matrupoorna yojane

ಕಳಾರ ಅಂಗನವಾಡಿ ► ಮಾತೃಪೂರ್ಣ ಯೋಜನೆಗೆ ಚಾಲನೆ

(ನ್ಯೂಸ್ ಕಡಬ) newskadaba.com ಕಡಬ,ಅ.4. ಕಳಾರ ಅಂಗನವಾಡಿ ಕೇಂದ್ರದಲ್ಲಿ ಮಾತೃಪೂರ್ಣ ಯೋಜನೆಗೆ ಕಡಬ ಗ್ರಾ.ಪಂ. ಅಧ್ಯಕ್ಷ ಬಾಬು ಮಗೇರ ತುಂಬೆತ್ತಡ್ಕ ಗರ್ಭಿಣಿಯರಿಗೆ ಹಾಗೂ ಬಾಣಂತಿಯರಿಗೆ ಊಟ ಬಡಿಸುವ ಮೂಲಕ ಚಾಲನೆ ನೀಡಿದರು. ಈ ಸಂದರ್ಭದಲ್ಲಿ ಕಡಬ ಜಿ.ಪಂ. ಸದಸ್ಯ ಪಿ.ಪಿ. ವರ್ಗೀಸ್, ಗ್ರಾ.ಪಂ. ಸದಸ್ಯರಾದ ಹಾಜಿ ಕೆ.ಎಂ. ಹನೀಫ್, ಅಶ್ರಫ್ ಶೇಡಿಗುಂಡಿ, ಜಯಂತಿ ಕಳಾರ ಸ.ಹಿ.ಪ್ರಾ.ಶಾಲೆಯ ಮುಖ್ಯಗುರು ಹಮೀದ್, ಗ್ರಾ.ಪಂ. ಕಾರ್ಯದರ್ಶಿ ಭುವನೇಂದ್ರ ಮರ್ದಾಳ, ಅಂಗನವಾಡಿ ಕಾರ್ಯಕರ್ತೆ ಸುಶೀಲ ಸೇರಿದಂತೆ ಪ್ರಮುಖರು ಉಪಸ್ಥಿತರಿದ್ದರು.

ಕಳಾರ ಅಂಗನವಾಡಿ ► ಮಾತೃಪೂರ್ಣ ಯೋಜನೆಗೆ ಚಾಲನೆ Read More »

ಕರಾವಳಿ

ಅಡ್ಡಗದ್ದೆ ಅಂಗನವಾಡಿ ಕೇಂದ್ರದಲ್ಲಿ ಮಾತೃಪೂರ್ಣ ಯೋಜನೆ…

(ನ್ಯೂಸ್ ಕಡಬ) newskadaba.com ಕಡಬ,ಅ.4.  ಅಡ್ಡಗದ್ದೆ ಅಂಗನವಾಡಿ ಕೇಂದ್ರದಲ್ಲಿ ಮಾತೃಪೂರ್ಣ ಯೋಜನೆಗೆ ಕಡಬ ಜಿ.ಪಂ.ಸದಸ್ಯ ಪಿ.ಪಿ.ವರ್ಗೀಸ್ ಯೋಜನೆಗೆ ಚಾಲನೆ ನೀಡಿದರು. ಈ ಸಂದರ್ಭದಲ್ಲಿ ಕಡಬ ಗ್ರಾ.ಪಂ. ಅಧ್ಯಕ್ಷ ಬಾಬು ಮುಗೇರ ತುಂಬೆತ್ತಡ್ಕ,  ಸದಸ್ಯರಾದ ಅಶ್ರಫ್ ಶೇಡಿಗುಂಡಿ, ಜಯಂತಿ, ಕಾರ್ಯದರ್ಶಿ ಭುವನೇಂದ್ರ ಮರ್ದಾಳ ಅಂಗನವಾಡಿ ಕಾರ್ಯಕರ್ತೆ ರುಕ್ಮಿಣಿ ಉಪಸ್ಥಿತರಿದ್ದರು.

ಅಡ್ಡಗದ್ದೆ ಅಂಗನವಾಡಿ ಕೇಂದ್ರದಲ್ಲಿ ಮಾತೃಪೂರ್ಣ ಯೋಜನೆ… Read More »

ಕರಾವಳಿ

ಪಾಲೆತ್ತಡ್ಕ ಅಂಗನವಾಡಿ ► ಗರ್ಭಿಣಿ, ಬಾಣಂತಿಯರಿಗೆ ಊಟ ಬಡಿಸುವ ಮೂಲಕ ಮಾತೃಪೂರ್ಣ ಯೋಜನೆಗೆ ಚಾಲನೆ

(ನ್ಯೂಸ್ ಕಡಬ) newskadaba.com ಕಡಬ,ಅ.4. ಪಾಲೆತ್ತಡ್ಕ ಅಂಗನವಾಡಿ ಕೇಂದ್ರದಲ್ಲಿ ಮಾತೃಪೂರ್ಣ ಯೋಜನೆಗೆ ಮರ್ದಾಳ ಗ್ರಾ.ಪಂ.ಸದಸ್ಯ ಬಾಲವಿಕಾಸ ಸಮಿತಿ ಅಧ್ಯಕ್ಷ ಹರೀಶ್ ಕೋಡಂದೂರು ಗರ್ಭಿಣಿಯರಿಗೆ  ಹಾಗೂ ಬಾಣಂತಿಯರಿಗೆ ಊಟ ಬಡಿಸುವ ಮೂಲಕ ಚಾಲನೆ ಸೋಮವಾರ ನೀಡಿದರು. ಈ ಸಂಧರ್ಭದಲ್ಲಿ ಗ್ರಾ.ಪಂ.ಸದಸ್ಯ ಅಬೂಬಕ್ಕರ್, ಪಾಲೆತ್ತಡ್ಕ ಸ.ಹಿ.ಪ್ರಾ.ಶಾಲೆಯ ಮುಖ್ಯಶಿಕ್ಷಕಿ ರೇಖಾ, ಅಂಗನವಾಡಿ ಕಾರ್ಯಕರ್ತೆ ಪಾರ್ವತಿ, ಸಹಾಯಕಿ ಜಯಂತಿ ರೈ ಉಪಸ್ಥಿತರಿದ್ದರು.

ಪಾಲೆತ್ತಡ್ಕ ಅಂಗನವಾಡಿ ► ಗರ್ಭಿಣಿ, ಬಾಣಂತಿಯರಿಗೆ ಊಟ ಬಡಿಸುವ ಮೂಲಕ ಮಾತೃಪೂರ್ಣ ಯೋಜನೆಗೆ ಚಾಲನೆ Read More »

ಕರಾವಳಿ

ಕೊೖಲ: ಏಣಿತಡ್ಕ(1) ಅಂಗನವಾಡಿಯಲ್ಲಿ ► ಮಾತೃಪೂರ್ಣ ಯೋಜನೆ ಆರಂಭ

(ನ್ಯೂಸ್ ಕಡಬ) newskadaba.com ಕಡಬ,ಅ.4. ರಾಜ್ಯ ಸರಕಾರ ಅನೇಕ ಜನಪರ ಯೋಜನೆಗಳನ್ನು ಜಾರಿಗೊಳಿಸಿದ್ದು, ಮುಖ್ಯವಾಗಿ ಗರ್ಭಿಣಿ, ಬಾಣಂತಿಯರು ಪೌಷ್ಟಿಕಾಂಶವುಳ್ಳ ಆಹಾರವನ್ನು ಸೇವಿಸುವುದರೊಂದಿಗೆ ಆರೋಗ್ಯಪೂರ್ಣ ತಾಯಂದಿರಾಗಿ ಜೀವನ ಸಾಗಿಸಬೇಕೆಂಬ ನಿಲುವಿನೊಂದಿಗೆ ಮಹತ್ವದ ಮಾತೃಪೂರ್ಣ ಯೋಜನೆಯನ್ನು ಜಾರಿಗೆ ತಂದಿದೆ. ಪುತ್ತೂರು ತಾಲೂಕು ಕೊೖಲ ಗ್ರಾಮದ ಏಣಿತಡ್ಕ(1) ಅಂಗನವಾಡಿಯಲ್ಲಿ ಮಾತೃಪೂರ್ಣ ಯೋಜನೆ ಸೋಮವಾರ ಆರಂಭಗೊಂಡಿತ್ತು. ಕೊೖಲ ಗ್ರಾಮ ಪಂಚಾಯಿತಿ ಅಧ್ಯಕ್ಷೆ ಮೀನಾಕ್ಷಿ ಬುಡಲೂರು ಕಾರ್ಯಕ್ರಮಕ್ಕೆ ಚಾಲನೆ ನೀಡಿದರು. ಈ ಸಂದರ್ಭ ಸ್ತ್ರೀ ಶಕ್ತಿ ಸಂಘದ ಪದಾಧಿಕಾರಿಗಳು ಉಪಸ್ಥಿತರಿದ್ದರು. ಅಂಗನವಾಡಿ ಕಾರ್ಯಕರ್ತೆ ವೇದಾವತಿ

ಕೊೖಲ: ಏಣಿತಡ್ಕ(1) ಅಂಗನವಾಡಿಯಲ್ಲಿ ► ಮಾತೃಪೂರ್ಣ ಯೋಜನೆ ಆರಂಭ Read More »

ಕರಾವಳಿ

ಕಲ್ಲುಗುಡ್ಡೆ ಅಂಗನವಾಡಿ ► ಮಹತ್ವಾಕಾಂಕ್ಷಿ ಮಾತೃಪೂರ್ಣಯೋಜನೆಗೆ ಚಾಲನೆ

(ನ್ಯೂಸ್ ಕಡಬ) newskadaba.com ಕಡಬ,ಅ.4. ನೂಜಿಬಾಳ್ತಿಲ ಗ್ರಾಮದ ಕಲ್ಲುಗುಡ್ಡೆ ಅಂಗನವಾಡಿ ಕೇಂದ್ರದಲ್ಲಿ ಕರ್ನಾಟಕ ಸರಕಾರದ ಮಹತ್ವಾಕಾಂಕ್ಷಿ ಯೋಜನೆಯಾದ ಮಾತೃಪೂರ್ಣ ಯೋಜನೆಗೆ ಚಾಲನೆ ನೀಡಲಾಯಿತು. ಕಡಬ ಜಿ.ಪಂ.ಸದಸ್ಯ ಪಿ.ಪಿ ವರ್ಗೀಸ್ ಗರ್ಭಿಣಿ, ಬಾಣಂತಿಯರಿಗೆ ಬಿಸಿಯೂಟ, ಹಾಲು, ಮೊಟ್ಟೆ ನೀಡುವ ಮೂಲಕ ಕಾರ್ಯಕ್ರಮವನ್ನು ಉದ್ಘಾಟಿಸಿ ಮಾತನಾಡಿ ರಾಜ್ಯದ ಮುಖ್ಯಮಂತ್ರಿ ಸಿದ್ದರಾಮಯ್ಯ ಸರಕಾರ ರಾಜ್ಯಾದ್ಯಂತ ನೂರಾರು ಜನಪರ ಯೋಜನೆಗಳನ್ನು ಜಾರಿಗೆ ತರುತ್ತಿದೆ. ನಿರ್ಜೀವ ಜನನ, ರಕ್ತ ಹೀನತೆ ಕಡಿಮೆಗೊಳಿಸುವ ನಿಟ್ಟಿನಲ್ಲಿ ಗರ್ಭಿಣಿ ಬಾಣಂತಿಯರು ಪೌಷ್ಟಿಕಾಂಶವುಳ್ಳ ಆಹಾರವನ್ನು ಸೇವಿಸುವುದರೊಂದಿಗೆ ಆರೋಗ್ಯಪೂರ್ಣ ತಾಯಂದಿರಾಗಿ ಜೀವನ ಸಾಗಿಸಬೇಕೆಂಬ ನಿಲುವಿನೊಂದಿಗೆ

ಕಲ್ಲುಗುಡ್ಡೆ ಅಂಗನವಾಡಿ ► ಮಹತ್ವಾಕಾಂಕ್ಷಿ ಮಾತೃಪೂರ್ಣಯೋಜನೆಗೆ ಚಾಲನೆ Read More »

ಕರಾವಳಿ
Scroll to Top