metro pillar

ಮೆಟ್ರೋ ಪಿಲ್ಲರ್ ಕುಸಿತ ಪ್ರಕರಣ  ➤ ಕೊನೆಗೂ ಕಾರಣ ಪತ್ತೆ..!

(ನ್ಯೂಸ್ ಕಡಬ) newskadaba.com ಬೆಂಗಳೂರು, ಜ.18. ಹೆಣ್ಣೂರು ರಸ್ತೆಯಲ್ಲಿ ನಿರ್ಮಾಣ ಹಂತದ ಪಿಲ್ಲರ್‌ ಕುಸಿದು ತಾಯಿ ಮಗ ಮೃತಪಟ್ಟ ಪ್ರಕರಣಕ್ಕೆ ಸಂಬಂಧಿಸಿದ ವರದಿಯನ್ನು ಬಿಎಂಆರ್‌ಸಿಎಲ್‌ಗೆ ನೀಡುವುದಾಗಿ ಭಾರತೀಯ ವಿಜ್ಞಾನ ಸಂಸ್ಥೆ ತಿಳಿಸಿದೆ. ಈ ಬಗ್ಗೆ ಮಾಧ್ಯಮಗಳ ಜೊತೆ ಮಾತನಾಡಿರುವ ಐಐಎಸ್‌ಸಿ ತಜ್ಞ ಚಂದ್ರಕಿಶನ್‌, ಸ್ಥಳಕ್ಕೆ ತೆರಳಿ ಪರಿಶೀಲನೆ ನಡೆಸಲಾಗಿದೆ. ದುರಂತದ ಹತ್ತು ದಿನಗಳ ಮೊದಲಿನ ದಾಖಲೆಗಳನ್ನು ಪಡೆದಿದ್ದೇವೆ. ಜತೆಗೆ ಪಿಲ್ಲರ್‌ಗೆ ಬಳಸಲಾದ ಕಬ್ಬಿಣ, ಸ್ಟೀಲನ್ನು ಪ್ರಯೋಗಕ್ಕೆ ಒಳಪಡಿಸಲಾಗಿದೆ. ಶೇ.80ರಷ್ಟು ತಾಂತ್ರಿಕ ತನಿಖೆ ಪೂರ್ಣಗೊಂಡಿದೆ ಎಂದು ತಿಳಿಸಿದ್ದಾರೆ. ಜತೆಗೆ […]

ಮೆಟ್ರೋ ಪಿಲ್ಲರ್ ಕುಸಿತ ಪ್ರಕರಣ  ➤ ಕೊನೆಗೂ ಕಾರಣ ಪತ್ತೆ..! Read More »

ಕರ್ನಾಟಕ

ಬೆಂಗಳೂರು ಮೆಟ್ರೋ ಪಿಲ್ಲರ್ ಕುಸಿತ ಪ್ರಕರಣ ➤ ಸ್ವಯಂಪ್ರೇರಿತ ದೂರು ದಾಖಲಿಸಿಕೊಂಡ ಕರ್ನಾಟಕ ಹೈಕೋರ್ಟ್..!                                                

(ನ್ಯೂಸ್ ಕಡಬ) newskadaba.com  ಬೆಂಗಳೂರು, ಜ.13. ಮೆಟ್ರೋ ಪಿಲ್ಲರ್ ಕುಸಿದು ತಾಯಿ-ಮಗು ಸಾವನ್ನಪ್ಪಿದ ಪ್ರಕರಣಕ್ಕೆ ಸಂಬಂಧಿಸಿದಂತೆ ಕರ್ನಾಟಕ ಹೈಕೋರ್ಟ್ ಸ್ವಯಂಪ್ರೇರಿತ ದೂರು ದಾಖಲಿಸಿಕೊಂಡಿದೆ. ಬೆಂಗಳೂರಿನ ನಾಗವಾರದ ಹೆಣ್ಣೂರು ಕ್ರಾಸ್‌ ಬಳಿ ಮೆಟ್ರೊ ಪಿಲ್ಲರ್‌ ನಿರ್ಮಾಣಕ್ಕಾಗಿ ಅಳವಡಿಸಿದ್ದ ಕಬ್ಬಿಣದ ಚೌಕಟ್ಟು ಈಚೆಗೆ ಕುಸಿದು ಬಿದ್ದು ತಾಯಿ ಮತ್ತು ಗಂಡು ಮಗು ಸಾವನ್ನಪ್ಪಿದ ಪ್ರಕರಣ ಹಾಗೂ ಬ್ರಿಗೇಡ್‌ ರಸ್ತೆಯಲ್ಲಿ ಗುಂಡಿ ಬಿದ್ದಿರುವ ವಿಚಾರದ ಕುರಿತು ಮಾಧ್ಯಮಗಳಲ್ಲಿ ಪ್ರಕಟವಾಗಿರುವ ಸುದ್ದಿಯನ್ನು ಪರಿಗಣಿಸಿ ಕರ್ನಾಟಕ ಹೈಕೋರ್ಟ್ ಸ್ವಯಂಪ್ರೇರಿತವಾಗಿ ಸಾರ್ವಜನಿಕ ಹಿತಾಸಕ್ತಿ ಮೊಕದ್ದಮೆ ದಾಖಲಿಸಿಕೊಂಡಿದೆ

ಬೆಂಗಳೂರು ಮೆಟ್ರೋ ಪಿಲ್ಲರ್ ಕುಸಿತ ಪ್ರಕರಣ ➤ ಸ್ವಯಂಪ್ರೇರಿತ ದೂರು ದಾಖಲಿಸಿಕೊಂಡ ಕರ್ನಾಟಕ ಹೈಕೋರ್ಟ್..!                                                 Read More »

ಕರ್ನಾಟಕ, ಕ್ರೈಮ್ ನ್ಯೂಸ್

ನಮ್ಮ ಮೆಟ್ರೋ ಪಿಲ್ಲರ್ ಕುಸಿತ ದುರಂತ..! ➤ 5-6 ದಿನಗಳಲ್ಲಿ ಐಐಎಸ್ಸಿಯಿಂದ ವರದಿ ಸಲ್ಲಿಕೆ

(ನ್ಯೂಸ್ ಕಡಬ) newskadaba.com ಬೆಂಗಳೂರು, ಜ.12. ನಾಗಾವರದ ಮೆಟ್ರೋ ಪಿಲ್ಲರ್ ಕುಸಿತ ದುರಂತ ಪ್ರಕರಣ ಸಂಬಂಧ ತನಿಖೆ ನಡೆಸುತ್ತಿರುವ ಬೆಂಗಳೂರಿನ ಐಐಎಸ್ಸಿ 5-6 ದಿನಗಳಲ್ಲಿ ಸರ್ಕಾರಕ್ಕೆ ವರದಿ ಸಲ್ಲಿಸಲಿದೆ ಎಂದು ತಿಳಿದುಬಂದಿದೆ. ತನಿಖೆ ನಡೆಯುತ್ತಿರುವ ಭಾರತೀಯ ವಿಜ್ಞಾನ ಸಂಸ್ಥೆಯ ಉನ್ನತ ವಿಜ್ಞಾನಿಯೊಬ್ಬರು ಮಾತನಾಡಿ, ಬಹಳ ದಿನಗಳಿಂದ ಪಿಲ್ಲರ್ ನಿಲ್ಲಿಸಿದ್ದರಿಂದ ಇದು ದುರಂತಕ್ಕೆ ಕಾರಣವಾಗಿರಬಹುದು ಎಂದು ಹೇಳಿದ್ದಾರೆ. ಈ ನಡುವೆ ಐಐಎಸ್ಸಿಯ ಸಿವಿಲ್ ಎಂಜಿನಿಯರಿಂಗ್ ವಿಭಾಗದ ಪ್ರಾಧ್ಯಾಪಕ ಪ್ರೊ.ಜೆ.ಎಂ.ಚಂದ್ರ ಕಿಶನ್ ಅಪಘಾತ ಸಂಭವಿಸಿದ ಎಚ್ಬಿಆರ್ ಲೇಔಟ್ನ ಸ್ಥಳಕ್ಕೆ ಭೇಟಿ

ನಮ್ಮ ಮೆಟ್ರೋ ಪಿಲ್ಲರ್ ಕುಸಿತ ದುರಂತ..! ➤ 5-6 ದಿನಗಳಲ್ಲಿ ಐಐಎಸ್ಸಿಯಿಂದ ವರದಿ ಸಲ್ಲಿಕೆ Read More »

ಕರ್ನಾಟಕ

ನಿರ್ಮಾಣ ಹಂತದ ಮೆಟ್ರೋ ಪಿಲ್ಲರ್ ಬಿದ್ದು ತಾಯಿ, ಮಗು ಮೃತ್ಯು

(ನ್ಯೂಸ್ ಕಡಬ)newskadaba.com  ಬೆಂಗಳೂರು, ಜ.10. ಬೆಂಗಳೂರಿನ ನಾಗವಾರ ಬಳಿ ನಿರ್ಮಾಣ ಹಂತದ ಮೆಟ್ರೋ ಪಿಲ್ಲರ್ ದಿಢೀರ್ ಕುಸಿದುಬಿದ್ದಿದ್ದು, ಪರಿಣಾಮವಾಗಿ ಘಟನೆಯಲ್ಲಿ ಗಂಭೀರವಾಗಿ ಗಾಯಗೊಂಡಿದ್ದ ತಾಯಿ ಹಾಗೂ ಮಗು ಮೃತಪಟ್ಟಿದ್ದಾರೆಂದು ತಿಳಿದುಬಂದಿದೆ. ಮೃತರನ್ನು ತೇಜಸ್ವಿನಿ (35) ಹಾಗೂ ವಿಹಾನ್ (2 ವರ್ಷ 6 ತಿಂಗಳು) ಎಂದು ಗುರುತಿಸಲಾಗಿದೆ. ನಾಗವಾರ ರಿಂಗ್ ರೋಡ್‍ನ ಎಚ್‍ಬಿಆರ್ ಲೇಔಟ್ ಬಳಿ ಮೆಟ್ರೋ ಕಾಮಗಾರಿ ನಡೆಯುತ್ತಿತ್ತು. ಕಾಮಗಾರಿ ವೇಳೆ ಪಿಲ್ಲರ್‌ಗೆ ನಿಲ್ಲಿಸಿದಂತಹ ರಾಡ್‌ಗಳು ಏಕಾಏಕಿ ರಸ್ತೆಗೆ ಬಿದ್ದಿದೆ. ಈ ವೇಳೆ ಅದೇ ರಸ್ತೆಯಲ್ಲಿ ಬೈಕ್‌ನಲ್ಲಿ ಪ್ರಯಾಣಿಸುತ್ತಿದ್ದ

ನಿರ್ಮಾಣ ಹಂತದ ಮೆಟ್ರೋ ಪಿಲ್ಲರ್ ಬಿದ್ದು ತಾಯಿ, ಮಗು ಮೃತ್ಯು Read More »

ಕರ್ನಾಟಕ, ಕ್ರೈಮ್ ನ್ಯೂಸ್
Scroll to Top