News Kadaba

ಕಾರ್ಕಳ: ಮೂರು ವರ್ಷದ ಗಂಡು ಚಿರತೆಯೊಂದು ಬಾವಿಗೆ ಬಿದ್ದು ಮೃತ್ಯು

(ನ್ಯೂಸ್‌ ಕಡಬ) newskadaba.com,ಜ.22  ಕಾರ್ಕಳ: ತಾಲೂಕಿನ ಬೋಳ ಗ್ರಾಮದ ಮಲಕ್ಯರ್ ಕಡ್ಕನ್ ನಾರಾಯಣ ಶೆಟ್ಟಿ ಎಂಬವರ ತೋಟದ ಬಾವಿಗೆ ಬಿದ್ದು ಚಿರತೆ ಮೃತಪಟ್ಟ ಘಟನೆ ಮಂಗಳವಾರ ತಡರಾತ್ರಿ ಸಂಭವಿಸಿದೆ. ಮೃತಪಟ್ಟ ಚಿರತೆಯು ಸುಮಾರು ಮೂರು ವರ್ಷ ಪ್ರಾಯದ ಗಂಡು ಚಿರತೆ ಎಂದು ಗುರುತಿಸಲಾಗಿದೆ. ಬುಧವಾರ ಬೆಳಗ್ಗೆ ಕುಟುಂಬದ ಸದಸ್ಯರು ನೀರು ಸೇದಲು ಬಾವಿಯ ಬಳಿ ಹೋದಾಗ ಚಿರತೆ ಸತ್ತು ಬಿದ್ದಿರುವುದು ಬೆಳಕಿಗೆ ಬಂದಿದೆ. ಸುದ್ದಿ ತಿಳಿದ ಕೂಡಲೇ ಅರಣ್ಯಾಧಿಕಾರಿ ಹುಕ್ರಪ್ಪ ಗೌಡ ಮತ್ತು ಸಿಬ್ಬಂದಿ ಸ್ಥಳಕ್ಕೆ ಧಾವಿಸಿ […]

ಕಾರ್ಕಳ: ಮೂರು ವರ್ಷದ ಗಂಡು ಚಿರತೆಯೊಂದು ಬಾವಿಗೆ ಬಿದ್ದು ಮೃತ್ಯು Read More »

ಕರಾವಳಿ, ಕರ್ನಾಟಕ, ಬ್ರೇಕಿಂಗ್ ನ್ಯೂಸ್

ಪ್ರಯಾಣಿಕರ ಜೇಬಿಗೆ ಕೆಎಸ್ಆರ್‌ಟಿಸಿ ಕತ್ತರಿ ಟೋಲ್ ವಸೂಲಿಗೂ ಮುನ್ನವೇ ದರ ಏರಿಕೆ

(ನ್ಯೂಸ್‌ ಕಡಬ) newskadaba.com,ಜ.22  ಮಂಗಳೂರು: ಮಂಗಳೂರು- ಕಾಸರಗೋಡು ಮಾರ್ಗದ ಕುಂಬಳೆಯಲ್ಲಿ ಅಧಿಕೃತ ಟೋಲ್ ವಸೂಲಿ ಪ್ರಾರಂಭವಾಗುವ ಮುನ್ನವೇ ಕರ್ನಾಟಕ ಕೆಎಸ್ಸಾರ್ಟಿಸಿ ಬಸ್ ಗಳಲ್ಲಿ ಟಿಕೆಟ್ ದರ ಏರಿಕೆ ಮಾಡಲಾಗಿದೆ. ಮಂಗಳವಾರ ಬೆಳಗ್ಗಿನಿಂದ ಟೋಲ್ ದರ ಒಳಗೊಂಡ ಪರಿಷ್ಕೃತ ಅಧಿಕ ದರ ವಸೂಲಿ ಬಸ್ ಗಳಲ್ಲಿ ಆರಂಭವಾಗಿದೆ. ಇದೇ ವೇಳೆ ಕೇರಳ ಕೆಎಸ್ಸಾರ್ಟಿಸಿ ಬಸ್ ಗಳಲ್ಲಿ ಟಿಕೆಟ್ ದರ ಹೆಚ್ಚಳಗೊಂಡಿಲ್ಲ. ಕುಂಬಳೆಯಿಂದ ಮಂಗಳೂರಿಗೆ 67 ರು. ಇದ್ದದ್ದು ಇದೀಗ 75 ರು. ಆಗಿದ್ದು, ರಾಜ ಹಂಸ ಸಾರಿಗೆಗೆ 80 ರು.

ಪ್ರಯಾಣಿಕರ ಜೇಬಿಗೆ ಕೆಎಸ್ಆರ್‌ಟಿಸಿ ಕತ್ತರಿ ಟೋಲ್ ವಸೂಲಿಗೂ ಮುನ್ನವೇ ದರ ಏರಿಕೆ Read More »

ಕರಾವಳಿ, ಕರ್ನಾಟಕ, ಬ್ರೇಕಿಂಗ್ ನ್ಯೂಸ್

ಇಂದಿನ ರಾಜ್ಯದ ಹವಾಮಾನ ವರದಿ

(ನ್ಯೂಸ್‌ ಕಡಬ) newskadaba.com,ಜ.22: ರಾಜ್ಯದಲ್ಲಿ ಮುಂದಿನ 7 ದಿನಗಳ ಕಾಲ ಒಣಹವೆ ಇರಲಿದ್ದು, ಚಳಿ ಮುಂದುವರೆಯಲಿದೆ. ಬೆಳಗಿನ ಜಾವ ಅಲ್ಲಲ್ಲಿ ಮಂಜಿನ ವಾತಾವರಣ ಇರುವ ಸಾಧ್ಯತೆಯಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.. ಬೆಂಗಳೂರಿನಲ್ಲಿ ಗರಿಷ್ಠ ತಾಪಮಾನ 26 ಡಿಗ್ರಿ ಸೆಲ್ಸಿಯಸ್ ಇರಲಿದ್ದು, ಕನಿಷ್ಠ ತಾಪಮಾನ 15 ಡಿಗ್ರಿ ಸೆಲ್ಸಿಯಸ್ ದಾಖಲಾಗಲಿದೆ. ಚಿಕ್ಕಬಳ್ಳಾಪುರದಲ್ಲಿ ಗರಿಷ್ಠ ತಾಪಮಾನ 26 ಡಿಗ್ರಿ ಸೆಲ್ಸಿಯಸ್ ಇರಲಿದ್ದು, ಕನಿಷ್ಠ ತಾಪಮಾನ 13 ಡಿಗ್ರಿ ಸೆಲ್ಸಿಯಸ್ ದಾಖಲಾಗಲಿದೆ.

ಇಂದಿನ ರಾಜ್ಯದ ಹವಾಮಾನ ವರದಿ Read More »

ಕರಾವಳಿ, ಕರ್ನಾಟಕ, ಬ್ರೇಕಿಂಗ್ ನ್ಯೂಸ್

ಸರ್ಕಾರಿ ಕಚೇರಿ. ಖಾಸಗಿ ಸಂಸ್ಥೆಗಳಿಗೆ ಅಂತರಿಕ ದೂರು ನಿವಾರಣಾ ಸಮಿತಿ ರಚನೆ ಕಡ್ಡಾಯ

(ನ್ಯೂಸ್‌ ಕಡಬ) newskadaba.com,ಜ.21 ಕಲಬುರಗಿ:  ಕೆಲಸದ ಸ್ಥಳದಲ್ಲಿ ಮಹಿಳೆಯರ ಮೇಲಿನ ಲೈಂಗಿಕ ಕಿರುಕುಳ ತಡೆಗಟ್ಟುವಿಕೆ ನಿಷೇಧಿಸುವಿಕೆ, ನಿವಾರಣೆ 2013 ರ ಕಾಯ್ದೆ ಅನ್ವಯ 10 ಕ್ಕಿಂತ ಹೆಚ್ಚು ಸಿಬ್ಬಂದಿಗಳು ಕೆಲಸ ಮಾಡುವ ಸರ್ಕಾರಿ ಕಚೇರಿಗಳಾಗಲಿ ಖಾಸಗಿ ಸಂಸ್ಥೆಗಳಿಗೆ ಆಂತರಿಕ ದೂರು ನಿವಾರಣಾ ಸಮಿತಿಯ ರಚನೆ ಕಡ್ಡಾಯವಾಗಿದೆ ಎಂದು ಹಿರಿಯ ಸಿವಿಲ್ ನ್ಯಾಯಾಧೀಶರಾದ ಜಿಲ್ಲಾ ಕಾನೂನು ಸೇವಾ ಪ್ರಾಧಿಕಾರ ಹಾಗೂ ಸದಸ್ಯ ಕಾರ್ಯದರ್ಶಿಗಳು ಶ್ರೀನಿವಾಸ ನವಲೆ ಅವರು ಹೇಳಿದರು. ಮಂಗಳವಾರ ಜಿಲ್ಲಾ ಪಂಚಾಯತ್ ಸಭಾಂಗಣದಲ್ಲಿ ಜಿಲ್ಲಾಡಳಿತ, ಜಿಲ್ಲಾ ಪಂಚಾಯತ,

ಸರ್ಕಾರಿ ಕಚೇರಿ. ಖಾಸಗಿ ಸಂಸ್ಥೆಗಳಿಗೆ ಅಂತರಿಕ ದೂರು ನಿವಾರಣಾ ಸಮಿತಿ ರಚನೆ ಕಡ್ಡಾಯ Read More »

ಕರ್ನಾಟಕ, ಬ್ರೇಕಿಂಗ್ ನ್ಯೂಸ್

ಮಂಗಳೂರಿನಲ್ಲಿ ಭೀಕರ ಅವಾಂತರ ಸೇತುವೆ ಕುಸಿದು ತೋಡಿನ ಪಾಲಾದ ಲಾರಿ

(ನ್ಯೂಸ್‌ ಕಡಬ) newskadaba.com,ಜ.21 ಸುಳ್ಯ: ಶಿಥಿಲಗೊಂಡಿದ್ದ ಕಿರು ಸೇತುವೆ ಮೇಲೆ ಜಲ್ಲಿ ತುಂಬಿದ ಲಾರಿ ಚಲಿಸಿ ಸೇತುವೆ ಕುಸಿದು ಲಾರಿ ತೋಡಿಗೆ ಬಿದ್ದ ಘಟನೆ ಮಂಡೆಕೋಲು ಗ್ರಾಮದ ಉದ್ದಂತಡ್ಕ ಎಂಬಲ್ಲಿ ಸೋಮವಾರ ಸಂಭವಿಸಿದೆ. ಈ ಘಟನೆಯಲ್ಲಿ ಲಾರಿಯ ಚಾಲಕ ಗಾಯಗೊಂಡಿದ್ದಾರೆ.  ಸುಳ್ಯ ಮಂಡೆಕೋಲು ಗ್ರಾಮದ ಪೇರಾಲು – ಉದ್ದಂತಡ್ಕ – ಮೇನಾಲ ಸಂಪರ್ಕಿಸುವ ರಸ್ತೆಯ ಉದ್ದಂತಡ್ಕ ಎಂಬಲ್ಲಿ ಸಣ್ಣ ಸೇತುವೆ ಕಳೆದ ಮಳೆಗಾಲ ಸಂದರ್ಭ ಮಣ್ಣು ಕುಸಿದು ಶಿಥಿಲಗೊಂಡಿತ್ತು. ಇದರಿಂದ ಸಂಚಾರಕ್ಕೆ ಯೋಗ್ಯವಾಗಿರಲಿಲ್ಲ. ಮಂಡೆಕೋಲು ಗ್ರಾ.ಪಂ. ಕೂಡ

ಮಂಗಳೂರಿನಲ್ಲಿ ಭೀಕರ ಅವಾಂತರ ಸೇತುವೆ ಕುಸಿದು ತೋಡಿನ ಪಾಲಾದ ಲಾರಿ Read More »

ಕರಾವಳಿ, ಕರ್ನಾಟಕ, ಬ್ರೇಕಿಂಗ್ ನ್ಯೂಸ್

ಚಿನ್ನದ ದರದಲ್ಲಿ ಭರ್ಜರಿ ಏರಿಕೆ

(ನ್ಯೂಸ್‌ ಕಡಬ) newskadaba.com,ಜ.21 ಬೆಂಗಳೂರು: ಚಿನ್ನದ ಬೆಲೆಯಲ್ಲಿಂದು ಭಾರೀ ಏರಿಕೆ ಕಂಡು ಬಂದಿದ್ದು, ಬಂಗಾರ ಕೊಳ್ಳುವವರ ಕಣ್ಣಲ್ಲಿ ನೀರು ತರಿಸುವಷ್ಟು ಬೆಲೆ ಹೆಚ್ಚಾಗಿದೆ. ಮಂಗಳವಾರ 22 ಕ್ಯಾರಟ್‌ನ 1 ಗ್ರಾಂ ಚಿನ್ನದ ಬೆಲೆಯಲ್ಲಿ ಬರೋಬ್ಬರಿ 685 ರೂ. ಹೆಚ್ಚಾಗಿದ್ದು, 14,415 ರೂ. ಇದೆ. 24 ಕ್ಯಾರಟ್‌ 1 ಗ್ರಾಂ ಚಿನ್ನದ ದರದಲ್ಲಿ 748 ರೂ. ಹೆಚ್ಚಾಗಿ 15,726 ರೂ. ಆಗಿದೆ. ಇನ್ನು 22 ಕ್ಯಾರಟ್‌ನ 8 ಗ್ರಾಂ ಚಿನ್ನದ ಬೆಲೆ 1,15,320 ರೂ. ಹಾಗೂ 10 ಗ್ರಾಂಗೆ ನೀವು 1,44,150

ಚಿನ್ನದ ದರದಲ್ಲಿ ಭರ್ಜರಿ ಏರಿಕೆ Read More »

ಕರಾವಳಿ, ಕರ್ನಾಟಕ, ಬ್ರೇಕಿಂಗ್ ನ್ಯೂಸ್

ಬಾಹ್ಯಾಕಾಶದ ‘ಧ್ರುವತಾರೆ’ ಸುನೀತಾ ವಿಲಿಯಮ್ಸ್ ನಿವೃತ್ತಿ: 27 ವರ್ಷಗಳ ಅಪ್ರತಿಮ ಪಯಣಕ್ಕೆ ತೆರೆ!

(ನ್ಯೂಸ್‌ ಕಡಬ) newskadaba.com,ಜ.21 ನವದೆಹಲಿ: ಗಗನಯಾತ್ರಿಯಾಗಿ ಯಶಸ್ಸು ಕಂಡಿದ್ದ ಭಾರತೀಯ ಮೂಲದ ಗಗನಯಾನಿ ಸುನಿತಾ ವಿಲಿಯಮ್ಸ್ ನಾಸಾದಿಂದ ನಿವೃತ್ತಿಯಾಗಿದ್ದಾರೆಭೂಮಿಯಿಂದ ಸುಮಾರು 400 ಕಿಲೋಮೀಟರ್ ಎತ್ತರದಲ್ಲಿರುವ ಅಂತಾರಾಷ್ಟ್ರೀಯ ಬಾಹ್ಯಾಕಾಶ ನಿಲ್ದಾಣಕ್ಕೆ ಕೆಲಸದ ನಿಮಿತ್ತ ಹೋಗಿದ್ದ ನಾಸಾ ಗಗನಯಾತ್ರಿಗಳಾದ ಭಾರತೀಯ ಮೂಲದ ಸುನೀತಾ ವಿಲಿಯಮ್ಸ್​ ಮತ್ತು ಬುಚ್​ ವಿಲ್ಮೋರ್​, ಯಾರೂ ನಿರೀಕ್ಷೆ ಮಾಡದಂತೆ ಅಲ್ಲಿಯೇ ಸಿಲುಕಬೇಕಾಯಿತು. ಹೋಗಿದ್ದು ಕೇವಲ ಒಂದು ವಾರದ ಕೆಲಸಕ್ಕಾಗಿ ಆದರೆ 9 ತಿಂಗಳು ಅಲ್ಲಿಯೇ ಸಿಲುಕಿದ್ದರು.ಸುನಿತಾ ವಿಲಿಯಮ್ಸ್ ಅವರು ಡಿಸೆಂಬರ್‌ 27ರಂದು (2025) ನಿವೃತ್ತಿಯಾಗಿದ್ದಾರೆ ಎಂದು ನಾಸಾ

ಬಾಹ್ಯಾಕಾಶದ ‘ಧ್ರುವತಾರೆ’ ಸುನೀತಾ ವಿಲಿಯಮ್ಸ್ ನಿವೃತ್ತಿ: 27 ವರ್ಷಗಳ ಅಪ್ರತಿಮ ಪಯಣಕ್ಕೆ ತೆರೆ! Read More »

ಬ್ರೇಕಿಂಗ್ ನ್ಯೂಸ್, ರಾಷ್ಟ್ರೀಯ ನ್ಯೂಸ್

ಹೊಯಿಗೆ ಬಜಾರ್ ಟೈಲ್ ಫ್ಯಾಕ್ಟರಿಯಲ್ಲಿ ಭಾರಿ ಬೆಂಕಿ ಅಗ್ನಿಶಾಮಕ ದಳದಿಂದ ಹರಸಾಹಸ

(ನ್ಯೂಸ್‌ ಕಡಬ) newskadaba.com,ಜ.21 ಮಂಗಳೂರು:  ಹೊಯಿಗೆ ಬಜಾರ್‌ನಲ್ಲಿರುವ ಎ ಅಲ್ಬುಕರ್ಕ್ & ಸನ್ಸ್ ಟೈಲ್ ಫ್ಯಾಕ್ಟರಿಯಲ್ಲಿ ಮಂಗಳವಾರ ಬೆಂಕಿ ಕಾಣಿಸಿಕೊಂಡಿದ್ದು, ಸುತ್ತಮುತ್ತಲಿನ ಪ್ರದೇಶದಲ್ಲಿ ಆತಂಕ ಎದುರಾಗಿದೆ.ಬೆಳಗಿನ ಜಾವ ಬೆಂಕಿ ಕಾಣಿಸಿಕೊಂಡು ಕಾರ್ಖಾನೆ ಆವರಣವನ್ನು ವೇಗವಾಗಿ ವ್ಯಾಪಿಸಿತು ಎಂದು ವರದಿಯಾಗಿದೆ. ದಟ್ಟ ಹೊಗೆ ಆ ಪ್ರದೇಶವನ್ನು ಆವರಿಸಿದ್ದರೂ, ಅಗ್ನಿಶಾಮಕ ದಳದವರು ಬೆಂಕಿಯನ್ನು ನಿಯಂತ್ರಣಕ್ಕೆ ತರಲು ಶ್ರಮಿಸಿದರು. ಕಾರ್ಖಾನೆ ಆವರಣದಲ್ಲಿ ಟೈಲ್ ಸುಡುವುದಕ್ಕಾಗಿ ಸಂಗ್ರಹಿಸಲಾಗಿದ್ದ ಉರುವಲು ಮತ್ತು ಇತರ ಸಾಮಗ್ರಿಗಳು ಹೆಚ್ಚಿನ ಪ್ರಮಾಣದಲ್ಲಿ ಬೆಂಕಿಗೆ ಆಹುತಿಯಾಗಿ, ಜ್ವಾಲೆಗಳು ಗಾಳಿಯಲ್ಲಿ ಎತ್ತರಕ್ಕೆ

ಹೊಯಿಗೆ ಬಜಾರ್ ಟೈಲ್ ಫ್ಯಾಕ್ಟರಿಯಲ್ಲಿ ಭಾರಿ ಬೆಂಕಿ ಅಗ್ನಿಶಾಮಕ ದಳದಿಂದ ಹರಸಾಹಸ Read More »

ಕರಾವಳಿ, ಕರ್ನಾಟಕ, ಬ್ರೇಕಿಂಗ್ ನ್ಯೂಸ್

ಸುಳ್ಯ : ಪೋಕ್ಸೋ ಪ್ರಕರಣ – ಆರೋಪಿಗೆ 5 ವರ್ಷಗಳ ಕಾರಾಗೃಹ ಶಿಕ್ಷೆ

(ನ್ಯೂಸ್‌ ಕಡಬ) newskadaba.com,ಜ.21 ಸುಳ್ಯ:ಬೆಳ್ಳಾರೆ ಗ್ರಾಮದ ದರ್ಖಾಸು ಪ್ರದೇಶದಲ್ಲಿ ಅಪ್ರಾಪ್ತ ಬಾಲಕಿಗೆ ಲೈಂಗಿಕ ಕಿರುಕುಳ ನೀಡಿದ್ದ ಪ್ರಕರಣದಲ್ಲಿ ಆರೋಪಿಗೆ ಪೋಕ್ಸೋ ವಿಶೇಷ ನ್ಯಾಯಾಲಯ 5 ವರ್ಷಗಳ ಸಾದಾ ಕಾರಾಗೃಹ ಶಿಕ್ಷೆ ವಿಧಿಸಿ ತೀರ್ಪು ನೀಡಿದೆ. ಬೆಳ್ಳಾರೆ ದರ್ಖಾಸು ನಿವಾಸಿ ಎಂ. ಸೆಲ್ವಕುಮಾರ್ ಆರೋಪಿ. ಆರೋಪಿ ಸೆಲ್ವಕುಮಾರ್ ದರ್ಖಾಸು ಪ್ರದೇಶದಲ್ಲಿ ಬಾಡಿಗೆ ಮನೆಯಲ್ಲಿ ವಾಸವಾಗಿದ್ದು, 2020ರ ಏಪ್ರಿಲ್ 1ರಂದು ಅಪ್ರಾಪ್ತ ವಯಸ್ಸಿನ ಬಾಲಕಿಗೆ ಚಾಕಲೇಟ್ ನೀಡುವ ಆಮಿಷವೊಡ್ಡಿ ಲೈಂಗಿಕ ಕಿರುಕುಳ ನೀಡಿದ್ದಾನೆ ಎಂದು ಆರೋಪಿಸಲಾಗಿದೆ. ಈ ಕುರಿತು ಬಾಲಕಿಯ

ಸುಳ್ಯ : ಪೋಕ್ಸೋ ಪ್ರಕರಣ – ಆರೋಪಿಗೆ 5 ವರ್ಷಗಳ ಕಾರಾಗೃಹ ಶಿಕ್ಷೆ Read More »

ಕರಾವಳಿ, ಕರ್ನಾಟಕ, ಬ್ರೇಕಿಂಗ್ ನ್ಯೂಸ್

ಮಂಗಳೂರು: ರಸ್ತೆ ಬದಿಯ ಬೃಹತ್ ಮರ ಧರಾಶಾಹಿ; ದ್ವಿಚಕ್ರ ವಾಹನ ನಜ್ಜುಗುಜ್ಜು!

(ನ್ಯೂಸ್‌ ಕಡಬ) newskadaba.com,ಜ.21 ಮಂಗಳೂರು: ನಗರದ ಪದವಿನಂಗಡಿ ಪ್ರದೇಶದ ಕೊರಗಜ್ಜ ಕಟ್ಟೆ ಮುಂಭಾಗದಲ್ಲಿ ಇಂದು ಆಕಸ್ಮಿಕವಾಗಿ ಬೃಹತ್ ಗಾತ್ರದ ಮರ ನೆಲಕ್ಕುರುಳಿದೆ. ಈ ವೇಳೆ ಸ್ಥಳದಲ್ಲೇ ನಿಲ್ಲಿಸಿದ್ದ ಸ್ಕೂಟರ್ ಮೇಲೆ ಮರ ಬಿದ್ದ ಪರಿಣಾಮ ಸ್ಕೂಟರ್‌ಗೆ ಭಾರೀ ಹಾನಿಯಾಗಿದೆ. ಮರ ಬಿದ್ದ ರಭಸಕ್ಕೆ ಸಮೀಪದಲ್ಲಿದ್ದ ವಿದ್ಯುತ್ ಕಂಬವೂ ಮುರಿದು ಬಿದ್ದಿದೆ. ಸ್ಕೂಟರ್ ಮೇಲೆ ಮರ ಬಿದ್ದ ಪರಿಣಾಮ ಸ್ಕೂಟರ್‌ಗೆ ಭಾರೀ ಹಾನಿಯಾಗಿದೆ. ಅದೃಷ್ಟವಶಾತ್, ಸ್ಕೂಟರ್ ಬಳಿ ಯಾರೂ ಇರದ ಕಾರಣ ಪ್ರಾಣಾಪಾಯ ತಪ್ಪಿದೆ. ಅಲ್ಲದೆ, ಅದೇ ಸಮಯದಲ್ಲಿ

ಮಂಗಳೂರು: ರಸ್ತೆ ಬದಿಯ ಬೃಹತ್ ಮರ ಧರಾಶಾಹಿ; ದ್ವಿಚಕ್ರ ವಾಹನ ನಜ್ಜುಗುಜ್ಜು! Read More »

ಕರಾವಳಿ, ಕರ್ನಾಟಕ, ಬ್ರೇಕಿಂಗ್ ನ್ಯೂಸ್
Scroll to Top