News Kadaba

ತಾಯಿ ಅಂತ್ಯಕ್ರಿಯೆ ನೆರವೇರಿಸಿದ ಪ್ರಧಾನಿ ಮೋದಿ

 (ನ್ಯೂಸ್  ಕಡಬ) newskadaba.com ಹೊಸದಿಲ್ಲಿ, ಡಿ.30.  ಪ್ರಧಾನಿ ನರೇಂದ್ರ ಮೋದಿ ಅವರು ತಮ್ಮ ಕುಟುಂಬ ಸದಸ್ಯರೊಂದಿಗೆ ಗುಜರಾತ್ ನ ಗಾಂಧಿನಗರದ ಸೆಕ್ಟರ್ 30 ರಲ್ಲಿರುವ ಹಿಂದೂ ಸ್ಮಶಾನದಲ್ಲಿ ತಾಯಿ ಹೀರಾಬೆನ್ ಅವರ ಅಂತ್ಯಕ್ರಿಯೆಯನ್ನು ಸಂಪೂರ್ಣ ವಿಧಿವಿಧಾನಗಳ ಪ್ರಕಾರ ನೆರವೇರಿಸಿದರು. ಪ್ರಧಾನಿ ಮೋದಿ ಹಾಗೂ ಅವರ ಕುಟುಂಬಸ್ಥರು ಮಾತ್ರವಲ್ಲದೆ, ಗುಜರಾತ್ ಮುಖ್ಯಮಂತ್ರಿ ಭೊಪೇಂದ್ರ ಪಟೇಲ್ ಕೂಡ ಗಾಂಧಿನಗರದಲ್ಲಿರುವ ಸ್ಮಶಾನದಲ್ಲಿ ಹೀರಾಬೆನ್ ಮೋದಿ ಅವರ ಅಂತ್ಯಕ್ರಿಯೆಯಲ್ಲಿ ಪಾಲ್ಗೊಂಡಿದ್ದರು ಎನ್ನಲಾಗಿದೆ. ಪ್ರಾಧಾನಿಯವರು ಪಶ್ಚಿಮ ಬಂಗಾಳದದಲ್ಲಿ ಇಂದು 7,800 ಕೋಟಿ ರಾಪಾಯಿಗಳ ಅಭಿವೃದ್ಧಿ […]

ತಾಯಿ ಅಂತ್ಯಕ್ರಿಯೆ ನೆರವೇರಿಸಿದ ಪ್ರಧಾನಿ ಮೋದಿ Read More »

ರಾಷ್ಟ್ರೀಯ ನ್ಯೂಸ್

ಬೆಂಗಳೂರು : ಸಾರಿಗೆ ನೌಕರರು 6 ತಿಂಗಳು ಮುಷ್ಕರ ನಡೆಸದಂತೆ ನಿರ್ಬಂಧ ವಿಧಿಸಿದ ರಾಜ್ಯ ಸರಕಾರ

(ನ್ಯೂಸ್  ಕಡಬ) newskadaba.com ಬೆಂಗಳೂರು, ಡಿ.30.  ಕೆಎಸ್ ಆರ್ ಟಿಸಿ (KSRTC) ನೌಕರರು ಮುಂದಿನ 6 ತಿಂಗಳ ಕಾಲ  ಮುಷ್ಕರ ನಡೆಸದಂತೆ ನಿರ್ಬಂಧ ವಿಧಿಸಿ ಕರ್ನಾಟಕದ ಆಗತ್ಯ ಸೇವಾ ನಿರ್ವಾಹಣೆ ಕಾಯ್ದೆ 2013 ರ ಅಡಿ  ರಾಜ್ಯ ಸರಕಾರ ಆದೇಶ ಹೊರಡಿಸಿದೆ. ಇದರ ಪ್ರಕಾರ ಜ.1ರಿಂದ ಜೂನ್ 30ರವರೆಗೆ ಪ್ರತಿಭಟನೆಗಳನ್ನು ನಡೆಸದಂತೆ ಅಧಿಸೂಚನೆ ಹೊರಡಿಸಲಾಗಿದೆ. ವಿವಿಧ ಬೇಡಿಕೆ ಈಡೇರಿಕೆಗೆ ಒತ್ತಾಯಿಸಿ ಸಾರಿಗೆ ನೌಕರರು ಬೆಳಗಾವಿ ಸುವರ್ಣಸೌಧದ ಮುಂದೆ ಅನಿರ್ದಿಷ್ಟಾವಧಿ ಉಪವಾಸ ಸತ್ಯಾಗ್ರಹ ನಡೆಸುತ್ತಿದ್ದರು. ಮುಷ್ಕರ ಮುಂದುವರಿದರೆ ಚುನಾವಣೆ

ಬೆಂಗಳೂರು : ಸಾರಿಗೆ ನೌಕರರು 6 ತಿಂಗಳು ಮುಷ್ಕರ ನಡೆಸದಂತೆ ನಿರ್ಬಂಧ ವಿಧಿಸಿದ ರಾಜ್ಯ ಸರಕಾರ Read More »

ಕರ್ನಾಟಕ

ಪಾರ್ಸೆಲ್ ಬಂದಿದ್ದ ಮಿಕ್ಸಿ ಸ್ಫೋಟ ಪ್ರಕರಣ ➤ ಆರೋಪಿ ಬಂಧನ

(ನ್ಯೂಸ್ ಕಡಬ) newskadaba.com ಹಾಸನ, ಡಿ. 30. ಇಲ್ಲಿನ ಡಿಟಿಡಿಸಿ ಕೊರಿಯರ್‌ ಕಚೇರಿಯಲ್ಲಿ ಮಿಕ್ಸಿ ಸ್ಫೋಟಗೊಂಡ ಪ್ರಕರಣಕ್ಕೆ ಸಂಬಂಧಿಸಿದ ಆರೋಪಿಯನ್ನು ಬೆಂಗಳೂರು ಪೊಲೀಸರು ಬಂಧಿಸಿರುವ ಘಟನೆ ಹಾಸನದಲ್ಲಿ ವರದಿಯಾಗಿದೆ. ಬಂಧಿತನನ್ನು ಅನೂಪ್‌ ಕುಮಾರ್‌ ಎಂದು ಗುರುತಿಸಲಾಗಿದೆ. ಈತ ತನ್ನ ಪ್ರೀತಿಗೆ ಸಹಕರಿಸದ ಮಹಿಳೆಯ ಮೇಲೆ ದ್ವೇಷ ಸಾಧಿಸಲು ಆರಂಭಿಸಿ, ಆಕೆಯನ್ನು ಕೊಲೆ ಮಾಡುವ ಉದ್ದೇಶದಿಂದ ಮಿಕ್ಸಿಗೆ ಡಿಟೋನೇಟರ್‌ ಅಳವಡಿಸಿ ಕೊರಿಯರ್‌ ಮೂಲಕ ಕಳುಹಿಸಿದ್ದ ಎನ್ನಲಾಗಿದೆ.

ಪಾರ್ಸೆಲ್ ಬಂದಿದ್ದ ಮಿಕ್ಸಿ ಸ್ಫೋಟ ಪ್ರಕರಣ ➤ ಆರೋಪಿ ಬಂಧನ Read More »

ಕರ್ನಾಟಕ, ಕ್ರೈಮ್ ನ್ಯೂಸ್

ಉಡುಪಿ: ಬೈಕ್ ಗೆ ಲಾರಿ ಢಿಕ್ಕಿ ➤ ಸಬ್ ಇನ್ಸ್ ಪೆಕ್ಟರ್ ಮೃತ್ಯು.!

(ನ್ಯೂಸ್  ಕಡಬ) newskadaba.com ಉಡುಪಿ, ಡಿ. 30. ಲಾರಿಯೊಂದು ಬೈಕ್ ಗೆ ಢಿಕ್ಕಿ ಹೊಡೆದ ಪರಿಣಾಮ ಮಂಗಳೂರು ಅಬಕಾರಿ ಇಲಾಖೆಯ ಸಬ್ ಇನ್ ಸ್ಪೆಕ್ಟರ್ ಮೃತಪಟ್ಟ ಘಟನೆ ಉಡುಪಿಯ ಹೊರ ವಲಯದ ಅಂಬಾಗಿನಲ್ಲಿ ವರದಿಯಾಗಿದೆ. ಮೃತಪಟ್ಟವರನ್ನು ಬ್ರಹ್ಮಾವರದ ಉಳ್ಳೂರಿನ ನಿವಾಸಿ ಅಬಕಾರಿ ಇನ್ ಸ್ಪೆಕ್ಟರ್ ಶಂಕರ್ (53) ಎಂದು ಗುರುತಿಲಾಗಿದೆ. ಇವರು ಮಂಗಳೂರು ಅಬಕಾರಿ ಇಲಾಖೆಯಲ್ಲಿ ಕರ್ತವ್ಯ ಮುಗಿಸಿ ತಮ್ಮ ಬೈಕ್ ನಲ್ಲಿ ಉಳ್ಳೂರು ಕಡೆ ಹೋಗುತ್ತಿದ್ದ ವೇಳೆ ಎದುರಿನಿಂದ ಬಂದ ಲಾರಿ ಢಿಕ್ಕಿ ಹೊಡೆದು ಈ

ಉಡುಪಿ: ಬೈಕ್ ಗೆ ಲಾರಿ ಢಿಕ್ಕಿ ➤ ಸಬ್ ಇನ್ಸ್ ಪೆಕ್ಟರ್ ಮೃತ್ಯು.! Read More »

ಕರ್ನಾಟಕ, ಕ್ರೈಮ್ ನ್ಯೂಸ್

ಸುಬ್ರಹ್ಮಣ್ಯ: ಗರ್ಭಧರಿಸಿದ ಅಪ್ರಾಪ್ತ ಬಾಲಕಿ ➤ ಆಟೋ ಚಾಲಕನ ಬಂಧನ

(ನ್ಯೂಸ್  ಕಡಬ) newskadaba.com ಸುಬ್ರಹ್ಮಣ್ಯ, ಡಿ. 30. ಅಪ್ರಾಪ್ತ ಬಾಲಕಿಯ ಮೇಲೆ ಅತ್ಯಾಚಾರ ನಡೆಸಿ ಆಕೆ ಗರ್ಭವತಿಯಾಗಲು ಕಾರಣನಾಗಿದ್ದಾನೆಂಬ ಆರೋಪದಡಿಯಲ್ಲಿ ಆಟೋ ಚಾಲಕನೋರ್ವನನ್ನು ಪೊಲೀಸರು ಬಂಧಿಸಿದ ಘಟನೆ ಸುಬ್ರಹ್ಮಣ್ಯದಲ್ಲಿ ನಡೆದಿದೆ. ಬಂಧಿತನನ್ನು ಯೇನೆಕಲ್ಲಿನ ಆಟೋ ಚಾಲಕ ಜೀವನ್ ಎಂದು ಗುರುತಿಸಲಾಗಿದೆ. ಈ ಬಗ್ಗೆ ಸುಬ್ರಹ್ಮಣ್ಯ ಪೋಲೀಸ್ ಠಾಣೆಯಲ್ಲಿ ಪೋಕ್ಸೋ ಕೇಸ್ ದಾಖಲಾದ ಹಿನ್ನೆಲೆ ಪ್ರಕರಣಕ್ಕೆ ಸಂಬಂಧಿಸಿ ಆರೋಪಿಯನ್ನು ನ್ಯಾಯಾಂಗ ಬಂಧನಕ್ಕೆ ಒಳಪಡಿಸಲಾಗಿದೆ.

ಸುಬ್ರಹ್ಮಣ್ಯ: ಗರ್ಭಧರಿಸಿದ ಅಪ್ರಾಪ್ತ ಬಾಲಕಿ ➤ ಆಟೋ ಚಾಲಕನ ಬಂಧನ Read More »

ಕರಾವಳಿ, ಕ್ರೈಮ್ ನ್ಯೂಸ್

ಪುತ್ತೂರು: ಕೃಷಿ ಜಾಗಕ್ಕೆ ಪ್ರವೇಶಿಸಿ ಹಲ್ಲೆ ಆರೋಪ ➤ ಮಹಿಳೆ ಆಸ್ಪತ್ರೆಗೆ ದಾಖಲು

(ನ್ಯೂಸ್ ಕಡಬ) newskadaba.com ಪುತ್ತೂರು, ಡಿ. 28. ಕೃಷಿ ಜಾಗಕ್ಕೆ ಅಕ್ರಮವಾಗಿ ಪ್ರವೇಶ ಮಾಡಿ ಹಲ್ಲೆ ನಡೆಸಿ ಜೀವ ಬೆದರಿಕೆಯೊಡ್ಡಿರುವುದಾಗಿ ಆರೋಪಿಸಿ ಮಹಿಳೆಯೊಬ್ಬರು ಆಸ್ಪತ್ರೆಗೆ ದಾಖಲಾದ ಘಟನೆ ಪುತ್ತೂರಿನಲ್ಲಿ ನಡೆದಿದೆ. ಗಾಯಗೊಂಡವರನ್ನು ಆಶಾಎಂದು ಗುರುತಿಸಲಾಗಿದೆ. ಅರುಣ್ ಕುಮಾರ್ ರೈ ಮತ್ತು ಕೆಲಸಗಾರರಾದ ವಿನಯ್ ಮತ್ತು ಸುಂದರರವರು ಅಕ್ರಮವಾಗಿ ತಂತಿ ಬೀಲಿ ಹಾಕುತ್ತಿದ್ದು, ಈ ಕುರಿತು ಪ್ರಶ್ನಿಸಿದಾಗ ನನಗೆ ಹಲ್ಲೆ ನಡೆಸಿ, ಅವಾಚ್ಯ ಶಬ್ದಗಳಿಂದ ನಿಂಧಿಸಿ ಮಾನಭಂಗಕ್ಕೆ ಯತ್ನಿಸಿದ್ದಾರಲ್ಲದೆ ಕೊಲೆ ಬೆದರಿಕೆಯೊಡ್ಡಿದ್ದಾರೆ ಎಂದು ಮಹಿಳೆ ಆರೋಪಿಸಿದ್ದಾರೆ. ಈ ಬಗ್ಗೆ

ಪುತ್ತೂರು: ಕೃಷಿ ಜಾಗಕ್ಕೆ ಪ್ರವೇಶಿಸಿ ಹಲ್ಲೆ ಆರೋಪ ➤ ಮಹಿಳೆ ಆಸ್ಪತ್ರೆಗೆ ದಾಖಲು Read More »

ಕರಾವಳಿ, ಕರ್ನಾಟಕ, ಕ್ರೈಮ್ ನ್ಯೂಸ್

ಒಂದೇ ವರ್ಷದಲ್ಲಿ ನೂರಕ್ಕೂ ಹೆಚ್ಚು ಪೊಲೀಸ್ ಠಾಣೆಗಳ ನಿರ್ಮಾಣ ➤ ಸಿಎಂ ಬೊಮ್ಮಾಯಿ

(ನ್ಯೂಸ್ ಕಡಬ) newskadaba.com ಬೆಳಗಾವಿ, ಡಿ. 28. ರಾಜ್ಯದಲ್ಲಿ ಒಂದೇ ವರ್ಷದಲ್ಲಿ ನೂರಕ್ಕೂ ಹೆಚ್ಚು ಪೊಲೀಸ್ ಠಾಣೆಗಳನ್ನು ನಿರ್ಮಾಣ ಮಾಡಲಾಗುತ್ತಿದೆ ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ತಿಳಿಸಿದರು. ಬೆಳಗಾವಿ ಪೊಲೀಸ್  ಆಯುಕ್ತರ ನೂತನ ಕಚೇರಿ ಉದ್ಘಾಟನೆಯನ್ನು ನೆರವೇರಿಸಿ ಮಾತನಾಡಿದ ಅವರು, ಪೊಲೀಸ್ ಗೃಹ ಮಂಡಳಿಯಿಂದ ರಾಜ್ಯಾದ್ಯಂತ ಒಳ್ಳೆಯ ಕೆಲಸ ಆಗುತ್ತಿದೆ. ‌ಆದರಿಂದ ರಾಜ್ಯದಲ್ಲಿ ಹೊಸ 2500 ಪೊಲೀಸ್ ಠಾಣೆಗಳನ್ನು ನಿರ್ಮಾಣ ಮಾಡುತ್ತಿದ್ದು, ಈಗಾಗಲೇ 16 ಪೊಲೀಸ್ ಠಾಣೆ ನಿರ್ಮಾಣದ ಹಂತದಲ್ಲಿವೆ, ಹಾಗೂ ಸುಮಾರು 80 ಕೋಟಿ ರೂ.ಗಳ

ಒಂದೇ ವರ್ಷದಲ್ಲಿ ನೂರಕ್ಕೂ ಹೆಚ್ಚು ಪೊಲೀಸ್ ಠಾಣೆಗಳ ನಿರ್ಮಾಣ ➤ ಸಿಎಂ ಬೊಮ್ಮಾಯಿ Read More »

ಕರ್ನಾಟಕ

ಮನೆಗೆ ಬೆಂಕಿ ➤ ಒಂದೇ ಕುಟುಂಬದ ಐವರು ಸಜೀವ ದಹನ

(ನ್ಯೂಸ್ ಕಡಬ) newskadaba.com ಉತ್ತರ ಪ್ರದೇಶ, ಡಿ. 28. ಗುಡಿಸಲಿಗೆ ಬೆಂಕಿ ಬಿದ್ದ ಪರಿಣಾಮ ಒಂದೇ ಕುಟುಂಬದ 5 ಮಂದಿ ಜೀವಂತವಾಗಿ ಸುಟ್ಟು ಭಸ್ಮವಾದ ದುರ್ಘಟನೆ ಮೌ ಜಿಲ್ಲೆಯ ಶಾಹ್ಪುರ್ ಗ್ರಾಮದಿಂದ ವರದಿಯಾಗಿದೆ. ಶಾಹ್ಪುರ್ ಗ್ರಾಮದ ಗದ್ದಿದೇವಿ ಮತ್ತು ಅವರ ಮೂವರು ಮಕ್ಕಳು ಹಾಗೂ ಮತ್ತೋರ್ವ ವ್ಯಕ್ತಿ ಸೇರಿ ಒಟ್ಟು 5 ಮಂದಿ ಮೃತಪಟ್ಟಿದ್ದಾರೆ ಎಂದು ತಿಳಿದು ಬಂದಿದೆ. ಮನೆಯ ಸ್ಟವ್ ನಿಂದ ಬೆಂಕಿ ಹೊತ್ತುಕೊಂಡು ಇಡೀ ಗುಡಿಸಲಿಗೆ ಬೆಂಕಿ ತಗುಲಿದ ಪರಿಣಾಮ ಮನೆಯಲ್ಲಿದ್ದವರು ಹೊರಗೆ ಬರಲಾಗದೇ ಜೀವಂತ

ಮನೆಗೆ ಬೆಂಕಿ ➤ ಒಂದೇ ಕುಟುಂಬದ ಐವರು ಸಜೀವ ದಹನ Read More »

ಕ್ರೈಮ್ ನ್ಯೂಸ್, ರಾಷ್ಟ್ರೀಯ ನ್ಯೂಸ್

ಕಂಠಪೂರ್ತಿ ಕುಡಿದು ಶಾಲೆಯ ಜಗಲಿಯಲ್ಲಿ ಮಲಗಿದ ಕುಡುಕ ಅಧ್ಯಾಪಕ ➤ ಅಮಾನತಿಗೆ ಆಗ್ರಹ

(ನ್ಯೂಸ್ ಕಡಬ) newskadaba.com ಪೆರ್ಡೂರು, ಡಿ. 28. ಕಂಠಪೂರ್ತಿ ಕುಡಿದ ಅಧ್ಯಾಪಕನೋರ್ವ ಶಾಲೆಯ ಜಗಲಿಯಲ್ಲಿ ಮಲಗಿರುವ ಘಟನೆ ಪೆರ್ಡೂರು ಅಲಂಗಾರು ಸರ್ಕಾರಿ ಕಿರಿಯ ಪ್ರಾಥಮಿಕ ಶಾಲೆಯಲ್ಲಿ ನಡೆದಿದೆ. ಕಂಠಪೂರ್ತಿ ಕುಡಿದು ಜಗಲಿಯಲ್ಲಿ ಮಲಗಿದ ಶಿಕ್ಷಕ ಕೃಷ್ಣಮೂರ್ತಿ ಎಂದು ತಿಳಿದು ಬಂದಿದೆ. ಕೃಷ್ಣಮೂರ್ತಿ, ಕಂಠಪೂರ್ತಿ ಮದ್ಯ ಸೇವಿಸಿ ಶಾಲೆಯ ಜಗಲಿಯಲ್ಲಿ ಮಲಗಿದ್ದರೆ, ಪುಟ್ಟ ಪುಟ್ಟ ಮಕ್ಕಳು ಶಾಲೆಯ ಒಳಗೆ ಓದು ಬರಹದಲ್ಲಿ ತೊಡಗಿದ್ದರು. ಸ್ಥಳಕ್ಕೆ ಗ್ರಾಮ ಪಂಚಾಯತ್ ಜನಪ್ರತಿನಿಧಿಗಳು ಭೇಟಿ ನೀಡಿದ್ದು, ಅಧ್ಯಾಪಕನ ವಿರುದ್ಧ ಸೂಕ್ತ ಕ್ರಮ ವಹಿಸುವ

ಕಂಠಪೂರ್ತಿ ಕುಡಿದು ಶಾಲೆಯ ಜಗಲಿಯಲ್ಲಿ ಮಲಗಿದ ಕುಡುಕ ಅಧ್ಯಾಪಕ ➤ ಅಮಾನತಿಗೆ ಆಗ್ರಹ Read More »

ಕರ್ನಾಟಕ

ಆರ್.ವಿ ದೇಶಪಾಂಡೆಗೆ 2022ನೇ ಸಾಲಿನ ಅತ್ಯುತ್ತಮ ಶಾಸಕ ಪ್ರಶಸ್ತಿ

(ನ್ಯೂಸ್ ಕಡಬ) newskadaba.com ಬೆಳಗಾವಿ, ಡಿ. 28. ಕಾಂಗ್ರೆಸ್ ನ ಹಿರಿಯ ನಾಯಕ, ಮಾಜಿ ಸಚಿವ ಮತ್ತು ಉತ್ತರ ಕನ್ನಡ ಜಿಲ್ಲೆಯ ಹಳಿಯಾಳ ಕ್ಷೇತ್ರದ ಶಾಸಕರಾದ ಆರ್.ವಿ ದೇಶಪಾಂಡೆ ಅವರು ‘ಅತ್ಯುತ್ತಮ ಶಾಸಕ’ ಎಂಬ ಪ್ರಶಸ್ತಿಗೆ ಪಾತ್ರರಾಗಿದ್ದಾರೆ ಎಂದು ವಿಧಾನಮಂಡಲದ ಅಧಿವೇಶನದ ವೇಳೆ ವಿಧಾನಾಸಭಾ ಸ್ಪೀಕರ್ ವಿಶ್ವೇಶ್ವರ ಹೆಗಡೆ ಕಾಗೇರಿ ಅವರು ಘೋಷಣೆ ಮಾಡಿದ್ದಾರೆ. ಈ ವೇಳೆ ಸ್ಪೀಕರ್ ವಿಶ್ವೇಶ್ವರ ಹೆಗಡೆ ಕಾಗೇರಿ, ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ, ಕಾನೂನು ಸಚಿವ ಮಾಧುಸ್ವಾಮಿ, ವಿರೋಧ ಪಕ್ಷದ ನಾಯಕ ಸಿದ್ದರಾಮಯ್ಯ

ಆರ್.ವಿ ದೇಶಪಾಂಡೆಗೆ 2022ನೇ ಸಾಲಿನ ಅತ್ಯುತ್ತಮ ಶಾಸಕ ಪ್ರಶಸ್ತಿ Read More »

ಕರ್ನಾಟಕ
Scroll to Top