Mangalore

ಬೋರ್ ವೆಲ್ ಗಾಡಿ ಮತ್ತು ಆಕ್ಟೀವಾ ನಡುವೆ ಢಿಕ್ಕಿ ➤ ಸವಾರ ಸ್ಥಳದಲ್ಲೇ ಮೃತ್ಯು

(ನ್ಯೂಸ್ ಕಡಬ) newskadaba.com ವಿಟ್ಲ, ಮಾ. 18. ಬೋರ್ ವೆಲ್ ಗಾಡಿ ಮತ್ತು ಆಕ್ಟೀವಾ ನಡುವೆ ಢಿಕ್ಕಿ ಸಂಭವಿಸಿ ಓರ್ವ ದ್ವಿ ಚಕ್ರ ಸವಾರ ಮೃತಪಟ್ಟ ಘಟನೆ ವಿಟ್ಲದ ಉಕ್ಕುಡ ಅಪ್ಪೆರಿಪಾದೆ ಎಂಬಲ್ಲಿ ಸಂಭವಿಸಿದೆ.   ಮೃತಪಟ್ಟವರನ್ನು ರಂಜಿತ್ ಎಂದು ಗುರುತಿಸಲಾಗಿದ್ದು, ಪನೋಲಿಬೈಲು ಮೂಲದ ಯುವಕ ವಿಟ್ಲದ ಸಂಬಂಧಿಕರ ಮನೆಯಲ್ಲಿ ವಾಸವಿದ್ದು, ಕಲ್ಲು ಲೋಡ್ ಮಾಡಲು ಹೋಗುತ್ತಿದ್ದ ಎಂದೆನ್ನಲಾಗಿದೆ.

ಬೋರ್ ವೆಲ್ ಗಾಡಿ ಮತ್ತು ಆಕ್ಟೀವಾ ನಡುವೆ ಢಿಕ್ಕಿ ➤ ಸವಾರ ಸ್ಥಳದಲ್ಲೇ ಮೃತ್ಯು Read More »

ಕರಾವಳಿ, ಕ್ರೈಮ್ ನ್ಯೂಸ್

ಕಡಬ: ಕೆರೆಯ ಬಳಿ ಗೃಹರಕ್ಷಕದಳದ ಕಛೇರಿ ನಿರ್ಮಾಣಕ್ಕೆ ಕಾದಿರಿಸಿದ ಜಾಗ ಅತಿಕ್ರಮಿಸಿ ಕಟ್ಟಡ ನಿರ್ಮಾಣ ಆರೋಪ      ➤ ತಹಸೀಲ್ದಾರ್ ಗೆ ದೂರು        

(ನ್ಯೂಸ್ ಕಡಬ)newskadaba.com  ಕಡಬ, ಮಾ.18. ಇಲ್ಲಿನ ಕೆರೆಯ ಸಮಿಪ ಕಡಬ ಗೃಹರಕ್ಷಕ ಕಛೇರಿ ನಿರ್ಮಿಸಲು 5 ಸೆಂಟ್ಸ್ ಜಾಗ ಮೀಸಲು ಇರಿಸಲಾಗಿದ್ದು, ಈ ಜಾಗವನ್ನು ಸ್ಥಳೀಯ ಖಾಸಗಿ ವ್ಯಕ್ತಿಯೋರ್ವರು ಅತಿಕ್ರಮಿಸಿ ಎರಡು ಅಂತಸ್ಥಿನ ಮನೆ ಕಟ್ಟಿದ್ದಾರೆ ಎಂಬ ಆರೋಪ ವ್ಯಕ್ತವಾಗಿದ್ದು, ಈ ಬಗ್ಗೆ ಕಡಬ ಗೃಹರಕ್ಷಕದಳದ ಘಟಕಾಧಿಕಾರಿ ಕಡಬ ತಹಸೀಲ್ದಾರ್ ಹಾಗೂ ಕಡಬ ಪೋಲಿಸ್ ಠಾಣೆಗೆ ದೂರು ನೀಡಿದ್ದಾರೆ.  ಕಡಬ ಘಟಕಾಧಿಕಾರಿ ತೀರ್ಥೇಶ್ ಅಮೈ ಅವರು ನೀಡಿದ ದೂರಿನಲ್ಲಿ ತಿಳಿಸಿರುವಂತೆ, 2004ನೇ ಇಸವಿಯಲ್ಲಿ ಆಗಿನ ಪುತ್ತೂರು ಸಹಾಯಕ

ಕಡಬ: ಕೆರೆಯ ಬಳಿ ಗೃಹರಕ್ಷಕದಳದ ಕಛೇರಿ ನಿರ್ಮಾಣಕ್ಕೆ ಕಾದಿರಿಸಿದ ಜಾಗ ಅತಿಕ್ರಮಿಸಿ ಕಟ್ಟಡ ನಿರ್ಮಾಣ ಆರೋಪ      ➤ ತಹಸೀಲ್ದಾರ್ ಗೆ ದೂರು         Read More »

ಕರಾವಳಿ

ಸಿಗ್ನಲ್ ನಲ್ಲಿ ನಿಂತಿದ್ದ ಸ್ಕೂಟರ್ ಗೆ ಲಾರಿ ಢಿಕ್ಕಿ ➤ ತಂದೆ – ಮಗಳು ದುರ್ಮರಣ

(ನ್ಯೂಸ್ ಕಡಬ) newskadaba.com ಮಂಗಳೂರು,ಮಾ. 18. ನಿಂತಿದ್ದ ಸ್ಕೂಟರ್ ಗೆ ಹಿಂದಿನಿಂದ ಬಂದ ಲಾರಿಯೊಂದು ಢಿಕ್ಕಿ ಹೊಡೆದ ಪರಿಣಾಮ ತಂದೆ ಮಗಳು ಸ್ಥಳದಲ್ಲೇ ಮೃತಪಟ್ಟ ಘಟನೆ ನಂತೂರ್ ಸರ್ಕಲ್ ನಲ್ಲಿ ಇಂದು ಮಧ್ಯಾಹ್ನ ನಡೆದಿದೆ. ತಂದೆ ಮಗಳಿಬ್ಬರು ದ್ವಿಚಕ್ರ ವಾಹನದಲ್ಲಿ ಕುಳಿತು ಸಿಗ್ನಲ್ ಕಾಯುತ್ತಿದ್ದ ವೇಳೆ ಏಕಾಏಕಿ ಬಂದ ಲಾರಿಯು ದ್ವಿಚಕ್ರ ವಾಹನದ ಮೇಲೆ ಹರಿದಿದ್ದು, ಪರಿಣಾಮ ಸವಾರರಿಬ್ಬರು ಸ್ಥಳದಲ್ಲೇ ಮೃತಪಟ್ಟಿದ್ದಾರೆ. ಮೃತರು ತಂದೆ – ಮಗಳು ಎನ್ನಲಾಗಿದ್ದು ಮೃತರ ವಾಹನದಲ್ಲಿ ದೊರಕಿದ ಮಾಹಿತಿಯಂತೆ ಬಲ್ಮಠದ ಸ್ಯಾಮುವೆಲ್

ಸಿಗ್ನಲ್ ನಲ್ಲಿ ನಿಂತಿದ್ದ ಸ್ಕೂಟರ್ ಗೆ ಲಾರಿ ಢಿಕ್ಕಿ ➤ ತಂದೆ – ಮಗಳು ದುರ್ಮರಣ Read More »

ಕರಾವಳಿ, ಕ್ರೈಮ್ ನ್ಯೂಸ್

ಸುಳ್ಯ: ಇಂದು ನಾಲ್ಕೂರು ಗ್ರಾಮದಲ್ಲಿ ಜಿಲ್ಲಾಧಿಕಾರಿ ಗ್ರಾಮ ವಾಸ್ತವ್ಯ

(ನ್ಯೂಸ್ ಕಡಬ) newskadaba.com ಸುಳ್ಯ, ಮಾ. 18. ಸುಳ್ಯ ತಾಲೂಕಿನ ನಾಲ್ಕೂರು ಗ್ರಾಮದ ಹಾಲೆ ಮಜಲು ಶ್ರೀ ವೆಂಕಟೇಶ್ವರ ಸಭಾ ಭವನದಲ್ಲಿ ಜಿಲ್ಲಾಧಿಕಾರಿಯವರು ಗ್ರಾಮ ವಾಸ್ತವ್ಯ ನಡೆಸಲಿದ್ದಾರೆ. ಈ ಸಂದರ್ಭದಲ್ಲಿ ಅವರು ಸ್ಥಳೀಯ ಗ್ರಾಮಸ್ಥರಿಂದ ಅಹವಾಲು ಸ್ವೀಕರಿಸಿ, ಕೆಲವು ಸಮಸ್ಯೆಗಳನ್ನು ಸ್ಥಳದಲ್ಲಿಯೇ ಬಗೆಹರಿಸಲಿದ್ದಾರೆ. ಜಿಲ್ಲಾ ಮಟ್ಟದ ಎಲ್ಲಾ ಅಧಿಕಾರಿಗಳು ಕಡ್ಡಾಯವಾಗಿ ಹಾಜರಾಗುವಂತೆ ಅಪರ ಜಿಲ್ಲಾಧಿಕಾರಿಯವರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

ಸುಳ್ಯ: ಇಂದು ನಾಲ್ಕೂರು ಗ್ರಾಮದಲ್ಲಿ ಜಿಲ್ಲಾಧಿಕಾರಿ ಗ್ರಾಮ ವಾಸ್ತವ್ಯ Read More »

ಕರಾವಳಿ

ಮಂಗಳೂರು: ಅಕ್ರಮ ಚಿನ್ನ ಸಾಗಾಟಕ್ಕೆ ಮಗುವನ್ನು ಬಳಸಿಕೊಂಡ ತಂದೆ.!

(ನ್ಯೂಸ್ ಕಡಬ) newskadaba.com ಮಂಗಳೂರು, ಮಾ. 18. ಅಕ್ರಮ ಚಿನ್ನ ಸಾಗಾಟ ಮಾಡುತ್ತಿದ್ದ ಪ್ರಯಾಣಿಕನಿಂದ 90 ಲಕ್ಷ ರೂ.ಮೌಲ್ಯದ ಚಿನ್ನವನ್ನು ಮಂಗಳೂರಿನ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ಕಸ್ಟಮ್ಸ್ ಅಧಿಕಾರಿಗಳು ವಶಕ್ಕೆ ಪಡೆದ ಘಟನೆ ವರದಿಯಾಗಿದೆ. ಮಾರ್ಚ್ 1 ರಿಂದ ಮಾರ್ಚ್ 15 ರ ಅವಧಿಯಲ್ಲಿ ಮೂವರು ಪ್ರಯಾಣಿಕರಿಂದ ಅಧಿಕಾರಿಗಳು 90 ಲಕ್ಷದ 67 ಸಾವಿರದ 750 ರೂ. ಮೌಲ್ಯದ 1,606 ಗ್ರಾಂ 24 ಕ್ಯಾರೆಟ್ ಶುದ್ಧತೆಯ ಚಿನ್ನವನ್ನು ವಶಪಡಿಸಿಕೊಂಡಿದ್ದಾರೆ. ಚಿನ್ನವನ್ನು ವಿವಿಧ ವಿಧಾನಗಳಲ್ಲಿ ಪೇಸ್ಟ್ ರೂಪದಲ್ಲಿ ಮರೆಮಾಡಿ

ಮಂಗಳೂರು: ಅಕ್ರಮ ಚಿನ್ನ ಸಾಗಾಟಕ್ಕೆ ಮಗುವನ್ನು ಬಳಸಿಕೊಂಡ ತಂದೆ.! Read More »

ಕರಾವಳಿ

ಮಂಗಳೂರು: ಕುಡಿಯುವ ನೀರಿನ ಸಮಸ್ಯೆ ಎದುರಾಗದಂತೆ ಅಗತ್ಯ ಕ್ರಮ ಕೈಗೊಳ್ಳಿ ➤ ಡಿ.ಸಿ. ರವಿಕುಮಾರ್ ಸೂಚನೆ

(ನ್ಯೂಸ್ ಕಡಬ) newskadaba.com ಮಂಗಳೂರು, ಮಾ. 18. ಅರಣ್ಯ ಇಲಾಖೆ ಹಾಗೂ ಅಗ್ನಿಶಾಮಕ ದಳದವರು ಜಿಲ್ಲೆಯಲ್ಲಿ ಕಾಡ್ಗಿಚ್ಚು ಹಾಗೂ ಇತರೆ ಬೆಂಕಿ ಅವಘಡಗಳನ್ನು ನಂದಿಸುವ ಕಾರ್ಯವನ್ನು ಉತ್ತಮವಾಗಿ ಮಾಡುತ್ತಿದ್ದು, ಈ ಕಾರ್ಯಕ್ಕೆ ಮತ್ತಷ್ಟು ಅನುಕೂಲವಾಗುವಂತೆ ಜಿಲ್ಲೆಯಲ್ಲಿರುವ ಬೃಹತ್ ಕೈಗಾರಿಕೆಗಳು, ಉದ್ದಿಮೆಗಳು ಬೆಂಕಿ ನಂದಿಸುವ ನೀರಿನ ಟ್ಯಾಂಕರ್’ಗಳನ್ನು ಒದಗಿಸಿಕೊಡಲು ಕೈಜೋಡಿಸುವಂತೆ ಜಿಲ್ಲಾಧಿಕಾರಿ ರವಿಕುಮಾರ್ ಎಂ.ಆರ್. ಕರೆ ನೀಡಿದ್ದಾರೆ. ನಗರದ ಜಿಲ್ಲಾಧಿಕಾರಿಯವರ ಕಚೇರಿ ಸಭಾಂಗಣದಲ್ಲಿ ಹಮ್ಮಿಕೊಳ್ಳಲಾಗಿದ್ದ ಜಿಲ್ಲಾ ವಿಪತ್ತು ನಿರ್ವಹಣಾ ಪ್ರಾಧಿಕಾರದ ಸಭೆಯಲ್ಲಿ ಅಧ್ಯಕ್ಷತೆ ವಹಿಸಿ ಮಾತನಾಡಿದರು.

ಮಂಗಳೂರು: ಕುಡಿಯುವ ನೀರಿನ ಸಮಸ್ಯೆ ಎದುರಾಗದಂತೆ ಅಗತ್ಯ ಕ್ರಮ ಕೈಗೊಳ್ಳಿ ➤ ಡಿ.ಸಿ. ರವಿಕುಮಾರ್ ಸೂಚನೆ Read More »

ಕರಾವಳಿ

ಗಗನಸಖಿಯಾಗಿ ನೇಮಕಗೊಂಡ ಕಡಬದ ರಕ್ಷಾ ಎಸ್

(ನ್ಯೂಸ್ ಕಡಬ) newskadaba.com ಕಡಬ, ಮಾ. 18. ತಾಲೂಕು ಕೊಣಾಲು ಗ್ರಾಮದ ಆರ್ಲ ನಿವಾಸಿ ರಕ್ಷಾ ಯಸ್.ರವರು ‘ಗೋ ಫಸ್ಟ್’ ವಿಮಾನದಲ್ಲಿ ಗಗನಸಖಿಯಾಗಿ ನೇಮಕಗೊಂಡಿದ್ದಾರೆ. ಗಗನಸಖಿ ನೇಮಕಾತಿಗೆ ಸಂಬಂಧಿಸಿದಂತೆ ನಡೆದ ಲಿಖಿತ ಪರೀಕ್ಷೆಯಲ್ಲಿ ಉತ್ತೀರ್ಣಗೊಂಡ ರಕ್ಷಾ ಅವರು, ಬೆಂಗಳೂರಿನಲ್ಲಿ ನಡೆದ ಸಂದರ್ಶನಕ್ಕೆ ಹಾಜರಾಗಿ ಆಯ್ಕೆಗೊಂಡಿದ್ದರು. ಬಳಿಕ 6 ತಿಂಗಳ ತರಬೇತಿ ಮುಗಿಸಿದ ಅವರು ಇದೀಗ ಗೋ ಫಸ್ಟ್ ವಿಮಾನದಲ್ಲಿ ಗಗನಸಖಿಯಾಗಿ ಕರ್ತವ್ಯ ನಿರ್ವಹಿಸುತ್ತಿದ್ದಾರೆ. ಇವರು ನೆಲ್ಯಾಡಿ ಜ್ಞಾನೋದಯ ಬೆಥನಿ ಆಂಗ್ಲಮಾಧ್ಯಮ ಶಾಲೆಯಲ್ಲಿ ಪ್ರಾಥಮಿಕ, ಹೈಸ್ಕೂಲ್ ಶಿಕ್ಷಣ ಮುಗಿಸಿ,

ಗಗನಸಖಿಯಾಗಿ ನೇಮಕಗೊಂಡ ಕಡಬದ ರಕ್ಷಾ ಎಸ್ Read More »

ಕರಾವಳಿ

SSLC ಪಬ್ಲಿಕ್ ಪರೀಕ್ಷೆ ಹಿನ್ನೆಲೆ  ➤ ಪೋಷಕರು, ವಿದ್ಯಾರ್ಥಿಗಳಿಗೆ ಸಹಾಯವಾಣಿ ಆರಂಭ

(ನ್ಯೂಸ್ ಕಡಬ) newskadaba.com  ಮಂಗಳೂರು, ಮಾ. 18. ಎಸ್.ಎಸ್.ಎಲ್.ಸಿ ಪರೀಕ್ಷಾ ಸಮೀಪಿಸುತ್ತಿದ್ದು ಎಂದಿನಂತೆ ಈ ಬಾರಿಯೂ ಕೂಡ ವಿದ್ಯಾರ್ಥಿಗಳ ನಡುವೆ ಗೊಂದಲ ನಿವಾರಣೆಗೆ ಕರ್ನಾಟಕ ಶಾಲಾ ಪರೀಕ್ಷೆ ಮತ್ತು ಮೌಲ್ಯ ನಿರ್ಣಯ ಮಂಡಳಿ ಈ ವರ್ಷವೂ ಸಹಾಯವಾಣಿ ಪ್ರಾರಂಭಿಸಿದೆ ಎನ್ನಲಾಗಿದೆ. ಮಾರ್ಚ್ 20 ರಿಂದ 28ರ ವರೆಗೆ ಮಧ್ಯಾಹ್ನ 3 ರಿಂದ 7:30ರ ವರೆಗೆ ವಿದ್ಯಾರ್ಥಿಗಳು ಮತ್ತು ಪಾಲಕರು ಹಾಗೂ ಮಾ.26 ರಂದು ಬೆಳಗ್ಗೆ 11 ರಿಂದ ಸಂಜೆ 6 ರವರೆಗೆ ಇರಲಿದೆ. ಮಾ. 31ರಿಂದ ಏ.

SSLC ಪಬ್ಲಿಕ್ ಪರೀಕ್ಷೆ ಹಿನ್ನೆಲೆ  ➤ ಪೋಷಕರು, ವಿದ್ಯಾರ್ಥಿಗಳಿಗೆ ಸಹಾಯವಾಣಿ ಆರಂಭ Read More »

ಕರಾವಳಿ

ಕಾರು ಮತ್ತು ಕಂಟೈನರ್ ನಡುವೆ ಅಪಘಾತ ➤ ಪ್ರಾಧ್ಯಾಪಕನೋರ್ವ ಮೃತ್ಯು

(ನ್ಯೂಸ್ ಕಡಬ)newskadaba.com   ಹೊನ್ನಾವರ, ಮಾ.18. ಕಾರು ಹಾಗೂ ಕಂಟೈನರ್ ನಡುವೆ ಢಿಕ್ಕಿ ಸಂಭವಿಸಿ ಬಂಟಕಲ್ಲು ಶ್ರಿ ಮಧ್ವ ವಾದಿರಾಜ ತಾಂತ್ರಿಕ ಕಾಲೇಜಿನ ಮೆಕ್ಯಾನಿಕಲ್‌ ವಿಭಾಗದ ಹಿರಿಯ ಸಹಾಯಕ ಪ್ರಾಧ್ಯಾಪಕರೊಬ್ಬರು ಮೃತಪಟ್ಟ ಘಟನೆ ಹೊನ್ನಾವರದಲ್ಲಿ ನಡೆದಿದೆ. ಹಿರಿಯ ಸಹಾಯಕ ಪ್ರಾಧ್ಯಾಪಕ ಅನಂತೇಶ ರಾವ್‌ (40) ಮೃತಪಟ್ಟವರು ಎಂದು ಗುರುತಿಸಲಾಗಿದೆ. ಅನಂತೇಶ ರಾವ್ ಅವರು ಸೋದೆ ಮೂಲ ಮಠಕ್ಕೆ ಉಡುಪಿಯಿಂದ ತೆರಳುತ್ತಿದ್ದರು. ಈ ವೇಳೆ ಹೊನ್ನಾವರ ಬಳಿ ಅವರ ಕಾರು ಕಂಟೈನರ್‌ಗೆ ಢಿಕ್ಕಿಯಾಗಿದೆ. ಢಿಕ್ಕಿಯ ರಭಸಕ್ಕೆ ಗಂಭೀರ ಗಾಯಗೊಂಡ ಅವರು

ಕಾರು ಮತ್ತು ಕಂಟೈನರ್ ನಡುವೆ ಅಪಘಾತ ➤ ಪ್ರಾಧ್ಯಾಪಕನೋರ್ವ ಮೃತ್ಯು Read More »

ಕರಾವಳಿ, ಕ್ರೈಮ್ ನ್ಯೂಸ್

ಫಲಾನುಭವಿಗಳ ಸಮ್ಮೇಳನ- ಕಡಬ, ಪುತ್ತೂರು ವ್ಯಾಪ್ತಿಯ ಬಸ್ ಸಂಚಾರದಲ್ಲಿ ವ್ಯತ್ಯಯ ➤ ಸಾರ್ವಜನಿಕರು ಸಹಕರಿಸುವಂತೆ ಮನವಿ

(ನ್ಯೂಸ್ ಕಡಬ) newskadaba.com ಮಡಿಕೇರಿ, ಮಾ. 17. ಮಡಿಕೇರಿಯಲ್ಲಿ ನಡೆಯುವ ಫಲಾನುಭವಿಗಳ ಸಮ್ಮೇಳನಕ್ಕೆ ಒಪ್ಪಂದದ ಮೇರೆಗೆ ಬಸ್ಸುಗಳನ್ನು ನಿಯೋಜಿಸಲಾಗುತ್ತಿದ್ದು, ಈ ಹಿನ್ನೆಲೆಯಲ್ಲಿ ಮಾ. 18 ರಂದು ಮಡಿಕೇರಿ, ಕುಶಾಲನಗರ, ವೀರಾಜಪೇಟೆ, ಸೋಮವಾರಪೇಟೆ, ಪುತ್ತೂರು, ಸುಳ್ಯ, ಕಡಬ ತಾಲೂಕುಗಳ ವ್ಯಾಪ್ತಿಯಲ್ಲಿ ಕಾರ್ಯಾಚರಿಸುತ್ತಿರುವ ಕೆಎಸ್‍ಆರ್.ಟಿಸಿ ಬಸ್ ಗಳ ಸಂಚಾರದಲ್ಲಿ ವ್ಯತ್ಯಯ ಉಂಟಾಗುವ ಸಾಧ್ಯತೆ ಇದೆ. ಸಾರ್ವಜನಿಕರು, ಶಾಲಾ-ಕಾಲೇಜು ವಿದ್ಯಾರ್ಥಿಗಳು ಸಹಕರಿಸುವಂತೆ ಕೆಎಸ್‍ಆರ್.ಟಿಸಿ ಪುತ್ತೂರು ವಿಭಾಗದ ವಿಭಾಗೀಯ ನಿಯಂತ್ರಣಾಧಿಕಾರಿ ಬಿ.ಜಯಕರ ಶೆಟ್ಟಿ ಮನವಿ ಮಾಡಿದ್ದಾರೆ.  

ಫಲಾನುಭವಿಗಳ ಸಮ್ಮೇಳನ- ಕಡಬ, ಪುತ್ತೂರು ವ್ಯಾಪ್ತಿಯ ಬಸ್ ಸಂಚಾರದಲ್ಲಿ ವ್ಯತ್ಯಯ ➤ ಸಾರ್ವಜನಿಕರು ಸಹಕರಿಸುವಂತೆ ಮನವಿ Read More »

ಕರಾವಳಿ, ಕರ್ನಾಟಕ
Scroll to Top