Murder

ಸಂಗಾತಿಯನ್ನು ಹತ್ಯೆಗೈದು ಕುಕ್ಕರ್‌ನಲ್ಲಿ ಬೇಯಿಸಿದ ಪ್ರಿಯಕರ..!

(ನ್ಯೂಸ್ ಕಡಬ) newskadba.com ಮುಂಬೈ, ಜೂ. 08. ವ್ಯಕ್ತಿಯೊಬ್ಬನು ತನ್ನ ಸಂಗಾತಿಯನ್ನು ಹತ್ಯೆಗೈದು, ದೇಹದ ಭಾಗವನ್ನು ತುಂಡು ಮಾಡಿ ಅದನ್ನು ಕುಕ್ಕರ್ ನಲ್ಲಿ ಬೇಯಿಸಿರುವ ಘಟನೆ ಮುಂಬಯಿಯಲ್ಲಿ ನಡೆದಿದೆ. ಕೊಲೆಯಾದವರನ್ನು ಸರಸ್ವತಿ ವೈದ್ಯ (36) ಎಂದು ಗುರುತಿಸಲಾಗಿದೆ. ಈಕೆ ಮನೋಜ್ ಸಹಾನಿ (36) ಎಂಬಾತನೊಂದಿಗೆ ಕಳೆದ ಮೂರು ವರ್ಷಗಳಿಂದ ವಾಸವಾಗಿದ್ದಳು. ಬುಧವಾರದಂದು ಸಂಜೆ ಮನೋಜ್‌ ಅವರ ನಿವಾಸದಿಂದ ಕೆಟ್ಟ ವಾಸನೆ ಬರುತ್ತಿರುವುದನ್ನು ಗಮನಿಸಿದ ಸ್ಥಳೀಯರು ಈ ಬಗ್ಗೆ ಪೊಲೀಸರಿಗೆ ಮಾಹಿತಿ ನೀಡಿದ್ದಾರೆ. ಇನ್ನು ಮಾಹಿತಿ ಪಡೆದು ತನಿಖೆ ನಡೆಸಿದ […]

ಸಂಗಾತಿಯನ್ನು ಹತ್ಯೆಗೈದು ಕುಕ್ಕರ್‌ನಲ್ಲಿ ಬೇಯಿಸಿದ ಪ್ರಿಯಕರ..! Read More »

ಕ್ರೈಮ್ ನ್ಯೂಸ್, ರಾಷ್ಟ್ರೀಯ ನ್ಯೂಸ್

ಹಾಸ್ಟೆಲ್ ರೂಂನಲ್ಲಿ ವಿದ್ಯಾರ್ಥಿನಿ ಕೊಲೆ ಪ್ರಕರಣ ➤ ನಾಪತ್ತೆಯಾಗಿದ್ದ ಸೆಕ್ಯುರಿಟಿ ಗಾರ್ಡ್ ಮೃತದೇಹ ಪತ್ತೆ

(ನ್ಯೂಸ್ ಕಡಬ) newskadaba.com ಮುಂಬೈ, ಜೂ. 07. ಹಾಸ್ಟೆಲ್ ನಲ್ಲಿ ವಾಸವಿದ್ದ 18 ವರ್ಷದ ಕಾಲೇಜು ವಿದ್ಯಾರ್ಥಿನಿಯ ಅತ್ಯಾಚಾರ ಮತ್ತು ಕೊಲೆ ಪ್ರಕರಣಕ್ಕೆ ಇದೀಗ ಟ್ವಿಸ್ಟ್ ಸಿಕ್ಕಿದ್ದು, ಆರೋಪಿ ಸೆಕ್ಯುರಿಟಿ ಗಾರ್ಡ್ ಮೃತದೇಹವು ಹಾಸ್ಟೆಲ್ ಸಮೀಪದ ರೈಲ್ವೇ ಟ್ರಾಕ್ ಬಳಿ ಪತ್ತೆಯಾಗಿದೆ. ಆದುದರಿಂದ ಪೊಲೀಸರು ಇದೊಂದು ಆತ್ಮಹತ್ಯೆ ಎಂದು ಶಂಕಿಸಿದ್ದಾರೆ. ಹಾಸ್ಟೆಲ್ ನಲ್ಲಿ ವಾಸವಿದ್ದ ವಿದ್ಯಾರ್ಥಿನಿಯು ಮಂಗಳವಾರದಂದು ಸಂಜೆ ನಾಪತ್ತೆಯಾಗಿರುವ ಕುರಿತು ದಾಖಲಾದ ದೂರಿನಂತೆ ಹುಡುಕಾಟ ನಡೆಸಿದಾಗ ಹಾಸ್ಟೆಲ್ ನ ನಾಲ್ಕನೇ ಮಹಡಿಯ ಕೊಠಡಿಯೊಂದರಲ್ಲಿ ವಿದ್ಯಾರ್ಥಿನಿಯ ಮೃತದೇಹ

ಹಾಸ್ಟೆಲ್ ರೂಂನಲ್ಲಿ ವಿದ್ಯಾರ್ಥಿನಿ ಕೊಲೆ ಪ್ರಕರಣ ➤ ನಾಪತ್ತೆಯಾಗಿದ್ದ ಸೆಕ್ಯುರಿಟಿ ಗಾರ್ಡ್ ಮೃತದೇಹ ಪತ್ತೆ Read More »

ಕ್ರೈಮ್ ನ್ಯೂಸ್, ರಾಷ್ಟ್ರೀಯ ನ್ಯೂಸ್

ಎಣ್ಣೆ ಸಪ್ಲೈ ತಡವಾಗಿದ್ದಕ್ಕೆ ಬಾರ್​ ಸಿಬ್ಬಂದಿ ಮೇಲೆ ಹಲ್ಲೆ   ➤23 ದಿನದ ಬಳಿಕ ಯುವಕ ಮೃತ್ಯು

(ನ್ಯೂಸ್ ಕಡಬ) newskadaba.com ಬೆಂಗಳೂರು, ಫೆ.17.  ಬಾರ್​ನಲ್ಲಿ ಸಪ್ಲೈ ತಡವಾಗಿದ್ದಕ್ಕೆ ಸಿಬ್ಬಂದಿ ಬಸವರಾಜು (39) ಎಂಬುವವರ ಮೇಲೆ ಹಲ್ಲೆ ಮಾಡಲಾಗಿತ್ತು. ತೀವ್ರವಾಗಿ ಗಾಯಗೊಂಡಿದ್ದ ಬಸವರಾಜ ನಿರ್ಲಕ್ಷ್ಯವಹಿಸಿದ್ದಾನೆ. ಬಳಿಕ ಮಾರನೇ ದಿನ ತಲೆ ತಿರುಗುವಂತಾಗಿದ್ದು, ಕೂಡಲೇ ಆಸ್ಪತ್ರೆಗೆ ಸೇರಿಸಲಾಗಿ ಚಿಕಿತ್ಸೆ ಪಡೆಯುತ್ತಿದ್ದ. ಇದೀಗ 23 ದಿನದ ಬಳಿಕ ಚಿಕಿತ್ಸೆ ಫಲಕಾರಿಯಾಗದೇ ಮೃತಪಟ್ಟಿದ್ದಾನೆ. ಇನ್ನು ಬಾರ್ ಸಿಬ್ಬಂದಿ ಮೇಲೆ ಹಲ್ಲೆ ಮಾಡಿದ್ದ ಆರೋಪಿಗಳಾದ ಸುರೇಶ್(29), ವಿನೋದ್ ಕುಮಾರ್ ( 28) ಎಂಬುವವರನ್ನ ಕುಮಾರಸ್ವಾಮಿ ಲೇಔಟ್ ಪೊಲೀಸರು ಬಂಧಿಸಿದ್ದಾರೆ ಎಂದು ವರದಿಯಾಗಿದೆ.

ಎಣ್ಣೆ ಸಪ್ಲೈ ತಡವಾಗಿದ್ದಕ್ಕೆ ಬಾರ್​ ಸಿಬ್ಬಂದಿ ಮೇಲೆ ಹಲ್ಲೆ   ➤23 ದಿನದ ಬಳಿಕ ಯುವಕ ಮೃತ್ಯು Read More »

ಕರ್ನಾಟಕ, ಕ್ರೈಮ್ ನ್ಯೂಸ್

ಪತ್ನಿಯನ್ನು ಬರ್ಬರವಾಗಿ ಕೊಂದ ಪಾಪಿ ಪತಿ!

(ನ್ಯೂಸ್ ಕಡಬ) newskadaba.com ಕಲಬುರಗಿ, ಫೆ.16.  ಪತ್ನಿಯ ನಡತೆ ಶಂಕಿಸಿದ ಗಂಡ ಆಕೆ ಮಲಗಿದ್ದಾಗ ತಲೆ ಮೇಲೆ ದೊಡ್ಡ ಕಲ್ಲನ್ನು ಎತ್ತಿ ಹಾಕಿ ಬರ್ಬರವಾಗಿ ಹತ್ಯೆ ಮಾಡಿರುವ ಘಟನೆ ಕಲಬುರಗಿಯ ಅಂಬಿಕಾ ನಗರದಲ್ಲಿ ಸಂಭವಿಸಿದೆ. ಮೃತ ಗೃಹಿಣಿಯನ್ನು 39 ವರ್ಷದ ಫರೀದಾ ಬೇಗಂ ಎಂದು ಗುರುತಿಸಲಾಗಿದೆ. ಇನ್ನು ಆರೋಪಿ ಪತಿ ಏಜಾಜ್ ಅಹ್ಮದ್ ಕಳೆದ ರಾತ್ರಿ ನಿದ್ದೆಗೆ ಜಾರಿದ ಫರೀದಾ ಬೇಗಂ ಮೇಲೆ ಕಲ್ಲು ಎತ್ತಿಹಾಕಿ ಕೊಂದಿದ್ದಾನೆ ಎಂದು ವರದಿಯಾಗಿದೆ. ಎಜಾಜ್ ಹಾಗೂ ಫರೀದಾ ಬೇಗಂ ಇಬ್ಬರು

ಪತ್ನಿಯನ್ನು ಬರ್ಬರವಾಗಿ ಕೊಂದ ಪಾಪಿ ಪತಿ! Read More »

ಕರ್ನಾಟಕ, ಕ್ರೈಮ್ ನ್ಯೂಸ್

ಅಮ್ಮನ ಮೇಲೆ ಲೈಂಗಿಕ ದೌರ್ಜನ್ಯಕ್ಕೆ ಸೇಡು ತೀರಿಸಿಕೊಂಡ ಮಗ

(ನ್ಯೂಸ್ ಕಡಬ) newskadaba.com ಪುಣೆ, ಫೆ.13.ಕೆಳವು ವರ್ಷಗಳ ಹಿಂದೆ ಅಮ್ಮನ ಮೇಲೆ ಲೈಂಗಿಕ ದೌರ್ಜನ್ಯವೆಸಗಿದ್ದ ವ್ಯಕ್ತಿ ಹಾಗೂ ಆತನ ಪತ್ನಿಯನ್ನು ಮಹಿಳೆಯ ಪುತ್ರ ಗುದ್ದಲಿಯಿಂದ ಹೊಡೆದು ಕೊಂದ ಘಟನೆ ಮಹಾರಾಷ್ಟ್ರದ ಪುಣೆಯ ದಪೊಡಿ ಎಂಬಲ್ಲಿ ಈ ಘಟನೆ ಸಂಭವಿಸಿದೆ. ಘಟನೆಗೆ ಸಂಬಂಧಿಸಿದಂತೆ 32 ವರ್ಷ ಪ್ರಾಯದ ಪ್ರಸನ್ನ ಮುರುಗುಟ್ಕರ್‌ ಎಂಬಾತನನ್ನು ಪೊಲೀಸರು ಬಂಧಿಸಿದ್ದಾರೆ.  60 ವರ್ಷದ ಶಂಕರ್ ಕಾಟೆ ಹಾಗೂ ಈತನ ಪತ್ನಿ 55 ವರ್ಷದ ಸಂಗೀತಾ ಕೊಲೆಯಾದವರು. ಪುಣೆಯ ದಪೊಡಿಯಲ್ಲಿರುವ ದಂಪತಿ ವಾಸವಿದ್ದ ಮಹದೇವ್ ಅಲಿ

ಅಮ್ಮನ ಮೇಲೆ ಲೈಂಗಿಕ ದೌರ್ಜನ್ಯಕ್ಕೆ ಸೇಡು ತೀರಿಸಿಕೊಂಡ ಮಗ Read More »

ರಾಷ್ಟ್ರೀಯ ನ್ಯೂಸ್

 ಪ್ರಿಯತಮನಿಂದ ಪ್ರೇಯಸಿಯ ಹತ್ಯೆ!

(ನ್ಯೂಸ್ ಕಡಬ) newskadaba.com ಬೀದರ್, ಫೆ.12. ಪ್ರೀತಿ ಮಾಡಿ ಮದುವೆಗೆ ನಿರಾಕರಿಸಿದ ಯುವತಿಯನನ್ನು ಕತ್ತು ಹಿಸಿಕಿ ಕೊಲೆ ಮಾಡಿದ ಘಟನೆ ನಗರದ ಸೋಲಪುರದಲ್ಲಿ ನಡೆದಿದೆ. ನಗರದ ಮಂಗಲ್ ಪೇಟ್​ನಲ್ಲಿ ಬಾಡಿಗೆ ಮನೆಯಲ್ಲಿ ವಾಸವಿದ್ದ ಶಿವಲೀಲಾ ಹಾಗೂ ಶ್ರೀನಿವಾಸ್, ಒಂದೇ ಓಣಿಯಲ್ಲಿ ಅಕ್ಕಪಕ್ಕದ ಮನೆಯಲ್ಲಿ ವಾಸವಿದ್ದುದ್ದರಿಂದ ಇಬ್ಬರ ನಡುವೆ ಪರಿಚಯವಾಗಿದೆ. ಇದೇ ಪರಿಚಯ ಪ್ರೀತಿಗೆ ತಿರುಗಿ ಒಂದು ವರ್ಷದಿಂದ ಇಬ್ಬರು ಪರಸ್ಪರ ಪ್ರೀತಿ ಮಾಡಲು ಶುರುಮಾಡಿದ್ದಾರೆ. ಯಾವಾಗ ಇವರಿಬ್ಬರ ನಡುವೆ ಪ್ರೀತಿ ಗಾಢವಾಯಿತೋ ಆವಾಗ ಶ್ರೀನಿವಾಸ್ ಮದುವೆ ಮಾಡಿಕೊಳ್ಳುವಂತೆ

 ಪ್ರಿಯತಮನಿಂದ ಪ್ರೇಯಸಿಯ ಹತ್ಯೆ! Read More »

ಕರ್ನಾಟಕ, ಕ್ರೈಮ್ ನ್ಯೂಸ್

ಮಗಳ ವ್ಯಾನಿಟಿ ಬ್ಯಾಗ್​ನಲ್ಲಿ ಪ್ರೆಗ್ನೆನ್ಸಿ ಕಿಟ್ ಪತ್ತೆ ಪ್ರಕರಣ ➤ ಅಮಾನುಷವಾಗಿ ಮಗಳನ್ನು ಕೊಂದ ಪೋಷಕರು *

(ನ್ಯೂಸ್ ಕಡಬ)newskadaba.com ಅಲಮಾಬಾದ್, ಫೆ.09. 21ರ ಹರೆಯದ ಯುವತಿಯೊಬ್ಬಳ  ಬಳಿ ಗರ್ಭಧಾರಣೆ ಪರೀಕ್ಷೆಯ ಕಿಟ್‌ಗಳು ಸಿಕ್ಕಿದ್ದರಿಂದ ಆಕೆಯ ಹೆತ್ತವರು  ಆಕೆ ಅಕ್ರಮ ಸಂಬಂಧ ಹೊಂದಿದ್ದಾಳೆಂದು ಶಂಕಿಸಿ, ಕತ್ತು ಹಿಸುಕಿ ಮಗಳನ್ನು ಕೊಂದಿದ್ದಾರೆ ಎಂದು ಪೊಲೀಸರು ತಿಳಿಸಿದ್ದಾರೆ. ದಂಪತಿ ತಮ್ಮ ಇಬ್ಬರು ಬಂಧುಗಳ ಸಹಾಯದಿಂದ ದೇಹವನ್ನು ಗುರುತಿಸಲು ಸಾಧ್ಯವಾಗದಂತೆ ಆಸಿಡ್  ಸುರಿದು, ನಂತರ ಮಗಳ ದೇಹವನ್ನ ಎಸೆದಿದ್ದಾರೆ ಎಂದು ಆರೋಪಿಸಿ ನಾಲ್ವರನ್ನು ಬಂಧಿಸಲಾಗಿದೆ ಎಂದು ವರದಿ ತಿಳಿಸುತ್ತದೆ. ಇಲ್ಲಿನ ತೇನ್ ಷಾ ಅಲಮಾಬಾದ್ ಗ್ರಾಮದ ನಿವಾಸಿ ನರೇಶ್ ಅವರು ಫೆಬ್ರವರಿ 3 ರಂದು

ಮಗಳ ವ್ಯಾನಿಟಿ ಬ್ಯಾಗ್​ನಲ್ಲಿ ಪ್ರೆಗ್ನೆನ್ಸಿ ಕಿಟ್ ಪತ್ತೆ ಪ್ರಕರಣ ➤ ಅಮಾನುಷವಾಗಿ ಮಗಳನ್ನು ಕೊಂದ ಪೋಷಕರು * Read More »

ರಾಷ್ಟ್ರೀಯ ನ್ಯೂಸ್

➤ ಬೆಂಗಳೂರು ಕೊಟ್ಟ ಸಾಲ ವಾಪಸ್ ಕೇಳಿದ್ದಕ್ಕೆ ಫೈನಾನ್ಷಿಯರ್ ಹತ್ಯೆ!

(ನ್ಯೂಸ್ ಕಡಬ) newskadaba.com. ಬೆಂಗಳೂರು.ಫೆ.9.  ಕೊಟ್ಟ ಸಾಲ ವಾಪಸ್ ಕೇಳಿದ ವ್ಯಕ್ತಿಯೊಬ್ಬನಿಗೆ ಚಾಕುವಿನಿಂದ ಇರಿದು ಹತ್ಯೆಗೈದ ಘಟನೆ ಬಾಣಸವಾಡಿ ಠಾಣಾ ವ್ಯಾಪ್ತಿಯ ಚಿಕ್ಕ ಬಾಣಸವಾಡಿ ಬಳಿ ನಡೆದಿದೆ. ಫೈನಾನ್ಸ್ ವ್ಯವಹಾರ ನಡೆಸುತ್ತಿದ್ದ ಶೇಖರ್ (29) ಹತ್ಯೆಯಾದ ವ್ಯಕ್ತಿಯಾಗಿದ್ದಾರೆ. ಬಾಣಸವಾಡಿ ಸುತ್ತಮುತ್ತ ಫೈನಾನ್ಸ್ ವ್ಯವಹಾರ ನಡೆಸುತ್ತಿದ್ದ ಶೇಖರ್ ಈ ಹಿಂದೆ ಮನೋಜ್ ಎಂಬಾತನಿಗೆ ಹಣ ನೀಡಿದ್ದನೆಂದು ತಿಳಿದುಬಂದಿದೆ. ತಡರಾತ್ರಿ ಕುಡಿದ ಅಮಲಿನಲ್ಲಿ ಬಂದ ಶೇಖರ್, ಮನೋಜ್ ಬಳಿ ಕೊಟ್ಟ ಹಣ ವಾಪಾಸ್ ಕೊಡುವಂತೆ ಕೇಳಿದ್ದಾನೆ‌. ಸ್ನೇಹಿತರ ಜತೆ ಬಂದಿದ್ದ

➤ ಬೆಂಗಳೂರು ಕೊಟ್ಟ ಸಾಲ ವಾಪಸ್ ಕೇಳಿದ್ದಕ್ಕೆ ಫೈನಾನ್ಷಿಯರ್ ಹತ್ಯೆ! Read More »

ಕರ್ನಾಟಕ, ಕ್ರೈಮ್ ನ್ಯೂಸ್

ಶ್ರದ್ಧಾ ದೇಹದ ಮೂಳೆಗಳನ್ನು ಮಿಕ್ಸರ್ನಲ್ಲಿ ಪುಡಿ ಮಾಡಿದ್ದ ಅಫ್ತಾಬ್! ➤ ಚಾರ್ಜ್ ಶೀಟ್ ನಲ್ಲಿ ಬಹಿರಂಗ

(ನ್ಯೂಸ್ ಕಡಬ)newskadaba.com ಹೊಸದಿಲ್ಲಿ, ಫೆ.08. ಇಡೀ ದೇಶವನ್ನೇ ಬೆಚ್ಚಿಬೀಳಿಸಿದ್ದ ಶ್ರದ್ಧಾ ವಾಕರ್ ಭೀಕರ ಹತ್ಯೆ  ಪ್ರಕರಣಕ್ಕೆ ಸಂಬಂಧಿಸಿದಂತೆ ದೆಹಲಿ ಪೊಲೀಸರು 6,600 ಪುಟಗಳ ಚಾರ್ಜ್ ಶೀಟ್ ಅನ್ನು ಸಲ್ಲಿಸಿದ್ದಾರೆ.  ಶ್ರದ್ಧಾ ಡಿಎನ್‌ಎ ವರದಿಗಳ ಹೊರತಾಗಿಯೂ ತನಿಖೆಯ ಸಂದರ್ಭದಲ್ಲಿ ಸಂಗ್ರಹಿಸಲಾದ ವಿಧಿವಿಜ್ಞಾನ ಸಾಕ್ಷ್ಯಗಳ ಪಟ್ಟಿಯನ್ನು ಚಾರ್ಜ್‌ಶೀಟ್‌ನಲ್ಲಿ ಉಲ್ಲೇಖಿಸಲಾಗಿದ್ದು, ಆರೋಪಿಯು ತನ್ನ ಶ್ರದ್ಧಾಳ ಮೃತದೇಹವನ್ನು ಹೇಗೆ ವಿಲೇವಾರಿ ಮಾಡಿದ ಎಂಬ ವಿವರಗಳನ್ನು ದಾಖಲಿಸಲಾಗಿದೆ. ದೆಹಲಿ ಪೊಲೀಸರು ಸಲ್ಲಿಸಿರುವ 6,636 ಪುಟಗಳ ಚಾರ್ಜ್‌ಶೀಟ್ ಪ್ರಕಾರ, ಆರೋಪಿ ಆಫ್ತಾಬ್ ಅಮೀನ್ ಪೂನಾವಾಲಾ ಮೃತ

ಶ್ರದ್ಧಾ ದೇಹದ ಮೂಳೆಗಳನ್ನು ಮಿಕ್ಸರ್ನಲ್ಲಿ ಪುಡಿ ಮಾಡಿದ್ದ ಅಫ್ತಾಬ್! ➤ ಚಾರ್ಜ್ ಶೀಟ್ ನಲ್ಲಿ ಬಹಿರಂಗ Read More »

ರಾಷ್ಟ್ರೀಯ ನ್ಯೂಸ್

ಕಾಪು: ಚೂರಿಯಿಂದ ಇರಿದು ವ್ಯಕ್ತಿಯೋರ್ವನ ಬರ್ಬರ ಹತ್ಯೆ

(ನ್ಯೂಸ್ ಕಡಬ)newskadaba.com ಕಾಪು, ಫೆ.06. ಚೂರಿಯಿಂದ ಇರಿದು ವ್ಯಕ್ತಿಯನ್ನು ಬರ್ಬರವಾಗಿ ಕೊಲೆಗೈದಿರುವ ಘಟನೆ ಪಾಂಗಾಳದಲ್ಲಿ ನಡೆದಿದೆ. ಪಾಂಗಾಳ ಮಂಡೇಡಿ ನಿವಾಸಿ ಶರತ್ ಶೆಟ್ಟಿ(39) ಹತ್ಯೆಗೀಡಾದ ವ್ಯಕ್ತಿ ಎನ್ನಲಾಗಿದೆ. ಪಾಂಗಾಳ ಶ್ರೀ ಜನಾರ್ದನ ದೇವಸ್ಥಾನದ ಬಳಿ ಅವರ ಮೇಲೆ ಚೂರಿಯಿಂದ ಇರಿಯಲಾಗಿದೆ . ಘಟನೆಯಲ್ಲಿ ಗಂಭೀರ ಗಾಯಗೊಂಡ ಅವರನ್ನು ಆಸ್ಪತ್ರೆಗೆ ದಾಖಲಿಸಲಾಗಿತ್ತು. ಆದರೆ, ಚಿಕಿತ್ಸೆ ಫಲಿಸದೆ ಮೃತಪಟ್ಟಿದ್ದಾರೆ ಎನ್ನಲಾಗಿದೆ. ಇನ್ನು ಕಾಪು ಪೊಲೀಸರು ಸ್ಥಳಕ್ಕೆ ತೆರಳಿ ಪರಿಶೀಲನೆ ನಡೆಸುತ್ತಿದ್ದಾರೆ.

ಕಾಪು: ಚೂರಿಯಿಂದ ಇರಿದು ವ್ಯಕ್ತಿಯೋರ್ವನ ಬರ್ಬರ ಹತ್ಯೆ Read More »

ಕರಾವಳಿ, ಕ್ರೈಮ್ ನ್ಯೂಸ್
Scroll to Top