money collected

ಕಾಸರಗೋಡು: ದಾಖಲೆಗಳಿಲ್ಲದೆ ಹಣ ಸಾಗಾಟ ➤ ಆರೋಪಿ ಸಹಿತ 41.78 ಲಕ್ಷ ರೂ ವಶಕ್ಕೆ

(ನ್ಯೂಸ್ ಕಡಬ) newskadaba.com ಕಾಸರಗೋಡು, ಜು. 05. ದಾಖಲೆಗಳಿಲ್ಲದೆ ಸಾಗಾಟ ಮಾಡುತ್ತಿದ್ದ ಸುಮಾರು 41,78,000 ರೂ. ವನ್ನು ಮಂಜೇಶ್ವರ ಅಬಕಾರಿ ದಳದ ಸಿಬ್ಬಂದಿಗಳು ವಶಪಡಿಸಿ ಕೊಂಡ ಘಟನೆ ವರದಿಯಾಗಿದೆ. ಬಂಧಿತನನ್ನು ವಿನಾಯಕ ಶೆಟ್ಟಿ ಎಂದು ಗುರುತಿಸಲಾಗಿದೆ. ಈತನನ್ನು ಮಂಗಳೂರಿನಿಂದ ಕಾಸರಗೋಡಿಗೆ ಬರುತ್ತಿದ್ದ ಕರ್ನಾಟಕ ಕೆಎಸ್ಆರ್.ಟಿಸಿ ಬಸ್ ನಲ್ಲಿ ಪ್ರಯಾಣಿಸುತ್ತಿದ್ದ ವೇಳೆ ವಶಕ್ಕೆ ತೆಗೆದು ಕೊಳ್ಳಲಾಗಿದೆ. ಹೆಚ್ಚಿನ ವಿಚಾರಣೆಗಾಗಿ ನಗದು ಹಾಗೂ ಆರೋಪಿಯನ್ನು ಮಂಜೇಶ್ವರ ಠಾಣಾ ಪೊಲೀಸರಿಗೆ ಹಸ್ತಾಂತರಿಸಿದ್ದಾರೆ.

ಕಾಸರಗೋಡು: ದಾಖಲೆಗಳಿಲ್ಲದೆ ಹಣ ಸಾಗಾಟ ➤ ಆರೋಪಿ ಸಹಿತ 41.78 ಲಕ್ಷ ರೂ ವಶಕ್ಕೆ Read More »

ಕ್ರೈಮ್ ನ್ಯೂಸ್, ರಾಷ್ಟ್ರೀಯ ನ್ಯೂಸ್

ಲಾರಿ ತಡೆದು ಹಣ ವಸೂಲಿ ಆರೋಪ ➤ ಎಎಸ್ಐ ಸಹಿತ ಇಬ್ಬರು ಪೊಲೀಸರ ಅಮಾನತು

(ನ್ಯೂಸ್ ಕಡಬ) newskadaba.com ತುಮಕೂರು, ಜೂ. 09. ರಾಷ್ಟ್ರೀಯ ಹೆದ್ದಾರಿಗಳಲ್ಲಿ ಲಾರಿಗಳನ್ನು ತಡೆದು ಹಣ ವಸೂಲಿ ಮಾಡುತ್ತಿದ್ದ  ಆರೋಪದಲ್ಲಿ ಎಎಸ್ಐ ಸಹಿತ ಇಬ್ಬರು ಪೊಲೀಸರನ್ನು ಅಮಾನತು ಮಾಡಿರುವ ಕುರಿತು ವರದಿಯಾಗಿದೆ. ಕಳ್ಳಂಬೆಳ್ಳ ಠಾಣೆಯ ಎಎಸ್ಐ ಚಿದಾನಂದ ಸ್ವಾಮಿ ಮತ್ತು ಜೀಪು ಚಾಲಕ ಚಿಕ್ಕಹನುಮಯ್ಯ ಎಂಬವರು ಲಾರಿಗಳನ್ನು ತಡೆದು ಹಣ ವಸೂಲಿ ಮಾಡುತ್ತಿರುವ ಬಗ್ಗೆ ಶಿರಾ ಠಾಣಾ ಇನ್ಸ್ಪೆಕ್ಟರ್ ನೀಡಿರುವ ದೂರಿನಂತೆ ಎಸ್ಪಿ ರಾಹುಲ್ ಕುಮಾರ್ ಇಬ್ಬರನ್ನು ಅಮಾನತು ಮಾಡಿ ಆದೇಶಿಸಿದ್ದಾರೆ.

ಲಾರಿ ತಡೆದು ಹಣ ವಸೂಲಿ ಆರೋಪ ➤ ಎಎಸ್ಐ ಸಹಿತ ಇಬ್ಬರು ಪೊಲೀಸರ ಅಮಾನತು Read More »

ಕರ್ನಾಟಕ, ಬ್ರೇಕಿಂಗ್ ನ್ಯೂಸ್
Scroll to Top