News Kadaba

ಮಂಗಳೂರು ಬಂದರಿನಲ್ಲಿ ನೀರಿಗೆ ಬಿದ್ದ ಕಂಟೇನರ್ ಲಾರಿ ➤ ಓರ್ವ ಮೃತ್ಯು, ಕ್ಲೀನರ್ ನಾಪತ್ತೆ

(ನ್ಯೂಸ್ ಕಡಬ) newskadaba,ಮಂಗಳೂರು ಜೂ.21:ನಗರದ ಎನ್​​ಎಂಪಿಟಿಯಲ್ಲಿ ನಿಯಂತ್ರಣ ತಪ್ಪಿದ ಕಂಟೇನರ್ ಲಾರಿ ನೀರಿಗೆ ಬಿದ್ದ ಘಟನೆ ನಡೆದಿದ್ದು, ಘಟನೆಯಲ್ಲಿ ಓರ್ವ ಸಾವನ್ನಪ್ಪಿದ್ದು ಮತ್ತೋರ್ವ ನಾಪತ್ತೆಯಾಗಿದ್ದಾನೆ. ಮಂಗಳೂರಿನ ಎನ್​​ಎಂಪಿಟಿ ಬಂದರಿನಲ್ಲಿ ಹಡಗಿನಲ್ಲಿ ಬರುವ ಸರಕು ಸಾಮಗ್ರಿಗಳ ಸಾಗಣೆ ಕಂಟೇನರ್ ಲಾರಿಗಳು ಬಂದರ್​​ನ ವರೆಗೆ ಬರುತ್ತದೆ. ಹೀಗೆ ಬಂದ ಡೆಲ್ಟಾ ಕಂಪೆನಿಯ 10 ಚಕ್ರದ ಕಂಟೇನರ್ ಲಾರಿ ಚಾಲಕನ ನಿಯಂತ್ರಣ ತಪ್ಪಿ ನೀರಿಗೆ ಬಿದ್ದಿದೆ. ನವಮಂಗಳೂರು ಬಂದರಿನ 14 ನೇ ಬರ್ತ್​ನಲ್ಲಿ ಈ ಘಟನೆ ನಡೆದಿದೆ.ಲಾರಿಯಲ್ಲಿದ್ದ ಚಾಲಕ ರಾಜೇಸಾಬ (26) ಮೃತಪಟ್ಟಿದ್ದು, […]

ಮಂಗಳೂರು ಬಂದರಿನಲ್ಲಿ ನೀರಿಗೆ ಬಿದ್ದ ಕಂಟೇನರ್ ಲಾರಿ ➤ ಓರ್ವ ಮೃತ್ಯು, ಕ್ಲೀನರ್ ನಾಪತ್ತೆ Read More »

ಕರಾವಳಿ

ರಾಜ್ಯದಲ್ಲಿ ಕೊರೋನಾ ಇಳಿಮುಖ ➤ ಬೆಂಗಳೂರಿನಲ್ಲಿ 1,034 ಸೇರಿ 4,867 ಹೊಸ ಪ್ರಕರಣ ಪತ್ತೆ

(ನ್ಯೂಸ್ ಕಡಬ) newskadaba,ಬೆಂಗಳೂರು ಜೂ.21: ರಾಜ್ಯದಲ್ಲಿ ಕೊರೋನಾ ಎರಡನೇ ಅಲೆ ಇಳಿಮುಖದತ್ತ ಸಾಗಿದೆ. ಇಂದು 4,867 ಕೊರೋನಾ ಪಾಸಿಟಿವ್ ಪ್ರಕರಣಗಳು ವರದಿಯಾಗಿದ್ದು ಇದರೊಂದಿಗೆ ಸೋಂಕಿತರ ಸಂಖ್ಯೆ 28,11,320ಕ್ಕೆ ಏರಿಕೆಯಾಗಿದೆ. ಕಳೆದ 24 ಗಂಟೆಯಲ್ಲಿ ಮಹಾಮಾರಿಗೆ 142 ಮಂದಿ ಬಲಿಯಾಗಿದ್ದಾರೆ. ಇದರೊಂದಿಗೆ ಸಾವಿನ ಸಂಖ್ಯೆ 34,025ಕ್ಕೆ ಏರಿಕೆಯಾಗಿದೆ ಎಂದು ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ಪ್ರಕಟಣೆಯಲ್ಲಿ ತಿಳಿಸಿದೆ.ರಾಜ್ಯದಲ್ಲಿ ಇಂದು ಸಹ ಹೊಸ ಪಾಸಿಟಿವ್ ಪ್ರಕರಣಗಳಿಗಿಂತ ಹೆಚ್ಚು ಅಂದರೆ 8,404 ಸೋಂಕಿತರು ಗುಣಮುಖರಾಗಿ ಆಸ್ಪತ್ರೆಯಿಂದ ಡಿಸ್ಚಾರ್ಜ್ ಆಗಿದ್ದಾರೆ. ಇದರೊಂದಿಗೆ

ರಾಜ್ಯದಲ್ಲಿ ಕೊರೋನಾ ಇಳಿಮುಖ ➤ ಬೆಂಗಳೂರಿನಲ್ಲಿ 1,034 ಸೇರಿ 4,867 ಹೊಸ ಪ್ರಕರಣ ಪತ್ತೆ Read More »

ಕರಾವಳಿ

ಈಜುಕೊಳದಲ್ಲಿ ನಟಿ ರಾಧಿಕಾ ಮದನ್ ವರ್ಕೌಟ್, ವಿಡಿಯೋ ವೈರಲ್!

(ನ್ಯೂಸ್ ಕಡಬ) newskadaba,ಮುಂಬೈ ಜೂ. 20: ಬಾಲಿವುಡ್ ನಟಿ ರಾಧಿಕಾ ಮದನ್ ಈಜುಕೋಳದಲ್ಲಿ ಮಾಡುತ್ತಿರುವ ವರ್ಕೌಟ್ ವಿಡಿಯೋ ಇಂಟರ್ ನೆಟ್ ನಲ್ಲಿ  ಸಖತ್ ವೈರಲ್ ಆಗಿದೆ.ನಾಳೆ ಅಂತಾರಾಷ್ಟ್ರೀಯ ಯೋಗ ದಿನಾಚರಣೆ. ಈ ಸಂದರ್ಭದಲ್ಲಿ ಚಿತ್ರರಂಗದ ಪ್ರಮುಖ ನಟ, ನಟಿಯರು ತಮ್ಮ ಫೋಟೋ ಹಂಚಿಕೊಳ್ಳುವ ಮೂಲಕ ತಾವೂ ಯೋಗ ದಿನಾಚರಣೆಯಲ್ಲಿ ಪಾಲ್ಗೊಳ್ಳಿ ಎನ್ನುವ ಸಂದೇಶವನ್ನು ಜನರಿಗೆ ನೀಡುತ್ತಿದ್ದಾರೆ. ಇದೇ ಸಂದರ್ಭದಲ್ಲಿ  ಈಜುಕೋಳದಲ್ಲಿ ವರ್ಕೌಟ್ ಮಾಡುತ್ತಿರುವ ವಿಡಿಯೋವೊಂದನ್ನು ನಟಿ ರಾಧಿಕಾ ಮದನ್ ತನ್ನ ಇನ್ಸ್ಟಾಗ್ರಾಮ್ ಖಾತೆಯಲ್ಲಿ ಹಂಚಿಕೊಂಡಿದ್ದಾರೆ.ವರ್ಕೌಟ್ ಮಿಸ್ ಮಾಡಲ್ಲ ಎಂಬ ಅಡಿಬರಹ

ಈಜುಕೊಳದಲ್ಲಿ ನಟಿ ರಾಧಿಕಾ ಮದನ್ ವರ್ಕೌಟ್, ವಿಡಿಯೋ ವೈರಲ್! Read More »

ರಾಷ್ಟ್ರೀಯ ನ್ಯೂಸ್

ಪುತ್ತೂರು ಪೊಲೀಸ್ ಠಾಣೆಯಲ್ಲಿ ಎಚ್.ಡಿ. ರೇವಣ್ಣ ವಿರುದ್ಧ ದೂರು

(ನ್ಯೂಸ್ ಕಡಬ) newskadaba,ಪುತ್ತೂರು ಜೂ. 20: ಜೆಡಿಎಸ್ ಮುಖಂಡ ಹಾಗೂ ಮಾಜಿ ಸಚಿವ ಎಚ್.ಡಿ. ರೇವಣ್ಣ ವಿರುದ್ಧ ದಕ್ಷಿಣ ಕನ್ನಡ ಜಿಲ್ಲೆಯ ಪುತ್ತೂರು ನಗರ ಪೊಲೀಸ್ ಠಾಣೆಯಲ್ಲಿ ದೂರು ದಾಖಲಾಗಿದೆ. ಖಾಸಗಿ ನರ್ಸಿಂಗ್ ಹೋಮ್‌ಗಳ ಬಗ್ಗೆ ವಿವಾದಾತ್ಮಕ ಹೇಳಿಕೆ ನೀಡಿದ್ದ ಮಾಜಿ ಸಚಿವ ಎಚ್.ಡಿ. ರೇವಣ್ಣ ವಿರುದ್ಧ ಪುತ್ತೂರಿನ ಐಎಂಎ ಹೆರಾಸ್ಮೆಂಟ್ ಕಮಿಟಿಯ ಚೇರ್‌ಮೇನ್ ಆಗಿರುವ ಡಾ. ಗಣೇಶ್ ಪ್ರಸಾದ್ ಮುದ್ರಾಜೆ ಪುತ್ತೂರು ನಗರ ಪೊಲೀಸ್ ಠಾಣೆಯಲ್ಲಿ ದೂರು ನೀಡಿದ್ದು, ರೇವಣ್ಣ ವಿರುದ್ಧ ಕ್ರಮ ಕೈಗೊಳ್ಳುವಂತೆ ದೂರು ಒತ್ತಾಯಿಸಿದ್ದಾರೆ.

ಪುತ್ತೂರು ಪೊಲೀಸ್ ಠಾಣೆಯಲ್ಲಿ ಎಚ್.ಡಿ. ರೇವಣ್ಣ ವಿರುದ್ಧ ದೂರು Read More »

ಕರಾವಳಿ

ಧರ್ಮಸ್ಥಳ-ಸುಬ್ರಹ್ಮಣ್ಯ ಯಾತ್ರಾರ್ಥಿಗಳು ಗುಂಡ್ಯದಿಂದ ವಾಪಸ್

(ನ್ಯೂಸ್ ಕಡಬ) newskadaba,ಸುಬ್ರಹ್ಮಣ್ಯ ಜೂ. 20: ಜಿಲ್ಲೆಯಲ್ಲಿ ಧಾರ್ಮಿಕ ಕ್ಷೇತ್ರಗಳ ಭೇಟಿಗೆ ನಿರ್ಬಂಧವಿದ್ದರೂ ಹೊರಜಿಲ್ಲೆಗಳಿಂದ ಜಿಲ್ಲೆಗೆ ಆಗಮಿಸುತ್ತಿರುವ ಭಕ್ತರನ್ನು ಗುಂಡ್ಯ ಚೆಕ್’ಪೋಸ್ಟ್ ನಿಂದಲೇ ವಾಪಸ್ ಕಳುಹಿಸುವ ಕಾರ್ಯ ನಡೆಯುತ್ತಿದೆ. ಅಗತ್ಯ ದಾಖಲೆಗಳನ್ನು ಹೊಂದಿದವವರನ್ನು ಮಾತ್ರ ಜಿಲ್ಲೆಯ ಒಳಬರಲು ಬಿಡಲಾಗುತ್ತಿದೆ. ಶಿರಾಡಿ ಘಾಟ್ ಮೂಲಕ ಜಿಲ್ಲೆಯ ಧರ್ಮಸ್ಥಳ ಮತ್ತು ಸುಬ್ರಮಣ್ಯ ಪುಣ್ಯಕ್ಷೇತ್ರಗಳಿಗೆ ಭಕ್ತರು ಆಗಮಿಸುತ್ತಿದ್ದಾರೆ. ನಿನ್ನೆ ಒಂದೇ ದಿನ ತೀರ್ಥಯಾತ್ರೆ ಆಗಮಿಸಿದ್ದ ಬರೋಬ್ಬರಿ 69 ವಾಹನಗಳನ್ನು ವಾಪಸ್ ಕಳುಹಿಸಲಾಗಿದೆ. ಮುಂದಿನ ಎರಡು ವಾರಗಳ ಕಾಲ ಜಿಲ್ಲೆಯ ಧಾರ್ಮಿಕ ಕ್ಷೇತ್ರಗಳನ್ನು ಕರೆಯಲಾಗುವುದಿಲ್ಲ.

ಧರ್ಮಸ್ಥಳ-ಸುಬ್ರಹ್ಮಣ್ಯ ಯಾತ್ರಾರ್ಥಿಗಳು ಗುಂಡ್ಯದಿಂದ ವಾಪಸ್ Read More »

ಕರಾವಳಿ

ದಕ್ಷಿಣ ಕನ್ನಡದಲ್ಲಿ ತಗ್ಗಿದ ಕೋವಿಡ್ ಕೇಸ್ ➤ ಜಿಲ್ಲೆಯಲ್ಲಿಂದು 525 ಜನರಲ್ಲಿ ಕೊರೊನಾ ಸೋಂಕು ದೃಢ

(ನ್ಯೂಸ್ ಕಡಬ) newskadaba,ಮಂಗಳೂರು ಜೂ. 20: ಜಿಲ್ಲೆಯಲ್ಲಿಂದು 525 ಜನರಲ್ಲಿ ಕೊರೊನಾ ಸೋಂಕು ದೃಢಪಟ್ಟಿದೆ. ಈ ಮೂಲಕ ಒಟ್ಟು ಸೋಂಕಿತರ ಸಂಖ್ಯೆ 88,707 ಕ್ಕೆ ಏರಿಕೆಯಾಗಿದೆ. ಇನ್ನೂ ಇಂದು 583 ಜನ ಸೋಂಕಿನಿಂದ ಸುಧಾರಿಸಿಕೊಂಡು ಆಸ್ಪತ್ರೆಯಿಂದ ಡಿಸ್ಚಾರ್ಜ್ ಆಗುವ ಮೂಲಕ ಒಟ್ಟು ಚೇತರಿಸಿಕೊಂಡವರ ಸಂಖ್ಯೆ 80530 ಕ್ಕೆ ಏರಿಕೆಯಾಗಿದೆ. ಜಿಲ್ಲೆಯಲ್ಲಿಂದು ಕೊರೊನಾ ಸೋಂಕಿನಿಂದ 11 ಜನ ಸಾವನ್ನಪ್ಪಿದ್ದಾರೆ ಸಂಭವಿಸಿಲ್ಲ. ಈವರೆಗೆ ಒಟ್ಟು 1048 ಮಂದಿ ಕೋವಿಡ್‌ಗೆ ಬಲಿಯಾಗಿದ್ದಾರೆ.

ದಕ್ಷಿಣ ಕನ್ನಡದಲ್ಲಿ ತಗ್ಗಿದ ಕೋವಿಡ್ ಕೇಸ್ ➤ ಜಿಲ್ಲೆಯಲ್ಲಿಂದು 525 ಜನರಲ್ಲಿ ಕೊರೊನಾ ಸೋಂಕು ದೃಢ Read More »

ಕರಾವಳಿ

ಮಂಗಳೂರಿನಲ್ಲಿ ಲಾಕ್‌ಡೌನ್ ನಿಯಮ ಉಲ್ಲಂಘಿಸಿ ಅದ್ದೂರಿ ಮದುವೆ ➤ ಪಾಲಿಕೆ ಅಧಿಕಾರಿಗಳಿಂದ ದಾಳಿ

(ನ್ಯೂಸ್ ಕಡಬ) newskadaba,ಮಂಗಳೂರು ಜೂ. 20: ಲಾಕ್‌ಡೌನ್ ನಿಯಮ ಉಲ್ಲಂಘಿಸಿ ನಗರದ ಮಂಗಳಾದೇವಿ ದೇವಸ್ಥಾನದ ಸಭಾಂಗಣದಲ್ಲಿ ಅದ್ದೂರಿಯಾಗಿ ಮದುವೆ ನಡೆಯುತ್ತಿತ್ತು. ಸ್ಥಳಕ್ಕೆ ಮಂಗಳೂರು ಮಹಾನಗರ ಪಾಲಿಕೆ ( ಮನಪಾ) ಸಹಾಯಕ ಆಯುಕ್ತ ಮತ್ತು ಕಂದಾಯ ಇಲಾಖೆಯ ಉಪ ಆಯುಕ್ತ ಜಂಟಿ ದಾಳಿ ನಡೆಸಿ ಮದುವೆ ನಿಲ್ಲಿಸಿದ್ದಾರೆ. ಮಂಗಳಾದೇವಿ ದೇವಸ್ಥಾನದ ಸಭಾಂಗಣದಲ್ಲಿ ಮಹಾನಗರ ಪಾಲಿಕೆಯ ನಾಮನಿರ್ದೇಶಿತ ಸದಸ್ಯ, ಎಕ್ಕೂರಿನ ಭಾಸ್ಕರಚಂದ್ರ ಶೆಟ್ಟಿಯವರ ಪುತ್ರಿಯ ವಿವಾಹ ಸೇರಿದಂತೆ ನಾಲ್ಕು ಜೋಡಿಗಳ ಮದುವೆಯನ್ನು ಏರ್ಪಡಿಸಲಾಗಿತ್ತು. ಮದುವೆ ಹಿನ್ನೆಲೆ ದೇವಸ್ಥಾನದ ಮುಂಭಾಗದಲ್ಲಿ 40ಕ್ಕೂ ಹೆಚ್ಚು

ಮಂಗಳೂರಿನಲ್ಲಿ ಲಾಕ್‌ಡೌನ್ ನಿಯಮ ಉಲ್ಲಂಘಿಸಿ ಅದ್ದೂರಿ ಮದುವೆ ➤ ಪಾಲಿಕೆ ಅಧಿಕಾರಿಗಳಿಂದ ದಾಳಿ Read More »

ಕರಾವಳಿ

ಕೋವಿಡ್​ ಸಂತ್ರಸ್ತರಿಗೆ 4 ಲಕ್ಷ ಪರಿಹಾರ ನೀಡಲು ಅಸಾಧ್ಯ ➤ಸುಪ್ರೀಂ ಕೋರ್ಟ್​ಗೆ ಕೇಂದ್ರ ಮಾಹಿತಿ

(ನ್ಯೂಸ್ ಕಡಬ) newskadaba,ನವ ದೆಹಲಿ ಜೂ. 20: ಮಾರಕ ಕೊರೋನಾ ವೈರಸ್​ನಿಂದ ಮೃತಪಟ್ಟವರಿಗೆ 4 ಲಕ್ಷ ರೂಪಾಯಿ ಪರಿಹಾರವನ್ನು ಪಾವತಿಸಲಾಗುವುದಿಲ್ಲ. ಏಕೆಂದರೆ ಇದು ವಿಪತ್ತು ಪರಿಹಾರ ನಿಧಿಗಳನ್ನು ಖಾಲಿ ಮಾಡುತ್ತದೆ ಮತ್ತು COVID-19 ರ ಭವಿಷ್ಯದ ಅಲೆಗಳನ್ನು ಎದುರಿಸಲು ಕೇಂದ್ರ ಮತ್ತು ರಾಜ್ಯಗಳ ಸಿದ್ಧತೆಯ ಮೇಲೆ ಪರಿಣಾಮ ಬೀರುತ್ತದೆ” ಎಂದು ಕೇಂದ್ರ ಸರ್ಕಾರ ಸುಪ್ರೀಂ ಕೋರ್ಟ್​ಗೆ ಇಂದು ಅಫಿಡವಿಟ್​ ಸಲ್ಲಿಸಿದೆ.   ವಕೀಲರಾದ ಗೌರವ್ ಕುಮಾರ್ ಬನ್ಸಾಲ್ ಮತ್ತು ರೀಪಕ್ ಕನ್ಸಾಲ್, “ವಿಪತ್ತು ನಿರ್ವಹಣಾ ಕಾಯ್ದೆ 2005 ರ

ಕೋವಿಡ್​ ಸಂತ್ರಸ್ತರಿಗೆ 4 ಲಕ್ಷ ಪರಿಹಾರ ನೀಡಲು ಅಸಾಧ್ಯ ➤ಸುಪ್ರೀಂ ಕೋರ್ಟ್​ಗೆ ಕೇಂದ್ರ ಮಾಹಿತಿ Read More »

ಕರಾವಳಿ

ಶಾಲಾ ಮಕ್ಕಳಿಗೆ ಸಿಗಲಿದೆ ಕೆನೆಭರಿತ ಹಾಲಿನ ಪುಡಿ

(ನ್ಯೂಸ್ ಕಡಬ) newskadaba,ಬೆಂಗಳೂರು ಜೂ.19: ರಾಜ್ಯದ ಸರ್ಕಾರಿ ಶಾಲಾ ಮಕ್ಕಳಿಗೆ ಕೆನೆಭರಿತ ಹಾಲಿನಹುಡಿ ವಿತರಿಸಲು ನಿರ್ಧಾರಿಸಲಾಗಿದೆ ಎಂದು ಸಚಿವ ಸುರೇಶ್ ಕುಮಾರ್ ಹೇಳಿದ್ದಾರೆ. ಈ ಬಗ್ಗೆ ಪತ್ರಿಕಾ ಪ್ರಕಟಣೆ ಹೊರಡಿಸಿ ಮಾತನಾಡಿದ ಪ್ರಾಥಮಿಕ ಮತ್ತು ಪ್ರೌಢ ಶಿಕ್ಷಣ ಸಚಿವ ಸುರೇಶ್ ಕುಮಾರ್, ಈಗಾಗಲೇ ಲಾಕ್ಡೌನ್ ಸಮಯದಲ್ಲಿ ಮನೆಲ್ಲಿರುವ ವಿದ್ಯಾರ್ಥಿಗಳಿಗೆ ಅಕ್ಕಿ, ಅಡುಗೆ ಎಣ್ಣೆ ಇನ್ನಿತರ ಸಾಮಗ್ರಿಗಳನ್ನು ವಿತರಿಸಲಾಗುತ್ತಿದೆ. ಇನ್ನು ಮುಂದೆ ಮಾನ್ಯ ಮುಖ್ಯಮಂತ್ರಿಗಳ ಆಶಯದಂತೆ ರಾಜ್ಯದ ಎಲ್ಲಾ ಸರ್ಕಾರಿ ಶಾಲಾ ವಿದ್ಯಾರ್ಥಿಗಳಿಗೆ ಕೆನೆಭರಿತ ಹಾಲಿನ ಪುಡಿ ವಿತರಿಸಲಾಗುವುದು.

ಶಾಲಾ ಮಕ್ಕಳಿಗೆ ಸಿಗಲಿದೆ ಕೆನೆಭರಿತ ಹಾಲಿನ ಪುಡಿ Read More »

ಕರಾವಳಿ

ರಾಜ್ಯದಲ್ಲಿ ಇಳಿಮುಖದತ್ತ ಸಾಗಿದ ಕೊರೋನಾ

(ನ್ಯೂಸ್ ಕಡಬ) newskadaba,ಬೆಂಗಳೂರು ಜೂ.19:ರಾಜ್ಯದಲ್ಲಿ ಕೊರೋನಾ ಎರಡನೇ ಅಲೆ ಇಳಿಮುಖದತ್ತ ಸಾಗಿದೆ. ಇಂದು 5,815 ಕೊರೋನಾ ಪಾಸಿಟಿವ್ ಪ್ರಕರಣಗಳು ವರದಿಯಾಗಿದ್ದು ಇದರೊಂದಿಗೆ ಸೋಂಕಿತರ ಸಂಖ್ಯೆ 28,01,936ಕ್ಕೆ ಏರಿಕೆಯಾಗಿದೆ.   ಕಳೆದ 24 ಗಂಟೆಯಲ್ಲಿ ಮಹಾಮಾರಿಗೆ 161 ಮಂದಿ ಬಲಿಯಾಗಿದ್ದಾರೆ. ಇದರೊಂದಿಗೆ ಸಾವಿನ ಸಂಖ್ಯೆ 33,763ಕ್ಕೆ ಏರಿಕೆಯಾಗಿದೆ ಎಂದು ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ಪ್ರಕಟಣೆಯಲ್ಲಿ ತಿಳಿಸಿದೆ.ರಾಜ್ಯದಲ್ಲಿ ಇಂದು ಸಹ ಹೊಸ ಪಾಸಿಟಿವ್ ಪ್ರಕರಣಗಳಿಗಿಂತ ಹೆಚ್ಚು ಅಂದರೆ 11,832 ಸೋಂಕಿತರು ಗುಣಮುಖರಾಗಿ ಆಸ್ಪತ್ರೆಯಿಂದ ಡಿಸ್ಚಾರ್ಜ್ ಆಗಿದ್ದಾರೆ. ಇದರೊಂದಿಗೆ

ರಾಜ್ಯದಲ್ಲಿ ಇಳಿಮುಖದತ್ತ ಸಾಗಿದ ಕೊರೋನಾ Read More »

ಕರ್ನಾಟಕ
Scroll to Top