Nelyadi

ಪುತ್ತಿಗೆ ಸರಕಾರಿ ಪ್ರಾಥಮಿಕ ಶಾಲೆಗೆ ಕುಡಿಯುವ ನೀರಿನ ಘಟಕ ಹಸ್ತಾಂತರ

(ನ್ಯೂಸ್ ಕಡಬ) newskadaba.com ಕಡಬ, ಜೂ. 30. ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃಧ್ಧಿ ಯೋಜನೆ ಕಡಬ ತಾಲೂಕು ನೆಲ್ಯಾಡಿ ವಲಯ ವ್ಶಾಪ್ತಿಯ ಕೊಣಾಜೆ ಗ್ರಾಮದ ಸರಕಾರಿ ಹಿರಿಯ ಪ್ರಾಥಮಿಕ ಶಾಲೆ ಪುತ್ತಿಗೆ ಇಲ್ಲಿಗೆ ಶುದ್ಧ ಕುಡಿಯುವ ನೀರಿನ ಘಟಕದ ಹಸ್ತಾಂತರ ಕಾರ್ಯಕ್ರಮ ನಡೆಯಿತು.   ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯ ಕಡಬ ತಾಲೂಕು ಯೋಜನಾಧಿಕಾರಿ ಶ್ರೀ ಪ್ರಕಾಶ್ ಕುಮಾರ್ ರವರು ಶ್ರೀ ಕ್ಷೇತ್ರ ಧರ್ಮಸ್ಥಳದ ಧರ್ಮಾದಿಕಾರಿಯವರು ಮಂಜೂರು ಮಾಡಿರುವ ಶುದ್ದ ಕುಡಿಯುವ ನೀರಿನ ಘಟಕವನ್ನು ಹಸ್ತಾಂತರಿಸಿ […]

ಪುತ್ತಿಗೆ ಸರಕಾರಿ ಪ್ರಾಥಮಿಕ ಶಾಲೆಗೆ ಕುಡಿಯುವ ನೀರಿನ ಘಟಕ ಹಸ್ತಾಂತರ Read More »

ಕರಾವಳಿ

3 ವಿದ್ಯುತ್ ತಂತಿಗಳ ಕಳ್ಳತನ

(ನ್ಯೂಸ್ ಕಡಬ)newskadaba.com ನೆಲ್ಯಾಡಿ, ಜು.29. ಪಿಕಪ್ ವಾಹನದಲ್ಲಿ ತುಂಬಿಸಿದ್ದ 5 ಬಂಡಲ್ ವಿದ್ಯುತ್ ತಂತಿಗಳ ಪೈಕಿ 3 ಬಂಡಲ್ ವಿದ್ಯುತ್ ತಂತಿ ಕಳವುಗೈದಿರುವ ಘಟನೆ ವರದಿಯಾಗಿದೆ. ಉತ್ತರ ಕನ್ನಡ ಜಿಲ್ಲೆಯ ಭಟ್ಕಳ ತಾಲೂಕಿನ ನಿವಾಸಿ ರಾಘವೇಂದ್ರ ನಾಯ್ಕ್ ಎಂಬವರು ರಾತ್ರಿ ವೇಳೆ ನೆಲ್ಯಾಡಿಯಲ್ಲಿರುವ ಈಗಲ್ ಸಂಸ್ಥೆಗೆ ಸೇರಿದ ಗೋದಾಮಿನಿಂದ 5 ಬಂಡಲ್ ವಿದ್ಯುತ್ ತಂತಿಗಳನ್ನು ಪಡೆದುಕೊಂಡು ಅವರ ಬೊಲೆರೋ ಪಿಕಪ್ ವಾಹನದಲ್ಲಿ ತುಂಬಿಸಿಕೊಂಡು ಹೋಗಿದ್ದು ರಾತ್ರಿ 10.30ರ ವೇಳೆಗೆ ಕಡಬ ತಾಲೂಕು ಶಿರಾಡಿ ಗ್ರಾಮದ ಅಡ್ಡಹೊಳೆ ಎಂಬಲ್ಲಿರುವ

3 ವಿದ್ಯುತ್ ತಂತಿಗಳ ಕಳ್ಳತನ Read More »

ಕರಾವಳಿ, ಕ್ರೈಮ್ ನ್ಯೂಸ್

ಹಣದ ವಿಚಾರದಲ್ಲಿ ಹಲ್ಲೆಗೈದು; ಜೀವಬೆದರಿಕೆ – ದೂರು ದಾಖಲು

(ನ್ಯೂಸ್ ಕಡಬ)newskadaba.com ನೆಲ್ಯಾಡಿ, ಜು.26. ಹಣದ ವಿಚಾರದಲ್ಲಿ ಹಲ್ಲೆಗೈದು ಜೀವ ಬೆದರಿಕೆ ಒಡ್ಡಿದ್ದಾರೆ ಎಂದು ಯಾಹ್ಯ ಕೊಕ್ಕಡ ಎಂಬವರು ನೀಡಿದ ದೂರಿನಂತೆ ಶಿವಪ್ರಸಾದ್ ಪಿ.ಎಂ ಹಾಗೂ ಗಣೇಶ್ ಎಂಬವರ ವಿರುದ್ದ ಉಪ್ಪಿನಂಗಡಿ ಪೊಲೀಸ್ ಠಾಣೆಯಲ್ಲಿ ಕೇಸು ದಾಖಲಾಗಿದೆ. ಉಪ್ಪಿನಂಗಡಿ ನಿವಾಸಿ ಯಾಹ್ಯ ನೀಡಿದ  ದೂರಿನಂತೆ ಪೊಲೀಸ್ ಠಾಣೆಯಲ್ಲಿ ಕೇಸು ದಾಖಲಾಗಿದೆ ಎಂದು ವರದಿ ತಿಳಿಸಿದೆ. ಯಾಹ್ಯ ಅವರಿಂದ ಶಿವಪ್ರಸಾದ್ ಎಂಬವರು ಅಂದಾಜು 46 ಲಕ್ಷ ಪಡೆದುಕೊಂಡಿದ್ದು, ಈ ಕುರಿತು ಕರಾರು ಪತ್ರ ಮತ್ತು ಚೆಕ್ ಗಳನ್ನು ನೀಡಿದ್ದಾರೆ.

ಹಣದ ವಿಚಾರದಲ್ಲಿ ಹಲ್ಲೆಗೈದು; ಜೀವಬೆದರಿಕೆ – ದೂರು ದಾಖಲು Read More »

ಕರಾವಳಿ, ಕ್ರೈಮ್ ನ್ಯೂಸ್
Theft, crime, Robbery

ನೆಲ್ಯಾಡಿ: ಚಿನ್ನಾಭರಣ ಸಹಿತ ನಗದು ಕಳವು..! ➤  ಆರೋಪಿಗಳು ಪರಾರಿ

(ನ್ಯೂಸ್ ಕಡಬ) newskadaba.com  ನೆಲ್ಯಾಡಿ, ಜ.14. ಮನೆಯಲ್ಲಿ ಯಾರು ಇಲ್ಲದ ವೇಳೆ ಕಳ್ಳರು  ಚಿನ್ನಾಭರಣ ಸಹಿತ ನಗದು ದೋಚಿ ಪರಾರಿಯಾದ ಘಟನೆ ಕಡಬ ತಾಲೂಕಿನ ನೆಲ್ಯಾಡಿಯಲ್ಲಿ ವರದಿಯಾಗಿದೆ. ನೆಲ್ಯಾಡಿಯ   ಗೋಳಿತ್ತೊಟ್ಟು ಗ್ರಾಮದ  ನಿವಾಸಿ ಸ್ಕರಿಯ ಎಂಬವರ ಮನೆಯಿಂದ ನಗದು ಹಾಗೂ ಚಿನ್ನಾಭರಣ ಕಳವುಗೊಂಡಿದೆ ಎನ್ನಲಾಗಿದೆ. ಸ್ಕರಿಯ ಅವರು  ಚಿಕಿತ್ಸೆಗಾಗಿ ಉಜಿರೆ ಆಸ್ಪತ್ರೆಗೆ ದಾಖಲಾಗಿದ್ದು, ಅಳಿಯ  ಕೂಡ  ಉಜಿರೆ ಆಸ್ಪತ್ರೆಗೆ ತೆರಳಿದ್ದರು.  ಮಗಳು ಮತ್ತು ಮಕ್ಕಳು ಆರ್ಲದಲ್ಲಿನ ಮನೆಗೆ ತೆರಳಿದ್ದರು ಎನ್ನಲಾಗಿದೆ. ಮನೆಯಲ್ಲಿ ಯಾರೂ ಇಲ್ಲ ಎಂಬುದನ್ನು ಖಚಿತಪಡಿಸಿಕೊಂಡ ಕಳ್ಳರು ಮನೆಯ ಮುಂಭಾಗದ ಬಾಗಿಲು ಚಿಲಕ ಮುರಿದು ಒಳ ಪ್ರವೇಶಿಸಿ

ನೆಲ್ಯಾಡಿ: ಚಿನ್ನಾಭರಣ ಸಹಿತ ನಗದು ಕಳವು..! ➤  ಆರೋಪಿಗಳು ಪರಾರಿ Read More »

ಕರಾವಳಿ, ಕರ್ನಾಟಕ, ಕ್ರೈಮ್ ನ್ಯೂಸ್

ನೆಲ್ಯಾಡಿ : ಕಾಲು ಜಾರಿ ಕೆರೆಗೆ ಬಿದ್ದು ಓರ್ವ ಮಹಿಳೆ ಮೃತ್ಯು   

(ನ್ಯೂಸ್ ಕಡಬ) newskadaba.com  ನೆಲ್ಯಾಡಿ, ಜ.03. ಮಹಿಳೆಯೋರ್ವರು ಆಕಸ್ಮಿಕವಾಗಿ ಕಾಲು ಜಾರಿ ಕೆರೆಗೆ ಬಿದ್ದು ಮೃತಪಟ್ಟಿರುವ ಘಟನೆ ಕಡಬ ತಾಲೂಕಿನ ನೆಲ್ಯಾಡಿ ಸಮೀಪದ ಕೊಣಾಲು ಗ್ರಾಮದಲ್ಲಿ ಸಂಭವಿಸಿದೆ. ಮೃತಪಟ್ಟವರನ್ನು ಕೊಣಾಲು ಗ್ರಾಮದ ನಿವಾಸಿ ಚೆನ್ನಮ್ಮ (70) ಎಂದು ಗುರುತಿಸಲಾಗಿದೆ. ಚೆನ್ನಮ್ಮರವರು ತೋಟಕ್ಕೆ ತೆರಳುತ್ತಿದ್ದ ವೇಳೆ ಆಕಸ್ಮಿಕವಾಗಿ ಕಾಲು ಜಾರಿ ಬಿದ್ದಿದ್ದಾರೆ ಎನ್ನಲಾಗಿದೆ. ಮೃತದೇಹವನ್ನು ಪುತ್ತೂರು ಸರಕಾರಿ ಆಸ್ಪತ್ರೆಯಲ್ಲಿ ಮಹಜರು ನಡೆಸಲಾಗಿದೆ ಎನ್ನಲಾಗಿದೆ. ಉಪ್ಪಿನಂಗಡಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ ಎಂದು ವರದಿ ತಿಳಿಸಿದೆ.      

ನೆಲ್ಯಾಡಿ : ಕಾಲು ಜಾರಿ ಕೆರೆಗೆ ಬಿದ್ದು ಓರ್ವ ಮಹಿಳೆ ಮೃತ್ಯು    Read More »

ಕರಾವಳಿ, ಕರ್ನಾಟಕ, ಕ್ರೈಮ್ ನ್ಯೂಸ್

ನೆಲ್ಯಾಡಿ: ನೀರುಪಾಲಾಗಿದ್ದ ವ್ಯಕ್ತಿಯ ಮೃತದೇಹ ಪತ್ತೆ

(ನ್ಯೂಸ್ ಕಡಬ) newskadaba.com ನೆಲ್ಯಾಡಿ, ಡಿ. 27. ಮೀನು ಹಿಡಿಯಲೆಂದು ಹೋಗಿ ನೇತ್ರಾವತಿ ನದಿಯಲ್ಲಿ ಡಿ. 26ರಂದು ನೀರುಪಾಲಾಗಿದ್ದ ವ್ಯಕ್ತಿಯ ಮೃತದೇಹವು ಇಂದು ಪತ್ತೆಯಾಗಿರುವ ಕುರಿತು ವರದಿಯಾಗಿದೆ. ಮೃತರನ್ನು ಮೊಗ್ರು ದಂಡುಗ ನಿವಾಸಿ ಜನಾರ್ಧನ ಎಂದು ಗುರುತಿಸಲಾಗಿದೆ. ಜನಾರ್ಧನ ಹಾಗೂ ಮಹೇಶ್ ಎಂಬವರು ಮುಗೇರಡ್ಕದ ಕಾಮಗಾರಿ ಹಂತದ ಸೇತುವೆಯ ಬಳಿ ನೇತ್ರಾವತಿ ನದಿಯಲ್ಲಿ ಮೀನು ಹಿಡಿಯಲೆಂದು ಹೋಗಿದ್ದ ಸಂದರ್ಭ ಜನಾರ್ಧನ ರವರು ನೀರುಪಾಲಾಗಿದ್ದರು. ಆದರೆ ಜೊತೆಗಿದ್ದ ಮಹೇಶ್ ವಿಷಯ ಯಾರಿಗೂ ತಿಳಿಸದೇ ತನ್ನ ಪಾಡಿಗೆ ವಾಪಸ್ ಬಂದಿದ್ದರು.

ನೆಲ್ಯಾಡಿ: ನೀರುಪಾಲಾಗಿದ್ದ ವ್ಯಕ್ತಿಯ ಮೃತದೇಹ ಪತ್ತೆ Read More »

ಕರಾವಳಿ, ಕ್ರೈಮ್ ನ್ಯೂಸ್

ನೆಲ್ಯಾಡಿ: ಟಾಟಾ ಏಸ್ ಹಾಗೂ ಸಿಲಿಂಡರ್ ಸಾಗಾಟದ ಲಾರಿ ನಡುವೆ ಅಪಘಾತ ➤ ಓರ್ವ ಗಂಭೀರ.!

(ನ್ಯೂಸ್ ಕಡಬ) newskadaba.com ನೆಲ್ಯಾಡಿ, ಜ. 11. ಅಂಚೆ ಇಲಾಖೆಯ ಪಾರ್ಸೆಲ್ ಸಾಗಾಟದ ಟಾಟಾ ಏಸ್ ಹಾಗೂ ಸಿಲಿಂಡರ್ ಸಾಗಾಟದ ಲಾರಿ ನಡುಬೆ ಢಿಕ್ಕಿ ಸಂಭವಿಸಿದ ಪರಿಣಾಮ ಟಾಟಾ ಏಸ್ ಚಾಲಕ ಗಂಭೀರ ಗಾಯಗಿಂಡ ಘಟನೆ ಮಂಗಳೂರು- ಬೆಂಗಳೂರು ರಾ.ಹೆ ಗೋಳಿತೊಟ್ಟು ಎಂಬಲ್ಲಿ ನಡೆದಿದೆ. ಗಾಯಗೊಂಡವರನ್ನು ಪುತ್ತೂರು ನೆಹರೂನಗರ ನಿವಾಸಿ ರವಿ ಎಂದು ಗುರುತಿಸಲಾಗಿದೆ. ಇವರು ಸುಬ್ರಹ್ಮಣ್ಯದಿಂದ ನೆಟ್ಟಣ, ಕಡಬ, ಅಲಂಕಾರು, ನೆಲ್ಯಾಡಿಯಿಂದ ಅಂಚೆ ಇಲಾಖೆಯ ಬ್ಯಾಗ್ ಕಲೆಕ್ಟ್ ಮಾಡಿಕೊಂಡು ಪುತ್ತೂರಿಗೆ ತೆರಳುತ್ತಿದ್ದ ವೇಳೆ ವಿರುದ್ದ ದಿಕ್ಕಿನಿಂದ

ನೆಲ್ಯಾಡಿ: ಟಾಟಾ ಏಸ್ ಹಾಗೂ ಸಿಲಿಂಡರ್ ಸಾಗಾಟದ ಲಾರಿ ನಡುವೆ ಅಪಘಾತ ➤ ಓರ್ವ ಗಂಭೀರ.! Read More »

ಕರಾವಳಿ, ಕರ್ನಾಟಕ, ಕ್ರೈಮ್ ನ್ಯೂಸ್

ನಾಳೆ (ನ.28) ನೆಲ್ಯಾಡಿ ಸಂತ ಜಾರ್ಜ್ ವಿದ್ಯಾಲಯದಲ್ಲಿ ವಸ್ತು ಪ್ರದರ್ಶನ ಹಾಗೂ ಮೆಟ್ರಿಕ್ ಮೇಳ

(ನ್ಯೂಸ್ ಕಡಬ) newskadaba.com, ನೆಲ್ಯಾಡಿ. ನ.27.  ಸಂತ ಜಾರ್ಜ್ ವಿದ್ಯಾಸಂಸ್ಥೆ ನೆಲ್ಯಾಡಿಯಲ್ಲಿ ವಿದ್ಯಾರ್ಥಿಗಳ ಸೃಜನಶೀಲತೆ ಹಾಗೂ  ಜೀವನ ಕೌಶಲ್ಯಗಳಿಗಾಗಿ ವಿಜ್ಞಾನ ವಸ್ತು ಪ್ರದರ್ಶನ ಹಾಗೂ ಮೆಟ್ರಿಕ್ ಮೇಳವು ನಾಳೆ (ನ.28) ಪೂರ್ವಾಹ್ನ 9.30 ಕ್ಕೆ ನ್ಯೂ ಮಿಲೇನಿಯಂ ಹಾಲ್ ನಲ್ಲಿ ನಡೆಯಲಿದೆ. ವಿಜ್ಞಾನ ವಸ್ತು ಪ್ರದರ್ಶನವನ್ನು ನಿವೃತ್ತ ಮುಖ್ಯ ಗುರುಗಳಾದ ಆರ್.ವೆಂಕಟ್ರಮಣ ಹಾಗೂ ಮೆಟ್ರಿಕ್ ಮೇಳವನ್ನು ನೆಲ್ಯಾಡಿಯ ರಶ್ಮಿ ಡ್ರೆಸ್ ಸೆಂಟರ್ ನ ಮಾಲಕರಾದ ಗಣೇಶ್ ಕೆ.ರಶ‍್ಮಿ ಯವರು ಉದ್ಘಾಟಿಸಲಿದ್ದಾರೆ. ವಾರ್ಷಿಕ ಕ್ರೀಡಾಕೂಟವು ನವೆಂಬರ್ 30 ಶನಿವಾರದಂದು

ನಾಳೆ (ನ.28) ನೆಲ್ಯಾಡಿ ಸಂತ ಜಾರ್ಜ್ ವಿದ್ಯಾಲಯದಲ್ಲಿ ವಸ್ತು ಪ್ರದರ್ಶನ ಹಾಗೂ ಮೆಟ್ರಿಕ್ ಮೇಳ Read More »

ಕರಾವಳಿ

ನೆಲ್ಯಾಡಿ: ಬೈಕ್ – ಲಾರಿ ಢಿಕ್ಕಿ ► ಸವಾರ ಸ್ಥಳದಲ್ಲೇ ಮೃತ್ಯು

(ನ್ಯೂಸ್ ಕಡಬ) newskadaba.com ನೆಲ್ಯಾಡಿ, 15. ಮಂಗಳೂರು – ಬೆಂಗಳೂರು ರಾಷ್ಟ್ರೀಯ ಹೆದ್ದಾರಿಯ ನೆಲ್ಯಾಡಿ ಸಮೀಪದ ಬೆದ್ರೋಡಿ ಎಂಬಲ್ಲಿ ಈಚರ್ ಹಾಗೂ ಬೈಕ್ ಮಧ್ಯೆ ಢಿಕ್ಕಿ ಸಂಭವಿಸಿದ ಪರಿಣಾಮ ಬೈಕ್ ಸವಾರ ಸ್ಥಳದಲ್ಲೇ ಮೃತಪಟ್ಟ ಘಟನೆ ಭಾನುವಾರದಂದು ನಡೆದಿದೆ. ಮೃತ ಸವಾರನನ್ನು ಕೊಕ್ಕಡ ನಿವಾಸಿ ಬಾಳಪ್ಪ ಗೌಡ ಎಂಬವರ ಪುತ್ರ ಪೂವಪ್ಪ ಗೌಡ(44) ಎಂದು ಗುರುತಿಸಲಾಗಿದೆ. ಇವರು ತನ್ನ ಬೈಕಿನಲ್ಲಿ ಉಪ್ಪಿನಂಗಡಿ ಕಡೆಗೆ ತೆರಳುತ್ತಿದ್ದಾಗ ವಿರುದ್ಧ ದಿಕ್ಕಿನಿಂದ ಬಂದ ಈಚರ್ ಲಾರಿಯು ಢಿಕ್ಕಿ ಹೊಡೆದಿದ್ದು, ರಸ್ತೆಗೆ ಎಸೆಯಲ್ಪಟ್ಟ

ನೆಲ್ಯಾಡಿ: ಬೈಕ್ – ಲಾರಿ ಢಿಕ್ಕಿ ► ಸವಾರ ಸ್ಥಳದಲ್ಲೇ ಮೃತ್ಯು Read More »

ಕರಾವಳಿ
Scroll to Top