Mangalore

ಆಟವಾಡುತ್ತಾ ಉಂಗುರ ನುಂಗಿದ 8 ತಿಂಗಳ ಮಗು ಮೃತ್ಯು..!

(ನ್ಯೂಸ್ ಕಡಬ)newskadaba.com ಮ‌ಡಿಕೇರಿ, ಮಾ.23. ಉಂಗುರ ನುಂಗಿ 8 ತಿಂಗಳ ಮಗು ಮೃತಪಟ್ಟಿರುವ ಘಟನೆ ವಿರಾಜಪೇಟೆ ತಾಲ್ಲೂಕಿನ ಸಿದ್ದಾಪುರ ಗ್ರಾಮ ಪಂಚಾಯತಿ ವ್ಯಾಪ್ತಿಯ ಕರಡಿಗೋಡು ಗ್ರಾಮದಲ್ಲಿ ನಡೆದಿದೆ. ಮುನೀರ್ ಎಂಬವರ ಮಗು ಮನೆಯಲ್ಲಿ ಆಟವಾಡುತ್ತಿದ್ದಾಗ ಆಕಸ್ಮಿಕವಾಗಿ ಉಂಗುರ ನುಂಗಿದ್ದು, ತಕ್ಷಣ ಸಿದ್ದಾಪುರ ಸಮುದಾಯ ಆರೋಗ್ಯ ಕೇಂದ್ರಕ್ಕೆ ಮಗುವನ್ನು ದಾಖಲಿಸಿದರೂ ಉಸಿರಾಟದ ಸಮಸ್ಯೆಯಿಂದಾಗಿ ಮಡಿಕೇರಿ ಜಿಲ್ಲಾಸ್ಪತ್ರೆಗೆ ದಾಖಲಿಸಲಾಗಿತ್ತು. ಆಸ್ಪತ್ರೆಯಲ್ಲಿ ಶಸ್ತ್ರಚಿಕಿತ್ಸೆ ಮೂಲಕ ಉಂಗುರವನ್ನು ಹೊರತೆಗೆಯಲಾಗಿದೆ. ಆದರೆ ಮಗು ಮೃತಪಟ್ಟಿದೆ ಎಂದು ತಿಳಿದು ಬಂದಿದೆ.

ಆಟವಾಡುತ್ತಾ ಉಂಗುರ ನುಂಗಿದ 8 ತಿಂಗಳ ಮಗು ಮೃತ್ಯು..! Read More »

ಕರಾವಳಿ, ಕ್ರೈಮ್ ನ್ಯೂಸ್

ಉಡುಪಿ: ಸಾರ್ವಜನಿಕ ಸ್ಥಳದಲ್ಲೇ ಗಾಂಜಾ ಸೇವನೆ..!   ➤ ಐವರು ವಿದ್ಯಾರ್ಥಿಗಳು ಅರೆಸ್ಟ್

(ನ್ಯೂಸ್ ಕಡಬ)newskadaba.com  ಉಡುಪಿ, ಮಾ.23. ಅಪಾರ್ಟ್ಮೆಂಟ್ ವೊಂದರ ಬಳಿ ಸಾರ್ವಜನಿಕ ಸ್ಥಳದಲ್ಲಿ ಗಾಂಜಾ ಸೇವನೆ ಆರೋಪದ ಮೇಲೆ ಐವರು ವಿದ್ಯಾರ್ಥಿಗಳನ್ನು ವಶಕ್ಕೆ ಪಡೆದಿರುವ ಘಟನೆ ಮಣಿಪಾಲದಲ್ಲಿ ವರದಿಯಾಗಿದೆ. ವಶಕ್ಕೆ ಪಡೆದಿರುವ ವಿದ್ಯಾರ್ಥಿಗಳನ್ನು ನಿಖಿಲ್ ಎಂ. (22), ತನ್ವೀರ್ ರೆಡ್ಡಿ (25), ಶರಣ್ ಶೆಟ್ಟಿ (22), ರಾಹುಲ್ ಸೀಮಾ (21), ತುಶಾರ್ ಜಿ. (21) ಎಂದು ಗುರುತಿಸಲಾಗಿದೆ.  

ಉಡುಪಿ: ಸಾರ್ವಜನಿಕ ಸ್ಥಳದಲ್ಲೇ ಗಾಂಜಾ ಸೇವನೆ..!   ➤ ಐವರು ವಿದ್ಯಾರ್ಥಿಗಳು ಅರೆಸ್ಟ್ Read More »

ಕರಾವಳಿ, ಕ್ರೈಮ್ ನ್ಯೂಸ್

ಬಂಟ್ವಾಳ: ಚೂರಿಯಿಂದ ಇರಿದು ಯುವಕನ ಕೊಲೆಗೆ ಯತ್ನ ➤ ಆರೋಪಿ ಅರೆಸ್ಟ್

(ನ್ಯೂಸ್ ಕಡಬ) newskadaba.com ಬಂಟ್ವಾಳ, ಮಾ. 23. ಯುವಕನೋರ್ವನಿಗೆ ಚೂರಿಯಿಂದ ಇರಿದು ಕೊಲೆಗೆ ಪ್ರಯತ್ನಿಸಿ ಪರಾರಿಯಾಗಿದ್ದ ಆರೋಪಿಯನ್ನು ಬಂಟ್ವಾಳ ನಗರ ಪೋಲೀಸ್ ಠಾಣಾ ಇನ್ಸ್ ಪೆಕ್ಟರ್ ವಿವೇಕಾನಂದ ಮತ್ತು ಎಸ್.ಐ.ರಾಮಕೃಷ್ಣ ಅವರ ನೇತೃತ್ವದ ತಂಡ ಬಂಧಿಸುವಲ್ಲಿ ಯಶಸ್ವಿಯಾಗಿದೆ. ಬಂಧಿತನನ್ನು ನರಿಕೊಂಬು ಗ್ರಾಮದ ಪಿತ್ತಲಗುಡ್ಡೆ ನಿವಾಸಿ ನಿಸಾರ್ ಯಾನೆ ನಿಸಾರ್ ಆಹಮ್ಮದ್ ಎಂದು ಗುರುತಿಸಲಾಗಿದೆ. ಈತ ಸುಲೈಮಾನ್ ಎಂಬಾತನಿಗೆ ಕತ್ತರಿಯಿಂದ ಇರಿದು ಕೊಲೆಗೆ ಪ್ರಯತ್ನಿಸಿದ್ದ ಎಂದು ಬಂಟ್ವಾಳ ನಗರ ಠಾಣೆಯಲ್ಲಿ ಪ್ರಕರಣ ದಾಖಲಾಗಿತ್ತು.

ಬಂಟ್ವಾಳ: ಚೂರಿಯಿಂದ ಇರಿದು ಯುವಕನ ಕೊಲೆಗೆ ಯತ್ನ ➤ ಆರೋಪಿ ಅರೆಸ್ಟ್ Read More »

ಕರಾವಳಿ, ಕ್ರೈಮ್ ನ್ಯೂಸ್

ಕ್ಯಾಂಡಲ್ ಫ್ಯಾಕ್ಟರಿ ಆಕಸ್ಮಿಕವಾಗಿ ಬೆಂಕಿಗಾಹುತಿ

(ನ್ಯೂಸ್ ಕಡಬ) newskadaba.com ಕಾರ್ಕಳ, ಮಾ. 23. ಕ್ಯಾಂಡಲ್ ಫ್ಯಾಕ್ಟರಿಯೊಂದು ಅಗ್ನಿ ಆಹುತಿಗೊಳಗಾಗಿ ಸಂಪೂರ್ಣವಾಗಿ ಭಸ್ಮಗೊಂಡಘಟನೆ ಅತ್ತೂರು ಸಂತ ಲಾರೆನ್ಸ್ ಬಸಿಲಿಕಾ ಚಚ್೯ ಪರಿಸರದಲ್ಲಿ ಸಂಭವಿಸಿದೆ. ನಿಟ್ಟೆ ಗ್ರಾಮ ಪಂಚಾಯತ್ ನ ಅತ್ತೂರು ಚರ್ಚ್ ಬಳಿ ಕ್ಯಾಂಡಲ್ ತಯಾರಿಕಾ ಕೇಂದ್ರ ದಲ್ಲಿ ಬೆಂಕಿ ಆಕಸ್ಮಿಕ ಸಂಭವಿಸಿದ್ದು, ಮಾಹಿತಿ ತಿಳಿದ ಕೂಡಲೇ ಅಗ್ನಿಶಾಮಕ ದಳ ಸ್ಥಳಕ್ಕೆ ದೌಡಾಯಿಸಿದ್ದು, ಸುಮಾರು ಸತತ ಎರಡು ಅಗ್ನಿಶಾಮಕ ವಾಹನಗಳಿಂದ ಸುಮಾರು 03 ಗಂಟೆ ಕಾರ್ಯಾಚರಣೆ ಮಾಡಿ ಬೆಂಕಿಯನ್ನು ನಂದಿಸಲಾಗಿದೆ.

ಕ್ಯಾಂಡಲ್ ಫ್ಯಾಕ್ಟರಿ ಆಕಸ್ಮಿಕವಾಗಿ ಬೆಂಕಿಗಾಹುತಿ Read More »

ಕರಾವಳಿ, ಕ್ರೈಮ್ ನ್ಯೂಸ್

ಬಾಲಕಿಯರಿಗೆ ಲೈಂಗಿಕ ದೌರ್ಜನ್ಯ ಪ್ರಕರಣ     ➤ ಆರೋಪಿಗೆ 62 ವರ್ಷ ಸಜೆ ಮತ್ತು 1 ಲಕ್ಷ ರೂ. ದಂಡ

(ನ್ಯೂಸ್ ಕಡಬ)newskadaba.com ಕಾಸರಗೋಡು, ಮಾ.23. ಬಾಲಕಿಯರಿಗೆ ಲೈಂಗಿಕ ಕಿರುಕುಳ ನೀಡಿದ ಪ್ರಕರಣಕ್ಕೆ ಸಂಬಂಧ ಪಟ್ಟಂತೆ ಆರೋಪಿಗೆ 62 ವರ್ಷ ಸಜೆ ಹಾಗೂ ಒಂದು ಲಕ್ಷ ರೂ. ದಂಡ ವಿಧಿಸಿ ಕಾಸರಗೋಡು ಪಾಸ್ಟ್ ಟ್ರಾಕ್ ವಿಶೇಷ (ಪೋಕ್ಸೋ) ನ್ಯಾಯಾಲಯ ಶಿಕ್ಷೆ ವಿಧಿಸಿ ತೀರ್ಪು ನೀಡಿದೆ. ಕುಂಬಳೆ ಬಂಬ್ರಾಣ ದ ಕೆ. ಚಂದ್ರ ಶೇಖರ (56) ಶಿಕ್ಷೆ ಗೊಳಗಾದವನು ಎನ್ನಲಾಗಿದೆ. ಕಾಸರಗೋಡು ಮತ್ತು ಕುಂಬಳೆ ಠಾಣಾ ಪೊಲೀಸರು ದಾಖಲಿಸಿದ ಎರಡು ಪ್ರತ್ಯೇಕ ಫೋಕ್ಸೋ ಪ್ರಕರಣ ಗಳಿಗೆ ಸಂಬಂಧ ಪಟ್ಟಂತೆ ಶಿಕ್ಷೆ

ಬಾಲಕಿಯರಿಗೆ ಲೈಂಗಿಕ ದೌರ್ಜನ್ಯ ಪ್ರಕರಣ     ➤ ಆರೋಪಿಗೆ 62 ವರ್ಷ ಸಜೆ ಮತ್ತು 1 ಲಕ್ಷ ರೂ. ದಂಡ Read More »

ಕರ್ನಾಟಕ

ಚೆಕ್‌ ಅಮಾನ್ಯ ಪ್ರಕರಣ    ➤ 6 5.69 ಲಕ್ಷ ರೂ. ದಂಡ

(ನ್ಯೂಸ್ ಕಡಬ)newskadaba.com  ಬಂಟ್ವಾಳ, ಮಾ.22. ಬಂಟ್ವಾಳ ತಾಲೂಕು ಪ್ರಾಥಮಿಕ ಸಹಕಾರಿ ಕೃಷಿ ಮತ್ತು ಗ್ರಾಮೀಣ ಅಭಿವೃದ್ಧಿ ಬ್ಯಾಂಕಿನಿಂದ ಸಾಲ ಪಡೆದು ಮರು ಪಾವತಿಸದ ಆರೋಪಿಗೆ ಬಂಟ್ವಾಳ ನ್ಯಾಯಾಲಯ ಚೆಕ್‌ ಅಮಾನ್ಯ (ಬೌನ್ಸ್‌) ಪ್ರಕರಣದಲ್ಲಿ 5,69,500 ರೂ. ದಂಡ ವಿಧಿಸಿ ಆದೇಶ ನೀಡಿದೆ. ಪಂಜಿಕಲ್ಲು ನಿವಾಸಿ ಪದ್ಮನಾಭ ಮಡಿವಾಳ ಆರೋಪಿಯಾಗಿದ್ದು, ಬಂಟ್ವಾಳ ಪಿಎಲ್‌ಡಿ ಬ್ಯಾಂಕಿನಿಂದ ಸಾಲ ಪಡೆದು ಮರುಪಾವತಿಸಿರಲಿಲ್ಲ. ಬ್ಯಾಂಕಿಗೆ ಅವರು ನೀಡಿದ ಚೆಕ್‌ ಕೂಡ ಅಮಾನ್ಯಗೊಂಡಿದ್ದು, ಹೀಗಾಗಿ ಬ್ಯಾಂಕ್‌ ಆರೋಪಿಯ ವಿರುದ್ಧ ಪ್ರಕರಣ ದಾಖಲಿಸಿತ್ತು.  

ಚೆಕ್‌ ಅಮಾನ್ಯ ಪ್ರಕರಣ    ➤ 6 5.69 ಲಕ್ಷ ರೂ. ದಂಡ Read More »

ಕರಾವಳಿ

ಮಂಗಳೂರು: ಸೀಮೆಎಣ್ಣೆ ಸೇವಿಸಿ ವಿದ್ಯಾರ್ಥಿ ಆತ್ಮಹತ್ಯೆ

(ನ್ಯೂಸ್ ಕಡಬ)newskadaba.com  ಮಂಗಳೂರು, ಮಾ.22. ವಿದ್ಯಾರ್ಥಿಯೋರ್ವ ಸೀಮೆಎಣ್ಣೆ ಸೇವಿಸಿ ಆಸ್ಪತ್ರೆಗೆ ದಾಖಲಾಗಿ ಮೃತಪಟ್ಟ ಘಟನೆ ಮಂಗಳೂರಿನಲ್ಲಿ ನಡೆದಿದೆ. ನೈಮರ್ಮುಲಾ ತನ್ಸಿಯುಲ್ ಇಸ್ಲಾಂ ಹೈಯರ್ ಸೆಕೆಂಡರಿ ಶಾಲೆಯ 10ನೇ ತರಗತಿ ವಿದ್ಯಾರ್ಥಿ ಉಮರ್ ಅಫ್ರಾಬುದ್ದೀನ್ (15) ಪೆರುಂಬಳ ಚಾಳ ಜೆಟ್ಟಿ ಅಶ್ರಫ್ ಹಾಗೂ ಫಾಮಿನಿಯಾ ದಂಪತಿಯ ಪುತ್ರ  ಮೃತಪಟ್ಟ ವಿದ್ಯಾರ್ಥಿ. ಹಲವು ದಿನಗಳಿಂದ ತೀವ್ರ ಅಸ್ವಸ್ಥನಾಗಿದ್ದ ಉಮರ್ ಅಫ್ರಾಬುದ್ದೀನ್ ಸೀಮೆಎಣ್ಣೆ ಸೇವಿಸಿದ್ದಾಗಿ ಪತ್ತೆಯಾಗಿದ್ದು, ಮಂಗಳೂರಿನ ಆಸ್ಪತ್ರೆಗೆ ದಾಖಲಿಸಿದ್ದರು. ಆದರೆ ಚಿಕಿತ್ಸೆ ಫಲಕಾರಿಯಾಗದೇ ನಿಧನರಾದರು. ಪರೀಕ್ಷೆಯಲ್ಲಿ ನಾಲ್ಕು ವಿಷಯಗಳಲ್ಲಿ ಕಷ್ಟ

ಮಂಗಳೂರು: ಸೀಮೆಎಣ್ಣೆ ಸೇವಿಸಿ ವಿದ್ಯಾರ್ಥಿ ಆತ್ಮಹತ್ಯೆ Read More »

ಕರಾವಳಿ, ಕ್ರೈಮ್ ನ್ಯೂಸ್

16ರ ಬಾಲಕಿಯ ಮೇಲೆ ಅತ್ಯಾಚಾರ ಎಸಗಿದ ಡಿಪ್ಲೋಮಾ ವಿದ್ಯಾರ್ಥಿ ➤ ದೂರು ದಾಖಲು..!

(ನ್ಯೂಸ್ ಕಡಬ)newskadaba.com  ಕಾರವಾರ, ಮಾ.22. 16 ವರ್ಷದ ಬಾಲಕಿಯ ಮೇಲೆ ಡಿಪ್ಲೊಮಾ ವಿದ್ಯಾರ್ಥಿಯೋರ್ವ ಅತ್ಯಾಚಾರ ನಡೆಸಿರುವ ಘಟನೆ ನಡೆದಿದ್ದು, ಆರೋಪಿಯನ್ನು ಪೊಲೀಸರು ಪೋಕ್ಸೋ ಕಾಯ್ದೆಯಡಿ ಬಂಧಿಸಿದ್ದಾರೆ. ಆರೋಪಿ ಕೊಪ್ಪಳ ಜಿಲ್ಲೆಯ ಗಂಗಾವತಿ ತಾಲೂಕಿನವನು ಎನ್ನಲಾಗಿದ್ದು, ಡಿಪ್ಲೋಮಾ ವ್ಯಾಸಂಗ ಮಾಡುತ್ತಿದ್ದ ಈತ ಕಳೆದ ಜನವರಿ ತಿಂಗಳಿನಲ್ಲಿ ಅಂಕೋಲಾಕ್ಕೆ ಬಂದಿದ್ದಾಗ ಬಾಲಕಿಯನ್ನು ಬೀಚ್‌ಗೆ ಕರೆದೊಯ್ದು ಬಲವಂತವಾಗಿ ಅತ್ಯಾಚಾರ ಎಸಗಿದ್ದ ಎಂದು ದೂರು ದಾಖಲಾಗಿದೆ.

16ರ ಬಾಲಕಿಯ ಮೇಲೆ ಅತ್ಯಾಚಾರ ಎಸಗಿದ ಡಿಪ್ಲೋಮಾ ವಿದ್ಯಾರ್ಥಿ ➤ ದೂರು ದಾಖಲು..! Read More »

ಕರಾವಳಿ, ಕ್ರೈಮ್ ನ್ಯೂಸ್

ಬ್ರಹ್ಮಾವರ: ಅಕ್ರಮ ಅಕ್ಕಿ ಸಾಗಾಟ ➤ 5.7 ಲಕ್ಷ ರೂ. ಮೌಲ್ಯದ 220  ಚೀಲ ಪಡಿತರ ಅಕ್ಕಿ ವಶಕ್ಕೆ

(ನ್ಯೂಸ್ ಕಡಬ)newskadaba.com  ಬ್ರಹ್ಮಾವರ, ಮಾ.22. ಅಕ್ರಮವಾಗಿ ಸಾಗಾಟ ಮಾಡಲಾಗುತ್ತಿದ್ದ 5,00,790 ರೂ. ಮೌಲ್ಯದ 220 ಚೀಲ ಪಡಿತರ ಅಕ್ಕಿಯನ್ನು ಬ್ರಹ್ಮಾವರ ತಾಲೂಕು ಆಹಾರ ನಿರೀಕ್ಷಕರು ಪೊಲೀಸರ ಸಹಕಾರದೊಂದಿಗೆ ವಶಪಡಿಸಿಕೊಂಡಿದ್ದಾರೆ. ಅಲ್ಲದೆ, ಸಾಗಾಟಕ್ಕೆ ಬಳಸಿದ ಕಂಟೈನರ್ ವಾಹನವನ್ನು ಸ್ವಾಧೀನಪಡಿಸಿಕೊಳ್ಳಲಾಗಿದೆ. ಬ್ರಹ್ಮಾವರ ಚಾಂತಾರು ಗ್ರಾಮದ ಕೃಷಿ ಕೇಂದ್ರದ ಬಳಿ ಬ್ರಹ್ಮಾವರ-ಹೆಬ್ರಿ ರಸ್ತೆಯಲ್ಲಿ ಪಡಿತರ ಅಕ್ಕಿಯನ್ನು ಅಕ್ರಮವಾಗಿ ಸಾಗಾಟ ಮಾಡುತ್ತಿರುವ ಬಗ್ಗೆ ಮಾಹಿತಿ ಬಂದ ಮೇರೆಗೆ ಬ್ರಹ್ಮಾವರ ಠಾಣಾ ಪಿಎಸ್‌ಐ ಹಾಗೂ ಸಿಬಂದಿಯ ಸಹಕಾರದೊಂದಿಗೆ ಕಾರ್ಯಾಚರಣೆ ನಡೆಸಿದ ತಾಲೂಕು ಆಹಾರ ನಿರೀಕ್ಷಕರು

ಬ್ರಹ್ಮಾವರ: ಅಕ್ರಮ ಅಕ್ಕಿ ಸಾಗಾಟ ➤ 5.7 ಲಕ್ಷ ರೂ. ಮೌಲ್ಯದ 220  ಚೀಲ ಪಡಿತರ ಅಕ್ಕಿ ವಶಕ್ಕೆ Read More »

ಕರಾವಳಿ, ಕ್ರೈಮ್ ನ್ಯೂಸ್

ಆಟೋ ಮತ್ತು ಕಾರಿನ ನಡುವೆ ಸರಣಿ ಅಪಘಾತ..! ➤ ಕಾರು ಸಂಪೂರ್ಣ ನಜ್ಜುಗುಜ್ಜು

(ನ್ಯೂಸ್ ಕಡಬ)newskadaba.com ಮಂಗಳೂರು, ಮಾ.22. ಕಾರೊಂದು ರಿವರ್ಸ್ ತೆಗೆಯುವ ಸಂದರ್ಭ ಚಾಲಕನ ನಿಯಂತ್ರಣ ತಪ್ಪಿ ಸರಣಿ ಅಪಘಾತ ಸಂಭವಿಸಿರುವ ಘಟನೆ ಮಂಗಳೂರಿನ ಕೋರ್ಟ್ ರಸ್ತೆಯಲ್ಲಿ ನಡೆದಿದೆ. ಕಾರು ರಿವರ್ಸ್ ತೆಗೆಯುವ ಸಂದರ್ಭ ಚಾಲಕನ ನಿಯಂತ್ರಣ ತಪ್ಪಿ ಆಟೋ ಮತ್ತು ಕಾರೊಂದಕ್ಕೆ ಡಿಕ್ಕಿ ಹೊಡೆದು ರಸ್ತೆ ಪಕ್ಕ ಪಲ್ಟಿಯಾಗಿದ್ದು, ಕಾರಿನಲ್ಲಿದ್ದ ಚಾಲಕನಿಗೆ ಅಲ್ಪ ಸ್ವಲ್ಪ ಗಾಯಗಳಾಗಿದ್ದರೆ, ಕಾರು ಸಂಪೂರ್ಣ ನುಜ್ಜುಗುಜ್ಜಾಗಿದೆ ಎಂದು ತಿಳಿದುಬಂದಿದೆ.  

ಆಟೋ ಮತ್ತು ಕಾರಿನ ನಡುವೆ ಸರಣಿ ಅಪಘಾತ..! ➤ ಕಾರು ಸಂಪೂರ್ಣ ನಜ್ಜುಗುಜ್ಜು Read More »

ಕರಾವಳಿ, ಕ್ರೈಮ್ ನ್ಯೂಸ್
Scroll to Top