Manglore

ಬೃಹತ್ ಪ್ರಮಾಣದ ಡ್ರಗ್ಸ್ ವಶಪಡಿಸಿಕೊಂಡ ಸಿಸಿಬಿ ತಂಡ

(ನ್ಯೂಸ್ ಕಡಬ)newskadaba.com,ಮಂಗಳೂರು ಅ. 07. ನಗರದ ಸಿಸಿಬಿ ಪೊಲೀಸರು ಬೃಹತ್‌ ಡ್ರಗ್‌ ಜಾಲವೊಂದನ್ನು ಪತ್ತೆ ಮಾಡಿದ್ದಾರೆ. ಬರೋಬ್ಬರಿ ಆರು ಕೋಟಿ ರೂ ಮೌಲ್ಯದ ಎಂಡಿಎಂಎ ಡ್ರಗ್ ವಶಕ್ಕೆ ಪಡೆದಿದ್ದಾರೆ. ಸುಮಾರು 6 ಕೆ.ಜಿ‌ ಎಂಡಿಎಂಎ ಡ್ರಗ್ ವಶಕ್ಕೆ ಪಡೆಯಲಾಗಿದ್ದು, ಮಂಗಳೂರಿನ ಇತಿಹಾಸದಲ್ಲೇ ಅತಿದೊಡ್ಡ ಡ್ರಗ್ ವಶ ಕೇಸ್ ಇದಾಗಿದೆ. ಪ್ರಕರಣಕ್ಕೆ ಸಂಬಂಧಿಸಿದಂತೆ ಬೆಂಗಳೂರಿನಲ್ಲಿದ್ದ ಸೈಬೀರಿಯನ್ ಪ್ರಜೆ ಪೀಟರ್ ಎಂಬಾತನನ್ನು ಸಿಸಿಬಿ ಪೊಲೀಸರು ಬಂಧಿಸಿದ್ದಾರೆ.ಮಂಗಳೂರಿನಲ್ಲಿ ಕೆಲ ದಿನಗಳ ಹಿಂದೆ ಎಂಡಿಎಂಎ ಮಾರಾಟ ವೇಳೆ ಹೈದರ್‌ ಅಲಿ ಎಂಬಾತನನ್ನು ಬಂಧಿಸಲಾಗಿತ್ತು. […]

ಬೃಹತ್ ಪ್ರಮಾಣದ ಡ್ರಗ್ಸ್ ವಶಪಡಿಸಿಕೊಂಡ ಸಿಸಿಬಿ ತಂಡ Read More »

ಕರಾವಳಿ

ನಾಪತ್ತೆಯಾಗಿದ್ದ ಮುಮ್ತಾಝ್ ಅಲಿ ಮೃತದೇಹ ಫಲ್ಗುಣಿ ನದಿಯಲ್ಲಿ ಪತ್ತೆ

(ನ್ಯೂಸ್ ಕಡಬ)newskadaba.com,ಮಂಗಳೂರು ಅ. 07. ಕೂಳೂರು ಸೇತುವೆ ಬಳಿ ಕಾರು ನಿಲ್ಲಿಸಿ ನಾಪತ್ತೆಯಾಗಿದ್ದ ಸಾಮಾಜಿಕ ಮುಂದಾಳು, ಉದ್ಯಮಿ ಮುಮ್ತಾಝ್ ಅಲಿ ಅವರ ಮೃತದೇಹ ಕೂಳೂರಿನ ಫಲ್ಗುಣಿ ನದಿಯಲ್ಲಿ ಸೋಮವಾರ ಬೆಳಗ್ಗೆ ಪತ್ತೆಯಾಗಿದೆ. ಮೃತದೇಹ ಪತ್ತೆಯಾದ ಕೂಡಲೇ ಅದನ್ನು ನಗರದ ಎಜೆ ಆಸ್ಪತ್ರೆಗೆ ತೆಗೆದುಕೊಂಡು ಹೋಗಲಾಗಿದೆ. ಮಮ್ತಾಜ್‌ ಅವರು ರವಿವಾರ ಮುಂಜಾನೆ ಹೊಚ್ಚ ಹೊಸ ಬಿಎಂಡಬ್ಲ್ಯು ಕಾರು ಕೂಳೂರು ಸೇತುವೆಯ ಬಳಿ ಅಪಘಾತಕ್ಕೊಳಗಾದ ಸ್ಥಿತಿಯಲ್ಲಿ ಪತ್ತೆಯಾಗಿತ್ತು. ಮೊಬೈಲ್‌, ಕಾರಿನ ಕೀ ಅಲ್ಲಿಯೇ ಇದ್ದ ಕಾರಣ ಆತ್ಮಹತ್ಯೆ ಮಾಡಿರುವ ಶಂಕೆಯಲ್ಲಿ

ನಾಪತ್ತೆಯಾಗಿದ್ದ ಮುಮ್ತಾಝ್ ಅಲಿ ಮೃತದೇಹ ಫಲ್ಗುಣಿ ನದಿಯಲ್ಲಿ ಪತ್ತೆ Read More »

ಕರಾವಳಿ, ಬ್ರೇಕಿಂಗ್ ನ್ಯೂಸ್

ಮಂದುವರೆದ ಮಳೆ: ದಕ್ಷಿಣ ಒಳನಾಡಿನಲ್ಲಿ ಎಲ್ಲೋ ಅಲರ್ಟ್ ಘೋಷಣೆ

(ನ್ಯೂಸ್ ಕಡಬ)newskadaba.com, (ಅ.04): ರಾಜ್ಯದಲ್ಲಿ ನಿನ್ನೆ ಸಾಧಾರಣ ಮಳೆಯಾಗಿದ್ದು, ಇನ್ನೂ ಎರಡು ದಿನ ಹೆಚ್ಚಿನ ಪ್ರಮಾಣದ ಮಳೆಯಾಗುವ ಮುನ್ಸೂಚನೆಗಳಿವೆ. ಹವಾಮಾನ ಇಲಾಖೆ ರಾಜ್ಯದ ಒಳನಾಡಿನಲ್ಲಿ ಭಾರಿ ಮಳೆ ಮುನ್ಸೂಚನೆ ನೀಡಿ ಯೆಲ್ಲೋ ಅಲರ್ಟ್ ಘೋಷಣೆ ಮಾಡಿದೆ. ಕರಾವಳಿ ಹಾಗೂ ಮಲೆನಾಡು ಭಾಗದ ಜಿಲ್ಲೆಗಳಲ್ಲಿ ಸಾಧಾರಣ ಮಳೆ ಮುಂದುವರೆಯಲಿದೆ. ರಾಜ್ಯದ ಉತ್ತರ ಹಾಗೂ ದಕ್ಷಿಣ ಒಳನಾಡಿನ ಬಹುತೇಕ ಜಿಲ್ಲೆಗಳಲ್ಲಿ ಚದುರಿದಂತೆ ಸಾಧಾರಣದಿಂದ ಭಾರಿ ಮಳೆಯಾಗುವ ಮುನ್ಸೂಚನೆಯನ್ನು ನೀಡಲಾಗಿದೆ.ಕೆಲವೆಡೆ ವ್ಯಾಪಕ ಪ್ರಮಾಣದ ಮಳೆಯಾದರೆ, ಕೆಲವೆಡೆ ಅಲ್ಲಲ್ಲಿ ಮಳೆಯಾಗುವ ಸಾಧ್ಯತೆಗಳಿವೆ.

ಮಂದುವರೆದ ಮಳೆ: ದಕ್ಷಿಣ ಒಳನಾಡಿನಲ್ಲಿ ಎಲ್ಲೋ ಅಲರ್ಟ್ ಘೋಷಣೆ Read More »

ಬ್ರೇಕಿಂಗ್ ನ್ಯೂಸ್

ಮಂಗಳೂರು: ಬಸ್ ಟಿಕೆಟ್ ಬಲು ದುಬಾರಿ

(ನ್ಯೂಸ್ ಕಡಬ)newskadaba.com,ಮಂಗಳೂರು (ಅ.04): ನವರಾತ್ರಿ ಹಬ್ಬ ಸನ್ನಿಹಿತವಾಗುತ್ತಿರುವಂತೆ ಖಾಸಗಿ ಬಸ್‌ಗಳ ಪ್ರಯಾಣ ದರ ದುಪ್ಪಟ್ಟಾಗಿದೆ. ಹಬ್ಬಕ್ಕಾಗಿ ದೂರದೂರಿನಿಂದ ಮಂಗಳೂರಿಗೆ ಆಗಮಿಸುವ ಪ್ರಯಾಣಿಕರ ಜೇಬಿಗೆ ಕತ್ತರಿ ಬೀಳಲಿದೆ. ಅದರಲ್ಲೂ ಬೆಂಗಳೂರಿನಿಂದ ಮಂಗಳೂರಿಗೆ ಆಗಮಿಸು ವವರಿಗೆ ಖಾಸಗಿ ಬಸ್‌ನಲ್ಲಿ ಅತೀ ಹೆಚ್ಚಿನ ದರ 3,500 ರೂ. ಇದೆ. ಪ್ರತಿ ಬಾರಿ ಹಬ್ಬದ ಸಮಯದಲ್ಲಿ ಟಿಕೆಟ್ ದರ ಏರಿಕೆ ಮಾಮೂಲಿಯಾಗಿದೆ. ಈ ಹಿಂದೆ ಗೌರಿ- ಗಣಪತಿ ಹಬ್ಬದ ಸಮಯದಲ್ಲೂ ಬಸ್ ಟಿಕೆಟ್ ದರ ಏರಿಕೆ ಮಾಡಲಾಗಿತ್ತು. ಇದೀಗ ನವರಾತ್ರಿ ಹಬ್ಬಕ್ಕೂ ದರ

ಮಂಗಳೂರು: ಬಸ್ ಟಿಕೆಟ್ ಬಲು ದುಬಾರಿ Read More »

ಕರಾವಳಿ

ಮಂಗಳೂರು-ಬೆಂಗಳೂರು ರೈಲು ವೇಳಾಪಟ್ಟಿ ಬದಲಾವಣೆ

(ನ್ಯೂಸ್ ಕಡಬ)newskadaba.com,ಮಂಗಳೂರು (ಅ.04):   ಕಣ್ಣೂರು ಕೆಎಸ್ಆರ್ (ವಯಾ ಮಂಗಳೂರು) ರೈಲನ್ನು ಐದು ತಿಂಗಳ ಕಾಲ ಕೆಎಸ್ಆರ್. ಯಶವಂತಪುರ ನಿಲ್ದಾಣಕ್ಕೆ ಸಂಚರಿಸುವುದನ್ನು ರದ್ದುಪಡಿಸುವ ನಿರ್ಧಾರವನ್ನು ರೈಲ್ವೇ ಇಲಾಖೆ ಅಂಶಿಕವಾಗಿ ಹಿಂಪಡೆದಿದೆ. ನವೆಂಬರ್ 1ರಿಂದ ಮಾರ್ಚ್ 31ರ ವರೆಗೆ ಯಶವಂತಪುರದಲ್ಲಿ ನಿಲ್ದಾಣ ಅಭಿವೃದ್ಧಿ ಕಾಮಗಾರಿ ಕಾರಣ ಮುಂದಿಟ್ಟು 16511 ಹಾಗೂ 16512 ನಂಬರಿನ ರೈಲುಗಳನ್ನು ಯಶವಂತಪುರ, ಕೆಎಸ್ಆರ್ ಹೋಗದೆಯೇ ಎಸ್ಎಂವಿಟಿಬಿಯಿಂದ ಸಂಚರಿಸುವಂತೆ ರೈಲ್ವೇ ಇಲಾಖೆ ಪ್ರಕಟನೆ ಹೊರಡಿಸಿತ್ತು. ಇದಕ್ಕೆ ಭಾರೀ ವಿರೋಧ ವ್ಯಕ್ತವಾದ ಹಿನ್ನೆಲೆಯಲ್ಲಿ ಇಲಾಖೆ ಮತ್ತೆ ವೇಳಾಪಟ್ಟಿಯಲ್ಲಿ

ಮಂಗಳೂರು-ಬೆಂಗಳೂರು ರೈಲು ವೇಳಾಪಟ್ಟಿ ಬದಲಾವಣೆ Read More »

ಕರ್ನಾಟಕ, ಬ್ರೇಕಿಂಗ್ ನ್ಯೂಸ್

ವಿಧಾನಪರಿಷತ್ ಉಪಚುನಾವಣೇ ಉಸ್ತುವಾರಿ- ಕೋಟ ಶ್ರೀನಿವಾಸ್ ಪೂಜಾರಿ

(ನ್ಯೂಸ್ ಕಡಬ)newskadaba.com, ಮಂಗಳೂರು(ಅ.03): ದಕ್ಷಿಣ ಕನ್ನಡ ಸ್ಥಳೀಯ ಸಂಸ್ಥೆಗಳ ವಿಧಾನಪರಿಷತ್ ಉಪಚುನಾವಣೆಗೆ ಸಂಬಂಧಿಸಿ ಕೋಟ ಶ್ರೀನಿವಾಸ್‌ ಪೂಜಾರಿ ಅವರನ್ನು ಉಸ್ತುವಾರಿಯನ್ನಾಗಿ ನೇಮಕ ಮಾಡಲಾಗಿದೆ. ಶಾಸಕ ರಾಜೇಶ್ ನಾಯ್ಕ್‌ ಹಾಗೂ ವಿಧಾನ ಪರಿಷತ್‌ ಸದಸ್ಯ ಪ್ರತಾಪ್‌ ಸಿಂಹ ನಾಯ್ಕ್‌ ಅವರನ್ನು ಸಹ ಉಸ್ತುವಾರಿಗಳನ್ನಾಗಿ ನೇಮಕ ಮಾಡಿ ಬಿಜೆಪಿ ರಾಜ್ಯಾಧ್ಯಕ್ಷ ಬಿವೈ ವಿಜಯೇಂದ್ರ ಅವರು ನಿರ್ದೇಶಿಸಿದ್ದಾರೆ.

ವಿಧಾನಪರಿಷತ್ ಉಪಚುನಾವಣೇ ಉಸ್ತುವಾರಿ- ಕೋಟ ಶ್ರೀನಿವಾಸ್ ಪೂಜಾರಿ Read More »

ಕರಾವಳಿ

ಮಂಗಳೂರು: ವಿಧಾನಪರಿಷತ್ ಉಪಚುನಾವಣೆ

(ನ್ಯೂಸ್ ಕಡಬ)newskadaba.com, ಮಂಗಳೂರು(ಅ.02): ವಿಧಾನ ಪರಿಷತ್ ಉಪ ಚುನಾವಣೆಗೆ ಕಾಂಗ್ರೆಸ್ ಅಭ್ಯರ್ಥಿಯನ್ನು ಘೋಷಣೆ ಮಾಡಲಾಗಿದೆ. ರಾಜು ಪೂಜಾರಿಯವರಿಗೆ ಕಾಂಗ್ರೆಸ್ ಪಕ್ಷ ಉಪ ಚುನಾವಣೆ ಟಿಕೆಟ್ ನೀಡಿದೆ. ವಿಧಾನ ಪರಿಷತ್ ನಲ್ಲಿ ತೆರವಾದ ದಕ್ಷಿಣ ಕನ್ನಡ ಸ್ಥಳೀಯ ಸಂಸ್ಥೆ ಉಪ ಚುನಾವಣೆಗೆ ಬಿಜೆಪಿ ಅಭ್ಯರ್ಥಿಯಾಗಿ ಕಿಶೋರ್ ಕುಮಾರ್ ಪುತ್ತೂರು ಅವರನ್ನು ಆಯ್ಕೆ ಮಾಡಲಾಗಿದೆ. ಈ ಕ್ಷೇತ್ರವನ್ನು ಪ್ರತಿನಿಧಿಸುತ್ತಿದ್ದ ಕೋಟ ಶ್ರೀನಿವಾಸ ಪೂಜಾರಿ ಸಂಸದರಾಗಿ ಆಯ್ಕೆಯಾದ ನಂತರ ರಾಜೀನಾಮೆ ನೀಡಿದ್ದರು.

ಮಂಗಳೂರು: ವಿಧಾನಪರಿಷತ್ ಉಪಚುನಾವಣೆ Read More »

ಕರಾವಳಿ, ಬ್ರೇಕಿಂಗ್ ನ್ಯೂಸ್

ಯುವನಿಧಿ ಯೋಜನೆ ಉದ್ಘಾಟನೆ – ಬಸ್ ಸಂಚಾರದಲ್ಲಿ ವ್ಯತ್ಯಯ

(ನ್ಯೂಸ್ ಕಡಬ) newskadaba.com ಮಂಗಳೂರು,ಜ 11.  ಯುವನಿಧಿ ಯೋಜನೆ ಉದ್ಘಾಟನಾ ಕಾರ್ಯಕ್ರಮಕ್ಕಾಗಿ ಜ.12ರಂದು ಕೆಎ.ಎಸ್.ಆರ್.ಟಿ.ಸಿ. ಮಂಗಳೂರು ವಿಭಾಗದಿಂದ ಬಸ್ಸುಗಳನ್ನು ಸಾಂದರ್ಭಿಕ ಒಪ್ಪಂದದ ಮೇರೆಗೆ ನಿಯೋಜಿಸಲಾಗಿರುತ್ತದೆ. ಗುರುವಾರ ಬಸ್‍ಗಳ ಕಾರ್ಯಾಚರಣೆಯಲ್ಲಿ ಸ್ವಲ್ಪ ಮಟ್ಟಿನ ವ್ಯತ್ಯಯ ಉಂಟಾಗಲಿದ್ದು, ಸಾರ್ವಜನಿಕ ಪ್ರಯಾಣಿಕರು ಸಹಕರಿಸುವಂತೆ ಹಿರಿಯ ವಿಭಾಗೀಯ ನಿಯಂತ್ರಣಾಕಾಧಿರಿಗಳು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.  

ಯುವನಿಧಿ ಯೋಜನೆ ಉದ್ಘಾಟನೆ – ಬಸ್ ಸಂಚಾರದಲ್ಲಿ ವ್ಯತ್ಯಯ Read More »

ಕರಾವಳಿ, ಕರ್ನಾಟಕ

ಪ್ರವಾಸಿಗರ ರಕ್ಷಣೆಗೆ ನಮ್ಮ ಆಧ್ಯತೆ ➤ ಡಾ|| ಚೂಂತಾರು

(ನ್ಯೂಸ್ ಕಡಬ) newskadaba.com ಮಂಗಳೂರು, ಜೂ. 08. ಮಂಗಳೂರಿನ ಸುಂದರ ಮನಮೋಹಕ ಕಡಲತೀರಕ್ಕೆ ಪ್ರತಿ ನಿತ್ಯ ಸಾವಿರಾರು ಪ್ರವಾಸಿಗರು ಬರುತ್ತಾರೆ. ಇವರಿಗೆ ಸಮುದ್ರದ ಆಳ, ಸೆಳೆತ ಮತ್ತು ಅಪಾಯದ ಅರಿವಿರುವುದಿಲ್ಲ. ಮೋಜು ಮಸ್ತಿಗಾಗಿ ಕಡಲಿಗೆ ಇಳಿದು ಅಪಾಯವನ್ನು ಮೈಗೆಳೆದುಕೊಳ್ಳುತ್ತಾರೆ. ಅವರನ್ನು ಎಚ್ಚರಿಸಿ, ಮಳೆಗಾಲದಲ್ಲಿ ಕಡಲಿಗಿಳಿಯದಂತೆ ಮಾಡುವ ಹೊಣೆಗಾರಿಕೆ ಬೀಚ್‍ ಗಾರ್ಡ್‍ಗಳಾಗಿ ಕೆಲಸ ಮಾಡುವ ಹೋಮ್‍ ಗಾರ್ಡ್‍ಗಳಿಗೆ ಇದೆ. ಈ ಹಿನ್ನೆಲೆಯಲ್ಲಿ ಮಂಗಳೂರಿನ ಎಲ್ಲಾ ಎಂಟು ಬೀಚ್‍ಗಳಿಗೆ ಜಿಲ್ಲಾಧಿಕಾರಿಯವರ ಆದೇಶದಂತೆ ಬೀಚ್‍ಗಾರ್ಡ್ ನೇಮಕ ಮಾಡಲಾಗಿದೆ ಎಂದು ದ.ಕ ಜಿಲ್ಲಾ

ಪ್ರವಾಸಿಗರ ರಕ್ಷಣೆಗೆ ನಮ್ಮ ಆಧ್ಯತೆ ➤ ಡಾ|| ಚೂಂತಾರು Read More »

ಕರಾವಳಿ

ಕೊರೊನಾ ಸೋಂಕನ್ನು ಹಿಮ್ಮೆಟ್ಟಿಸಲು ರಾಜ್ಯ ಸರಕಾರದಿಂದ ಕಟ್ಟುನಿಟ್ಟಿನ ಕ್ರಮ ಜಾರಿ

(ನ್ಯೂಸ್ ಕಡಬ) newskadaba.com.ಬೆಂಗಳೂರು,ಜು.14: ಕೊರೊನಾ ಸೋಂಕನ್ನು ಹಿಮ್ಮೆಟ್ಟಿಸುವ ನಿಟ್ಟಿನಲ್ಲಿ ಹೋರಾಟ ನಡೆಸುತ್ತಿರು ರಾಜ್ಯ ಸರಕಾರ ಇದರ ನಿಯಂತ್ರಣಕ್ಕೆ ಮತ್ತೊಂದು ಕಟ್ಟುನಿಟ್ಟಿನ ನಿಯಮ ಜಾರಿ ಮಾಡಿದೆ. ಆರೋಗ್ಯ ಇಲಾಖೆ ಹೊರಡಿಸಿರುವ ಆದೇಶದಂತೆ ಗಂಟಲು ದ್ರವ ಪರೀಕ್ಷೆಗೊಳಪಟ್ಟವರು ಪರೀಕ್ಷಾ ವರದಿ ಬರುವವರೆಗೂ ಐಸೋಲೇಷನ್, ಕ್ವಾರಂಟೈನ್ ಕಡ್ಡಾಯವಾಗಿ ಪಾಲಿಸಬೇಕು ಎಂದಿದೆ. ಕೊವೀಡ್ -೧೯ ಸೋಂಕಿನ ಪರೀಕ್ಷೆಗಾಗಿ ಗಂಟಲಿನ ದ್ರವ ಮಾದರಿ ಕೊಟ್ಟಿದ್ದರೆ ಅಂತಹ ವ್ಯಕ್ತಿಗಳು, ಪರೀಕ್ಷಾ ವರದಿ ಬರೋ ತನಕ ಐಸೋಲೇಷನ್‌ನಲ್ಲಿರುವುದು ಕಡ್ಡಾಯವಾಗಿದೆ. ಫಲಿತಾಂಶ ಬರುವ ಮುನ್ನ ಅಜಾಗರೂಕತೆಯಿಂದ ಇತರರೊಂದಿಗೆ ಬೆರೆಯುವುದು,

ಕೊರೊನಾ ಸೋಂಕನ್ನು ಹಿಮ್ಮೆಟ್ಟಿಸಲು ರಾಜ್ಯ ಸರಕಾರದಿಂದ ಕಟ್ಟುನಿಟ್ಟಿನ ಕ್ರಮ ಜಾರಿ Read More »

ಕರ್ನಾಟಕ
Scroll to Top