nepal

ನೇಪಾಳ ಹಿಂಸಾಚಾರ – ಕಠ್ಮಂಡುವಿನಲ್ಲಿ ಸಿಲುಕಿಕೊಂಡ ಕನ್ನಡಿಗರು

(ನ್ಯೂಸ್‌ ಕಡಬ) newskadaba.com,  ಸೆ.09: ನೇಪಾಳ ಸರ್ಕಾರದ ಸಾಮಾಜಿಕ ಜಾಲತಾಣ ನಿಷೇಧದ ನಿರ್ಧಾರದಿಂದ ಉಂಟಾದ ಭಾರೀ ಜನಾಕ್ರೋಶ, ಈಗ ನೇಪಾಳದ ರಾಜಕೀಯ ಸ್ಥಿತಿಗತಿಯನ್ನೇ ತಲೆಕೆಳಗಾಗಿಸಿರುವ ಮಧ್ಯೆ, ಹಿಮಾಲಯದ ಮಾನಸಸರೋವರ ಯಾತ್ರೆಗೆ ತೆರಳಿದ 200ಕ್ಕೂ ಹೆಚ್ಚು ಕನ್ನಡಿಗರು ಕಠ್ಮಂಡುವಿನ ತ್ರಿಭುವನ್ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ಸಿಲುಕಿರುವ ಘಟನೆ ಬೆಳಕಿಗೆ ಬಂದಿದೆ. ದೇಶದಾದ್ಯಂತ ವ್ಯಾಪಕ ಹಿಂಸಾಚಾರ, ಬೆಂಕಿ ಹಚ್ಚುವ ಕೃತ್ಯಗಳು ನಡೆಯುತ್ತಿರುವ ಹಿನ್ನೆಲೆಯಲ್ಲಿ, ವಿಮಾನ ನಿಲ್ದಾಣದ ಸಂಚಾರವನ್ನು ಸ್ಥಗಿತಗೊಳಿಸಲಾಗಿದೆ. ಬೆಂಗಳೂರು ಮೂಲದ ರಜನಿ ಮಸ್ಕಿ ಮತ್ತು ರಘುವೀರ್ ಯಾವಗಲ್ ದಂಪತಿ, […]

ನೇಪಾಳ ಹಿಂಸಾಚಾರ – ಕಠ್ಮಂಡುವಿನಲ್ಲಿ ಸಿಲುಕಿಕೊಂಡ ಕನ್ನಡಿಗರು Read More »

ಅಂತರ್ರಾಷ್ಟ್ರೀಯ ನ್ಯೂಸ್, ಬ್ರೇಕಿಂಗ್ ನ್ಯೂಸ್

ನೇಪಾಳ: ಪ್ರಧಾನಿ ನಿವಾಸಕ್ಕೆ ಬೆಂಕಿ – ರಾಜೀನಾಮೆ ಸಲ್ಲಿಸಿದ ಓಲಿ

(ನ್ಯೂಸ್‌ ಕಡಬ) newskadaba.com,  ಸೆ.09: ನೇಪಾಳದಲ್ಲಿ ಯುವ ಜನತೆಯ ಪ್ರತಿಭಟನೆ ತೀವ್ರಗೊಂಡಿದ್ದು ಪ್ರಧಾನಿ ನಿವಾಸಕ್ಕೆ ಬೆಂಕಿ ಹಚ್ಚಿದ್ದಾರೆ. ನೇಪಾಳದಲ್ಲಿ ಸಾಮಾಜಿಕ ಜಾಲತಾಣ ನಿಷೇಧ ವಾಪಸ್ ಪಡೆದರೂ ಹೋರಾಟಗಾರರು ಪ್ರಧಾನಿ ಕೆ.ಪಿ. ಶರ್ಮಾ ಓಲಿ ರಾಜೀನಾಮೆಗೆ ಬಿಗಿಪಟ್ಟು ಹಿಡಿದಿದ್ದಾರೆ. ಇದರ ಬೆನ್ನಲ್ಲೇ ಕೆ.ಪಿ. ಶರ್ಮಾ ಓಲಿ ಪ್ರಧಾನಿ ಹುದ್ದೆಗೆ ರಾಜೀನಾಮೆ ಸಲ್ಲಿಸಿದ್ದಾರೆ. ಇಂದು ಸಂಸತ್ ಭವನದ ಆವರಣಕ್ಕೆ ನುಗ್ಗಿದ ಪ್ರತಿಭಟನಾಕಾರರು ಸಂಸತ್‌ ಭವನದ ಗೋಡೆ ಉರುಳಿಸಿ ಆಕ್ರೋಶ ಹೊರಹಾಕಿದ್ದಾರೆ. ಉದ್ರಿಕ್ತರನ್ನು ಚದುರಿಸಲು ಸೇನಾ ಪಡೆ ಈಗ ಕಾರ್ಯಾಚರಣೆಗ ಮುಂದಾಗಿದೆ. ನೇಪಾಳದ

ನೇಪಾಳ: ಪ್ರಧಾನಿ ನಿವಾಸಕ್ಕೆ ಬೆಂಕಿ – ರಾಜೀನಾಮೆ ಸಲ್ಲಿಸಿದ ಓಲಿ Read More »

ಅಂತರ್ರಾಷ್ಟ್ರೀಯ ನ್ಯೂಸ್, ಬ್ರೇಕಿಂಗ್ ನ್ಯೂಸ್

ನೇಪಾಳದಲ್ಲಿ ಫೇಸ್‌ಬುಕ್, ಎಕ್ಸ್, ಯೂಟ್ಯೂಬ್ ಸೇರಿ 26 ಸೋಷಿಯಲ್ ಮೀಡಿಯಾಗಳು ಸ್ಥಗಿತ

(ನ್ಯೂಸ್‌ ಕಡಬ) com,  ಸೆ.06 ಕಠ್ಮಂಡು : ನೇಪಾಳದಲ್ಲಿ ಫೇಸ್‌ಬುಕ್, ಎಕ್ಸ್, ಯೂಟ್ಯೂಬ್ ಸೇರಿದಂತೆ 26 ಸಾಮಾಜಿಕ ಮಾಧ್ಯಮಗಳಿಗೆ ನಿಷೇಧ ವಿಧಿಸಲಾಗಿದೆ. ನೇಪಾಳದಲ್ಲಿ ಅಧಿಕೃತವಾಗಿ ನೋಂದಣಿ ಪ್ರಕ್ರಿಯೆಯನ್ನು ಪೂರ್ಣಗೊಳಿಸಿದರೆ ಮಾತ್ರ ಬಳಕೆಗೆ ಅವಕಾಶ ನೀಡಲಾಗಿದೆ. ಸುಪ್ರೀಂ ಕೋರ್ಟ್ ಆದೇಶದ ಮೇರೆಗೆ ಸರ್ಕಾರ 26 ಸೋಷಿಯಲ್ ಮೀಡಿಯಾಗಳಿಗೆ ನಿಷೇಧ ವಿಧಿಸಿದೆ. ಸ್ಥಳೀಯ ಮಟ್ಟದಲ್ಲಿ ನೋಂದಣಿಯಾಗಿರಲಿಲ್ಲ. ಜಾಹೀರಾತುಗಳ ಮೇಲೆ ಸರ್ಕಾರದ ನಿಯಂತ್ರಣ ಇರಲಿಲ್ಲ. ಈ ಕುರಿತು ಸುಪ್ರೀಂ ಕೋರ್ಟ್‌ನಲ್ಲಿ ವಿಚಾರಣೆ ನಡೆದಿತ್ತು. ಸ್ಥಳೀಯ ನೋಂದಣಿವರೆಗೂ ಬಳಕೆಗೆ ತಡೆ ಹಾಕುವಂತೆ ಕೋರ್ಟ್ ನಿರ್ದೇಶಿಸಿತ್ತು.

ನೇಪಾಳದಲ್ಲಿ ಫೇಸ್‌ಬುಕ್, ಎಕ್ಸ್, ಯೂಟ್ಯೂಬ್ ಸೇರಿ 26 ಸೋಷಿಯಲ್ ಮೀಡಿಯಾಗಳು ಸ್ಥಗಿತ Read More »

ಅಂತರ್ರಾಷ್ಟ್ರೀಯ ನ್ಯೂಸ್, ಬ್ರೇಕಿಂಗ್ ನ್ಯೂಸ್

ನೇಪಾಳದಲ್ಲಿ 4.4 ತೀವ್ರತೆಯ ಲಘು ಭೂಕಂಪ

(ನ್ಯೂಸ್‌ ಕಡಬ) newskadaba.com, ಆ.23:‌‌ ನೇಪಾಳದ ಪೂರ್ವ ಭಾಗದಲ್ಲಿ 4.4 ತೀವ್ರತೆಯ ಲಘು ಭೂಕಂಪ ಸಂಭವಿಸಿದೆ ಎಂದು ರಾಷ್ಟ್ರೀಯ ಭೂಕಂಪ ಮೇಲ್ವಿಚಾರಣೆ ಹಾಗೂ ಸಂಶೋಧನಾ ಕೇಂದ್ರ ತಿಳಿಸಿದೆ. ಮಾಘಂಗ್‌ ಪ್ರದೇಶದ ಸಂಖುವಸಭಾ ಸೇರಿದಂತೆ ಹಲವು ಜಿಲ್ಲೆಗಳಲ್ಲಿ ಲಘು ಭೂಕಂಪನವಾಗಿದೆ. ಘಟನೆಯಲ್ಲಿ ಯಾವುದೇ ರೀತಿಯ ಹಾನಿ ಸಂಭವಿಸಿಲ್ಲ ಎಂದು ಅಧಿಕಾರಿಗಳು ಮಾಹಿತಿ ನೀಡಿದ್ದಾರೆ. ನೇಪಾಳ ಹೆಚ್ಚಿನ ಭೂಕಂಪನ ಅಪಾಯದ ವಲಯದಲ್ಲಿದೆ. 2015ರಲ್ಲಿ 7.8 ತೀವ್ರತೆಯ ಭೂಕಂಪ ಸಂಭವಿಸಿದ್ದು, ಅಧಿಕ ಮಂದಿ ಸಾವನ್ನಪ್ಪಿದ್ದರು.

ನೇಪಾಳದಲ್ಲಿ 4.4 ತೀವ್ರತೆಯ ಲಘು ಭೂಕಂಪ Read More »

ಅಂತರ್ರಾಷ್ಟ್ರೀಯ ನ್ಯೂಸ್

ನೇಪಾಳ: 7.1 ತೀವ್ರತೆಯ ಪ್ರಬಲ ಭೂಕಂಪ; ಭಾರತ ಸೇರಿದಂತೆ ಹಲವು ದೇಶಗಳಲ್ಲಿ ಭೂಮಿ ಕಂಪಿಸಿದ ಅನುಭವ

(ನ್ಯೂಸ್ ಕಡಬ) newskadaba.com ಜ.07 ಕಠ್ಮಂಡು: ನೆರೆಯ ರಾಷ್ಟ್ರ ನೇಪಾಳದಲ್ಲಿ ಇಂದು ಬೆಳ್ಳಂಬೆಳಗ್ಗೆ ಪ್ರಬಲ ಭೂಕಂಪ ಸಂಭವಿಸಿದ್ದು, ಭಾರತ ಸೇರಿದಂತೆ ಹಲವು ರಾಷ್ಟ್ರಗಳಲ್ಲಿ ಭೂಮಿ ಕಂಪಿಸಿದ ಅನುಭವವಾಗಿದೆ. ಭೂಕಂಪಶಾಸ್ತ್ರಜ್ಞರ ಪ್ರಕಾರ 7.1 ತೀವ್ರತೆಯ ಪ್ರಬಲ ಭೂಕಂಪವು ದಕ್ಷಿಣ ಚೀನಾದ ಟಿಬೆಟ್‌ಗೆ ಅಪ್ಪಳಿಸಿದೆ. ನೇಪಾಳ, ಭಾರತ, ಭೂತಾನ್ ಮತ್ತು ಬಾಂಗ್ಲಾದೇಶದಲ್ಲೂ ಭೂಮಿ ಕಂಪಿಸಿದೆ. ಭೂಕಂಪದ ಕೇಂದ್ರವು ಲೋಬುಚೆಯಿಂದ ಈಶಾನ್ಯಕ್ಕೆ 93 ಕಿ.ಮೀ. ದೂರದಲ್ಲಿತ್ತು. ರಾಷ್ಟ್ರೀಯ ರಾಜಧಾನಿ ಪ್ರದೇಶದಲ್ಲಿ ಇಂದು ಬೆಳಗ್ಗೆ 6:30ಕ್ಕೆ ಭೂಕಂಪನ ಸಂಭವಿಸಿದೆ. ಮಂಗಳವಾರ, ನೇಪಾಳದಲ್ಲಿ ಸಂಭವಿಸಿದ

ನೇಪಾಳ: 7.1 ತೀವ್ರತೆಯ ಪ್ರಬಲ ಭೂಕಂಪ; ಭಾರತ ಸೇರಿದಂತೆ ಹಲವು ದೇಶಗಳಲ್ಲಿ ಭೂಮಿ ಕಂಪಿಸಿದ ಅನುಭವ Read More »

ಬ್ರೇಕಿಂಗ್ ನ್ಯೂಸ್

ಆಂಧ್ರ ಪ್ರದೇಶ, ನೇಪಾಳ, ಕ್ಯೂಬಾ ಸೇರಿದಂತೆ ಜಗತ್ತಿನ ಹಲವೆಡೆ ಭೂಕಂಪನ, ವನವಾಟುನಲ್ಲಿ 12 ಮಂದಿ ಸಾವು!

(ನ್ಯೂಸ್ ಕಡಬ) newskadaba.com ಡಿ. 23 ನವದೆಹಲಿ: ಜಗತ್ತಿನಾದ್ಯಂತ ಹಲವು ದೇಶಗಳಲ್ಲಿ ಭಾರಿ ಭೂಕಂಪನ ಸಂಭವಿಸಿದ್ದು, ಭಾರತದ ಆಂಧ್ರ ಪ್ರದೇಶ, ನೆರೆಯ ನೇಪಾಳ, ಕ್ಯೂಬಾ ಮತ್ತು ದಕ್ಷಿಣ ಪೆಸಿಫಿಕ್ ಸಾಗರದಲ್ಲಿರುವ ದ್ವೀಪರಾಷ್ಟ್ರ ವನವಾಟುವಿನಲ್ಲಿ ಭಾರಿ ಕಂಪನ ದಾಖಲಾಗಿವೆ. ಆಂಧ್ರ ಪ್ರದೇಶದ ಪ್ರಕಾಶಂ ಜಿಲ್ಲೆಯ ಕಳೆದ ಮೂರು ದಿನಗಳಲ್ಲಿ ಮೂರನೇ ಬಾರಿಗೆ ಕಂಪನದ ಅನುಭವವಾಗಿದೆ. ಜಿಲ್ಲೆಯ ಮುಂಡ್ಲಮೂರಿನಲ್ಲಿ ಇಂದು ಕೂಡ ಭೂಕಂಪನದ ಅನುಭವವಾಗಿದ್ದು, ಕಳೆದ ಮೂರು ದಿನಗಳಿಂದ ಮುಂಡ್ಲಮೂರಿನಲ್ಲಿ ಸತತ ಭೂಕಂಪನ ಉಂಟಾಗಿದೆ ಎಂದು ಸ್ಥಳೀಯರು ಹೇಳಿದ್ದಾರೆ. ಶನಿವಾರ ಮತ್ತು

ಆಂಧ್ರ ಪ್ರದೇಶ, ನೇಪಾಳ, ಕ್ಯೂಬಾ ಸೇರಿದಂತೆ ಜಗತ್ತಿನ ಹಲವೆಡೆ ಭೂಕಂಪನ, ವನವಾಟುನಲ್ಲಿ 12 ಮಂದಿ ಸಾವು! Read More »

ಬ್ರೇಕಿಂಗ್ ನ್ಯೂಸ್

ನೇಪಾಳದಲ್ಲಿ ನಡೆದ ವಿಮಾನ ದುರಂತ..! ➤ ಮೃತರ ಸಂಖ್ಯೆ 70ಕ್ಕೆ ಏರಿಕೆ

(ನ್ಯೂಸ್ ಕಡಬ)newskadaba.com ನೇಪಾಳ, ಜ.17. ನೇಪಾಳದ ಪೋಖರಾ ಪ್ರದೇಶದಲ್ಲಿ ಸಂಭವಿಸಿದ ಯೇತಿ ಏರ್‌ಲೈನ್ಸ್ ವಿಮಾನ ದುರಂತ ಸ್ಥಳದಲ್ಲಿ ಮತ್ತೆ ಇಬ್ಬರ ಶವ ಪತ್ತೆಯಾಗಿದೆ. ಇದರೊಂದಿಗೆ ಸಾವಿನ ಸಂಖ್ಯೆ 70ಕ್ಕೆ ಏರಿಕೆಯಾಗಿದೆ ಎಂದು ಸ್ಥಳೀಯ ಪೊಲೀಸರು ತಿಳಿಸಿದ್ದಾರೆ. ನಾಪತ್ತೆಯಾಗಿದ್ದ ಮತ್ತೊಬ್ಬ ಪ್ರಯಾಣಿಕನ ಶವ ತಡವಾಗಿ ಪತ್ತೆಯಾಗಿದೆ. ಇನ್ನೂ ಇಬ್ಬರು ಪ್ರಯಾಣಿಕರು ನಾಪತ್ತೆಯಾಗಿದ್ದಾರೆ. ಸ್ಥಳದಿಂದ ಇದುವರೆಗೆ ಒಟ್ಟು 70 ಮೃತದೇಹಗಳನ್ನು ವಶಪಡಿಸಿಕೊಳ್ಳಲಾಗಿದೆ ಎಂದು ನೇಪಾಳ ಪೊಲೀಸರು ತಿಳಿಸಿದ್ದಾರೆ. ಐವರು ಭಾರತೀಯರು ಸೇರಿದಂತೆ 72 ಜನರಿದ್ದ ಯೇತಿ ಏರ್‌ಲೈನ್ಸ್ ಪ್ರಯಾಣಿಕ ವಿಮಾನವು

ನೇಪಾಳದಲ್ಲಿ ನಡೆದ ವಿಮಾನ ದುರಂತ..! ➤ ಮೃತರ ಸಂಖ್ಯೆ 70ಕ್ಕೆ ಏರಿಕೆ Read More »

ಕ್ರೈಮ್ ನ್ಯೂಸ್, ರಾಷ್ಟ್ರೀಯ ನ್ಯೂಸ್

ಇಂಟರ್ನ್ಯಾಶನಲ್ ಪ್ರೀತಿ..!!! ► ನೇಪಾಳ ಯುವಕನೊಂದಿಗೆ ಉಡುಪಿ ಯುವತಿಯ ಮದುವೆ

(ನ್ಯೂಸ್ ಕಡಬ) newskadaba.com ಉಡುಪಿ,ಸೆ.22. ನೇಪಾಳದ ಯುವಕನೊಂದಿಗೆ ಉಡುಪಿಯ ಕೋಟ ಮಣೂರಿನ ಯುವತಿಯ ಮದುವೆಯು ಉಡುಪಿ ಜಿಲ್ಲೆಯ ಕುಂದಾಪುರದ ಕೋಟದಲ್ಲಿ ರಾಜಲಕ್ಷ್ಮೀ ಸಭಾಂಗಣದಲ್ಲಿ ನಡೆದಿದೆ. ಉಡುಪಿಯ ಕೋಟ ಮಣೂರಿನ ದಲಿತ ಸಮುದಾಯದ ಯುವತಿ ದೀಪಾ ಹಾಗೂ ನೇಪಾಳದ ಉಪೇನ್ ಡೈಮಾರಿ ಕಳೆದ ಮೂರು ವರ್ಷಗಳಿಂದ ಪ್ರೀತಿ ಮಾಡುತ್ತಿದ್ದರು. ಇದೀಗ ಇಬ್ಬರು ತಮ್ಮ ಕುಟುಂಬದ ಸಮ್ಮುಖದಲ್ಲೇ ಸತಿಪತಿಗಳಾಗಿದ್ದಾರೆ. ನೇಪಾಳದಿಂದ ಉಪೇನ್ ಕುಟುಂಬದಿಂದ ಸುಮಾರು 20 ಮಂದಿ ಮದುವೆಗೆ ಬಂದಿದ್ದರು. ಯುವಕನಿಂದ ಬಿಡಿಗಾಸೂ ಪಡೆಯದೆ ಯುವತಿಯೇ ತನ್ನೆಲ್ಲಾ ಮದುವೆ ಖರ್ಚುವೆಚ್ಚವನ್ನು ಹಾಕಿರುವುದು

ಇಂಟರ್ನ್ಯಾಶನಲ್ ಪ್ರೀತಿ..!!! ► ನೇಪಾಳ ಯುವಕನೊಂದಿಗೆ ಉಡುಪಿ ಯುವತಿಯ ಮದುವೆ Read More »

ಕರಾವಳಿ
Scroll to Top