News Kadaba

ಇಂದಿನ ಹವಾಮಾನ ವರದಿ

(ನ್ಯೂಸ್‌ ಕಡಬ) newskadaba.com: ರಾಜ್ಯದ ಉತ್ತರ ಒಳನಾಡಿನ ಶೀತ ಗಾಳಿ ಬೀಸುವ ಸಾಧ್ಯತೆಯಿದೆ. ದಕ್ಷಿಣ ಕರ್ನಾಟಕದ ಹಲವು ಜಿಲ್ಲೆಗಳಲ್ಲಿ ಉಷ್ಣಾಂಶ ಸ್ವಲ್ಪ ಏರಿಕೆಯಾಗಲಿದೆ….. ಬೆಂಗಳೂರಿನಲ್ಲಿ ಗರಿಷ್ಠ ತಾಪಮಾನ 25 ಡಿಗ್ರಿ ಸೆಲ್ಸಿಯಸ್ ಇರಲಿದ್ದು, ಕನಿಷ್ಠ ತಾಪಮಾನ 14 ಡಿಗ್ರಿ ಸೆಲ್ಸಿಯಸ್ ದಾಖಲಾಗಲಿದೆ. ಚಿಕ್ಕಬಳ್ಳಾಪುರದಲ್ಲಿ ಗರಿಷ್ಠ ತಾಪಮಾನ 24 ಡಿಗ್ರಿ ಸೆಲ್ಸಿಯಸ್ ಇರಲಿದ್ದು, ಕನಿಷ್ಠ ತಾಪಮಾನ 14 ಡಿಗ್ರಿ ಸೆಲ್ಸಿಯಸ್ ದಾಖಲಾಗಲಿದೆ.

ಇಂದಿನ ಹವಾಮಾನ ವರದಿ Read More »

ಕರಾವಳಿ, ಕರ್ನಾಟಕ, ಬ್ರೇಕಿಂಗ್ ನ್ಯೂಸ್

ಶಾಸಕಿ ಭಾಗೀರಥಿ ಮುರುಳ್ಯ ಬಗ್ಗೆ ಅವಹೇಳನಕಾರಿ ಪೋಸ್ಟ್-ದೂರು ದಾಖಲು

(ನ್ಯೂಸ್‌ ಕಡಬ) newskadaba.com,ಜ.07: ಶಾಸಕ ಭಾಗೀರಥಿ ಮುರುಳ್ಯ ಅವರಿಗೆ ಸಾಮಾಜಿಕ ಜಾಲತಾಣದಲ್ಲಿ ಅವಹೇಳನ ಮಾಡಿ ಪೋಸ್ಟ್ ಮಾಡಿರುವ ಘಟನೆ ನಡೆದಿದ್ದು, ಬಂಟ್ವಾಳ ಗ್ರಾಮಾಂತರ ಪೊಲೀಸ್ ಠಾಣೆಯಲ್ಲಿ ದೂರು ದಾಖಲಾಗಿದೆ. ಬಂಟ್ವಾಳ ತಾಲೂಕಿನ ಸದಾನಂದ ಅವರು ಜನವರಿ 7ರಂದು ತನ್ನ ಮೊಬೈಲ್‌ನ ಫೇಸ್ ಬುಕ್ ಖಾತೆಯನ್ನು ಗಮನಿಸಿದಾಗ ಬಿಲ್ಲವ ಸಂದೇಶ್ ಎಂಬ ಫೇಸ್ ಬುಕ್ ಖಾತೆಯಲ್ಲಿ ಸುಳ್ಯ ವಿಧಾನಸಭಾ ಶಾಸಕಿ ಶಾಸಕ ಭಾಗೀರಥಿ ಮುರುಳ್ಯ ಅವರ ಫೋಟೊವನ್ನು ಅವಹೇಳನ ರೀತಿಯಲ್ಲಿ ಬರಹಗಳನ್ನು ಹಾಕಿರುವುದು ಗಮನಿಸಿದ್ದಾರೆ. ಭಾಗೀರಥಿ ಮುರುಳ್ಯ ಅವರ

ಶಾಸಕಿ ಭಾಗೀರಥಿ ಮುರುಳ್ಯ ಬಗ್ಗೆ ಅವಹೇಳನಕಾರಿ ಪೋಸ್ಟ್-ದೂರು ದಾಖಲು Read More »

ಕರಾವಳಿ, ಕರ್ನಾಟಕ

ರಾಜ್ಯದಲ್ಲಿ ಒಂದೇ ದಿನ ಬ್ಬರು ಪೊಲೀಸ್ ಕಾನ್ಸ್ಟೇಬಲ್ ಗಳು ಆತ್ಮಹತ್ಯೆ

(ನ್ಯೂಸ್‌ ಕಡಬ) newskadaba.com,ಜ.07: ವೇದಾಂತ ಗ್ರೂಪ್​ನ ಛೇರ್ಮನ್ ಅನಿಲ್ ಅಗರ್ವಾಲ್ ಅವರ ಮಗ ಅಗ್ನಿವೇಶ್ ಅಗರ್ವಾಲ್ ಹೃದಯಾಘಾತದಿಂದ ನಿಧನರಾಗಿದ್ದಾರೆ. ಅವರಿಗೆ 49 ವರ್ಷ ವಯಸ್ಸಾಗಿತ್ತು. ತಂದೆ ಅನಿಲ್ ಅಗರ್ವಾಲ್, ತಾಯಿ ಕಿರಣ್ ಅಗರ್ವಾಲ್ ಮತ್ತು ಸಹೋದರಿ ಪ್ರಿಯಾ ಅಗರ್ವಾಲ್ ಹೆಬ್ಬಾರ್ ಅವರನ್ನು ಅಗಲಿದ್ದಾರೆ. ವರದಿಗಳ ಪ್ರಕಾರ, ಅಮೆರಿಕದಲ್ಲಿ ಅಗ್ನಿವೇಶ್ ಹೃದಯ ಸ್ತಂಭನಗೊಂಡು ವಿಧಿವಶರಾಗಿದ್ದಾರೆ. ಅಗ್ನಿವೇಶ್ ನಿಧನಕ್ಕೆ ತಂದೆ ಅಗರ್ವಾಲ್, ಪ್ರಧಾನಿ ನರೇಂದ್ರ ಮೋದಿ ಸೇರಿದಂತೆ ಹಲವರು ಆಘಾತ ವ್ಯಕ್ತಪಡಿಸಿದ್ದಾರೆ. ವೇದಾಂತ ಗ್ರೂಪ್​ನ ಸಂಸ್ಥೆಗಳಲ್ಲಿ ಸಕ್ರಿಯವಾಗಿ ತೊಡಗಿಸಿಕೊಂಡಿದ್ದ ಅಗ್ನಿವೇಶ್

ರಾಜ್ಯದಲ್ಲಿ ಒಂದೇ ದಿನ ಬ್ಬರು ಪೊಲೀಸ್ ಕಾನ್ಸ್ಟೇಬಲ್ ಗಳು ಆತ್ಮಹತ್ಯೆ Read More »

ಕರ್ನಾಟಕ, ಬ್ರೇಕಿಂಗ್ ನ್ಯೂಸ್

ದಳಪತಿ ವಿಜಯ್ ಫ್ಯಾನ್ಸ್‌ಗೆ ಶಾಕ್; ‘ಜನ ನಾಯಗನ್’ ಸಿನಿಮಾ ರಿಲೀಸ್ ಮುಂದಕ್ಕೆ

(ನ್ಯೂಸ್‌ ಕಡಬ) newskadaba.com,ಜ.07: ತಮಿಳು ನಟ ದಳಪತಿ ವಿಜಯ್ ಅಭಿನಯದ ಬಹುನಿರೀಕ್ಷಿತ ಕೊನೆಯ ಚಿತ್ರ ‘ಜನ ನಾಯಗನ್’ಗಾಗಿ ಅಭಿಮಾನಿಗಳು ತುದಿಗಾಲಿನಲ್ಲಿ ನಿಂತಿದ್ದರು. ಆದರೆ ಇದೀಗ ಸಿನಿಮಾ ರಿಲೀಸ್ ತಾತ್ಕಲಿಕವಾಗಿ ಮುಂದಕ್ಕೆ ಹೋಗಿದೆ ಎನ್ನಲಾಗುತ್ತಿದೆ. ಜನ ನಾಯಗನ್ ಚಿತ್ರಕ್ಕೆ ಸೆನ್ಸಾರ್ ಮಾಡಿಸಲು ‘ಕೆವಿಎನ್’ ಸಂಸ್ಥೆ ಡಿಸೆಂಬರ್ 18ರಂದೇ ಸಿನಿಮಾ ಸಲ್ಲಿಸಿತ್ತು. ಸಿನಿಮಾ ನೋಡಿದ ಮಂಡಳಿ 27 ಕಡೆ ಬದಲವಾಣೆ/ಕಟ್‌ಗೆ ಸೂಚನೆ ನೀಡಿತ್ತು. ಇದನ್ನು ಸಿನಿಮಾ ಪಾಲಿಸಿತ್ತು. ಬಳಿಕ ಸಿನಿಮಾವನ್ನ ಮರು ಸಲ್ಲಿಕೆ ಮಾಡಿತ್ತು. ಆದರೆ, ಇದನ್ನು ಮಂಡಳಿ ಒಪ್ಪದೆ,

ದಳಪತಿ ವಿಜಯ್ ಫ್ಯಾನ್ಸ್‌ಗೆ ಶಾಕ್; ‘ಜನ ನಾಯಗನ್’ ಸಿನಿಮಾ ರಿಲೀಸ್ ಮುಂದಕ್ಕೆ Read More »

ಬ್ರೇಕಿಂಗ್ ನ್ಯೂಸ್, ಸಿನಿಮಾ

ಅಪಾರ್ಟ್‌ಮೆಂಟ್‌ನ 16ನೇ ಫ್ಲೋರ್‌ನಿಂದ ಬಿದ್ದು ಮಂಗಳೂರು ಮೂಲದ ಟೆಕ್ಕಿ ಆತ್ಮಹತ್ಯೆ

(ನ್ಯೂಸ್‌ ಕಡಬ) newskadaba.com,ಜ.07: ಅಪಾರ್ಟ್‌ಮೆಂಟ್‌ ಕಟ್ಟಡವೊಂದರ 16ನೇ ಫ್ಲೋರ್‌ನಿಂದ ಬಿದ್ದು ಮಂಗಳೂರು ಮೂಲದ ಟೆಕ್ಕಿಯೊಬ್ಬರು ಸಾವನ್ನಪ್ಪಿರುವ ಘಟನೆ ನಡೆದಿದೆ. ಮೃತರನ್ನು ಮಂಗಳೂರು ಮೂಲದ ಸಾಫ್ಟ್ವೇರ್ ಇಂಜಿನಿಯರ್ ನಿಕ್ಷೇಪ್ ಬಂಗೇರ(26) ಎಂದು ಗುರುತಿಸಲಾಗಿದೆ. ನಿಕ್ಷೇಪ್ ವಾಸವಿದ್ದ ಬಗಲಗುಂಟೆಯ ಖಾಸಗಿ ಅಪಾರ್ಟ್ಮೆಂಟ್‌ನಲ್ಲಿ ಈ ಘಟನೆ ಸಂಭವಿಸಿದೆ. ಅವರು 20ನೇ ಮಹಡಿಯ ಫ್ಲಾಟ್‌ನಲ್ಲಿ ವಾಸವಾಗಿದ್ದರು, ಆದರೆ ಬುಧವಾರ ಬೆಳಿಗ್ಗೆ 16ನೇ ಮಹಡಿಗೆ ಬಂದು ಅಲ್ಲಿಂದ ಕೆಳಗೆ ಜಿಗಿದಿದ್ದಾರೆ ಎಂದು ವರದಿಯಾಗಿದೆ. ನಿಕ್ಷೇಪ್ ವರ್ಕ್ ಫ್ರಂ ಹೋಮ್ ಕೆಲಸ ಮಾಡುತ್ತಿದ್ದರು. ಅವರು ಸ್ಕಿಜೋಫ್ರೇನಿಯಾ

ಅಪಾರ್ಟ್‌ಮೆಂಟ್‌ನ 16ನೇ ಫ್ಲೋರ್‌ನಿಂದ ಬಿದ್ದು ಮಂಗಳೂರು ಮೂಲದ ಟೆಕ್ಕಿ ಆತ್ಮಹತ್ಯೆ Read More »

ಕರಾವಳಿ, ಬ್ರೇಕಿಂಗ್ ನ್ಯೂಸ್

ಏಪ್ರಿಲ್ 1ರಿಂದ ಜನಗಣತಿ ಆರಂಭ

(ನ್ಯೂಸ್‌ ಕಡಬ) newskadaba.com,ಜ.07: ಇದೇ ಏಪ್ರಿಲ್ 1ರಿಂದ 2027ರ ಭಾರತದ ಜನಗಣತಿಯ ಮೊದಲ ಹಂತವು ಆರಂಭಗೊಳ್ಳಲಿದೆ. ಏಪ್ರಿಲ್ 1 ಮತ್ತು ಸೆಪ್ಟೆಂಬರ್ 30, 2026 ರ ನಡುವೆ ಎಲ್ಲಾ ರಾಜ್ಯಗಳು ಹಾಗೂ ಕೇಂದ್ರಾಡಳಿತ ಪ್ರದೇಶಗಳಲ್ಲಿ ಮನೆ ಪಟ್ಟಿ ಅಭಿಯಾನ ನಡೆಯಲಿದೆ ಎಂದು ಬುಧವಾರ ಸರ್ಕಾರಿ ಅಧಿಸೂಚನೆ ಹೊರಡಿಸಲಾಗಿದೆ. ರಾಜ್ಯಗಳು ಮತ್ತು ಕೇಂದ್ರಾಡಳಿತ ಪ್ರದೇಶಗಳ ಸರ್ಕಾರಗಳು ಏಪ್ರಿಲ್ 1 ರಿಂದ ಸೆಪ್ಟೆಂಬರ್ 30, 2026 ರವರೆಗೆ ಮನೆ ಪಟ್ಟಿ ಮತ್ತು ವಸತಿ ಗಣತಿಯನ್ನು ನಡೆಸುತ್ತವೆ. ಇದು 2027ರ ಜನಗಣತಿಯ

ಏಪ್ರಿಲ್ 1ರಿಂದ ಜನಗಣತಿ ಆರಂಭ Read More »

ಕರ್ನಾಟಕ, ಬ್ರೇಕಿಂಗ್ ನ್ಯೂಸ್

ರಾಜ್ಯದಲ್ಲಿ ಮುಂದಿನ ಏಳು ದಿನ ತೀವ್ರ ಚಳಿ

(ನ್ಯೂಸ್‌ ಕಡಬ) newskadaba.com,ಜ.07: ಬೆಂಗಳೂರು: ರಾಜ್ಯದ ವಿವಿಧೆಡೆ ತಾಪಮಾನ ಕುಸಿತದಿಂದ ಚಳಿಯ ತೀವ್ರತೆ ಹೆಚ್ಚಾಗಿದೆ. ಮುಂದಿನ ಏಳು ದಿನ ರಾಜ್ಯಾದ್ಯಂತ ಒಣ ಹವೆ ಮುಂದುವರೆಯುವ ಸಾಧ್ಯತೆಯಿದ್ದು, ಮುಂಜಾನೆ ಚಳಿ ಹಾಗೂ ಅಲ್ಲಲ್ಲಿ ಮಂಜಿನ ವಾತಾವರಣ ಇರುವ ಸಾಧ್ಯತೆಯಿದೆ. ಉತ್ತರ ಒಳನಾಡು ಜಿಲ್ಲೆಗಳಲ್ಲಿ ಕನಿಷ್ಠ ತಾಪಮಾನ 2 ರಿಂದ 3 ಡಿಗ್ರಿ ಸೆಲ್ಸಿಯಸ್ ಕಡಿಮೆ ಇರುವ ಸಾಧ್ಯತೆಯಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ಮುಂದಿನ ಏಳು ದಿನ ಬೀದರ್, ಕಲಬುರಗಿ, ವಿಜಯಪುರ, ಬಾಗಲಕೋಟೆ, ಬೆಳಗಾವಿ, ಧಾರವಾಡ ಮತ್ತು ಗದಗ

ರಾಜ್ಯದಲ್ಲಿ ಮುಂದಿನ ಏಳು ದಿನ ತೀವ್ರ ಚಳಿ Read More »

ಕರ್ನಾಟಕ

ಇಂದಿನ ಚಿನ್ನದ ದರ

(ನ್ಯೂಸ್‌ ಕಡಬ) newskadaba.com,ಜ.07: ಇಂದು (ಜನವರಿ 8, 2026) ಕರ್ನಾಟಕದ ಪ್ರಮುಖ ನಗರಗಳಲ್ಲಿ ಚಿನ್ನದ ಬೆಲೆಗಳು ಏರಿಳಿತ ಕಂಡಿದ್ದು, 24 ಕ್ಯಾರೆಟ್ ಚಿನ್ನದ ದರವು ಪ್ರತಿ ಗ್ರಾಂಗೆ ಸುಮಾರು ₹13,800-₹13,900 ಮತ್ತು 22 ಕ್ಯಾರೆಟ್ ಚಿನ್ನದ ದರವು ಪ್ರತಿ ಗ್ರಾಂಗೆ ಸುಮಾರು ₹12,600-₹12,700 ಆಸುಪಾಸಿನಲ್ಲಿದೆ, ಆದರೆ ನಿಖರ ಬೆಲೆಗಾಗಿ ನಿಮ್ಮ ಸ್ಥಳೀಯ ಆಭರಣದ ಅಂಗಡಿಯ ದರವನ್ನು ಪರಿಶೀಲಿಸಿ. ಉದಾಹರಣೆಗೆ, ವಿಜಯವಾಡದಲ್ಲಿ 22 ಕ್ಯಾರೆಟ್ ಪ್ರತಿ ಗ್ರಾಂಗೆ ₹12,675, ಭದ್ರಾವತಿಯಲ್ಲಿ 24 ಕ್ಯಾರೆಟ್ ಪ್ರತಿ ಗ್ರಾಂಗೆ ₹13,882. ಬೆಂಗಳೂರು (22 ಕ್ಯಾರೆಟ್): ಪ್ರತಿ ಗ್ರಾಂಗೆ ಸುಮಾರು ₹12,675.

ಇಂದಿನ ಚಿನ್ನದ ದರ Read More »

ಕರ್ನಾಟಕ, ಬ್ರೇಕಿಂಗ್ ನ್ಯೂಸ್

ಪ್ರಸಿದ್ಧ ಹಿರಿಯ ಪರಿಸರ ವಿಜ್ಞಾನಿ ಡಾ. ಮಾಧವ ಗಾಡ್ಗೀಳ್ ವಿಧಿವಶ

(ನ್ಯೂಸ್‌ ಕಡಬ) newskadaba.com,ಜ.07: ಪಶ್ಚಿಮ ಘಟ್ಟಗಳ ಸಂರಕ್ಷಣಾ ವರದಿಯನ್ನು ರಚಿಸಿದ್ದ ಹಿರಿಯ ಪರಿಸರ ವಿಜ್ಞಾನಿ, ಪರಿಸರವಾದಿ ಮತ್ತು ಬರಹಗಾರ ಡಾ. ಮಾಧವ ಗಾಡ್ಗೀಳ್ (83) ಪುಣೆಯ ತಮ್ಮ ನಿವಾಸದಲ್ಲಿ ಬುಧವಾರ ರಾತ್ರಿ ವಿಧಿವಶರಾಗಿದ್ದಾರೆ. ಕೆಲವು ಸಮಯದಿಂದ ಅನಾರೋಗ್ಯದಿಂದ ಬಳಲುತ್ತಿದ್ದ ಮಾಧವ ಗಾಡ್ಗೀಳ್ ಅವರು, ಪಶ್ಚಿಮ ಘಟ್ಟಗಳು ಹಾಗೂ ಪರಿಸರ ಸಂರಕ್ಷಣೆಗೆ ತಮ್ಮ ಇಡೀ ಜೀವನವನ್ನು ಮುಡಿಪಾಗಿಟ್ಟಿದ್ದರು. ಅವರು ಐದು ದಶಕಗಳಿಗೂ ಹೆಚ್ಚು ಕಾಲ ಭಾರತದ ಪರಿಸರ ಚಿಂತನೆ, ಸಂರಕ್ಷಣಾ ನೀತಿಗಳನ್ನು ರೂಪಿಸಿದ್ದರು. 1942 ರ ಮೇ 24

ಪ್ರಸಿದ್ಧ ಹಿರಿಯ ಪರಿಸರ ವಿಜ್ಞಾನಿ ಡಾ. ಮಾಧವ ಗಾಡ್ಗೀಳ್ ವಿಧಿವಶ Read More »

ಬ್ರೇಕಿಂಗ್ ನ್ಯೂಸ್

ಪುತ್ತೂರು: ವಿದ್ಯುತ್ ತಂತಿ ತುಂಡಾಗಿ 900 ಅಡಿಕೆ ಗಿಡಗಳು ಸುಟ್ಟು ಭಸ್ಮ

(ನ್ಯೂಸ್‌ ಕಡಬ) newskadaba.com,ಜ.07 ಪುತ್ತೂರು: ಕುರಿಯ ಗ್ರಾಮದ ಬೂದಿಯಾರು ಎಂಬಲ್ಲಿ ಮಂಗಳವಾರ ವಿದ್ಯುತ್ ತಂತಿ ತುಂಡಾಗಿ ತೋಟದ ಮೇಲೆ ಬಿದ್ದ ಪರಿಣಾಮ 900 ಕ್ಕೂ ಹೆಚ್ಚು ಅಡಿಕೆ ಸಸಿಗಳು ಸುಟ್ಟು ಭಸ್ಮವಾಗಿವೆ.ತೋಟ ಬೂದಿಯಾರು ನಿವಾಸಿ ಗಣೇಶ್ ರೈ ಅವರಿಗೆ ಸೇರಿದ್ದು, ಸುಮಾರು ಒಂದು ವರ್ಷದ ಹಿಂದೆ ನೆಟ್ಟಿದ್ದ ಸಸಿಗಳು ಚೆನ್ನಾಗಿ ಬೆಳೆದಿದ್ದವು ಎಂದು ವರದಿಯಾಗಿದೆ. ಮೂಲಗಳ ಪ್ರಕಾರ, ಮಂಗಳವಾರ ಮಧ್ಯಾಹ್ನ ವಿದ್ಯುತ್ ತಂತಿ ಹಠಾತ್ತನೆ ತುಂಡಾಯಿತು. ಬಿದ್ದ ತಂತಿಯಿಂದ ಬೆಂಕಿ ಹೊತ್ತಿಕೊಂಡಿತು, ಅದು ಬೇಗನೆ ತೋಟದಾದ್ಯಂತ ಹರಡಿ,

ಪುತ್ತೂರು: ವಿದ್ಯುತ್ ತಂತಿ ತುಂಡಾಗಿ 900 ಅಡಿಕೆ ಗಿಡಗಳು ಸುಟ್ಟು ಭಸ್ಮ Read More »

ಕರಾವಳಿ, ಕರ್ನಾಟಕ, ಬ್ರೇಕಿಂಗ್ ನ್ಯೂಸ್
Scroll to Top