವರಾದ ಬಿ ಶ್ರೀ ರಾಮುಲು ನಾಮಫಲಕ ಉದ್ಘಾಟಿಸುವರು. ಇಂಧನ ಹಾಗೂ ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಸಚಿವರಾದ ವಿ. ಸುನಿಲ್ ಕುಮಾರ್ ಜ್ಯೋತಿ ಬೆಳಗಿಸುವರು. ಮೀನುಗಾರಿಕೆ, ಬಂದರು ಮತ್ತು ಒಳನಾಡು ಜಲ ಸಾರಿಗೆ ಇಲಾಖೆ ಸಚಿವರಾದ […]

ನಾಳೆ(ಮಾ.26) ಪುತ್ತೂರು ಬಸ್ ನಿಲ್ದಾಣಕ್ಕೆ ಕೋಟಿ-ಚೆನ್ನಯ್ಯ ನಾಮಕರಣ Read More »

ಕರಾವಳಿ

ಸುಬ್ರಹ್ಮಣ್ಯ: ಹೊಳೆ ಬದಿ ಕಾಡಾನೆ ಪತ್ತೆ ➤ ಆತಂಕದಲ್ಲಿ ಜನರು…!

(ನ್ಯೂಸ್ ಕಡಬ)newskadaba.com ಸುಬ್ರಮಣ್ಯ, ಮಾ.25. ಸುಬ್ರಹ್ಮಣ್ಯದಲ್ಲಿ ಹೊಳೆ ಬದಿಯಲ್ಲಿ ಕಾಡಾನೆ ಕಾಣಿಸಿಕೊಂಡ ಘಟನೆ ಸುಬ್ರಮಣ್ಯದಲ್ಲಿ ವರದಿಯಾಗಿದೆ. ಸುಬ್ರಹ್ಮಣ್ಯ ಸಮೀಪದ ಆದಿಸುಬ್ರಹ್ಮಣ್ಯದ ಕಲ್ಲಗಡ್ಡೆ ಎಂಬಲ್ಲಿ ಹೊಳೆ ಬದಿಯಲ್ಲಿ ಕಾಡಾನೆ ಕಾಣಿಸಿಕೊಂಡಿದ್ದು, ಹೊಳೆಗೆ ನೀರು ಕುಡಿಯಲು ಬಂದಿದ್ದ ಆನೆ ಬಳಿಕ ಕಾಡಿಗೆ ವಾಪಸ್ಸಾಗಿದೆ ಎಂದು ತಿಳಿದು ಬಂದಿದೆ. ಐತ್ತೂರು- ಕಡ್ಯ ಕೊಣಾಜೆ ಸಂಪರ್ಕ ರಸ್ತೆಯ ಕೊಣಾಜೆ ಬಳಿಯ ರಾಮನಗರ ಕ್ರಾಸ್‌ನಲ್ಲಿ ರಸ್ತೆಯ ಒಂದು ಬದಿಯಿಂದ ಇನ್ನೊಂದು ಬದಿಗೆ ಕಾಡಾನೆ ದಾಟಿದೆ. ರಬ್ಬರ್ ತೋಟವೊಂದರಿಂದ ಈ ಆನೆ ರಸ್ತೆಗೆ ಇಳಿದಿತ್ತು. ಬಳಿಕ

ಸುಬ್ರಹ್ಮಣ್ಯ: ಹೊಳೆ ಬದಿ ಕಾಡಾನೆ ಪತ್ತೆ ➤ ಆತಂಕದಲ್ಲಿ ಜನರು…! Read More »

ಕರಾವಳಿ

ದ.ಕ.ದಲ್ಲಿ ಹೊಸ ಮುಖಗಳಿಗೆ ಅವಕಾಶ..!  ➤ ಮಾಜಿ ಪೊಲೀಸ್‌ ಅಧಿಕಾರಿ ಪುತ್ರನಿಗೆ ಕೈ ಟಿಕೆಟ್‌

(ನ್ಯೂಸ್ ಕಡಬ)newskadaba.com ಮಂಗಳೂರು, ಮಾ.25. ಕಾಂಗ್ರೆಸ್‌ ಅಭ್ಯರ್ಥಿಗಳ ಮೊದಲ ಪಟ್ಟಿ ಇಂದು ಬಿಡುಗಡೆಯಾಗಿದ್ದು, ಬಿಜೆಪಿ ಭದ್ರಕೋಟೆಯಾಗಿರುವ ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಈ ಬಾರಿ ಕೆಲವು ಹೊಸ ಮುಖಗಳಿಗೆ ಅವಕಾಶ ನೀಡಲಾಗಿದೆ. ಎಂಟು ಕ್ಷೇತ್ರಗಳ ಪೈಕಿ ಐದು ಕಡೆ ಅಭ್ಯರ್ಥಿಗಳ ಹೆಸರು ಘೋಷಿಸಲಾಗಿದೆ. ಕಾಂಗ್ರೆಸ್‌ ಹಿರಿಯ ನಾಯಕ ಬಿ.ಕೆ ಹರಿಪ್ರಸಾದ್‌ ಸಹೋದರ ಬಿಕೆ ಶಿವರಾಂ ಪುತ್ರ ರಕ್ಷಿತ್‌ ಶಿವರಾಂಗೆ ಬೆಳ್ತಂಗಡಿಯಲ್ಲಿ ಟಿಕೆಟ್ ನೀಡಲಾಗಿದೆ. ಸುಳ್ಯ ಮೀಸಲು ಕ್ಷೇತ್ರದಲ್ಲಿ ಕೃಷ್ಣಪ್ಪ ಜಿ ಘೋಷಿಸಲಾಗಿದೆ.

ದ.ಕ.ದಲ್ಲಿ ಹೊಸ ಮುಖಗಳಿಗೆ ಅವಕಾಶ..!  ➤ ಮಾಜಿ ಪೊಲೀಸ್‌ ಅಧಿಕಾರಿ ಪುತ್ರನಿಗೆ ಕೈ ಟಿಕೆಟ್‌ Read More »

ಕರಾವಳಿ

ಮಂಗಳೂರು ನಗರದ ಕಸ ವಿಲೇವಾರಿಗೆ ವಾರ್ ರೂಂ ➤ಶಾಸಕ ಕಾಮತ್

(ನ್ಯೂಸ್ ಕಡಬ) News kadaba.com ಮಂಗಳೂರು,ಮಾ.24 ನಗರ ದಕ್ಷಿಣ ವಿಧಾನಸಭಾ ಕ್ಷೇತ್ರದ ವ್ಯಾಪ್ತಿಯಲ್ಲಿ ಮನೆ ಮನೆಗಳಿಂದ ಕಸ‌ ಸಂಗ್ರಹಿಸುವುದು ಹಾಗೂ ರಸ್ತೆ ಬದಿಗಳಲ್ಲಿ ಕಸದ ರಾಶಿಗಳು ಬಿದ್ದಿರುವುದನ್ನು ಬಗೆಹರಿಸುವ ದೃಷ್ಟಿಯಿಂದ ಶಾಸಕ ವೇದವ್ಯಾಸ್ ಕಾಮತ್ ಅವರು ತಮ್ಮ ಕಚೇರಿಯಲ್ಲಿ ವಾರ್ ರೂಂ ಪ್ರಾರಂಭಿಸಿದ್ದಾರೆ. ಕಳೆದ ಹಲವು ದಿನಗಳಿಂದ ಕಸ ಸಂಗ್ರಹಣೆಯ ಕಾರ್ಮಿಕರು ಮುಷ್ಕರ ಹೂಡಿರುವ ಕಾರಣ ,ಅವರ ಬೇಡಿಕೆಗಳನ್ನು ಈಡೇರಿಸುವ ದೃಷ್ಟಿಯಿಂದ ಶಾಸಕ ಕಾಮತ್ ಅವರು ಮಾತುಕತೆಯ ಮೂಲಕ ಮನವೊಲಿಸುವ ಪ್ರಯತ್ನ ಮಾಡಿದ್ದಾರೆ. ಇಡೀ ರಾಜ್ಯದಾದ್ಯಂತ ಕಾರ್ಮಿಕರು

ಮಂಗಳೂರು ನಗರದ ಕಸ ವಿಲೇವಾರಿಗೆ ವಾರ್ ರೂಂ ➤ಶಾಸಕ ಕಾಮತ್ Read More »

ಕರಾವಳಿ, ಕರ್ನಾಟಕ

ಮಾ. 27ರಿಂದ 5 ಮತ್ತು 8 ನೇ ತರಗತಿ ವಿದ್ಯಾರ್ಥಿಗಳಿಗೆ ಮೌಲ್ಯಾಂಕನ..!

(ನ್ಯೂಸ್ ಕಡಬ) newskadaba.com ಮಂಗಳೂರು, ಮಾ. 24. ಐದು ಮತ್ತು 8ನೇ ತರಗತಿಯ ವಿದ್ಯಾರ್ಥಿಗಳಿಗೆ ಮಾ. 27ರಿಂದ ಎ. 1ರ ವರೆಗೆ ಆಯಾ ಶಾಲೆಗಳಲ್ಲಿ ಮೌಲ್ಯಾಂಕನ ನಡೆಸಲಾಗುತ್ತದೆ. ಅದರಲ್ಲಿ ವಿದ್ಯಾರ್ಥಿಗಳ ಕಲಿಕಾ ಗುಣಮಟ್ಟ, ಕಲಿಕಾ ನ್ಯೂನತೆ, ಪ್ರಗತಿಯನ್ನು ತಿಳಿದುಕೊಂಡು ಮುಂದಿನ ಶೈಕ್ಷಣಿಕ ಕಲಿಕಾ ಕೊರತೆಯನ್ನು ನೀಗಿಸಲು ಶೈಕ್ಷಣಿಕ ಕಾರ್ಯಕ್ರಮಗಳನ್ನು ಹಮ್ಮಿಕೊಳ್ಳಲಾಗುವುದು. ಅದರ ಫಲಿತಾಂಶವನ್ನು ಸಂಬಂಧಿಸಿದ ಪೋಷಕರಿಗೆ ಮತ್ತು ವಿದ್ಯಾರ್ಥಿಗಳಿಗೆ ಮಾತ್ರ ತಿಳಿಸಲಾಗುವುದು. ಆ ಮೂಲಕ ಫಲಿತಾಂಶದ ಗೌಪ್ಯತೆಯನ್ನು ಕಾಪಾಡಲಾಗುವುದು. 5 ಮತ್ತು 8ನೇ ತರಗತಿಯ ಮೌಲ್ಯಾಂಕನವು ವಾರ್ಷಿಕ

ಮಾ. 27ರಿಂದ 5 ಮತ್ತು 8 ನೇ ತರಗತಿ ವಿದ್ಯಾರ್ಥಿಗಳಿಗೆ ಮೌಲ್ಯಾಂಕನ..! Read More »

ಕರಾವಳಿ, ಕರ್ನಾಟಕ

ಉಪ್ಪಿನಂಗಡಿ: ರಸ್ತೆ ಅಪಘಾತ  ➤ ಪ್ರಯಾಣಿಕರಿಗೆ ಗಾಯ

(ನ್ಯೂಸ್ ಕಡಬ) newskadaba.com ನೆಲ್ಯಾಡಿ, ಮಾ. 24. ಅಶೋಕ್ ಲೈಲ್ಯಾಂಡ್ ದೋಸ್ತ್ ಹಾಗೂ ರಿಕ್ಷಾ ನಡುವೆ ಢಿಕ್ಕಿ ಸಂಭವಿಸಿ ರಿಕ್ಷಾದಲ್ಲಿದ್ದ ಪ್ರಯಾಣಿಕರು ಗಾಯಗೊಂಡಿರುವ ಘಟನೆ ಮಂಗಳೂರು- ಬೆಂಗಳೂರು ರಾಷ್ಟ್ರೀಯ ಹೆದ್ದಾರಿ- 75ರ ಉಪ್ಪಿನಂಗಡಿ ಗ್ರಾಮದ ಮಠ ಎಂಬಲ್ಲಿ ನಡೆದಿದೆ. ಗಾಯಗೊಂಡವರನ್ನು ರಿಕ್ಷಾ ಚಾಲಕ ಮಹಮ್ಮದ್ ಅನ್ಸಾರ್, ಸುಮಯ್ಯ ಹಾಗೂ 1 ವರ್ಷದ ಮಗು ಎಂದು ಗುರುತಿಸಲಾಗಿದೆ. ಮಂಗಳೂರಿನಿಂದ ಬೆಂಗಳೂರಿಗೆ ಹೋಗುತ್ತಿದ್ದ ಅಶೋಕ್ ಲೇಲ್ಯಾಂಡ್ ಹಾಗೂ ರಿಕ್ಷಾ ನಡುವೆ ಢಿಕ್ಕಿ ಸಂಭವಿಸಿದೆ.  

ಉಪ್ಪಿನಂಗಡಿ: ರಸ್ತೆ ಅಪಘಾತ  ➤ ಪ್ರಯಾಣಿಕರಿಗೆ ಗಾಯ Read More »

ಕರಾವಳಿ, ಕ್ರೈಮ್ ನ್ಯೂಸ್

ಸುಳ್ಯದ ಯುವಕ ಚಿಕ್ಕಮಗಳೂರಿನಲ್ಲಿ ಆತ್ಮಹತ್ಯೆ

(ನ್ಯೂಸ್ ಕಡಬ) newskadaba.com ಸುಳ್ಯ, ಮಾ. 24. ಸುಳ್ಯ ತಾಲೂಕಿನ ಕಲ್ಮಕಾರು ಗ್ರಾಮದ ಯುವಕನೋರ್ವ ಚಿಕ್ಕಮಗಳೂರಿನಲ್ಲಿ ಆತ್ಮಹತ್ಯೆ ಮಾಡಿಕೊಂಡ ಘಟನೆ ವರದಿಯಾಗಿದೆ. ಆತ್ಮಹತ್ಯೆ ಮಾಡಿಕೊಂಡ ಯುವಕನನ್ನು ಕಲ್ಮಕಾರು ಗ್ರಾಮದ ಮೆಂಟೆಕಜೆ ತೇಜಕುಮಾರ್ ರವರ ಪುತ್ರ ಲೋಕೇಶ(22) ಎಂದು ಗುರುತಿಸಲಾಗಿದೆ. ಈತ ಚಿಕ್ಕಮಗಳೂರುನಲ್ಲಿ ಜಿಯೋ ಕಂಪೆನಿಯಲ್ಲಿ ಉದ್ಯೋಗಿಯಾಗಿದ್ದು, ತನ್ನ ರೂಮಿನಲ್ಲಿ ನೇಣುಬಿಗಿದು ಆತ್ಮಹತ್ಯೆಗೆ ಶರಣಾಗಿದ್ದಾನೆ.  

ಸುಳ್ಯದ ಯುವಕ ಚಿಕ್ಕಮಗಳೂರಿನಲ್ಲಿ ಆತ್ಮಹತ್ಯೆ Read More »

ಕರಾವಳಿ, ಕ್ರೈಮ್ ನ್ಯೂಸ್

ಧರ್ಮಸ್ಥಳ ಕ್ಷೇತ್ರ ಸಂದರ್ಶಿಸಲು ಬಂದಿದ್ದ ಯುವತಿ ನಾಪತ್ತೆ ➤ ದೂರು ದಾಖಲು

(ನ್ಯೂಸ್ ಕಡಬ) newskadaba.com ಬೆಳ್ತಂಗಡಿ, ಮಾ. 24. ಕುಟುಂಬಸ್ಥರ ಜೊತೆ ಉತ್ತರ ಕನ್ನಡದಿಂದ ಧರ್ಮಸ್ಥಳ ಶ್ರೀ ಕ್ಷೇತ್ರಕ್ಕೆ ದೇವರ ಸಂದರ್ಶನಕ್ಕೆ ಬಂದಿದ್ದ ಯುವತಿಯೋರ್ವಳು ನಾಪತ್ತೆಯಾದ ಕುರಿತು ವರದಿಯಾಗಿದೆ. ನಾಪತ್ತೆಯಾದ ಯುವತಿಯನ್ನು ರೇಶ್ಮಾ ಎಂದು ಗುರುತಿಸಲಾಗಿದೆ. ಶ್ರೀ ಕ್ಷೇತ್ರ ಧರ್ಮಸ್ಥಳ ದೇವರ ದರ್ಶನ ಪಡೆದ ಬಳಿಕ ಎಲ್ಲರೂ ರೂಂ ಹೋಗಿದ್ದು, ಬಳಿಕ ಯುವತಿ ರೇಶ್ಮಾ ನಾಪತ್ತೆಯಾಗಿರುವುದಾಗಿ ತಿಳಿದುಬಂದಿದೆ.  

ಧರ್ಮಸ್ಥಳ ಕ್ಷೇತ್ರ ಸಂದರ್ಶಿಸಲು ಬಂದಿದ್ದ ಯುವತಿ ನಾಪತ್ತೆ ➤ ದೂರು ದಾಖಲು Read More »

ಕರಾವಳಿ, ಕ್ರೈಮ್ ನ್ಯೂಸ್

ದ.ಕ. ಜಿಲ್ಲೆಯಲ್ಲಿ 8 ಮತಗಟ್ಟೆಗಳ ಬದಲಾವಣೆಗೆ ಚುನಾವಣಾ ಆಯೋಗ ತೀರ್ಮಾನ

(ನ್ಯೂಸ್ ಕಡಬ) newskadaba.com ಮಂಗಳೂರು, ಮಾ. 24. ದಕ್ಷಿಣ ಕನ್ನಡ ಜಿಲ್ಲೆಯ 202 ಮಂಗಳೂರು ಉತ್ತರ ವಿಧಾನಸಭಾ ಕ್ಷೇತ್ರಕ್ಕೆ ಸಂಬಂಧಿಸಿದಂತೆ 6 ಮತಗಟ್ಟೆಗಳು ಹಾಗೂ 205 ಬಂಟ್ವಾಳ ವಿಧಾನಸಭಾ ಕ್ಷೇತ್ರಕ್ಕೆ ಸಂಬಂಧಿಸಿದಂತೆ 2 ಮತಗಟ್ಟೆಗಳ ಬದಲಾವಣೆ ಮಾಡಲಾಗಿದ್ದು, ಕೇಂದ್ರ ಚುನಾವಣಾ ಆಯೋಗವು  ಅನುಮೋದನೆ ನೀಡಿದೆ. 202 ಮಂಗಳೂರು ಉತ್ತರ ವಿಧಾನಸಭಾ ಕ್ಷೇತ್ರದ ಕದ್ರಿಯಲ್ಲಿದ್ದ ಕಿರಿಯ ತಾಂತ್ರಿಕ ಶಾಲೆಯಲ್ಲಿದ್ದ ಮತಗಟ್ಟೆ ಸಂಖ್ಯೆ 131, ಕಟ್ಟಡ ಶಿಥಿಲಗೊಂಡ ಕಾರಣ ಹಾಗೂ ಮೂಲಭೂತ ಸೌಕರ್ಯಗಳ ಕೊರತೆ ಇರುವ ಕಾರಣ ಅದನ್ನು ಕದ್ರಿಯಲ್ಲಿರುವ

ದ.ಕ. ಜಿಲ್ಲೆಯಲ್ಲಿ 8 ಮತಗಟ್ಟೆಗಳ ಬದಲಾವಣೆಗೆ ಚುನಾವಣಾ ಆಯೋಗ ತೀರ್ಮಾನ Read More »

ಕರಾವಳಿ

ಉಳ್ಳಾಲ: ಮಾ. 25ರಂದು ಹೊನಲು‌ ಬೆಳಕಿನ ನರಿಂಗಾನ‌ ಕಂಬಳ

(ನ್ಯೂಸ್ ಕಡಬ)newskadaba.com ಉಳ್ಳಾಲ, ಮಾ.23. ಇದೇ ಮೊದಲ ಬಾರಿಗೆ ಸರಕಾರಿ ಕಂಬಳ ಆಯೋಜನೆ ಮಾಡಲಾಗಿದ್ದು, ನರಿಂಗಾನ ಗ್ರಾಮದ ಮೋರ್ಲ ಬೋಳದಲ್ಲಿ ಲವಕುಶ ಜೋಡುಕರೆ ಹೆಸರಿನಲ್ಲಿ ಹೊನಲು ಬೆಳಕಿನ ನರಿಂಗಾನ ಕಂಬಳ ಮಾ. 25ರಂದು ನಡೆಯಲಿದೆ ಎಂದು ಶಾಸಕ ಯು.ಟಿ. ಖಾದರ್ ಹೇಳಿದ್ದಾರೆ. ಕಂಬಳ ಕರೆಯ ಬಳಿ ನಡೆದ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಮಾರ್ಚ್ 25ರಂದು ಬೆಳಗ್ಗೆ 10.30ಕ್ಕೆ ಶ್ರೀ ಕ್ಷೇತ್ರ ಶಾಂತಿಪಳಿಕೆಯ ಪ್ರಧಾನ ಪ್ರಧಾನ ತಂತ್ರಿಗಳಾದ ವರ್ಕಾಡಿ ರಾಜೇಶ್ ತಾಳಿತ್ತಾಯರವರು ಉದ್ಘಾಟಿಸಲಿದ್ದಾರೆ. ಕರೆಯನ್ನು ಶ್ರೀ ಕ್ಷೇತ್ರ ಕಣಂತೂರಿನ

ಉಳ್ಳಾಲ: ಮಾ. 25ರಂದು ಹೊನಲು‌ ಬೆಳಕಿನ ನರಿಂಗಾನ‌ ಕಂಬಳ Read More »

ಕರಾವಳಿ
Scroll to Top