Muda case

ಮುಡಾ ಪ್ರಕರಣದಲ್ಲಿ ಸಿಎಂ ಪತ್ನಿಗೆ ಬಿಗ್‌ ರಿಲೀಫ್‌

(ನ್ಯೂಸ್ ಕಡಬ) newskadaba.com, ಜು. 21. ಬೆಂಗಳೂರು: ಮೈಸೂರು ನಗರಾಭಿವೃದ್ಧಿ ಪ್ರಾಧಿಕಾರ (ಮುಡಾ)ದಲ್ಲಿನ ಅಕ್ರಮ ಸೈಟ್ ಹಂಚಿಕೆ ಪ್ರಕರಣಕ್ಕೆ ಸಂಬಂಧಿಸಿದಂತೆ ಸಿಎಂ ಸಿದ್ದರಾಮಯ್ಯ ಅವರ ಪತ್ನಿ ಪಾರ್ವತಿಗೆ ಬಿಗ್‌ ರಿಲೀಫ್‌ ಸಿಕ್ಕಿದೆ. ಅಕ್ರಮ ಸೈಟ್ ಹಂಚಿಕೆ ಪ್ರಕರಣಕ್ಕೆ ಸಂಬಂಧಪಟ್ಟಂತೆ ಹೈಕೋರ್ಟ್ ಆದೇಶ ಪ್ರಶ್ನಿಸಿ ಜಾರಿ ನಿರ್ದೇಶನಾಲಯ ಸುಪ್ರೀಂ ಕೋರ್ಟ್‌ಗೆ ಅರ್ಜಿ ಸಲ್ಲಿಸಿತ್ತು. ವಿಚಾರಣೆ ನಡೆಸಿದ ಕೋರ್ಟ್‌ ಅರ್ಜಿಯನ್ನು ವಜಾಗೊಳಿಸಿದೆ. ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಪತ್ನಿ ಬಿ.ಎಂ. ಪಾರ್ವತಿ ಮತ್ತು ಸಿದ್ದರಾಮಯ್ಯ ಅವರ ಆಪ್ತ ಹಾಗೂ ಸಚಿವ ಬೈರತಿ […]

ಮುಡಾ ಪ್ರಕರಣದಲ್ಲಿ ಸಿಎಂ ಪತ್ನಿಗೆ ಬಿಗ್‌ ರಿಲೀಫ್‌ Read More »

ಕರ್ನಾಟಕ, ಬ್ರೇಕಿಂಗ್ ನ್ಯೂಸ್

ಮುಡಾ ಪ್ರಕರಣದಲ್ಲಿ ಸಿಎಂಗೆ ಮತ್ತೆ ಸಂಕಷ್ಟ: ಲೋಕಾಯುಕ್ತ ಪೊಲೀಸರ ಬಿ ರಿಪೋರ್ಟ್ ಪ್ರಶ್ನಿಸಿ ED ಅರ್ಜಿ

(ನ್ಯೂಸ್ ಕಡಬ) newskadaba.com , ಏ.02 : ಬೆಂಗಳೂರು: ಮುಡಾ ನಿವೇಶನ ಹಂಚಿಕೆ ಪ್ರಕರಣಕ್ಕೆ ಸಂಬಂಧಿಸಿದಂತೆ ಮುಖ್ಯಮಂತ್ರಿ ಸಿದ್ದರಾಮಯ್ಯ ಮತ್ತು ಇತರರಿಗೆ ಮತ್ತೆ ಸಂಕಷ್ಟ ಎದುರಾಗಿದ್ದು, ಪ್ರಕರಣ ಸಂಬಂಧ ಲೋಕಾಯುಕ್ತ ಪೊಲೀಸರು ಸಲ್ಲಿಸಿದ ಬಿ ರಿಪೋರ್ಟ್ ಅನ್ನು ಜಾರಿ ನಿರ್ದೇಶನಾಲಯ (ED) ಪ್ರಶ್ನಿಸಿದೆ. ಲೋಕಾಯುಕ್ತ ಪೊಲೀಸರ ಬಿ ರಿಪೋರ್ಟ್ ಪ್ರಶ್ನಿಸಿ ಸಂಸದರು ಮತ್ತು ಶಾಸಕರ ವಿಶೇಷ ನ್ಯಾಯಾಲಯದಲ್ಲಿ ಇಡಿ ಮಂಗಳವಾರ ತಕರಾರು ಅರ್ಜಿಯನ್ನು ಸಲ್ಲಿಸಿದೆ. ಕೇಂದ್ರ ತನಿಖಾ ಸಂಸ್ಥೆಯು ತನ್ನ ಅರ್ಜಿಯಲ್ಲಿ PMLA-2002ರ ಉದ್ದೇಶ ಮತ್ತು ಕಾರಣಗಳನ್ನು

ಮುಡಾ ಪ್ರಕರಣದಲ್ಲಿ ಸಿಎಂಗೆ ಮತ್ತೆ ಸಂಕಷ್ಟ: ಲೋಕಾಯುಕ್ತ ಪೊಲೀಸರ ಬಿ ರಿಪೋರ್ಟ್ ಪ್ರಶ್ನಿಸಿ ED ಅರ್ಜಿ Read More »

ಕರ್ನಾಟಕ, ಬ್ರೇಕಿಂಗ್ ನ್ಯೂಸ್

ಮುಡಾ ಹಗರಣ: ಸಿದ್ದರಾಮಯ್ಯ ಪತ್ನಿ ವಿರುದ್ಧ ಮತ್ತೊಂದು ಸಿವಿಲ್ ಕೇಸ್ ದಾಖಲು

(ನ್ಯೂಸ್ ಕಡಬ) newskadaba.com ಬೆಂಗಳೂರು, ನ. 27.  ಮುಖ್ಯಮಂತ್ರಿ ಸಿದ್ದರಾಮಯ್ಯ ಅವರಿಗೆ ಉರುಳಾಗಿರುವ ಮೈಸೂರು ನಗರಾಭಿವೃದ್ಧಿ ಪ್ರಾಧಿಕಾರ ಹಗರಣ ಮತ್ತೊಂದು ತಿರುವು ಪಡೆದುಕೊಂಡಿದೆ. ಜಮೀನು ಮಾಲೀಕ ದೇವರಾಜು ವಿರುದ್ಧ ಅಣ್ಣನ ಮಗಳು ಜಮುನಾ ಮೈಸೂರಿನ ಜೆಎಂಎಫ್​ಸಿ ನ್ಯಾಯಾಲಯದಲ್ಲಿ ದಾವೆ ಹೂಡಿದ್ದಾರೆ. ಜಮುನಾ ಅವರು ದೇವಾರಜು ಅವರ ಅಣ್ಣ ಮೈಲಾರಯ್ಯ ಅವರ ಮಗಳು. ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಪತ್ನಿ ಪಾರ್ವತಿಯವರ ಹೆಸರಿನಲ್ಲಿರುವ ಜಮೀನು ದೇವರಾಜು ಅವರದ್ದು ಅಲ್ಲ, ಬದಲಿಗೆ ನಮ್ಮ ತಂದೆ ಮೈಲಾರಯ್ಯ ಅವರಿಗೆ ಸೇರಿದ್ದು ಎಂದು ಜಮುನಾ

ಮುಡಾ ಹಗರಣ: ಸಿದ್ದರಾಮಯ್ಯ ಪತ್ನಿ ವಿರುದ್ಧ ಮತ್ತೊಂದು ಸಿವಿಲ್ ಕೇಸ್ ದಾಖಲು Read More »

ಕರ್ನಾಟಕ

ಲೋಕಾಯುಕ್ತ: ಇನ್ನು ಯಾವುದೇ ಕ್ಷಣದಲ್ಲಿ ಸಿದ್ಧರಾಮಯ್ಯರಿಗೆ ಲೋಕಾಯುಕ್ತ ನೋಟಿಸ್ ರವಾನಿಸಬಹುದು

(ನ್ಯೂಸ್ ಕಡಬ) newskadaba.com ಅ.26,ಬೆಂಗಳೂರು: ಮೂಡಾದಲ್ಲಿ ಆಕ್ರಮ ನಿವೇಶನ ಹಂಚಿಕೆ ಪ್ರಕರಣಕ್ಕೆ ಸಂಬಂಧಿಸಿದಂತೆ ಪಾರ್ವತಮ್ಮ ಅವರನ್ನು ವಿಚಾರಣೆ ನಡೆಸಿದ ಬೆನ್ನಲ್ಲೇ, ಇದೀಗ ಲೋಕಾಯುಕ್ತ ಪೊಲೀಸರು ಸಿದ್ದರಾಮಯ್ಯ ಅವರನ್ನು ವಿಚಾರಣೆಗೆ ಹಾಜರಾಗುವಂತೆ ಯಾವುದೇ ಕ್ಷಣದಲ್ಲಾದರೂ ನೋಟೀಸ್ ನೀಡುವ ಸಾಧ್ಯತೆ ಇದೆ. ಈ ಪ್ರಕರಣದಲ್ಲಿ ಸ್ವತಃ ಸಿದ್ದರಾಮಯ್ಯ ಅವರೇ ಮೊದಲ ಆರೋಪಿಯಾಗಿರುವ ಹಿನ್ನಲೆಯಲ್ಲಿ ಪೊಲೀಸರು ಮುಂದಿನ ವಾರ ವಿಚಾರಣೆಗೆ ಬರುವಂತೆ ನೋಟೀಸ್ ನೀಡಲು ಸಜ್ಜಾಗಿದ್ದಾರೆ. ಮುಡಾ ಕೇಸ್ನಲ್ಲಿ ಈಗಾಗಲೇ ಎ2, ಎ3 ಮತ್ತು ಎ4 ವಿಚಾರಣೆ ನಡೆಸಲಾಗಿದೆ. ಈಗ ಬಾಕಿ

ಲೋಕಾಯುಕ್ತ: ಇನ್ನು ಯಾವುದೇ ಕ್ಷಣದಲ್ಲಿ ಸಿದ್ಧರಾಮಯ್ಯರಿಗೆ ಲೋಕಾಯುಕ್ತ ನೋಟಿಸ್ ರವಾನಿಸಬಹುದು Read More »

ಕರ್ನಾಟಕ, ಬ್ರೇಕಿಂಗ್ ನ್ಯೂಸ್

ಮುಡಾ ಹಗರಣ- ಎಫ್ಐಆರ್ ದಾಖಲು; ಸಿದ್ದರಾಮಯ್ಯ ಎ1 ಆರೋಪಿ..!?

(ನ್ಯೂಸ್ ಕಡಬ) newskadaba.com ಸೆ. 27. ಲೋಕಾಯುಕ್ತ ಬಳಿಕ ಮುಡಾ ಹಗರಣದಲ್ಲಿ ಸಿಎಂ ವಿರುದ್ದ ಜನಪ್ರತಿನಿಧಿಗಳ ವಿಶೇಷ ಕೋರ್ಟ್ ಕೂಡಾ ಸಿಎಂ ಸಿದ್ಧರಾಮಯ್ಯ ವಿರುದ್ಧ ಎಫ್‌ಐಆರ್ ದಾಖಲಿಸಿ ತನಿಖೆ ನಡೆಸುವಂತೆ ಆದೇಶಿಸಿದ್ದು, ಈ ಬೆನ್ನಲ್ಲೇ ಕೋರ್ಟ್ ಆದೇಶದಂತೆ ಸಿಎಂ ಸಿದ್ಧರಾಮಯ್ಯ ವಿರುದ್ಧ ಎ1 ಆರೋಪಿಯಾಗಿ ಮುಡಾ ಹಗರಣದಲ್ಲಿ ಎಫ್‌ಐಆರ್ ದಾಖಲಾಗಿರುವ ಕುರಿತು ವರದಿಯಾಗಿದೆ. ವರದಿಯ ಪ್ರಕಾರ ಸಿಎಂ ಎ1 ಆರೋಪಿಯಾದರೆ ಅವರ ಪತ್ನಿ ಪಾರ್ವತಿ ಎ2 ಆರೋಪಿಯಾಗಿದ್ದಾರೆ. ಸಿದ್ಧರಾಮಯ್ಯರವರ ಭಾಮೈದ ಮಲ್ಲಿಕಾರ್ಜನ ಸ್ವಾಮಿ ಎ3 ಆರೋಪಿಯಾದರೆ, ಎ4

ಮುಡಾ ಹಗರಣ- ಎಫ್ಐಆರ್ ದಾಖಲು; ಸಿದ್ದರಾಮಯ್ಯ ಎ1 ಆರೋಪಿ..!? Read More »

ಕರ್ನಾಟಕ, ಬ್ರೇಕಿಂಗ್ ನ್ಯೂಸ್

ನಾನು ರಾಜೀನಾಮೆ ಕೊಡುವ ಪ್ರಮೇಯವೇ ಇಲ್ಲ- ಸಿಎಂ ಮರು ಸ್ಪಷ್ಟನೆ

(ನ್ಯೂಸ್ ಕಡಬ) newskadaba.com ಸೆ. 26. ನಾವು ಯಾವುದೇ ಕಾರಣಕ್ಕೂ ರಾಜೀನಾಮೆ ಕೊಡಲ್ಲ ಎಂದು ಸಿಎಂ ಸಿದ್ದರಾಮಯ್ಯ ಮರು ಸ್ಪಷ್ಟನೆ ನೀಡಿರುವ ಕುರಿತು ವರದಿಯಾಗಿದೆ. ಸಿಎಂ ರಾಜೀನಾಮೆ ನೀಡಬೇಕೆಂದು ಆಗ್ರಹಿಸಿ ಬಿಜೆಪಿ ನಡೆಸುತ್ತಿರುವ ಪ್ರತಿಭಟನೆಯನ್ನುದ್ದೇಶಿಸಿ ವಿಧಾನಸೌಧದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಸಿಎಂ ಸಿದ್ದರಾಮಯ್ಯ, ಬಿಜೆಪಿಗರು ಕೇಳಿದ ಕೂಡಲೇ ನಾನಿ ಯಾಕೆ ರಾಜೀನಾಮೆ ನೀಡಬೇಕು? ನಾವು ಯಾವುದೇ ಕಾರಣಕ್ಕೂ ರಾಜೀನಾಮೆ ಕೊಡಲ್ಲ ಎಂದು ಸಿಎಂ ಸಿದ್ದರಾಮಯ್ಯ ಮರು ಸ್ಪಷ್ಟನೆ ನೀಡಿದ್ದಾರೆ. ನಾನು ಯಾವುದೇ ತಪ್ಪು ಮಾಡಿಲ್ಲ, ಮಾಡುವುದೂ ಇಲ್ಲ. ನಾನು

ನಾನು ರಾಜೀನಾಮೆ ಕೊಡುವ ಪ್ರಮೇಯವೇ ಇಲ್ಲ- ಸಿಎಂ ಮರು ಸ್ಪಷ್ಟನೆ Read More »

ಕರ್ನಾಟಕ

ಮುಡಾ ಪ್ರಕರಣ- ವಿಚಾರಣೆಗೆ ಹಾಜರಾಗುವಂತೆ ಮುಡಾ ಅಧಿಕಾರಿಗಳಿಗೆ ಲೋಕಾಯುಕ್ತ ನೋಟಿಸ್

(ನ್ಯೂಸ್ ಕಡಬ) newskadaba.com ಬೆಂಗಳೂರು, ಸೆ. 10. ಭಾರೀ ವಿವಾದಕ್ಕೆ ಕಾರಣವಾಗಿರುವ ಮೈಸೂರು ನಗರಾಭಿವೃದ್ಧಿ ಪ್ರಾಧಿಕಾರದ ಅಕ್ರಮ ನಿವೇಶನ ಹಂಚಿಕೆ ಪ್ರಕರಣಕ್ಕೆ ಸಂಬಂಧಿಸಿ ಮುಡಾದಲ್ಲಿ ಪ್ರಸ್ತುತ ಕರ್ತವ್ಯ ನಿರ್ವಹಿಸುತ್ತಿರುವ ಮುಖ್ಯ ಅಧೀಕ್ಷಕ (ಚೀಫ್‌ ಸೂಪರಿಂಡೆಂಟ್‌), ಮುಖ್ಯ ಅಭಿಯಂತರ(ಚೀಫ್‌ ಇಂಜಿನಿಯರ್‌) ಹಾಗೂ ಕಾರ್ಯದರ್ಶಿ ಸೇರಿದಂತೆ 2017ರಲ್ಲಿ ಕರ್ತವ್ಯ ನಿರ್ವಹಿಸಿದ್ದ ಒಟ್ಟು 18 ಅಧಿಕಾರಿಗಳನ್ನು ವಿಚಾರಣೆಗೆ ಹಾಜರಾಗುವಂತೆ ಮುಡಾ ಅಧಿಕಾರಿಗಳಿಗೆ ಲೋಕಾಯುಕ್ತ ನೋಟಿಸ್‌‍ ಜಾರಿ ಮಾಡಿರುವುದಾಗಿ ತಿಳಿದುಬಂದಿದೆ. ವರದಿಯ ಪ್ರಕಾರ, ಗುರುವಾರದೊಳಗೆ ಈ ಎಲ್ಲಾ ಅಧಿಕಾರಿಗಳು ವಿಚಾರಣೆಗೆ ಹಾಜರಾಗಬೇಕು. ಮುಡಾದಲ್ಲಿ

ಮುಡಾ ಪ್ರಕರಣ- ವಿಚಾರಣೆಗೆ ಹಾಜರಾಗುವಂತೆ ಮುಡಾ ಅಧಿಕಾರಿಗಳಿಗೆ ಲೋಕಾಯುಕ್ತ ನೋಟಿಸ್ Read More »

ಕರ್ನಾಟಕ

ರಾಷ್ಟ್ರಪತಿ ಕೈಸೇರಿದ ಮುಡಾ ಪ್ರಕರಣ…!

(ನ್ಯೂಸ್ ಕಡಬ) newskadaba.com ಬೆಂಗಳೂರು, ಸೆ. 06. ಮುಡಾ ಹಗರಣಕ್ಕೆ ಸಂಬಂಧಿಸಿ ರಾಜ್ಯಪಾಲ ಥಾವರ್ ಚಂದ್ ಗೆಹ್ಲೋಟ್​ ಅವರು ಪ್ರಾಸಿಕ್ಯೂಷನ್ ನೀಡಿರುವ ನಿರ್ಧಾರದ​ ವಿರುದ್ಧ ಸಿಎಂ ಸಿದ್ದರಾಮಯ್ಯ ಕಾನೂನು ಹೋರಾಟ ನಡೆಸಿದ್ದಾರೆ. ಆದರೆ ಇದೀಗ ಮುಡಾ ಹಗರಣ ರಾಷ್ಟ್ರಪತಿಯವರಿಗೆ ತಲುಪಿರುವುದಾಗಿ ಸುದ್ದಿ ಸಂಸ್ಥೆಯೊಂದು ವರದಿ ಮಾಡಿದೆ. ವರದಿಯ ಪ್ರಕಾರ, ರಾಜ್ಯದಲ್ಲಿ ಕಾಂಗ್ರೆಸ್ ಪ್ರತಿಭಟನೆಗಳನ್ನು ನಡೆಸುವ ಮೂಲಕ ರಾಜ್ಯ ಸರ್ಕಾರ, ರಾಜಭವನದ ಮೇಲೆ‌ ನಿರಂತರ ಒತ್ತಡ ಹಾಕುತ್ತಿದೆ. ಕಾಂಗ್ರೆಸಿಗರು ನಡೆಸುತ್ತಿರುವ ಪ್ರತಿಭಟನೆಗಳಿಂದಾಗಿ ಸಾರ್ವಜನಿಕ ಸಮಾರಂಭಗಳಿಗೆ ಹೋಗದಂತ ಪರಿಸ್ಥಿತಿ ನಿರ್ಮಾಣವಾಗಿದೆ.

ರಾಷ್ಟ್ರಪತಿ ಕೈಸೇರಿದ ಮುಡಾ ಪ್ರಕರಣ…! Read More »

ಕರ್ನಾಟಕ, ರಾಷ್ಟ್ರೀಯ ನ್ಯೂಸ್

ಮುಡಾ ಪ್ರಕರಣ- ಸೆ. 09ರ ವರೆಗೆ ಸಿಎಂ ಸಿದ್ದರಾಮಯ್ಯಗೆ ರಿಲೀಫ್..!

(ನ್ಯೂಸ್ ಕಡಬ) newskadaba.com ಬೆಂಗಳೂರು, ಆ. 02. ಸಿಎಂ ಸಿದ್ದರಾಮಯ್ಯ ವಿರುದ್ದ ರಾಜ್ಯಪಾಲರು ನೀಡಿರುವ ಪ್ರಾಸಿಕ್ಯೂಷನ್ ವಿರೋಧಿಸಿ ಸಲ್ಲಿಸಿರುವ ರಿಟ್‌ ಪಿಟಿಷನ್‌ ವಿಚಾರಣೆಯನ್ನು ಹೈಕೋರ್ಟ್‌ ಸೆಪ್ಟೆಂಬರ್‌ 9 ಕ್ಕೆ ಮುಂದೂಡಲಾಗಿದೆ. ಇವತ್ತೂ ಕೂಡಾ ರಾಜ್ಯಪಾಲರ ಪರ ವಕೀಲ, ಇತರೆ ದೂರುದಾರರ ಪರ ವಕೀಲರು ಇಂದು ವಾದ ಮಂಡನೆ ಮಾಡಿದರು. ಪ್ರಕರಣದಲ್ಲಿ ಮಾಲೀಕರೇ ಅಲ್ಲದವರು ಮುಡಾಗೆ ಅರ್ಜಿ ಸಲ್ಲಿಸಿದ್ದಾರೆ. ಡಿನೋಟಿಫೈ ಮಾಡಿಸಿಕೊಂಡಿದ್ದಾರೆ. ಜಮೀನೇ ಇಲ್ಲದಿದ್ದರೂ ಪರಿಹಾರವಾಗಿ 14 ಸೈಟ್‌ ಗಳನ್ನು ಪಡೆಯಲಾಗಿದೆ ಎಂದು ವಾದ ಮಾಡಲಾಗಿದೆ. ಇನ್ನು ಸಿಎಂ

ಮುಡಾ ಪ್ರಕರಣ- ಸೆ. 09ರ ವರೆಗೆ ಸಿಎಂ ಸಿದ್ದರಾಮಯ್ಯಗೆ ರಿಲೀಫ್..! Read More »

ಕರ್ನಾಟಕ

ಮುಡಾ ಹಾಗೂ ಸಿಬಿಐ ಕೇಸ್ ; ಸಿಎಂ, ಡಿಸಿಎಂ ಭವಿಷ್ಯ ಇಂದು ಪ್ರಕಟ- ಎಲ್ಲರ ಚಿತ್ತ ಹೈಕೋರ್ಟ್ ನತ್ತ

(ನ್ಯೂಸ್ ಕಡಬ) newskadaba.com ಬೆಂಗಳೂರು, ಆ. 29. ಸಿಎಂ ಸಿದ್ದರಾಮಯ್ಯ ಹಾಗೂ ಡಿಸಿಎಂ ಡಿ.ಕೆ ಶಿವಕುಮಾರ್ ಇವರಿಬ್ಬರ ವಿರುದ್ದದ ಎರಡು ಪ್ರತ್ಯೇಕ ಪ್ರಕರಣಗಳ ಭವಿಷ್ಯ ಇಂದು ನಿರ್ಧಾರವಾಗಲಿದ್ದು, ರಾಜ್ಯ ರಾಜಕೀಯದಲ್ಲಿ ಭಾರೀ ಸಂಚಲನ ಮೂಡಿಸಿದೆ. ಮೂಡಾ ಹಗರಣದ ಬಗ್ಗೆ ತನಿಖೆಗೆ ಆದೇಶಿಸಿದ ರಾಜ್ಯಪಾಲ ಥಾವರಚಂದ್ ಗೆಹ್ಲೊಟ್ ಅವರ ಕ್ರಮ ರಾಜಕೀಯ ಸಂಘರ್ಷಕ್ಕೆ ಕಾರಣವಾಗಿದೆ. ಆದರೆ ಸಿದ್ದರಾಮಯ್ಯ ಅವರಿಗೆ ಕಾಂಗ್ರೆಸ್ ಹೈಕಮಾಂಡ್ ಅಭಯ ನೀಡಿದೆ. ಇದರ ಜೊತೆಗೆ ರಾಜ್ಯಪಾಲರ ವಿರುದ್ಧ ಸಂಘರ್ಷಕ್ಕಿಳಿದ ರಾಜ್ಯ ಸರ್ಕಾರ ಕಾನೂನು ಹೋರಾಟಕ್ಕೂ ಮುಂದಾಗಿದೆ.

ಮುಡಾ ಹಾಗೂ ಸಿಬಿಐ ಕೇಸ್ ; ಸಿಎಂ, ಡಿಸಿಎಂ ಭವಿಷ್ಯ ಇಂದು ಪ್ರಕಟ- ಎಲ್ಲರ ಚಿತ್ತ ಹೈಕೋರ್ಟ್ ನತ್ತ Read More »

ಕರ್ನಾಟಕ
Scroll to Top