ಹೆಚ್ಚುತ್ತಿದೆ ಚರ್ಮಗಂಟು ರೋಗದ ಹಾವಳಿ ➤ ರಾಜ್ಯ ರಾಜಧಾನಿಯಲ್ಲಿ 21 ಸಾವಿರ ಜಾನುವಾರುಗಳು ಬಲಿ

(ನ್ಯೂಸ್ ಕಡಬ) newskadaba.com ಬೆಂಗಳೂರು, ಡಿ. 21. ರಾಜ್ಯದಲ್ಲಿ  ಚರ್ಮಗಂಟು ರೋಗದಿಂದ ಸುಮಾರು 21,305 ಜಾನುವಾರುಗಳು ಮೃತಪಟ್ಟಿವೆ ಎಂದು ತಿಳಿದು ಬಂದಿದೆ. ರಾಜ್ಯದಲ್ಲಿ ಸುಮಾರು 230 ತಾಲೂಕುಗಳಲ್ಲಿ ಈವರೆಗೆ 2,37,194 ಜಾನುವಾರುಗಳಿಗೆ ಚರ್ಮಗಂಟು ರೋಗ ಬಾಧಿಸಿವೆ. ಇದರ ಪೈಕಿ 1.64 ಲಕ್ಷ ಜಾನುವಾರುಗಳು ಚೇತರಿಸಿಕೊಂಡಿವೆ ಎನ್ನಲಾಗಿದೆ. ಇನ್ನುಳಿದ ಜಾನುವಾರುಗಳಿಗೆ ಸರಕಾರದಿಂದ ಸೂಕ್ತ ಚಿಕಿತ್ಸೆ ನೀಡಲಾಗುತ್ತಿದೆ. ಮೃತಪಟ್ಟ ಜಾನುವಾರುಗಳ ಮಾಲಕರಿಗೆ ಈಗಾಗಲೇ ಮುಖ್ಯಮಂತ್ರಿಗಳು 37 ಕೋಟಿ ರೂ ಪರಿಹಾರ ಧನ ಬಿಡುಗಡೆ ಮಾಡಿದ್ದಾರೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.

ಹೆಚ್ಚುತ್ತಿದೆ ಚರ್ಮಗಂಟು ರೋಗದ ಹಾವಳಿ ➤ ರಾಜ್ಯ ರಾಜಧಾನಿಯಲ್ಲಿ 21 ಸಾವಿರ ಜಾನುವಾರುಗಳು ಬಲಿ Read More »

ಕರ್ನಾಟಕ, ಬ್ರೇಕಿಂಗ್ ನ್ಯೂಸ್