mangalorer

Death, deadbody, Waterfall

ಬೀಚ್ ನಲ್ಲಿ ಆಟವಾಡುತ್ತಿದ್ದ ಯುವಕ ಸಮುದ್ರಪಾಲು..!

(ನ್ಯೂಸ್ ಕಡಬ) newskadaba.com ಅ.23. ನೀರಿನಲ್ಲಿ ಆಡುತ್ತಿದ್ದ ಯುವಕನೋರ್ವ ಸಮುದ್ರ ಪಾಲಾಗಿರುವ ಘಟನೆ ಸುರತ್ಕಲ್  ಮುಕ್ಕ ರೆಡ್‌ ರಾಕ್ ಕಡಲ ಕಿನಾರೆಯಲ್ಲಿ ನಡೆದಿದೆ. ನೀರುಪಾಲಾದ ಯುವಕನನ್ನು ಬಂಟ್ವಾಳ ತಾಲೂಕಿನ ಬಿಸಿ ರೋಡ್ ನಿವಾಸಿ ಪ್ರಜ್ವಲ್ ಎಂದು ಗುರುತಿಸಲಾಗಿದೆ. ಪ್ರಜ್ವಲ್ ಸುಮಾರು 8 ಮಂದಿ ಸ್ನೇಹಿತರ ಜೊತೆ ನಿನ್ನೆ ಸಂಜೆ ಮುಕ್ಕ ರೆಡ್ ರಾಕ್ ಬಳಿಯ ಸಮುದ್ರ ಕಿನಾರೆಯಲ್ಲಿ ಆಟವಾಡುತ್ತಿದ್ದರು ಎನ್ನಲಾಗಿದೆ. ಈ ಸಂದರ್ಭ ಸಮುದ್ರದ ಅಲೆಗೆ ಸಿಲುಕಿ ಪ್ರಜ್ವಲ್ ಸಮುದ್ರ ಪಾಲಾಗಿದ್ದು, ಉಳಿದವರು ಪ್ರಾಣಾಪಾಯದಿಂದ ಪಾರಾಗಿದ್ದಾರೆ ಎಂದು […]

ಬೀಚ್ ನಲ್ಲಿ ಆಟವಾಡುತ್ತಿದ್ದ ಯುವಕ ಸಮುದ್ರಪಾಲು..! Read More »

ಕರಾವಳಿ, ಕ್ರೈಮ್ ನ್ಯೂಸ್

ಫ್ಲೆಕ್ಸ್, ಬ್ಯಾನರ್ ಗಳಿಗೆ ಅಕ್ರಮ ವಿದ್ಯುತ್ ಸಂಪರ್ಕ- ಮಹಾನಗರಪಾಲಿಕೆ ಎಚ್ಚರಿಕೆ

(ನ್ಯೂಸ್ ಕಡಬ) newskadaba.com ಸೆ. 25. ಮಂಗಳೂರು ಮಹಾನಗರ ಪಾಲಿಕೆ ವ್ಯಾಪ್ತಿಯಲ್ಲಿ ದಸರಾ ಹಬ್ಬದ ಪ್ರಯುಕ್ತ ನಗರದ ಮುಖ್ಯ ರಸ್ತೆಗಳಲ್ಲಿ ಅಲಂಕಾರಿಕ ವಿದ್ಯುತ್ ದೀಪಗಳನ್ನು ಅಳವಡಿಸಲಾಗಿರುತ್ತದೆ. ಹಲವಾರು ಸ್ಥಳಗಳಲ್ಲಿ ಸಾರ್ವಜನಿಕ ಹಾಗೂ ಖಾಸಗಿ ಸಂಘ ಸಂಸ್ಥೆಗಳು ತಮ್ಮ ತಮ್ಮ ಅನಧಿಕೃತ ಫ್ಲೆಕ್ಸ್, ಬ್ಯಾನರ್ ಗಳನ್ನು ಅಳವಡಿಸಿದ್ದು, ಈ ಅನಧಿಕೃತ ಫ್ಲೆಕ್ಸ್, ಬ್ಯಾನರ್ ಗಳಿಗೆ ಅಲಂಕಾರಿಕ ದೀಪಗಳನ್ನು ಅಳವಡಿಸಲು ಮಂಗಳೂರು ನಗರ ಪಾಲಿಕೆಯಿಂದ ಅಳವಡಿಸಿರುವ ಕಂಬ ಮತ್ತು ವಿದ್ಯುತ್ ದೀಪಗಳ ಸಂಪರ್ಕದಿಂದ ಅತಿಕ್ರಮಣವಾಗಿ ವಿದ್ಯುತ್ ಸಂಪರ್ಕ ಪಡೆದಿರುವುದು ಕಂಡುಬಂದಿದೆ.

ಫ್ಲೆಕ್ಸ್, ಬ್ಯಾನರ್ ಗಳಿಗೆ ಅಕ್ರಮ ವಿದ್ಯುತ್ ಸಂಪರ್ಕ- ಮಹಾನಗರಪಾಲಿಕೆ ಎಚ್ಚರಿಕೆ Read More »

ಕರಾವಳಿ

ಹಿರಿಯ ಸಾಮಾಜಿಕ ಹೋರಾಟಗಾರ ಪಿ.ಬಿ.ಡೇಸಾ ನಿಧನ

(ನ್ಯೂಸ್ ಕಡಬ) newskadaba.com ಮಂಗಳೂರು, ಸೆ. 24.  ಮಂಗಳೂರು ನಗರದ ವೆಲೆನ್ಸಿಯಾ ನಿವಾಸಿ ಹಾಗೂ ರಾಜ್ಯದ ಹಿರಿಯ ಸಾಮಾಜಿಕ ಹೋರಾಟಗಾರ ಪಿ.ಬಿ.ಡೇಸಾ ಅವರು ಇಂದು ಬೆಳಗ್ಗೆ ನಗರದ ಖಾಸಗಿ ಆಸ್ಪತ್ರೆಯಲ್ಲಿ ನಿಧನರಾದರು. ಪೀಪಲ್ಸ್ ಯೂನಿಯನ್ ಫಾರ್ ಲಿಬರ್ಟೀಸ್ ರಾಜ್ಯಾಧ್ಯಕ್ಷರಾಗಿದ್ದಇವರು ಸಮಾಜದಲ್ಲಿ ನಡೆಯುವ ಅನ್ಯಾಯ, ಅಕ್ರಮದ ವಿರುದ್ಧ ಧ್ವನಿ ಎತ್ತಿದವರಾಗಿದ್ದರು. ಅದರಲ್ಲೂ ಪೊಲೀಸರ ದೌರ್ಜನ್ಯದ ವಿರುದ್ಧ ಸಂಘಟಿತ ಹೋರಾಟ ಮಾಡುವಲ್ಲಿ‌ ಮುಂಚೂಣಿಯಲ್ಲಿದ್ದರು. ಯಾವುದೇ ಧಾರ್ಮಿಕ ಕ್ರಿಯೆ ನಡೆಸದೆ ಮೃತದೇಹವನ್ನು ನಗರದ ಖಾಸಗಿ ಆಸ್ಪತ್ರೆಗೆ ನಾಳೆ ಹಸ್ತಾಂತರ ಮಾಡಲಾಗುವುದು ಎಂದು

ಹಿರಿಯ ಸಾಮಾಜಿಕ ಹೋರಾಟಗಾರ ಪಿ.ಬಿ.ಡೇಸಾ ನಿಧನ Read More »

ಕರಾವಳಿ

ರಸ್ತೆ ಅಪಘಾತ- ವ್ಯಕ್ತಿ ಮೃತ್ಯು..!

(ನ್ಯೂಸ್ ಕಡಬ) newskadaba.com ಮಂಗಳೂರು, ಸೆ. 07. ಲಾರಿ ಮತ್ತು ಸ್ಕೂಟರ್ ನಡುವೆ ಭೀಕರ ಅಪಘಾತ ಸಂಭವಿಸಿದ ಪರಿಣಾಮ ವ್ಯಕ್ತಿಯೋರ್ವ ಮೃತಪಟ್ಟ ಘಟನೆ ಮಂಜನಾಡಿಯ ಮಂಗಳಾಂತಿ ಮಸೀದಿ ಬಳಿ ನಡೆದಿದೆ.   ಮೃತರನ್ನು ಮಂಜೇಶ್ವರದ ಪೈವಳಿಕೆ ಕಲ್ಲೇಕರುಗುತ್ತು ನಿವಾಸಿ ಚಂದ್ರಹಾಸ್ ಶೆಟ್ಟಿ (67) ಎಂದು ಗುರುತಿಸಲಾಗಿದೆ. ಮೃತ ಚಂದ್ರಹಾಸ ಶೆಟ್ಟಿಯವರು ಹರೇಕಲ್ ದೆಬ್ಬೇಲಿಯಲ್ಲಿರುವ ತಮ್ಮ ಪತ್ನಿಯ ಮನೆಯಿಂದ ಕಲ್ಲೇಕರುಗುತ್ತು ಕಡೆಗೆ ಹೋಗುತ್ತಿದ್ದಾಗ ಅವರ ಸ್ಕೂಟರ್‌ಗೆ ಲಾರಿ ಡಿಕ್ಕಿ ಹೊಡೆದು ಈ ದುರ್ಘಟನೆ ಸಂಭವಿಸಿದೆನ್ನಲಾಗಿದೆ. ಈ ಕುರಿತು ಮಂಗಳೂರು

ರಸ್ತೆ ಅಪಘಾತ- ವ್ಯಕ್ತಿ ಮೃತ್ಯು..! Read More »

ಕರಾವಳಿ, ಕ್ರೈಮ್ ನ್ಯೂಸ್

ಜಿಲ್ಲಾದ್ಯಂತ ಇ-ಆಟೋ ಪರವಾನಗಿ ಹಿಂಪಡೆಯುವುದಿಲ್ಲ- ಡಿಸಿ ಮುಲ್ಲೈ ಮುಗಿಲನ್

(ನ್ಯೂಸ್ ಕಡಬ) newskadaba.com ಮಂಗಳೂರು, ಸೆ. 06. ಜಿಲ್ಲಾದ್ಯಂತ ಇಲೆಕ್ಟ್ರಿಕ್ ಆಟೋ ರಿಕ್ಷಾಗಳಿಗೆ ಪ್ರದೇಶ ನಿರ್ಬಂಧಗಳಿಲ್ಲದೇ ಸಂಚರಿಸಲು ಅನುಮತಿ ನೀಡಿ ಜುಲೈ 26ರಂದು ಹೊರಡಿಸಿರುವ ಆದೇಶವನ್ನು ಹಿಂಪಡೆಯಲು ಸಾಧ್ಯವಿಲ್ಲ ಎಂದು ದಕ್ಷಿಣ ಕನ್ನಡ ಜಿಲ್ಲಾಧಿಕಾರಿ ಮುಲ್ಲೈ ಮುಗಿಲನ್ ಸ್ಪಷ್ಟಪಡಿಸಿದ್ದಾರೆ. ಈ ಕುರಿತಿ ಜಿಲ್ಲಾಧಿಕಾರಿ ಕಚೇರಿಯಲ್ಲಿ ನಡೆದ ಆಟೋ-ರಿಕ್ಷಾ ಮಾಲೀಕರು ಮತ್ತು ಚಾಲಕರೊಂದಿಗಿನ ಸಭೆಯಲ್ಲಿ ಮಾತನಾಡಿದ ಅವರು, ಕೇಂದ್ರ ಸರ್ಕಾರದ ಮಾರ್ಗಸೂಚಿ ಮತ್ತು ಹೈಕೋರ್ಟ್ ನಿರ್ದೇಶನದ ಮೇರೆಗೆ ಈ ಆದೇಶವನ್ನು ಕಾನೂನು ಚೌಕಟ್ಟಿನಲ್ಲಿ ಹೊರಡಿಸಲಾಗಿದೆ. ಸಂಬಂಧಪಟ್ಟವರು ಮೇಲ್ಮನವಿಯ ಮೂಲಕ

ಜಿಲ್ಲಾದ್ಯಂತ ಇ-ಆಟೋ ಪರವಾನಗಿ ಹಿಂಪಡೆಯುವುದಿಲ್ಲ- ಡಿಸಿ ಮುಲ್ಲೈ ಮುಗಿಲನ್ Read More »

ಕರಾವಳಿ
Scroll to Top