News Kadaba

Crime

ನೇಣು ಬಿಗಿದ ಸ್ಥಿತಿಯಲ್ಲಿ ಗೃಹಿಣಿಯ ಮೃತದೇಹ ಪತ್ತೆ  ➤ ಆತ್ಮಹತ್ಯೆಯಲ್ಲ, ಕೊಲೆಯೆಂದು ಪೋಷಕರಿಂದ ಆರೋಪ

(ನ್ಯೂಸ್ ಕಡಬ) newskadaba.com ಮಂಡ್ಯ, ಜ. 02. ನೇಣು ಬಿಗಿದ ಸ್ಥಿತಿಯಲ್ಲಿ ಗೃಹಿಣಿಯೋರ್ವರ ಮೃತದೇಹ ಪತ್ತೆಯಾದ ಘಟನೆ ಮಂಡ್ಯದ ಮಳವಳ್ಳಿ ತಾಲೂಕಿನ ಮೇಗಳಾಪುರ ಗ್ರಾಮದಲ್ಲಿ ಸಂಭವಿಸಿದೆ. ಮೃತ ಗೃಹಿಣಿಯನ್ನು ರಮ್ಯ(24) ಎಂದು ಗುರುತಿಸಲಾಗಿದೆ. ರಮ್ಯಾ ರವರು ಐದು ವರ್ಷಗಳ ಹಿಂದೆ ಮೇಗಳಾಪುರದ ಕುಮಾರ್ ಎಂಬವರೊಂದಿಗೆ ವಿವಾಹವಾಗಿದ್ದು, ಮದುವೆ ಸಂದರ್ಭ ಒಂದು ಲಕ್ಷ ರೂ. ನಗದು ಮತ್ತು 150 ಗ್ರಾಂ ಚಿನ್ನಾಭರಣ ವರದಕ್ಷಿಣೆ ಆಗಿ ಕುಮಾರ್ ಪಡೆದಿದ್ದು, ಹೆಚ್ಚಿನ ವರದಕ್ಷಿಣೆ ತರುವಂತೆ ರಮ್ಯಾಗೆ ಕಿರುಕುಳ ನೀಡುತ್ತಿದ್ದ ಎನ್ನಲಾಗಿದೆ. ಇದೀಗ […]

ನೇಣು ಬಿಗಿದ ಸ್ಥಿತಿಯಲ್ಲಿ ಗೃಹಿಣಿಯ ಮೃತದೇಹ ಪತ್ತೆ  ➤ ಆತ್ಮಹತ್ಯೆಯಲ್ಲ, ಕೊಲೆಯೆಂದು ಪೋಷಕರಿಂದ ಆರೋಪ Read More »

ಕರ್ನಾಟಕ, ಕ್ರೈಮ್ ನ್ಯೂಸ್

ಖಾಸಗಿ ಬಸ್ ಡಿಕ್ಕಿಯಾಗಿ ಬಾಲಕ ಮೃತ್ಯು..!           

(ನ್ಯೂಸ್ ಕಡಬ) newskadaba.com ಕಾಸರಗೋಡು, ಜ. 02. ನಡೆದುಕೊಂಡು ಹೋಗುತ್ತಿದ್ದ ವೇಳೆ ಖಾಸಗಿ ಬಸ್ ಡಿಕ್ಕಿಯಾದ ಪರಿಣಾಮ ಬಾಲಕ ಮೃತಪಟ್ಟ ಘಟನೆ ಕಾಸರಗೋಡಿನ ಚೆರ್ಕಳದಲ್ಲಿ ನಡೆದಿದೆ. ಮೃತ ಬಾಲಕನನ್ನು ಆಶಿಕ್ ಮತ್ತು ಝುಬೈದಾ ದಂಪತಿ ಪುತ್ರ ಅಬ್ದುಲ್ ವಾಹಿದ್ (3) ಎಂದು ಗುರುತಿಸಲಾಗಿದೆ. ಚೆರ್ಕಳ ಬಸ್ ನಿಲ್ದಾಣದಲ್ಲಿ ಬಸ್ ಹಿಂದಕ್ಕೆ ಚಲಿಸುವಾಗ ಈ ಘಟನೆ ಸಂಭವಿಸಿದೆನ್ನಲಾಗಿದೆ. ಬಸ್ ಡಿಕ್ಕಿಯಾದ ವೇಳೆ ಮಗುವಿನ ಜೊತೆಗಿದ್ದ ತಾಯಿಯು ಗಾಯಗೊಂಡಿದ್ದಾರೆ ಎಂದು ತಿಳಿದುಬಂದಿದೆ.  

ಖಾಸಗಿ ಬಸ್ ಡಿಕ್ಕಿಯಾಗಿ ಬಾಲಕ ಮೃತ್ಯು..!            Read More »

ಕರಾವಳಿ, ಕರ್ನಾಟಕ, ಕ್ರೈಮ್ ನ್ಯೂಸ್

ಮೈಸೂರು-ಬೆಂಗಳೂರು ಎಕ್ಸ್​ಪ್ರೆಸ್ ವೇ’ಗೆ ಒಡೆಯರ್ ಹೆಸರಿಡುವಂತೆ ಕೇಂದ್ರ ಸಚಿವರಿಗೆ ಪತ್ರ  ➤ ಮಾಜಿ ಸಿಎಂ ಎಸ್.ಎಂ.ಕೃಷ್ಣ                                                                           

(ನ್ಯೂಸ್ ಕಡಬ) newskadaba.com  ಬೆಂಗಳೂರು, ಜ. 02. ಮೈಸೂರು-ಬೆಂಗಳೂರು ಎಕ್ಸ್​ಪ್ರೆಸ್ ವೇ ಗೆ ನಾಲ್ವಡಿ ಕೃಷ್ಣರಾಜ ಒಡೆಯರ್ ಅವರ ಹೆಸರಿಡುವಂತೆ ಮಾಜಿ ಸಿಎಂ ಎಸ್.ಎಂ.ಕೃಷ್ಣ ಅವರು, ಕೇಂದ್ರ ಸಚಿವ ನಿತಿನ್ ಗಡ್ಕರಿ ಅವರಿಗೆ ಪತ್ರ ಬರೆದಿದ್ದಾರೆ. ಈ ಕುರಿತು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರಿಗೂ ಎಸ್.ಎಂ.ಕೃಷ್ಣ ಅವರು ಪತ್ರ ಬರೆದಿದ್ದು, ಒಡೆಯರ್ ಹೆಸರು ಇಡುವಂತೆ ಒತ್ತಾಯಿಸಿದ್ದಾರೆ.  ಈ ಹಿಂದೆ ಸಂಸದ ಪ್ರತಾಪ್ ಸಿಂಹ ಅವರು ಇದೇ ಹೆದ್ದಾರಿಗೆ ಕಾವೇರಿ ನದಿ ಹೆಸರು ಇಡುವಂತೆ ನಿತಿನ್ ಗಡ್ಕರಿ ಅವರಿಗೆ

ಮೈಸೂರು-ಬೆಂಗಳೂರು ಎಕ್ಸ್​ಪ್ರೆಸ್ ವೇ’ಗೆ ಒಡೆಯರ್ ಹೆಸರಿಡುವಂತೆ ಕೇಂದ್ರ ಸಚಿವರಿಗೆ ಪತ್ರ  ➤ ಮಾಜಿ ಸಿಎಂ ಎಸ್.ಎಂ.ಕೃಷ್ಣ                                                                            Read More »

ಕರ್ನಾಟಕ

ಪಕ್ಕದ ಕಟ್ಟಡಕ್ಕೆ ಜಿಗಿಯುವಾಗ ಬಿದ್ದು ವ್ಯಕ್ತಿ ಮೃತ್ಯು..!

(ನ್ಯೂಸ್ ಕಡಬ) newskadaba.com ಬೆಂಗಳೂರು, ಜ. 02. ಹೊಸ ವರ್ಷದ ಸಂಭ್ರಮಾಚರಣೆಯಲ್ಲಿ ಗೆಳೆಯನ ಮನೆಯಿಂದ ಬೇರೊಂದು ಕಟ್ಟಡಕ್ಕೆ ಜಿಗಿಯುವ ವೇಳೆ ಕೆಳಗೆ ಬಿದ್ದು ವ್ಯಕ್ತಿಯೋರ್ವ ಮೃತಪಟ್ಟ ಘಟನೆ ಕಾಮಾಕ್ಷಿಪಾಳ್ಯದ ಕೊಟ್ಟಿಗೆಪಾಳ್ಯದಲ್ಲಿ ವರದಿಯಾಗಿದೆ. ಮೃತ ವ್ಯಕ್ತಿಯನ್ನು ಚಂದ್ರಕಾಂತ್ ಪಾತ್ರಾ (37) ಎಂದು ಗುರುತಿಸಲಾಗಿದೆ. ಇವರು ಬ್ಯಾಗ್ ತಯಾರಿಕಾ ಕಾರ್ಖಾನೆಯಲ್ಲಿ ಕೆಲಸ ಮಾಡುತ್ತಿದ್ದರು ಎಂದು ತಿಳಿದುಬಂದಿದೆ. ತನ್ನ ಸ್ನೇಹಿತರೊಂದಿಗೆ ಕೊಟ್ಟಿಗೆಪಾಳ್ಯದ ಬಾಡಿಗೆ ಮನೆಯೊಂದರಲ್ಲಿ ನೆಲೆಸಿದ್ದ  ಪಾತ್ರಾ, ತನ್ನ ಸ್ನೇಹಿತರೊಂದಿಗೆ ಟೆರೇಸ್ ಮೇಲೆ ಹೊಸ ವರ್ಷಾಚರಣೆ ಪಾರ್ಟಿ ಮಾಡುತ್ತಿದ್ದರು. ಈ ವೇಳೆ

ಪಕ್ಕದ ಕಟ್ಟಡಕ್ಕೆ ಜಿಗಿಯುವಾಗ ಬಿದ್ದು ವ್ಯಕ್ತಿ ಮೃತ್ಯು..! Read More »

ಕರ್ನಾಟಕ, ಕ್ರೈಮ್ ನ್ಯೂಸ್

ಹೊಸ ವರ್ಷಾಚರಣೆ ಪಾರ್ಟಿ ವೇಳೆ ಗೆಳೆಯನಿಗೆ ಚೂರಿ ಇರಿತ  ➤ ಆರೋಪಿ ಅರೆಸ್ಟ್                                    

(ನ್ಯೂಸ್ ಕಡಬ) newskadaba.com ಬೆಂಗಳೂರು, ಜ. 02. ಹೊಸ ವರ್ಷಾಚರಣೆಯ ಪಾರ್ಟಿ ವೇಳೆ ಇಬ್ಬರ ನಡುವೆ ಜಗಳ ನಡೆದಿದ್ದು, ಈ ವೇಳೆ ಸ್ನೇಹಿತನೊಬ್ಬ ತನ್ನ ಗೆಳೆಯನಿಗೆ ಚಾಕುವಿನಿಂದ ಇರಿದಿರುವ ಘಟನೆ ಪೀಣ್ಯ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಸಂಭವಿಸಿದೆ. ಗಾಯಾಳುವನ್ನು ಪೀಣ್ಯ 4ನೇ ಬ್ಲಾಕ್ ನಿವಾಸಿ ಪ್ರಶಾಂತ್ ಎ (30) ಎಂದು ಗುರುತಿಸಲಾಗಿದೆ. ಪ್ರಾಣಾಪಾಯದಿಂದ ಪಾರಾಗಿದ್ದಾನೆಂದು ತಿಳಿದುಬಂದಿದೆ. ಚೂರಿಯಿಂದ ಇರಿದ ಪ್ರಶಾಂತ್ (31) ಎಂಬಾತನನ್ನು ಬಂಧನಕ್ಕೊಳಪಡಿಸಿದ್ದಾರೆ ಎನ್ನಲಾಗಿದೆ. ಇಬ್ಬರೂ ಮದ್ಯ ಸೇವಿಸಿದ್ದು, ನಂತರ ಇಬ್ಬರ ನಡುವೆ ಮಾತಿನ ಚಕಮಕಿ

ಹೊಸ ವರ್ಷಾಚರಣೆ ಪಾರ್ಟಿ ವೇಳೆ ಗೆಳೆಯನಿಗೆ ಚೂರಿ ಇರಿತ  ➤ ಆರೋಪಿ ಅರೆಸ್ಟ್                                     Read More »

ಕರ್ನಾಟಕ, ಕ್ರೈಮ್ ನ್ಯೂಸ್

ಬಿಸಿಲಿನ ಬೇಗೆಗೆ ತಂಪು ಪಾನೀಯದ ಇಂಪು ➤ ಡ್ರೈ ಫ್ರೂಟ್ಸ್ ಮಿಲ್ಕ್ ಶೇಕ್ ಮಾಡುವ ವಿಧಾನ 

(ನ್ಯೂಸ್ ಕಡಬ) newskadaba.com ಡಿ. 31. ಡ್ರೈ ಫ್ರೂಟ್ಸ್ ಮಿಲ್ಕ್ ಶೇಕ್ ಮಾಡುವ ವಿಧಾನ ಬೇಕಾಗುವ ಪದಾರ್ಥಗಳು:- ಅಂಜೂರ – 5, ಖರ್ಜೂರ – 2, ವಾಲ್ನಟ್ – 5, ಬಾದಾಮಿ – 5, ಗೋಡಂಬಿ – 10, ಒಣ ದ್ರಾಕ್ಷಿ – 10, ಪಿಸ್ತಾ – 10, ತಣ್ಣಗಿನ ಹಾಲು – 2 ಕಪ್, ವೆನಿಲ್ಲಾ ಎಸೆನ್ಸ್– ಅರ್ಧ ಚಮಚ, ಸಕ್ಕರೆ ಅಥವಾ ಜೇನುತುಪ್ಪ – ರುಚಿಗೆ ತಕ್ಕಷ್ಟು   ಮಾಡುವ ವಿಧಾನ:- ಮೊದಲಿಗೆ ಒಂದು

ಬಿಸಿಲಿನ ಬೇಗೆಗೆ ತಂಪು ಪಾನೀಯದ ಇಂಪು ➤ ಡ್ರೈ ಫ್ರೂಟ್ಸ್ ಮಿಲ್ಕ್ ಶೇಕ್ ಮಾಡುವ ವಿಧಾನ  Read More »

ಅಡುಗೆ, ಕರಾವಳಿ

ಕರ್ನಾಟಕದಲ್ಲಿ ಮೊಟ್ಟಮೊದಲ ಆನೆಗಳ ಆರೈಕೆ ಕೇಂದ್ರ ಆರಂಭ    

(ನ್ಯೂಸ್ ಕಡಬ) newskadaba.com ಬೆಂಗಳೂರು, ಡಿ. 31. ಕೋಲಾರ ಸಮೀಪದ ಕಾಜಿಕಲ್ಲಹಳ್ಳಿ ಗ್ರಾಮದಲ್ಲಿ ರಾಜ್ಯದ ಮೊಟ್ಟಮೊದಲ ಆನೆಗಳ ಆರೈಕೆ ಕೇಂದ್ರವನ್ನು ಆರಂಭಿಸಲಾಗಿದ್ದು, ಶೀಘ್ರದಲ್ಲಿಯೇ ಪ್ರವಾಸಿಗರ ಭೇಟಿಗೆ ಅವಕಾಶ ನೀಡಲಾಗುತ್ತದೆ ಎಂದು ತಿಳಿದುಬಂದಿದೆ. ಲಕ್ಷ್ಮೀಸಾಗರ ಮೀಸಲು ಅರಣ್ಯದಲ್ಲಿ 25 ಎಕರೆ ಪ್ರದೇಶದಲ್ಲಿ ಆನೆಗಳ ಆರೈಕ ಕೇಂದ್ರವನ್ನು ಸ್ಥಾಪಿಸಲಾಗಿದ್ದು, ಪ್ರಸ್ತುತ ಈ ಕೇಂದ್ರದಲ್ಲಿ ಸ್ಥೂಲಕಾಯ, ಮಧುಮೇಹ ಮತ್ತು ಗಾಯಗಳಿಗಾಗಿ ನಾಲ್ಕು ಆನೆಗಳು ಚಿಕಿತ್ಸೆ ಪಡೆದುಕೊಳ್ಳುತ್ತಿವೆ. ಆನೆಗಳ ಆರೈಕೆಗೆ ಕೇಂದ್ರ ಆರಂಭಿಸಿರುವ ಸರ್ಕಾರ ಮುಂದಿನ ದಿನಗಳಲ್ಲಿ ಈ ಕೇಂದ್ರಕ್ಕೆ ಪ್ರವಾಸಿಗರ ಭೇಟಿಗೆ

ಕರ್ನಾಟಕದಲ್ಲಿ ಮೊಟ್ಟಮೊದಲ ಆನೆಗಳ ಆರೈಕೆ ಕೇಂದ್ರ ಆರಂಭ     Read More »

ಕರ್ನಾಟಕ

ಬ್ರಿಜ್ ಗೆ ಕಾರು ಢಿಕ್ಕಿ ➤ ಇಬ್ಬರು ಮೃತ್ಯು.!

(ನ್ಯೂಸ್ ಕಡಬ) newskadaba.com ಹುಣಸಗಿ, ಡಿ. 31. ಬ್ರಿಜ್‍ಗೆ ಕಾರೊಂದು ಢಿಕ್ಕಿ ಹೊಡೆದ ಪರಿಣಾಮ ಕಾರಿನಲ್ಲಿದ್ದ ಇಬ್ಬರು ಸ್ಥಳದಲ್ಲಿಯೇ ಮೃತಪಟ್ಟ ಘಟನೆ ಹುಣಸಗಿ ಸಮೀಪದ ರಾಜನ್ ಕೊಳ್ಳೂರ್ ಬಳಿ ವರದಿಯಾಗಿದೆ. ಮೃತರನ್ನು ಕಾಮನಟಗಿ ಗ್ರಾಮದ ಮಲ್ಲಿಕಾರ್ಜುನ ಚೆನ್ನಪ್ಪ ಮಡಿವಾಳ (35) ಹಾಗೂ ಬಲಶೆಟ್ಟಿಹಾಳ್ ಗ್ರಾಮದ ಪರಶುರಾಮ ಅಂಬರೀಶ ಚಲವಾದಿ (32) ಎಂದು ಗುರುತಿಸಲಾಗಿದೆ. ಈ ಸಂಬಂಧ ಹುಣಸಗಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ ಎಂದು ತಿಳಿದು ಬಂದಿದೆ.

ಬ್ರಿಜ್ ಗೆ ಕಾರು ಢಿಕ್ಕಿ ➤ ಇಬ್ಬರು ಮೃತ್ಯು.! Read More »

ಕರ್ನಾಟಕ, ಕ್ರೈಮ್ ನ್ಯೂಸ್

ಒಂದೇ ಮನೆಯ ನಾಲ್ವರು ನೀರುಪಾಲು  ➤ ಈಜಿ ದಡ ಸೇರಿದ 15 ವರ್ಷದ ಬಾಲಕಿ  

(ನ್ಯೂಸ್ ಕಡಬ) newskadaba.com ಛತ್ತೀಸ್ ಗಢ, ಡಿ. 31. ನೀರು ತುಂಬಿದ ಕಲ್ಲು ಕ್ವಾರಿಗೆ ಚಾಲಕನ ನಿಯಂತ್ರಣ ತಪ್ಪಿದ ಕಾರೊಂದು ಬಿದ್ದು ಒಂದೇ ಕುಟುಂಬದ ನಾಲ್ವರು ಮೃತಪಟ್ಟ ಘಟನೆ ಛತ್ತೀಸ್ ಘಡದಲ್ಲಿ ಸಂಭವಿಸಿದೆ. ಘಟನೆಯಿಂದ ನಾಲ್ವರು ನೀರಿನಲ್ಲಿ ಮುಳುಗಿ ಮೃತಪಟ್ಟಿದ್ದಾರೆ. 15 ವರ್ಷದ ಬಾಲಕಿಯೋರ್ವಳು ನೀರಿನಿಂದ ಈಜಿ ಬಂದು ದಡ ಸೇರಿದ್ದಾಳೆ ಎಂದು ತಿಳಿದುಬಂದಿದೆ.    

ಒಂದೇ ಮನೆಯ ನಾಲ್ವರು ನೀರುಪಾಲು  ➤ ಈಜಿ ದಡ ಸೇರಿದ 15 ವರ್ಷದ ಬಾಲಕಿ   Read More »

ಕ್ರೈಮ್ ನ್ಯೂಸ್, ರಾಷ್ಟ್ರೀಯ ನ್ಯೂಸ್

ಮಂಗಳೂರು: ಆರ್ಥಿಕ ಸ್ಥಿತಿ ಕುರಿತು ಮನಪಾ ಶ್ವೇತ ಪತ್ರ ಹೊರಡಿಸಲಿ ➤ ವಿಪಕ್ಷ ನಾಯಕ ನವೀನ್ ಡಿಸೋಜ

(ನ್ಯೂಸ್ ಕಡಬ) newskadaba.com ಮಂಗಳೂರು, ಡಿ. 31. ಆರ್ಥಿಕ ಸ್ಥಿತಿಗತಿ ಕುರಿತಂತೆ ಮಂಗಳೂರು ಮಹಾನಗರ ಪಾಲಿಕೆಯು ಶ್ವೇತಪತ್ರ ಹೊರಡಿಸಬೇಕು ಎಂದು ವಿಪಕ್ಷ ನಾಯಕ ನವೀನ್ ಡಿಸೋಜ ಒತ್ತಾಯಿಸಿದ್ದಾರೆ. ಈ ಕುರಿತು ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಸಾಮಾನ್ಯ ಸಭೆಯಲ್ಲಿ 30 ಕೋಟಿ ರೂ. ಗಳ ಬಗ್ಗೆ ಕೆಯುಐಡಿಎಫ್ ಸಿ ಸಾಲಕ್ಕೆ ಮೇಯರ್ ಪೂರ್ವ ಮಂಜೂರಾತಿ ನೀಡಿದ್ದು, ಇದಕ್ಕೆ ಈಗಾಗಲೇ ಆಕ್ಷೇಪ ವ್ಯಕ್ತಪಡಿಸಲಾಗಿದೆ. ಸಣ್ಣ ಪುಟ್ಟ ಕಾಮಗಾರಿಗಳಿಗೆ ಕೆಯುಡಿಎಫ್ ಸಿ ಸಾಲ ಪಡೆಯುವ ದುರ್ಗತಿ ಮಹಾನಗರ ಪಾಲಿಕೆಗೆ ಬಂದಿಲ್ಲ ಎಂದು ಹೇಳಿದರು.

ಮಂಗಳೂರು: ಆರ್ಥಿಕ ಸ್ಥಿತಿ ಕುರಿತು ಮನಪಾ ಶ್ವೇತ ಪತ್ರ ಹೊರಡಿಸಲಿ ➤ ವಿಪಕ್ಷ ನಾಯಕ ನವೀನ್ ಡಿಸೋಜ Read More »

ಕರಾವಳಿ
Scroll to Top