Mangaluru

ಸಿಲಿಂಡರ್ ನಿಂದ ಗ್ಯಾಸ್ ಸೋರಿಕೆಯಾಗಿ ಬೆಂಕಿ ಅವಘಡ: ಅಪಾಯದಿಂದ ಪಾರು

(ನ್ಯೂಸ್ ಕಡಬ) newskadaba.com ಮಂಗಳೂರು, ಡಿ. 07. ಮನೆಯಲ್ಲಿ ಅಡುಗೆ ಮಾಡುವ ವೇಳೆ ಗ್ಯಾಸ್ ಸಿಲಿಂಡರ್ ನಿಂದ ಗ್ಯಾಸ್ ಸೋರಿಕೆಯಾಗಿ, ಬೆಂಕಿ ಅವಘಡ ಸಂಭವಿಸಿದ ಘಟನೆ ಅತ್ತಾವರ ಮೆಸ್ಕಾಂ ಬಳಿ ಮನೆಯೊಂದರಲ್ಲಿ ಶುಕ್ರವಾರ ಮಧ್ಯಾಹ್ನ ವೇಳೆ ನಡೆದಿದೆ. ಇಲ್ಲಿನ ಅನ್ಸಾರ್ ಎಂಬವರ ಮನೆಯ ಸಿಲಿಂಡರ್ ನಲ್ಲಿ ಗ್ಯಾಸ್ ಸೋರಿಕೆಯಾಗಿ ಬೆಂಕಿ ಹತ್ತಿಕೊಂಡಿದೆ. ಮನೆಮಂದಿ ಅಡುಗೆ ಮಾಡುತ್ತಿದ್ದ ವೇಳೆ ಸಿಲಿಂಡರ್ ನ ರೆಗ್ಯುಲೇಟರ್ ನಲ್ಲಿ ಬೆಂಕಿ ಕಾಣಿಸಿಕೊಂಡಿದೆ. ಕೂಡಲೇ ಮನೆಮಂದಿ ಮನೆಯಿಂದ ಹೊರಬಂದು ಅಪಾಯದಿಂದ ಪಾರಾಗಿದ್ದಾರೆ. ಬಳಿಕ ಪಾಂಡೇಶ್ವರ ಅಗ್ನಿಶಾಮಕ […]

ಸಿಲಿಂಡರ್ ನಿಂದ ಗ್ಯಾಸ್ ಸೋರಿಕೆಯಾಗಿ ಬೆಂಕಿ ಅವಘಡ: ಅಪಾಯದಿಂದ ಪಾರು Read More »

ಕರಾವಳಿ

ಮಂಗಳೂರು : ಮಹಿಳೆಯರಿಗೆ ಉಚಿತ ಬಸ್ ಸಂಚಾರಕ್ಕೆ ಚಾಲನೆ

(ನ್ಯೂಸ್ ಕಡಬ) newskadaba.com ಮಂಗಳೂರು, ಡಿ. 07. ಶಕ್ತಿನಗರದಲ್ಲಿ ಮಹಿಳೆಯರಿಗೆ ಸರ್ಕಾರದ ಶಕ್ತಿ ಯೋಜನೆಯಡಿಯಲ್ಲಿ ಉಚಿತ ಬಸ್ ಪ್ರಯಾಣದ ಬಸ್ ಚಾಲನೆ ಕಾರ್ಯಕ್ರಮ ನಡೆಯಿತು. ವಿಧಾನ ಪರಿಷತ್ ಶಾಸಕ ಹಾಗೂ ಕೆಪಿಸಿಸಿ ಕಾರ್ಯಾಧ್ಯಕ್ಷ ಮಂಜುನಾಥ ಭಂಡಾರಿ ಪಾಲ್ಗೊಂಡು ಬಸ್ ಗೆ ಚಾಲನೆ ನೀಡಿದರು. ಈ ಸಂದರ್ಭದಲ್ಲಿ ವಿಧಾನ ಪರಿಷತ್ ಸದಸ್ಯ ಐವನ್ ಡಿಸೋ, 2024ರ ಲೋಕಸಭಾ ಅಭ್ಯರ್ಥಿ ಪದ್ಮರಾಜ್ ಆರ್. ಪೂಜಾರಿ, ದಕ್ಷಿಣ ಕನ್ನಡ ಜಿಲ್ಲಾ ಕಾನೂನು, ಮಾನವ ಹಾಗೂ ಮಾಹಿತಿ ಹಕ್ಕು ಘಟಕದ ಅಧ್ಯಕ್ಷ ಮನೋರಾಜ್, ದಕ್ಷಿಣ

ಮಂಗಳೂರು : ಮಹಿಳೆಯರಿಗೆ ಉಚಿತ ಬಸ್ ಸಂಚಾರಕ್ಕೆ ಚಾಲನೆ Read More »

ಕರಾವಳಿ

ಮುಮ್ತಾಝ್ ಅಲಿ ಪ್ರಕರಣ: ಮೂವರು ಆರೋಪಿಗಳ ಪೊಲೀಸ್ ಕಸ್ಟಡಿ ಅರ್ಜಿ ತಿರಸ್ಕರಿಸಿದ ಕೋರ್ಟ್

(ನ್ಯೂಸ್ ಕಡಬ) newskadaba.com ಮಂಗಳೂರು, . 05.  ಉದ್ಯಮಿ, ಶೈಕ್ಷಣಿಕ ಮುಂದಾಳು ಬಿಎಂ ಮುಮ್ತಾಝ್ ಅಲಿ ಪ್ರಕರಣಕ್ಕೆ ಸಂಬಂಧಿಸಿದಂತೆ ಬಂಧಿತ ಮೂವರು ಆರೋಪಿಗಳ ಪೊಲೀಸ್ ಕಸ್ಟಡಿಯ ಅರ್ಜಿಯನ್ನು ಮಂಗಳೂರು 3ನೇ ಜೆಎಂಎಫ್ ಸಿ ನ್ಯಾಯಾಲಯ ತಿರಸ್ಕಾರ ಮಾಡಿದೆ. ಪ್ರಕರಣಕ್ಕೆ ಸಂಬಂಧಪಟ್ಟಂತೆ ಪ್ರಮುಖ ಆರೋಪಿ ರಹ್ಮತ್ ಪತಿ ಶುಐಬ್, ನಂದಾವರ ನಿವಾಸಿ ಶಾಫಿ, ಕೃಷ್ಣಾಪುರ ನಿವಾಸಿ ಮುಸ್ತಫಾ ಎಂಬುವವರನ್ನು ವಿಚಾರಣೆ ನಡೆಸಲಿದ್ದು, ಪೊಲೀಸ್ ಕಸ್ಟಡಿಗೆ ನೀಡುವಂತೆ ಸುರತ್ಕಲ್ ಪೊಲೀಸರು ಕೋರ್ಟ್ ಗೆ ಅರ್ಜಿ ಸಲ್ಲಿಸಿದ್ದರು ಎನ್ನಲಾಗಿದೆ. ಅರ್ಜಿ ವಿಚಾರಣೆ ನಡೆಸಿದ ಕೋರ್ಟ್,

ಮುಮ್ತಾಝ್ ಅಲಿ ಪ್ರಕರಣ: ಮೂವರು ಆರೋಪಿಗಳ ಪೊಲೀಸ್ ಕಸ್ಟಡಿ ಅರ್ಜಿ ತಿರಸ್ಕರಿಸಿದ ಕೋರ್ಟ್ Read More »

ಕರಾವಳಿ

ಕರ್ತವ್ಯ ಲೋಪವೆಸಗಿದ ದ.ಕ. ಜಿಲ್ಲಾ ಕಾರಾಗೃಹದ ಅಧೀಕ್ಷಕ ಅಮಾನತು

(ನ್ಯೂಸ್ ಕಡಬ) newskadaba.com ಮಂಗಳೂರು, . 05.  ಕರ್ತವ್ಯ ಲೋಪವೆಸಗಿದ ದ.ಕ. ಜಿಲ್ಲಾ ಕಾರಾಗೃಹದ ಅಧೀಕ್ಷಕ ಬಿ.ಟಿ. ಓಬಳೇಶಪ್ಪ ಅವರನ್ನು ಇಲಾಖಾ ವಿಚಾರಣೆಯನ್ನು ಕಾಯ್ದಿರಿಸಿ ಮುಂದಿನ ಆದೇಶ ಬರುವ ತನಕ ಅಮಾನತುಗೊಳಿಸಿ ಡಿ.4ರಂದು ಆದೇಶ ಹೊರಡಿಸಲಾಗಿದೆ. ಇತ್ತೀಚೆಗೆ ಪೊಲೀಸರು ಕಾರಾಗೃಹಕ್ಕೆ ದಾಳಿ ನಡೆಸಿದ ಸಂದರ್ಭದಲ್ಲಿ ಜೈಲಿನೊಳಗೆ ನಿಷೇಧಿತ ವಸ್ತುಗಳು ಪತ್ತೆಯಾಗಿದ್ದವು. ಆ ಬಳಿಕ ಬಿ.ಟಿ. ಓಬಳೇಶಪ್ಪ ಅವರನ್ನು ಅಮಾನತುಗೊಳಿಸಲಾಗಿತ್ತು. ಇನ್ನು ಮೈಸೂರು ಕೇಂದ್ರ ಕಾರಾಗೃಹದ ಸಹಾಯಕ ಅಧಿಧೀಕ್ಷಕ ಕೆ.ಎನ್. ಮೋಹನ್ ಕುಮಾರ್ ಅವರನ್ನು ಮಂಗಳೂರು ಕಾರಾಗೃಹದ ಅಧೀಕ್ಷಕರ

ಕರ್ತವ್ಯ ಲೋಪವೆಸಗಿದ ದ.ಕ. ಜಿಲ್ಲಾ ಕಾರಾಗೃಹದ ಅಧೀಕ್ಷಕ ಅಮಾನತು Read More »

ಕರಾವಳಿ

ಮಂಗಳೂರು: ಅಂತರಾಷ್ಟ್ರೀಯ ವಿಮಾನ ನಿಲ್ದಾಣಕ್ಕೆ ಬಾಂಬ್ ಬೆದರಿಕೆ

(ನ್ಯೂಸ್ ಕಡಬ) newskadaba.com ಮಂಗಳೂರು, ಡಿ. 04. ಮಂಗಳೂರು ಅಂತರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ಟರ್ಮಿನಲ್‌ನಲ್ಲಿ ಬಾಂಬ್ ಇಡಲಾಗಿದೆ ಎಂಬ ಇಮೇಲ್ ನವೆಂಬರ್ 30 ರಂದು ಬಂದ ನಂತರ ಮತ್ತೊಮ್ಮೆ ಬಾಂಬ್ ಬೆದರಿಕೆ ಬಂದಿದೆ. ಬೆಳಗ್ಗೆ 10 ಗಂಟೆ ಸುಮಾರಿಗೆ ಅಕ್ರಮ್ ವೈಕರ್ ಹೆಸರಿನ ಇಮೇಲ್ ಐಡಿಯಿಂದ ಬೆದರಿಕೆಯನ್ನು ಕಳುಹಿಸಲಾಗಿದ್ದು, ತಕ್ಷಣದ ಭದ್ರತಾ ಕ್ರಮಗಳನ್ನು ಕೈಗೊಳ್ಳಲಾಗಿದೆ. ಸಿಐಎಸ್ಎಫ್ ಸಿಬ್ಬಂದಿ, ವಿಮಾನ ನಿಲ್ದಾಣದ ಸಿಬ್ಬಂದಿಯೊಂದಿಗೆ ಟರ್ಮಿನಲ್ ಮತ್ತು ವಿಮಾನ ನಿಲ್ದಾಣದ ಇತರ ಪ್ರದೇಶಗಳಲ್ಲಿ ಸಂಪೂರ್ಣ ಶೋಧ ನಡೆಸಿದರು. ಆದರೆ, ತಪಾಸಣೆ

ಮಂಗಳೂರು: ಅಂತರಾಷ್ಟ್ರೀಯ ವಿಮಾನ ನಿಲ್ದಾಣಕ್ಕೆ ಬಾಂಬ್ ಬೆದರಿಕೆ Read More »

ಕರಾವಳಿ, ಕ್ರೈಮ್ ನ್ಯೂಸ್

ಮಂಗಳೂರು: ಅಪರಾಧ ವಿಭಾಗದ ಡಿಸಿಪಿ ಆಗಿ ದಿನೇಶ್ ಕುಮಾರ್ ನೇಮಕ

(ನ್ಯೂಸ್ ಕಡಬ) newskadaba.com ನ. 30. ಬೆಂಗಳೂರಿನ ಸಿಐಡಿ ಎಸ್‌ಪಿಯಾಗಿದ್ದ ಕೆ ರವಿಶಂಕರ್ ಅವರನ್ನು ಮಂಗಳೂರಿನ ಡಿಸಿಪಿ (ಅಪರಾಧ ಮತ್ತು ಸಂಚಾರ) ಬಿಪಿ ದಿನೇಶ್ ಕುಮಾರ್ ಅವರ ಸ್ಥಾನಕ್ಕೆ ನಿಯೋಜಿಸಿ ಆದೇಶ ಹೊರಡಿಸಲಾಗಿದೆ. ಸರ್ಕಾರದ ಅಧೀನ ಕಾರ್ಯದರ್ಶಿ ಬಿ ಕೆ ಭುವನೇಂದ್ರ ಕುಮಾರ್ ಅವರು ಹೊರಡಿಸಿರುವ ಆದೇಶದಂತೆ ಡಿಸಿಪಿ ಬಿ ಪಿ ದಿನೇಶ್ ಕುಮಾರ್ ಅವರ ಮುಂದಿನ ನಿಯೋಜನೆಗಾಗಿ ಪೊಲೀಸ್ ಪ್ರಧಾನ ಕಚೇರಿಗೆ ವರದಿ ಮಾಡಲು ಸೂಚನೆ ನೀಡಲಾಗಿದೆ.    

ಮಂಗಳೂರು: ಅಪರಾಧ ವಿಭಾಗದ ಡಿಸಿಪಿ ಆಗಿ ದಿನೇಶ್ ಕುಮಾರ್ ನೇಮಕ Read More »

ಕರಾವಳಿ

ವಿಶ್ವ ಪ್ರಸಿದ್ಧ ತ್ರಾಸಿ-ಮರವಂತೆ ಬೀಚ್‌ನಲ್ಲಿ ಸ್ಕೈ ಡೈನಿಂಗ್ ಆರಂಭ

(ನ್ಯೂಸ್ ಕಡಬ) newskadaba.com ನ. 30. ವಿಶ್ವ ಪ್ರಸಿದ್ಧ ತ್ರಾಸಿ – ಮರವಂತೆ ಬೀಚ್‌ನಲ್ಲಿ ವಿನೂತನವಾದ ಸ್ಕೈ ಡೈನಿಂಗ್ ನವೆಂಬರ್ 29ರಿಂದ ಆರಂಭಗೊಂಡಿದೆ. ಮಂಗಳೂರಿನ ಪಣಂಬೂರು ಬಳಿಕ ಇದು ರಾಜ್ಯದ ಎರಡನೇ ಸ್ಕೈ ಡೈನಿಂಗ್ ತಾಣವಾಗಿದೆ. ಇದನ್ನು ಉದ್ಘಾಟಿಸಿ ಮಾತನಾಡಿದ ಶಾಸಕ ಗುರುರಾಜ ಗಂಟಿಹೊಳೆ ಅವರು, ಈ ಹೊಟೇಲ್ ಆರಂಭದಿಂದಾಗಿ ಜಿಲ್ಲೆಯ ಪ್ರವಾಸೋದ್ಯಮ ಚಟುವಟಿಕೆಗೆ ಅನುಕೂಲವಾಗಲಿದೆ ಎಂದು ತಿಳಿಸಿದರು. ಇದರಲ್ಲಿ 90-100 ಮೀಟರ್ ಎತ್ತರದಲ್ಲಿ ಕುಳಿತು ಸೌಪರ್ಣಿಕಾ ನದಿ ಹಾಗೂ ಅರಬ್ಬೀ ಸಮುದ್ರವನ್ನು ನೋಡುತ್ತಾ ತಿನಿಸನ್ನು ಸವಿಯಬಹುದು.

ವಿಶ್ವ ಪ್ರಸಿದ್ಧ ತ್ರಾಸಿ-ಮರವಂತೆ ಬೀಚ್‌ನಲ್ಲಿ ಸ್ಕೈ ಡೈನಿಂಗ್ ಆರಂಭ Read More »

ಕರಾವಳಿ

ಮಂಗಳೂರು: AI- ಬಳಸಿ ಸ್ಪ್ಯಾಮ್‌ ಕರೆಗಳಿಗೆ ಕಡಿವಾಣ ಹಾಕಿದ ಏರ್‌ಟೆಲ್‌ ನೆಟ್‌ವರ್ಕ್‌

(ನ್ಯೂಸ್ ಕಡಬ) newskadaba.com ಮಂಗಳೂರು, ನ. 30. ಭಾರ್ತಿ ಏರ್‌ಟೆಲ್‌ನ ಹೊಸ AI ಚಾಲಿತ ಸ್ಪ್ಯಾಮ್ ಪತ್ತೆ ಮಾಡುವ ವ್ಯವಸ್ಥೆಯು ಕರ್ನಾಟಕದ ಗ್ರಾಹಕರಿಗೆ ಹೆಚ್ಚು ಅಗತ್ಯವಿರುವ ಪರಿಹಾರವನ್ನು ಒದಗಿಸಿದೆ. ಪ್ರಾರಂಭವಾದ 63 ದಿನಗಳಲ್ಲಿ, ಈ ಪ್ರವರ್ತಕ ಟೆಲಿಕಾಂ ಪರಿಹಾರವು ಕರ್ನಾಟಕದಲ್ಲಿ 682 ಮಿಲಿಯನ್ ಸಂಭಾವ್ಯ ಸ್ಪ್ಯಾಮ್ ಕರೆಗಳು ಮತ್ತು 46 ಮಿಲಿಯನ್ ಸ್ಪ್ಯಾಮ್ SMS ಸಂದೇಶಗಳನ್ನು ಯಶಸ್ವಿಯಾಗಿ ಗುರುತಿಸಿದೆ. ಕರ್ನಾಟಕದಲ್ಲಿನ ಎಲ್ಲಾ ಏರ್‌ಟೆಲ್ ಮೊಬೈಲ್ ಗ್ರಾಹಕರು ಈಗ ಸೇವೆಯನ್ನು ವಿನಂತಿಸುವ ಅಥವಾ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳದೆಯೇ ಉಚಿತ

ಮಂಗಳೂರು: AI- ಬಳಸಿ ಸ್ಪ್ಯಾಮ್‌ ಕರೆಗಳಿಗೆ ಕಡಿವಾಣ ಹಾಕಿದ ಏರ್‌ಟೆಲ್‌ ನೆಟ್‌ವರ್ಕ್‌ Read More »

ಕರಾವಳಿ

ವಾಯುಭಾರ ಕುಸಿತ: ಕರಾವಳಿಯಲ್ಲಿ ಚಳಿಯ ಹೆಚ್ಚಳ ಸಾಧ್ಯತೆ ಹವಾಮಾನ ಇಲಾಖೆ ಮುನ್ಸೂಚನೆ

(ನ್ಯೂಸ್ ಕಡಬ) newskadaba.com ಮಂಗಳೂರು, ನ. 30. ಬಂಗಾಳಕೊಲ್ಲಿಯಲ್ಲಿ ಕಾಣಿಸಿಕೊಂಡಿರುವ ವಾಯುಭಾರ ಕುಸಿತದ ಹಿನ್ನೆಲೆಯಲ್ಲಿ ಕರಾವಳಿಯ ಗ್ರಾಮೀಣ ಭಾಗದಲ್ಲಿ ಗುರುವಾರ ರಾತ್ರಿ ಹೆಚ್ಚು ಚಳಿಯ ಅನುಭವವಾಗಿದ್ದು, ಮುಂದಿನ ಒಂದು ವಾರಕ್ಕೂ ಅಧಿಕ ಕಾಲ ಚಳಿಯ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ಬಂಗಾಳ ಕೊಲ್ಲಿಯಲ್ಲಿ ವಾಯುಭಾರ ಕುಸಿತದ ಕಾರಣ ದಕ್ಷಿಣ ಒಳನಾಡು ಮತ್ತು ಕರಾವಳಿಯಲ್ಲಿ ಮಳೆಯಾಗುವ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ಬಂಗಾಳ ಕೊಲ್ಲಿಯಲ್ಲಿ ವಾಯುಭಾರ ಕುಸಿತದ ಕಾರಣ ದಕ್ಷಿಣ

ವಾಯುಭಾರ ಕುಸಿತ: ಕರಾವಳಿಯಲ್ಲಿ ಚಳಿಯ ಹೆಚ್ಚಳ ಸಾಧ್ಯತೆ ಹವಾಮಾನ ಇಲಾಖೆ ಮುನ್ಸೂಚನೆ Read More »

ಕರಾವಳಿ

ಮಂಗಳೂರು: ಪೊಲೀಸ್ ಕಮಿಷನರ್ ವರ್ಗಾವಣೆಗೊಳಿಸುವಂತೆ ಡಿವೈಎಫ್‌ಐ ದ.ಕ.ಜಿಲ್ಲಾ ಸಮಿತಿಯ ವತಿಯಿಂದ ಪ್ರತಿಭಟನೆ

(ನ್ಯೂಸ್ ಕಡಬ) newskadaba.com ಮಂಗಳೂರು, ನ. 29. ಜನಪರ ಪ್ರತಿಭಟನೆಗಳನ್ನು ನಿರಾಕರಿಸಿ ಪ್ರಜಾಪ್ರಭುತ್ವದ ಹಕ್ಕುಗಳನ್ನು ದಮನಿಸುತ್ತಿರುವ ಮಂಗಳೂರು ನಗರ ಪೊಲೀಸ್ ಕಮಿಷನರ್ ಅನುಪಮ್ ಅಗರ್ವಾಲ್‌ ರನ್ನು ವರ್ಗಾವಣೆಗೊಳಿಸಬೇಕು ಎಂದು ಆಗ್ರಹಿಸಿ ಡಿವೈಎಫ್‌ಐ ದ.ಕ.ಜಿಲ್ಲಾ ಸಮಿತಿಯ ವತಿಯಿಂದ ಗುರುವಾರ ನಗರದ ಸ್ಟೇಟ್‌ಬ್ಯಾಂಕ್ ಸಮೀಪದ ರಾವ್ ಆ್ಯಂಡ್ ರಾವ್ ಸರ್ಕಲ್ ಬಳಿ ಪ್ರತಿಭಟನೆ ನಡೆಯಿತು. ಹದಗೆಟ್ಟ ರಸ್ತೆಯನ್ನು ದುರಸ್ತಿಗೊಳಿಸಬೇಕು ಎಂದು ಆಗ್ರಹಿಸಿ ಪ್ರತಿಭಟನೆ ನಡೆಸಿದ್ದ ಸಿಪಿಎಂ ದ.ಕ.ಜಿಲ್ಲಾ ಕಾರ್ಯದರ್ಶಿ ಮುನೀರ್ ಕಾಟಿಪಳ್ಳ ಅವರ ವಿರುದ್ಧ ದಾಖಲಿಸಿದ ಪ್ರಕರಣವನ್ನು ಕೈ ಬಿಡಬೇಕು

ಮಂಗಳೂರು: ಪೊಲೀಸ್ ಕಮಿಷನರ್ ವರ್ಗಾವಣೆಗೊಳಿಸುವಂತೆ ಡಿವೈಎಫ್‌ಐ ದ.ಕ.ಜಿಲ್ಲಾ ಸಮಿತಿಯ ವತಿಯಿಂದ ಪ್ರತಿಭಟನೆ Read More »

ಕರಾವಳಿ
Scroll to Top