navadehali

ಮನಮೋಹನ್‌ ಸಿಂಗ್‌ಗೆ ಸಿಖ್‌ ಸಂಪ್ರದಾಯದಂತೆ ಅಂತ್ಯಕ್ರಿಯೆ; ಪಾರ್ಥಿವ ಶರೀರಕ್ಕೆ ಹೆಗಲು ಕೊಟ್ಟ ರಾಹುಲ್‌ ಗಾಂಧಿ

(ನ್ಯೂಸ್ ಕಡಬ) newskadaba.com ಡಿ. 28: ಗುರುವಾರ ರಾತ್ರಿ ವಿಧಿವಶರಾದ ಮಾಜಿ ಪ್ರಧಾನಿ ಡಾ. ಮನಮೋಹನ್ ಸಿಂಗ್ ಅವರ ಅಂತ್ಯಕ್ರಿಯೆ ಇಂದು ಸಕಲ ಸರ್ಕಾರಿ ಗೌರವಗಳೊಂದಿಗೆ ನೆರವೇರಿತು. ಕೆಂಪು ಕೋಟೆಯ ಹಿಂಭಾಗದಲ್ಲಿರುವ ನಿಗಮ್‌ಬೋಧ್‌ಘಾಟ್‌ನಲ್ಲಿ ಸಿಖ್‌ ಸಂಪ್ರದಾಯ ಪ್ರಕಾರ ಮನಮೋಹನ್‌ ಸಿಂಗ್‌ ಅವರ ಅಂತ್ಯಕ್ರಿಯೆ ನಡೆಸಲಾಯಿತು. ಇಂದು ಬೆಳಗ್ಗೆ 9.30ರವರೆಗೆ ಸಿಂಗ್‌ ಅವರ ಪಾರ್ಥಿವ ಶರೀರವನ್ನು ಸಾರ್ವಜನಿಕರ ದರ್ಶನಕ್ಕಾಗಿ ಎಐಸಿಸಿ ಕೇಂದ್ರ ಕಚೇರಿಯಲ್ಲಿ ಇಡಲಾಗಿತ್ತು. ನಂತರ ನಿಗಮ್‌ಬೋಧ್‌ ಘಾಟ್‌ವರೆಗೆ ಅಂತಿಮ ಯಾತ್ರೆ ನಡೆಸಲಾಯಿತು. ನಿಗಮ್‌ಬೋಧ್‌ ಘಾಟ್‌ನಲ್ಲಿ ಅವರ ಪಾರ್ಥೀವ […]

ಮನಮೋಹನ್‌ ಸಿಂಗ್‌ಗೆ ಸಿಖ್‌ ಸಂಪ್ರದಾಯದಂತೆ ಅಂತ್ಯಕ್ರಿಯೆ; ಪಾರ್ಥಿವ ಶರೀರಕ್ಕೆ ಹೆಗಲು ಕೊಟ್ಟ ರಾಹುಲ್‌ ಗಾಂಧಿ Read More »

ರಾಷ್ಟ್ರೀಯ ನ್ಯೂಸ್

ಇಂದು ಎಲ್ಲಾ ಸರ್ಕಾರಿ ಗೌರವಗಳೊಂದಿಗೆ ಮಾಜಿ ಪ್ರಧಾನಿ ಮನಮೋಹನ್ ಸಿಂಗ್ ಅಂತ್ಯಕ್ರಿಯೆ

(ನ್ಯೂಸ್ ಕಡಬ) newskadaba.com ಡಿ. 28: ಮಾಜಿ ಪ್ರಧಾನಿ ಮನಮೋಹನ್ ಸಿಂಗ್ ಅವರ ಅಂತ್ಯಕ್ರಿಯೆ ಇಂದು ದೆಹಲಿಯ ಸಾರ್ವಜನಿಕ ಚಿತಾಗಾರವಾದ ನಿಗಮಬೋಧ ಘಾಟ್‌ನಲ್ಲಿ ಸಕಲ ಸರ್ಕಾರಿ ಗೌರವಗಳೊಂದಿಗೆ ನಡೆಯಲಿದೆ. ರಾಷ್ಟ್ರಪತಿ ದ್ರೌಪದಿ ಮುರ್ಮು ಮತ್ತು ಪಿಎಂ ಮೋದಿ ಸೇರಿದಂತೆ ಹಲವಾರು ರಾಜಕಾರಣಿಗಳು ಅಂತ್ಯಕ್ರಿಯೆಯಲ್ಲಿ ಪಾಲ್ಗೊಳ್ಳಲಿದ್ದಾರೆ. ಅಂತ್ಯಕ್ರಿಯೆಯನ್ನು ಬೆಳಿಗ್ಗೆ 11:45 ರ ಸುಮಾರಿಗೆ ನೆರವೇರಿಸಲಾಗುವುದು. ಸಿಂಗ್ ಅವರಿಗೆ ಗೌರವ ಸೂಚಕವಾಗಿ ಕೇಂದ್ರವು ದೇಶಾದ್ಯಂತ ಏಳು ದಿನಗಳ ಶೋಕಾಚರಣೆಯನ್ನು ಘೋಷಿಸಿದೆ. ಈ ಅವಧಿಯಲ್ಲಿ ರಾಷ್ಟ್ರಧ್ವಜವನ್ನು ಭಾರತದಾದ್ಯಂತ ಅರ್ಧಕ್ಕೆ ಹಾರಿಸಲಾಗುತ್ತದೆ. ಮುಂದಿನ

ಇಂದು ಎಲ್ಲಾ ಸರ್ಕಾರಿ ಗೌರವಗಳೊಂದಿಗೆ ಮಾಜಿ ಪ್ರಧಾನಿ ಮನಮೋಹನ್ ಸಿಂಗ್ ಅಂತ್ಯಕ್ರಿಯೆ Read More »

ಬ್ರೇಕಿಂಗ್ ನ್ಯೂಸ್

ಸಂಸತ್ ಭವನದ ಯಾವುದೇ ಗೇಟ್‌ಗಳಲ್ಲಿ ಯಾವ ಸಂಸದರು ಕೂಡ ಪ್ರತಿಭಟನೆ ನಡೆಸಬಾರದು- ಲೋಕಸಭೆ ಸ್ಪೀಕರ್

(ನ್ಯೂಸ್ ಕಡಬ) newskadaba.com ಡಿ. 20 ನವದೆಹಲಿ : ಸಂಸತ್ ಭವನದ ಯಾವುದೇ ಗೇಟ್‌ಗಳಲ್ಲಿ ಯಾವ ಸಂಸದರು ಕೂಡ ಪ್ರತಿಭಟನೆ ನಡೆಸಬಾರದೆಂದು ಲೋಕಸಭೆ ಸ್ಪೀಕರ್ ಓಂ ಬಿರ್ಲಾ ಅವರು ಕಟ್ಟುನಿಟ್ಟಿನ ಸೂಚನೆ ನೀಡಿದ್ದಾರೆ ಎಂದು ಮೂಲಗಳು ತಿಳಿಸಿವೆ. ಸಂಸತ್ ಭವನದ ಮಕರ ದ್ವಾರದಲ್ಲಿ ಆಡಳಿತಾರೂಢ ಎನ್‌ಡಿಎ ಮತ್ತು ವಿರೋಧ ಪಕ್ಷದ ಸಂಸದರ ನಡುವೆ ಗಲಾಟೆ ನಡೆದ ನಂತರ ಈ ಸೂಚನೆಗಳು ನೀಡಲಾಗಿದೆ. ಸಂಸತ್ತಿನ ಯಾವುದೇ ಪ್ರವೇಶ ದ್ವಾರಗಳಲ್ಲಿ ಪ್ರತಿಭಟನೆ ನಡೆಸದಂತೆ ಬಿರ್ಲಾ ಅವರು ಎಲ್ಲಾ ಸಂಸದರಿಗೆ ಸೂಚನೆ

ಸಂಸತ್ ಭವನದ ಯಾವುದೇ ಗೇಟ್‌ಗಳಲ್ಲಿ ಯಾವ ಸಂಸದರು ಕೂಡ ಪ್ರತಿಭಟನೆ ನಡೆಸಬಾರದು- ಲೋಕಸಭೆ ಸ್ಪೀಕರ್ Read More »

ರಾಷ್ಟ್ರೀಯ ನ್ಯೂಸ್

‘ಒಂದು ದೇಶ, ಒಂದು ಚುನಾವಣೆ’ ಪರ 269 ಮತ, ವಿರುದ್ಧವಾಗಿ 198 ಮತ

(ನ್ಯೂಸ್ ಕಡಬ) newskadaba.com ಡಿ. 17 ನವದೆಹಲಿ: ಪ್ರತಿಪಕ್ಷಗಳ ತೀವ್ರ ವಿರೋಧದ ನಡುವೆಯೇ ಕೇಂದ್ರ ಸರ್ಕಾರ ಲೋಕಸಭೆ ಮತ್ತು ವಿಧಾನಸಭೆ ಚುನಾವಣೆಗಳನ್ನು ಏಕಕಾಲದಲ್ಲಿ ನಡೆಸುವ ಸಂವಿಧಾನಾತ್ಮಕ ತಿದ್ದುಪಡಿ ಮಸೂದೆಯನ್ನು ಮಂಗಳವಾರ ಲೋಕಸಭೆಯಲ್ಲಿ ಮಂಡಿಸಿದೆ. “ಒಂದು ದೇಶ, ಒಂದು ಚುನಾವಣೆ” ಮಸೂದೆ ಎಂದು ಉಲ್ಲೇಖಿಸಲ್ಪಡುವ ಸಂವಿಧಾನ(ನೂರಾ ಇಪ್ಪತ್ತೊಂಬತ್ತನೇ ತಿದ್ದುಪಡಿ) ತಿದ್ದುಪಡಿ ಮಸೂದೆ, 2024 ಅನ್ನು ಕೇಂದ್ರ ಕಾನೂನು ಸಚಿವ ಅರ್ಜುನ್ ರಾಮ್ ಮೇಘವಾಲ್ ಅವರು ಇಂದು ಲೋಕಸಭೆಯಲ್ಲಿ ಮಂಡಿಸಿದರು. ಈ ಮಸೂದೆಗೆ ಪ್ರತಿಪಕ್ಷಗಳು ತೀವ್ರ ವಿರೋಧ ವ್ಯಕ್ತಪಡಿಸಿದ್ದು, ಇದು

‘ಒಂದು ದೇಶ, ಒಂದು ಚುನಾವಣೆ’ ಪರ 269 ಮತ, ವಿರುದ್ಧವಾಗಿ 198 ಮತ Read More »

ರಾಷ್ಟ್ರೀಯ ನ್ಯೂಸ್

‘ಒಂದು ರಾಷ್ಟ್ರ ಒಂದು ಚುನಾವಣೆ’ ಮಸೂದೆ ಮಂಡನೆ; ವಿಪಕ್ಷಗಳಿಂದ ಭಾರೀ ವಿರೋಧ

(ನ್ಯೂಸ್ ಕಡಬ) newskadaba.com ಡಿ. 17ನವದೆಹಲಿ: ಸಂಸತ್‌ನ ಚಳಿಗಾಲದ ಅಧಿವೇಶನದಲ್ಲಿ ಕೇಂದ್ರ ಸರ್ಕಾರದ ಬಹುನಿರೀಕ್ಷಿತ ‘ಒಂದು ರಾಷ್ಟ್ರ ಒಂದು ಚುನಾವಣೆ’ ಮಸೂದೆ ಮಂಗಳವಾರ ಮಂಡನೆಯಾಗಿದೆ. ಈ ಪ್ರಸ್ತಾವನೆಯು ಲೋಕಸಭೆ, ರಾಜ್ಯ ವಿಧಾನಸಭೆಗಳು ಮತ್ತು ಸ್ಥಳೀಯ ಸಂಸ್ಥೆಗಳಿಗೆ ಏಕಕಾಲದಲ್ಲಿ ಚುನಾವಣೆಗಳನ್ನು ನಡೆಸುವ ಗುರಿಯನ್ನು ಹೊಂದಿದೆ. ಕೇಂದ್ರ ಕಾನೂನು ಸಚಿವ ಅರ್ಜುನ್ ರಾಮ್ ಮೇಘವಾಲ್ ಅವರು ʼಒಂದು ರಾಷ್ಟ್ರ, ಒಂದು ಚುನಾವಣೆʼ ಮಸೂದೆಯನ್ನು ಮಂಡಿಸಿದರು. ಮಸೂದೆ ಮಂಡನೆಯಾಗುತ್ತಿದ್ದಂತೆ ಪ್ರತಿಪಕ್ಷಗಳು ತೀವ್ರವಾಗಿ ವಿರೋಧ ವ್ಯಕ್ತಪಡಿಸಿವೆ. ಈ ಬಗ್ಗೆ ಪ್ರತಿಭಟನೆ ನಡೆಸಿದ ಕಾಂಗ್ರೆಸ್‌ ಸಂಸದ

‘ಒಂದು ರಾಷ್ಟ್ರ ಒಂದು ಚುನಾವಣೆ’ ಮಸೂದೆ ಮಂಡನೆ; ವಿಪಕ್ಷಗಳಿಂದ ಭಾರೀ ವಿರೋಧ Read More »

ರಾಷ್ಟ್ರೀಯ ನ್ಯೂಸ್

ಪ್ರಖ್ಯಾತ ತಬಲಾ ವಾದಕ ಜಾಕೀರ್ ಹುಸೇನ್ ನಿಧನ

(ನ್ಯೂಸ್ ಕಡಬ) newskadaba.com ಡಿ. 16 ದೆಹಲಿ: ತಬಲಾ ಮಾಂತ್ರಿಕ ಜಾಕಿರ್ ಹುಸೇನ್ ಅಮೆರಿಕದ ಸ್ಯಾನ್ ಫ್ರಾನ್ಸಿಸ್ಕೋದ ಆಸ್ಪತ್ರೆಯಲ್ಲಿ ನಿಧನರಾಗಿದ್ದಾರೆ ಎಂದು ಅವರ ಕುಟುಂಬ ಸೋಮವಾರ ತಿಳಿಸಿದೆ. ಅವರಿಗೆ 73 ವರ್ಷ. ಜಾಕಿರ್ ಹುಸೇನ್ ಅವರು ಇಡಿಯೋಪಥಿಕ್ ಪಲ್ಮನರಿ ಫೈಬ್ರೋಸಿಸ್‌ನಿಂದ ಉಂಟಾಗುವ ತೊಂದರೆಗಳಿಂದ ಸಾವನ್ನಪ್ಪಿದ್ದಾರೆ ಎಂದು ಕುಟುಂಬ ಹೇಳಿಕೆಯಲ್ಲಿ ತಿಳಿಸಿದೆ. ಕಳೆದ ಎರಡು ವಾರಗಳಿಂದ ತೀವ್ರ ನಿಗಾ ಘಟಕದಲ್ಲಿ ಚಿಕಿತ್ಸೆ ಪಡೆಯುತ್ತಿದ್ದರು. ಜಾಕಿರ್ ಹುಸೇನ್​ಗೆ 2009ರಲ್ಲಿ ಗ್ರ್ಯಾಮಿ ಪ್ರಶಸ್ತಿಯನ್ನು ನೀಡಿ ಗೌರವಿಸಲಾಗಿತ್ತು. 1988 ರಲ್ಲಿ ಪದ್ಮಶ್ರೀ ಮತ್ತು

ಪ್ರಖ್ಯಾತ ತಬಲಾ ವಾದಕ ಜಾಕೀರ್ ಹುಸೇನ್ ನಿಧನ Read More »

ಬ್ರೇಕಿಂಗ್ ನ್ಯೂಸ್

ವಿಜಯ್ ದಿವಸ್ : ಸೈನಿಕರ ನಿಸ್ವಾರ್ಥ ಸಮರ್ಪಣೆಗೆ ರಾಷ್ಟ್ರಪತಿ ದ್ರೌಪದಿ ಮುರ್ಮು, ಪ್ರಧಾನಿ ಮೋದಿ ನಮನ

(ನ್ಯೂಸ್ ಕಡಬ) newskadaba.com ಡಿ. 16: ರಾಷ್ಟ್ರಪತಿ ದ್ರೌಪದಿ ಮುರ್ಮು, ಪ್ರಧಾನಿ ನರೇಂದ್ರ ಮೋದಿ ಮತ್ತು ರಕ್ಷಣಾ ಸಚಿವ ರಾಜನಾಥ್ ಸಿಂಗ್ ಅವರು ಮಂಗಳವಾರ ವಿಜಯ್ ದಿವಸ್ ಸ್ಮರಣಾರ್ಥ ರಾಷ್ಟ್ರದ ನೇತೃತ್ವ ವಹಿಸಿ, 1971 ರ ಯುದ್ಧದ ಹುತಾತ್ಮರಿಗೆ ಗೌರವ ಸಲ್ಲಿಸಿದರು. ಅಧ್ಯಕ್ಷ ಮುರ್ಮು, ಸಾಮಾಜಿಕ ಮಾಧ್ಯಮ ಪ್ಲಾಟ್‌ಫಾರ್ಮ್ ಎಕ್ಸ್‌ನಲ್ಲಿನ ತನ್ನ ಪೋಸ್ಟ್‌ನಲ್ಲಿ, ಬ್ರೇವ್‌ಹಾರ್ಟ್‌ಗಳಿಗೆ ಹೃತ್ಪೂರ್ವಕ ಕೃತಜ್ಞತೆಯನ್ನು ವ್ಯಕ್ತಪಡಿಸಿದ್ದಾರೆ: “ವಿಜಯ್ ದಿವಸ್‌ನಲ್ಲಿ, 1971 ರ ಯುದ್ಧದ ಸಮಯದಲ್ಲಿ ಅದಮ್ಯ ಧೈರ್ಯವನ್ನು ಪ್ರದರ್ಶಿಸಿ, ಭಾರತಕ್ಕೆ ವಿಜಯವನ್ನು ತಂದುಕೊಟ್ಟ ನಮ್ಮ

ವಿಜಯ್ ದಿವಸ್ : ಸೈನಿಕರ ನಿಸ್ವಾರ್ಥ ಸಮರ್ಪಣೆಗೆ ರಾಷ್ಟ್ರಪತಿ ದ್ರೌಪದಿ ಮುರ್ಮು, ಪ್ರಧಾನಿ ಮೋದಿ ನಮನ Read More »

ರಾಷ್ಟ್ರೀಯ ನ್ಯೂಸ್

ಉಪರಾಷ್ಟ್ರಪತಿ ವಿರುದ್ಧ ಇಂಡಿಯಾ ಮೈತ್ರಿಕೂಟದಿಂದ ಅವಿಶ್ವಾಸ ನಿರ್ಣಯ;ದೇಶದ ಇತಿಹಾಸದಲ್ಲೇ ಮೊದಲು!

(ನ್ಯೂಸ್ ಕಡಬ) newskadaba.com .ಡಿ. 11. ನವದೆಹಲಿ:  ತಮ್ಮ ಬಗ್ಗೆ ಪಕ್ಷಪಾತ ಧೋರಣೆ ಅನುಸರಿಸುತ್ತಿದ್ದಾರೆ ಎಂದು ಆರೋಪಿಸಿ ಕಾಂಗ್ರೆಸ್‌ ನೇತೃತ್ವದ ಇಂಡಿಯಾ ಮೈತ್ರಿ ಕೂಟವು ರಾಜ್ಯಸಭೆ ಸ್ಪೀಕರ್‌ ಕೂಡ ಆದ ಉಪರಾಷ್ಟ್ರಪತಿ ಜಗದೀಪ್‌ ಧನಕರ್‌ ವಿರುದ್ಧ ಮಂಗಳವಾರ ಅವಿಶ್ವಾಸ ನಿರ್ಣಯದ ನೋಟಿಸ್‌ ನೀಡಿವೆ. ಈ ಹಿಂದೆ 3 ಬಾರಿ ಲೋಕಸಭೆ ಸಭಾಪತಿ ವಿರುದ್ಧ ಅವಿಶ್ವಾಸ ನಿರ್ಣಯ ಮಂಡನೆ ಮಾಡಲಾಗಿತ್ತು. ಮೂರೂ ವಿಫಲವಾಗಿದ್ದವು. ಆದರೆ ರಾಜ್ಯಸಭೆ ಸಭಾಪತಿ ವಿರುದ್ಧ ಅವಿಶ್ವಾಸ ನಿರ್ಣಯ ಮಂಡನೆ ಇದೇ ಮೊದಲು.ಕಾಂಗ್ರೆಸ್‌ , ತೃಣಮೂಲ

ಉಪರಾಷ್ಟ್ರಪತಿ ವಿರುದ್ಧ ಇಂಡಿಯಾ ಮೈತ್ರಿಕೂಟದಿಂದ ಅವಿಶ್ವಾಸ ನಿರ್ಣಯ;ದೇಶದ ಇತಿಹಾಸದಲ್ಲೇ ಮೊದಲು! Read More »

ರಾಷ್ಟ್ರೀಯ ನ್ಯೂಸ್

ಬರ ಪರಿಹಾರ ನಿಧಿ ಸಮಸ್ಯೆ: ಕೇಂದ್ರ, ಕರ್ನಾಟಕ ಸರ್ಕಾರವೇ ಬಗೆಹರಿಸಿಕೊಳ್ಳಬೇಕು- ಸುಪ್ರೀಂ ಕೋರ್ಟ್

(ನ್ಯೂಸ್ ಕಡಬ) newskadaba.com . 10. ನವದೆಹಲಿ: ಬರ ನಿರ್ವಹಣೆಗಾಗಿ ರಾಷ್ಟ್ರೀಯ ವಿಪತ್ತು ನಿರ್ವಹಣಾ ನಿಧಿಯಿಂದ (NDRF) ಆರ್ಥಿಕ ನೆರವು ಬಿಡುಗಡೆ ವಿವಾದವನ್ನು ಕೇಂದ್ರ ಹಾಗೂ ಕರ್ನಾಟಕ ಸರ್ಕಾರ ಬಗೆಹರಿಸಿಕೊಳ್ಳಬೇಕು ಎಂದು ಸುಪ್ರೀಂಕೋರ್ಟ್ ಮಂಗಳವಾರ ಹೇಳಿದೆ. ಎನ್ ಡಿಆರ್ ಎಫ್ ನಿಂದ ಅನುದಾನ ಬಿಡುಗಡೆ ಮಾಡುವಂತೆ ಕೇಂದ್ರಕ್ಕೆ ನಿರ್ದೇಶನ ನೀಡಬೇಕು ಎಂದು ಕೋರಿ ಕರ್ನಾಟಕ ಸರ್ಕಾರ ಸಲ್ಲಿಸಿದ ಅರ್ಜಿ ವಿಚಾರಣೆ ನಡೆಸಿದ ನ್ಯಾಯಾಧೀಶರಾದ ಬಿ.ಆರ್. ಗವಾಯಿ ಮತ್ತು ಕೆ.ವಿ. ವಿಶ್ವನಾಥನ್ ಅವರನ್ನೊಳಗೊಂಡ ನ್ಯಾಯಪೀಠ, ಇಲ್ಲಿಯವರೆಗೂ ಎಷ್ಟು ಹಣವನ್ನು ಬಿಡುಗಡೆ

ಬರ ಪರಿಹಾರ ನಿಧಿ ಸಮಸ್ಯೆ: ಕೇಂದ್ರ, ಕರ್ನಾಟಕ ಸರ್ಕಾರವೇ ಬಗೆಹರಿಸಿಕೊಳ್ಳಬೇಕು- ಸುಪ್ರೀಂ ಕೋರ್ಟ್ Read More »

ಕರ್ನಾಟಕ, ಬ್ರೇಕಿಂಗ್ ನ್ಯೂಸ್

ಎಸ್ಎಂ ಕೃಷ್ಣ ನಿಧನಕ್ಕೆ ಪ್ರಧಾನಿ ಮೋದಿ ಸಂತಾಪ

(ನ್ಯೂಸ್ ಕಡಬ) newskadaba.com . 10.ನವದೆಹಲಿ:   ಕರ್ನಾಟಕದ  ಮಾಜಿ ಮುಖ್ಯಮಂತ್ರಿ ಎಸ್​ಎಂ ಕೃಷ್ಣ ರವರ ಅಗಲಿಕೆಗೆ ಪ್ರಧಾನಿ ನರೇಂದ್ರ ಮೋದಿಯವರು  ಸಂತಾಪ ಸೂಚಿಸಿದ್ದಾರೆ. ಎಕ್ಸ್‌ನಲ್ಲಿ ಪೋಸ್ಟ್‌ವೊಂದನ್ನು ಮಾಡಿರುವ ಪ್ರಧಾನಿ ಮೋದಿ ಭಾವಪೂರ್ವ ಶ್ರದ್ಧಾಂಜಲಿ ಅರ್ಪಿಸಿದ್ದಾರೆ. ಎಸ್.ಎಂ.ಕೃಷ್ಣಾಜಿಯವರು ಅಸಾಧಾರಣ ನಾಯಕರಾಗಿದ್ದರು, ಸಮಾಜದ ಎಲ್ಲ ವರ್ಗಗಳ ಜನರಿಂದ ಮೆಚ್ಚುಗೆಗೆ ಪಾತ್ರರಾಗಿದ್ದರು. ಅವರು ಯಾವಾಗಲೂ ಇತರರ ಜೀವನವನ್ನು ಸುಧಾರಿಸಲು ದಣಿವರಿಯಿಲ್ಲದೆ ಶ್ರಮಿಸಿದರು. ಅವರು ಕರ್ನಾಟಕದ ಮುಖ್ಯಮಂತ್ರಿಯಾಗಿ ತಮ್ಮ ಅಧಿಕಾರಾವಧಿಯಲ್ಲಿ ವಿಶೇಷವಾಗಿ ಮೂಲಸೌಕರ್ಯ ಅಭಿವೃದ್ಧಿಗೆ ಗಮನಹರಿಸಿದ್ದಾರೆ. ಎಸ್.ಎಂ.ಕೃಷ್ಣ ಜೀ ಅವರು ಸಮೃದ್ಧ ಓದುಗ ಮತ್ತು

ಎಸ್ಎಂ ಕೃಷ್ಣ ನಿಧನಕ್ಕೆ ಪ್ರಧಾನಿ ಮೋದಿ ಸಂತಾಪ Read More »

ಕರ್ನಾಟಕ
Scroll to Top