News Kadaba

ಬಂಟ್ವಾಳ ತಹಶಿಲ್ದಾರ್ ಕಚೇರಿಯ ಮೆಟ್ಟಿಲ ಮೇಲೆ ಮನೆಗೆ ಹೋಗಲು ರಸ್ತೆಗಾಗಿ ಧರಣಿ ಕುಳಿತ ಕುಟುಂಬ!

(ನ್ಯೂಸ್‌ ಕಡಬ) newskadaba.com ,ಜ.10  ಬಂಟ್ವಾಳ: ಮನೆಗೆ ಹೋಗಲು ರಸ್ತೆ ಮಾಡಿಕೊಡಿ ಎಂದು ಕುಟುಂಬವೊಂದು ಧರಣಿ ಕುಳಿತಕೊಂಡ ಘಟನೆ ನಡೆದಿದ್ದು, ಇವರ ಹೋರಾಟಕ್ಕೆ ಅಂಬೇಡ್ಕರ್ ತತ್ವ ಹಿತರಕ್ಷಣಾ ವೇದಿಕೆ ಕೈ ಜೋಡಿಸಿದೆ.ಪುಣಚ ಗ್ರಾಮದ ಸುಣ್ಣಂಗಳ ರಾಮಣ್ಣ ನಾಯ್ಕ ಹಾಗೂ ಅವರ ಪತ್ನಿ ಸುನಂದಾ ಮತ್ತು ಮಕ್ಕಳು ರಸ್ತೆಗಾಗಿ ತಹಶಿಲ್ದಾರ್ ಕಚೇರಿಯ ಮುಂಭಾಗದಲ್ಲಿ ಧರಣಿ ಕುಳಿತಕೊಂಡಿದ್ದಾರೆ. ಕಳೆದ 75 ವರ್ಷಗಳಿಂದ ಕಾಲುದಾರಿ ಮಾತ್ರ ಇದ್ದು ರಸ್ತೆಗಾಗಿ ನಿರಂತರವಾಗಿ ಹೋರಾಟ ಮಾಡುತ್ತಲೇ ಬಂದಿದ್ದು, ಹೊರತು ಲಾಭವಾಗಿಲ್ಲ ಎಂದು ಪ್ರತಿಭಟನೆ ನಿರತ […]

ಬಂಟ್ವಾಳ ತಹಶಿಲ್ದಾರ್ ಕಚೇರಿಯ ಮೆಟ್ಟಿಲ ಮೇಲೆ ಮನೆಗೆ ಹೋಗಲು ರಸ್ತೆಗಾಗಿ ಧರಣಿ ಕುಳಿತ ಕುಟುಂಬ! Read More »

ಕರಾವಳಿ, ಕರ್ನಾಟಕ, ಬ್ರೇಕಿಂಗ್ ನ್ಯೂಸ್

ಬಂಟ್ವಾಳ : ಚಾಲಕನ ನಿಯಂತ್ರಣ ತಪ್ಪಿ ಹೊಂಡಕ್ಕೆ ಉರುಳಿದ ಆಟೋ – ವಿದ್ಯಾರ್ಥಿಗಳಿಗೆ ಗಾಯ

(ನ್ಯೂಸ್‌ ಕಡಬ) newskadaba.com ,ಜ.10  ಬಂಟ್ವಾಳ: ತಾಲೂಕಿನ ಅಲ್ಲಿಪಾದೆ ಸಮೀಪದ ಉಜಿರಾಡಿಯಲ್ಲಿ ರಿಕ್ಷಾವೊಂದು ಚಾಲಕ‌ನ ನಿಯಂತ್ರಣ ಕಳೆದುಕೊಂಡು ರಸ್ತೆ ಬದಿಯ ಹೊಂಡಕ್ಕೆ ಉರುಳಿದ ಘಟನೆ ನಡೆದಿದೆ. ಘಟನೆಯಲ್ಲಿ ಆಟೋ ರಿಕ್ಷಾ ಚಾಲಕ, ಪೆರಿಯಪಾದೆ ನಿವಾಸಿ ಸಂಶುದ್ದೀನ್ ಹಾಗೂ ಇತರ ನಾಲ್ಕೈದು ಮಂದಿ ವಿದ್ಯಾರ್ಥಿಗಳು ಗಾಯಗೊಂಡು ಬಂಟ್ವಾಳ ಸರಕಾರಿ ಆಸ್ಪತ್ರೆಗೆ ತೆರಳಿದ್ದಾರೆ. ಅವರು ಶಾಲೆಯಿಂದ ವಿದ್ಯಾರ್ಥಿಗಳನ್ನು ಮನೆಗೆ ಕರೆದುಕೊಂಡು ಹೋಗುತ್ತಿದ್ದಾಗ ಘಟನೆ ನಡೆದಿದ್ದು, ಬಂಟ್ವಾಳ ಸಂಚಾರ ಪೊಲೀಸರು ಸ್ಥಳಕ್ಕೆ ತೆರಳಿ ಪರಿಶೀಲನೆ ನಡೆಸಿದ್ದಾರೆ.

ಬಂಟ್ವಾಳ : ಚಾಲಕನ ನಿಯಂತ್ರಣ ತಪ್ಪಿ ಹೊಂಡಕ್ಕೆ ಉರುಳಿದ ಆಟೋ – ವಿದ್ಯಾರ್ಥಿಗಳಿಗೆ ಗಾಯ Read More »

ಕರಾವಳಿ, ಕರ್ನಾಟಕ, ಬ್ರೇಕಿಂಗ್ ನ್ಯೂಸ್

ಇಂದಿನ ಹವಾಮಾನ ವರದಿ

(ನ್ಯೂಸ್‌ ಕಡಬ) newskadaba.com ,ರಾಜ್ಯದ ಉತ್ತರ ಒಳನಾಡಿನಲ್ಲಿ ಶೀತ ಗಾಳಿ ಬೀಸುವ ಸಾಧ್ಯತೆಯಿದೆ. ಮುಖ್ಯವಾಗಿ ಬೀದರ್‌, ಕಲಬುರಗಿ, ವಿಜಯಪುರದಲ್ಲಿ ಶೀತಗಾಳಿ ಬೀಸಲಿದ್ದು ಹವಾಮಾನ ಇಲಾಖೆ ಯೆಲ್ಲೋ ಅಲರ್ಟ್‌ ಜಾರಿ ಮಾಡಿದೆ. ಬೆಂಗಳೂರಿನಲ್ಲಿ ಗರಿಷ್ಠ ತಾಪಮಾನ 25 ಡಿಗ್ರಿ ಸೆಲ್ಸಿಯಸ್ ಇರಲಿದ್ದು, ಕನಿಷ್ಠ ತಾಪಮಾನ 14 ಡಿಗ್ರಿ ಸೆಲ್ಸಿಯಸ್ ದಾಖಲಾಗಲಿದೆ. ಚಿಕ್ಕಬಳ್ಳಾಪುರದಲ್ಲಿ ಗರಿಷ್ಠ ತಾಪಮಾನ 24 ಡಿಗ್ರಿ ಸೆಲ್ಸಿಯಸ್ ಇರಲಿದ್ದು, ಕನಿಷ್ಠ ತಾಪಮಾನ 14 ಡಿಗ್ರಿ ಸೆಲ್ಸಿಯಸ್ ದಾಖಲಾಗಲಿದೆ    

ಇಂದಿನ ಹವಾಮಾನ ವರದಿ Read More »

ಕರಾವಳಿ, ಬ್ರೇಕಿಂಗ್ ನ್ಯೂಸ್

ಶೀಘ್ರವೇ ಆರ್‌ಸಿಬಿ ಅಭಿಮಾನಿಗಳಿಗೆ ಗುಡ್ ನ್ಯೂಸ್!

(ನ್ಯೂಸ್‌ ಕಡಬ) newskadaba.com ,ಜ.09: ಮತ್ತೆ ಕ್ರಿಕೆಟ್ ವೈಭವವನ್ನ ಜನರೆದುರುತರಲು ಚಿನ್ನಸ್ವಾಮಿ ಸ್ಟೇಡಿಯಂ ಸಿದ್ದವಾಗುತ್ತಿದೆ. ಹಿಂದೆ ಆರ್‌ಸಿಬಿ ವಿಜಯೋತ್ಸವದ ಸಂದರ್ಭದಲ್ಲಿ ಚಿನ್ನಸ್ವಾಮಿ ಸ್ಟೇಡಿಯಂನಲ್ಲಿ ಸಂಭವಿಸಿದ ಭೀಕರ ಕಾಲ್ತುಳಿತದಲ್ಲಿ 11 ಮಂದಿ ಮೃತಪಟ್ಟ ಘಟನೆ ಇಡೀ ರಾಜ್ಯವನ್ನೇ ಬೆಚ್ಚಿಬೀಳಿಸಿತ್ತು. ಈ ದುರಂತದಿಂದ ಸರ್ಕಾರ ಮತ್ತು ಪೊಲೀಸ್ ಇಲಾಖೆ ತೀವ್ರ ಟೀಕೆಗೆ ಒಳಗಾಗಿದ್ದು, ಸೂಕ್ತ ಭದ್ರತೆ ಒದಗಿಸದ ಹಿನ್ನೆಲೆಯಲ್ಲಿ ಆಗಿನ ಪೊಲೀಸ್ ಕಮಿಷನರ್ ದಯಾನಂದ್ ಸೇರಿದಂತೆ ಹಲವರ ವಿರುದ್ಧ ಕ್ರಮ ಕೈಗೊಳ್ಳಲಾಗಿತ್ತು. ಆರ್‌ಸಿಬಿ ಮ್ಯಾನೇಜ್‌ಮೆಂಟ್ ಸೇರಿದಂತೆ ಕೆಲವರ ಬಂಧನವೂ ನಡೆದಿತ್ತು.

ಶೀಘ್ರವೇ ಆರ್‌ಸಿಬಿ ಅಭಿಮಾನಿಗಳಿಗೆ ಗುಡ್ ನ್ಯೂಸ್! Read More »

ಕ್ರೀಡಾ ನ್ಯೂಸ್

ಸೋಷಿಯಲ್ ಮೀಡಿಯಾ ಶಾಲಾ-ಕಾಲೇಜುಗಳಲ್ಲಿ ಬಗ್ಗೆ ಜಾಗೃತಿ ಮೂಡಿಸಿ: ಪೊಲೀಸರಿಗೆ ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್ ಸಲಹೆ

(ನ್ಯೂಸ್‌ ಕಡಬ) newskadaba.com ,ಜ.09: ಬೆಂಗಳೂರು: ಸಾಮಾಜಿಕ ಮಾಧ್ಯಮಗಳ ಬಗ್ಗೆ ಜಾಗೃತಿ ಮೂಡಿಸಲು ಮತ್ತು ಮಕ್ಕಳನ್ನು ಶೋಷಣೆಯಿಂದ ರಕ್ಷಿಸಲು ಪೊಲೀಸರು ವಾರದಲ್ಲಿ ನಾಲ್ಕು ದಿನ ಶಾಲಾ-ಕಾಲೇಜುಗಳಿಗೆ ಭೇಟಿ ನೀಡಬೇಕು ಎಂದು ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್ ಸಲಹೆ ನೀಡಿದ್ದಾರೆ. ಕರ್ನಾಟಕ ರಾಜ್ಯ ಮಕ್ಕಳ ಹಕ್ಕುಗಳ ರಕ್ಷಣಾ ಆಯೋಗ (KSCPCR) ವಿಕಾಸ ಸೌಧದಲ್ಲಿ ಮಕ್ಕಳ ನಿಧಿ ಭಾರತದ ಸಹಯೋಗದೊಂದಿಗೆ ಆಯೋಜಿಸಿದ್ದ ‘ಮಕ್ಕಳ ಆನ್‌ಲೈನ್ ಸುರಕ್ಷತೆ’ ಕುರಿತು ಜಿಲ್ಲಾ ಮಟ್ಟದ ಪೊಲೀಸ್ ಅಧಿಕಾರಿಗಳ ಕಾರ್ಯಾಗಾರವನ್ನು ಉದ್ಘಾಟಿಸಿ ಅವರು

ಸೋಷಿಯಲ್ ಮೀಡಿಯಾ ಶಾಲಾ-ಕಾಲೇಜುಗಳಲ್ಲಿ ಬಗ್ಗೆ ಜಾಗೃತಿ ಮೂಡಿಸಿ: ಪೊಲೀಸರಿಗೆ ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್ ಸಲಹೆ Read More »

ಕರ್ನಾಟಕ, ಬ್ರೇಕಿಂಗ್ ನ್ಯೂಸ್

ಶಬರಿಮಲೆ ದರ್ಶನ ಮುಗಿಸಿ ಮರಳುತ್ತಿದ್ದ ಮಾಲಾಧಾರಿಗಳಿಗೆ ಭೀಕರ ಅಪಘಾತ – ಬಾಲಕಿ ಸೇರಿ ನಾಲ್ವರು ಸ್ಥಳದಲ್ಲೇ ಸಾವು

(ನ್ಯೂಸ್‌ ಕಡಬ) newskadaba.com ,ಜ.09: ಶಬರಿಮಲೆ ಶ್ರೀ ಅಯ್ಯಪ್ಪ ಸ್ವಾಮಿಯ ದರ್ಶನ ಮುಗಿಸಿ ವಾಪಸ್ ಕೊಪ್ಪಳಕ್ಕೆ ತೆರಳುತ್ತಿದ್ದ ಕ್ರೂಸರ್ ವಾಹನವು ರಸ್ತೆ ಬದಿಯಲ್ಲಿ ನಿಂತಿದ್ದ ಲಾರಿಗೆ ಡಿಕ್ಕಿ ಹೊಡೆದ ಪರಿಣಾಮ, ಏಳು ವರ್ಷದ ಬಾಲಕಿ ಸೇರಿ ನಾಲ್ವರು ಸ್ಥಳದಲ್ಲೇ ಮೃತಪಟ್ಟ ದಾರುಣ ಘಟನೆ ಶುಕ್ರವಾರ ಮುಂಜಾನೆ ಕೋರಾ ಪೊಲೀಸ್ ಠಾಣಾ ವ್ಯಾಪ್ತಿಯ ಬೆಳ್ಳಾವಿ ಕ್ರಾಸ್ ಬಳಿ ಸಂಭವಿಸಿದೆ. ಕೊಪ್ಪಳ ಜಿಲ್ಲೆಯ ಕುಕ್ಕನೂರು ಹಾಗೂ ಗದ್ದಿಗೆರೆ ತಾಂಡಾದ ಒಟ್ಟು 10 ಮಂದಿ ಮಾಲಾಧಾರಿಗಳು ಜನವರಿ 5ರಂದು ಶಬರಿಮಲೆಗೆ ತೆರಳಿದ್ದರು.

ಶಬರಿಮಲೆ ದರ್ಶನ ಮುಗಿಸಿ ಮರಳುತ್ತಿದ್ದ ಮಾಲಾಧಾರಿಗಳಿಗೆ ಭೀಕರ ಅಪಘಾತ – ಬಾಲಕಿ ಸೇರಿ ನಾಲ್ವರು ಸ್ಥಳದಲ್ಲೇ ಸಾವು Read More »

ಕರ್ನಾಟಕ, ಬ್ರೇಕಿಂಗ್ ನ್ಯೂಸ್

ಅತಿ ಭಾರದ ಶಾಲಾ ಬ್ಯಾಗ್‌ ಹೊತ್ತು ವಿದ್ಯಾರ್ಥಿಯ ಕೈ ಮುರಿತ!

(ನ್ಯೂಸ್‌ ಕಡಬ) newskadaba.com ,ಜ.09: ಅತಿ ಭಾರವಾದ ಶಾಲಾ ಬ್ಯಾಗ್ ಹೊತ್ತುಕೊಂಡು ಹೋದ ಪರಿಣಾಮ 6ನೇ ತರಗತಿ ವಿದ್ಯಾರ್ಥಿಯೊಬ್ಬನ ಬಲಗೈ ಮುರಿದ ಘಟನೆ ಉತ್ತರ ಕನ್ನಡ ಜಿಲ್ಲೆಯ ಕಾರವಾರದಲ್ಲಿ ಬೆಳಕಿಗೆ ಬಂದಿದೆ. ಕಾರವಾರದ ಸಮರ್ಥ ನಾಯ್ಕ ಎಂಬ ವಿದ್ಯಾರ್ಥಿಯೇ ಬಾರವಾದ ಬ್ಯಾಗ್ ಹೊತ್ತುಕೊಂಡು ಹೋದ ಪರಿಣಾಮ ಕೈ ಮುರಿದುಕೊಂಡ ವಿದ್ಯಾರ್ಥಿ. ಕಾರವಾರದ ಸಮರ್ಥ್ ನಾಯ್ಕ್ ಕಾರವಾರದ ಖಾಸಗಿ ಶಾಲೆಯೊಂದರಲ್ಲಿ ಆರನೇ ತರಗತಿಯಲ್ಲಿ ವ್ಯಾಸಂಗ ಮಾಡುತ್ತಿದ್ದಾನೆ. ಶಾಲೆಗೆ ಹೋಗಿದ್ದ ವಿದ್ಯಾರ್ಥಿ, ಶಿಕ್ಷಕರು ಹೆಚ್ಚು ಪುಸ್ತಕ ತರಲು ಹೇಳಿದ್ದರಿಂದ ಹೆಚ್ಚು

ಅತಿ ಭಾರದ ಶಾಲಾ ಬ್ಯಾಗ್‌ ಹೊತ್ತು ವಿದ್ಯಾರ್ಥಿಯ ಕೈ ಮುರಿತ! Read More »

ಕರ್ನಾಟಕ, ಬ್ರೇಕಿಂಗ್ ನ್ಯೂಸ್

ಕಾರ್ಕಳ ನಕ್ರೆ ದೇವರ ಗುಡ್ಡೆ ಪ್ರದೇಶದಲ್ಲಿ ಬಾವಿಗೆ ಬಿದ್ದಿದ್ದ ವೃದ್ಧನನ್ನುಸಮಯಕ್ಕೆ ಸರಿಯಾಗಿ ರಕ್ಷಿಸಿದ ಅಗ್ನಿಶಾಮಕ ಸಿಬ್ಬಂದಿಗಳು

(ನ್ಯೂಸ್‌ ಕಡಬ) newskadaba.com ,ಜ.09 ಕಾರ್ಕಳ: ಬಾವಿಗೆ ಬಿದ್ದಿದ್ದ ವೃದ್ಧನನ್ನು ಅಗ್ನಿಶಾಮಕ ಸಿಬ್ಬಂದಿಗಳು  ರಕ್ಷಿಸಿದ್ದಾರೆ. ಕಾರ್ಕಳ ತಾಲೂಕಿನ ಕುಕ್ಕುಂದೂರು ಗ್ರಾಮದ ನಕ್ರೆ ದೇವರ ಗುಡ್ಡೆ ಪ್ರದೇಶದಲ್ಲಿ, ಸುಮಾರು 30 ಅಡಿ ಆಳದ ಬಾವಿಗೆ ಚಂದು ಪರವ (70 ) ಎಂಬ ವರು ಬಿದ್ದ ಘಟನೆ ನಡೆದಿದೆ. ಕೈ–ಕಾಲುಗಳಿಗೆ ಪ್ಯಾರಲಿಸಿಸ್ ಇರುವ ಕಾರಣ ಚಲನೆಗೆ ಅಸಹಾಯಕನಾಗಿದ್ದ ಚಂದು ಪರವ ಅವರು ಅಜಾಗರೂಕತೆಯಿಂದ ಬಾವಿಗೆ ಬಿದ್ದಿದ್ದಾರೆ ಎನ್ನಲಾಗಿದೆ. ಸುದ್ದಿ ತಿಳಿದ ತಕ್ಷಣ, ಕಾರ್ಕಳ ಅಗ್ನಿಶಾಮಕ ಠಾಣಾಧಿಕಾರಿ ಚಂದಶೇಖರ್ ಅವರ ನೇತೃತ್ವದಲ್ಲಿ

ಕಾರ್ಕಳ ನಕ್ರೆ ದೇವರ ಗುಡ್ಡೆ ಪ್ರದೇಶದಲ್ಲಿ ಬಾವಿಗೆ ಬಿದ್ದಿದ್ದ ವೃದ್ಧನನ್ನುಸಮಯಕ್ಕೆ ಸರಿಯಾಗಿ ರಕ್ಷಿಸಿದ ಅಗ್ನಿಶಾಮಕ ಸಿಬ್ಬಂದಿಗಳು Read More »

ಕರಾವಳಿ, ಕರ್ನಾಟಕ, ಬ್ರೇಕಿಂಗ್ ನ್ಯೂಸ್

ಸುಳ್ಯ ತಾಲೂಕು ಪಂಚಾಯತ್ ತ್ರೈ ಮಾಸಿಕ ಕೆಡಿಪಿ ಸಭೆ

(ನ್ಯೂಸ್‌ ಕಡಬ) newskadaba.com ,ಜ.09 ಸುಳ್ಯ: ತಾಲೂಕು ಪಂಚಾಯತ್ ತ್ರೈ ಮಾಸಿಕ ಕೆಡಿಪಿ ಸಭೆ ಶಾಸಕಿ ಭಾಗೀರಥಿ ಮುರುಳ್ಯರ ಅಧ್ಯಕ್ಷತೆಯಲ್ಲಿ ಸುಳ್ಯದ ತಾಲೂಕು ಪಂಚಾಯತ್ ಸಭಾಭವನದಲ್ಲಿ ನಡೆಯಿತು………… ಕೆಲದಿನಗಳ ಹಿಂದೆ ಸುಳ್ಯ ಸರಕಾರಿ ಆಸ್ಪತ್ರೆಯಲ್ಲಿ ಮಗುವೊಂದು ಸಾವನ್ನಪ್ಪಿದ್ದು,ಸಾವಿಗೆ ಕಾರಣ ಏನೆಂದು ತ್ರೈಮಾಸಿಕ ಕೆ.ಡಿ.ಪಿ ನಾಮನಿರ್ದೆಶಿತ ಸದಸ್ಯ ಧರ್ಮಪಾಲ ಕೊಯಿಂಗಾಜೆಯವರು ಪ್ರಶ್ನಿಸಿದರು.ಆಗ ತಾಲೂಕು ಆರೋಗ್ಯ ವೈದ್ಯಾಧಿಕಾರಿಯವರು ಸಮನ್ವಯತೆಯ ಕೊರೆತೆಯಿಂದ ಹೀಗೆ ಆಗಿರಬೇಕು.ಹೆಚ್ಚಿನ ಮಾಹಿತಿ ಆಸ್ಪತ್ರೆಯ ವೈದ್ಯಾಧಿಕಾರಿಯವರಿಗೆ ಗೊತ್ತಿದೆ ಎಂದು ಉತ್ತರಿಸಿದರು.ಆಗ ಧರ್ಮಪಾಲರು ನಮಗೆ ಸ್ಪಷ್ಟ ಮಾಹಿತಿ ಬೇಕು.ಆಡಳಿತ ವೈದ್ಯಾಧಿಕಾರಿ

ಸುಳ್ಯ ತಾಲೂಕು ಪಂಚಾಯತ್ ತ್ರೈ ಮಾಸಿಕ ಕೆಡಿಪಿ ಸಭೆ Read More »

ಕರಾವಳಿ, ಕರ್ನಾಟಕ, ಬ್ರೇಕಿಂಗ್ ನ್ಯೂಸ್

ಕಲ್ಯಾಣ ಕರ್ನಾಟಕದ 7 ಜಿಲ್ಲೆಗಳ ವಿದ್ಯಾರ್ಥಿಗಳಿಗೆ ಶೇ. 8 ಮೀಸಲಾತಿ; ಬಂಪರ್ ಸುವರ್ಣವಕಾಶ

(ನ್ಯೂಸ್‌ ಕಡಬ) newskadaba.com ,ಜ.09 ಕಲಬುರಗಿ: ಕರ್ನಾಟಕ ಕೇಂದ್ರೀಯ ವಿವಿ ಸ್ನಾತಕ ಪದವಿ ಪ್ರವೇಶದಲ್ಲಿ ಕಲಬುರಗಿ ಸೇರಿದಂತೆ ಕಲ್ಯಾಣ ನಾಡಿನ 7 ಜಿಲ್ಲೆಗಳ ವಿದ್ಯಾರ್ಥಿಗಳಿಗೆ ಕಲಂ 371 (ಕೆ) ಅನ್ವಯ ಶೇ. 8ರಷ್ಟು ಮೀಸಲಾತಿ ನೀಡಲಾಗುತ್ತಿದೆ. ಹೀಗಾಗಿ ಇಲ್ಲಿರುವ 15 ಸ್ನಾತಕ ವಿಭಾಗಗಳಲ್ಲಿ ಪ್ರತಿ ವಿಭಾಗದಲ್ಲಿಯೂ 3ರಿಂದ 6ರಷ್ಟು ಸ್ಥಾನಗಳು ಕಲ್ಯಾಣ ಭಾಗದವರಿಗೆ ಲಭ್ಯವಾಗಲಿವೆ ಎಂದು ಕೇಂದ್ರೀಯ ವಿವಿ ಕುಲಪತಿ ಪ್ರೊ.ಬಟು ಸತ್ಯನಾರಾಯಣ ಹೇಳಿದ್ದಾರೆ. ಕೇಂದ್ರೀಯ ವಿವಿಯಲ್ಲಿ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಈ ಭಾಗಕ್ಕೆ ಸಂವಿಧಾನದ ಕಲಂ 371

ಕಲ್ಯಾಣ ಕರ್ನಾಟಕದ 7 ಜಿಲ್ಲೆಗಳ ವಿದ್ಯಾರ್ಥಿಗಳಿಗೆ ಶೇ. 8 ಮೀಸಲಾತಿ; ಬಂಪರ್ ಸುವರ್ಣವಕಾಶ Read More »

ಕರ್ನಾಟಕ, ಬ್ರೇಕಿಂಗ್ ನ್ಯೂಸ್
Scroll to Top