News Kadaba

ಗೋವಾದಲ್ಲಿ ಇಬ್ಬರು ರಷ್ಯನ್ ಸ್ನೇಹಿತೆಯರ ಭೀಕರ ಹತ್ಯೆ – ಆರೋಪಿ ಬಂಧನ

(ನ್ಯೂಸ್‌ ಕಡಬ) newskadaba.com,ಜ.17 :  ಗೋವಾದಲ್ಲಿ ನಡೆದ ಭೀಕರ ಜೋಡಿ ಕೊಲೆ ಪ್ರಕರಣವೊಂದು ಬೆಳಕಿಗೆ ಬಂದಿದ್ದು, ರಷ್ಯಾದ ವ್ಯಕ್ತಿಯೊಬ್ಬ ತನ್ನ ಇಬ್ಬರು ಮಹಿಳಾ ಸ್ನೇಹಿತೆಯರ ಕತ್ತು ಸೀಳಿ ಹತ್ಯೆಗೈದಿರುವುದು ಪತ್ತೆಯಾಗಿದೆ. ಆರೋಪಿಯನ್ನು ಪೊಲೀಸರು ಬಂಧಿಸಿದ್ದಾರೆ. ಉತ್ತರ ಗೋವಾದ ಮೊರ್ಜಿಮ್ ಮತ್ತು ಅರಾಂಬೋಲ್ ಗ್ರಾಮಗಳಲ್ಲಿ ವಾಸವಾಗಿದ್ದ ರಷ್ಯನ್ ನಾಗರಿಕರಾದ ಎಲೆನಾ ವನೀವಾ (37) ಮತ್ತು ಎಲೆನಾ ಕಸ್ತನೋವಾ (37) ಅವರನ್ನು ಅಲೆಕ್ಸಿ ಲಿಯೊನೊವ್ ಎಂಬಾತ ಕೊಲೆ ಮಾಡಿದ್ದಾನೆ ಎಂದು ಪೊಲೀಸರು ತಿಳಿಸಿದ್ದಾರೆ. ಪೊಲೀಸರ ಮಾಹಿತಿಯಂತೆ, ಜನವರಿ 14ರಂದು ಮೊರ್ಜಿಮ್‌ನಲ್ಲಿ […]

ಗೋವಾದಲ್ಲಿ ಇಬ್ಬರು ರಷ್ಯನ್ ಸ್ನೇಹಿತೆಯರ ಭೀಕರ ಹತ್ಯೆ – ಆರೋಪಿ ಬಂಧನ Read More »

ಬ್ರೇಕಿಂಗ್ ನ್ಯೂಸ್

ಗದಗ: ಲಕ್ಕುಂಡಿಯಲ್ಲಿ ಉತ್ಖನನದ ವೇಳೆ ನಿಧಿ ಸಿಕ್ಕಿದರೆ ಗ್ರಾಮವೇ ಸ್ಥಳಾಂತರ

(ನ್ಯೂಸ್‌ ಕಡಬ) newskadaba.com,ಜ.17 : ಗದಗ ಜಿಲ್ಲೆಯ ಐತಿಹಾಸಿಕ ಗ್ರಾಮ ಲಕ್ಕುಂಡಿಯಲ್ಲಿ ಉತ್ಖನನ ಕಾರ್ಯ ನಡೆಯುತ್ತಿದೆ. ಈಗ ಗ್ರಾಮವನ್ನು ಸ್ಥಳಾಂತರಿಸುವ ಯಾವುದೇ ಪ್ರಸ್ತಾಪವಿಲ್ಲ.  ನಡೆಯುತ್ತಿರುವ ಉತ್ಖನನದ ವೇಳೆ ಮಹತ್ವದ ಅವಶೇಷ ಸಿಕ್ಕರೆ ಮುಂದಿನ ನಿರ್ಧಾರ ಕೈಗೊಳ್ಳಲಾಗುವುದು ಎಂದು ಜಿಲ್ಲಾಧಿಕಾರಿ ಸಿ.ಎನ್‌ ಶ್ರೀಧರ್‌ ಅವರು ತಿಳಿಸಿದ್ದಾರೆ. ಈ ಮೂಲಕ ಗ್ರಾಮವನ್ನು ಸ್ಥಳಾಂತರಿಸುವ ಮುನ್ಸೂಚನೆ ನೀಡಿದ್ದಾರೆ. ಲಕ್ಕುಂಡಿಯಲ್ಲಿ ಉತ್ಖನನ ಕಾರ್ಯ ನಡೆಯುತ್ತಿರುವ ಭಾಗಕ್ಕೆ ಸಾರ್ವಜನಿಕರ ಪ್ರವೇಶ ಹಾಗೂ ವೀಡಿಯೊ, ಫೋಟೋಗ್ರಫಿ ನಿಷೇಧಿಸಿ ಜಿಲ್ಲಾಡಳಿತ ಆದೇಶ ಹೊರಡಿಸಿದೆ. ಲಕ್ಕುಂಡಿ ಅಭಿವೃದ್ಧಿ ಪ್ರಾಧಿಕಾರದ

ಗದಗ: ಲಕ್ಕುಂಡಿಯಲ್ಲಿ ಉತ್ಖನನದ ವೇಳೆ ನಿಧಿ ಸಿಕ್ಕಿದರೆ ಗ್ರಾಮವೇ ಸ್ಥಳಾಂತರ Read More »

ಕರ್ನಾಟಕ

ಏ.1 ರಿಂದ ಟೋಲ್ ಪ್ಲಾಜಾಗಳಲ್ಲಿ ನಗದು ಪಾವತಿ ಬಂದ್ – ಹೊಸ ನಿಯಮ ಜಾರಿ

(ನ್ಯೂಸ್‌ ಕಡಬ) newskadaba.com,ಜ.17 ಬೆಂಗಳೂರು : ಕೇಂದ್ರ ರಸ್ತೆ ಸಾರಿಗೆ ಮತ್ತು ಹೆದ್ದಾರಿ ಸಚಿವಾಲಯವು ಏಪ್ರಿಲ್ 1 ರಿಂದ ರಾಷ್ಟ್ರೀಯ ಹೆದ್ದಾರಿ ಟೋಲ್ ಪ್ಲಾಜಾಗಳಲ್ಲಿ ನಗದು ಪಾವತಿಯನ್ನು ನಿಷೇಧಿಸಲು ಸಜ್ಜಾಗಿದೆ. ದಟ್ಟಣೆಯನ್ನು ಕಡಿಮೆ ಮಾಡಲು ಮತ್ತು ಪ್ರಯಾಣವನ್ನು ಸುಗಮಗೊಳಿಸುವ ಉದ್ದೇಶದಿಂದ ಪ್ರಯಾಣಿಕರು ಟೋಲ್‌ಗಳನ್ನು ಪಾವತಿಸಲು FASTag ಅಥವಾ UPI ಅನ್ನು ಬಳಸಬೇಕಾಗುತ್ತದೆ. ಇನ್ನೂ ಯಾವುದೇ ಅಧಿಕೃತ ಅಧಿಸೂಚನೆಯನ್ನು ಹೊರಡಿಸಲಾಗಿಲ್ಲವಾದರೂ, ಸಚಿವಾಲಯವು ಸುಗಮ ಪರಿವರ್ತನೆಗೆ ಸಿದ್ಧತೆ ನಡೆಸುತ್ತಿದೆ. ಈ ಕ್ರಮವು ದೀರ್ಘ ಸರತಿ ಸಾಲುಗಳನ್ನು ನಿವಾರಿಸುತ್ತದೆ ಮತ್ತು ಪ್ರಯಾಣವನ್ನು ಹೆಚ್ಚು

ಏ.1 ರಿಂದ ಟೋಲ್ ಪ್ಲಾಜಾಗಳಲ್ಲಿ ನಗದು ಪಾವತಿ ಬಂದ್ – ಹೊಸ ನಿಯಮ ಜಾರಿ Read More »

ಕರ್ನಾಟಕ, ಬ್ರೇಕಿಂಗ್ ನ್ಯೂಸ್, ರಾಷ್ಟ್ರೀಯ ನ್ಯೂಸ್

ಎಸ್ಸೆಸ್ಸೆಲ್ಸಿ, ದ್ವಿತೀಯ ಪಿಯುಸಿ ಪ್ರಶ್ನೆಪತ್ರಿಕೆ ಸೋರಿಕೆಯಾದ್ರೆ ಪ್ರಿನ್ಸಿಪಾಲ್ ಮನೆಗೆ ಫಿಕ್ಸ್! ಶಿಕ್ಷಣ ಇಲಾಖೆಯಿಂದ ‘ಬಿಗ್‌ ಶಾಕ್‌’ ನೀಡುವ ಸುತ್ತೋಲೆ

(ನ್ಯೂಸ್‌ ಕಡಬ) newskadaba.com,ಜ.17 ಬೆಂಗಳೂರು : ಎಸ್ಸೆಸ್ಸೆಲ್ಸಿ, ದ್ವಿತೀಯ ಪಿಯುಸಿ ಪೂರ್ವ ಸಿದ್ಧತಾ ಪರೀಕ್ಷೆ 1ರ ಕೆಲ ಪ್ರಶ್ನೆ ಪತ್ರಿಕೆಗಳು ಸೋರಿಕೆಯಾದ ಹಿನ್ನೆಲೆಯಲ್ಲಿ ಜ.19ರಿಂದ ಆರಂಭವಾಗಲಿರುವ ಪೂರ್ವ ಸಿದ್ಧತಾ ಪರೀಕ್ಷೆ 2ರಲ್ಲಿ ಮತ್ತೆ ಇಂಥ ಲೋಪಗಳಾಗದಂತೆ ಶಿಕ್ಷಣ ಇಲಾಖೆ(ಪದವಿ ಪೂರ್ವ) ಹಲವು ಬಿಗಿ ಕ್ರಮಗಳನ್ನು ಕೈಗೊಂಡಿದೆ. ನೋಡಲ್‌ ಕೇಂದ್ರದಿಂದ ಪ್ರಶ್ನೆ ಪತ್ರಿಕೆ ಸೋರಿಕೆಯಾದರೆ ಆ ಕೇಂದ್ರದ ಪ್ರಾಂಶುಪಾಲರ ಮೇಲೆ ಎಫ್‌ಐಆರ್‌ ದಾಖಲಿಸಿ ಕಾನೂನು ಕ್ರಮ ಕೈಗೊಳ್ಳುವ ಜೊತೆಗೆ ನಿಯಮಾನುಸಾರ ಶಿಸ್ತುಕ್ರಮ ಕೈಗೊಳ್ಳಲಾಗುವುದು. ವಿದ್ಯಾರ್ಥಿಗಳು ಪ್ರಶ್ನೆ ಪತ್ರಿಕೆಗಳನ್ನು ವಾಟ್ಸ್‌ಅಪ್‌/ ಯೂಟ್ಯೂಬ್‌/

ಎಸ್ಸೆಸ್ಸೆಲ್ಸಿ, ದ್ವಿತೀಯ ಪಿಯುಸಿ ಪ್ರಶ್ನೆಪತ್ರಿಕೆ ಸೋರಿಕೆಯಾದ್ರೆ ಪ್ರಿನ್ಸಿಪಾಲ್ ಮನೆಗೆ ಫಿಕ್ಸ್! ಶಿಕ್ಷಣ ಇಲಾಖೆಯಿಂದ ‘ಬಿಗ್‌ ಶಾಕ್‌’ ನೀಡುವ ಸುತ್ತೋಲೆ Read More »

ಕರಾವಳಿ, ಕರ್ನಾಟಕ, ಬ್ರೇಕಿಂಗ್ ನ್ಯೂಸ್

ಕರಾವಳಿ ಉತ್ಸವದ ಅಂಗವಾಗಿ ತಣ್ಣೀರು ಬಾವಿ ಬೀಚ್‌ನಲ್ಲಿ ಅಂತಾರಾಷ್ಟ್ರೀಯ ಗಾಳಿಪಟ ಉತ್ಸವ

(ನ್ಯೂಸ್‌ ಕಡಬ) newskadaba.com,ಜ.17 ಮಂಗಳೂರುಕರಾವಳಿ ಉತ್ಸವದ ಅಂಗವಾಗಿ ತಣ್ಣೀರು ಬಾವಿ ಬ್ಲೂ ಬೇ ಬೀಚ್ಲ್ಲಿ 9ನೇ ಅವೃತ್ತಿಯ ಅಂತಾರಾಷ್ಟ್ರೀಯ ಗಾಳಿಪಟ ಉತ್ಸವ ಜ. 17 ಮತ್ತು 18ರಂದು ನಡೆಯಲಿದೆ. ಸಂಜೆ 3 ಗಂಟೆಗೆ ಆರಂಭವಾಗುವ ಉತ್ಸವದಲ್ಲಿ ಭಾಗವಹಿಸಲು 15 ದೇಶಗಳ 30 ಅಂತರಾಷ್ಟ್ರೀಯ ಗಾಳಿಪಟುಗಳು ಈಗಾಗಲೇ ಮಂಗಳೂರಿಗೆ ಆಗಮಿಸಿದ್ದಾರೆ. ಭಾರತ ಮತ್ತು ವಿದೇಶಗಳಿಂದ ಸೇರಿ ಒಟ್ಟು 62 ನುರಿತ ಗಾಳಿಪಟ ಹಾರಾಟಗಾರರು ತಮ್ಮ ವೈವಿಧ್ಯಮಯ ಗಾಳಿಪಟಗಳನ್ನು ಬಾನಂಗಳದಲ್ಲಿ ಹಾರಿಸಲಿದ್ದಾರೆ ಎಂದು ಜಿಲ್ಲಾಧಿಕಾರಿ ದರ್ಶನ್ ಎಚ್.ವಿ. ತಿಳಿಸಿದರು. ಜಿಲ್ಲಾಧಿಕಾರಿ

ಕರಾವಳಿ ಉತ್ಸವದ ಅಂಗವಾಗಿ ತಣ್ಣೀರು ಬಾವಿ ಬೀಚ್‌ನಲ್ಲಿ ಅಂತಾರಾಷ್ಟ್ರೀಯ ಗಾಳಿಪಟ ಉತ್ಸವ Read More »

ಕರಾವಳಿ, ಕರ್ನಾಟಕ, ಬ್ರೇಕಿಂಗ್ ನ್ಯೂಸ್

ಇಂದಿನಿಂದ ರಾಜ್ಯದ ಹವಾಮಾನ ವರದಿ

(ನ್ಯೂಸ್‌ ಕಡಬ) newskadaba.com,ಜ.17: ತಮಿಳುನಾಡಿನ ಕರಾವಳಿಯಲ್ಲಿ ಉಂಟಾಗಿರುವ ಚಂಡಮಾರುತದ ಪರಿಣಾಮವಾಗಿ ಕರ್ನಾಟಕದ ಕೆಲ ಜಿಲ್ಲೆಗಳಲ್ಲಿ ಸಾಧಾರಣ ಮಳೆಯಾಗುವ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ಉಡುಪಿ, ಉತ್ತರ ಕನ್ನಡ, ಚಾಮರಾಜನಗರ, ಚಿಕ್ಕಮಗಳೂರು, ಹಾಸನ, ಕೊಡಗು, ಮೈಸೂರಿನಲ್ಲಿ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ಬಾಗಲಕೋಟೆ, ಬೀದರ್, ಧಾರವಾಡ, ಗದಗ, ಹಾವೇರಿ, ಕೊಪ್ಪಳ, ರಾಯಚೂರು, ವಿಜಯಪುರ, ಯಾದಗಿರಿ, ಚಿತ್ರದುರ್ಗ, ದಾವಣಗೆರೆ, ಕೋಲಾರ, ಮಂಡ್ಯ, ರಾಮನಗರ, ಶಿವಮೊಗ್ಗದಲ್ಲಿ ಒಣಹವೆ ಇರಲಿದೆ. ಬೆಂಗಳೂರಿನಲ್ಲಿ ಮೋಡಕವಿದ ವಾತಾವರಣವಿದ್ದು, ಸಾಧಾರಣ

ಇಂದಿನಿಂದ ರಾಜ್ಯದ ಹವಾಮಾನ ವರದಿ Read More »

ಕರಾವಳಿ, ಕರ್ನಾಟಕ, ಬ್ರೇಕಿಂಗ್ ನ್ಯೂಸ್

ಅಯ್ಯಪ್ಪ ಚಿನ್ನ ಕಳುವು ಆರೋಪಿ ಶಂಕರ ದಾಸ್‌‍ ಒಬ್ಬ ಆದರ್ಶ ಕಮ್ಯುನಿಸ್ಟ್‌

(ನ್ಯೂಸ್‌ ಕಡಬ) newskadaba.com,: ಶಬರಿಮಲೆ ಚಿನ್ನ ನಷ್ಟ ಪ್ರಕರಣಗಳಲ್ಲಿ ಬಂಧಿಸಲ್ಪಟ್ಟ ಟಿಡಿಬಿ ಮಾಜಿ ಸದಸ್ಯ ಕೆ ಪಿ ಶಂಕರ ದಾಸ್‌‍ ಒಬ್ಬ ಆದರ್ಶ ಕಮ್ಯುನಿಸ್ಟ್‌‍ ಎಂದು ಸಿಪಿಐ ರಾಜ್ಯ ಕಾರ್ಯದರ್ಶಿ ಬಿನೋಯ್‌ ವಿಶ್ವಂ ಹೇಳಿದ್ದಾರೆ. ದಾಸ್‌‍ ಉದ್ದೇಶಪೂರ್ವಕವಾಗಿ ಯಾವುದೇ ತಪ್ಪು ಮಾಡುವುದಿಲ್ಲ ಎಂದು ಪಕ್ಷದಲ್ಲಿರುವ ಎಲ್ಲರಿಗೂ ತಿಳಿದಿದೆ ಎಂದು ವಿಶ್ವಂ ಸುದ್ದಿಗಾರರಿಗೆ ತಿಳಿಸಿದರು.ಅವರು ಆದರ್ಶ ಕಮ್ಯುನಿಸ್ಟ್‌‍. ಆದರೆ, ಅವರು ಯಾವುದೇ ಅಜಾಗರೂಕ ತಪ್ಪು ಮಾಡಿದ್ದಾರೆಯೇ ಎಂದು ನಮಗೆ ತಿಳಿದಿಲ್ಲ. ಆದ್ದರಿಂದ, ತನಿಖೆ ಮುಂದುವರಿಯಲಿ ಎಂದು ಅವರು ಹೇಳಿದರು.

ಅಯ್ಯಪ್ಪ ಚಿನ್ನ ಕಳುವು ಆರೋಪಿ ಶಂಕರ ದಾಸ್‌‍ ಒಬ್ಬ ಆದರ್ಶ ಕಮ್ಯುನಿಸ್ಟ್‌ Read More »

ಕರಾವಳಿ, ಬ್ರೇಕಿಂಗ್ ನ್ಯೂಸ್

ಲಕ್ಕುಂಡಿ ಗ್ರಾಮದಲ್ಲಿ ನಿಧಿ ಹುಡುಕಾಟ ಆರಂಭ

(ನ್ಯೂಸ್‌ ಕಡಬ) newskadaba.com,: ವಾಸ್ತುಶಿಲ್ಪ ಪಾರಂಪರಿಕ ತಾಣ, ಐತಿಹಾಸಿಕ ಲಕ್ಕುಂಡಿ ಗ್ರಾಮದಲ್ಲಿ ಮನೆ ನಿರ್ಮಾಣದ ಸಮಯದಲ್ಲಿ ಚಿನ್ನದ ಆಭರಣಗಳು ಪತ್ತೆಯಾದ ನಂತರ ಕರ್ನಾಟಕ ಸರ್ಕಾರ ಇಂದಿನಿಂದ ನಿಧಿ ಹುಡುಕಾಟಕ್ಕೆ ಮುಂದಾಗಿದೆ.ಲಕ್ಕುಂಡಿಯ ಕೋಟೆ ವೀರಭದ್ರೇಶ್ವರ ದೇವಾಲಯದ ಆವರಣದಲ್ಲಿ ಪೂರ್ಣ ಪ್ರಮಾಣದ ಉತ್ಖನನವನ್ನು ಪ್ರಾರಂಭಿಸಲಾಗಿದೆ.ಪ್ರವಾಸೋದ್ಯಮ ಇಲಾಖೆ, ಪುರಾತತ್ವ, ವಸ್ತು ಸಂಗ್ರಹಾಲಯಗಳು ಮತ್ತು ಪರಂಪರೆ ಇಲಾಖೆ, ಲಕ್ಕುಂಡಿ ಪರಂಪರೆ ಅಭಿವೃದ್ಧಿ ಪ್ರಾಧಿಕಾರ ಮತ್ತು ಜಿಲ್ಲಾಡಳಿತ ಜಂಟಿಯಾಗಿ ಈ ಯೋಜನೆಯನ್ನು ಕೈಗೆತ್ತಿಕೊಳ್ಳುತ್ತಿವೆ.ದೇವಾಲಯದ ಆವರಣದಲ್ಲಿ ಉತ್ಖನನ ನಡೆಸಲು ಜೆಸಿಬಿಗಳು, ಟ್ರಕ್‌ಗಳು ಮತ್ತು ಟ್ರ್ಯಾಕ್ಟರ್‌ಗಳನ್ನು ಸ್ಥಳಾಂತರಿಸಲಾಯಿತು.

ಲಕ್ಕುಂಡಿ ಗ್ರಾಮದಲ್ಲಿ ನಿಧಿ ಹುಡುಕಾಟ ಆರಂಭ Read More »

ಬ್ರೇಕಿಂಗ್ ನ್ಯೂಸ್

ಕಾರ್ಕಳ: ಮನೆಯಲ್ಲಿ ಗ್ಯಾಸ್ ಸಿಲಿಂಡರ್ ಸ್ಫೋಟ; 3 ಲಕ್ಷ ರೂ. ನಷ್ಟ

(ನ್ಯೂಸ್‌ ಕಡಬ) newskadaba.com, :ಮನೆಯೊಂದರಲ್ಲಿ ಗ್ಯಾಸ್ ಸಿಲಿಂಡರ್ ಸ್ಫೋಟಗೊಂಡು ಮನೆಯ ಗೋಡೆ ಸಹಿತ ಹಲವು ಸೊತ್ತುಗಳು ಹಾನಿಗೀಡಾಗಿ ಸುಮಾರು 3 ಲಕ್ಷ ರೂ. ನಷ್ಟ ಸಂಭವಿಸಿರುವ ಘಟನೆ ಸಾಣೂರು ಗ್ರಾಮದ ಮುದ್ದಣ್ಣ ನಗರ ಎಂಬಲ್ಲಿ ಗುರುವಾರ ತಡರಾತ್ರಿ 1:30ರ ಸುಮಾರಿಗೆ ನಡೆದಿದೆ. ಮುದ್ದಣ್ಣ ನಗರದ ವಾರಿಜಾ ಎಂಬುವವರ ಮನೆಯಲ್ಲಿ ಈ ಅವಘಡ ಸಂಭವಿಸಿದೆ. ಅಡುಗೆ ಕೋಣೆಯ ಹೊರಭಾಗದ ಕೊಠಡಿಯಲ್ಲಿದ್ದ ಗ್ಯಾಸ್ ಸಿಲಿಂಡರ್ ಸ್ಫೋಟಗೊಂಡಿದೆ. ಸ್ಫೋಟದ ತೀವ್ರತೆಗೆ ಮನೆಯ ಗೋಡೆ, ಫರ್ನಿಚರ್, ವಾಷಿಂಗ್ ಮಷೀನ್, ಪಾತ್ರೆ ಪಗಡಿ ಹಾಗೂ

ಕಾರ್ಕಳ: ಮನೆಯಲ್ಲಿ ಗ್ಯಾಸ್ ಸಿಲಿಂಡರ್ ಸ್ಫೋಟ; 3 ಲಕ್ಷ ರೂ. ನಷ್ಟ Read More »

ಕರಾವಳಿ, ಕರ್ನಾಟಕ, ಬ್ರೇಕಿಂಗ್ ನ್ಯೂಸ್

ಅಂಚೆ ಇಲಾಖೆಯ ಹೊಸ ಯುಗ ಆರಂಭ, ಲಾಜಿಸ್ಟಿಕ್ಸ್ ಸೇವೆಗೆ ಎಂಟ್ರಿ ಮೊದಲ ಡೆಲಿವರಿ ಯಶಸ್ವಿ

(ನ್ಯೂಸ್‌ ಕಡಬ) newskadaba.com, ನವದೆಹಲಿ: ಓಪನ್ ನೆಟ್‌ವರ್ಕ್ ಫಾರ್ ಡಿಜಿಟಲ್ ಕಾಮರ್ಸ್ ಪ್ಲಾಟ್‌ಫಾರ್ಮ್‌ನಲ್ಲಿ ಇರಿಸಲಾದ ಆರ್ಡರ್‌ಗಳಿಗೆ ಲಾಜಿಸ್ಟಿಕ್ಸ್ ಸೇವಾ ಪೂರೈಕೆದಾರರಾಗಿ ಅಂಚೆ ಇಲಾಖೆ ಅಧಿಕೃತವಾಗಿ ಸೇವೆ ಆರಂಭಿಸಿದೆ. ಈ ಮೂಲಕ ಡಿಜಿಟಲ್ ವಾಣಿಜ್ಯ ಕ್ಷೇತ್ರದಲ್ಲಿ ಅಂಚೆ ಇಲಾಖೆ ತನ್ನ ಹಾಜರಾತಿಯನ್ನು ಮತ್ತಷ್ಟು ವಿಸ್ತರಿಸಿದೆ. ಗುರುವಾರ ಅಂಚೆ ಇಲಾಖೆ ತನ್ನ ಮೊದಲ ONDC ಪಾರ್ಸೆಲ್ ಅನ್ನು ಯಶಸ್ವಿಯಾಗಿ ವಿತರಣೆ ಮಾಡಿದ್ದು, ಇದು ಸಂಸ್ಥೆಯ ಡಿಜಿಟಲ್ ಕಾಮರ್ಸ್ ಪ್ರಯಾಣದಲ್ಲಿ ಒಂದು ಪ್ರಮುಖ ಮೈಲಿಗಲ್ಲಾಗಿ ಗುರುತಿಸಲಾಗಿದೆ. ಜನವರಿ 13ರಂದು ಮೊದಲ ಆರ್ಡರ್

ಅಂಚೆ ಇಲಾಖೆಯ ಹೊಸ ಯುಗ ಆರಂಭ, ಲಾಜಿಸ್ಟಿಕ್ಸ್ ಸೇವೆಗೆ ಎಂಟ್ರಿ ಮೊದಲ ಡೆಲಿವರಿ ಯಶಸ್ವಿ Read More »

ಕರಾವಳಿ, ಕರ್ನಾಟಕ, ಬ್ರೇಕಿಂಗ್ ನ್ಯೂಸ್
Scroll to Top