News Kadaba

ಜರ್ಮನಿಯ ಮನೆಯಲ್ಲಿ ಅಗ್ನಿ ಅನಾಹುತ ಹೊಸ ವರ್ಷದಂದೇ ಭಾರತೀಯ ವಿದ್ಯಾರ್ಥಿ ಸಾವು

(ನ್ಯೂಸ್‌ ಕಡಬ) newskadaba.com,ಜ.02 ಬರ್ಲಿನ್:    ಜರ್ಮನಿಯಲ್ಲಿರುವ ನಿವಾಸದಲ್ಲಿ ಅಗ್ನಿ ಅವಘಡ ಉಂಟಾಗಿ ಹೊಸ ವರ್ಷದ ದಿನವೇ ಭಾರತೀಯ ವಿದ್ಯಾರ್ಥಿ ಮೃತಪಟ್ಟಿದ್ದು, ಕುಟುಂಬಸ್ಥರಿಗೆ ಆಘಾತ ಉಂಟಾಗಿದೆ.ತಡರಾತ್ರಿ ಸಂಭವಿಸಿದ ಬೆಂಕಿ ಅಪಘಡದಲ್ಲಿ ತೆಲಂಗಾಣದ ಹೃತಿಕ್ ರೆಡ್ಡಿ(25) ಸಾವನ್ನಪ್ಪಿದ್ದಾರೆ. ವೇಗವಾಗಿ ಹರಡುತ್ತಿದ್ದ ಬೆಂಕಿ ಮತ್ತು ದಟ್ಟ ಹೊಗೆಯಿಂದ ತಪ್ಪಿಸಿಕೊಳ್ಳಲು ಹೃತಿಕ್ ಬರ್ಲಿನ್‌ನ ಅಪಾರ್ಟ್ಮೆಂಟ್‌ನ ಮೇಲಿನ ಮಹಡಿಯಿಂದ ಹಾರಿದ್ದ. ಪರಿಣಾಮ ಆತನ ತಲೆಗೆ ತೀವ್ರ ಪೆಟ್ಟಾಗಿತ್ತು. ಹೃತಿಕ್ ನನ್ನು ಸಮೀಪದ ಆಸ್ಪತ್ರೆಗೆ ಸಾಗಿಸಲಾಯಿತಾದರೂ ಚಿಕಿತ್ಸೆ ಫಲಕಾರಿಯಾಗದೆ ಕೊನೆಯುಸಿರೆಳೆದಿದ್ದಾರೆ. ಹೊಸ ವರ್ಷದ ದಿನದಂದೇ ಈ […]

ಜರ್ಮನಿಯ ಮನೆಯಲ್ಲಿ ಅಗ್ನಿ ಅನಾಹುತ ಹೊಸ ವರ್ಷದಂದೇ ಭಾರತೀಯ ವಿದ್ಯಾರ್ಥಿ ಸಾವು Read More »

ಕರಾವಳಿ, ಕರ್ನಾಟಕ, ಬ್ರೇಕಿಂಗ್ ನ್ಯೂಸ್

ಬೆಂಗಳೂರಿಂದ ಕನ್ಯಾಕುಮಾರಿಗೆ ಸೈಕಲ್ ಸವಾರಿ ಪ್ರಧಾನಿ ಮೋದಿಯು ಸುರೇಶ್ ಕುಮಾರ್ ಅವರ ಸಾಹಸಕ್ಕೆ ಮೆಚ್ಚುಗೆ

(ನ್ಯೂಸ್‌ ಕಡಬ) newskadaba.com,ಜ.02 ಬೆಂಗಳೂರು: 70ನೇ ವಯಸ್ಸಿನಲ್ಲೂ ಬೆಂಗಳೂರಿನಿಂದ ಸುಮಾರು 655 ಕಿ.ಮೀ. ದೂರದ ಕನ್ಯಾಕುಮಾರಿಗೆ ಸೈಕಲ್‌ ಯಾತ್ರೆ ನಡೆಸಿದ್ದ ಮಾಜಿ ಸಚಿವ, ಬಿಜೆಪಿ ಶಾಸಕ ಎಸ್‌.ಸುರೇಶ್‌ಕುಮಾರ್ ಅವರನ್ನು ಪ್ರಧಾನಮಂತ್ರಿ ನರೇಂದ್ರ ಮೋದಿ ಅವರು ಶ್ಲಾಘಿಸಿದ್ದಾರೆ. ಗುರುವಾರ(ಜ.01) ದೂರವಾಣಿ ಮೂಲಕ ಸುರೇಶ್‌ಕುಮಾರ್ ಅವರನ್ನು ಸಂಪರ್ಕಿಸಿರುವ ಪ್ರಧಾನಿ ಮೋದಿ ಅವರು ಸೈಕಲ್‌ ಯಾತ್ರೆಯ ಅನುಭವ ಪಡೆದುಕೊಂಡು, ಪ್ರಶಂಸೆ ವ್ಯಕ್ತಪಡಿಸಿದ್ದಾರೆ.ಈ ಬಗ್ಗೆ ಖುದ್ದು ಸುರೇಶ್‌ಕುಮಾರ್ ಅವರು ತಮ್ಮ ಸಾಮಾಜಿಕ ಜಾಲತಾಣದಲ್ಲಿ ಬರೆದುಕೊಂಡಿದ್ದು, ‘ಅತ್ಯಂತ ಸಂತಸದ ಸಂಗತಿ. ಪ್ರಧಾನಿ ಮೋದಿ ಅವರು

ಬೆಂಗಳೂರಿಂದ ಕನ್ಯಾಕುಮಾರಿಗೆ ಸೈಕಲ್ ಸವಾರಿ ಪ್ರಧಾನಿ ಮೋದಿಯು ಸುರೇಶ್ ಕುಮಾರ್ ಅವರ ಸಾಹಸಕ್ಕೆ ಮೆಚ್ಚುಗೆ Read More »

ಕರ್ನಾಟಕ, ಬ್ರೇಕಿಂಗ್ ನ್ಯೂಸ್

ಕಾಪು: ಸೇತುವೆಗೆ ಬೈಕ್ ಢಿಕ್ಕಿ; ಸವಾರ ಸ್ಥಳದಲ್ಲೇ ಸಾವು

(ನ್ಯೂಸ್‌ ಕಡಬ) newskadaba.com,ಜ.02 ಕಾಪು: ಉದ್ಯಾವರ ರಾಷ್ಟ್ರೀಯ ಹೆದ್ದಾರಿ 66ರ ಸೇತುವೆಗೆ ಬೈಕೊಂದು ಢಿಕ್ಕಿ ಹೊಡೆದ ಪರಿಣಾಮ ಸವಾರರೊಬ್ಬರು ಸ್ಥಳದಲ್ಲೇ ಸಾವನ್ನಪ್ಪಿದ ಘಟನೆ ಶುಕ್ರವಾರ ನಸುಕಿನ ವೇಳೆ 2.30ರ ಸುಮಾರಿಗೆ ಸಂಭವಿಸಿದೆ. ಮೃತರನ್ನು ಸುಬ್ರಹ್ಮಣ್ಯದ ಯುವರಾಜ್ ಎಂದು ಗುರುತಿಸಲಾಗಿದೆ. ಮಂಗಳೂರು ಕಡೆಯಿಂದ ಉಡುಪಿ ಕಡೆ ತೆರಳುತ್ತಿದ್ದ ಬೈಕ್ ಅತಿ ವೇಗ ಹಾಗೂ ಅಜಾಗರೂಕತೆಯಿಂದ ನಿಯಂತ್ರಣ ತಪ್ಪಿ ಸೇತುವೆಗೆ ಢಿಕ್ಕಿ ಹೊಡೆದಿದೆ ಎನ್ನಲಾಗಿದೆ. ಪರಿಣಾಮ ರಸ್ತೆಗೆ ಬಿದ್ದ ಸವಾರ ಯುವರಾಜ ಗಂಭೀರವಾಗಿ ಗಾಯಗೊಂಡಿದ್ದು, ಸ್ಥಳದಲ್ಲೇ ಕೊನೆಯುಸಿರೆಳೆದಿದ್ದಾರೆ ಎಂದು ವರದಿಯಾಗಿದೆ.

ಕಾಪು: ಸೇತುವೆಗೆ ಬೈಕ್ ಢಿಕ್ಕಿ; ಸವಾರ ಸ್ಥಳದಲ್ಲೇ ಸಾವು Read More »

ಕರಾವಳಿ, ಕರ್ನಾಟಕ, ಬ್ರೇಕಿಂಗ್ ನ್ಯೂಸ್

ಕುಕ್ಕೆ:ತಪಸ್ಯಾಗೆ ರಾಷ್ಟç ಮಟ್ಟದಲ್ಲಿ ಚಿನ್ನದ ಪದಕ

(ನ್ಯೂಸ್‌ ಕಡಬ) newskadaba.com,ಜ.02: ಸುಬ್ರಹ್ಮಣ್ಯ: ಮಹತೋಭಾರ ಕುಕ್ಕೆ ಶ್ರೀ ಸುಬ್ರಹ್ಮಣ್ಯ ದೇವಸ್ಥಾನದ ಆಡಳಿತದ ಶ್ರೀ ಸುಬ್ರಹ್ಮಣ್ಯೇಶ್ವರ ಪದವಿಪೂರ್ವ ಕಾಲೇಜಿನ ದ್ವಿತೀಯ ವಿಜ್ಞಾನ ವಿಭಾಗದ ವಿದ್ಯಾರ್ಥಿನಿ ತಪಸ್ಯಾ.ಎಸ್.ನಾಯಕ್ ರಾಷ್ಟç ಮಟ್ಟದ 69ನೇ ನೆಟ್ ಬಾಲ್ ಪಂದ್ಯಾಟದ ಬಾಲಕಿಯರ ವಿಭಾಗದಲ್ಲಿ ಕರ್ನಾಟಕ ತಂಡವನ್ನು ಪ್ರತಿನಿಧಿಸಿ ರಾಷ್ಟç ಮಟ್ಟದ ಪಂದ್ಯಾಟದಲ್ಲಿ ಪ್ರಥಮ ಸ್ಥಾನ ಗಳಿಸಿ ಚಿನ್ನದ ಪದಕವನ್ನು ತನ್ನದಾಗಿಸಿಕೊಂಡಿದ್ದಾರೆ.ಇದು ಗ್ರಾಮೀಣ ಪ್ರದೇಶ ಕುಕ್ಕೆಗೆ ಹೆಮ್ಮೆಯ ಗರಿಯಾಗಿದೆ. 69ನೇ ರಾಷ್ಟç ಮಟ್ಟದ ನೆಟ್‌ಬಾಲ್ ಪಂದ್ಯಾಟದಲ್ಲಿ ಕರ್ನಾಟಕ ತಂಡವು ಕೇರಳವನ್ನು 4 ಅಂಕಗಳಿAದ ಸೋಲಿಸಿ

ಕುಕ್ಕೆ:ತಪಸ್ಯಾಗೆ ರಾಷ್ಟç ಮಟ್ಟದಲ್ಲಿ ಚಿನ್ನದ ಪದಕ Read More »

ಕರಾವಳಿ, ಕರ್ನಾಟಕ, ಬ್ರೇಕಿಂಗ್ ನ್ಯೂಸ್

ಇಂದಿನ ಹವಾಮಾನ ವರದಿ

(ನ್ಯೂಸ್‌ ಕಡಬ) newskadaba.com,ಜ.02: ದಕ್ಷಿಣ ಒಳನಾಡಿನ ನಾಲ್ಕು ಜಿಲ್ಲೆಗಳಲ್ಲಿ ಮುಂದಿನ ಎರಡು ದಿನ ಹಗುರ ಮಳೆಯಾಗುವ ಸಾಧ್ಯತೆಯಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ಚಾಮರಾಜನಗರ, ಕೊಡಗು, ಮಂಡ್ಯ ಹಾಗೂ ಮೈಸೂರು ಜಿಲ್ಲೆಗಳಲ್ಲಿ ಮಳೆಯಾಗುವ ಸಾಧ್ಯತೆಯಿದೆ. ಇನ್ನುಳಿದ ಜಿಲ್ಲೆಗಳಲ್ಲಿ ಒಣಹವೆ ಮುಂದುವರಿಯಲಿದೆ ಎಂದು ಹವಾಮಾನ ವರದಿ ತಿಳಿಸಿದೆ. ಬೆಂಗಳೂರಿನಲ್ಲಿ ಜ.3ರವರೆಗೂ ಚಳಿ ಮುಂದುವರಿಯಲಿದೆ. ಬೆಂಗಳೂರಿನಲ್ಲಿ ಗರಿಷ್ಠ ತಾಪಮಾನ 27 ಡಿಗ್ರಿ ಸೆಲ್ಸಿಯಸ್ ಇರಲಿದ್ದು, ಕನಿಷ್ಠ ತಾಪಮಾನ 19 ಡಿಗ್ರಿ ಸೆಲ್ಸಿಯಸ್ ದಾಖಲಾಗಲಿದೆ. ಮಡಿಕೇರಿಯಲ್ಲಿ ಗರಿಷ್ಠ ತಾಪಮಾನ 27

ಇಂದಿನ ಹವಾಮಾನ ವರದಿ Read More »

ಕರಾವಳಿ, ಕರ್ನಾಟಕ, ಬ್ರೇಕಿಂಗ್ ನ್ಯೂಸ್

ಹೊಸ ವರ್ಷದ ಸಂಭ್ರಮವನ್ನು ಆಚರಿಸುತ್ತಿದ್ದಾಗ ಭಾರೀ ದುರಂತ; 10 ಸಾವು, ಹಲವರಿಗೆ ಗಂಭೀರ ಗಾಯ

(ನ್ಯೂಸ್‌ ಕಡಬ) newskadaba.com,ಜ.01: ಹೊಸ ವರ್ಷದ ಸಂಭ್ರಮವನ್ನು ಆಚರಿಸುತ್ತಿದ್ದಾಗ ಭಾರೀ ದುರಂತವೊಂದು ನಡೆದಿದೆ. ಸ್ವಿಟ್ಜರ್‌ಲ್ಯಾಂಡ್‌ನ ಕ್ರಾನ್ಸ್ ಮೊಂಟಾನಾದ ಬಾರ್‌ನಲ್ಲಿ ಸಂಭವಿಸಿದ ಭಾರಿ ಸ್ಫೋಟದಲ್ಲಿ 10 ಜನರು ಸಾವನ್ನಪ್ಪಿದ್ದಾರೆ ಮತ್ತು ಅನೇಕರು ಗಾಯಗೊಂಡಿದ್ದಾರೆ. ಹೊಸ ವರ್ಷದ ಆಚರಣೆಯ ಸಮಯದಲ್ಲಿ ಐಷಾರಾಮಿ ಆಲ್ಪೈನ್ ಸ್ಕೀ ರೆಸಾರ್ಟ್ ಪಟ್ಟಣವಾದ ಕ್ರಾನ್ಸ್ ಮೊಂಟಾನಾದಲ್ಲಿರುವ ಲೆ ಕಾನ್ಸ್ಟೆಲೇಷನ್ ಎಂಬ ಬಾರ್‌ನಲ್ಲಿ ಸ್ಫೋಟ ಸಂಭವಿಸಿದೆ ಎಂದು ಸ್ವಿಸ್ ಪೊಲೀಸರು ಗುರುವಾರ ಮುಂಜಾನೆ ತಿಳಿಸಿದ್ದಾರೆ. ಸ್ಫೋಟಕ್ಕೆ ನಿಖರ ಕಾರಣ ಇನ್ನೂ ತಿಳಿದು ಬಂದಿಲ್ಲ. ವರದಿಗಳ ಪ್ರಕಾರ ಹಲವಾರು

ಹೊಸ ವರ್ಷದ ಸಂಭ್ರಮವನ್ನು ಆಚರಿಸುತ್ತಿದ್ದಾಗ ಭಾರೀ ದುರಂತ; 10 ಸಾವು, ಹಲವರಿಗೆ ಗಂಭೀರ ಗಾಯ Read More »

ಕರಾವಳಿ, ಕರ್ನಾಟಕ, ಬ್ರೇಕಿಂಗ್ ನ್ಯೂಸ್

ಹೊಸ ವರ್ಷದ ಆರಂಭದ ದಿನವೇ ಕೇಂದ್ರ ಸರ್ಕಾರ ಜನರಿಗೆ ದೊಡ್ಡ ಶಾಕ್;ಫೆಬ್ರವರಿ 1ರಿಂದ ದುಬಾರಿಯಾಗಲಿದೆ ಇವುಗಳ ಬೆಲೆ

(ನ್ಯೂಸ್‌ ಕಡಬ) newskadaba.com,ಜ.01 ನವದೆಹಲಿ: ಹೊಸ ವರ್ಷದ ಮೊದಲ ದಿನವೇ ಕೇಂದ್ರ ಸರ್ಕಾರ ಜನರಿಗೆ ಬಿಗ್ ಶಾಕ್ ನೀಡಿದೆ. ಫೆಬ್ರವರಿ 1ರಿಂದ ತಂಬಾಕು ಉತ್ಪನ್ನಗಳ ಮೇಲೆ ಹೆಚ್ಚುವರಿ ಅಬಕಾರಿ ಸುಂಕ ಮತ್ತು ಪಾನ್ ಮಸಾಲದ ಮೇಲೆ ಹೊಸ ಸೆಸ್ ಅನ್ನು ವಿಧಿಸಿ ಬುಧವಾರವೇ ಅಧಿಸೂಚನೆ ಹೊರಡಿಸಿದೆ. ಇದರಿಂದ ಸಿಗರೇಟ್, ಬೀಡಿ, ಪಾನ್ ಮಸಾಲಗಳ ಬೆಲೆ ಫೆಬ್ರವರಿ 1ರಿಂದ ಹೆಚ್ಚಳವಾಗಲಿದೆ. ತಂಬಾಕು ಉತ್ಪನ್ನಗಳು ಮತ್ತು ಪಾನ್ ಮಸಾಲದ ಮೇಲಿನ ಹೊಸ ಸುಂಕಗಳು ಜಿಎಸ್‌ಟಿ ದರಕ್ಕಿಂತ ಹೆಚ್ಚಾಗಿರುತ್ತದೆ. ಇದು ಇವುಗಳ ಮೇಲೆ

ಹೊಸ ವರ್ಷದ ಆರಂಭದ ದಿನವೇ ಕೇಂದ್ರ ಸರ್ಕಾರ ಜನರಿಗೆ ದೊಡ್ಡ ಶಾಕ್;ಫೆಬ್ರವರಿ 1ರಿಂದ ದುಬಾರಿಯಾಗಲಿದೆ ಇವುಗಳ ಬೆಲೆ Read More »

ಬ್ರೇಕಿಂಗ್ ನ್ಯೂಸ್, ರಾಷ್ಟ್ರೀಯ ನ್ಯೂಸ್

ಹೊಸ ವರ್ಷದ ಆರಂಭದಲ್ಲೇ ತುಸು ಹೆಚ್ಚಳ ಕಂಡ ಆಭರಣದ ದರ

(ನ್ಯೂಸ್‌ ಕಡಬ) newskadaba.com,ಜ.01 ಬೆಂಗಳೂರು: ಡಿಸೆಂಬರ್ ಕೊನೆ ವಾರದಲ್ಲಿ ಇಳಿಕೆಯಾದ ಚಿನ್ನದ ಬೆಲೆ, 2026 ರ ವರ್ಷಾರಂಭದಲ್ಲೇ ಇಂದು ಮತ್ತೆ ಹೆಚ್ಚಳ ಕಂಡಿದೆ. ಶುದ್ಧ ಚಿನ್ನದ ಇಂದಿನ ದರ ಜನವರಿ 1 2026, ಗುರುವಾರದಂದು ಮಾರುಕಟ್ಟೆಗಳಲ್ಲಿ 24 ಕ್ಯಾರೆಟ್ ಚಿನ್ನದ ಬೆಲೆ ಗ್ರಾಂ ಒಂದಕ್ಕೆ 13,506 ರೂಪಾಯಿ ಇದ್ದು, ಇಂದು 17 ರೂಪಾಯಿ ಏರಿಕೆ ಆಗಿದೆ. 10 ಗ್ರಾಂ ಶುದ್ಧ ಚಿನ್ನಕ್ಕೆ 1,35,060 ರೂಪಾಯಿ ಇದೆ. 24 ಕ್ಯಾರೆಟ್ 10 ಗ್ರಾಂ ಬೆಲೆಯಲ್ಲಿ ಇಂದು 170 ರೂಪಾಯಿ

ಹೊಸ ವರ್ಷದ ಆರಂಭದಲ್ಲೇ ತುಸು ಹೆಚ್ಚಳ ಕಂಡ ಆಭರಣದ ದರ Read More »

ಕರಾವಳಿ, ಕರ್ನಾಟಕ, ಬ್ರೇಕಿಂಗ್ ನ್ಯೂಸ್

ಪಂಜ ಬಾಡಿಗೆ ಮನೆಯಲ್ಲಿದ್ದ ದಂಪತಿಗಳ ಬಂಧನ:ಪುತ್ತೂರಿನಲ್ಲಿ ದರೋಡೆ ಯತ್ನ ಪ್ರಕರಣ ಸಿ.ಸಿ ಕ್ಯಾಮೆರಾ ದಾಖಲೆ ಆಧರಿಸಿ ಆರೆಸ್ಟ್ ಮುಂಡೂರು ಮೂಲದ ಆರೋಪಿಗಳು

(ನ್ಯೂಸ್‌ ಕಡಬ) newskadaba.com,ಜ.01 ಮಂಗಳೂರು: ಪುತ್ತೂರು ವಿವೇಕಾನಂದ ಕಾಲೇಜಿನ ನಿವೃತ್ತ ಪ್ರಾಂಶುಪಾಲರಾದ ಎ.ವಿ. ನಾರಾಯಣ ಅವರ ಪುತ್ತೂರಿನ ಮನೆಯಲ್ಲಿ ಡಿ.17ರಂದು ಮಧ್ಯರಾತ್ರಿ ಕಳವು ಯತ್ನ ನಡೆದಿದ್ದು ಮನೆಯವರನ್ನು ಬೆದರಿಸಿ ಬೆಲೆಬಾಳುವ ಸೊತ್ತುಗಳನ್ನು ದೋಚಲು ಯತ್ನಿಸಿದ ಪ್ರಕರಣ ಸಂಬಂಧಿಸಿ ಪುರೋಹಿತ ಕೆಲಸ ಮಾಡುವ ಅರ್ಚಕ ಮತ್ತು ಆತನ ಪತ್ನಿಯನ್ನು ಪೊಲೀಸರು ಬಂಧಿಸಿದ್ದಾರೆ. ಪುತ್ತೂರು ವಿವೇಕಾನಂದ ಕಾಲೇಜಿನ ನಿವೃತ್ತ ಪ್ರಾಂಶುಪಾಲರಾದ ಎ.ವಿ. ನಾರಾಯಣ ಅವರ ಪುತ್ತೂರಿನ ಮನೆಯಲ್ಲಿ ಡಿ.17ರಂದು ಮಧ್ಯರಾತ್ರಿ ಕಳವು ಯತ್ನ ನಡೆದಿದ್ದು ಮನೆಯವರನ್ನು ಬೆದರಿಸಿ ಬೆಲೆಬಾಳುವ ಸೊತ್ತುಗಳನ್ನು ದೋಚಲು

ಪಂಜ ಬಾಡಿಗೆ ಮನೆಯಲ್ಲಿದ್ದ ದಂಪತಿಗಳ ಬಂಧನ:ಪುತ್ತೂರಿನಲ್ಲಿ ದರೋಡೆ ಯತ್ನ ಪ್ರಕರಣ ಸಿ.ಸಿ ಕ್ಯಾಮೆರಾ ದಾಖಲೆ ಆಧರಿಸಿ ಆರೆಸ್ಟ್ ಮುಂಡೂರು ಮೂಲದ ಆರೋಪಿಗಳು Read More »

ಕರಾವಳಿ, ಕರ್ನಾಟಕ, ಬ್ರೇಕಿಂಗ್ ನ್ಯೂಸ್

ದೇಶದ ಹಾಗೂ ವಿಶ್ವದ ಜನತೆಗೆ ಹೊಸ ವರ್ಷದ ಹೃತ್ಪೂರ್ವಕ ಶುಭಾಶಯ ತಿಳಿಸಿದ ಪ್ರಧಾನಿ ಮೋದಿ

(ನ್ಯೂಸ್‌ ಕಡಬ) newskadaba.com, ಜ.01 ನವದೆಹಲಿ: ಜನತೆಗೆ ಹೊಸ ವರ್ಷದ ಶುಭಾಶಯ ತಿಳಿಸಿ, ಆರೋಗ್ಯ ಸಮೃದ್ಧಿಗಾಗಿ ಪ್ರಾರ್ಥಿಸಿದ ಪ್ರಧಾನಿ ಮೋದಿ, ಶಾಂತಿ, ಸಮೃದ್ಧಿ ಮತ್ತು ಉತ್ತಮ ಆರೋಗ್ಯದ ಆಶಯವನ್ನು ವ್ಯಕ್ತಪಡಿಸಿದ ಅವರು, ಜನರು ತಮ್ಮ ವೈಯಕ್ತಿಕ ಮತ್ತು ವೃತ್ತಿಪರ ಜೀವನದಲ್ಲಿ ಯಶಸ್ಸನ್ನು ಸಾಧಿಸಬೇಕೆಂದು ಹಾರೈಸಿದ್ದಾರೆ “ಹೊಸ ವರ್ಷವು ನಿಮ್ಮ ಪ್ರಯತ್ನಗಳಲ್ಲಿ ಯಶಸ್ಸು ಮತ್ತು ನೀವು ಮಾಡುವ ಎಲ್ಲದರಲ್ಲೂ ಸಾಧನೆಯೊಂದಿಗೆ ಉತ್ತಮ ಆರೋಗ್ಯ ಮತ್ತು ಸಮೃದ್ಧಿಯನ್ನು ತರಲಿ,” ಎಂದು ಪ್ರಧಾನಿ ಮೋದಿ ಎಕ್ಸ್‌ನಲ್ಲಿ ಹಂಚಿಕೊಂಡ ಸಂದೇಶದಲ್ಲಿ ತಿಳಿಸಿದ್ದಾರೆ. ಏತನ್ಮಧ್ಯೆ

ದೇಶದ ಹಾಗೂ ವಿಶ್ವದ ಜನತೆಗೆ ಹೊಸ ವರ್ಷದ ಹೃತ್ಪೂರ್ವಕ ಶುಭಾಶಯ ತಿಳಿಸಿದ ಪ್ರಧಾನಿ ಮೋದಿ Read More »

ಬ್ರೇಕಿಂಗ್ ನ್ಯೂಸ್, ರಾಷ್ಟ್ರೀಯ ನ್ಯೂಸ್
Scroll to Top