News Kadaba

ಸ್ಕೇಟಿಂಗ್ ಸ್ಪರ್ಧೆ- ಮಂಗಳೂರಿನ ಶಾಮಿಲ್ ಅರ್ಷದ್ ರಾಷ್ಟ್ರಮಟ್ಟಕ್ಕೆ ಆಯ್ಕೆ            

(ನ್ಯೂಸ್ ಕಡಬ) newskadaba.com  ಮಂಗಳೂರು. ಡಿ. 15. ಶಿವಗಂಗಾ ರೋಲರ್ ಸ್ಕೇಟಿಂಗ್ ಕ್ಲಬ್ ನಲ್ಲಿ ಇತ್ತೀಚೆಗೆ ನಡೆದ ಸಿಬಿಎಸ್ಸಿ ಸೌತ್ ಜೋನ್ ಸ್ಕೇಟಿಂಗ್ ಚಾಂಪಿಯನ್ ಶಿಪ್ ನಲ್ಲಿ 16 ವರ್ಷ ಪ್ರಾಯದ ಬಾಲಕರ ಇನ್ ಲೆನ್ ವಿಭಾಗದಲ್ಲಿ ದ.ಕ. ಜಿಲ್ಲೆಯ ಯೆನೆಪೋಯ ಸಿಬಿಎಸ್ಸಿ ಶಾಲೆಯನ್ನು ಪ್ರತಿನಿಧಿಸಿದ್ದ ಮಹಮ್ಮದ್ ಶಾಮಿಲ್ ಅರ್ಷದ್ ರಾಷ್ಟ್ರಮಟ್ಟಕ್ಕೆ ಆಯ್ಕೆಯಾಗಿದ್ದಾರೆ. 500+ ಡೀ ರಿಂಕ್ ರೇಸ್ ನಲ್ಲಿ ಚಿನ್ನದ ಪದಕ, 300 ಮೀಟರ್ ಟಿ ಟಿ ರಿಂಕ್ ರೇಸ್ ನಲ್ಲಿ ಚಿನ್ನದ ಪದಕ ಹಾಗೂ […]

ಸ್ಕೇಟಿಂಗ್ ಸ್ಪರ್ಧೆ- ಮಂಗಳೂರಿನ ಶಾಮಿಲ್ ಅರ್ಷದ್ ರಾಷ್ಟ್ರಮಟ್ಟಕ್ಕೆ ಆಯ್ಕೆ             Read More »

ಕರಾವಳಿ, ಕರ್ನಾಟಕ

ವಿದ್ಯುತ್ ತಂತಿ ತಗುಲಿ ರೈತ ಮೃತ್ಯು  ➤ ಸಾರ್ವಜನಿಕರಿಂದ ಆಕ್ರೋಶ  

(ನ್ಯೂಸ್ ಕಡಬ) newskadaba.com  ಹೊಸಪೇಟೆ, ಡಿ. 15. ಹೊಲದಲ್ಲಿ ತುಂಡಾಗಿ ಬಿದ್ದಿದ್ದ ವಿದ್ಯುತ್ ತಂತಿ ತಗುಲಿ ರೈತರೊಬ್ಬರು ಸ್ಥಳದಲ್ಲೇ ಮೃತಪಟ್ಟ ಘಟನೆ ಹೊಸಪೇಟೆಯಲ್ಲಿ ಸಂಭವಿಸಿದೆ. ಮೃತರನ್ನು ಮೂಲಿಮನಿ ಯರಿಸ್ವಾಮಿ (21)  ಎಂದು ಗುರುತಿಸಲಾಗಿದೆ. ಎಂದಿನಂತೆ ಹೊಲಕ್ಕೆ ತೆರಳಿದಾಗ ಹರಿದು ಬಿದ್ದ ವಿದ್ಯುತ್ ತಂತಿಯನ್ನು ತುಳಿದು ಪರಿಣಾಮ ಈ ಅವಘಡ ಸಂಭವಿಸಿದೆ.  ಜೆಸ್ಕಾಂ ಇಲಾಖೆಯ ನಿರ್ಲಕ್ಷಕ್ಕೆ ರೈತನೋರ್ವ ಪ್ರಾಣ ಕಳೆದುಕೊಳ್ಳುವಂತಾಯಿತು ಎಂದು ಆಕ್ರೋಶ  ವ್ಯಕ್ತಪಡಿಸಿದರು.    

ವಿದ್ಯುತ್ ತಂತಿ ತಗುಲಿ ರೈತ ಮೃತ್ಯು  ➤ ಸಾರ್ವಜನಿಕರಿಂದ ಆಕ್ರೋಶ   Read More »

ಕರ್ನಾಟಕ, ಕ್ರೈಮ್ ನ್ಯೂಸ್

ಕಬ್ಬಿನ ತೂಕದಲ್ಲಿ ವಂಚನೆ  ➤ ಕಾರ್ಖಾನೆಗಳ ಮೇಲೆ ಅಧಿಕಾರಿಗಳಿಂದ ದಾಳಿ  

(ನ್ಯೂಸ್ ಕಡಬ) newskadaba.com ಬೆಂಗಳೂರು, ಡಿ. 15. ರೈತರು ಪೂರೈಸುವ ಕಬ್ಬಿನ ತೂಕವನ್ನು ಕಡಿತಗೊಳಿಸಿ ಕಾರ್ಖಾನೆಗಳು ಕಬ್ಬು ಬೆಳೆಗಾರರನ್ನು ವಂಚಿಸುತ್ತಿವೆ ಎಂಬ ದೂರಿನ ಹಿನ್ನೆಲೆಯಲ್ಲಿ ಅಧಿಕಾರಿಗಳು ರಾಜ್ಯದ 21 ಸಕ್ಕರೆ ಕಾರ್ಖಾನೆಗಳ ಮೇಲೆ ದಾಳಿ ನಡೆಸಿದ ಘಟನೆ ವರದಿಯಾಗಿದೆ. ಮೊಟ್ಟಮೊದಲ ಬಾರಿಗೆ ರಾಜ್ಯ ಸರ್ಕಾರವು ಸಕ್ಕರೆ ಕಾರ್ಖಾನೆಗಳ ಮೇಲೆ ಈ ರೀತಿಯ ಬೃಹತ್ ದಾಳಿ ನಡೆಸಿದೆ. ಕೈಗಾರಿಕೆ ಸಚಿವ ಮುರುಗೇಶ್ ಆರ್ ನಿರಾಣಿ ಅವರ ಒಡೆತನದ ನಿರಾಣಿ ಶುಗರ್ಸ್ ಲಿಮಿಟೆಡ್‌ನ ಕೂಡ ದಾಳಿಗೊಳಗಾದ ಸಂಸ್ಥೆಗಳಲ್ಲಿ ಸೇರಿದೆ. ಜವಳಿ

ಕಬ್ಬಿನ ತೂಕದಲ್ಲಿ ವಂಚನೆ  ➤ ಕಾರ್ಖಾನೆಗಳ ಮೇಲೆ ಅಧಿಕಾರಿಗಳಿಂದ ದಾಳಿ   Read More »

ಕರ್ನಾಟಕ, ಕ್ರೈಮ್ ನ್ಯೂಸ್

ವಿದ್ಯಾರ್ಥಿನಿಯರ ಜೊತೆ ಶಿಕ್ಷಕನ ಅಸಭ್ಯ ವರ್ತನೆ  ➤ ಹಿಗ್ಗಾಮುಗ್ಗಾ ಥಳಿಸಿದ ವಿದ್ಯಾರ್ಥಿನಿಯರು                  

(ನ್ಯೂಸ್ ಕಡಬ) newskadaba.com ಮಂಡ್ಯ, ಡಿ. 15. ಹಾಸ್ಟೆಲ್ ನಲ್ಲಿ ವಿದ್ಯಾರ್ಥಿನಿಯರ ಜೊತೆ ಅಸಭ್ಯ ವರ್ತನೆ ತೋರಿದ ಮುಖ್ಯ ಶಿಕ್ಷಕನಿಗೆ ವಿದ್ಯಾರ್ಥಿನಿಯರೇ ಸೇರಿ ಹಿಗ್ಗಾಮುಗ್ಗಾ ಥಳಿಸಿದ ಘಟನೆ ಮಂಡ್ಯದಲ್ಲಿ ವರದಿಯಾಗಿದೆ. ಶಿಕ್ಷಕ ಚಿನ್ಮಯ ಆನಂದ ಮೂರ್ತಿ ಎಂಬಾತ ತಡರಾತ್ರಿ ಹಾಸ್ಟೆಲ್ ನಲ್ಲಿ ವಿದ್ಯಾರ್ಥಿನಿ ಜೊತೆ ಅಸಭ್ಯ ವರ್ತನೆ ತೋರಿದ್ದು, ತಕ್ಷಣವೇ ಎಚ್ಚೆತ್ತ ವಿದ್ಯಾರ್ಥಿನಿ ಸಹಪಾಠಿಗೆ ಮಾಹಿತಿ ನೀಡಿದ್ದಾಳೆ. ಕೂಡಲೇ ಕೈಯಲ್ಲಿ ಕೋಲು, ದೊಣ್ಣೆ ಹಿಡಿದ ವಿದ್ಯಾರ್ಥಿನಿಯರು ಕಾಮುಕ ಶಿಕ್ಷಕನ ಮೇಲೆ ದಾಳಿ ನಡೆಸಿದ್ದಾರೆ ಎಂದು ತಿಳಿದುಬಂದಿದೆ. ಆರೋಪಿ

ವಿದ್ಯಾರ್ಥಿನಿಯರ ಜೊತೆ ಶಿಕ್ಷಕನ ಅಸಭ್ಯ ವರ್ತನೆ  ➤ ಹಿಗ್ಗಾಮುಗ್ಗಾ ಥಳಿಸಿದ ವಿದ್ಯಾರ್ಥಿನಿಯರು                   Read More »

ಕರ್ನಾಟಕ, ಕ್ರೈಮ್ ನ್ಯೂಸ್

ಮದ್ಯ ಸೇವನೆಗೆ ಹಣ ನೀಡಿಲ್ಲವೆಂದು ಮಹಿಳೆಯ ಹತ್ಯೆ   ➤ ಆರೋಪಿ ಪೊಲೀಸ್ ಬಲೆಗೆ  

(ನ್ಯೂಸ್ ಕಡಬ) newskadaba.com ಮುಂಬೈ, ಡಿ. 15. ಮದ್ಯ ಸೇವನೆಗೆ ಹಣ ನೀಡಿಲ್ಲವೆಂದು ವ್ಯಕ್ತಿಯೋರ್ವ ನೆರೆಮನೆಯ ಮಹಿಳೆಯನ್ನು ಹತ್ಯೆಗೈದ ಘಟನೆ ಮಹಾರಾಷ್ಟ್ರದ ಥಾಣೆಯಲ್ಲಿ ಸಂಭವಿಸಿದೆ. ಮೃತ ಮಹಿಳೆಯನ್ನು ವೈಶಾಲಿ ಮಸೂದ್ ಎಂದು ಗುರುತಿಸಲಾಗಿದೆ. ಆರೋಪಿಯನ್ನು ಬಂಧಿಸಲಾಗಿದೆ. ಆರೋಪಿಯು ವೈಶಾಲಿ ಮಸೂದ್ ಅವರಿಂದ ಆಗಾಗ್ಗೆ ಹಣ ಪಡೆಯುತ್ತಿದ್ದ ಎಂದು ತಿಳಿದುಬಂದಿದೆ. ಹಣ ನೀಡಲು ನಿರಾಕರಿಸಿದಾಗ ಆಕ್ರೋಶಗೊಂಡ ವ್ಯಕ್ತಿ ಚಾಕುವಿನಿಂದ ಇರಿದು ಹತ್ಯೆ ಮಾಡಿದ್ದಾನೆ ಎನ್ನಲಾಗಿದೆ.

ಮದ್ಯ ಸೇವನೆಗೆ ಹಣ ನೀಡಿಲ್ಲವೆಂದು ಮಹಿಳೆಯ ಹತ್ಯೆ   ➤ ಆರೋಪಿ ಪೊಲೀಸ್ ಬಲೆಗೆ   Read More »

ಬ್ರೇಕಿಂಗ್ ನ್ಯೂಸ್, ರಾಷ್ಟ್ರೀಯ ನ್ಯೂಸ್

ತುಮಕೂರು: ಬೋನಿಗೆ ಬಿದ್ದ ಚಿರತೆ ➤ ನಿಟ್ಟುಸಿರು ಬಿಟ್ಟ ಸಾರ್ವಜನಿಕರು

(ನ್ಯೂಸ್ ಕಡಬ) newskadaba.com ತುಮಕೂರು, ಡಿ.15. ಸುಮಾರು 1 ವರ್ಷದ ಗಂಡು ಚಿರತೆ ಬೋನಿಗೆ ಬಿದ್ದಿರುವ ಘಟನೆ ಮಧುಗಿರಿ ತಾಲೂಕಿನ ಮಿಡಿಗೇಶಿ ಹೋಬಳಿಯ ವೀರಾಪುರ ಗ್ರಾಮದಲ್ಲಿ ಸಂಭವಿಸಿದೆ. ಕಳೆದ ಕೆಲ ದಿನಗಳಿಂದ ಚಿರತೆ ಹಾವಳಿಯಿಂದ ರೈತರು ಆತಂಕಕ್ಕೆ ಒಳಗಾಗಿದ್ದರು. ಇದರಿಂದ ಹೊರಬರುವ ಉದ್ದೇಶದಿಂದ ಚಿರತೆ ಹಿಡಿಯಲು ಗ್ರಾಮದ ರಾಮೇಗೌಡ ಎಂಬವವರ ಜಮೀನಿನಲ್ಲಿ ಬೋನ್ ಇರಿಸಲಾಗಿತ್ತು. ಬೋನಿನೊಳಗೆ ಸತ್ತ ನಾಯಿಯನ್ನು ಇರಿಸಲಾಗಿದ್ದು, ನಾಯಿಯನ್ನು ನೋಡಿ ಬೋನಿನೊಳಗೆ ಬಂದ ಚಿರತೆ ಸೆರೆಯಾಗಿದೆ. ಇದರಿಂದ ಸಾರ್ವಜನಿಕರು ನಿಟ್ಟುಸಿರು ಬಿಡುವಂತಾಗಿದೆ.    

ತುಮಕೂರು: ಬೋನಿಗೆ ಬಿದ್ದ ಚಿರತೆ ➤ ನಿಟ್ಟುಸಿರು ಬಿಟ್ಟ ಸಾರ್ವಜನಿಕರು Read More »

ಕರ್ನಾಟಕ

ವಾಯುಭಾರ ಕುಸಿತ – ಭಾರಿ ಮಳೆಯಾಗುವ ಮುನ್ಸೂಚನೆ !!! 

 (ನ್ಯೂಸ್ ಕಡಬ) newskadaba.com ಬೆಂಗಳೂರು, ಡಿ.15   ಕೆಲದಿನಗಳಿಂದ ಬಿಡುವು ನೀಡಿದ್ದ ಮಳೆರಾಯ ಮತ್ತೆ ಅಬ್ಬರಿಸುವ ಸೂಚನೆ ಗೋಚರಿಸಿದ್ದು, ಆಗ್ನೇಯ ಬಂಗಾಲಕೊಲ್ಲಿ ಸಮುದ್ರದಲ್ಲಿ ಚಂಡಮಾರುತ ಲಕ್ಷಣಗಳು ಗೋಚರಿಸಿದೆ ಎಂದು ವರದಿ ತಿಳಿಸಿದೆ. ವಾಯುಭಾರ ಕುಸಿತದ ವಾತಾವರಣನ ನಿರ್ಮಾಣವಾಗಲಿರುವ ಹಿನ್ನಲೆಯಲ್ಲಿ ಕರ್ನಾಟಕ ಸೇರಿ ಹಲವು ರಾಜ್ಯಗಳಲ್ಲಿ ಭಾರಿ ಮಳೆಯಾಗುವ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ ವರದಿ ತಿಳಿಸಿದೆ. ಮೋಡ ಕವಿದ ವಾತಾವರಣ ಇರಲಿದ್ದು, ಹಗುರವಾದ ಮಳೆಯಾಗಲಿದೆ ಹಾಗೂ ಕರ್ನಾಟಕ, ತಮಿಳುನಾಡು, ಕೇರಳದಲ್ಲಿ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಎಚ್ಚರಿಸಿದೆ.

ವಾಯುಭಾರ ಕುಸಿತ – ಭಾರಿ ಮಳೆಯಾಗುವ ಮುನ್ಸೂಚನೆ !!!  Read More »

ಕರ್ನಾಟಕ

ಹೆತ್ತ ತಾಯಿಯ ಮನೆಗೆ ಕನ್ನ ಹಾಕಿದ ಪಾಪಿ ಮಗ        ➤ ಆರೋಪಿಯ ಬಂಧನ                                

(ನ್ಯೂಸ್ ಕಡಬ) newskadaba.com   ಹೆತ್ತ ತಾಯಿಯ ಮನೆಗೆ ಕನ್ನ ಹಾಕಿದ ಮಗನನ್ನು ಶಿವಮೊಗ್ಗ ಜಿಲ್ಲೆಯಲ್ಲಿ ಸಂಭವಿಸಿದ್ದು, ಆರೋಪಿಯನ್ನು ಪೊಲೀಸರು ಬಂಧಿಸಿದ್ದಾರೆ ಎಂದು ವರದಿ ತಿಳಿಸಿದೆ. ಆರೋಪಿಯನ್ನು ಗಿರೀಶ್ ಅಲಿಯಾಸ್ ಸುಣ್ಣ ಎಂದು ಗುರುತಿಸಲಾಗಿದೆ. ವಿಚಾರಣೆ ವೇಳೆ ನಡೆಸಿದ ಕೃತ್ಯ ನಿಜವೆಂದು ಒಪ್ಪಿಕೊಂಡಿದ್ದಾನೆ ಎಂದು ತಿಳಿದುಬಂದಿದೆ.          

ಹೆತ್ತ ತಾಯಿಯ ಮನೆಗೆ ಕನ್ನ ಹಾಕಿದ ಪಾಪಿ ಮಗ        ➤ ಆರೋಪಿಯ ಬಂಧನ                                 Read More »

ಕರ್ನಾಟಕ, ಕ್ರೈಮ್ ನ್ಯೂಸ್

60 ವರ್ಷ ಮೇಲ್ಟಟ್ಟವರಿಗೆ ಉಚಿತ ಆರೋಗ್ಯ ತಪಾಸಣೆ   ➤ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ                 

(ನ್ಯೂಸ್ ಕಡಬ) newskadaba.com ಹುಬ್ಬಳ್ಳಿ, ಡಿ. 15. 60 ವರ್ಷ ಮೇಲ್ಟಟ್ಟ ಪ್ರತಿಯೊಬ್ಬರ ಆರೋಗ್ಯವನ್ನು ರಾಜ್ಯದ ಎಲ್ಲಾ ಸರ್ಕಾರಿ ಆಸ್ಪತ್ರೆಗಳಲ್ಲಿ ಜನವರಿಯಿಂದ ನೇತ್ರ ಚಿಕಿತ್ಸೆ, ಕನ್ನಡಕ, ಶ್ರವಣದೋಷವುಳ್ಳವರಿಗೆ ಸಲಕರಣೆ ನೀಡಲಾಗುವುದು ಹಾಗೂ ಉಚಿತ ತಪಾಸಣೆ ನಡೆಸಲಾಗುವುದು ಎಂದು ಮುಖ್ಯ ಮಂತ್ರಿ ಬಸವರಾಜ ಬೊಮ್ಮಾಯಿ ಘೋಷಿಸಿದ್ದಾರೆ. ಎಲ್ಲರಿಗೂ ಉತ್ತಮ ಆರೋಗ್ಯ ನೀಡಲು ಸರ್ಕಾರ ಹಲವು ಕಾರ್ಯಕ್ರಮಗಳನ್ನು ಹಮ್ಮಿಕೊಂಡಿದ್ದು, ನಗರ ಪ್ರದೇಶಗಳ ಬಡ, ದುರ್ಬಲ ವರ್ಗದ ಜನರಿಗೆ ಉಚಿತ ಆರೋಗ್ಯ ಸೇವೆ ನೀಡಲು ರಾಜ್ಯದಾದ್ಯಂತ ‘ನಮ್ಮ ಕ್ಲಿನಿಕ್’ ಗಳನ್ನು ತೆರೆಯಲಾಗುತ್ತಿದೆ

60 ವರ್ಷ ಮೇಲ್ಟಟ್ಟವರಿಗೆ ಉಚಿತ ಆರೋಗ್ಯ ತಪಾಸಣೆ   ➤ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ                  Read More »

ಕರ್ನಾಟಕ

ನೇಣು ಬಿಗಿದು ಯುವಕನೋರ್ವ ಮೃತ್ಯು !!!!                           

(ನ್ಯೂಸ್ ಕಡಬ) newskadaba.com  ಕೊಣಾಜೆ, ಡಿ.14  ಯುವಕನೋರ್ವ ಮನೆಯಲ್ಲಿ ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಅಸೈಗೋಳಿ ಎಂಬಲ್ಲಿ ಸಂಭವಿಸಿದೆ. ಮೃತ ಯುವಕನನ್ನು ಅಸೈಗೋಳಿ ನಿವಾಸಿ ಅಭಿಲಾಷ್ (36) ಎಂದು ಗುರುತಿಸಲಾಗಿದೆ. ಮನೆ ಮಂದಿ ಸಂಬಂಧಿಕರ ಮದುವೆ ಸಮಾರಂಭಕ್ಕೆ ತೆರಳಿದ್ದರು ಎನ್ನಲಾಗಿದೆ. ಇದೇ ಸಂದರ್ಭದಲ್ಲಿ ಮನೆಯೊಳಗೆ ಸೀರೆಯಿಂದ ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡಿದ್ದಾನೆಂದು ತಿಳಿದುಬಂದಿದೆ. ಈ ಕುರಿತು ಕೊಣಾಜೆ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ ಎಂದು ವರದಿ ತಿಳಿಸಿದೆ.          

ನೇಣು ಬಿಗಿದು ಯುವಕನೋರ್ವ ಮೃತ್ಯು !!!!                            Read More »

ಕರ್ನಾಟಕ, ಕ್ರೈಮ್ ನ್ಯೂಸ್
Scroll to Top