Manglore

ಮಂಗಳೂರು: ಅಡುಗೆ ಅನಿಲ ಸೋರಿಕೆ; 2 ಮಹಿಳೆಯರಿಗೆ ಗಂಭೀರ ಗಾಯ

(ನ್ಯೂಸ್ ಕಡಬ) newskadaba.com ಡಿ. 19 ಮಂಗಳೂರು : ಅಡುಗೆ ಮನೆಯ ಸಿಲಿಂಡರ್‌ನಿಂದ ಗ್ಯಾಸ್ ಸೋರಿಕೆಯಾಗಿ ಬೆಂಕಿ ಹತ್ತಿಕೊಂಡ ಪರಿಣಾಮ ಇಬ್ಬರು ಮಹಿಳೆಯರು ಗಂಭೀರವಾಗಿ ಗಾಯಗೊಂಡ ಘಟನೆ ತಡಂಬೈಲ್ ವೆಂಕಟರಮಣ ಕಾಲನಿಯಲ್ಲಿ ಬುಧವಾರ ಮಧ್ಯಾಹ್ನ ಸಂಭವಿಸಿದೆ. ಮನೆಯ ಯಜಮಾನ ವಾಮನ ಅವರ ಪತ್ನಿ ವಸಂತಿ (68) ಮತ್ತು ವಾಮನ ಅವರ ಅಕ್ಕ ಪುಷ್ಪಾ (72) ಗಾಯಾಳುಗಳು. ಗಾಯಾಳುಗಳನ್ನು ಮಂಗಳೂರಿನ ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿದೆ. ವಸಂತಿ ಅವರು ಗ್ಯಾಸ್ ಸೋರಿಕೆಯಾಗಿರುವುದನ್ನು ಗಮನಿಸದೆ ಮಧ್ಯಾಹ್ನ ಅಡುಗೆ ಕೋಣೆಗೆ ಹೋಗಿ ಸ್ಟವ್‌ಗೆ […]

ಮಂಗಳೂರು: ಅಡುಗೆ ಅನಿಲ ಸೋರಿಕೆ; 2 ಮಹಿಳೆಯರಿಗೆ ಗಂಭೀರ ಗಾಯ Read More »

ಕರಾವಳಿ

ಮಂಗಳೂರು: ವಿಳಾಸ ಕೇಳುವ ನೆಪದಲ್ಲಿ ಚಿನ್ನದ ಸರ ಕಳವು

(ನ್ಯೂಸ್ ಕಡಬ) newskadaba.com ಡಿ. 18ಮಂಗಳೂರು: ವಿಳಾಸ ಕೇಳುವ ನೆಪದಲ್ಲಿ ಕುತ್ತಿಗೆಯಲ್ಲಿದ್ದ ಚಿನ್ನದ ಸರವನ್ನು ಎಳೆದುಕೊಂಡು ಹೋದ ಘಟನೆಗೆ ಸಂಬಂಧಿಸಿದಂತೆ ಬಜಪೆ ಪೊಲೀಸರು ವ್ಯಕ್ತಿಯೋರ್ವನನ್ನು ಬಂಧಿಸಿದ್ದಾರೆ. ಹಳೆಯಂಗಡಿ ಇಂದಿರಾ ನಗರದ ನಿವಾಸಿ ಅಬ್ದುಲ್ ರವೂಫ್ ಯಾನೆ ಆಟೋ ರವೂಫ್(30) ಬಂಧಿತ ಆರೋಪಿ.ಆರೋಪಿಯು ಮಂಗಳೂರು ತಾಲೂಕು ತೆಂಕ ಎಡಪದವು ಗ್ರಾಮದ ಶಿಬ್ರಿಕೆರೆ ಗಣೇಶ್ ಮಿಲ್ ಬಳಿ ಇರುವ ಒಳ ರಸ್ತೆಯಲ್ಲಿ ಡಿ. 12ರಂದು ನಡೆದುಕೊಂಡು ಮಧ್ಯಾಹ್ನ ವೇಳೆಯಲ್ಲಿ ಹೋಗುತ್ತಿದ್ದ ಒಂಟಿ ಮಹಿಳೆಯ ಬಳಿ ಸ್ಕೂಟರ್‌ನಲ್ಲಿ ಬಂದು ವಿಳಾಸ ಕೇಳುವ ನೆಪದಲ್ಲಿ

ಮಂಗಳೂರು: ವಿಳಾಸ ಕೇಳುವ ನೆಪದಲ್ಲಿ ಚಿನ್ನದ ಸರ ಕಳವು Read More »

ಕರಾವಳಿ

ಮಂಗಳೂರು: ಪಾರ್ಟ್ ಟೈಮ್ ಜಾಬ್ ಹೆಸರಲ್ಲಿ 28,18,065ರೂ. ವಂಚನೆ

(ನ್ಯೂಸ್ ಕಡಬ) newskadaba.com .ಡಿ. 11. ಮಂಗಳೂರು: ಪಾರ್ಟ್ ಟೈಮ್ ಜಾಬ್ ಹೆಸರಲ್ಲಿ ವ್ಯಕ್ತಿಯೊಬ್ಬರಿಗೆ 28,18,065ರೂ. ವಂಚಿಸಿದ ಪ್ರಕರಣಕ್ಕೆ ಸಂಬಂಧಿಸಿದಂತೆ ಇಬ್ಬರು ಆರೋಪಿಗಳನ್ನು ಪೊಲೀಸರು ಬಂಧಿಸಿದ್ದಾರೆ. 2024ರ ಜುಲೈ 21ರಂದು ಪಾರ್ಟ್ ಟೈಮ್ ಜಾಬ್ ನ ಬಗ್ಗೆ ದೂರುದಾರರಿಗೆ ಪೋನ್ ನಂಬರ್‌ಗೆ ವಾಟ್ಸಾಪ್ ಮೆಸೇಜ್ ಬಂದಿರುತ್ತದೆ. ಆರೋಪಿಗಳು ದೂರುದಾರರ ವಾಟ್ಸಾಪ್ ಗೆ ಟೆಲಿಗ್ರಾಮ್ ಆಪ್ ನ ಲಿಂಕ್ ಕಳುಹಿಸಿ ಓಪನ್ ಮಾಡುವಂತೆ ತಿಳಿಸಿದ್ದಾರೆ. ಅದರಂತೆ ದೂರುದಾರರು ಟೆಲಿಗ್ರಾಮ್ ಆಪ್ ಅನ್ನು ಓಪನ್ ಮಾಡಿದಾಗ ಟೆಲಿಗ್ರಾಮ್ ನಲ್ಲಿ ಪಾರ್ಟ್

ಮಂಗಳೂರು: ಪಾರ್ಟ್ ಟೈಮ್ ಜಾಬ್ ಹೆಸರಲ್ಲಿ 28,18,065ರೂ. ವಂಚನೆ Read More »

ಕರಾವಳಿ

ಮಂಗಳೂರು: ಖಾಸಗಿ ಬಸ್ ಗಳಿಗೆ ಬಾಗಿಲು ಅಳವಡಿಸುವ ನಿಯಮ ಪಾಲಿಸುವಲ್ಲಿ ವಿಫಲ

(ನ್ಯೂಸ್ ಕಡಬ) newskadaba.com .ಡಿ. 11. ಪ್ರಯಾಣಿಕರ ಸುರಕ್ಷತೆಯ ಹಿನ್ನೆಲೆ ಡಿಸೆಂಬರ್ 10ರೊಳಗೆ ಎಲ್ಲಾ ಖಾಸಗಿ ಬಸ್‌ಗಳಿಗೆ ಬಾಗಿಲು ಅಳವಡಿಸುವಂತೆ ದಕ್ಷಿಣ ಕನ್ನಡ ಜಿಲ್ಲಾಧಿಕಾರಿ ಡಾ.ಮುಲ್ಲೈ ಮುಗಿಲನ್ ಅವರು ಪದೇ ಪದೇ ನಿರ್ದೇಶನ ನೀಡಿದ್ದರೂ, ನಿಯಮ ಪಾಲಿಸುತ್ತಿಲ್ಲ ಎಂಬ ದೂರುಗಳು ಕೇಳಿ ಬರುತ್ತಲೇ ಇವೆ. ಕಳೆದ ತಿಂಗಳು ಡಿಸಿ ಅಧ್ಯಕ್ಷತೆಯಲ್ಲಿ ನಡೆದ ಪ್ರಾದೇಶಿಕ ಸಾರಿಗೆ ಪ್ರಾಧಿಕಾರದ (ಆರ್‌ಟಿಎ) ಸಭೆಯಲ್ಲಿ ಈ ಕುರಿತು ಚರ್ಚೆ ನಡೆಸಲಾಗಿತ್ತು. ಮಂಗಳೂರಿನಿಂದ ಬರುವ ನಗರ ಸಾರಿಗೆ ಬಸ್‌ಗಳನ್ನು ಹೊರತುಪಡಿಸಿ ಎಲ್ಲಾ ಖಾಸಗಿ ಬಸ್‌ಗಳು

ಮಂಗಳೂರು: ಖಾಸಗಿ ಬಸ್ ಗಳಿಗೆ ಬಾಗಿಲು ಅಳವಡಿಸುವ ನಿಯಮ ಪಾಲಿಸುವಲ್ಲಿ ವಿಫಲ Read More »

ಕರಾವಳಿ

ಮಂಗಳೂರಿನಲ್ಲಿ ನೂತನ RSS ಕಛೇರಿ ಉದ್ಘಾಟನೆ

(ನ್ಯೂಸ್ ಕಡಬ) newskadaba.com , ಡಿ. 09. ಮಂಗಳೂರು: ಆರ್.ಎಸ್‍.ಎಸ್. (ರಾಷ್ಟ್ರೀಯ ಸ್ವಯಂಸೇವಕ ಸಂಘ)ನ ಸರಸಂಘಚಾಲಕ ಡಾ.ಮೋಹನ್ ಭಾಗವತ್ ಮಂಗಳೂರಿನ ಸಂಘನಿಕೇತನ ಬಳಿ ಹೊಸ RSS ಕಚೇರಿಯನ್ನು ಭಾನುವಾರ ಉದ್ಘಾಟಿಸಿದರು. ಆರೆಸ್ಸೆಸ್ ಈಗಾಗಲೇ ದಕ್ಷಿಣ ಕನ್ನಡ ಮತ್ತು ಉಡುಪಿ ಜಿಲ್ಲೆಗಳಲ್ಲಿ ಗಮನಾರ್ಹ ಅಸ್ತಿತ್ವವನ್ನು ಹೊಂದಿದೆ ಎಂಬುದು ಉಲ್ಲೇಖಾರ್ಹ. ಉದ್ಘಾಟನಾ ಸಮಾರಂಭದಲ್ಲಿ ಭಾಗವತ್ ಅವರು ಭಾರತ ಮಾತೆಗೆ ಪುಷ್ಪ ನಮನ ಸಲ್ಲಿಸಿದರು. ಬೆಳವಣಿಗೆ ಮತ್ತು ಸಮೃದ್ಧಿಯ ಸಾಂಕೇತಿಕ ಸೂಚಕವಾಗಿ, ಅವರು ಕಚೇರಿಯ ಆವರಣದಲ್ಲಿ ಗೋಲ್ಡನ್ ಚಂಪಕ ಮರವನ್ನು ನೆಟ್ಟರು, ಕಚೇರಿ

ಮಂಗಳೂರಿನಲ್ಲಿ ನೂತನ RSS ಕಛೇರಿ ಉದ್ಘಾಟನೆ Read More »

ಕರಾವಳಿ

ಮಂಗಳೂರು: ಹಿಟ್ ಆ್ಯಂಡ್ ರನ್; 3ನೇ ತರಗತಿ ವಿದ್ಯಾರ್ಥಿಗೆ ಗಂಭೀರ ಗಾಯ

(ನ್ಯೂಸ್ ಕಡಬ) newskadaba.com ಡಿ. 05 ಬೆಂಗಳೂರು:  ಶಾಲೆಯಿಂದ ಮನೆಗೆ ಬರುತ್ತಿದ್ದ ಬಾಲಕನಿಗೆ ಕಾರೊಂದು ಡಿಕ್ಕಿ ಹೊಡೆದ ಪರಿಣಾಮ ಬಾಲಕನಿಗೆ ತೀವ್ರ ಗಾಯವಾಗಿದ್ದು, ಚಾಲಕ ಪರಾರಿಯಾದ ಘಟನೆ ಹರೇಕಳದಲ್ಲಿ ಬುಧವಾರ ನಡೆದಿದೆ. ಹರೇಕಳ ಗ್ರಾಮ ಪಂಚಾಯಿತಿ ಬಳಿಯ ನಿವಾಸಿ ಅಬ್ದುಲ್ ಕಲಾಂ ಎಂಬವರ ಪುತ್ರ ಮುಹಮ್ಮದ್ ಶಯಾನ್ ಗಾಯಾಳು. ಬಾಲಕ ಹರೇಕಳ ಪಾವೂರು ಅನುದಾನಿತ ಹಿರಿಯ ಪ್ರಾಥಮಿಕ ಶಾಲೆಯ 3ನೇ ತರಗತಿಯ ವಿದ್ಯಾರ್ಥಿಯಾಗಿದ್ದು, ಬುಧವಾರ ಸಂಜೆ ಶಾಲೆ ಬಿಟ್ಟು ಮನೆಗೆ ಬರುತ್ತಿದ್ದ ಬಾಲಕನಿಗೆ ಕಾರು ಡಿಕ್ಕಿ ಹೊಡೆದು

ಮಂಗಳೂರು: ಹಿಟ್ ಆ್ಯಂಡ್ ರನ್; 3ನೇ ತರಗತಿ ವಿದ್ಯಾರ್ಥಿಗೆ ಗಂಭೀರ ಗಾಯ Read More »

ಕರಾವಳಿ

ಫೆಂಗಲ್ ಚಂಡಮಾರುತ: ಮಂಗಳೂರು, ಉಡುಪಿಯಲ್ಲಿ ಮಳೆ

(ನ್ಯೂಸ್ ಕಡಬ) newskadaba.com ಡಿ. 03 ದ.ಕ/ಉಡುಪಿ: ಫೆಂಗಲ್ ಚಂಡಮಾರುತದ ಪ್ರಭಾವದಿಂದ ದಕ್ಷಿಣ ಕನ್ನಡ ಮತ್ತು ಉಡುಪಿ ಜಿಲ್ಲೆಗಳಲ್ಲಿ ಸೋಮವಾರ ಮಧ್ಯಾಹ್ನ ಮತ್ತು ಸಂಜೆ ಭಾರೀ ಮಳೆಯಾಗಿದೆ. ರಾತ್ರಿಯಿಡೀ ಸುರಿದ ಮಳೆ ಮಂಗಳವಾರ ಬೆಳಗಿನ ಜಾವದವರೆಗೂ ಮುಂದುವರಿದಿದೆ. ಮಂಗಳೂರಿನ ಹಲವಾರು ಪ್ರದೇಶಗಳು ಜಲಾವೃತವಾಗಿದ್ದು, ಕೊಟ್ಟಾರ ಚೌಕಿ, ಪಿವಿಎಸ್, ಪಂಪ್‌ವೆಲ್, ಬಜ್ಜೋಡಿ, ಬಜಾಲ್ ಅಂಡರ್‌ಪಾಸ್ ಮತ್ತು ಪಡೀಲ್‌ನಲ್ಲಿ ಸಂಚಾರಕ್ಕೆ ಅಡ್ಡಿಯುಂಟಾಗಿದೆ. ಐಎಂಡಿ ಮಂಗಳವಾರ ಬೆಳಗಿನ ಜಾವದವರೆಗೆ ಆರೆಂಜ್ ಅಲರ್ಟ್ ನೀಡಿದ್ದು, ಹಳದಿ ಅಲರ್ಟ್ ನೀಡಲಾಗಿದೆ. ಮೋಡ ಕವಿದ ವಾತಾವರಣದ ಕಾರಣ

ಫೆಂಗಲ್ ಚಂಡಮಾರುತ: ಮಂಗಳೂರು, ಉಡುಪಿಯಲ್ಲಿ ಮಳೆ Read More »

ಕರಾವಳಿ

ಬಾಂಗ್ಲಾದಲ್ಲಿ ಬಂಧಿಸಲ್ಪಟ್ಟ ಚಿನ್ಮಯ ಕೃಷ್ಣದಾಸ ಪ್ರಭು ಬಿಡುಗಡೆಗೆ ಒತ್ತಾಯಿಸಿ ಮಂಗಳೂರಿನಲ್ಲಿ ಪ್ರತಿಭಟನೆ

(ನ್ಯೂಸ್ ಕಡಬ) newskadaba.com ನ. 29. ಮಂಗಳೂರು:  ಬಾಂಗ್ಲಾದೇಶದಲ್ಲಿ ಬಂಧಿಸಲ್ಪಟ್ಟ ಧಾರ್ಮಿಕ ಮುಖಂಡ ಚಿನ್ಮಯ ಕೃಷ್ಣದಾಸ ಪ್ರಭು ಅವರನ್ನು ಬಿಡುಗಡೆಗೊಳಿಸಬೇಕು, ಬಾಂಗ್ಲಾದ ಹಿಂದೂಗಳಿಗೆ ರಕ್ಷಣೆ ಒದಗಿಸಬೇಕು ಎಂದು ಒತ್ತಾಯಿಸಿ ವಿಶ್ವ ಹಿಂದೂ ಪರಿಷತ್ ಬಜರಂಗ ದಳ ವತಿಯಿಂದ ಮಂಗಳೂರಿನ ಮಿನಿ ವಿಧಾನ ಸೌಧದ ಎದುರು ಇಂದು ಪ್ರತಿಭಟನೆ ನಡೆಯಿತು. ಪ್ರತಿಭಟನೆಯಲ್ಲಿ ಮಾತನಾಡಿದ ವಿಹೆಚ್ ಪಿ ಕರ್ನಾಟಕ ದಕ್ಷಿಣ ಪ್ರಾಂತ ಅಧ್ಯಕ್ಷ ಡಾ. ಎಂ.ಬಿ.ಪುರಾಣಿಕ್ ಅವರು, ಬಾಂಗ್ಲಾದಿಂದ ಹಿಂದೂಗಳನ್ನು ಹೊರ ದಬ್ಬುವ ಷಡ್ಯಂತ್ರ ನಡೆಯುತ್ತಿದೆ. ಜಗತ್ತಿನಲ್ಲಿ ಶಾಂತಿಗಾಗಿ ಹುಟ್ಟಿದ ಇಸ್ಕಾನ್

ಬಾಂಗ್ಲಾದಲ್ಲಿ ಬಂಧಿಸಲ್ಪಟ್ಟ ಚಿನ್ಮಯ ಕೃಷ್ಣದಾಸ ಪ್ರಭು ಬಿಡುಗಡೆಗೆ ಒತ್ತಾಯಿಸಿ ಮಂಗಳೂರಿನಲ್ಲಿ ಪ್ರತಿಭಟನೆ Read More »

ಕರಾವಳಿ, ಕರ್ನಾಟಕ

ಮಂಗಳೂರು: ವರ್ಕ್ ಶಾಪ್ನಲ್ಲಿ ಕಳವು ಪ್ರಕರಣ; ಆರೋಪಿಯ ಬಂಧನ

(ನ್ಯೂಸ್ ಕಡಬ) newskadaba.com ನ. 29. ಮಂಗಳೂರು:  ನಗರದ ಮರೋಳಿಯ ವರ್ಕ್ ಶಾಪ್‌ನಲ್ಲಿ ಕಳವು ಪ್ರಕರಣಕ್ಕೆ ಸಂಬಂಧಿಸಿದಂತೆ ಆರೋಪಿಯನ್ನು ಕಂಕನಾಡಿ ನಗರ ಪೊಲೀಸರು ಬಂಧಿಸಿದ್ದಾರೆ. ಬಂಧಿತ ಆರೋಪಿಯನ್ನು ನಗರದ ಕಣ್ಣೂರು ನಿವಾಸಿ, ರಿಕ್ಷಾ ಚಾಲಕ ನಝೀರ್ ಮುಹಮ್ಮದ್ (26) ಎಂದು ಗುರುತಿಸಲಾಗಿದೆ. ಬಂಧಿತನಿಂದ 64,500ರೂ. ನಗದು, ದ್ಚಿಚಕ್ರ ವಾಹನ, ಮೊಬೈಲ್, ಹೆಲ್ಮೆಟ್ ವಶಪಡಿಸಿಕೊಳ್ಳಲಾಗಿದೆ. ಕಂಕನಾಡಿ ನಗರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಮಂಗಳೂರು: ವರ್ಕ್ ಶಾಪ್ನಲ್ಲಿ ಕಳವು ಪ್ರಕರಣ; ಆರೋಪಿಯ ಬಂಧನ Read More »

ಕರಾವಳಿ, ಕರ್ನಾಟಕ

ಮಂಗಳೂರು: ಯುವ ಉದ್ಯಮಿ ಕುಸುಮಾಧರ ಸೇರಿದಂತೆ 25 ಮಂದಿಗೆ ‘ಬಿಜಿಎಸ್ ಕರಾವಳಿ ರತ್ನ’ ಪ್ರಶಸ್ತಿ ಪ್ರದಾನ

(ನ್ಯೂಸ್ ಕಡಬ) newskadaba.com ಮಂಗಳೂರು, ನ. 27.  ಯುವ ಉದ್ಯಮಿ ಕುಸುಮಾಧರ ಸೇರಿದಂತೆ 25 ಮಂದಿಗೆ ‘ಬಿಜಿಎಸ್ ಕರಾವಳಿ ರತ್ನ’ ಪ್ರಶಸ್ತಿ ಪ್ರದಾನ, ಆದಿಚುಂಚನಗಿರಿ ಮಠದ ಪೀಠಾಧ್ಯಕ್ಷ ಜಗದ್ಗುರು ಶ್ರೀ ಡಾ. ನಿರ್ಮಲಾನಂದನಾಥ ಮಹಾಸ್ವಾಮೀಜಿ ದಿವ್ಯ ಸಾನ್ನಿಧ್ಯದಲ್ಲಿ ನೀಡಲಾಯಿತು. ದಕ್ಷಿಣ ಕನ್ನಡ ಜಿಲ್ಲೆಯ ವಿವಿಧ ಕ್ಷೇತ್ರಗಳಲ್ಲಿ ಸಾಧನೆಗೈದ ಸಾಧಕರಿಗೆ ಮಂಗಳವಾರ ಬಿಜಿಎಸ್ ಸಭಾಂಗಣದಲ್ಲಿ ‘ಬಿಜಿಎಸ್ ಕರಾವಳಿ ರತ್ನ’ ಪ್ರಶಸ್ತಿ ಪ್ರದಾನ ಮಾಡಲಾಯಿತು. ಸುಳ್ಯ ತಾಲೂಕಿನ ಯುವ ಉದ್ಯಮಿ ಕುಸುಮಾಧರ ಸೇರಿದಂತೆ ಸುಮಾರು 25 ಮಂದಿ ಸಾಧಕರು ಪ್ರಶಸ್ತಿ

ಮಂಗಳೂರು: ಯುವ ಉದ್ಯಮಿ ಕುಸುಮಾಧರ ಸೇರಿದಂತೆ 25 ಮಂದಿಗೆ ‘ಬಿಜಿಎಸ್ ಕರಾವಳಿ ರತ್ನ’ ಪ್ರಶಸ್ತಿ ಪ್ರದಾನ Read More »

ಕರಾವಳಿ
Scroll to Top