ರಾಮಮಂದಿರ ದೇಣಿಗೆ ಕಳ್ಳತನ ಬೆನ್ನಲ್ಲೇ ಎಚ್ಚೆತ್ತ ಮುಜರಾಯಿ ಇಲಾಖೆ ಹುಂಡಿ ಎಣಿಕೆಗೆ ನೂತನ ಮಾರ್ಗಸೂಚಿ ಪ್ರಕಟ
(ನ್ಯೂಸ್ ಕಡಬ) newskadaba.com ಜು. 13. ಅಯೋಧ್ಯೆ ರಾಮಮಂದಿರದಲ್ಲಿ ದೇಣಿಗೆ ಹಣ ಕಳ್ಳತನವಾದ ಹಿನ್ನೆಲೆಯಲ್ಲಿ, ರಾಜ್ಯದ ಮುಜರಾಯಿ ದೇವಸ್ಥಾನಗಳ ಹುಂಡಿ ಹಣದ ಸುರಕ್ಷತೆ ಮತ್ತು ಪಾರದರ್ಶಕತೆಗಾಗಿ ಕಂದಾಯ ಇಲಾಖೆ ಪ್ರಧಾನ ಕಾರ್ಯದರ್ಶಿ ರಾಜೇಂದ್ರ ಕುಮಾರ್ ಕಠಾರಿಯಾ ಅವರು ಹುಂಡಿ ನಗದು, ಚಿನ್ನ, ಬೆಳ್ಳಿ, ಭದ್ರತೆಗೆ ಸಂಬಂಧಿಸಿದಂತೆ ರಾಜ್ಯದ ಧಾರ್ಮಿಕ ದತ್ತಿ, ಜಿಲ್ಲಾಧಿಕಾರಿಗಳು, ಜಿಲ್ಲಾ ಎಸ್ಪಿ ಹಾಗೂ ಸಂಬಂಧಿಸಿದ ಅಧಿಕಾರಿಗಳಿಗೆ ಮಾರ್ಗಸೂಚಿಗಳನ್ನು ಬಿಡುಗಡೆ ಮಾಡಿ, ಆದೇಶ ಹೊರಡಿಸಿದ್ದಾರೆ ಪ್ರಮುಖ ಸೂಚನೆಗಳು 1.ತಾಂತ್ರಿಕ ಮತ್ತು ಸಿಸಿಟಿವಿ ಭದ್ರತೆ: ದೇವಸ್ಥಾನದ […]
