ರಸ್ತೆ ಅಪಘಾತ- ನವದಂಪತಿ ಸ್ಥಳದಲ್ಲೇ ಮೃತ್ಯು
(ನ್ಯೂಸ್ ಕಡಬ) newskadaba.com ವಿಜಯಪುರ, ಜೂ. 14. ಬೈಕ್ ಹಾಗೂ ಕ್ಯಾಂಟರ್ ನಡುವೆ ಢಿಕ್ಕಿ ಸಂಭವಿಸಿದ ಪರಿಣಾಮ ನವವಿವಾಹಿತರು ಸ್ಥಳದಲ್ಲೇ ಮೃತಪಟ್ಟ ಘಟನೆ ನಗರದ ಹೊರವಲಯದ ಸೊಲ್ಲಾಪುರ ಬೈಪಾಸ್ ಬಳಿ ನಡೆದಿದೆ. ಮೃತರನ್ನು ಹೊನಮಲ್ಲ ತೆರದಾಳ ಹಾಗೂ ಪತ್ನಿ ಗಾಯತ್ರಿ ಎಂದು ಗುರುತಿಸಲಾಗಿದೆ. ಕಳೆದ ಮೇ. 22ರಂದು ಮದುವೆಯಾಗಿದ್ದ ಇವರು, ಸಂಬಂಧಿಕರ ಮನೆಗೆ ಹೋಗಿ ವಾಪಸಾಗುತ್ತಿದ್ದ ಸಂದರ್ಭ ಈ ಅಪಘಾತ ಸಂಭವಿಸಿದೆನ್ನಲಾಗಿದೆ.ಈ ಕುರಿತು ವಿಜಯಪುರ ಸಂಚಾರ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ರಸ್ತೆ ಅಪಘಾತ- ನವದಂಪತಿ ಸ್ಥಳದಲ್ಲೇ ಮೃತ್ಯು Read More »
ಕರ್ನಾಟಕ, ಕ್ರೈಮ್ ನ್ಯೂಸ್