Mangalore

ಹಲವು ವರ್ಷಗಳಿಂದ ತಲೆಮರೆಸಿಕೊಂಡಿದ್ದ 24 ಆರೋಪಿಗಳು ಅರೆಸ್ಟ್

(ನ್ಯೂಸ್ ಕಡಬ) newskadaba.com ಉಡುಪಿ, ಮಾ. 17. ಜಿಲ್ಲೆಯ ವಿವಿಧ ಠಾಣೆಗಳಲ್ಲಿ ಅಪರಾಧ ಕೃತ್ಯಗಳಲ್ಲಿ ಭಾಗಿಯಾಗಿ ಕಳೆದ ಹಲವು ವರ್ಷಗಳಿಂದ ತಲೆಮರೆಸಿಕೊಂಡಿದ್ದ 24ಕ್ಕೂ ಅಧಿಕ ಸಂಖ್ಯೆಯ ಆರೋಪಿಗಳನ್ನು ಪತ್ತೆ ಹಚ್ಚಿ ಬಂಧಿಸಿರುವ ಉಡುಪಿ ಪೊಲೀಸರು ಅವರನ್ನು ನ್ಯಾಯಾಲಯಗಳಿಗೆ ಹಾಜರು ಪಡಿಸಿದ್ದಾರೆ. ಜಿಲ್ಲೆಯಲ್ಲಿ ವಿವಿಧ ಪ್ರಕರಣಗಳಲ್ಲಿ ತಲೆಮರೆಸಿಕೊಂಡಿರುವ ಆರೋಪಿಗಳ ಪತ್ತೆ ಹಚ್ಚಲು ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಅಕ್ಷಯ್ ಮಚ್ಚೇಂದ್ರ ಹಾಕೆ ಅವರು ವಿಶೇಷ ತಂಡಗಳನ್ನು ರಚಿಸಿದ್ದು, ಈ ತಂಡಗಳು ಸುಮಾರು 15 ದಿನಗಳಲ್ಲಿ ಹೊರ ಜಿಲ್ಲೆ ಹಾಗೂ ಹೊರರಾಜ್ಯಗಳಲ್ಲಿ […]

ಹಲವು ವರ್ಷಗಳಿಂದ ತಲೆಮರೆಸಿಕೊಂಡಿದ್ದ 24 ಆರೋಪಿಗಳು ಅರೆಸ್ಟ್ Read More »

ಕರಾವಳಿ, ಕರ್ನಾಟಕ

ಗುತ್ತಿಗಾರು ಸರಕಾರಿ ಪ್ರೌಢ ಶಾಲೆಯಿಂದ ಕಂಪ್ಯೂಟರ್ ಬ್ಯಾಟರಿ ಕಳವು ➤ ದೂರು ದಾಖಲು

(ನ್ಯೂಸ್ ಕಡಬ) newskadaba.com ಗುತ್ತಿಗಾರು, ಮಾ. 17. ಇಲ್ಲಿನ  ಸರಕಾರಿ ಪ್ರೌಢ ಶಾಲೆಯಲ್ಲಿನ ಕೊಠಡಿಯಲ್ಲಿದ್ದ ಕಂಪ್ಯೂಟರ್ ನ ಹಳೆಯ ಬ್ಯಾಟರಿಗಳನ್ನು ಕಳವುಗೈದಿರುವ ಬಗ್ಗೆ ಶಾಲಾ ಮುಖ್ಯಸ್ಥರು ದೂರು ದಾಖಲಿಸಿದ್ದಾರೆ. ಇಲಾಖೆಯಿಂದ ಪೂರೈಕೆಯಾಗಿದ್ದ 16 ಬ್ಯಾಟರಿಗಳು ಕಳವಾಗಿದ್ದು, ಈ ಬ್ಯಾಟರಿಗಳ ಅಂದಾಜು ಮೌಲ್ಯ 16 ಸಾವಿರ ರೂ. ಎನ್ನಲಾಗಿದೆ. ಈ ಬಗ್ಗೆ ಸುಬ್ರಹ್ಮಣ್ಯ ಠಾಣೆಯಲ್ಲಿ ಐಪಿಸಿ ಕಲಂ 380,454, 457ರಂತೆ ಪ್ರಕರಣ ದಾಖಲಿಸಲಾಗಿದೆ.

ಗುತ್ತಿಗಾರು ಸರಕಾರಿ ಪ್ರೌಢ ಶಾಲೆಯಿಂದ ಕಂಪ್ಯೂಟರ್ ಬ್ಯಾಟರಿ ಕಳವು ➤ ದೂರು ದಾಖಲು Read More »

ಕರಾವಳಿ, ಕ್ರೈಮ್ ನ್ಯೂಸ್

ಬೀದಿಬದಿ ವ್ಯಾಪಾರಿಗಳಿಂದ ನಿಯಮಾನುಸಾರ ವ್ಯಾಪಾರ ನಡೆಸಲು ಸಿ.ಎಂ.ಗೆ ಮನವಿ

(ನ್ಯೂಸ್ ಕಡಬ) newskadaba.com ಮಂಗಳೂರು, ಮಾ. 17. ಇಲ್ಲಿನ ಪಾಲಿಕೆ ವ್ಯಾಪ್ತಿಯ ಬೀದಿಬದಿ ವ್ಯಾಪಾರಿಗಳಿಗೆ ನಿಯಮಾನುಸಾರ ವ್ಯಾಪಾರ ನಡೆಸಲು ಅವಕಾಶ ನೀಡಬೇಕು ಎಂದು ಒತ್ತಾಯಿಸಿ ದಕ್ಷಿಣ ಕನ್ನಡ ಜಿಲ್ಲಾ ಬೀದಿಬದಿ ವ್ಯಾಪಾರಿಗಳ ಶ್ರೇಯೋಭಿವೃದ್ಧಿ ಸಂಘದ ನಿಯೋಗವು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರಿಗೆ ಮನವಿ ಸಲ್ಲಿಸಿದರು. ಪಾಲಿಕೆ ವ್ಯಾಪ್ತಿಯಲ್ಲಿ ಬೀದಿ ವ್ಯಾಪಾರಿಗಳಿಗೆ ಜೀವನೋಪಾಯ ಸಂರಕ್ಷಣೆ ಮತ್ತು ನಿಯಂತ್ರಣ ಕಾಯ್ದೆ ಮತ್ತು 2019 ರ ಕರ್ನಾಟಕ ಬೀದಿಬದಿ ವ್ಯಾಪಾರ ನಿಯಮಗಳ ವ್ಯಾಪಾರಕ್ಕೆ ಅವಕಾಶ ನೀಡುತ್ತಿಲ್ಲ. ಅಧಿಕಾರಿಗಳು ಗುರುತಿನ ಚೀಟಿ ಮತ್ತು

ಬೀದಿಬದಿ ವ್ಯಾಪಾರಿಗಳಿಂದ ನಿಯಮಾನುಸಾರ ವ್ಯಾಪಾರ ನಡೆಸಲು ಸಿ.ಎಂ.ಗೆ ಮನವಿ Read More »

ಕರಾವಳಿ, ಕರ್ನಾಟಕ
crime, arrest, suspected

ಅಕ್ರಮ ಮಾದಕ ವಸ್ತು ಗಾಂಜಾ ಮಾರಾಟ ಪ್ರಕರಣ ➤ ಓರ್ವ ಅರೆಸ್ಟ್, ಇನ್ನೋರ್ವ ಆರೋಪಿ ಪರಾರಿ

(ನ್ಯೂಸ್ ಕಡಬ)newskadaba.com ಪುತ್ತೂರು, ಮಾ.17. ಮಾದಕ ಪದಾರ್ಥ ಗಾಂಜಾವನ್ನು ಮಾರಾಟ ಮಾಡಲು ಉದ್ದೇಶದಿಂದ ಕಾರಿನಲ್ಲಿ ಸಾಗಾದ ಮಾಡುತ್ತಿದ್ದ ಸಂಧರ್ಭ ಸಂಪ್ಯ ಪೊಲೀಸ್ ಕಾರ್ಯಾಚರಣೆ ನಡೆಸಿ ಓರ್ವ ಆರೋಪಿಯನ್ನು ಬಂಧಿಸಿದ್ದಾರೆ. ಬಂಧಿತ ಆರೋಪಿಯನ್ನು ಪುತ್ತೂರಿನ ಅಬೂಬಕ್ಕರ್ ಸಿದ್ದಿಕ್ ಎಂದು ಗುರುತಿಸಲಾಗಿದೆ. ಪರಾರಿಯಾದವನನ್ನು ಸುಳ್ಯದ ಸರ್ಪುದ್ದಿನ್ ಎಂದು ಗುರುತಿಸಲಾಗಿದೆ.

ಅಕ್ರಮ ಮಾದಕ ವಸ್ತು ಗಾಂಜಾ ಮಾರಾಟ ಪ್ರಕರಣ ➤ ಓರ್ವ ಅರೆಸ್ಟ್, ಇನ್ನೋರ್ವ ಆರೋಪಿ ಪರಾರಿ Read More »

ಕರಾವಳಿ, ಕ್ರೈಮ್ ನ್ಯೂಸ್

ಅಕ್ರಮ ಮರಳುಗಾರಿಕೆ ಅಡ್ಡೆಗಳಿಗೆ ಪೊಲೀಸ್ ದಾಳಿ        ➤ 6 ಲಾರಿಗಳು ವಶಕ್ಕೆ 

(ನ್ಯೂಸ್ ಕಡಬ)newskadaba.com ಮಂಗಳೂರು, ಮಾ.17. ಬಜ್ಪೆ ಪೊಲೀಸ್ ಠಾಣಾ ವ್ಯಾಪ್ತಿಯ 5 ಕಡೆ ನಡೆಯುತ್ತಿದ್ದ ಅಕ್ರಮ ಮರಳುಗಾರಿಕೆಯ ಅಡ್ಡೆಗಳಿಗೆ ಮಂಗಳೂರು ಉತ್ತರ ಉಪವಿಭಾಗದ ಎಸಿಪಿ ನೇತೃತ್ವದ ಪೊಲೀಸ್ ತಂಡ ದಾಳಿ ನಡೆಸಿ ಮರಳು ಸಮೇತ 6 ಲಾರಿಗಳನ್ನು ವಶ ಪಡೆಸಿಕಕೊಂಡಿದ್ದಾರೆ ಎಂದು ತಿಳಿದುಬಂದಿದೆ. ಕೆಂಜಾರು ಪಡುಪೆರಾರು ದ್ವಾರ, ಪೊಳಲಿ ದ್ವಾರ, ಅಡ್ಡೂರು ಸಮೀಪದ ನೂಯಿ ತಲಾ ಒಂದೊಂದು ಹಾಗೂ ಬಡಗ ಎಡಪದವಿನಲ್ಲಿ 2 ಲಾರಿಗಳನ್ನು ವಶಪಡಿಸಿಕೊಳ್ಳಲಾಗಿದೆ ಎಂದು ವರದಿ ತಿಳಿಸಿದೆ

ಅಕ್ರಮ ಮರಳುಗಾರಿಕೆ ಅಡ್ಡೆಗಳಿಗೆ ಪೊಲೀಸ್ ದಾಳಿ        ➤ 6 ಲಾರಿಗಳು ವಶಕ್ಕೆ  Read More »

ಕರಾವಳಿ

ಬೆಳ್ತಂಗಡಿ: ಬಾವಿಗೆ ಬಿದ್ದು ವ್ಯಕ್ತಿ ಮೃತ್ಯು

(ನ್ಯೂಸ್ ಕಡಬ) newskadaba.com ಬೆಳ್ತಂಗಡಿ, ಮಾ. 17.  ಬಾವಿಗೆ ಬಿದ್ದ ಕೊಡವನ್ನು ಮೇಲಕ್ಕೆತ್ತಲು ಬಾವಿಗೆ ಇಳಿದಿದ್ದ ವ್ಯಕ್ತಿಯೋರ್ವ ಬಾವಿಗೆ ಬಿದ್ದು ಮೃತಪಟ್ಟ ಘಟನೆ ಬೆಳ್ತಂಗಡಿ ತಾಲೂಕಿನಲ್ಲಿ ವರದಿಯಾಗಿದೆ. ಮೃತರನ್ನು ಪ್ರವೀಣ್ ಎಂದು ಗುರುತಿಸಲಾಗಿದೆ.  ಇವರು ವಸಂತಿ ಎಂಬವರ ಮನೆಯ ಬಾವಿಗೆ ಬಿದ್ದಿದ್ದ ಕೊಡವನ್ನು ಮೇಲಕ್ಕೆತ್ತಲೆಂದು ಹಗ್ಗದ ಸಹಾಯದಿಂದ ಇಳಿದು, ಬಳಿಕ ಕೊಡಪಾನವನ್ನು ಮೇಲಕ್ಕೆ ಕಳುಹಿಸಿದ್ದರು. ಬಳಿಕ ಅದೇ ಹಗ್ಗವನ್ನು ಬಳಸಿಕೊಂಡು ಅವರು ಮೇಲಕ್ಕೇರಲು ಪ್ರಯತ್ನಿಸಿದ್ದಾರೆ. ಆದರೆ, ಅರ್ಧಕ್ಕೆ ತಲುಪಿದ ವೇಳೆ ಕೈಜಾರಿ ಬಾವಿಗೆ ಬಿದ್ದಿದ್ದಾರೆ ಎನ್ನಲಾಗಿದೆ.  

ಬೆಳ್ತಂಗಡಿ: ಬಾವಿಗೆ ಬಿದ್ದು ವ್ಯಕ್ತಿ ಮೃತ್ಯು Read More »

ಕರಾವಳಿ, ಕ್ರೈಮ್ ನ್ಯೂಸ್

ಉಳ್ಳಾಲ: ಮಹಿಳೆಯನ್ನು ಚೂರಿಯಿಂದ ಇರಿದು ಕೊಲೆ..!

(ನ್ಯೂಸ್ ಕಡಬ) newskadaba.com ಉಳ್ಳಾಲ, ಮಾ. 17. ಮಹಿಳೆಯನ್ನು ಚೂರಿಯಿಂದ ಇರಿದು ಹತ್ಯೆ ನಡೆಸಿರುವ ಘಟನೆ ಉಳ್ಳಾಲ ಪೊಲೀಸ್‌ ಠಾಣಾ ವ್ಯಾಪ್ತಿಯ ಉಳ್ಳಾಲ ಕೋಟೆಪುರ ಬಸ್‌ ನಿಲ್ದಾಣದ ಸಮೀಪ ನಡೆದಿದೆ. ಹತ್ಯೆಗೆ ಸಂಬಂಧಿಸಿ ಆಕೆಯೊಂದಿಗೆ ವಾಸಿಸುತ್ತಿದ್ದ ದೆಹಲಿ ಮೂಲದ ನಯೀಮ್‌ ಎಂಬಾತ ಈ ಹತ್ಯೆಯನ್ನು ಮಾಡಿ ಪರಾರಿಯಾಗಿರುವುದಾಗಿ ಪೊಲೀಸರು ಶಂಕೆ ವ್ಯಕ್ತಪಡಿಸಿದ್ದಾರೆ. ಎರಡು ದಿನಗಳ ಹಿಂದೆ ದೆಹಲಿಯಿಂದ ಕೋಟೆಪುರಕ್ಕೆ ಬಂದಿದ್ದ ಜೋಡಿ, ಸ್ಥಳೀಯ ಸೆಲೂನ್‌ ಮಾಲೀಕರ ಮೂಲಕ ಬಾಡಿಗೆ ಮನೆಯನ್ನು ಸಂಪರ್ಕಿಸಿ, ಹಮೀದ್‌ ಎಂಬವರ ಬಾಡಿಗೆ ಮನೆಯನ್ನು

ಉಳ್ಳಾಲ: ಮಹಿಳೆಯನ್ನು ಚೂರಿಯಿಂದ ಇರಿದು ಕೊಲೆ..! Read More »

ಕರಾವಳಿ, ಕ್ರೈಮ್ ನ್ಯೂಸ್

ಕುಂದಾಪುರ: ಲಾರಿ ಢಿಕ್ಕಿಯಾಗಿ ಬಸ್ ಪಲ್ಟಿ

(ನ್ಯೂಸ್ ಕಡಬ)newskadaba.com ಮಂಗಳೂರು, ಮಾ.17. ಡಿಪೋದಿಂದ ಬಸ್ ನಿಲ್ದಾಣಕ್ಕೆ ಬರುತ್ತಿದ್ದ ಸರ್ಕಾರಿ ಬಸ್ಸೊಂದು ಯೂ ಟರ್ನ್ ತೆಗೆದುಕೊಳ್ಳುವ ವೇಳೆ‌ ಲಾರಿ‌ ಡಿಕ್ಕಿಯಾದ ಪರಿಣಾಮ ಪಲ್ಟಿಯಾದ ಘಟನೆ‌ ರಾಷ್ಟ್ರೀಯ ಹೆದ್ದಾರಿ 66 ರಲ್ಲಿ ಕುಂದಾಪುರದ ಸಂತೆ ಮಾರ್ಕೆಟ್ ಬಳಿ ನಡೆದಿದೆ. ಎಂದಿನಂತೆ ಕೆಎಸ್ಆರ್ಟಿಸಿ ಬಸ್ ಸರ್ವೀಸ್ ರಸ್ತೆಯಲ್ಲಿ‌ ಬಂದು ಸಂತೆ ಮಾರ್ಕೆಟ್ ಬಳಿ ರಾಷ್ಟ್ರೀಯ ಹೆದ್ದಾರಿ 66ರಲ್ಲಿ ಯು ಟರ್ನ್ ತೆಗೆದುಕೊಂಡಿದ್ದಾರೆ. ಇದೇ ಸಂದರ್ಭ ಹಿಂದಿನಿಂದ ಬಂದ ಲಾರಿ‌ ಡಿಕ್ಕಿಹೊಡೆದಿದೆ ಎನ್ನಲಾಗಿದೆ. ಪ್ತಯಾಣಿಕರಿಲ್ಲದ ಬಸ್ ತಿರುವು ತೆಗೆದುಕೊಳ್ಳುತ್ತಿದ್ದುದರಿಂದ ನಿಯಂತ್ರಣ

ಕುಂದಾಪುರ: ಲಾರಿ ಢಿಕ್ಕಿಯಾಗಿ ಬಸ್ ಪಲ್ಟಿ Read More »

ಕರಾವಳಿ, ಕ್ರೈಮ್ ನ್ಯೂಸ್

ಮಂಗಳೂರು: 1.8 ಕೋಟಿ ಮೌಲ್ಯದ ಅಕ್ರಮ ಚಿನ್ನ ಸಾಗಾಟ ಪತ್ತೆ

(ನ್ಯೂಸ್ ಕಡಬ) newskadaba.com ಮಂಗಳೂರು, ಮಾ. 17. ದುಬೈ ಮತ್ತು ಅಬುದಾಬಿಯಿಂದ ಅಕ್ರಮವಾಗಿ ಸಾಗಿಸುತ್ತಿದ್ದ 1,08,28,240 ರೂ.ಮೌಲ್ಯದ 1,913 ಗ್ರಾಂ. ಅಕ್ರಮ ಚಿನ್ನ ಸಾಗಾಟವನ್ನು ಮಂಗಳೂರು ವಿಮಾನ  ನಿಲ್ದಾಣದ ಕಸ್ಟಮ್ಸ್ ಅಧಿಕಾರಿಗಳು ಪತ್ತೆ ಹಚ್ಚಿದ ಘಟನೆ ವರದಿಯಾಗಿದೆ. ಆರೋಪಿಗಳು ಚಿನ್ನವನ್ನು ಪೇಸ್ಟ್ ಮಾಡಿ ಟಿ ಶರ್ಟ್ ನಲ್ಲಿ ಅಳವಡಿಸಿ, ಗುದದ್ವಾರದಲ್ಲಿ ಅಡಗಿಸಿಟ್ಟು ಸಾಗಾಟ ಮಾಡಿದ್ದರು ಎಂದು ಅಧಿಕಾರಿಗಳು ಮಾಹಿತಿ ನೀಡಿದ್ದಾರೆ.

ಮಂಗಳೂರು: 1.8 ಕೋಟಿ ಮೌಲ್ಯದ ಅಕ್ರಮ ಚಿನ್ನ ಸಾಗಾಟ ಪತ್ತೆ Read More »

ಕರಾವಳಿ, ಕ್ರೈಮ್ ನ್ಯೂಸ್

ಪುತ್ತೂರು: ಗಾಂಜಾ ಮಾರಾಟಕ್ಕೆ ಯತ್ನ ➤ ಓರ್ವ ಅರೆಸ್ಟ್ 

(ನ್ಯೂಸ್ ಕಡಬ) newskadaba.com ಪುತ್ತೂರು, ಮಾ. 17. ಮಾರಾಟ ಮಾಡುವ ಉದ್ದೇಶದಿಂದ ಗಾಂಜಾವನ್ನು ಇಟ್ಟುಕೊಂಡಿದ್ದ ಆರೋಪಿಯನ್ನು ಪುತ್ತೂರು ನಗರ ಪೊಲೀಸ್ ಠಾಣಾ ಇನ್‌ಸ್ಪೆಕ್ಟರ್ ಮತ್ತು ಎಸ್.ಐ ಅವರ ನೇತೃತ್ವದ ತಂಡವು ಬಂಧಿಸಿದ ಘಟನೆ ಮುಕ್ರಂಪಾಡಿಯ ಬಸ್ ತಂಗುದಾಣದಲ್ಲಿ ನಡೆದಿದೆ. ಬಂಧಿತನನ್ನು ಬಲ್ನಾಡು ಗ್ರಾಮದ ಬುಳ್ಳೇರಿಕಟ್ಟೆ ನಿವಾಸಿ ಅಬೂಬಕ್ಕರ್ ಎಂಬವರ ಪುತ್ರ ಇಕ್ಬಾಲ್ ಪಿ ಯಾನೆ ಇಕ್ಕು(35) ಎಂದು ಗುರುತಿಸಲಾಗಿದೆ.  

ಪುತ್ತೂರು: ಗಾಂಜಾ ಮಾರಾಟಕ್ಕೆ ಯತ್ನ ➤ ಓರ್ವ ಅರೆಸ್ಟ್  Read More »

ಕರಾವಳಿ
Scroll to Top