mar ivanios

ಮಾರ್ ಇವಾನಿಯೋಸ್ ಶಿಕ್ಷಕ ಶಿಕ್ಷಣ ಮಹಾವಿದ್ಯಾಲಯದ ಪ್ರಶಿಕ್ಷಣಾರ್ಥಿಗಳಿಂದ ಕುಪ್ಪಳ್ಳಿಯ ಕವಿಶೈಲಕ್ಕೆ ಭೇಟಿ

(ನ್ಯೂಸ್ ಕಡಬ) newskadaba.com, ಕಡಬ, ನ.27.  ಇಲ್ಲಿನ ಮಾರ್ ಇವಾನಿಯೋಸ್ ಶಿಕ್ಷಕ ಶಿಕ್ಷಣ ಮಹಾವಿದ್ಯಾಲಯದ ದ್ವಿತೀಯ ವರ್ಷದ ಪ್ರಶಿಕ್ಷಣಾರ್ಥಿಗಳಿಗೆ ಕಲೆ ಮತ್ತು ಸಾಹಿತ್ಯದ ತಿಳುವಳಿಕೆ ಮೂಡಿಸುವ ಸಲುವಾಗಿ ತಿರ್ಥಹಳ್ಳಿ ತಾಲೂಕಿನ ಕುಪ್ಪಳ್ಳಿಯ ಕವಿಶೈಲಕ್ಕೆ ಭೇಟಿ ನೀಡಲಾಯಿತು. ತೃತೀಯ ಸೆಮಿಸ್ಟರ್ ನ ಪ್ರಶಿಕ್ಷಣಾರ್ಥಿಗಳ ಪಠ್ಯಕ್ರಮದ ಅಂಗವಾಗಿ ರಾಷ್ಟ್ರಕವಿ, ಕನ್ನಡದ ಜ್ಞಾನಪೀಠ ಪ್ರಶಸ್ತಿ ಪುರಸ್ಕೃತ ಕುವೆಂಪುರವರ ಹುಟ್ಟೂರಿನ ಮನೆಯಾದ ಶಿವಮೊಗ್ಗ ಜಿಲ್ಲೆಯ ತಿರ್ಥಹಳ್ಳಿಯ ಕವಿಶೈಲಕ್ಕೆ ಭೇಟಿ ನೀಡಿ ಕುವೆಂಪುರವರ ಬಗೆಗಿನ ಸಮಗ್ರ ಮಾಹಿತಿಯನ್ನು ಸಂಗ್ರಹಿಸಿದರು. ಕಾಲೇಜಿನ ಉಪನ್ಯಾಸಕ ಶ್ರೀ ರಘುನಂದನ […]

ಮಾರ್ ಇವಾನಿಯೋಸ್ ಶಿಕ್ಷಕ ಶಿಕ್ಷಣ ಮಹಾವಿದ್ಯಾಲಯದ ಪ್ರಶಿಕ್ಷಣಾರ್ಥಿಗಳಿಂದ ಕುಪ್ಪಳ್ಳಿಯ ಕವಿಶೈಲಕ್ಕೆ ಭೇಟಿ Read More »

ಕರಾವಳಿ

ಮಾರ್ ಇವಾನಿಯೋಸ್ ಕಾಲೇಜು: ಚಿತ್ರಕಲಾ ತರಬೇತಿ

(ನ್ಯೂಸ್ ಕಡಬ) newskadaba.com ಕಡಬ ಜೂ.06. ಕುಂತೂರು ಗ್ರಾಮದ ಮಾರ್ ಇವಾನಿಯೋಸ್ ಶಿಕ್ಷಕ ಶಿಕ್ಷಣ ಮಹಾವಿದ್ಯಾಲಯದಲ್ಲಿ ಪ್ರಶಿಕ್ಷಣಾರ್ಥಿಗಳಿಗಾಗಿ ಒಂದು ದಿನದ ಚಿತ್ರಕಲಾ ತಯಾರಿ ಕಾರ್ಯಕ್ರಮವನ್ನು ನಡೆಸಲಾಯಿತು. ಸಂಪನ್ಮೂಲ ವ್ಯಕ್ತಿಯಾಗಿ ಆಗಮಿಸಿದ ಚಿತ್ರಕಲಾ ಶಿಕ್ಷಕ ಶ್ರೀಪತಿ ರಾವ್ ವಿವಿಧ ಆಕೃತಿ, ರೇಖಾಚಿತ್ರ, ವರ್ಣಚಿತ್ರ, ಪೆನ್ಸಿಲ್ ಷೇಡಿಂಗ್ ಇತ್ಯಾದಿಗಳ ಮೂಲಕ ಸರಳವಾಗಿ ಆಕರ್ಷಕ ರೀತಿಯ ಚಿತ್ರ ರಚನೆಯ ಕುರಿತು ತರಬೇತಿ ಕಾಯರ್ಾಗಾರವನ್ನು ನಡೆಸಿಕೊಟ್ಟರು. ಉಪನ್ಯಾಸಕ ಶ್ರೀ ರಘುನಂದನ್ ಸಹಕರಿಸಿದರು.

ಮಾರ್ ಇವಾನಿಯೋಸ್ ಕಾಲೇಜು: ಚಿತ್ರಕಲಾ ತರಬೇತಿ Read More »

ಕರಾವಳಿ

ಕುಂತೂರು ಮಾರ್ ಇವಾನಿಯೋಸ್ ಕಾಲೇಜಿನಲ್ಲಿ ಶಿಕ್ಷಕ- ರಕ್ಷಕ ಸಂಘದ ಸಭೆ

(ನ್ಯೂಸ್ ಕಡಬ) newskadaba.com ಕಡಬ, ಜು.30. ವಿದ್ಯಾರ್ಥಿಗಳ ಉತ್ತಮ ಶೈಕ್ಷಣಿಕ ಸಾಧನೆಗೆ ಹೆತ್ತವರು ಮತ್ತು ಶಿಕ್ಷಕರ ನಿರಂತರ ಪ್ರೊತ್ಸಾಹ ಅಗತ್ಯ. ವಿದ್ಯಾರ್ಥಿಗಳು ಪ್ರಸಕ್ತ ಸ್ಪರ್ಧಾತ್ಮಕ ಯುಗದಲ್ಲಿ ಸವಾಲುಗಳನ್ನು ಸಮರ್ಥವಾಗಿ ಎದುರಿಸುವಲ್ಲಿ ಶಿಕ್ಷಣ ಸಂಸ್ಥೆಯ ತರಬೇತಿಯೊಂದಿಗೆ ಹೆತ್ತವರ ಸೂಕ್ತ ಮಾರ್ಗದರ್ಶನವೂ ಬೇಕು ಎಂದು ಸಾಮಾಜಿಕ ಕಾರ್ಯಕರ್ತೆ ಜೋಹಾರಾ ನಿಸಾರ್ ಅಹ್ಮದ್ ಹೇಳಿದರು. ಅವರು ಕುಂತೂರು ಮಾರ್ ಇವಾನಿಯೋಸ್ ಕಾಲೇಜಿನ ಶಿಕ್ಷಕ-ರಕ್ಷಕ ಸಂಘದ ಸಭೆಯಲ್ಲಿ ಸಂಪನ್ಮೂಲ ವ್ಯಕ್ತಿಯಾಗಿ ಭಾಗವಹಿಸಿ ಮಾತನಾಡಿದರು. ವಿದ್ಯಾರ್ಥಿಗಳು ಗುರುಹಿರಿಯರಿಗೆ ಗೌರವ ಕೊಡುವುದರೊಂದಿಗೆ ಸಚ್ಚಾರಿತ್ರ್ಯವಂತರಾಗಿ ಉತ್ತಮ ನಡೆ-ನುಡಿಯನ್ನು ಅಳವಡಿಸಿಕೊಳ್ಳಬೇಕು.

ಕುಂತೂರು ಮಾರ್ ಇವಾನಿಯೋಸ್ ಕಾಲೇಜಿನಲ್ಲಿ ಶಿಕ್ಷಕ- ರಕ್ಷಕ ಸಂಘದ ಸಭೆ Read More »

ಕರಾವಳಿ
Scroll to Top