Murder

ಶಿಶುವಿಹಾರದಲ್ಲಿ ಚೂರಿಯಿರಿತ- 3 ಮಕ್ಕಳ ಸಹಿತ 6 ಮಂದಿ ಮೃತ್ಯು

(ನ್ಯೂಸ್ ಕಡಬ) newskadaba.com ಚೀನಾ, ಜು. 10. ಶಿಶುವಿಹಾರದಲ್ಲಿ ನಡೆದ ಚೂರಿ ಇರಿತ ಪ್ರಕರಣದಲ್ಲಿ ಮೂವರು ಮಕ್ಕಳು ಸೇರಿದಂತೆ ಆರು ಮಂದಿ ಮೃತಪಟ್ಟಿರುವ ಘಟನೆ ಚೀನಾದ ಆಗ್ನೇಯ ಗುವಾಂಗ್‌ ಡಾಂಗ್ ಪ್ರಾಂತ್ಯದಲ್ಲಿ ನಡೆದಿದೆ. ಲಿಯಾಂಜಿಯಾಂಗ್ ಕೌಂಟಿಯ ಪೊಲೀಸರ ಹೇಳಿಕೆಯಂತೆ ಇದೊಂದು ಉದ್ದೇಶಪೂರ್ವಕ ದಾಳಿಯಾಗಿದೆ. ಘಟನೆಯು ಇಂದು ಬೆಳಗ್ಗೆ ಸ್ಥಳೀಯ ಸಮಯ 07:40 ಕ್ಕೆ ಸಂಭವಿಸಿದ್ದು ಕೆಲವೇ ನಿಮಿಷಗಳಲ್ಲಿ ವೂ ಎಂಬ ಉಪನಾಮ ಹೊಂದಿರುವ 25 ವರ್ಷದ ಯುವಕನನ್ನು ಬಂಧಿಸಿರುವುದಾಗಿ ಪೊಲೀಸರು ತಿಳಿಸಿದ್ದಾರೆ.

ಶಿಶುವಿಹಾರದಲ್ಲಿ ಚೂರಿಯಿರಿತ- 3 ಮಕ್ಕಳ ಸಹಿತ 6 ಮಂದಿ ಮೃತ್ಯು Read More »

ಅಂತರ್ರಾಷ್ಟ್ರೀಯ ನ್ಯೂಸ್, ಕ್ರೈಮ್ ನ್ಯೂಸ್

ಜೈನಮುನಿಗೆ ಕರೆಂಟ್ ಶಾಕ್ ಕೊಟ್ಟು ಕೊಲೆ- ಮೃತದೇಹವನ್ನು ತುಂಡರಿಸಿ ಕೊಳವೆ ಬಾವಿಗೆಸೆದ ಹಂತಕರು

(ನ್ಯೂಸ್ ಕಡಬ) newskadaba.com ಚಿಕ್ಕೋಡಿ, ಜು. 09. ನಾಪತ್ತೆಯಾಗಿದ್ದ ಚಿಕ್ಕೋಡಿ ತಾಲೂಕಿನ ಹಿರೇಕೋಡಿ ನಂದಿ ಪರ್ವತ ಜೈನ ಆಶ್ರಮದ ಕಾಮ ಕುಮಾರ ನಂದಿ ಮಹಾರಾಜರನ್ನು ದುಷ್ಕರ್ಮಿಗಳು ವಿದ್ಯುತ್ ಶಾಕ್ ಕೊಟ್ಟು, ಅಂಗಾಂಗ ಕತ್ತರಿಸಿ ಬರ್ಬರವಾಗಿ ಹತ್ಯೆ ಮಾಡಿರುವುದಾಗಿ ವಿಚಾರಣೆಯ ವೇಳೆ ಆರೋಪಿಗಳು ಘಟನೆಯ ಭೀಕರತೆಯನ್ನು ಎಳೆಎಳೆಯಾಗಿ ಬಿಚ್ಚಿಟ್ಟಿದ್ದಾರೆ‌. ಆರೋಪಿಗಳನ್ನಿ ನಾರಾಯಣ ಮಾಳಿ ಹಾಗೂ ಹುಸೇನ್ ಎಂದು ಗುರುತಿಸಲಾಗಿದೆ. ಆರೋಪಿಗಳು ಸ್ವಾಮೀಜಿಯನ್ನು ಹತ್ಯೆ ಮಾಡಿದ ಬಳಿಕ ದೇಹವನ್ನು 9 ತುಂಡುಗಳನ್ನಾಗಿ ಕತ್ತರಿಸಿ, ರಾಯಬಾಗ ತಾಲೂಕಿನ ಖಟಕಬಾವಿ ಗ್ರಾಮದ ಕಬ್ಬಿನ

ಜೈನಮುನಿಗೆ ಕರೆಂಟ್ ಶಾಕ್ ಕೊಟ್ಟು ಕೊಲೆ- ಮೃತದೇಹವನ್ನು ತುಂಡರಿಸಿ ಕೊಳವೆ ಬಾವಿಗೆಸೆದ ಹಂತಕರು Read More »

ಕರ್ನಾಟಕ, ಕ್ರೈಮ್ ನ್ಯೂಸ್

ಹಾಸನ: ಹಾಡಹಗಲೇ ರೌಡಿಶೀಟರ್ ನ ಬರ್ಬರ ಹತ್ಯೆ

(ನ್ಯೂಸ್ ಕಡಬ) newskadaba.com ಹಾಸನ, ಜು. 04. ಹಾಡಹಗಲೇ ರೌಡಿಶೀಟರ್ ಓರ್ವನನ್ನು ರಸ್ತೆಯಲ್ಲಿ ಅಟ್ಟಾಡಿಸಿ ಕೊಲೆ ಮಾಡಿರುವ ಘಟನೆ ಚನ್ನರಾಯಪಟ್ಟಣದ ಧನಲಕ್ಷ್ಮಿ ಚಿತ್ರ ಮಂದಿರದ ಎದುರು ಮಂಗಳವಾರದಂದು ಸಂಜೆ ವರದಿಯಾಗಿದೆ. ಹತ್ಯೆಗೀಡಾದವರನ್ನು ಮಾಸ್ತಿಗೌಡ ಅಲಿಯಾಸ್ ಕೃಷ್ಣ (30) ಎಂದು ಗುರುತಿಸಲಾಗಿದೆ. ಕಾರಿನಲ್ಲಿ ಬಂದ ದುಷ್ಕರ್ಮಿಗಳು, ಕೃಷ್ಣನನ್ನು ಬೆನ್ನಟ್ಟಿ, ಆತ ಓಡಲು ಪ್ರಾರಂಭಿಸುತ್ತಿದ್ದಂತೆಯೇ ನಡುರಸ್ತೆಯಲ್ಲಿ ಅಟ್ಟಾಡಿಸಿ ಮಾರಕಾಸ್ತ್ರಗಳಿಂದ ಕೊಚ್ಚಿ ಕೊಲೆಗೈದಿದ್ದಾರೆ ಎಂದು ಹೇಳಲಾಗಿದೆ. ಘಟನೆಯಿಂದ ಕೃಷ್ಣನ ತಲೆ ಸೇರಿದಂತೆ ದೇಹದ ವಿವಿಧ ಭಾಗಳಿಗೆ ಗಂಭೀರ ಗಾಯಗಳಾಗಿದ್ದು, ಸ್ಥಳದಲ್ಲೇ ಮೃತಪಟ್ಟಿದ್ದಾರೆ

ಹಾಸನ: ಹಾಡಹಗಲೇ ರೌಡಿಶೀಟರ್ ನ ಬರ್ಬರ ಹತ್ಯೆ Read More »

ಕರ್ನಾಟಕ, ಕ್ರೈಮ್ ನ್ಯೂಸ್

ಚೂರಿಯಿಂದ ಇರಿದು ವಿದ್ಯಾರ್ಥಿಯ ಕೊಲೆ

(ನ್ಯೂಸ್ ಕಡಬ) newskadaba.com ಬೆಂಗಳೂರು, ಜು. 04. ಕಾಲೇಜು ವಿದ್ಯಾರ್ಥಿಯೋರ್ವನನ್ನು ಚೂರಿಯಿಂದ ಇರಿದು ಕೊಲೆ ಮಾಡಿರುವ ಘಟನೆ ಬಸವೇಶ್ವರನಗರದ ಮಂಜುನಾಥ್ ನಗರದ ಗೌತಮ್ ಕಾಲೇಜು ಬಳಿ ನಡೆದಿದೆ. ಕೊಲೆಯಾದ ವಿದ್ಯಾರ್ಥಿಯನ್ನು ಸುಹೇಲ್ (17) ಎಂದು ಗುರುತಿಸಲಾಗಿದೆ. ಡ್ಯಾನ್ಸ್‌ ಮಾಡುವ ವಿಚಾರಕ್ಕೆ ಸಂಬಂಧಿಸಿ ವಿದ್ಯಾರ್ಥಿಗಳ ನಡುವೆ ಜಗಳ ಉಂಟಾಗಿ ಈ ಕೊಲೆ ನಡೆದಿದೆ ಎಂದೆನ್ನಲಾಗಿದೆ. ಚಾಕುವಿನಿಂದ ಇರಿತಕ್ಕೊಳಗಾಗಿದ್ದ ಸುಹೇಲ್‌ನನ್ನು ಕೂಡಲೇ ಆಸ್ಪತ್ರೆಗೆ ಸಾಗಿಸಲಾಗಿಯಿತಾದರೂ, ಆತ ದಾರಿ ಮಧ್ಯದಲ್ಲೇ ಕೊನೆಯುಸಿರೆಳೆದಿದ್ದಾನೆ. ಸ್ಥಳಕ್ಕೆ ಬಸವೇಶ್ವರ ನಗರ ಪೊಲೀಸರು ಭೇಟಿ ನೀಡಿ ಪರಿಶೀಲನೆ

ಚೂರಿಯಿಂದ ಇರಿದು ವಿದ್ಯಾರ್ಥಿಯ ಕೊಲೆ Read More »

ಕರ್ನಾಟಕ, ಕ್ರೈಮ್ ನ್ಯೂಸ್

ಬಂಟ್ವಾಳ: ಸವಾದ್ ಕೊಲೆ ಪ್ರಕರಣ ➤ ಇಬ್ಬರ ಬಂಧನ

(ನ್ಯೂಸ್ ಕಡಬ) newskadaba.com ಬಂಟ್ವಾಳ, ಜೂ. 22. ಬಂಟ್ವಾಳದ ಸವಾದ್ ಎಂಬಾತನನ್ನು ಕೊಲೆ‌ ಮಾಡಿ ಮೂಡಿಗೆರೆ ಪ್ರವಾಸಿ ತಾಣ ದೇವರಮನೆ ಗಡ್ಡೆಯ ಬಳಿ ಸುಟ್ಟು ಹಾಕಿದ್ದ ಪ್ರಕರಣಕ್ಕೆ ಸಂಬಂಧಿಸಿ ಇಬ್ಬರು ಆರೋಪಿಗಳನ್ನು ಪೊಲೀಸರು ಬಂಧಿಸಿದ್ದಾರೆ. ಬಂಧಿತರನ್ನು ಬಂಟ್ವಾಳ ಮೂಲದ ರಿಜ್ವಾನ್ ಮತ್ತು ಝೈನುಲ್ಲಾ ಎಂದು ಗುರುತಿಸಲಾಗಿದೆ. ಪ್ರಕರಣದಲ್ಲಿ ಮೂವರು ಆರೋಪಿಗಳು ತಲೆಮರೆಸಿಕೊಂಡಿದ್ದು, ಅವರ ಪತ್ತೆಗಾಗಿ ಪೊಲೀಸರು ಬಲೆ ಬೀಸಿದ್ದಾರೆ. ಮೃತದೇಹದ ಪತ್ತೆಯ ಬಳಿಕ ಪ್ರಕರಣದ ತನಿಖೆ ಕೈಗೊಂಡಿದ್ದ ಮೂಡಿಗೆರೆ ವೃತ್ತ ನಿರೀಕ್ಷಕ ಸೋಮಶೇಖರ್ ಮತ್ತು ಬಣಕಲ್ ಎಸ್.ಐ.

ಬಂಟ್ವಾಳ: ಸವಾದ್ ಕೊಲೆ ಪ್ರಕರಣ ➤ ಇಬ್ಬರ ಬಂಧನ Read More »

ಕರಾವಳಿ, ಬ್ರೇಕಿಂಗ್ ನ್ಯೂಸ್

ಲಂಡನ್ ನಲ್ಲಿ ಮತ್ತೋರ್ವ ಯುವಕನ ಹತ್ಯೆ

(ನ್ಯೂಸ್ ಕಡಬ) newskadaba.com ಲಂಡನ್, ಜೂ. 19. ಕೆಲ ದಿನಗಳ ಹಿಂದೆಯಷ್ಟೇ ಹೈದರಾಬಾದ್‌ನ ಯುವತಿಯೊಬ್ಬಳನ್ನು ಚೂರಿಯಲ್ಲಿ ಇರಿದು ಕೊಲೆ ಮಾಡಿರುವ ಘಟನೆ ಲಂಡನ್‌ನಲ್ಲಿ ನಡೆದಿದ್ದು, ಇದೀಗ ಮತ್ತೊಬ್ಬ ಭಾರತೀಯ ಮೂಲದ ವ್ಯಕ್ತಿಯನ್ನು ಹತ್ಯೆ ಮಾಡಲಾಗಿದೆ. ಹತ್ಯೆಗೊಳಗಾದವರನ್ನು ಕ್ಯಾಂಬರ್‌ವೆಲ್‌ನ ಸೌತಾಂಪ್ಟನ್ ವೇನಲ್ಲಿ ಭಾರತೀಯ ಮೂಲದ ಅರವಿಂದ್ ಶಶಿಕುಮಾರ್ (38) ಎಂದು ಗುರುತಿಸಲಾಗಿದೆ. ಹತ್ಯೆ ಸಂಬಂಧ ಸಲ್ಮಾನ್ ಸಲೀಂ (25) ಎಂಬಾತನನ್ನು ಬಂಧಿಸಿ ಕೊಲೆ ಪ್ರಕರಣ ದಾಖಲಿಸಲಾಗಿದ್ದು, ಆರೋಪಿಯನ್ನು ಕ್ರೊಯ್ಡಾನ್ ಮ್ಯಾಜಿಸ್ಟ್ರೇಟ್ ನ್ಯಾಯಾಲಯಕ್ಕೆ ಹಾಜರುಪಡಿಸಿದ ಬಳಿಕ ಜೂ.20 ರವರೆಗೆ ಕಸ್ಟಡಿಗೆ

ಲಂಡನ್ ನಲ್ಲಿ ಮತ್ತೋರ್ವ ಯುವಕನ ಹತ್ಯೆ Read More »

ಅಂತರ್ರಾಷ್ಟ್ರೀಯ ನ್ಯೂಸ್, ಕ್ರೈಮ್ ನ್ಯೂಸ್

ಸೌಜನ್ಯ ಕೊಲೆ ಪ್ರಕರಣ- ಸಂತೋಷ್ ರಾವ್ ದೋಷಮುಕ್ತ ➤ ತೀರ್ಪು ಪ್ರಕಟಿಸಿದ ಸಿಬಿಐ

(ನ್ಯೂಸ್ ಕಡಬ) newskadaba.com ಧರ್ಮಸ್ಥಳ, ಜೂ. 16. ಉಜಿರೆಯ ವಿದ್ಯಾರ್ಥಿನಿ ಸೌಜನ್ಯ ಕೊಲೆ ಹಾಗೂ ಅತ್ಯಾಚಾರ ಪ್ರಕರಣಕ್ಕೆ ಸಂಬಂಧಿಸಿದಂತೆ ಬೆಂಗಳೂರು ಸಿಬಿಐ ಕೋರ್ಟ್‌ ಇಂದು ತೀರ್ಪು ಪ್ರಕಟಿಸಿದ್ದು, ಆರೋಪಿ ಸಂತೋಷ್‌ ರಾವ್‌ ನಿರ್ದೋಷಿ ಎಂದು ಕೇಸಿನಿಂದ ಖುಲಾಸೆ ಮಾಡಿದೆ. ಸಂತೋಷ್‌ ರಾವ್‌ ವಿರುದ್ದ ಸಲ್ಲಿಕೆಯಾಗಿರುವ ಸಾಕ್ಷ್ಯಾಧಾರಗಳಲ್ಲಿ ಕೊರತೆ ಇದೆ ಎನ್ನುವ ಕಾರಣಕ್ಕೆ ಆರೋಪಿಯನ್ನು ದೋಷ ಮುಕ್ತಗೊಳಿಸಿರುವುದಾಗಿ ನ್ಯಾಯಮೂರ್ತಿ ಸಿ ಬಿ ಸಂತೋಷ್‌ ತಮ್ಮ ತೀರ್ಪಿನಲ್ಲಿ ತಿಳಿಸಿದ್ದಾರೆ. ಉಜಿರೆ ಎಸ್‌ ಡಿ ಎಂ ಕಾಲೇಜು ವಿದ್ಯಾರ್ಥಿನಿ ಸೌಜನ್ಯಾಳನ್ನು ಅಪಹರಿಸಿ

ಸೌಜನ್ಯ ಕೊಲೆ ಪ್ರಕರಣ- ಸಂತೋಷ್ ರಾವ್ ದೋಷಮುಕ್ತ ➤ ತೀರ್ಪು ಪ್ರಕಟಿಸಿದ ಸಿಬಿಐ Read More »

ಕರಾವಳಿ, ಕರ್ನಾಟಕ

ಹೆಚ್ಚು ಹಣ ಕೇಳಿದ್ದಕ್ಕೆ ಜಗಳ ➤ ಆಟೋ ಚಾಲಕನಿಂದ ಪ್ರಯಾಣಿಕನ ಕೊಲೆ

(ನ್ಯೂಸ್ ಕಡಬ) newskadaba.com ಬೆಂಗಳೂರು, ಜೂ. 13. ಕೆಲಸ ಮುಗಿಸಿಕೊಂಡು ಆಟೋ ರಿಕ್ಷಾದಲ್ಲಿ ಹೋಗುತ್ತಿದ್ದ ಪ್ರಯಾಣಿಕರ ಬಳಿ ಹೆಚ್ಚಿನ ಹಣ ಕೇಳಿದ ಚಾಲಕನೊಂದಿಗೆ ನಡೆದ ಗಲಾಟೆಯು ಕೊಲೆಯಲ್ಲಿ ಅಂತ್ಯವಾದ ಘಟನೆ ಸುಬ್ರಹ್ಮಣ್ಯಪುರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ನಡೆದಿದೆ. ಮೃತಪಟ್ಟವರನ್ನು ಅಸ್ಸಾಂ ಮೂಲದ ಅಹ್ಮದ್ (28) ಮತ್ತು ಗಾಯಗೊಂಡಿರುವ ಯುವಕನನ್ನು ಅಯೂಬ್ (26) ಎಂದು ಗುರುತಿಸಲಾಗಿದೆ. ಪ್ರಯಾಣಿಕರು ಮತ್ತು ಚಾಲಕನ ನಡುವೆ ಹಣದ ವಿಷಯಕ್ಕೆ ನಡೆದ ಗಲಾಟೆ ವಿಕೋಪಕ್ಕೆ ತಿರುಗಿ ಇಬ್ಬರು ಪ್ರಯಾಣಿಕರಿಗೆ ಆಟೋ ಚಾಲಕ ಚಾಕುವಿನಿಂದ ಇರಿದಿದ್ದು,

ಹೆಚ್ಚು ಹಣ ಕೇಳಿದ್ದಕ್ಕೆ ಜಗಳ ➤ ಆಟೋ ಚಾಲಕನಿಂದ ಪ್ರಯಾಣಿಕನ ಕೊಲೆ Read More »

ಕರ್ನಾಟಕ, ಕ್ರೈಮ್ ನ್ಯೂಸ್

ತಾಯಿಯನ್ನು ಕೊಂದು ಮೃತದೇಹವನ್ನು ಸೂಟ್ಕೇಸ್ ನಲ್ಲಿಟ್ಟು ಠಾಣೆಗೆ ತಂದ ಪುತ್ರಿ ➤ ರಾಜ್ಯವನ್ನೇ ಬೆಚ್ಚಿಬೀಳಿಸಿದ ಘಟನೆ

(ನ್ಯೂಸ್ ಕಡಬ) newskadaba.com ಬೆಂಗಳೂರು, ಜೂ. 13. ಪುತ್ರಿಯೋರ್ವಳು ಹೆತ್ತ ತಾಯಿಯನ್ನು ಕೊಂದು ಮೃತದೇಹವನ್ನು ಸೂಟ್ ಕೇಸ್ ನಲ್ಲಿಟ್ಟು ಠಾಣೆಗೆ ತಂದ ಭೀಕರ ಘಟನೆಯ ಮೈಕೋ ಲೇಔಟ್ ಪೊಲೀಸ್ ಠಾಣೆಯಲ್ಲಿ ನಡೆದಿದೆ. ಹತ್ಯೆಗೊಳಗಾದವರನ್ನು ಬೀವಾ ಪಾಲ್ (70) ಎಂದು ಗುರುತಿಸಲಾಗಿದೆ. ಇವರು ಮೈಕೋ ಲೇಔಟ್ ಪೊಲೀಸ್ ಠಾಣೆಯ ಬಿಳೇಕಹಳ್ಳಿಯ ಎಂಎಸ್ ಆರ್ ಅಪಾರ್ಟ್ ಮೆಂಟ್ ನಲ್ಲಿ ಮಗಳು ಸೆನಾಲಿ ಸೇನ್‌, ಹಾಗೂ ಸೆನಾಲಿ ಅತ್ತೆ ವಾಸವಾಗಿದ್ದರು. ದಿನನಿತ್ಯವೂ ಬೀವಾ ಪಾಲ್ ಮತ್ತು ಸೆನಾಲಿ ಅತ್ತೆ ನಡುವೆ ಜಗಳವಾಗುತ್ತಿತ್ತು.

ತಾಯಿಯನ್ನು ಕೊಂದು ಮೃತದೇಹವನ್ನು ಸೂಟ್ಕೇಸ್ ನಲ್ಲಿಟ್ಟು ಠಾಣೆಗೆ ತಂದ ಪುತ್ರಿ ➤ ರಾಜ್ಯವನ್ನೇ ಬೆಚ್ಚಿಬೀಳಿಸಿದ ಘಟನೆ Read More »

ಕರ್ನಾಟಕ, ಕ್ರೈಮ್ ನ್ಯೂಸ್

ಕೊಡಲಿಯಿಂದ ಕಡಿದು ಮಗಳನ್ನೇ ಕೊಂದ ತಂದೆ

(ನ್ಯೂಸ್ ಕಡಬ) newskadaba.com ಕೇರಳ, ಜೂ. 08. ಪತ್ನಿ ಆತ್ಮಹತ್ಯೆ ಮಾಡಿಕೊಂಡಿದ್ದ ಹಿನ್ನೆಲೆ ಮಾನಸಿಕ ಖಿನ್ನತೆಗೆ ಒಳಗಾಗಿದ್ದ ವ್ಯಕ್ತಿಯೊಬ್ಬರು ತನ್ನ ಮಗಳನ್ನೇ ಕೊಡಲಿಯಿಂದ ಕಡಿದು ಹತ್ಯೆ ಮಾಡಿರುವ ಘಟನೆ ಕೇರಳದ ಆಲಪ್ಪುಳದಲ್ಲಿ ನಡೆದಿದೆ. ಹತ್ಯೆಗೊಳಗಾದ ಬಾಲಕಿಯನ್ನು ನಕ್ಷತ್ರಾ ಎಂದು ಗುರುತಿಸಲಾಗಿದೆ. ಆರೋಪಿ ಶ್ರೀ ಮಹೇಶನ ಪತ್ನಿಯು ನಾಲ್ಕು ವರ್ಷಗಳ ಹಿಂದೆ ಆತ್ಮಹತ್ಯೆ ಮಾಡಿಕೊಂಡಿದ್ದು, ಆ ಬಳಿಕ ಖಿನ್ನತೆಯಿಂದ ಬಳಲುತ್ತಿದ್ದ ಈತ ಚಿಕಿತ್ಸೆ ಪಡೆಯುತ್ತಿದ್ದನು. ಇದೀಗ ಮಹೇಶ್ ತನ್ನ ಮಗಳು ನಕ್ಷತ್ರಾಳನ್ನು ಬುಧವಾರದಂದು ರಾತ್ರಿ ಸುಮಾರು 8 ಗಂಟೆಯ

ಕೊಡಲಿಯಿಂದ ಕಡಿದು ಮಗಳನ್ನೇ ಕೊಂದ ತಂದೆ Read More »

ಕ್ರೈಮ್ ನ್ಯೂಸ್
Scroll to Top