Mysore

ಯುವಬ್ರಿಗೇಡ್ ಕಾರ್ಯಕರ್ತನ ಕೊಲೆ ಪ್ರಕರಣ- ಬಿಜೆಪಿ ಕಾರ್ಪೊರೇಟರ್ ಸಹೋದರನ ಬಂಧನ

(ನ್ಯೂಸ್ ಕಡಬ) newskadaba.com ಮೈಸೂರು, ಜು. 11. ಜಿಲ್ಲೆಯ ಟಿ.ನರಸೀಪುರ ಪಟ್ಟಣದಲ್ಲಿ ರವಿವಾರ ನಡೆದಿದ್ದ ಯುವ ಬ್ರಿಗೇಡ್ ಕಾರ್ಯಕರ್ತ ವೇಣುಗೋಪಾಲ್ ನಾಯಕ್ ಎಂಬಾತನ ಕೊಲೆ ಪ್ರಕರಣಕ್ಕೆ ಸಂಬಂಧಿಸಿ, ಮೈಸೂರಿನ ಬಿಜೆಪಿ ಕಾರ್ಪೋರೇಟರ್ ಸಹೋದರ ಶಂಕರ ಅಲಿಯಾಸ್ ತುಪ್ಪ ಎಂಬಾತನನ್ನು ಪೊಲೀಸರು ಬಂಧಿಸಿರುವ ಕುರಿತು ವರದಿಯಾಗಿದೆ. ಹನುಮಜಯಂತಿ ಆಚರಣೆ ವೇಳೆ ನಾಯಕ ನಟ ದಿವಂಗತ ಪುನೀತ್ ರಾಜ್ ಕುಮಾರ್ ರವರ ಭಾವಚಿತ್ರ ಹಾಕುವ ವಿಚಾರದಲ್ಲಿ ಯುವ ಬ್ರಿಗೇಡ್ ಕಾರ್ಯಕರ್ತರ ನಡುವೆ ಗಲಾಟೆ ನಡೆದಿತ್ತು, ಈ ಹಿನ್ನೆಲೆ ರಾಜಿ ಮಾಡಿಕೊಳ್ಳಲು […]

ಯುವಬ್ರಿಗೇಡ್ ಕಾರ್ಯಕರ್ತನ ಕೊಲೆ ಪ್ರಕರಣ- ಬಿಜೆಪಿ ಕಾರ್ಪೊರೇಟರ್ ಸಹೋದರನ ಬಂಧನ Read More »

ಕರ್ನಾಟಕ, ಕ್ರೈಮ್ ನ್ಯೂಸ್

ನಂಜನಗೂಡು ದೇವನೂರು ಮಠದ ಸ್ವಾಮೀಜಿ ನದಿಗೆ ಹಾರಿ ಆತ್ಮಹತ್ಯೆ..!

(ನ್ಯೂಸ್ ಕಡಬ) newskadaba.com ಮೈಸೂರು, ಜು. 10. ಇಲ್ಲಿನ ನಂಜನಗೂಡು ದೇವನೂರು ಮಠದ ಸ್ವಾಮೀಜಿ ಶಿಷ್ಯರಾಗಿದ್ದ ಶಿವಪ್ಪ ದೇವರು (60) ಟಿ.ನರಸೀಪುರ ತಾಲೂಕಿನ ಮೂಡುಕೊತೊರೆಯ ಬಳಿ ಕಾವೇರಿ ನದಿಗೆ ಹಾರಿ ಆತ್ಮಹತ್ಯೆ ಆತ್ಮಹತ್ಯೆ ಮಾಡಿಕೊಂಡಿರುವುದಾಗಿ ವರದಿಯಾಗಿದೆ. ಅನಾರೋಗ್ಯ ಸಮಸ್ಯೆಯಿಂದ ಬಳಲುತ್ತಿದ್ದ ಇವರು ಬಳಿಕ ಮಾನಸಿಕ ಖಿನ್ನತೆಗೆ ಒಳಗಾಗಿದ್ದರು ಎನ್ನಲಾಗಿದೆ‌. ಮಠ ಹಾಗೂ ಮಠದ ಭಕ್ತರಲ್ಲಿ ಉತ್ತಮ ಹೆಸರು ಹೊಂದಿದ್ದ ಸ್ವಾಮೀಜಿ ಅವರು ಮೂಲತಃ ಚಾಮರಾಜನಗರ ಜಿಲ್ಲೆ ಕೊಳ್ಳೇಗಾಲ ತಾಲೂಕಿನ ಕಲಿವೂರು ಗ್ರಾಮದವರು. ಕಳೆದ 45 ವರ್ಷಗಳಿಂದ ದೇವನೂರು

ನಂಜನಗೂಡು ದೇವನೂರು ಮಠದ ಸ್ವಾಮೀಜಿ ನದಿಗೆ ಹಾರಿ ಆತ್ಮಹತ್ಯೆ..! Read More »

ಕರ್ನಾಟಕ, ಕ್ರೈಮ್ ನ್ಯೂಸ್

ಅನ್ನಭಾಗ್ಯಕ್ಕೆ ರೈತರಿಂದಲೇ ಅಕ್ಕಿ ಖರೀದಿಸಿ ➤ಕುರುಬೂರು ಶಾಂತಕುಮಾರ್

 (ನ್ಯೂಸ್ ಕಡಬ) newskadaba ಮೈಸೂರು, ಜೂ. 17. ಅನ್ನಭಾಗ್ಯ ಯೋಜನೆಗೆ ರಾಜ್ಯದ ರೈತರಿಂದಲೇ ಭತ್ತ, ರಾಗಿ, ಜೋಳವನ್ನು ಖರೀದಿಸಬೇಕು ಎಂದು ರೈತ ಸಂಘಟನೆಗಳ ಒಕ್ಕೂಟ ಹಾಗೂ ಕಬ್ಬು ಬೆಳೆಗಾರರ ಸಂಘದ ಅಧ್ಯಕ್ಷ ಕುರುಬೂರು ಶಾಂತಕುಮಾರ್ ಹೇಳಿದ್ದಾರೆ. ಈ ಕುರಿತು ಮೈಸೂರಿನಲ್ಲಿ ಮಾತನಾಡಿದ ಅವರು, ಮುಖ್ಯಮಂತ್ರಿಗಳು ಕೇಂದ್ರ ಸರ್ಕಾರ ಹಾಗೂ ಬೇರೆ ರಾಜ್ಯಗಳಿಂದ ಅಕ್ಕಿ ಖರೀದಿಗೆ ಬೇಡಿಕೆ ಸಲ್ಲಿಸುತ್ತಿದ್ದು, ಅದಕ್ಕೆ ಒಪ್ಪಿಗೆ ಸಿಗುತ್ತಿಲ್ಲ ಎಂದು ಹೇಳಿದ್ದಾರೆ. ಕೇಂದ್ರದಿಂದ ಖರೀದಿಸುವ ಬದಲು ರೈತರಿಂದ ಅಕ್ಕಿ ಖರೀದಿಸಿ ಎಂದು ಹೇಳಿದ್ದಾರೆ. ರಾಜ್ಯದ

ಅನ್ನಭಾಗ್ಯಕ್ಕೆ ರೈತರಿಂದಲೇ ಅಕ್ಕಿ ಖರೀದಿಸಿ ➤ಕುರುಬೂರು ಶಾಂತಕುಮಾರ್ Read More »

ಕರ್ನಾಟಕ

ಬೆಂಗಳೂರು-ಮೈಸೂರು ಎಕ್ಸ್‌ಪ್ರೆಸ್‌ ಹೈವೇನಲ್ಲಿ ಭೀಕರ ಅಪಘಾತ ➤ ಮೂವರ ಸ್ಥಳದಲ್ಲೇ ಮೃತ್ಯು

(ನ್ಯೂಸ್ ಕಡಬ)newskadaba.com  ಚನ್ನಪಟ್ಟಣ ಜೂ.15. ಟಿಂಬರ್‌ ಲಾರಿಗೆ ಹಿಂಬದಿಯಿಂದ ಹೊಂಡಸಿಟಿ ಕಾರು ಡಿಕ್ಕಿ ಹೊಡೆದ ಪರಿಣಾಮ ಮೂವರು ಸ್ಥಳದಲ್ಲೇ ಮೃತಪಟ್ಟು,  ಮೂವರು ಗಾಯಗೊಂಡಿರುವ ಘಟನೆ ದೇವರಹೊಸಹಳ್ಳಿ ಗ್ರಾಮದ ಬೆಂಗಳೂರು-ಮೈಸೂರು ಎಕ್ಸ್‌ಪ್ರೆಸ್‌ ವೇನಲ್ಲಿ ಸಂಭವಿಸಿದೆ. ಮೃತರನ್ನು ಕಾರಿನ ಚಾಲಕ ಕೃಷ್ಣಮೂರ್ತಿ (57), ನಿಧಿ (13), ನಿಶಾ(20) ಎಂದು ಗುರುತಿಸಲಾಗಿದೆ. ಬೆಂಗಳೂರಿನ ಯಲಹಂಕದ ವಿದ್ಯಾರಣ್ಯಪುರ ಮೂಲದ ಶ್ರೀನಿವಾಸ್‌ಮೂರ್ತಿ ಕುಟುಂಬದವರು ಮದುವೆಗೆಂದು ಮೈಸೂರಿನ ಎಚ್‌.ಡಿ.ಕೋಟೆಗೆ ತೆರಳಿ, ಮದುವೆ ಮುಗಿಸಿಕೊಂಡು ವಾಪಸ್‌ ಬೆಂಗಳೂರಿಗೆ ಹಿಂದಿರುಗುತಿದ್ದ ವೇಳೆ ಈ ದುರ್ಘಟನೆ ನಡೆದಿದೆ. .    

ಬೆಂಗಳೂರು-ಮೈಸೂರು ಎಕ್ಸ್‌ಪ್ರೆಸ್‌ ಹೈವೇನಲ್ಲಿ ಭೀಕರ ಅಪಘಾತ ➤ ಮೂವರ ಸ್ಥಳದಲ್ಲೇ ಮೃತ್ಯು Read More »

ಕರ್ನಾಟಕ, ಕ್ರೈಮ್ ನ್ಯೂಸ್

ಭೀಕರ ರಸ್ತೆ ಅಪಘಾತ- ಬಿಜೆಪಿ ಮುಖಂಡ ನಿಧನ

(ನ್ಯೂಸ್ ಕಡಬ)newskadaba.com   ಮೈಸೂರು, ಜೂ 10. ಊಟಿಯಲ್ಲಿ ನಡೆದ ಭೀಕರ ಕಾರು ಅಪಘಾತದಲ್ಲಿ ಮೈಸೂರಿನ ಬಿಜೆಪಿ ಮುಖಂಡ ಮೃತಪಟ್ಟ ಘಟನೆ ನಡೆದಿದೆ. ಮೃತರನ್ನು  ಬಿಜೆಪಿ ನಾಯಕ ಸ್ವಾಮಿಗೌಡ ಎಂದು ಗುರುತಿಸಲಾಗಿದೆ. ನರಸಿಂಹ ರಾಜ ಕ್ಷೇತ್ರದ ಬಿಜೆಪಿ ಪ್ರಧಾನ ಕಾರ್ಯದರ್ಶಿ ಆಗಿದ್ದ ಇವರು, ಕುಟುಂಬದ ಜೊತೆ ಊಟಿಗೆ ಪ್ರವಾಸಕ್ಕೆ ತೆರಳುತ್ತಿದ್ದ  ವೇಳೆ  ನಿಯಂತ್ರಣ ತಪ್ಪಿ ಪಲ್ಟಿ ಹೊಡೆದ ಪರಿಣಾಮ  ಈ ದುರ್ಘಟನೆ ಸಂಭವಿಸಿದೆ.        

ಭೀಕರ ರಸ್ತೆ ಅಪಘಾತ- ಬಿಜೆಪಿ ಮುಖಂಡ ನಿಧನ Read More »

ಕರ್ನಾಟಕ

ರಾಜ್ಯಮಟ್ಟದ ಅಥ್ಲೆಟಿಕ್ ಸ್ಪರ್ಧೆ ➤ ಕಡಬ ಸರಕಾರಿ ಪ್ರೌಢಶಾಲೆಯ ಚರಿಶ್ಮಾ ರಾಷ್ಟ್ರಮಟ್ಟಕ್ಕೆ ಆಯ್ಕೆ

(ನ್ಯೂಸ್ ಕಡಬ) newskadaba.com ಕಡಬ, ಫೆ. 27. ಮೈಸೂರಿನ ಚಾಮುಂಡಿ ವಿಹಾರ ಕ್ರೀಡಾಂಗಣದಲ್ಲಿ ಫೆ. 20ರಂದು ನಡೆದ ಶಾಲಾ ಶಿಕ್ಷಣ ಮತ್ತು ಸಾಕ್ಷರತಾ ಇಲಾಖೆಯ ಪ್ರೌಢಶಾಲಾ ವಿದ್ಯಾರ್ಥಿಗಳ ರಾಜ್ಯಮಟ್ಟದ ಕ್ರೀಡಾಕೂಟದಲ್ಲಿ 17 ರ ವಯೋಮಾನದ ಬಾಲಕಿಯರ ವಿಭಾಗದ1500 ಮೀ. ಓಟದ ಸ್ಪರ್ಧೆಯಲ್ಲಿ ಕಡಬ ಸರಕಾರಿ ಪ್ರೌಢಶಾಲೆಯ ವಿದ್ಯಾರ್ಥಿನಿ ಚರಿಶ್ಮಾ ದ್ವಿತೀಯ ಸ್ಥಾನವನ್ನು ಪಡೆದು ರಾಷ್ಟ್ರಮಟ್ಟದ ಸ್ಪರ್ಧೆಯಲ್ಲಿ ಭಾಗವಹಿಸಲು ಆಯ್ಕೆಯಾಗಿರುತ್ತಾಳೆ. ಇವರಿಗೆ ಶಾಲೆಯ ದೈಹಿಕ ಶಿಕ್ಷಣ ಶಿಕ್ಷಕರಾದ ಲೋಕೇಶ್ ತಂಟೆಪ್ಪಾಡಿ ಅವರು ತರಬೇತಿಯನ್ನು ನೀಡಿರುತ್ತಾರೆ. ಇವರು ಮರ್ಧಾಳ ಗ್ರಾಮದ

ರಾಜ್ಯಮಟ್ಟದ ಅಥ್ಲೆಟಿಕ್ ಸ್ಪರ್ಧೆ ➤ ಕಡಬ ಸರಕಾರಿ ಪ್ರೌಢಶಾಲೆಯ ಚರಿಶ್ಮಾ ರಾಷ್ಟ್ರಮಟ್ಟಕ್ಕೆ ಆಯ್ಕೆ Read More »

ಕರಾವಳಿ, ಕರ್ನಾಟಕ

“ಮೂರ್ತಿ ಬಿಟ್ಟು ಬೇರೆ ಯಾರೂ ನನಗೆ ತಾಳಿ ಕಟ್ಟಬಾರದು” ➤ ದೇವರಿಗೆ ವಿಚಿತ್ರ ಪತ್ರ ವೈರಲ್

(ನ್ಯೂಸ್ ಕಡಬ) newskadaba.com ಚಾಮರಾಜನಗರ, ಡಿ. 30. ಭಕ್ತರೊಬ್ಬರು ವಿಚಿತ್ರ ಬೇಡಿಕೆಯ ಪತ್ರವೊಂದನ್ನು ಹುಂಡಿಗೆ ಹಾಕಿದ ಘಟನೆ ಚಾಮರಾಜನಗರ ತಾಲೂಕಿನ ಮುಕ್ಕಡಹಳ್ಳಿ ಮಾಯಮ್ಮ ದೇವಾಲಯದಲ್ಲಿ ಸಂಭವಿಸಿದೆ.   ಈ ಪತ್ರದಲ್ಲಿ ‘ದೇವರೇ ನನ್ನ ಮೂರ್ತಿ ಬಿಟ್ಟು ನನ್ನ ಕುತ್ತಿಗೆಗೆ ಬೇರೆ ಯಾರೂ ಕೂಡ ತಾಳಿ ಕಟ್ಟಬಾರದು’ ಎಂದು ಬರೆಯಲಾಗಿತ್ತು. ಇದೀಗ ಮಾಯಮ್ಮ ದೇವಾಲಯದಲ್ಲಿ ಭಕ್ತರೊಬ್ಬರು ವಿಚಿತ್ರ ಬೇಡಿಕೆಯ ಪತ್ರವನ್ನು ಹುಂಡಿಗೆ ಹಾಕಿರುವುದು ಸೋಶಿಯಲ್ ಮೀಡಿಯಾದಲ್ಲಿ ವೈರಲ್ ಆಗಿದೆ.

“ಮೂರ್ತಿ ಬಿಟ್ಟು ಬೇರೆ ಯಾರೂ ನನಗೆ ತಾಳಿ ಕಟ್ಟಬಾರದು” ➤ ದೇವರಿಗೆ ವಿಚಿತ್ರ ಪತ್ರ ವೈರಲ್ Read More »

ಕರ್ನಾಟಕ

ದೇಶದ ಪ್ರತಿ ಪಂಚಾಯತ್ ನಲ್ಲಿ ಹಾಲಿನ ಡೈರಿ ಸ್ಥಾಪನೆ ➤ ಗೃಹ ಸಚಿವ ಅಮಿತ್ ಶಾ

(ನ್ಯೂಸ್ ಕಡಬ) newskadaba.com ಮಂಡ್ಯ, ಡಿ. 30. ದೇಶದ ಪ್ರತಿ ಪಂಚಾಯತ್ ನಲ್ಲಿ ಪ್ರೈಮರಿ ಹಾಲಿನ ಡೈರಿ ಸ್ಥಾಪಿಸಲಾಗುವುದು ಎಂದು ಕೇಂದ್ರ ಗೃಹ ಮತ್ತು ಸಹಕಾರ ಸಚಿವ ಅಮಿತ್ ಶಾ ಅವರು ಇಂದು ಮಂಡ್ಯದ ಗೆಜ್ಜಲಗೆರೆ ಡೈರಿ ಆವರಣದಲ್ಲಿ ಮೆಗಾ ಡೈರಿ ಉದ್ಘಾಟಿಸಿ ಮಾತನಾಡಿದರು. ಮುಂದಿನ ಮೂರು ವರ್ಷದಲ್ಲಿ ಒಟ್ಟು 2 ಲಕ್ಷ ಪ್ರಾಥಮಿಕ ಡೇರಿ ನಿರ್ಮಿಸಲಾಗುವುದು. ಈ ಮೂಲಕ, ದೇಶದದಿಂದ ಹಾಲು ರಫ್ತು ಮಾಡಲಾಗುವುದು. ರಾಜ್ಯದಲ್ಲಿ ಹೈನುಗಾರಿಕೆಗೆ ಬೇಕಾಗುವ ತಾಂತ್ರಿಕ ಸೌಲಭ್ಯ ಹಾಗೂ ಸಹಕಾರಿ ಕ್ಷೇತ್ರಕ್ಕೆ

ದೇಶದ ಪ್ರತಿ ಪಂಚಾಯತ್ ನಲ್ಲಿ ಹಾಲಿನ ಡೈರಿ ಸ್ಥಾಪನೆ ➤ ಗೃಹ ಸಚಿವ ಅಮಿತ್ ಶಾ Read More »

ಕರ್ನಾಟಕ

ಗುಂಡೇಟಿಗೆ ಕಾಡೆಮ್ಮೆ ಬಲಿ..!

(ನ್ಯೂಸ್ ಕಡಬ) newskadaba.com ಮೈಸೂರು, ಡಿ. 28. ಕಾಡೆಮ್ಮೆಯೊಂದು ಗುಂಡೇಟಿಗೆ ಬಲಿಯಾದ ಘಟನೆ ನಾಗರಹೊಳೆ ಹುಲಿ ಸಂರಕ್ಷಿತ ಪ್ರದೇಶದ ಮೈಸೂರು-ಗೋಣಿಕೊಪ್ಪ ಹೆದ್ದಾರಿ ಬಳಿ ನಡೆದಿದೆ. ನಾಗರಹೊಳೆ ಆನೆಚೌಕೂರು ವನ್ಯಜೀವಿ ವಲಯ ವ್ಯಾಪ್ತಿಯ ದೇವಮಚ್ಚಿ ಶಾಖೆಯ ಸಿಂಗನೂರು ಗಸ್ತಿನಲ್ಲಿ ಸುಮಾರು ಎಂಟು ವರ್ಷ ಪ್ರಾಯದ ಗಂಡು ಕಾಡೆಮ್ಮೆಯ ಮೃತದೇಹವೊಂದು ಪತ್ತೆಯಾಗಿದೆ. ಘಟನಾ ಸ್ಥಳಕ್ಕೆ ಹುಣಸೂರು ಉಪ ವಿಭಾಗದ ಎಸಿಎಫ್ ದಯಾನಂದ್, ವಲಯ ಅರಣ್ಯಾಧಿಕಾರಿ ದಿಲೀಪ್, ಡಿ.ಆರ್.ಎಫ್.ಓ. ವಿನೋದ್ ಕುಮಾರ್ ಹಾಗೂ ಎಸ್.ಟಿ.ಪಿ.ಎಫ್ ಸಿಬ್ಬಂದಿ ಭೇಟಿ ನೀಡಿದ್ದಾರೆ. ಹಾಗೂ ಆರೋಪಿಗಳನ್ನು

ಗುಂಡೇಟಿಗೆ ಕಾಡೆಮ್ಮೆ ಬಲಿ..! Read More »

ಕರ್ನಾಟಕ, ಕ್ರೈಮ್ ನ್ಯೂಸ್
Death, deadbody, Waterfall

ಊಟ ಮಾಡುವಾಗ ಕುಸಿದು ಬಿದ್ದು ಯುವಕ ಮೃತ್ಯು..!

(ನ್ಯೂಸ್ ಕಡಬ) newskadaba.com ಮೈಸೂರು, ಡಿ. 27. ಯುವಕಯೋರ್ವ ಊಟ‌ ಮಾಡುವಾಗ ಕುಸಿದು ಬಿದ್ದು ಮೃತಪಟ್ಟಿರುವ ಘಟನೆ ಕನಕಪುರದ ಪ್ರೈಡ್ ಹೋಟೆಲ್‌ವೊಂದರಲ್ಲಿ ವರದಿಯಾಗಿದೆ. ಮೃತರನ್ನು ಮೈಸೂರು ಮೂಲದ ಪ್ರೀತಂ (35) ಎಂದು ಗುರುತಿಸಲಾಗಿದೆ. ಬೆಂಗಳೂರಿನಿಂದ ವಾಪಸ್ ಮೈಸೂರಿಗೆ​ ಬರುವಾಗ ಸ್ನೇಹಿತರ ಜೊತೆ ಊಟಕ್ಕೆ ತೆರಳಿದ್ದಾಗ ಈ ಅವಘಡ ಸಂಭವಿಸಿದೆನ್ನಲಾಗಿದೆ. ಪ್ರೀತಂ ಕುಸಿದು ಬಿದ್ದ ದೃಶ್ಯ ಸಿಸಿ ಕ್ಯಾಮೆರಾದಲ್ಲಿ ಸೆರೆಯಾಗಿದೆ.  

ಊಟ ಮಾಡುವಾಗ ಕುಸಿದು ಬಿದ್ದು ಯುವಕ ಮೃತ್ಯು..! Read More »

ಕರ್ನಾಟಕ, ಕ್ರೈಮ್ ನ್ಯೂಸ್
Scroll to Top