navadehali

ಸುಪ್ರೀಂ ಕೋರ್ಟ್ ನೆರವಿನಿಂದ ದಲಿತ ಯುವಕನಿಗೆ ಸಿಕ್ತು ಐಐಟಿ ಸೀಟ್

(ನ್ಯೂಸ್ ಕಡಬ)newskadaba.com, ನವದೆಹಲಿ(ಅ.01):  ನಿಗದಿತ ಸಮಯದೊಳಗೆ ಪ್ರವೇಶ ಶುಲ್ಕ ಪಾವತಿಸಲು ಆಗದ ಕಾರಣ ಐಐಟಿ ಸೀಟ್ ಧನಬಾದ್‌ನಲ್ಲಿ ಕಳೆದುಕೊಂಡಿದ್ದ ದಲಿತ ಯುವಕನಿಗೆ ಮರಳಿ ಸೀಟು ನೀಡುವಂತೆ ಸುಪ್ರೀಂ ಕೋರ್ಟ್ ಆದೇಶಿಸಿದೆ. ಸಂವಿಧಾನದ 142 ವಿಧಿ ಅಡಿ ಸುಪ್ರೀಂ ಕೋರ್ಟಿಗಿರುವ ವಿಶೇಷ ಶಕ್ತಿ ಬಳಸಿ ಈ ಆದೇಶ ಹೊರಡಿಸಿದೆ. ಅತುಲ್ ಕುಮಾರ್‌ಎಂಬ ವಿದ್ಯಾರ್ಥಿ ಜಾರ್ಖಂಡ್‌ನಲ್ಲಿನ ಐಐಟಿ ಧನ್‌ಬಾದ್‌ನಲ್ಲಿ ಪ್ರವೇಶ ಪಡೆಯಲು ಎಲ್ಲಾ ಪರೀಕ್ಷೆ ಎದುರಿಸಿದ್ದ. ಆದರೆ ಕೊನೆಯ ದಿನದ ಒಳಗೆ ಶುಲ್ಕ ಪಾವತಿ ಮಾಡಲು ಆಗಿರಲಿಲ್ಲ. ಹೀಗಾಗಿ ಇವರ […]

ಸುಪ್ರೀಂ ಕೋರ್ಟ್ ನೆರವಿನಿಂದ ದಲಿತ ಯುವಕನಿಗೆ ಸಿಕ್ತು ಐಐಟಿ ಸೀಟ್ Read More »

ಬ್ರೇಕಿಂಗ್ ನ್ಯೂಸ್

ಬಾಹ್ಯಾಕಾಶ ತಲುಪಿದ ಸುನೀತಾ ವಿಲಿಯಮ್ಸ್, ಬುಚ್ ವಿಲ್ಮೋರ್ ರನ್ನು ಕರೆತರಲಿರುವ ಸ್ಪೇಸ್ಎಕ್ಸ್ ನೌಕೆ

(ನ್ಯೂಸ್ ಕಡಬ) newskadaba.com ನವದೆಹಲಿ, ಸೆ.30. ಬಾಹ್ಯಾಕಾಶದಲ್ಲಿ ಸಿಲುಕಿಕೊಂಡಿರುವ ಗಗನಯಾತ್ರಿಗಳಾದ ಸುನೀತಾ ವಿಲಿಯಮ್ಸ್ ಮತ್ತು ಬುಚ್ ವಿಲ್ಮೋರ್ ಅವರನ್ನು ವಾಪಾಸ್ಸು ಕರೆತರಲು ಗೊತ್ತುಪಡಿಸಿದ ಸ್ಪೇಸ್ಎಕ್ಸ್ ಬಾಹ್ಯಾಕಾಶ ನೌಕೆ ಯಶಸ್ವಿಯಾಗಿ ಬಾಹ್ಯಾಕಾಶ ಕಕ್ಷೆಯಲ್ಲಿ ಲ್ಯಾಂಡ್ ಆಗಿದೆ ಎಂದು ವರದಿಯಾಗಿದೆ. ಸ್ಪೇಸೆಕ್ಸ್ ಬಾಹ್ಯಾಕಾಶ ನೌಕೆ ರವಿವಾರ 5:30ಕ್ಕೆ ಬಾಹ್ಯಾಕಾಶದಲ್ಲಿ ಉಳಿದುಕೊಂಡಿರುವ ಸುನೀತಾ ವಿಲಿಯಮ್ಸ್ ಮತ್ತು ಬುಚ್ ವಿಲ್ಮೋರ್ ಜೊತೆ ಸಂಪರ್ಕವನ್ನು ಸಾಧಿಸಿದೆ. ಸುನೀತಾ ವಿಲಿಯಮ್ಸ್ ಅವರು ಬಾಹ್ಯಾಕಾಶಕ್ಕೆ ಬಂದ ಹೊಸ ಒಡನಾಡಿಗಳಿಗೆ ಸ್ವಾಗತವನ್ನು ಕೋರಿದ್ದಾರೆ.    

ಬಾಹ್ಯಾಕಾಶ ತಲುಪಿದ ಸುನೀತಾ ವಿಲಿಯಮ್ಸ್, ಬುಚ್ ವಿಲ್ಮೋರ್ ರನ್ನು ಕರೆತರಲಿರುವ ಸ್ಪೇಸ್ಎಕ್ಸ್ ನೌಕೆ Read More »

ರಾಷ್ಟ್ರೀಯ ನ್ಯೂಸ್

ಹಿರಿಯ ನಟ ಮಿಥುನ್ ಚಕ್ರವರ್ತಿಗೆ ‘ದಾದಾಸಾಹೇಬ್ ಫಾಲ್ಕೆ’ ಪ್ರಶಸ್ತಿ ಗೌರವ

(ನ್ಯೂಸ್ ಕಡಬ) newskadaba.com ನವದೆಹಲಿ, ಸೆ.30. ಹಿರಿಯ ನಟ ಮಿಥುನ್ ಚಕ್ರವರ್ತಿ ಅವರು ಭಾರತೀಯ ಚಲನಚಿತ್ರೋದ್ಯಮದ ಅತ್ಯುನ್ನತ ಗೌರವ ದಾದಾಸಾಹೇಬ್ ಫಾಲ್ಕೆ ಪ್ರಶಸ್ತಿಗೆ ಭಾಜನರಾಗಿದ್ದಾರೆ. ಭಾರತೀಯ ಚಿತ್ರರಂಗದಲ್ಲಿ ಅವರ ಪ್ರಯಾಣ ಹಾಗೂ ಸಿನಿ ರಂಗಕ್ಕೆ ನೀಡಿದ ಕೊಡುಗೆಗಾಗಿ ಈ ಪ್ರತಿಷ್ಠಿತ ಪ್ರಶಸ್ತಿ ನೀಡಿ ಗೌರವಿಸಲಾಗುತ್ತಿದೆ ಎಂದು ಕೇಂದ್ರ ಸಚಿವ ಅಶ್ವಿನಿ ವೈಷ್ಣವ್ ಅವರು ತಿಳಿಸಿದ್ದಾರೆ. ಮಿಥುನ್ ಚಕ್ರವರ್ತಿ ಅವರು ಕೇವಲ ನಟರಷ್ಟೇ ಅಲ್ಲ, ಟಿವಿ ನಿರೂಪಕ, ನಿರ್ಮಾಪಕ, ರಾಜಕಾರಣಿ ಆಗಿದ್ದಾರೆ. ಹಿಂದಿ ಹಾಗೂ ಬಂಗಾಳಿ ಸಿನಿಮಾಗಳಲ್ಲಿ ಅತ್ಯಂತ

ಹಿರಿಯ ನಟ ಮಿಥುನ್ ಚಕ್ರವರ್ತಿಗೆ ‘ದಾದಾಸಾಹೇಬ್ ಫಾಲ್ಕೆ’ ಪ್ರಶಸ್ತಿ ಗೌರವ Read More »

ರಾಷ್ಟ್ರೀಯ ನ್ಯೂಸ್

ಭದ್ರತಾ ಮಂಡಳಿ ಕಾಯಂ ಸದಸ್ಯತ್ವ:ಭಾರತಕ್ಕೆ ಬ್ರಿಟನ್, ಫ್ರಾನ್ಸ್ ನಿಂದ ಬೆಂಬಲ

(ನ್ಯೂಸ್ ಕಡಬ) newskadaba.com ನವದೆಹಲಿಸೆ.27: ವಿಶ್ವಸಂಸ್ಥೆ ಭದ್ರತಾ ಮಂಡಳಿ ಕಾಯಂ ಸದಸ್ಯತ್ವ ಭಾರತದ ಮಹತ್ವಾಕಾಂಕ್ಷೆಗೆ ಮತ್ತಷ್ಟು ಬಲಬಂದಿದ್ದು, ಫ್ರಾನ್ಸ್ ಮತ್ತು ಬ್ರಿಟನ್ ದೇಶಗಳು ಬೆಂಬಲ ನೀಡಿವೆ.ವಿಶ್ವಸಂಸ್ಥೆಯ ಭದ್ರತಾ ಮಂಡಳಿಯ ಕಾಯಂ ಸದಸ್ಯತ್ವ ಪಡೆಯಲು ಭಾರತ ನಡೆಸುತ್ತಿರುವ ಪ್ರಯತ್ನಕ್ಕೆ ಫ್ರಾನ್ಸ್‌ ಅಧ್ಯಕ್ಷ ಇಮ್ಯಾನುಯೆಲ್ ಮ್ಯಾಕ್ರನ್ ಮತ್ತು ಬ್ರಿಟನ್ ಪ್ರಧಾನಿ ಕೀರ್ ಸ್ಟಾರ್ಮರ್ ಬೆಂಬಲ ಘೋಷಿಸಿದ್ದಾರೆ.ಭಾರತಕ್ಕೆ ಭದ್ರತಾ ಮಂಡಳಿಯಲ್ಲಿ ಕಾಯಂ ಸದಸ್ಯ ಸ್ಥಾನ ನೀಡುವ ಸಂಬಂಧ ಅಮೆರಿಕ ಅಧ್ಯಕ್ಷ ಜೋ ಬೈಡನ್ ನಡೆಸಿದ್ದ ಮಾತುಕತೆ ಕೊನೆಗೂ ಯಶಸ್ವಿಯಾಗಿದ್ದು, ಫ್ರಾನ್ಸ್ ಮತ್ತು ಬ್ರಿಟನ್

ಭದ್ರತಾ ಮಂಡಳಿ ಕಾಯಂ ಸದಸ್ಯತ್ವ:ಭಾರತಕ್ಕೆ ಬ್ರಿಟನ್, ಫ್ರಾನ್ಸ್ ನಿಂದ ಬೆಂಬಲ Read More »

ಬ್ರೇಕಿಂಗ್ ನ್ಯೂಸ್, ರಾಷ್ಟ್ರೀಯ ನ್ಯೂಸ್

ಜಪಾನ್ ನನ್ನು ಹಿಂದಿಕ್ಕಿದ ಭಾರತ: ಏಷ್ಯಾ ಫೆಸಿಫಿಕ್ ನಲ್ಲಿ ಟಾಪ್ 3ನೇ ದೇಶ

 (ನ್ಯೂಸ್ ಕಡಬ) newskadaba.com ನವದೆಹಲಿ(ಸೆ.27) ಭಾರೀ ವೇಗದ ಆರ್ಥಿಕಾಭಿವೃದ್ಧಿಯಿಂದ ಜಗತ್ತಿನ ಗಮನ ಸೆಳೆದಿರುವ ಭಾರತ ಇದೀಗ ಏಷ್ಯಾ ಪೆಸಿಫಿಕ್‌ ರಾಷ್ಟ್ರಗಳ ಪೈಕಿ ಮೂರನೇ ಅತ್ಯಂತ ಶಕ್ತಿಶಾಲಿ ರಾಷ್ಟ್ರವಾಗಿ ಹೊರಹೊಮ್ಮಿದೆ. ಈ ಪಟ್ಟಿಯಲ್ಲಿ ಜಪಾನ್‌ ದೇಶವನ್ನು ಹಿಂದಿಕ್ಕಿರುವ ಭಾರತವು ಅಮೆರಿಕ ಮತ್ತು ಚೀನಾದ ನಂತರದ ಸ್ಥಾನಕ್ಕೆ ಏರಿದೆ. ಭಾರೀ ವೇಗದ ಆರ್ಥಿಕಾಭಿವೃದ್ಧಿಯಿಂದ ಜಗತ್ತಿನ ಗಮನ ಸೆಳೆದಿರುವ ಭಾರತ ಇದೀಗ ಏಷ್ಯಾ ಪೆಸಿಫಿಕ್‌ ರಾಷ್ಟ್ರಗಳ ಪೈಕಿ ಮೂರನೇ ಅತ್ಯಂತ ಶಕ್ತಿಶಾಲಿ ರಾಷ್ಟ್ರವಾಗಿ ಹೊರಹೊಮ್ಮಿದೆ. ಆಸ್ಟ್ರೇಲಿಯಾದ ಲೋವಿ ಇನ್‌ಸ್ಟಿಟ್ಯೂಟ್‌ ‘2024ನೇ ಆವೃತ್ತಿಯ ಏಷ್ಯಾ

ಜಪಾನ್ ನನ್ನು ಹಿಂದಿಕ್ಕಿದ ಭಾರತ: ಏಷ್ಯಾ ಫೆಸಿಫಿಕ್ ನಲ್ಲಿ ಟಾಪ್ 3ನೇ ದೇಶ Read More »

ಬ್ರೇಕಿಂಗ್ ನ್ಯೂಸ್, ರಾಷ್ಟ್ರೀಯ ನ್ಯೂಸ್

ಲಂಚ ಹಗರಣ ಪ್ರಕರಣ: ತಮಿಳುನಾಡಿನ ಸಚಿವ ವಿ.ಸೆಂಥಿಲ್ ಬಾಲಾಜಿಗೆ ಸುಪ್ರೀಂ ಕೋರ್ಟ್ ಜಾಮೀನು ಮಂಜೂರು

(ನ್ಯೂಸ್ ಕಡಬ) newskadaba.com  ನವದೆಹಲಿ, ಸೆ. 26. ಉದ್ಯೋಗಕ್ಕಾಗಿ ಲಂಚ ಹಗರಣದ ಪ್ರಕರಣಕ್ಕೆ ಸಂಬಂಧಪಟ್ಟಂತೆ ತಮಿಳುನಾಡು ಮಾಜಿ ಸಚಿವ ವಿ.ಸೆಂಥಿಲ್ ಬಾಲಾಜಿಗೆ ಸುಪ್ರೀಂ ಕೋರ್ಟ್  ಇಂದು (ಸೆ.26) ಜಾಮೀನು ಮಂಜೂರು ಮಾಡಿದೆ. ಕಳೆದ ವರ್ಷ ಅಕ್ಟೋಬರ್ 19ರಂದು ಹೈಕೋರ್ಟ್‌ಬಾಲಾಜಿಯ ಜಾಮೀನು ಅರ್ಜಿಯನ್ನು ವಜಾಗೊಳಿಸಿತ್ತು. ಅದೇ ರೀತಿ ಸ್ಥಳೀಯ ನ್ಯಾಯಾಲಯ ಕೂಡಾ ಮೂರು ಬಾರಿ ಬಾಲಾಜಿ ಜಾಮೀನು ಅರ್ಜಿಯನ್ನು ತಿರಸ್ಕರಿಸಿತ್ತು. ಇದೀಗ ಸುಪ್ರೀಂ ಕೋರ್ಟ್‌ ಜಾಮೀನು ಮಂಜೂರು ಮಾಡಿದೆ.  

ಲಂಚ ಹಗರಣ ಪ್ರಕರಣ: ತಮಿಳುನಾಡಿನ ಸಚಿವ ವಿ.ಸೆಂಥಿಲ್ ಬಾಲಾಜಿಗೆ ಸುಪ್ರೀಂ ಕೋರ್ಟ್ ಜಾಮೀನು ಮಂಜೂರು Read More »

ರಾಷ್ಟ್ರೀಯ ನ್ಯೂಸ್

ನನ್ನ ಮಾತನ್ನು ವಾಪಸ್ ತೆಗೆದುಕೊಳ್ಳುತ್ತೇನೆ’- ಕ್ಷಮೆಯಾಚಿಸಿದ ಕಂಗನಾ ರಣಾವತ್

 (ನ್ಯೂಸ್ ಕಡಬ) newskadaba.com ನವದೆಹಲಿ(ಸೆ.25) : ರೈತರ ಪ್ರತಿಭಟನೆ ಬಳಿಕ ರದ್ದಾಗಿದ್ದ ಮೂರು ಕೃಷಿ ಕಾನೂನುಗಳನ್ನು ಮತ್ತೆ ಜಾರಿ ಮಾಡಬೇಕು ಎಂದು ಹೇಳಿಕೆ ನೀಡಿದ್ದ ನಟಿ, ಬಿಜೆಪಿ ಸಂಸದೆ ಕಂಗನಾ ರಣಾವತ್ ಬಹಿರಂಗ ಕ್ಷಮೆ ಯಾಚಿಸಿದ್ದಾರೆ. ಕಂಗನಾ ಹೇಳಿಕೆಗೆ ಸ್ವಪಕ್ಷದಿಂದಲೇ ತೀವ್ರ ವಿರೋಧ ವ್ಯಕ್ತವಾದ ಹಿನ್ನೆಲೆಯಲ್ಲಿ ಅವರು ವಿಡಿಯೋ ಬಿಡುಗಡೆ ಮಾಡುವ ಮೂಲಕ ಕ್ಷಮೆ ಕೇಳಿದ್ದಾರೆ. ನಾನು ಬರೀ ನಟಿಯಲ್ಲ ರಾಜಕಾರಣಿಯೂ ಆಗಿದ್ದೇನೆ ಮತ್ತು ನನ್ನ ಅಭಿಪ್ರಾಯಗಳು ವೈಯಕ್ತಿಕವಾಗಿರಬಾರದು. ಅದು ಪಕ್ಷದ ಪ್ರತಿಬಿಂಬವಾಗಿರಬೇಕು. ರೈತರ ಕಾನೂನುಗಳ ಬಗ್ಗೆ

ನನ್ನ ಮಾತನ್ನು ವಾಪಸ್ ತೆಗೆದುಕೊಳ್ಳುತ್ತೇನೆ’- ಕ್ಷಮೆಯಾಚಿಸಿದ ಕಂಗನಾ ರಣಾವತ್ Read More »

ಬ್ರೇಕಿಂಗ್ ನ್ಯೂಸ್, ರಾಷ್ಟ್ರೀಯ ನ್ಯೂಸ್

’ಶಂಖ್ ಏರ್’ ಸಂಸ್ಥೆಗೆ ಕೇಂದ್ರ ವಿಮಾನಯಾನ ಸಚಿವಾಲಯ ಅನುಮೋದನೆ

(ನ್ಯೂಸ್ ಕಡಬ) newskadaba.com  ಸೆ. 24. ಭಾರತದ ವಿಮಾನಯಾನ ಕ್ಷೇತ್ರದಲ್ಲಿ ಒಂದರ ಹಿಂದೆ ಒಂದು ಕಂಪನಿಗಳು ಸಂಕಷ್ಟಕ್ಕೆ ಸಿಲುಕುತ್ತಿರುವ ಮಧ್ಯೆ ಹೊಸ ಹೊಸ ಕಂಪನಿಗಳು ಸೃಷ್ಟಿಯಾಗುತ್ತಿದ್ದು, ಇದೀಗ ‘ಶಂಖ್ ಏರ್’ ಎಂಬ ಏರ್ ಲೈನ್ ಸಂಸ್ಥೆಗೆ ಕೇಂದ್ರ ವಿಮಾನಯಾನ ಸಚಿವಾಲಯವು ಅನುಮೋದನೆ ನೀಡಿದೆ. ವಿಮಾನಯಾನ ಮಹಾ ನಿರ್ದೇಶನಾಲಯದಿಂದ (ಡಿಸಿಸಿಎ) ಒಪ್ಪಿಗೆ ಮುದ್ರೆ ಪಡೆದ ಬಳಿಕ ಶಂಖ್ ಏರ್ ವಿಮಾನ ಹಾರಾಟ ಕಾರ್ಯಾರಂಭಿಸಬಹುದು. ಶಂಖ್ ಏರ್ ಸಂಸ್ಥೆಗೆ ವಿಮಾನ ಹಾರಾಟ ನಡೆಸಲು ಮೂರು ವರ್ಷಗಳಿಗೆ ನಿರಾಕ್ಷೇಪಣ ಪತ್ರ  ನೀಡಲಾಗಿದೆ.

’ಶಂಖ್ ಏರ್’ ಸಂಸ್ಥೆಗೆ ಕೇಂದ್ರ ವಿಮಾನಯಾನ ಸಚಿವಾಲಯ ಅನುಮೋದನೆ Read More »

ರಾಷ್ಟ್ರೀಯ ನ್ಯೂಸ್

ಮತ್ತೊಮ್ಮೆ ದಾಖಲೆ ಮಟ್ಟ ತಲುಪಿದ ಸೆನ್ಸೆಕ್ಸ್ ಮತ್ತು ನಿಫ್ಟಿ-50; ಹೂಡಿಕೆದಾರರಿಗೆ ಹೊಡೆಯಿತು ಜಾಕ್ಪಾಟ್!

(ನ್ಯೂಸ್ ಕಡಬ) newskadaba.com ಹೊಸದಿಲ್ಲಿ 23:  ಇಂದು ದೇಶಿಯ ಷೇರು ಮಾರುಕಟ್ಟೆಯು ದಾಖಲೆಯ ಎತ್ತರದಲ್ಲಿ ತೆರೆದುಕೊಂಡಿತು. ಬೆಂಚ್ಮಾರ್ಕ್ ಇಕ್ವಿಟಿ ಸೂಚ್ಯಂಕಗಳು ಉತ್ತಮ ವಹಿವಾಟು ಸೆಷನ್ ಪ್ರಾರಂಭಿಸಿದವು. ರಾಷ್ಟ್ರೀಯ ಷೇರುಪೇಟೆ (NSE) ನಿಫ್ಟಿ 50 ಶೇ.0.25ರಷ್ಟು ಏರಿಕೆ ಕಂಡು 25,856.05ರಲ್ಲಿ ವಹಿವಾಟು ಆರಂಭಿಸಿದರೆ, ಬಾಂಬೆ ಷೇರುಪೇಟೆ (BSE) ಸೆನ್ಸೆಕ್ಸ್ 150 ಪಾಯಿಂಟ್‌ಗಳ ಏರಿಕೆ ಕಂಡು 84,693ಕ್ಕೆ ತಲುಪಿತು. ವ್ಯಾಪಾರದ ಪ್ರಾರಂಭದಲ್ಲಿ ವಿಶಾಲವಾದ ಸೂಚ್ಯಂಕಗಳು ಹಸಿರು ಬಣ್ಣದಲ್ಲಿ ತೆರೆಯಲ್ಪಟ್ಟವು. ಇಂದು ಬೆಳಗ್ಗೆ ಪ್ರಮುಖ ಸೂಚ್ಯಂಕಗಳಾದ ನಿಫ್ಟಿ-50 25,925.80, ಸೆನ್ಸೆಕ್ಸ್‌ 84,881.73 ಮತ್ತು ನಿಫ್ಟಿ ಬ್ಯಾಂಕ್‌

ಮತ್ತೊಮ್ಮೆ ದಾಖಲೆ ಮಟ್ಟ ತಲುಪಿದ ಸೆನ್ಸೆಕ್ಸ್ ಮತ್ತು ನಿಫ್ಟಿ-50; ಹೂಡಿಕೆದಾರರಿಗೆ ಹೊಡೆಯಿತು ಜಾಕ್ಪಾಟ್! Read More »

ಬ್ರೇಕಿಂಗ್ ನ್ಯೂಸ್, ರಾಷ್ಟ್ರೀಯ ನ್ಯೂಸ್

ಮಕ್ಕಳ ಅಶ್ಲೀಲ ಚಿತ್ರ ಡೌನ್‌ಲೋಡ್ ಮಾಡಿ ನೋಡುವುದು ಪೋಕ್ಸೊ ಕಾಯ್ದೆ- ಐಟಿ ನಿಯಮದಡಿ ಅಪರಾಧ ಸುಪ್ರೀ ಕೋರ್ಟ್

(ನ್ಯೂಸ್ ಕಡಬ) newskadaba.com ನವದೆಹಲಿ, ಸೆ. 23. ಮಕ್ಕಳ ಅಶ್ಲೀಲ ಚಿತ್ರಗಳನ್ನು ಡೌನ್‌ಲೋಡ್ ಮಾಡಿಕೊಂಡು ನೋಡುವುದು ಲೈಂಗಿಕ ಅಪರಾಧಗಳಿಂದ ಮಕ್ಕಳ ರಕ್ಷಣೆ (ಪೋಕ್ಸೊ) ಕಾಯ್ದೆ ಮತ್ತು ಐಟಿ ನಿಯಮದಡಿ ಅಪರಾಧವಾಗಿದೆ, ಮಕ್ಕಳ ಮೇಲಿನ ಲೈಂಗಿಕ ದೌರ್ಜನ್ಯವನ್ನು ತಡೆಯುವ ಕಠಿಣ ಕಾನೂನು ಕುರಿತು ಸುಪ್ರೀಂ ಕೋರ್ಟ್ ಇಂದು ಮಹತ್ವ ತೀರ್ಪು ನೀಡಿದೆ. ಮಕ್ಕಳ ಅಶ್ಲೀಲ ಚಿತ್ರಗಳನ್ನು ಡೌನ್‌ಲೋಡ್ ಮಾಡುವುದು ಮತ್ತು ವೀಕ್ಷಿಸುವುದು ಪೋಕ್ಸೊ ಕಾಯ್ದೆಯಡಿ ಅಪರಾಧವಲ್ಲ ಎಂದು ತೀರ್ಪು ನೀಡಿದ ಮದ್ರಾಸ್ ಹೈಕೋರ್ಟ್ ಆದೇಶವನ್ನು ಭಾರತದ ಮುಖ್ಯ ನ್ಯಾಯಮೂರ್ತಿ

ಮಕ್ಕಳ ಅಶ್ಲೀಲ ಚಿತ್ರ ಡೌನ್‌ಲೋಡ್ ಮಾಡಿ ನೋಡುವುದು ಪೋಕ್ಸೊ ಕಾಯ್ದೆ- ಐಟಿ ನಿಯಮದಡಿ ಅಪರಾಧ ಸುಪ್ರೀ ಕೋರ್ಟ್ Read More »

ರಾಷ್ಟ್ರೀಯ ನ್ಯೂಸ್
Scroll to Top