News Kadaba

ಹೃದಯಾಘಾತದಿಂದಾಗಿ ಕೊನೆಯುಸಿರೆಳೆದ ಮಾಜಿ ಸಚಿವೆ

(ನ್ಯೂಸ್ ಕಡಬ) newskadaba.com ಬೆಂಗಳೂರು, ಡಿ.16: ರೇಷ್ಮೆ ಖಾತೆ ಸಚಿವರಾಗಿ ಕೆಲಸ ನಿರ್ವಹಿಸಿ ರಾಜ್ಯ ರಾಜಕೀಯದಲ್ಲಿ ತನ್ನದೇಯಾದ ಛಾಪು ಮೂಡಿಸಿದ್ದ ಮಾಜಿ ಸಚಿವೆ ರೇಣುಕಾ ರಾಜೇಂದ್ರನ್ (78) ಕೊರೋನಾ ಸೋಂಕಿಗೆ ತುತ್ತಾಗಿ ಚಿಕಿತ್ಸೆ ಪಡೆದು ಗುಣಮುಖರಾಗಿದ್ದರು. ಆದರೆ, ಇಂದು ಬೆಳಗ್ಗೆ ದಿಢೀರ್ ಹೃದಯಾಘಾತದಿಂದಾಗಿ ಬೆಂಗಳೂರಿನ ಖಾಸಗಿ ಆಸ್ಪತ್ರೆಯಲ್ಲಿ ಮೃತಪಟ್ಟಿದ್ದಾರೆ ಎಂದು ವರದಿಯಾಗಿದೆ. ಕೊರೋನಾ ಇಡೀ ದೇಶಕ್ಕೆ ವ್ಯಾಪಿಸಿದ್ದ ಸಂದರ್ಭದಲ್ಲಿ ಹಿರಿಯ ರಾಜಕಾರಣಿ ರೇಣುಕಾ ರಾಜೇಂದ್ರನ್ ಅವರಿಗೂ ಸಹ ಸೋಂಕು ತಗುಲಿತ್ತು. ಆದರೆ, ಅವರು ಅಸ್ಪತ್ರೆಗೆ ದಾಖಲಾಗಿ ಚಿಕಿತ್ಸೆ […]

ಹೃದಯಾಘಾತದಿಂದಾಗಿ ಕೊನೆಯುಸಿರೆಳೆದ ಮಾಜಿ ಸಚಿವೆ Read More »

ಕರ್ನಾಟಕ

ಅಪರಿಚಿತ ಗಂಡಸಿನ ಮೃತ ದೇಹ ಪತ್ತೆ.!

(ನ್ಯೂಸ್ ಕಡಬ) newskadaba.com ಮಂಗಳೂರು, ಡಿ.16: ನಗರದ ಬಲ್ಮಠದ ಬಳಿಯಿರುವ ಪೆಟ್ರೋಲ್ ಬಂಕ್‍ನಲ್ಲಿ ಕುಸಿದು ಬಿದ್ದಿದ್ದ ಅಪರಿಚಿತ ವ್ಯಕ್ತಿಯನ್ನು ವೆನ್‍ಲಾಕ್ ಆಸ್ಪತ್ರೆಗೆ ದಾಖಲಿಸಿಲಾಯಿತು ಚಿಕಿತ್ಸೆ ಫಲಕಾರಿಯಾಗದೆ ನವೆಂಬರ್ 27ರಂದು ಮೃತಪಟ್ಟಿದ್ದಾರೆ. ಅಪರಿಚಿತ ಮೃತ ವ್ಯಕ್ತಿಯು ಕುದ್ರೋಳಿಯ ನಿವಾಸಿಯಾಗಿದ್ದು, ಸುಮಾರು 5 ಅಡಿ ಎತ್ತರವಿದ್ದು, ಗೋಧಿ ಬಣ್ಣ, ಕೋಲು ಮುಖ, ಸಾಧಾರಣ ಮೈಕಟ್ಟು ಹೊಂದಿದ್ದಾರೆ. ಈ ಚಹರೆಯುಳ್ಳ ಮೃತರ ವಾರಸುದಾರರಿದ್ದಲ್ಲಿ ಮಂಗಳೂರು ಪೂರ್ವಪೊಲೀಸ್ ಠಾಣಾ (ಕದ್ರಿ ಪೊಲೀಸ್ಠಾಣೆ) ದೂ.ಸಂ:0824-2220520 ಗೆ ಸಂಪರ್ಕಿಸುವಂತೆ ಮಂಗಳೂರು ಪೂರ್ವ ಪೊಲೀಸ್ ಠಾಣಾಧಿಕಾರಿ ಪ್ರಕಟಣೆಯಲ್ಲಿ

ಅಪರಿಚಿತ ಗಂಡಸಿನ ಮೃತ ದೇಹ ಪತ್ತೆ.! Read More »

ಕರಾವಳಿ

ನೂಜಿಬಾಳ್ತಿಲ: ಶಾಸಕರಿಂದ ಮನೆ ಭೇಟಿ

(ನ್ಯೂಸ್ ಕಡಬ) newskadaba.com ನೂಜಿಬಾಳ್ತಿಲ, ಡಿ.16: ಸುಳ್ಯ ಶಾಸಕ ಎಸ್.ಅಂಗಾರ ಅವರು ಕಡಬ ತಾಲೂಕಿನ ನೂಜಿಬಾಳ್ತಿಲ ಗ್ರಾಮದಲ್ಲಿ ಸೋಮವಾರ ಮನೆ ಬೇಟಿ ನಡೆಸಿದರು. ನೂಜಿಬಾಳ್ತಿಲ 2ನೇ ವಾರ್ಡ್‍ಗೆ ಬೇಟಿ ನೀಡಿದ ಶಾಸಕರು ಸ್ಥಳೀಯರ ಪ್ರಮುಖರೊಂದಿಗೆ ಸಮಾಲೋಚನೆ ನಡೆಸಿ, ಮನೆ ಬೇಟಿ ನಡೆಸಿದರು. ಬದಿಬಾಗಿಲು-ಒರುಂಬಾಲು ರಸ್ತೆಗೆ ವಿಶೇಷ ಅನುದಾನ ರೂ.10 ಲಕ್ಷ ಮಂಜೂರಾಗಿದ್ದು, ಚುನಾವಣೆ ಮುಗಿದ ತಕ್ಷಣ ಕಾಮಗಾರಿ ಆರಂಭವಾಗಲಿದೆ ಎಂದರು. ಪ್ರಮುಖರಾದ ವಾಡ್ಯಪ್ಪ ಗೌಡ ಎರ್ಮಾಯಿಲ್, ಎ.ಪಿ.ಗಿರೀಶ್, ಚಂದ್ರಶೇಖರ ನೂಜಿ, ರಾಮಚಂದ್ರ ಎಸ್., ಪ್ರಭಾಕರ ಬಳಕ್ಕ, ಅನಿಲ್

ನೂಜಿಬಾಳ್ತಿಲ: ಶಾಸಕರಿಂದ ಮನೆ ಭೇಟಿ Read More »

ಕರಾವಳಿ

ನಾಳೆ (ಡಿ.17) ಕಡಬಕ್ಕೆ ದ.ಕ. ಜಿಲ್ಲಾಧಿಕಾರಿ ಭೇಟಿ

(ನ್ಯೂಸ್ ಕಡಬ) newskadaba.com ಮಂಗಳೂರು, ಡಿ.16: ಮಾನ್ಯ ದ.ಕ. ಜಿಲ್ಲಾಧಿಕಾರಿ ಡಾ.ಕೆ.ವಿ ರಾಜೇಂದ್ರ   ರವರು ನಾಳೆ (ಡಿ.17) ಪೂರ್ವಾಹ್ನ 11 ಘಂಟೆಗೆ ಕಡಬ ತಾಲೂಕು ಕಚೇರಿಗೆ ಭೇಟಿ ನೀಡಲಿದ್ದು, ಸಾರ್ವಜನಿಕರಿಂದ ಅಹವಾಲು ಸ್ವೀಕರಿಸಲಿದ್ದಾರೆ. ಸಾರ್ವಜನಿಕರು ಇದರ ಸದುಪಯೋಗ ಪಡೆಕೊಳ್ಳಬೇಕೆಂದು ಕಡಬ ತಹಶೀಲ್ದಾರ್ ಅನಂತ ಶಂಕರ ಅವರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.  

ನಾಳೆ (ಡಿ.17) ಕಡಬಕ್ಕೆ ದ.ಕ. ಜಿಲ್ಲಾಧಿಕಾರಿ ಭೇಟಿ Read More »

ಕರಾವಳಿ

ಗ್ರಾ.ಪಂ. ಚುನಾವಣೆ ಹಿನ್ನಲೆ ➤ ಚುನಾವಣಾ ಆಯೋಗದಿಂದ ಮತಗಟ್ಟೆಗಳಿಗೆ ಕೋವಿಡ್ ಕಿಟ್ ಸರಬರಾಜು

(ನ್ಯೂಸ್ ಕಡಬ) newskadaba.com ಉಡುಪಿ, ಡಿ.16: ಜಿಲ್ಲೆಯಲ್ಲಿ ಡಿಸೆಂಬರ್ 22 ಮತ್ತು 27 ರಂದು ನಡೆಯುವ ಗ್ರಾಮ ಪಂಚಾಯತ್ ಸಾರ್ವತ್ರಿಕ ಚುನಾವಣೆಯು ಜಿಲ್ಲೆಯ ಒಟ್ಟು 153 ಗ್ರಾಮ ಪಂಚಾಯತ್ ಗಳಲ್ಲಿ ನಡೆಯಲಿದ್ದು, ಕೋವಿಡ್19 ಹಿನ್ನೆಲೆಯಲ್ಲಿ ಈ ಎಲ್ಲಾ ಮತಗಟ್ಟೆಗಳಲ್ಲಿ ಕಾರ್ಯನಿರ್ವಹಿಸುವ ಮತಗಟ್ಟೆ ಅಧಿಕಾರಿಗಳು ಮತ್ತು ಸಿಬ್ಬಂದಿಗಳಿಗೆ ಕೊರೋನಾ ಸುರಕ್ಷಿತ ಕಿಟ್‌ಗಳನ್ನು ರಾಜ್ಯ ಚುನಾವಣಾ ಆಯೋಗ ಸರಬರಾಜು ಮಾಡಿದೆ.   ಎಂ.ಎಸ್.ಐ.ಲ್ ನಿಂದ ಸರಬರಾಜು ಮಾಡಿರುವ ಈ ಕಿಟ್‌ಗಳಲ್ಲಿ, 500 ಎಂಲ್‌ನ 4 ಸ್ಯಾನಿಟೈಸ್ ಬಾಟೆಲ್, 100 ಎಂಎಲ್‌ನ

ಗ್ರಾ.ಪಂ. ಚುನಾವಣೆ ಹಿನ್ನಲೆ ➤ ಚುನಾವಣಾ ಆಯೋಗದಿಂದ ಮತಗಟ್ಟೆಗಳಿಗೆ ಕೋವಿಡ್ ಕಿಟ್ ಸರಬರಾಜು Read More »

ಕರಾವಳಿ, ಕರ್ನಾಟಕ

ಪುತ್ತೂರಿನಲ್ಲಿ ಹೆಚ್ಚಿದ ಚಿರತೆ ಕಾಟ➤ ಆತಂಕದಲ್ಲಿ ಸ್ಥಳೀಯರು

(ನ್ಯೂಸ್ ಕಡಬ) newskadaba.com ಪುತ್ತೂರು, ಡಿ.16: ಕಳೆದ ಮೂರು ವರ್ಷಗಳಿಂದ ಪುತ್ತೂರು ತಾಲೂಕಿನ ವಿವಿಧ ಭಾಗದಲ್ಲಿ ಚಿರತೆ ಕಾಟ ಆರಂಭವಾಗಿದ್ದು, ಜನರನ್ನು ಆತಂಕಿತರನ್ನಾಗಿಸಿದೆ. ಕಳೆದ ವರ್ಷ ಹಳೆನೇರೆಂಕಿ, ವಳಕಡಮ, ಈಶ್ವರಮಂಗಲ ವ್ಯಾಪ್ತಿಯ ಕೆಲ ಭಾಗಗಳಲ್ಲಿ ಚಿರತೆ ಕಾಟ ಜನತೆಯನ್ನು ಕಾಡಿತ್ತು. ಇದೀಗ ಕೋಡಿಂಬಾಡಿಯಲ್ಲೂ ಸಿಸಿ ಕ್ಯಾಮರಾದಲ್ಲಿ ಚಿರತೆ ಕಾಣಿಸಿಕೊಂಡಿದ್ದು ಇಲ್ಲಿನ ಜನತೆ ಭಯಭೀತರಾಗಿದ್ದಾರೆ.     ಕೋಡಿಂಬಾಡಿಯ ಜಿನರಾಜ್ ಜೈನ್ ಅವರ ಮನೆಯ ಬಳಿ ಕಳೆದ ಆದಿತ್ಯವಾರ ರಾತ್ರಿ ಸುಮಾರು 1:45ರ ಸುಮಾರಿಗೆ ಚಿರತೆಯೊಂದು ಓಡಾಟ ನಡೆಸಿರುವುದು

ಪುತ್ತೂರಿನಲ್ಲಿ ಹೆಚ್ಚಿದ ಚಿರತೆ ಕಾಟ➤ ಆತಂಕದಲ್ಲಿ ಸ್ಥಳೀಯರು Read More »

ಕರಾವಳಿ

ಹಸಿ ಮೀನುಗಳಿಗೆ ಫಾರ್ಮಾಲಿನ್ ಬಳಸಿದರೆ ಕ್ರಿಮಿನಲ್ ಕೇಸ್ ➤ ಜಿಲ್ಲಾಧಿಕಾರಿ ಜಿ. ಜಗದೀಶ್ ಎಚ್ಚರಿಕೆ

(ನ್ಯೂಸ್ ಕಡಬ) newskadaba.com ಉಡುಪಿ, ಡಿ.16: ಜಿಲ್ಲೆಯ ಮಲ್ಪೆ ಬಂದರಿನಲ್ಲಿ ಕಳೆದ ಕೆಲವು ತಿಂಗಳುಗಳಿಂದ ಹಸಿ ಮೀನುಗಳಲ್ಲಿ ಜನರ ಆರೋಗ್ಯಕ್ಕೆ ಹಾನಿಯುಂಟು ಮಾಡುವ ಫಾರ್ಮಾಲಿನ್‌ಗಳನ್ನು ವಿಪರೀತವಾಗಿ ಬಳಸುತ್ತಿರುವ ಬಗ್ಗೆ ಸಾರ್ವಜನಿಕರಿಂದ ಜಿಲ್ಲಾಧಿಕಾರಿ ಕಚೇರಿಗೆ ದೂರುಗಳು ಬಂದಿರುತ್ತವೆ.   ಈ ಹಿನ್ನೆಲೆಯಲ್ಲಿ ಹಸಿ ಮೀನುಗಳಿಗೆ ಫಾರ್ಮಾಲಿನ್ ಕಂಡುಬಂದಲ್ಲಿ ಕ್ರಿಮಿನಲ್ ಕೇಸ್ ದಾಖಲಿಸಲಾಗುವುದು ಎಂದು ಉಡುಪಿ ಜಿಲ್ಲಾಧಿಕಾರಿ ತಿಳಿಸಿದ್ದಾರೆ.ಜನರ ಆರೋಗ್ಯಕ್ಕೆ ಹಾನಿಯುಂಟು ಮಾಡುವ ಇಂತಹ ಹಾನಿಕಾರಕ ಫಾರ್ಮಾಲಿನ್‌ಗಳನ್ನು ಬಳಸಿಕೊಂಡು ಅನೈತಿಕ ವ್ಯಾಪಾರಗಳಲ್ಲಿ ತೊಡಗಿಕೊಳ್ಳುವವರ ವಿರುದ್ಧ ಆಹಾರ ಸುರಕ್ಷತೆ ಮತ್ತು ಗುಣಮಟ್ಟ

ಹಸಿ ಮೀನುಗಳಿಗೆ ಫಾರ್ಮಾಲಿನ್ ಬಳಸಿದರೆ ಕ್ರಿಮಿನಲ್ ಕೇಸ್ ➤ ಜಿಲ್ಲಾಧಿಕಾರಿ ಜಿ. ಜಗದೀಶ್ ಎಚ್ಚರಿಕೆ Read More »

ಕರಾವಳಿ

ಸುಳ್ಯ :ಹಳ್ಳಕ್ಕೆ ಉರುಳಿದ ಸ್ಕೂಟಿ ➤ ಸವಾರರಿಗೆ ಗಾಯ

(ನ್ಯೂಸ್ ಕಡಬ) newskadaba.com ಸುಳ್ಯ, ಡಿ.16: ಸ್ಕೂಟಿಯೊಂದು ಹಳ್ಳಕ್ಕೆ ಉರುಳಿಬಿದ್ದು ಸವಾರರು ಗಾಯಗೊಂಡ ಘಟನೆ ಎಲಿಮಲೆ ಸಮೀಪದ ಜಬಳೆಯಲ್ಲಿ ನಡೆದಿದೆ. ಬೊಮ್ಮಾರಿನ ಅಚ್ಚುತ ಎಂಬವರು ನಾರ್ಣಕಜೆಯಿಂದ ಎಲಿಮಲೆಯತ್ತ ಸ್ಕೂಟಿಯಲ್ಲಿ ಹೋಗುತ್ತಿದ್ದಾಗ ಜಬಳೆ ತಿರುವಿನಲ್ಲಿ ನಿಯಂತ್ರಣ ತಪ್ಪಿ ಸ್ಕೂಟಿ ಎಡಬದಿಯ ತೋಡಿಗೆ ಉರುಳಿಬಿತ್ತು.ಸ್ಕೂಟಿಯ ಹಿಂಬದಿಯಲ್ಲಿ ಕುಳಿತಿದ್ದ ಅಚ್ಚುತ ಮೋಕ್ಷಿತಾರಿಗೆ ಗಾಯವಾಗಿದ್ದು, ಗಾಯಾಳುಗಳನ್ನು ಸುಳ್ಯ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಯಿತು.  

ಸುಳ್ಯ :ಹಳ್ಳಕ್ಕೆ ಉರುಳಿದ ಸ್ಕೂಟಿ ➤ ಸವಾರರಿಗೆ ಗಾಯ Read More »

ಕರಾವಳಿ

ಬಂಟ್ವಾಳ: ಬದುಕಿನಲ್ಲಿ ಸಮೃದ್ಧಿ ಕಾಣಲು ದೇವಿ ಆರಾಧನೆಯಿಂದ ಸಾಧ್ಯವಿದೆ ➤ಮಹರ್ಷಿವಾಣಿ ಖ್ಯಾತಿಯ ಡಾ. ಆನಂದ ಗುರೂಜಿ

(ನ್ಯೂಸ್ ಕಡಬ) newskadaba.com ಬಂಟ್ವಾಳ, ಡಿ.16:ಜಗತ್ತಿಗೆ ಮಹಾಮಾರಿಯಾಗಿ ಕಾಡಿದ ಕೊರೋನದಂತಹ ಸಂಕಷ್ಟಗಳನ್ನು ದೂರಗೊಳಿಸಿ ಜನತೆಗೆ ಬದುಕಿನಲ್ಲಿ ಸಮೃದ್ಧಿ ಕಾಣಲು ದೇವಿ ಆರಾಧನೆಯಿಂದ ಸಾಧ್ಯವಿದೆ ಎಂದು ಮಹರ್ಷಿವಾಣಿ ಖ್ಯಾತಿಯ ಡಾ. ಆನಂದ ಗುರೂಜಿ ಹೇಳಿದ್ದಾರೆ. ತಾಲೂಕಿನ ರಾಯಿ ಸಮೀಪದ ಕೈತ್ರೋಡಿ ಕ್ವಾರ್ಟಸ್ ಶ್ರೀ ಮಂತ್ರದೇವತೆ,ಕೊರಗಜ್ಜ ಕ್ಷೇತ್ರದಲ್ಲಿ ಮಂಗಳವಾರ ನಡೆದ ಚಂಡಿಕಾಯಾಗಕ್ಕೆ ಪೂರ್ಣಾಹುತಿ ನೆರವೇರಿಸಿದ ಬಳಿಕ ಅವರು ಆಶೀರ್ವಚನ ನೀಡಿದರು. ಕೊರಗಜ್ಜ ದೈವ ಭಕ್ತರ ಸಂಕಷ್ಟ ಕಳೆಯಲು ಭಕ್ತಿಗೆ ತ್ವರಿತವಾಗಿ ಒಲಿಯುತ್ತಾನೆ ಎಂದರು. ಕಟೀಲು ಕ್ಷೇತ್ರದ ವೇದಮೂರ್ತಿ ಕಮಲಾದೇವಿ ಅಸ್ರಣ್ಣ

ಬಂಟ್ವಾಳ: ಬದುಕಿನಲ್ಲಿ ಸಮೃದ್ಧಿ ಕಾಣಲು ದೇವಿ ಆರಾಧನೆಯಿಂದ ಸಾಧ್ಯವಿದೆ ➤ಮಹರ್ಷಿವಾಣಿ ಖ್ಯಾತಿಯ ಡಾ. ಆನಂದ ಗುರೂಜಿ Read More »

ಕರಾವಳಿ

ಇನ್ನು ಮುಂದೆ ಅಪ್ರಾಪ್ತರು ವಾಹನ ಚಲಾಯಿಸಿದಲ್ಲಿ ರೂ. 50,000 ದಂಡ.!

(ನ್ಯೂಸ್ ಕಡಬ) newskadaba.com ಉಳ್ಳಾಲ, ಡಿ.16: ಇನ್ನು ಮುಂದೆ ಅಪ್ರಾಪ್ತರು ವಾಹನ ಚಲಾಯಿಸುವುದು ಕಂಡುಬಂದಲ್ಲಿ ಸರಕಾರ ನಿಗದಿಪಡಿಸಿದ ರೂ. 50,000 ದಂಡವನ್ನು ಕಟ್ಟುನಿಟ್ಟಾಗಿ ಪಾವತಿಸಬೇಕಾದೀತು ಎಂದು ಉಳ್ಳಾಲ ಇನ್ಸ್ ಪೆಕ್ಟರ್ ಸಂದೀಪ್ ಜಿ ಹೇಳಿದರು.   ಅವರು ತೊಕ್ಕೊಟ್ಟು ಕ್ಲಿಕ್ ಸಭಾಂಗಣದಲ್ಲಿ ಸೋಮವಾರವ ನಡೆದ ಉಳ್ಳಾಲ ಪೊಲೀಸ್ ಠಾಣೆಯ ಅಪರಾಧ ತಡೆ ಮಾಸಾಚರಣೆಯಲ್ಲಿ ಭಾಗವಹಿಸಿ ಮಾತನಾಡಿದರು.ಕೊರೊನಾ ಸಂಕಷ್ಟ ದಿಂದ ದುಡಿಮೆ ಇಲ್ಲದೆ ಜನ ತೊಂದರೆಗೀಡಾಗಿದ್ದಾರೆ. ಈ ಸಂದರ್ಭ ವಾಹನ ಸಂಚಾರದ ಕಾನೂನಿನಲ್ಲಿ ಮಾನವೀಯತೆ ತೋರಿಸಿದ್ದೇವೆ. ಆದರೆ ಇನ್ನು

ಇನ್ನು ಮುಂದೆ ಅಪ್ರಾಪ್ತರು ವಾಹನ ಚಲಾಯಿಸಿದಲ್ಲಿ ರೂ. 50,000 ದಂಡ.! Read More »

ಕರಾವಳಿ
Scroll to Top