navadehali

ಪ್ರಧಾನಮಂತ್ರಿ ಇಂಟರ್ನ್ ಶಿಪ್ ಯೋಜನೆಗೆ ಅರ್ಜಿ ಆಹ್ವಾನ

(ನ್ಯೂಸ್ ಕಡಬ)newskadaba.com, ಅ. 12 ನವದೆಹಲಿ : ಪಿಎಂ ಇಂಟರ್ನ್‌ಶಿಪ್ ಯೋಜನೆ 2024  ಫಲಾನುಭವಿಗಳಿಗಾಗಿ ಅರ್ಜಿ ಕರೆಯಲಾಗಿದ್ದು, ನೋಂದಣಿ ಪ್ರಕ್ರಿಯೆ ಇಂದಿನಿಂದ ಆರಂಭವಾಗಲಿದೆ. ಕಾರ್ಪೊರೇಟ್ ವ್ಯವಹಾರಗಳ ಸಚಿವಾಲಯ, ಎಂಸಿಎ ಅಕ್ಟೋಬರ್ 12, 2024 ರಂದು ಅರ್ಜಿ ಸ್ವೀಕರಿಸಲು ಆರಂಭಿಸುತ್ತಿದೆ. ಇಂಟರ್ನ್‌ಶಿಪ್ ಯೋಜನೆಗೆ ಅರ್ಜಿ ಸಲ್ಲಿಸಲು ಬಯಸುವ ಅಭ್ಯರ್ಥಿಗಳು ಪಿಎಂ ಇಂಟರ್ನ್ಶಿಪ್ ಯೋಜನೆಯ ಅಧಿಕೃತ ವೆಬ್ಸೈಟ್ pminternship.mca.gov.in ಗೆ ಲಾಗಿನ್‌ ಆಗಿ ಅರ್ಜಿ ಸಲ್ಲಿಸಬಹುದು. ಇಂದು ಸಂಜೆ 5 ಗಂಟೆಗೆ ಯುವ ನೋಂದಣಿ ಮತ್ತು ಪ್ರೊಫೈಲ್ ರಚನೆಗಾಗಿ ಪೋರ್ಟಲ್ […]

ಪ್ರಧಾನಮಂತ್ರಿ ಇಂಟರ್ನ್ ಶಿಪ್ ಯೋಜನೆಗೆ ಅರ್ಜಿ ಆಹ್ವಾನ Read More »

ಉದ್ಯೋಗ, ಬ್ರೇಕಿಂಗ್ ನ್ಯೂಸ್, ರಾಷ್ಟ್ರೀಯ ನ್ಯೂಸ್

ಏಸಿಯಾನ್ ಶೃಂಗಸಭೆಯ ಸಂದರ್ಭದಲ್ಲಿ ಪ್ರಧಾನಿ ಮೋದಿ – ಆಂಟನಿ ಬ್ಲಿಂಕನ್ ಭೇಟಿ

(ನ್ಯೂಸ್ ಕಡಬ)newskadaba.com, ಅ. 11 ನವದೆಹಲಿ :  ಲಾವೋಸ್‌ನಲ್ಲಿ ನಡೆಯುತ್ತಿರುವ ಆಸಿಯಾನ್-ಭಾರತ ಶೃಂಗಸಭೆಯ ಹಿನ್ನೆಲೆಯಲ್ಲಿ ಪ್ರಧಾನಿ ನರೇಂದ್ರ ಮೋದಿ ಅವರು ಶುಕ್ರವಾರ ಅಮೇರಿಕಾದ ವಿದೇಶಾಂಗ ಕಾರ್ಯದರ್ಶಿ ಆಂಟೋನಿ ಬ್ಲಿಂಕನ್ ಅವರನ್ನು ಭೇಟಿಯಾದರು. ಸಭೆಯಲ್ಲಿ, ಪಿಎಂ ಮೋದಿ ಯುಎಸ್‌ನಲ್ಲಿ ಮಿಲ್ಟನ್ ಚಂಡಮಾರುತದಿಂದ ಸಂಭವಿಸಿದ ಜೀವಹಾನಿಯ ಬಗ್ಗೆ ಸಂತಾಪ ಸೂಚಿಸಿದರು ಮತ್ತು ದ್ವಿಪಕ್ಷೀಯ ಸಂಬಂಧಗಳನ್ನು ಬಲಪಡಿಸುವ ಮತ್ತು ಪ್ರಾದೇಶಿಕ ವಿಷಯಗಳಲ್ಲಿನ ಸಹಕಾರದ ಬಗ್ಗೆಯೂ ಚರ್ಚಿಸಿದರು.ಗುರುವಾರ, ಪ್ರಧಾನಿ ಮೋದಿ ಅವರು ಲಾವೋಸ್‌ನಲ್ಲಿ ಏಸಿಯಾನ್-ಭಾರತ ಶೃಂಗಸಭೆಯ ಸಂದರ್ಭದಲ್ಲಿ ಜಪಾನ್ ಮತ್ತು ನ್ಯೂಜಿಲೆಂಡ್‌ನ ತಮ್ಮ

ಏಸಿಯಾನ್ ಶೃಂಗಸಭೆಯ ಸಂದರ್ಭದಲ್ಲಿ ಪ್ರಧಾನಿ ಮೋದಿ – ಆಂಟನಿ ಬ್ಲಿಂಕನ್ ಭೇಟಿ Read More »

ಅಂತರ್ರಾಷ್ಟ್ರೀಯ ನ್ಯೂಸ್

ಕೇಂದ್ರದಿಂದ 1,78,173 ಕೋಟಿ ತೆರಿಗೆ ಹಣ ಹಂಚಿಕೆ

(ನ್ಯೂಸ್ ಕಡಬ)newskadaba.com, ಅ. 11ನವದೆಹಲಿ : ಕೇಂದ್ರ ಸರ್ಕಾರವು ₹1,78,173 ಕೋಟಿ ತೆರಿಗೆ ಪಾಲನ್ನು ಹಂಚಿಕೆ ಮಾಡಿದ್ದು, ಇದರಲ್ಲಿ ಕರ್ನಾಟಕಕ್ಕೆ ₹6,498 ಕೋಟಿ ಸಿಕ್ಕಿದೆ. ಬಿಜೆಪಿ ಆಡಳಿತದ ರಾಜ್ಯಗಳಿಗೆ ಮತ್ತು ಮಿತ್ರ ಪಕ್ಷಗಳ ಸರ್ಕಾರಕ್ಕೆ ಸಿಂಹಪಾಲು ದೊರೆತಿದೆ.   “ಅಭಿವೃದ್ಧಿ ಮತ್ತು ಬಂಡವಾಳ ವೆಚ್ಚವನ್ನು ಹೆಚ್ಚಿಸಲು ರಾಜ್ಯಗಳನ್ನು ಸಕ್ರಿಯಗೊಳಿಸುವ ಪ್ರಯತ್ನದಲ್ಲಿ,ರಾಜ್ಯ ಸರ್ಕಾರಗಳಿಗೆ ₹1,78,173 ಕೋಟಿ ರೂಪಾಯಿಗಳ ತೆರಿಗೆ ಹಂಚಿಕೆಯನ್ನು ಬಿಡುಗಡೆ ಮಾಡಲಾಗಿದೆ” ಎಂದು ಕೇಂದ್ರ ಸರ್ಕಾರ ಹೇಳಿದೆ. ಅಕ್ಟೋಬರ್‌ನಲ್ಲಿ ಬಾಕಿ ಇರುವ ₹89,086.50 ಕೋಟಿ ನಿಯಮಿತ ಕಂತಿನ

ಕೇಂದ್ರದಿಂದ 1,78,173 ಕೋಟಿ ತೆರಿಗೆ ಹಣ ಹಂಚಿಕೆ Read More »

ರಾಷ್ಟ್ರೀಯ ನ್ಯೂಸ್

RBI: ಗೃಹಸಾಲದ ಇಎಂಐ ಇಳಿಕೆಯಿಲ್ಲ

(ನ್ಯೂಸ್ ಕಡಬ)newskadaba.com, ಅ. ನವದೆಹಲಿ 09.: ಭಾರತೀಯ ರಿಸರ್ವ್ ಬ್ಯಾಂಕ್ (RBI) ನಿರೀಕ್ಷೆಯಂತೆ ರೆಪೋ ದರ ಅಥವಾ ಬಡ್ಡಿದರವನ್ನು ಶೇ. 6.5ರಲ್ಲಿಯೇ ಮುಂದುವರಿಸಲು ನಿರ್ಧರಿಸಿದೆ. ರೆಪೋ ದರ ಇಳಿಕೆ ಸದ್ಯಕ್ಕೆ ಬೇಡ ಎಂಬ ಮಾನಿಟರಿ ಪಾಲಿಸಿ ಕಮಿಟಿ ಯ ಹೆಚ್ಚಿನ ಸದಸ್ಯರ ಅಭಿಮತದ ಹಿನ್ನಲೆಯಲ್ಲಿ ಈ ತೀರ್ಮಾನಕ್ಕೆ ಬರಲಾಗಿದೆ ಎಂದು ಆರ್​ಬಿಐ ಗವರ್ನರ್ ಶಕ್ತಿಕಾಂತ ದಾಸ್ ತಿಳಿಸಿದ್ದಾರೆ. ಇದರಿಂದ ರಿಯಲ್ ಎಸ್ಟೇಟ್ ಅಥವಾ ಗೃಹ ಸಾಲದ ಇಎಂಐಗಳ ಮೇಲೆ ಯಾವುದೇ ಬದಲಾವಣೆ ಆಗುವುದಿಲ್ಲ.3 ದಿನ ನಡೆದ  ಮಾನಿಟರಿ

RBI: ಗೃಹಸಾಲದ ಇಎಂಐ ಇಳಿಕೆಯಿಲ್ಲ Read More »

ಬ್ರೇಕಿಂಗ್ ನ್ಯೂಸ್, ರಾಷ್ಟ್ರೀಯ ನ್ಯೂಸ್

ಪ್ರವಾಹ ಪೀಡಿತ ಪ್ರದೇಶಗಳಿಗೆ 5858.60 ಕೋಟಿ ಪರಿಹಾರ

(ನ್ಯೂಸ್ ಕಡಬ)newskadaba.com,ನವದೆಹಲಿ (ಅ.02)  ಪ್ರವಾಹ ಪೀಡಿತ ರಾಜ್ಯಗಳಿಗೆ ಕೇಂದ್ರ ಗೃಹ ಇಲಾಖೆಯಿಂದ ಪರಿಹಾರ ಬಿಡುಗಡೆ ಮಾಡಿದೆ. ಪ್ರಧಾನಿ ನರೇಂದ್ರ ಮೋದಿ ನೇತೃತ್ವದಲ್ಲಿ ಸಭೆ ಬಳಿಕ 5858.60 ಕೋಟಿ ರೂ. ರಾಜ್ಯ ವಿಪತ್ತು ಪ್ರತಿಕ್ರಿಯೆ ನಿಧಿಯಿಂದ ಕೇಂದ್ರ ಪಾಲು ಮತ್ತು ರಾಷ್ಟ್ರೀಯ ವಿಪತ್ತು ಪ್ರತಿಕ್ರಿಯೆ ನಿಧಿಯಿಂದ ಮುಂಗಡವಾಗಿ ಬಿಡುಗಡೆ ಮಾಡಿದೆ. ಇದರಲ್ಲಿ ಮಹಾರಾಷ್ಟ್ರಕ್ಕೆ 1,492 ಕೋಟಿ ರೂ., ಆಂಧ್ರಪ್ರದೇಶಕ್ಕೆ 1,036 ಕೋಟಿ ರೂ., ಅಸ್ಸಾಂಗೆ 716 ಕೋಟಿ ರೂ., ಬಿಹಾರಕ್ಕೆ 655.60 ಕೋಟಿ ರೂ., ಗುಜರಾತ್‌ಗೆ 600 ಕೋಟಿ

ಪ್ರವಾಹ ಪೀಡಿತ ಪ್ರದೇಶಗಳಿಗೆ 5858.60 ಕೋಟಿ ಪರಿಹಾರ Read More »

ಬ್ರೇಕಿಂಗ್ ನ್ಯೂಸ್, ರಾಷ್ಟ್ರೀಯ ನ್ಯೂಸ್

ಮಹಾತ್ಮ ಗಾಂಧೀಜಿ, ಲಾಲ್‌ ಬಹದ್ದೂರ್‌ ಶಾಸ್ತ್ರಿ ಅವರ ಕೊಡುಗೆ ಸ್ಮರಿಸಿದ ಪ್ರಧಾನಿ ಮೋದಿ

(ನ್ಯೂಸ್ ಕಡಬ) newskadaba.com ನವದೆಹಲಿ, ಅ. 02. ಇಂದು ರಾಷ್ಟ್ರಪಿತ ಮಹಾತ್ಮ ಗಾಂಧೀಜಿ (ಮತ್ತು ಭಾರತದ ಎರಡನೇ ಪ್ರಧಾನಿ ಲಾಲ್‌ ಬಹದ್ದೂರ್‌ ಶಾಸ್ತ್ರಿ ಅವರ ಜನ್ಮ ದಿನಾಚರಣೆ. ಈ ಹಿನ್ನಲೆಯಲ್ಲಿ ಪ್ರಧಾನಿ ನರೇಂದ್ರ ಮೋದಿ ಅವರು ಈ ಮಹೋನ್ನತ ನಾಯಕರು ದೇಶಕ್ಕಾಗಿ ನೀಡಿದ ಕೊಡುಗೆಗಗಳನ್ನು ಸ್ಮರಿಸಿದ್ದಾರೆ. ಸಾಮಾಜಿಕ ಜಾಲತಾಣ ಎಕ್ಸ್‌ ನಲ್ಲಿ ಈ ಬಗ್ಗೆ ಬರೆದುಕೊಂಡಿದ್ದಾರೆ. ”ಪೂಜ್ಯ ಬಾಪು ಅವರ ಜನ್ಮ ಜಯಂತಿಯಂದು ಎಲ್ಲ ದೇಶವಾಸಿಗಳ ಪರವಾಗಿ ಅವರಿಗೆ ನಮನಗಳು. ಸತ್ಯ, ಸಾಮರಸ್ಯ ಮತ್ತು ಸಮಾನತೆಯನ್ನು ಆಧರಿಸಿದ

ಮಹಾತ್ಮ ಗಾಂಧೀಜಿ, ಲಾಲ್‌ ಬಹದ್ದೂರ್‌ ಶಾಸ್ತ್ರಿ ಅವರ ಕೊಡುಗೆ ಸ್ಮರಿಸಿದ ಪ್ರಧಾನಿ ಮೋದಿ Read More »

ರಾಷ್ಟ್ರೀಯ ನ್ಯೂಸ್

ರಾಷ್ಟ್ರಪಿತನಿಗೆ ಪುಷ್ಪನಮನ ಸಲ್ಲಿಸಿದ ಮೋದಿ

(ನ್ಯೂಸ್ ಕಡಬ)newskadaba.com, ನವದೆಹಲಿ(ಅ.02) : ರಾಷ್ಟ್ರಪಿತ ಮಹಾತ್ಮ ಗಾಂಧಿ ಅವರ ಜನ್ಮ ದಿನಾಚರಣೆ ಹಿನ್ನೆಲೆಯಲ್ಲಿ ಪ್ರಧಾನಿ ನರೇಂದ್ರ ಮೋದಿ ಸೇರಿದಂತೆ ಹಲವು ಗಣ್ಯರು ದೆಹಲಿಯ ರಾಜ್ ಘಾಟ್ ನಲ್ಲಿ ಮಹಾತ್ಮ ಗಾಂಧಿ ಸಮಾಧಿಗೆ ಪುಷ್ಪ ನಮನ ಸಲ್ಲಿಸಿದರು. ದೆಹಲಿ ಲೆಫ್ಟಿನೆಂಟ್ ಗವರ್ನರ್ ವಿಕೆ ಸಕ್ಸೇನಾ, ದೆಹಲಿ ಮುಖ್ಯಮಂತ್ರಿ ಅತಿಶಿ ಸೇರಿದಂತೆ ಹಲವು ನಾಯಕರು ಮಹಾತ್ಮ ಗಾಂಧಿಗೆ ಶ್ರದ್ಧಾಂಜಲಿ ಸಲ್ಲಿಸಿದರು.

ರಾಷ್ಟ್ರಪಿತನಿಗೆ ಪುಷ್ಪನಮನ ಸಲ್ಲಿಸಿದ ಮೋದಿ Read More »

ಬ್ರೇಕಿಂಗ್ ನ್ಯೂಸ್, ರಾಷ್ಟ್ರೀಯ ನ್ಯೂಸ್

ರಸ್ತೆ, ರೈಲು ಹಳಿಗಳನ್ನು ಅತಿಕ್ರಮಿಸುವ ಯಾವುದೇ ಧಾರ್ಮಿಕ ಕಟ್ಟಡಗಳನ್ನು ತೆರವುಗೊಳಿಸಬೇಕು-ಸುಪ್ರೀಂ ಕೋರ್ಟ್

(ನ್ಯೂಸ್ ಕಡಬ)newskadaba.com, ನವದೆಹಲಿ(ಅ.01) : ಅನಧಿಕೃತ ಕಟ್ಟಡಗಳನ್ನು  ಕೆಡವಲು ತಾನು ರೂಪಿಸುವ ಮಾರ್ಗಸೂಚಿಗಳು ದೇಶಾದ್ಯಂತ ಮತ್ತು ಎಲ್ಲಾ ಧರ್ಮಗಳಿಗೆ ಅನ್ವಯಿಸುತ್ತದೆ ಎಂದು ಸುಪ್ರೀಂ ಕೋರ್ಟ್  ಹೇಳಿದೆ. ಒಬ್ಬ ವ್ಯಕ್ತಿ ಆರೋಪಿ ಅಥವಾ ಅಪರಾಧಿ ಎಂಬ ಕಾರಣಕ್ಕೆ ಅದು ಆಸ್ತಿಯ ಧ್ವಂಸಕ್ಕೆ ಆಧಾರವಾಗುವುದಿಲ್ಲ. ಹಾಗೆಂದು ಅತಿಕ್ರಮಣ ಮತ್ತು ಫುಟ್‍ಪಾತ್‍ಗಳನ್ನು ಅಸ್ತವ್ಯಸ್ತಗೊಳಿಸುವುದನ್ನು ಪ್ರೋತ್ಸಾಹಿಸುತ್ತಿಲ್ಲ. ಅನಧಿಕೃತ ನಿರ್ಮಾಣಕ್ಕೆ, ಒಂದು ಕಾನೂನು ಇರಬೇಕು, ಅದು ಧರ್ಮ ಅಥವಾ ನಂಬಿಕೆಗಳ ಮೇಲೆ ಅವಲಂಬಿತವಾಗಿಲ್ಲ ಎಂದು ನ್ಯಾಯಾಲಯ ಸ್ಪಷ್ಟಪಡಿಸಿದೆ. ಸಾರ್ವಜನಿಕ ಸುರಕ್ಷತೆಯು ಬಹಳ ಮುಖ್ಯವಾಗಿದೆ. ರಸ್ತೆ, ಜಲಮೂಲಗಳು ಅಥವಾ

ರಸ್ತೆ, ರೈಲು ಹಳಿಗಳನ್ನು ಅತಿಕ್ರಮಿಸುವ ಯಾವುದೇ ಧಾರ್ಮಿಕ ಕಟ್ಟಡಗಳನ್ನು ತೆರವುಗೊಳಿಸಬೇಕು-ಸುಪ್ರೀಂ ಕೋರ್ಟ್ Read More »

ಬ್ರೇಕಿಂಗ್ ನ್ಯೂಸ್, ರಾಷ್ಟ್ರೀಯ ನ್ಯೂಸ್

ವಾಣಿಜ್ಯ ಸಿಲಿಂಡರ್ ಬೆಲೆ 48.50ಗೆ ಏರಿಕೆ

(ನ್ಯೂಸ್ ಕಡಬ)newskadaba.com, ನವದೆಹಲಿ(ಅ.01) : ಈ ತಿಂಗಳ ಆರಂಭದಲ್ಲಿ ವಾಣಿಜ್ಯ ಬಳಕೆ 19 ಕೆಜಿಯ ಎಲ್‌ಪಿಜಿ ಸಿಲಿಂಡರ್ ದರವನ್ನು48.5೦ಪೈಸೆ ಹೆಚ್ಚಳ ಮಾಡಲಾಗಿದೆ. ಅದೇ ರೀತಿ 5ಕೆಜಿ ಫ್ರೀ ಟ್ರೇಡ್ ಎಲ್‌ಪಿಜಿ ಸಿಲಿಂಡರ್ ದರವನ್ನು 12ರೂ. ತೈಲ ಕಂಪನಿಗಳು ಏರಿಕೆ ಮಾಡಿದ್ದು, ಪರಿಷ್ಕೃತ ದರಗಳು ತಕ್ಷಣದಿಂದಲೇ ಜಾರಿಗೆ ಬರಲಿದೆ. ಅಡುಗೆ ಅನಿಲಗಳ ಸಿಲಿಂಡರ್ ಬೆಲೆಯಲ್ಲಿ ಯಾವುದೇ ಏರಿಕೆ ಇಲ್ಲ. ಪ್ರಸ್ತುತ 14ಕೆಜಿ ಸಿಲಿಂಡರ್ ದರ 803ರೂ.ನಷ್ಟಿದೆ. ಅಕ್ಟೋಬರ್ ತಿಂಗಳಿನಲ್ಲಿ ದೀಪಾವಳಿ, ನವರಾತ್ರಿ ಹಬ್ಬಗಳು ಸಮೀಪಿಸುತ್ತಿರುವ ಬೆನ್ನಲ್ಲೆ ತೈಲ ಕಂಪನಿಗಳು ವಾಣಿಜ್ಯ

ವಾಣಿಜ್ಯ ಸಿಲಿಂಡರ್ ಬೆಲೆ 48.50ಗೆ ಏರಿಕೆ Read More »

ಬ್ರೇಕಿಂಗ್ ನ್ಯೂಸ್, ರಾಷ್ಟ್ರೀಯ ನ್ಯೂಸ್

ಭಾರತೀಯರಿಗೆ 2.50 ಲಕ್ಷ ವೀಸಾ ನೀಡಲು ಮುಂದಾದ ಅಮೆರಿಕಾ

(ನ್ಯೂಸ್ ಕಡಬ)newskadaba.com, ನವದೆಹಲಿ(ಅ.01): – ಭಾರತದಿಂದ ಅಮೇರಿಕಾಗೆ ತೆರಳುವ ಪ್ರವಾಸಿಗರು, ನುರಿತ ಕೆಲಸಗಾರರು ಮತ್ತು ವಿದ್ಯಾರ್ಥಿಗಳು ಸೇರಿದಂತೆ ಭಾರತೀಯ ಪ್ರಯಾಣಿಕರಿಗೆ ಹೆಚ್ಚುವರಿ 2.50 ಲಕ್ಷ ವೀಸಾ ನೇಮಕಾತಿಗಳನ್ನು ತೆರೆದಿದೆ ಎಂದು ಅಮೆರಿಕ ರಾಯಭಾರಿ ಕಚೇರಿ ಹೇಳಿದೆ. ಕಳೆದ ವರ್ಷ 1.4 ಲಕ್ಷಕ್ಕೂ ಹೆಚ್ಚು ವಿದ್ಯಾರ್ಥಿ ವೀಸಾಗಳನ್ನು ನೀಡಲಾಗಿತ್ತು. ಕಳೆದ ವಾರ ಭಾರತದ ಪ್ರಧಾನಿ ನರೇಂದ್ರ ಮೋದಿಯವರು ಅಮೇರಿಕಾ ಪ್ರವಾಸ ಮುಗಿಸಿ ವಾಪಾಸ್ಸಾಗಿದ್ದರು. ಇದರ ಬೆನ್ನಲ್ಲೇ ಭಾರತದಿಂದ ಅಮೆರಿಕಾಕ್ಕೆ ಪ್ರವಾಸ ಹಾಗೂ ವ್ಯಪಾರ ವಹಿವಾಟು, ಪ್ರವಾಸ ಕೈಗೊಳ್ಳುವವರಿಗೆ ಸಿಹಿ ಸುದ್ದಿ

ಭಾರತೀಯರಿಗೆ 2.50 ಲಕ್ಷ ವೀಸಾ ನೀಡಲು ಮುಂದಾದ ಅಮೆರಿಕಾ Read More »

ಬ್ರೇಕಿಂಗ್ ನ್ಯೂಸ್, ರಾಷ್ಟ್ರೀಯ ನ್ಯೂಸ್
Scroll to Top