new dehli

ಕೇವಲ 2 ಅಂಕಗಳಿಂದ UPSC ಪರೀಕ್ಷೆಯಲ್ಲಿ ವಿಫಲ ಮುಂದೆ IAS ಆದ ಆದಿತ್ಯ

(ನ್ಯೂಸ್ ಕಡಬ) newskadaba.com ನವದೆಹಲಿ, ಆ.03. ಕಿಡಿಗೇಡಿಯಾಗಿದ್ದ ಹುಡುಗ ಈಗ ದೊಡ್ಡ ಅಧಿಕಾರಿಯಾಗಿರುವುದು ಹಳ್ಳಿಯ ಜನಕ್ಕೆ ನಂಬಲೂ ಅಸಾಧ್ಯವಾಗಿದೆ. ಮೊದಲು ಇಂಜಿನಿಯರ್ ಆದ ಆದಿತ್ಯ ನಂತರ ಎಂಬಿಎ ಪದವಿ ಪಡೆದರು. ಇದು ಅವರಿಗೆ ತೃಪ್ತಿ ನೀಡದಿದ್ದಾಗ, ಅವರು UPSC ನಾಗರಿಕ ಸೇವೆಗಳ ಪರೀಕ್ಷೆಗೆ ತಯಾರಿ ಆರಂಭಿಸಿದರು. ಅಂತಿಮವಾಗಿ IAS ಅಧಿಕಾರಿಯಾಗಿದ್ದಾರೆ ಎಂದು ತಿಳಿದುಬಂದಿದೆ. 12ನೇ ತರಗತಿಯಲ್ಲಿ ಉತ್ತೀರ್ಣರಾದ ನಂತರ, ಆದಿತ್ಯ ಪಾಂಡೆ ಪಂಜಾಬ್ ನಲ್ಲಿರುವ ಲವ್ಲಿ ಪ್ರೊಫೆಷನಲ್ ಯೂನಿವರ್ಸಿಟಿಯಿಂದ ಬಿ.ಟೆಕ್ ಮಾಡಿದರು. ಇಲೆಕ್ಟ್ರಾನಿಕ್ಸ್ ಇಂಜಿನಿಯರಿಂಗ್ ಪದವಿ ಪಡೆದಿದ್ದರು […]

ಕೇವಲ 2 ಅಂಕಗಳಿಂದ UPSC ಪರೀಕ್ಷೆಯಲ್ಲಿ ವಿಫಲ ಮುಂದೆ IAS ಆದ ಆದಿತ್ಯ Read More »

ರಾಷ್ಟ್ರೀಯ ನ್ಯೂಸ್

ನೀಟ್ ಪ್ರಶ್ನೆ ಪತ್ರಿಕೆ ಸೋರಿಕೆ ಪ್ರಕರಣ     ಲೋಪದೋಷ ಸರಿಪಡಿಸುವಂತೆ ಸುಪ್ರೀಂ ಸೂಚನೆ            

(ನ್ಯೂಸ್ ಕಡಬ) newskadaba.com ನವದೆಹಲಿ, ಆ.03. ನೀಟ್ ಪ್ರಶ್ನೆ ಪತ್ರಿಕೆ ಸೋರಿಕೆ ಪ್ರಕರಣ ಕುರಿತು ಸುಪ್ರೀಂ ಕೋರ್ಟ್ ಹಲವು ಮಾರ್ಗಸೂಚಿಗಳನ್ನು ನೀಡಿದ್ದು, ಲೋಪದೋಷಗಳನ್ನು ಆಮೂಲಾಗ್ರವಾಗಿ ಸರಿಪಡಿಸುವಂತೆ ತಜ್ಞರ ಸಮಿತಿಗೆ ಸೂಚಿಸಿದೆ. ಪ್ರಶ್ನೆಪತ್ರಿಕೆ ಮುದ್ರಣದಿಂದ ಆರಂಭಿಸಿ ಪರೀಕ್ಷಾ ಕೇಂದ್ರಗಳಿಗೆ ತಲುಪುವ ವರೆಗೆ ಎಲ್ಲ ಎಚ್ಚರಿಕೆ ಕ್ರಮಗಳನ್ನು ವಹಿಸಬೇಕು. ಅಗತ್ಯವಿರುವೆಡೆ ಸಿಸಿಟಿವಿ ಕ್ಯಾಮೆರಾಗಳನ್ನು ಅಳವಡಿಸಬೇಕು ಎಂದು ನ್ಯಾಯಾಲಯ ಸೂಚಿಸಿದೆ. ಇದು ಮುಂದಿನ ವರ್ಷಕ್ಕೆ ಮುಂದುವರಿಯಬಾರದು ಎಂದು ಮುಖ್ಯ ನ್ಯಾಯಮೂರ್ತಿ ಡಿ.ವೈ.ಚಂದ್ರಚೂಡ್ ನೇತೃತ್ವದ ತ್ರಿಸದಸ್ಯ ಪೀಠ ಕೇಂದ್ರಕ್ಕೆ ಸೂಚಿಸಿದೆ

ನೀಟ್ ಪ್ರಶ್ನೆ ಪತ್ರಿಕೆ ಸೋರಿಕೆ ಪ್ರಕರಣ     ಲೋಪದೋಷ ಸರಿಪಡಿಸುವಂತೆ ಸುಪ್ರೀಂ ಸೂಚನೆ             Read More »

ರಾಷ್ಟ್ರೀಯ ನ್ಯೂಸ್

ಮೆಟ್ರೊದಲ್ಲಿ ಚಪ್ಪಲಿಯಿಂದ ಹೊಡೆದಾಡಿಕೊಂಡ ಪ್ರಯಾಣಿಕರು

(ನ್ಯೂಸ್ ಕಡಬ) newskadaba.com ನವದೆಹಲಿ, ಆ.02. ಮೆಟ್ರೋವನ್ನು ಅಲ್ಲಿನ ನಿವಾಸಿಗಳಿಗೆ ಮತ್ತು ಆ ನಗರಕ್ಕೆ ಭೇಟಿ ನೀಡುವ ಜನರ ಜೀವನಾಡಿ ಎಂದು ಪರಿಗಣಿಸಲಾಗಿದೆ. ಆದರೆ ಇತ್ತೀಚಿನ ದಿನಗಳಲ್ಲಿ ಈ ಮೆಟ್ರೋ ಜನರನ್ನು ಅವರ ಗಮ್ಯಸ್ಥಾನಕ್ಕೆ ಕರೆದೊಯ್ಯುವುದಕ್ಕಿಂತ ಅದರಲ್ಲಿ ನಡೆಯುವ ಚಟುವಟಿಕೆಗಳ ವೈರಲ್ ವೀಡಿಯೊಗಳಿಗೆ ಹೆಚ್ಚು ಪ್ರಸಿದ್ಧವಾಗಿದೆ. ದೆಹಲಿ ಮೆಟ್ರೋ ಆಸನಗಳಿಗಾಗಿ ಸಹ-ಪ್ರಯಾಣಿಕರ ನಡುವಿನ ಜಗಳಗಳು, ಪ್ರಣಯ ದೃಶ್ಯಗಳು, ಜೋಡಿಗಳ ಪ್ರೇಮ ಮೇಕಿಂಗ್, ಗಾಸಿಪ್ ಮತ್ತು ಲೈವ್ ಹಾಡುಗಳು ಅಥವಾ ಇತರ ಹಲವು ರೀತಿಯ ನೃತ್ಯ ರೀಲ್‌ಗಳಿಗಾಗಿ ಆಗಾಗ್ಗೆ

ಮೆಟ್ರೊದಲ್ಲಿ ಚಪ್ಪಲಿಯಿಂದ ಹೊಡೆದಾಡಿಕೊಂಡ ಪ್ರಯಾಣಿಕರು Read More »

ಕ್ರೈಮ್ ನ್ಯೂಸ್, ರಾಷ್ಟ್ರೀಯ ನ್ಯೂಸ್

ಭೂಕುಸಿತದ ಮೊದಲು, ನಂತರದ satellite image ಬಿಡುಗಡೆ ಮಾಡಿದ ISRO

(ನ್ಯೂಸ್ ಕಡಬ) newskadaba.com ನವದೆಹಲಿ, ಆ.02. ಕನಿಷ್ಠ 250ಕ್ಕೂ ಅಧಿಕ ಸಾವಿಗೆ ಕಾರಣವಾದ ಕೇರಳದ ವಯನಾಡು ಭೂಕುಸಿತ ಪ್ರಕರಣಕ್ಕೆ ಸಂಬಂಧಿಸಿದಂತೆ ಭಾರತದ ಬಾಹ್ಯಾಕಾಶ ಸಂಶೋಧನಾ ಸಂಸ್ಥೆ ಇಸ್ರೋ (ISRO) ಇಂದು ವಯನಾಡಿನ ಉಪಗ್ರಹ ಚಿತ್ರಗಳನ್ನು ಬಿಡುಗಡೆ ಮಾಡಿದೆ. ವಯನಾಡ್‌ ಭೂಕುಸಿತದ ಮೊದಲು ಮತ್ತು ನಂತರದ ಚಿತ್ರಗಳನ್ನು ಇಸ್ರೋ ಬಿಡುಗಡೆ ಮಾಡಿದ್ದು, ಉಪಗ್ರಹ ಚಿತ್ರಗಳ ಪ್ರಕಾರ ಭೂಕುಸಿತದ ಪ್ರಭಾವ ಸುಮಾರು 8 ಕಿಮೀ ವ್ಯಾಪ್ತಿಯಲ್ಲಿ ಸಾಗಿದೆ. ಸುಮಾರು 86,000 ಚ.ಮೀ ಪ್ರದೇಶಕ್ಕೆ ಹಾನಿ ವ್ಯಾಪಿಸಿದ್ದು, ಹೀಗಾಗಿ ಇಷ್ಟೂ ಪ್ರದೇಶದಲ್ಲಿ

ಭೂಕುಸಿತದ ಮೊದಲು, ನಂತರದ satellite image ಬಿಡುಗಡೆ ಮಾಡಿದ ISRO Read More »

ರಾಷ್ಟ್ರೀಯ ನ್ಯೂಸ್

ರಾಜ್ಯಕ್ಕೆ ಅಕ್ಕಿ ನೀಡಲು ಕೇಂದ್ರ ಸಿದ್ಧ      ಆಹಾರ ಸಚಿವ ಪ್ರಹ್ಲಾದ್ ಜೋಶಿ ಘೋಷಣೆ

(ನ್ಯೂಸ್ ಕಡಬ) newskadaba.com ನವದೆಹಲಿ, ಆ.01. ಮಹತ್ವದ ಬೆಳವಣಿಗೆಯೊಂದರಲ್ಲಿ ರಾಜ್ಯಕ್ಕೆ ಅಕ್ಕಿ ನೀಡಲು ಕೇಂದ್ರ ಸರ್ಕಾರ ಸಿದ್ಧವಾಗಿದೆ ಎಂದು ಆಹಾರ ಸಚಿವ ಪ್ರಹ್ಲಾದ್ ಜೋಶಿ ಘೋಷಿಸಿದ್ದಾರೆ ಎಂದು ತಿಳಿದುಬಂದಿದೆ. ದೆಹಲಿಯಲ್ಲಿ ಮಾತನಾಡಿದ ಅವರು, ರಾಜ್ಯಕ್ಕೆ ಅಕ್ಕಿಕೊಡಲು ಕೇಂದ್ರ ಸಿದ್ಧವಿದೆ. ಮನವಿ ಬಂದರೆ ಹೆಚ್ಚುವರಿ ಅಕ್ಕಿ ಕೊಡಲಿದ್ದೇವೆ. ಕೆಜಿಗೆ 28ರೂ.ನಂತೆ ನಾವು ಅಕ್ಕಿ ಕೊಡಲು ಸಿದ್ಧರಿದ್ದು, ಎಷ್ಟು ಬೇಕಾದರೂ ಅಕ್ಕಿಕೊಡಲಿದ್ದೇವೆ ಎಂದು ಹೇಳಿದ್ದಾರೆ. ಈ ಹಿಂದೆ ರಾಜ್ಯಕ್ಕೆ ಅಕ್ಕಿ ಕೊಡಲು ಕೇಂದ್ರ ಸುತರಾಂ ಒಪ್ಪಿರಲಿಲ್ಲ. ಇರುವ ಸ್ಟಾಕನ್ನೆಲ್ಲ ರಾಜ್ಯಕ್ಕೆ

ರಾಜ್ಯಕ್ಕೆ ಅಕ್ಕಿ ನೀಡಲು ಕೇಂದ್ರ ಸಿದ್ಧ      ಆಹಾರ ಸಚಿವ ಪ್ರಹ್ಲಾದ್ ಜೋಶಿ ಘೋಷಣೆ Read More »

ರಾಷ್ಟ್ರೀಯ ನ್ಯೂಸ್

ರಾಜ್ಯಗಳ SC, ST ಒಳ ಮೀಸಲಾತಿಗೆ ಅಸ್ತು ಸುಪ್ರೀಂ ಕೋರ್ಟ್ ಮಹತ್ವದ ತೀರ್ಪು

(ನ್ಯೂಸ್ ಕಡಬ)newskadaba.com ನವದೆಹಲಿ, ಆ.01. ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡಗಳಲ್ಲಿಯೇ ಅತ್ಯಂತ ಹಿಂದುಳಿದ ಜಾತಿಗಳಿಗೆ ಒಳ ಮೀಸಲಾತಿ ಕಲ್ಪಿಸುವ ಅಧಿಕಾರ ರಾಜ್ಯಗಳಿಗೆ ಇದೆ ಎಂದು ಸುಪ್ರೀಂ ಕೋರ್ಟ್ ಮಹತ್ವದ ತೀರ್ಪು ನೀಡಿದೆ ಎಂದು ವರದಿ ತಿಳಿಸಿದೆ. ಮುಖ್ಯ ನ್ಯಾಯಮೂರ್ತಿ ಡಿವೈ ಚಂದ್ರಚೂಡ್ ನೇತೃತ್ವದ ಏಳು ನ್ಯಾಯಾಧೀಶರ ಸಾಂವಿಧಾನಿಕ ಪೀಠ, SC, ST ಒಳ ಮೀಸಲಾತಿಗೆ ಒಪ್ಪಿಗೆ ನೀಡಿದೆ. ಹೆಚ್ಚು ಹಿಂದುಳಿದ ಜಾತಿಗಳಿಗೆ ಮೀಸಲಾತಿ ನೀಡುವುದನ್ನು ಖಚಿತಪಡಿಸಿಕೊಳ್ಳಲು ರಾಜ್ಯಗಳು ಎಸ್‌ಸಿ ಮತ್ತು ಎಸ್‌ಟಿಗಳಲ್ಲಿಯೇ ಒಳ ಮೀಸಲಾತಿ ನೀಡಬಹುದು

ರಾಜ್ಯಗಳ SC, ST ಒಳ ಮೀಸಲಾತಿಗೆ ಅಸ್ತು ಸುಪ್ರೀಂ ಕೋರ್ಟ್ ಮಹತ್ವದ ತೀರ್ಪು Read More »

ರಾಷ್ಟ್ರೀಯ ನ್ಯೂಸ್

‘ಪ್ರಕೃತಿ ವಿಕೋಪದ ಬಗ್ಗೆ ಈ ಮೊದಲೇ ಕೇರಳ ಸರ್ಕಾರಕ್ಕೆ ಎಚ್ಚರಿಕೆ ನೀಡಲಾಗಿತ್ತು’ ಕೇಂದ್ರ ಗೃಹ ಸಚಿವ ಅಮಿತ್ ಶಾ

(ನ್ಯೂಸ್ ಕಡಬ)newskadaba.com ನವದೆಹಲಿ, ಆ.01. ಪ್ರಾಕೃತಿಕ ವಿಕೋಪ ಸಂಭವಿಸುವ ಬಗ್ಗೆ ಕೇರಳ ಸರ್ಕಾರಕ್ಕೆ ಈ ಮೊದಲೇ ಎಚ್ಚರಿಕೆ ನೀಡಲಾಗಿತ್ತು. ಎನ್‌ಡಿಆರ್‌ಎಫ್ ತಂಡಗಳು ಕೇರಳಕ್ಕೆ ತೆರಳಿದ್ದವು ಎಂದು ಕೇಂದ್ರ ಗೃಹ ಸಚಿವ ಅಮಿತ್ ಶಾ ತಿಳಿಸಿದರು. ಕೇಂದ್ರ ಸರ್ಕಾರದ ಮುನ್ನೆಚ್ಚರಿಕೆ ವ್ಯವಸ್ಥೆ ಮತ್ತು ದುರಂತದ ಪ್ರತಿಕ್ರಿಯೆ ಬಗ್ಗೆ ವಿಪಕ್ಷಗಳು ಟೀಕಿಸಿದ ಹಿನ್ನೆಲೆ, ರಾಜ್ಯ ಸಭೆಯಲ್ಲಿ ಉತ್ತರಿಸಿದ ಅವರು, ಮುಂಚಿತವಾಗಿ ನೀಡಿದ್ದ ಎಚ್ಚರಿಕೆಗೆ ಕೇರಳ ಸರ್ಕಾರ ಕಿವಿಗೊಡಲಿಲ್ಲ. ಕೊನೆ ಪಕ್ಷ ಎನ್‌ಡಿಆರ್‌ಎಫ್ ತಂಡಗಳು ರಾಜ್ಯಕ್ಕೆ ಬಂದಿರುವುದು ಗೊತ್ತಾದರೂ ಎಚ್ಚೆತ್ತುಕೊಳ್ಳಲಿಲ್ಲ. ಈಗ

‘ಪ್ರಕೃತಿ ವಿಕೋಪದ ಬಗ್ಗೆ ಈ ಮೊದಲೇ ಕೇರಳ ಸರ್ಕಾರಕ್ಕೆ ಎಚ್ಚರಿಕೆ ನೀಡಲಾಗಿತ್ತು’ ಕೇಂದ್ರ ಗೃಹ ಸಚಿವ ಅಮಿತ್ ಶಾ Read More »

ರಾಷ್ಟ್ರೀಯ ನ್ಯೂಸ್

ಹವಾಮಾನ ವೈಪರೀತ್ಯ ವಯನಾಡು ಭೇಟಿ ಮುಂದೂಡಿದ ರಾಹುಲ್, ಪ್ರಿಯಾಂಕಾ

(ನ್ಯೂಸ್ ಕಡಬ)newskadaba.com ನವದೆಹಲಿ, ಜು.31. ಹವಾಮಾನ ವೈಪರೀತ್ಯದಿಂದಾಗಿ ಭೂಕುಸಿತ ಪೀಡಿತ ವಯನಾಡು ಭೇಟಿಯನ್ನು ಲೋಕಸಭೆಯ ವಿಪಕ್ಷ ನಾಯಕ ರಾಹುಲ್ ಗಾಂಧಿ ಮತ್ತು ಕಾಂಗ್ರೆಸ್ ಪ್ರಧಾನ ಕಾರ್ಯದರ್ಶಿ ಪ್ರಿಯಾಂಕಾ ಗಾಂಧಿ ವಾದ್ರಾ ಅವರು ಮುಂದೂಡಿದ್ದಾರೆ. ನಿರಂತರವಾಗಿ ಸುರಿಯುತ್ತಿರುವ ಮಳೆ ಮತ್ತು ಪ್ರತಿಕೂಲ ಹವಾಮಾನದಿಂದಾಗಿ ವಯನಾಡಿಗೆ ತೆರಳುವುದು ಕಷ್ಟಕರವಾಗಿದೆ. ಆದಷ್ಟು ಬೇಗ ಜಿಲ್ಲೆಗೆ ಭೇಟಿ ನೀಡುವುದಾಗಿ ಕಾಂಗ್ರೆಸ್ ಮುಖಂಡರು ತಿಳಿಸಿದ್ದಾರೆ. ಆದಷ್ಟು ಬೇಗ ವಯನಾಡಿಗೆ ಭೇಟಿ ನೀಡುತ್ತೇನೆ. ಈ ಮಧ್ಯೆ ನಾವು ಪರಿಸ್ಥಿತಿಯನ್ನು ಸೂಕ್ಷ್ಮವಾಗಿ ಗಮನಿಸುವುದನ್ನು ಮುಂದುವರಿಸುತ್ತೇವೆ ಮತ್ತು ಅಗತ್ಯವಿರುವ

ಹವಾಮಾನ ವೈಪರೀತ್ಯ ವಯನಾಡು ಭೇಟಿ ಮುಂದೂಡಿದ ರಾಹುಲ್, ಪ್ರಿಯಾಂಕಾ Read More »

ರಾಷ್ಟ್ರೀಯ ನ್ಯೂಸ್

ಕೋಚಿಂಗ್ ಸೆಂಟರ್‌ ನಲ್ಲಿ ನಡೆದ ಅವಘಡ ಪ್ರಕರಣ ಮಾಲೀಕ, ನಿರ್ವಾಹಕನಿಗೆ 14 ದಿನ ನ್ಯಾಯಾಂಗ ಬಂಧನ

(ನ್ಯೂಸ್ ಕಡಬ)newskadaba.com ನವದೆಹಲಿ, ಜು.29. ಕೋಚಿಂಗ್ ಸೆಂಟರ್ ನಲ್ಲಿ ಐಎಎಸ್ ಆಕಾಂಕ್ಷಿಗಳ ಸಾವು ಪ್ರಕರಣಕ್ಕೆ ಸಂಬಂಧಿಸಿದಂತೆ ಕೋಚಿಂಗ್ ಸೆಂಟರ್‌ನ ಮಾಲೀಕ ಹಾಗೂ ನಿರ್ವಾಹಕರಿಗೆ 14 ದಿನಗಳ ನ್ಯಾಯಾಂಗ ಬಂಧನ ವಿಧಿಸಲಾಗಿದೆ. ಕೋಚಿಂಗ್ ಸೆಂಟರ್ ಮಾಲೀಕ ಅಭಿಷೇಕ್ ಗುಪ್ತಾ ಮತ್ತು ನಿರ್ವಾಹಕ ದೇಶಪಾಲ್ ಸಿಂಗ್ ಅವರನ್ನು ದೆಹಲಿಯ ಮ್ಯಾಜಿಸ್ಟ್ರಿಯಲ್ ನ್ಯಾಯಾಲಯದ ಮುಂದೆ ಹಾಜರುಪಡಿಸಲಾಗಿತ್ತು. ಇವರಿಬ್ಬರಿಗೂ ನ್ಯಾಯಾಂಗ ಬಂಧನ ವಿಧಿಸಿ ನ್ಯಾಯಾಲಯವು ಆದೇಶ ಹೊರಡಿಸಿದೆ.

ಕೋಚಿಂಗ್ ಸೆಂಟರ್‌ ನಲ್ಲಿ ನಡೆದ ಅವಘಡ ಪ್ರಕರಣ ಮಾಲೀಕ, ನಿರ್ವಾಹಕನಿಗೆ 14 ದಿನ ನ್ಯಾಯಾಂಗ ಬಂಧನ Read More »

ಕ್ರೈಮ್ ನ್ಯೂಸ್, ರಾಷ್ಟ್ರೀಯ ನ್ಯೂಸ್

2024-25ನೇ ಹಣಕಾಸು ವರ್ಷದ ಮೋದಿ 3.0 ಸರ್ಕಾರದ ಬಜೆಟ್ ಮಂಡನೆ

(ನ್ಯೂಸ್ ಕಡಬ)newskadaba.com ನವದೆಹಲಿ, ಜು,23. ಕೇಂದ್ರ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಅವರು ಲೋಕಸಭೆಯಲ್ಲಿ 2024-25ನೇ ಹಣಕಾಸು ವರ್ಷದ ಮೋದಿ 3.0 ಸರ್ಕಾರದ ಪೂರ್ಣ ಪ್ರಮಾಣದ ಬಜೆಟ್ ಮಂಡನೆ ಮಾಡಿದ್ದಾರೆ ಎಂದು ವರದಿಯಾಗಿದೆ. ಕಳೆದ ಫೆಬ್ರುವರಿಯಲ್ಲಿ ನಡೆದ ಮಧ್ಯಂತರ ಬಜೆಟ್ ನ್ನೂ ಸೇರಿ ನಿರ್ಮಲಾ ಸೀತಾರಾಮನ್ ಅವರು ಸತತ ಏಳನೇ ಬಾರಿಗೆ ಮಂಡಿಸುತ್ತಿರುವ ಬಜೆಟ್ ಇದಾಗಿದ್ದು, ಎಲ್ಲಾ ವಿಭಾಗಗಳಲ್ಲಿ ತೆರಿಗೆದಾರರಿಗೆ ಲಾಭದಾಯಕವಾಗುವಂತೆ ಆದಾಯ ತೆರಿಗೆ ರಚನೆಯಲ್ಲಿನ ಬದಲಾವಣೆಗಳ ಮೇಲೆ ಮತ್ತು ಭಾರತದಲ್ಲಿ ಸುಲಭವಾಗಿ ವ್ಯಾಪಾರ ಮಾಡುವುದನ್ನು ಸುಧಾರಿಸುವ ಕುರಿತು

2024-25ನೇ ಹಣಕಾಸು ವರ್ಷದ ಮೋದಿ 3.0 ಸರ್ಕಾರದ ಬಜೆಟ್ ಮಂಡನೆ Read More »

ರಾಷ್ಟ್ರೀಯ ನ್ಯೂಸ್
Scroll to Top