ನ್ಯಾಷನಲ್ ಹೆರಾಲ್ಡ್ ಕೇಸ್: ರಾಹುಲ್, ಸೋನಿಯಾ ವಿರುದ್ಧದ ಆರೋಪ ಪರಿಗಣನೆ ಕುರಿತು ತೀರ್ಪು ಕಾಯ್ದಿರಿಸಿದ ದೆಹಲಿ ನ್ಯಾಯಾಲಯ
(ನ್ಯೂಸ್ ಕಡಬ) newskadaba.com, ಜು. 14. ನ್ಯಾಷನಲ್ ಹೆರಾಲ್ಡ್ ಪ್ರಕರಣಕ್ಕೆ ಸಂಬಂಧಿಸಿದಂತೆ ಕಾಂಗ್ರೆಸ್ ನಾಯಕರಾದ ಸೋನಿಯಾ, ರಾಹುಲ್ ಗಾಂಧಿ ಹಾಗೂ ಉಳಿದ ಐವರ ವಿರುದ್ಧದ ಹಣ ವರ್ಗಾವಣೆ ಆರೋಪವನ್ನು ಪರಿಗಣಿಸಬೇಕೆ ಎಂಬ ಕುರಿತು ದೆಹಲಿ ನ್ಯಾಯಾಲಯ ತೀರ್ಪು ಕಾಯ್ದಿರಿಸಿದೆ. ಜುಲೈ 29ರಂದು ಆದೇಶ ಪ್ರಕಟಿಸುವುದಾಗಿ ರೋಸ್ ಅವೆನ್ಯೂ ಕೋರ್ಟ್ ಸಂಕೀರ್ಣದಲ್ಲಿನ ಭ್ರಷ್ಟಾಚಾರ ತಡೆ ಕಾಯ್ದೆಯಡಿ ರೂಪುಗೊಂಡಿರುವ ವಿಶೇಷ ನ್ಯಾಯಾಲಯದ ನ್ಯಾಯಾಧೀಶ ವಿಶಾಲ್ ಗೋಗ್ನೆ ತಿಳಿಸಿದ್ದಾರೆ. ಗಾಂಧಿ ಕುಟುಂಬದವರಲ್ಲದೇ ಸುಮನ್ ದುಬೆ, ಸ್ಯಾಮ್ ಪಿತ್ರೋಡಾ, ಸುನಿಲ್ ಭಂಡಾರಿ ಹಾಗೂ ಯಂಗ್ […]

