Manglore

ಮಂಗಳೂರು: ಸಮುದ್ರದಲ್ಲಿ ಮುಳುಗಿ ಓರ್ವ ಯುವಕ ಸಾವು; ಮೂವರ ರಕ್ಷಣೆ

(ನ್ಯೂಸ್‌ ಕಡಬ) newskadaba.com,ಆ.‌25 : ಸುರತ್ಕಲ್ ಸಮೀಪದ ಸಸಿಹಿತ್ಲು ಮುಂಡಾ ಬೀಚ್ ಬಳಿ ಸಮುದ್ರಕ್ಕೆ ಇಳಿದಿದ್ದ ನಾಲ್ಕು ಯುವಕರ ಪೈಕಿ ಓರ್ವ ಮೃತಪಟ್ಟು ಮೂವರನ್ನು ಸ್ಥಳೀಯರು ರಕ್ಷಿಸಿದ ಘಟನೆ ಭಾನುವಾರ ಸಂಜೆ ನಡೆದಿದೆ. ಮೃತರನ್ನು ಪಡುಪಣಂಬೂರು ಕಜಕತೋಟ ನಿವಾಸಿ, ದಿ.ಅನ್ವರ್ ಅವರ ಪುತ್ರ ಮುಹಮ್ಮದ್ ಸಮೀರ್ (23) ಎಂದು ಗುರುತಿಸಲಾಗಿದೆ. ಪಡುಪಣಂಬೂರು ಕಜಕತೋಟ ನಿವಾಸಿ ಅಬೂಬಕರ್ ಅವರ ಪುತ್ರ ಐಮಾನ್ (23), ಕಜಕತೋಟ ನಿವಾಸಿ ರಯೀಸ್ (22), ಮತ್ತು ಹಳೆಯಂಗಡಿ ಬೊಳ್ಳೂರು ನಿವಾಸಿ ಹನೀಫ್ ಅವರ ಪುತ್ರ […]

ಮಂಗಳೂರು: ಸಮುದ್ರದಲ್ಲಿ ಮುಳುಗಿ ಓರ್ವ ಯುವಕ ಸಾವು; ಮೂವರ ರಕ್ಷಣೆ Read More »

ಕರಾವಳಿ, ಕರ್ನಾಟಕ

ಮಂಗಳೂರು : ರೋಷನ್ ಸಲ್ಡಾನಾ ಪ್ರಕರಣ – ಇಡಿ ತನಿಖೆಯಿಂದ ಬಹುಕೋಟಿ ವಂಚನೆ ಬಯಲು

(ನ್ಯೂಸ್‌ ಕಡಬ) newskadaba.com, ಆ.08: ಬಹುಕೋಟಿ ರೂಪಾಯಿ ವಂಚನೆ ಪ್ರಕರಣಕ್ಕೆ ಸಂಬಂಧಿಸಿದಂತೆ ಮಂಗಳೂರು ಮೂಲದ ರೋಷನ್ ಸಲ್ಡಾನಾ ಮತ್ತು ಅವರ ಪತ್ನಿಗೆ ಸೇರಿದ ಆಸ್ತಿಗಳ ಬಗ್ಗೆ ಜಾರಿ ನಿರ್ದೇಶನಾಲಯ (ಇಡಿ) ತನಿಖೆ ಆರಂಭಿಸಿದೆ. ನಗರದ ಐದು ಸ್ಥಳಗಳಲ್ಲಿ ಇಡಿ ಅಧಿಕಾರಿಗಳು ಶೋಧ ಕಾರ್ಯಾಚರಣೆ ನಡೆಸಿದ್ದಾರೆ. ಕಡಿಮೆ ಬಡ್ಡಿದರದಲ್ಲಿ ಸಾಲ ವ್ಯವಸ್ಥೆ ಮಾಡುವ ನೆಪದಲ್ಲಿ ವಿವಿಧ ಉದ್ಯಮಿಗಳಿಂದ ಹಣ ಸಂಗ್ರಹಿಸಿ, ಸ್ಟಾಂಪ್ ಡ್ಯೂಟಿಗೆ ಹಣವನ್ನು ಪಡೆದು, ಭರವಸೆ ನೀಡಿದ ಸಾಲಗಳನ್ನು ನೀಡುವಲ್ಲಿ ವಿಫಲರಾದ ಆರೋಪದ ಮೇಲೆ ರೋಷನ್ ಸಲ್ಡಾನಾ

ಮಂಗಳೂರು : ರೋಷನ್ ಸಲ್ಡಾನಾ ಪ್ರಕರಣ – ಇಡಿ ತನಿಖೆಯಿಂದ ಬಹುಕೋಟಿ ವಂಚನೆ ಬಯಲು Read More »

ಕರಾವಳಿ, ಕರ್ನಾಟಕ, ಬ್ರೇಕಿಂಗ್ ನ್ಯೂಸ್

ತುಳು ಭಾಷೆಗೆ ಅಧಿಕೃತ ಸ್ಥಾನಮಾನ: ಮಾನದಂಡಗಳ ಅಧ್ಯಯನಕ್ಕೆ ಸಮಿತಿ ರಚನೆ

(ನ್ಯೂಸ್ ಕಡಬ) newskadaba.com, ಆ. 01: ಮಂಗಳೂರು: ತುಳು ಭಾಷೆಯನ್ನು ರಾಜ್ಯದ ಎರಡನೇ ಅಧಿಕೃತ ಭಾಷೆಯಾಗಿ ಗುರುತಿಸುವ ಉಪಕ್ರಮದ ಭಾಗವಾಗಿ, ಮಾನದಂಡಗಳ ಅಧ್ಯಯನ ನಡೆಸಲು ರಾಜ್ಯ ಸರ್ಕಾರ ಐದು ಸದಸ್ಯರ ಸಮಿತಿಯನ್ನು ರಚಿಸಿದೆ. ಕನ್ನಡ ಮತ್ತು ಸಂಸ್ಕೃತಿ ಇಲಾಖೆಯ ನಿರ್ದೇಶಕಿ ಗಾಯತ್ರಿ ಕೆ.ಎಂ. ನೇತೃತ್ವದಲ್ಲಿ ಸಮಿತಿಯನ್ನು ರಚಿಸಲಾಗಿದ್ದು, ಈ ಸಮಿತಿಯು ಆಂಧ್ರಪ್ರದೇಶದಲ್ಲಿ ಅನುಸರಿಸುತ್ತಿರುವ ಮಾನದಂಡಗಳನ್ನು ವಿವರವಾಗಿ ಅಧ್ಯಯನ ನಡೆಸುವ ಜವಾಬ್ದಾರಿ ವಹಿಸಲಾಗಿದೆ. ಸಮಿತಿಯಲ್ಲಿ ಕಾನೂನು ಇಲಾಖೆಯ ಉಪ ಕಾರ್ಯದರ್ಶಿ ವನಿತಾ, ಸಿಬ್ಬಂದಿ ಮತ್ತು ಆಡಳಿತ ಸುಧಾರಣಾ ಇಲಾಖೆಯ

ತುಳು ಭಾಷೆಗೆ ಅಧಿಕೃತ ಸ್ಥಾನಮಾನ: ಮಾನದಂಡಗಳ ಅಧ್ಯಯನಕ್ಕೆ ಸಮಿತಿ ರಚನೆ Read More »

ಕರಾವಳಿ, ಕರ್ನಾಟಕ, ಬ್ರೇಕಿಂಗ್ ನ್ಯೂಸ್

ಧರ್ಮಸ್ಥಳ ಸಾಮೂಹಿಕ ಅಂತ್ಯಕ್ರಿಯೆ ಪ್ರಕರಣ: ಶವಗಳ ಹೂತಿದ್ದ 13 ಜಾಗಗಳ ತೋರಿಸಿದ ದೂರುದಾರ

(ನ್ಯೂಸ್ ಕಡಬ) newskadaba.com, ಜು. 29. ಮಂಗಳೂರು: ಧರ್ಮಸ್ಥಳ ಸಾಮೂಹಿಕ ಅಂತ್ಯಕ್ರಿಯೆ ಪ್ರಕರಣದ ತನಿಖೆ ನಿರ್ಣಾಯಕ ಹಂತ ತಲುಪಿದ್ದು, ಪ್ರಕರಣದ ಸಾಕ್ಷಿ-ದೂರುದಾರನಾಗಿರುವ ವ್ಯಕ್ತಿ ಶವಗಳನ್ನು ಹೂತಿದ್ದ 13 ಸ್ಥಳಗಳನ್ನು ಅಧಿಕಾರಿಗಳಿಗೆ ತೋರಿಸಿದ್ದಾನೆಂದು ತಿಳಿದುಬಂದಿದೆ. ಪ್ರಕರಣದ ತನಿಖೆ ನಡೆಸುತ್ತಿರುವ ವಿಶೇಷ ತನಿಖಾ ತಂಡ (ಎಸ್‌ಐಟಿ) ಸೋಮವಾರ ತನಿಖೆಯನ್ನು ಚುರುಕುಗೊಳಿಸಿದ್ದು, ಶವಗಳನ್ನು ಹೂಳಲಾಗಿದೆ ಎಂಬ ಸಾಕ್ಷಿ-ದೂರುದಾರನ ಹೇಳಿಕೆ ಅನ್ವಯ ದಕ್ಷಿಣ ಕನ್ನಡದ ಬೆಳ್ತಂಗಡಿ ತಾಲ್ಲೂಕಿನ ಧರ್ಮಸ್ಥಳ ಗ್ರಾಮದಲ್ಲಿ ಸೋಮವಾರ ಪರಿಶೀಲನೆ ನಡೆಸಿತು. ಸಾಕ್ಷಿ-ದೂರುದಾರರು ಸೋಮವಾರ ಬೆಳಿಗ್ಗೆ 11.30 ರ ಸುಮಾರಿಗೆ

ಧರ್ಮಸ್ಥಳ ಸಾಮೂಹಿಕ ಅಂತ್ಯಕ್ರಿಯೆ ಪ್ರಕರಣ: ಶವಗಳ ಹೂತಿದ್ದ 13 ಜಾಗಗಳ ತೋರಿಸಿದ ದೂರುದಾರ Read More »

ಕರಾವಳಿ, ಕರ್ನಾಟಕ

7 ದಿನ, 170 ಗಂಟೆ ಭರತನಾಟ್ಯ – ಗೋಲ್ಡನ್ ಬುಕ್ ಆಫ್ ವರ್ಲ್ಡ್ ರೆಕಾರ್ಡ್ ಸೇರಿದ ಮಂಗಳೂರಿನ ರೆಮೋನಾ ಪಿರೇರಾ

(ನ್ಯೂಸ್ ಕಡಬ) newskadaba.com, ಜು. 29. ಮಂಗಳೂರು: ಪ್ರಧಾನಮಂತ್ರಿ ಬಾಲ ಪುರಸ್ಕಾರ ಪುರಸ್ಕೃತೆ ಮಂಗಳೂರಿನ ಸಂತ ಅಲೋಶಿಯನ್ ಕಾಲೇಜಿನ ಅಂತಿಮ ವರ್ಷದ ಬಿ.ಎ. ವಿದ್ಯಾರ್ಥಿನಿ ರೆಮೋನಾ ಎವೆಟ್ಟೆ ಪಿರೇರಾ 7 ದಿನಗಳ ಕಾಲ 170 ಗಂಟೆ ಭರತನಾಟ್ಯ ಮಾಡಿ ಗೋಲ್ಡನ್ ಬುಕ್ ಆಫ್ ವರ್ಲ್ಡ್ ರೆಕಾರ್ಡ್ ದಾಖಲೆ ಮಾಡಿದ್ದಾರೆ. ಜುಲೈ 21 ರಂದು ಬೆಳಗ್ಗೆ 10:30ರಿಂದ ಸಂತ ಅಲೋಶಿಯಸ್ ಕಾಲೇಜಿನ ಎಲ್‌ಸಿಆರ್‌ಐ ಸಭಾಂಗಣದಲ್ಲಿ ಭರತನಾಟ್ಯ ಪ್ರದರ್ಶನ ಆರಂಭಿಸಿದ್ದು, ಜು.28ರಂದು ಮುಕ್ತಾಯವಾಗಿದೆ. ಈ ಏಳು ದಿನಗಳಲ್ಲಿ ರೆಮೋನಾ ಭರತನಾಟ್ಯ

7 ದಿನ, 170 ಗಂಟೆ ಭರತನಾಟ್ಯ – ಗೋಲ್ಡನ್ ಬುಕ್ ಆಫ್ ವರ್ಲ್ಡ್ ರೆಕಾರ್ಡ್ ಸೇರಿದ ಮಂಗಳೂರಿನ ರೆಮೋನಾ ಪಿರೇರಾ Read More »

ಕರಾವಳಿ, ಕರ್ನಾಟಕ

ಖಾಯಂ ಜನತಾ ನ್ಯಾಯಾಲಯದಲ್ಲಿ ಪ್ರಕರಣಗಳ ತ್ವರಿತ ವಿಲೇವಾರಿ

(ನ್ಯೂಸ್ ಕಡಬ) newskadaba.com, ಜು. 29. ಮಂಗಳೂರು: ಮಂಗಳೂರಿನಲ್ಲಿ ಕಾರ್ಯಾಚರಿಸುತ್ತಿರುವ ಖಾಯಂ ಜನತಾ ನ್ಯಾಯಾಲಯದಲ್ಲಿ    ವಿವಿಧ ಪ್ರಕರಣಗಳನ್ನು ಅತ್ಯಂತ ಸರಳ ಮತ್ತು  ಸುಲಲಿತವಾಗಿ ಇತ್ಯರ್ಥಪಡಿಸಲಾಗುತ್ತದೆ ಎಂದು ಜನತಾ ನ್ಯಾಯಾಲಯದ ಅಧ್ಯಕ್ಷ  ಹಾಗೂ ನ್ಯಾಯಾಧೀಶ  ಜೈಶಂಕರ್ ಅವರು ತಿಳಿಸಿದರು. ಅವರು ಸೋಮವಾರ ಜನತಾ ನ್ಯಾಯಾಲಯ ಕಚೇರಿಯಲ್ಲಿ  ವಿವಿಧ ಇಲಾಖೆ ಮತ್ತು ಸಂಸ್ಥೆಗಳ ಸಭೆ ನಡೆಸಿ ಅಧ್ಯಕ್ಷತೆ ವಹಿಸಿ ಮಾತನಾಡಿದರು. ಖಾಯಂ ಜನತಾ ನ್ಯಾಯಾಲಯದಲ್ಲಿ ನ್ಯಾಯಾಧೀಶರು ಮತ್ತು ಇಬ್ಬರು ಸದಸ್ಯರಿದ್ದಾರೆ. ಸಾರ್ವಜನಿಕ ಸೇವೆಗಳಿಗೆ ಸಂಬಂಧಿಸಿದ ಪ್ರಕರಣಗಳನ್ನು ಇಲ್ಲಿ ಇತ್ಯರ್ಥಪಡಿಸಲಾಗುತ್ತಿದೆ. ಪ್ರಕರಣ

ಖಾಯಂ ಜನತಾ ನ್ಯಾಯಾಲಯದಲ್ಲಿ ಪ್ರಕರಣಗಳ ತ್ವರಿತ ವಿಲೇವಾರಿ Read More »

ಕರಾವಳಿ, ಕರ್ನಾಟಕ

ಹೆದ್ದಾರಿ ಭೂಸ್ವಾಧೀನ – ಜುಲೈ 30 ರಂದು ಪರಿಹಾರ ಪಾವತಿ

(ನ್ಯೂಸ್ ಕಡಬ) newskadaba.com, ಜು. 29. ಮಂಗಳೂರು: ರಾಷ್ಟ್ರೀಯ ಹೆದ್ದಾರಿ ಸಾಣೂರು – ಬಿಕರ್ನಕಟ್ಟೆ ವಿಭಾಗದ ರಸ್ತೆ ಅಗಲೀಕರಣಕ್ಕಾಗಿ ಭೂಸ್ವಾಧೀನ ಪಡಿಸಲಾದ ಜಮೀನಿನ ಮಾಲೀಕರಿಗೆ ಪರಿಹಾರ ಪಾವತಿ ಹಾಗೂ ಕ್ಲೈಮ್‍ಗಳನ್ನು ಪಡೆಯುವ ಅದಾಲತ್ ಕಾರ್ಯಕ್ರಮ ಜುಲೈ 30 ರಂದು ಬೆಳಿಗ್ಗೆ 10.30 ಗಂಟೆಗೆ ಗುರುಪುರ ಗ್ರಾಮ ಪಂಚಾಯತ್  ಸಭಾಭವನದಲ್ಲಿ ನಡೆಯಲಿದೆ. ತೆಂಕ ಎಡಪದವು, ಬಡಗ ಎಡಪದವು, ಬಡಗ ಉಳಿಪಾಡಿ, ತೆಂಕ ಉಳಿಪಾಡಿ, ಮೂಡುಪೆರಾರ, ಮೂಳೂರು, ಅಡ್ಡೂರು, ತಿರುವೈಲು, ಕುಡುಪು ಗ್ರಾಮಗಳ ಜಮೀನಿನ ಮಾಲೀಕರು ಹೆಚ್ಚಿನ ಸಂಖ್ಯೆಯಲ್ಲಿ ಹಾಜರಾಗಿ

ಹೆದ್ದಾರಿ ಭೂಸ್ವಾಧೀನ – ಜುಲೈ 30 ರಂದು ಪರಿಹಾರ ಪಾವತಿ Read More »

ಕರಾವಳಿ, ಕರ್ನಾಟಕ

‘ಮಂಗಳೂರಿನ ಲಕ್ಷದ್ವೀಪ ಜೆಟ್ಟಿ ಯೋಜನೆ ಕಾರ್ಯಗತಕ್ಕೆ ರಾಜ್ಯ ಸರ್ಕಾರ ವಿಳಂಬ ನೀತಿ’- ಕ್ಯಾ. ಚೌಟ

(ನ್ಯೂಸ್ ಕಡಬ) com ಜು. 26. ಮಂಗಳೂರಿನ ಹಳೇ ಬಂದರಿನಲ್ಲಿ ನಿರ್ಮಿಸಲು ಉದ್ದೇಶಿಸಿರುವ ಪ್ರತ್ಯೇಕ ಲಕ್ಷದ್ವೀಪ ಜೆಟ್ಟಿ ನಿರ್ಮಾಣ ಯೋಜನೆ ಮಂಜೂರಾತಿ ಪಡೆದು ಮೂರು ವರ್ಷ ಕಳೆದರೂ ಇನ್ನು ಕೂಡ ಪರಿಸರ ಇಲಾಖೆ ಸೇರಿದಂತೆ ರಾಜ್ಯ ಸರ್ಕಾರದ ಹಲವು ಅಗತ್ಯ ಅನುಮತಿ ಬಾಕಿಯಿದ್ದು, ಈ ಮಹತ್ವಾಕಾಂಕ್ಷಿ ಯೋಜನೆ ಅನುಷ್ಠಾನ ಪ್ರಕ್ರಿಯೆ ಸಾಕಷ್ಟು ವಿಳಂಬವಾಗಿರುವ ಬಗ್ಗೆ ದಕ್ಷಿಣ ಕನ್ನಡ ಸಂಸದ ಕ್ಯಾ. ಬ್ರಿಜೇಶ್‌ ಚೌಟ ಅವರು ಇಂದು ಲೋಕಸಭೆಯಲ್ಲಿ ಪ್ರಸ್ತಾಪಿಸಿ ಬಂದರು ಸಚಿವ ಸರ್ಬಾನಂದ ಸೋನೋವಾಲ್ ಅವರ ಗಮನಸೆಳೆದಿದ್ದಾರೆ.

‘ಮಂಗಳೂರಿನ ಲಕ್ಷದ್ವೀಪ ಜೆಟ್ಟಿ ಯೋಜನೆ ಕಾರ್ಯಗತಕ್ಕೆ ರಾಜ್ಯ ಸರ್ಕಾರ ವಿಳಂಬ ನೀತಿ’- ಕ್ಯಾ. ಚೌಟ Read More »

ಕರಾವಳಿ, ಕರ್ನಾಟಕ, ಬ್ರೇಕಿಂಗ್ ನ್ಯೂಸ್

ಮಂಗಳೂರಿನಲ್ಲಿ ವೀರರಾಣಿ ಅಬ್ಬಕ್ಕ ಹೆಸರಿನಲ್ಲಿ ಮೆರಿಟೈಮ್‌ ವಿಶ್ವವಿದ್ಯಾಲಯ ಸ್ಥಾಪನೆಗೆ ಕ್ಯಾ. ಬ್ರಿಜೇಶ್‌ ಚೌಟ ಮನವಿ

(ನ್ಯೂಸ್‌ ಕಡಬ) newskadaba.com ಜು.23: ಕಡಲನಗರಿ ಮಂಗಳೂರಿನಲ್ಲಿ ವೀರ ವನಿತೆ ಅಬ್ಬಕ್ಕ ರಾಣಿ ಹೆಸರಿನಲ್ಲಿ ಪ್ರತ್ಯೇಕ ಮೆರಿಟೈಮ್‌ ವಿಶ್ವವಿದ್ಯಾನಿಲಯ ಸ್ಥಾಪಿಸಬೇಕೆಂದು ಕೋರಿ ದಕ್ಷಿಣ ಕನ್ನಡ ಸಂಸದ ಕ್ಯಾ. ಬ್ರಿಜೇಶ್‌ ಚೌಟ ಅವರು ಇಂದು ಕೇಂದ್ರ ಬಂದರು, ಶಿಪ್ಪಿಂಗ್‌ ಹಾಗೂ ಜಲಮಾರ್ಗಗಳ ಸಚಿವಾಲಯದ ಕಾರ್ಯದರ್ಶಿ ಟಿ.ಕೆ. ರಾಮಚಂದ್ರನ್ ಅವರನ್ನು ಭೇಟಿ ಮಾಡಿ ಮನವಿ ಸಲ್ಲಿಸಿದ್ದಾರೆ.

ಮಂಗಳೂರಿನಲ್ಲಿ ವೀರರಾಣಿ ಅಬ್ಬಕ್ಕ ಹೆಸರಿನಲ್ಲಿ ಮೆರಿಟೈಮ್‌ ವಿಶ್ವವಿದ್ಯಾಲಯ ಸ್ಥಾಪನೆಗೆ ಕ್ಯಾ. ಬ್ರಿಜೇಶ್‌ ಚೌಟ ಮನವಿ Read More »

ಕರಾವಳಿ, ಕರ್ನಾಟಕ

ಮಂಗಳೂರು: ತೊಕ್ಕೊಟ್ಟು ಜಂಕ್ಷನ್‌ನಲ್ಲಿ ಕೃತಕ ಪ್ರವಾಹ -ಸಂಚಾರಕ್ಕೆ ಅಡ್ಡಿ

(ನ್ಯೂಸ್ ಕಡಬ) newskadaba.com, ಜು.15. ತೊಕ್ಕೊಟ್ಟು ಪ್ರದೇಶದಲ್ಲಿ ಸೋಮವಾರ ಸುರಿದ ಭಾರಿ ಮಳೆಯಿಂದಾಗಿ ತೊಕ್ಕೊಟ್ಟು ಜಂಕ್ಷನ್‌ನಲ್ಲಿ ಕೃತಕ ಪ್ರವಾಹದಿಂದ ವಾಹನ ಸಂಚಾರ ಮತ್ತು ಪಾದಚಾರಿಗಳಿಗೆ ಗಮನಾರ್ಹ ತೊಂದರೆ ಉಂಟಾಗಿದೆ. ಈ ಪ್ರದೇಶದಲ್ಲಿ ರಾಷ್ಟ್ರೀಯ ಹೆದ್ದಾರಿಯ ಅವೈಜ್ಞಾನಿಕ ನಿರ್ಮಾಣದಿಂದಾಗಿ, ಮಳೆನೀರು ಕಾಲುವೆಗಳಿಗೆ ಸರಿಯಾಗಿ ಹರಿಯದೆ ರಸ್ತೆಯ ಮೇಲೆ ಉಕ್ಕಿ ಹರಿದಿದೆ. ಜಂಕ್ಷನ್‌ನಲ್ಲಿ ನಿಯಮಿತವಾಗಿ ಹೂಳು ತೆಗೆಯದಿರುವುದು ಪರಿಸ್ಥಿತಿಯನ್ನು ಮತ್ತಷ್ಟು ಹದಗೆಡಿಸಿದೆ. ತೊಕ್ಕೊಟ್ಟು ಜಂಕ್ಷನ್‌ನಿಂದ ಚೆಂಬುಗುಡ್ಡೆವರೆಗೆ ಸುಮಾರು 14 ಕೋಟಿ ರೂ. ವೆಚ್ಚದಲ್ಲಿ ನಾಲ್ಕು ಪಥದ ರಸ್ತೆ ನಿರ್ಮಾಣವಾಗಿದ್ದರೂ, ಜಂಕ್ಷನ್‌ನಲ್ಲಿ

ಮಂಗಳೂರು: ತೊಕ್ಕೊಟ್ಟು ಜಂಕ್ಷನ್‌ನಲ್ಲಿ ಕೃತಕ ಪ್ರವಾಹ -ಸಂಚಾರಕ್ಕೆ ಅಡ್ಡಿ Read More »

ಕರಾವಳಿ, ಕರ್ನಾಟಕ
Scroll to Top