Minister Angara

ಫೆಬ್ರವರಿಯಲ್ಲಿ ಸಿಎಂ ಬೊಮ್ಮಾಯಿ ಕಡಬ,ಸುಬ್ರಹ್ಮಣ್ಯಕ್ಕೆ ಆಗಮನ ➤  ಸಚಿವ ಎಸ್.ಅಂಗಾರ

(ನ್ಯೂಸ್ ಕಡಬ)newskadaba.com ಕಡಬ, ಜ.17. ಅಭಿವೃದ್ಧಿ ಕಾಮಗಾರಿಗಳ ಚಾಲನೆ ನೀಡಲು ಹಾಗೂ ಉದ್ಘಾಟನೆ ನೆರವೇರಿಸಲು ರಾಜ್ಯದ ಮುಖ್ಯ ಮಂತ್ರಿ ಬಸವರಾಜ್ ಬೊಮ್ಮಾಯಿ ಅವರು ಫೆಬ್ರವರಿ ತಿಂಗಳ 28ರ ಮೊದಲು ಕುಕ್ಕೆ ಸುಬ್ರಹ್ಮಣ್ಯ ಹಾಗೂ ಕಡಬಕ್ಕೆ ಆಗಮಿಸಲಿದ್ದಾರೆ ಎಂದು  ಸಚಿವ ಎಸ್.ಅಂಗಾರ ಅವರು ಸುಬ್ರಹ್ಮಣ್ಯದಲ್ಲಿ  ನಡೆದ ಪತ್ರಿಕಾ ಗೋಷ್ಠಿಯಲ್ಲಿ ತಿಳಿಸಿದ್ದಾರೆ ಎಂದು ವರದಿ ತಿಳಿಸಿದೆ. ಕುಕ್ಕೆ ಶ್ರೀ ಸುಬ್ರಹ್ಮಣ್ಯ ದೇವಸ್ಥಾನದ 300 ಕೋಟಿ ವೆಚ್ಚದ ಮಾಸ್ಟರ್ ಪ್ಲಾನ್ ಕಾಮಗಾರಿಗೆ ಸಿಎಂ ಬೊಮ್ಮಾಯಿ ಶಂಕುಸ್ಥಾಪನೆ ನೆರವೇರಿಸಲಿದ್ದಾರೆ. ಫೆಬ್ರವರಿ 28ರಂದು ಅಥವಾ ಅದಕ್ಕಿಂತ ಮೊದಲು ಸಿಎಂ ಕಾರ್ಯಕ್ರಮ ನಡೆಯಲಿದೆ. ಕಡಬ ತಾಲೂಕಿನಲ್ಲಿ ನಿರ್ಮಾಣಗೊಂಡಿರುವ ಕಡಬ ತಾಲೂಕು ಪಂಚಾಯತ್ ಕಟ್ಟಡ, ಕಂದಾಯ ಇಲಾಖೆಗೆ ಸಂಬಂಧಿಸಿದಂತೆ ಮಿನಿ ವಿಧಾನ ಸೌಧ, ಪಶುಪಾಲನಾ ಇಲಾಖೆಯ ಡಿಪ್ಲೊಮಾ ಕಾಲೇಜು ಇವುಗಳ ಉದ್ಘಾಟನೆಯನ್ನು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ನೆರವೇರಿಸಲಿದ್ದಾರೆ ಎನ್ನಲಾಗಿದೆ.  ಈ ಬಗ್ಗೆ ಈಗಾಗಲೇ ಮುಖ್ಯಮಂತ್ರಿಗಳಿಗೆ ಪತ್ರ ಬರೆಯಲಾಗಿದೆ. ಅವರು ದಿನಾಂಕ ನಿಗದಿ ಮಾಡಿದ ಕೂಡಲೇ ಪೂರ್ವಭಾವಿ ಸಭೆ, ಸಿದ್ಧತೆಗಳನ್ನು ನಡೆಸಲಾಗುವುದು ಎಂದು ಸಚಿವರು ತಿಳಿಸಿದರು.    

ಫೆಬ್ರವರಿಯಲ್ಲಿ ಸಿಎಂ ಬೊಮ್ಮಾಯಿ ಕಡಬ,ಸುಬ್ರಹ್ಮಣ್ಯಕ್ಕೆ ಆಗಮನ ➤  ಸಚಿವ ಎಸ್.ಅಂಗಾರ Read More »

ಕರಾವಳಿ, ಕರ್ನಾಟಕ

ಕಡಬ: ಮನವಿ ಕೊಟ್ಟ ಕೂಡಲೇ ಕೆಲಸ ಆಗುವುದಿಲ್ಲ, ಸರಕಾರ ಹಣ ಕೊಡಬೇಕು ➤ ಸಚಿವ ಎಸ್.ಅಂಗಾರ…!!!                                        

(ನ್ಯೂಸ್ ಕಡಬ) newskadaba.com ಕಡಬ, ಡಿ. 05. ಕಾಮಗಾರಿಗಳ ಶಿಲಾನ್ಯಾಸಕ್ಕೆ ಆಗಮಿಸಿದ ಮೀನುಗಾರಿಕಾ ಸಚಿವ ಎಸ್.ಅಂಗಾರ ಅವರಿಗೆ ಗ್ರಾಮಸ್ಥರು ಮನವಿ ಕೊಟ್ಟಾಗ ಸಚಿವರ ಪ್ರತಿಕ್ರಿಯೆ ಕಂಡು ಗ್ರಾಮಸ್ಥರು ತರಾಟೆಗೆ ತೆಗೆದುಕೊಂಡ ಘಟನೆ ಬಲ್ಯ ಗ್ರಾಮದಲ್ಲಿ ಸಂಭವಿಸಿದೆ. ಮನವಿ ಕೊಟ್ಟ ಕೂಡಲೇ ಕೆಲಸ ಆಗುವುದಿಲ್ಲ. ಸರಕಾರ ಹಣ ಕೊಡಬೇಕು. ನೀವು ಮನವಿ ಕೊಡಿ, ಬಿಡಿ ಎಂದು ಶಾಸಕ ಅಂಗಾರ ಹೇಳಿದ್ದಾರೆ. ಇದರಿಂದ ಜನರು ಕೋಪಗೊಂಡು ಸ್ಥಳದಿಂದ ತೆರಳಿ ಸಚಿವರಿಗೆ ತರಾಟೆಗೆ ತೆಗೆದುಕೊಂಡಿದ್ದಾರೆ ಎನ್ನಲಾಗಿದೆ. ಇದರ ನಡುವೆ ಬಲ್ಯ ಗ್ರಾಮದ

ಕಡಬ: ಮನವಿ ಕೊಟ್ಟ ಕೂಡಲೇ ಕೆಲಸ ಆಗುವುದಿಲ್ಲ, ಸರಕಾರ ಹಣ ಕೊಡಬೇಕು ➤ ಸಚಿವ ಎಸ್.ಅಂಗಾರ…!!!                                         Read More »

ಕರಾವಳಿ, ಕರ್ನಾಟಕ
Scroll to Top