News Kadaba

ಜಮ್ಮು ಕಾಶ್ಮೀರದಲ್ಲಿ ಎಸ್‍ಐಯನ್ನು ಗುಂಡಿಕ್ಕಿ ಹತ್ಯೆಗೈದ ಉಗ್ರರು.!

(ನ್ಯೂಸ್ ಕಡಬ) newskadaba.com ಜಮ್ಮು ಅ. 20: ಪೊಲೀಸ್ ಇನ್ಸ್ ಪೆಕ್ಟರ್ ಓರ್ವರನ್ನು ಭಯೋತ್ಪಾದಕರು ಗುಂಡಿಕ್ಕಿ ಹತ್ಯೆ ಮಾಡಿರುವ ಘಟನೆ ಜಮ್ಮು ಕಾಶ್ಮೀರದ ಅನಂತ್‍ನಾಗ್ ಜಿಲ್ಲೆಯ ಬಿಜ್‍ಬೆಹರಾ ಪ್ರದೇಶದಲ್ಲಿ ನಡೆದಿದೆ.ಮೃತ ಇನ್ಸ್ ಪೆಕ್ಟರ್ ಅನ್ನು ಅನಂತ್‍ನಾಗ್ ಜಿಲ್ಲೆಯ ಪೊಲೀಸ್ ಅಧಿಕಾರಿ ಮೊಹಮ್ಮದ್ ಅಶ್ರಫ್ ಎಂದು ಗುರುತಿಸಲಾಗಿದೆ. ಅನಂತ್‍ನಾಗ್ ಜಿಲ್ಲೆಯ ಮಸೀದಿಯಲ್ಲಿ ಪ್ರಾರ್ಥನೆ ಸಲ್ಲಿಸಿ ಮನೆಗೆ ಮರಳುತ್ತಿದ್ದಾಗ ಮೊಹಮ್ಮದ್ ಅಶ್ರಫ್ ಅವರ ಮೇಲೆ ಭಯೋತ್ಪಾದಕರು ಗುಂಡಿನ ದಾಳಿ ಮಾಡಿದ್ದಾರೆ.ಈ ಗುಂಡಿನ ದಾಳಿಯಲ್ಲಿ ಅಶ್ರಫ್ ತೀವ್ರವಾಗಿ ಗಾಯಗೊಂಡಿದ್ದು, ಅವರನ್ನು ಬಿಜ್‍ಬೆಹರಾ ಉಪ […]

ಜಮ್ಮು ಕಾಶ್ಮೀರದಲ್ಲಿ ಎಸ್‍ಐಯನ್ನು ಗುಂಡಿಕ್ಕಿ ಹತ್ಯೆಗೈದ ಉಗ್ರರು.! Read More »

ಕ್ರೈಮ್ ನ್ಯೂಸ್, ರಾಷ್ಟ್ರೀಯ ನ್ಯೂಸ್

ಮದ್ಯಕ್ಕೆ ಸ್ಯಾನಿಟೈಸರ್ ಮಿಕ್ಸ್ ಮಾಡಿ ಸೇವನೆ ➤ ಐವರು ಮೃತ್ಯು

(ನ್ಯೂಸ್ ಕಡಬ) newskadaba.com ಕೇರಳ ಅ. 20: ಮದ್ಯಕ್ಕೆ ಸ್ಯಾನಿಟೈಸರ್ ಮಿಕ್ಸ್ ಮಾಡಿ ಸೇವನೆ ಮಾಡಿದ ಪರಿಣಾಮ ಐವರು ಸಾವನ್ನಪ್ಪಿರುವ ಘಟನೆ ಕೇರಳದ ಪಾಲಕ್ಕಾಡ್ ಜಿಲ್ಲೆಯ ಕಾಂಜಿಕೋಡ್‍ನಲ್ಲಿ ನಡೆದಿದೆ.ಮೃತ ಐವರನ್ನು ರಾಮನ್ (61), ಅಯ್ಯಪ್ಪನ್ (55), ಅರುಣ್ (22), ಶಿವನ್ (45) ಮತ್ತು ಮೂರ್ತಿ (24) ಎಂದು ಗುರುತಿಸಲಾಗಿದೆ.   ಮೃತರು ಒಂದೇ ಬುಡಕಟ್ಟು ಕಾಲೊನಿಯಲ್ಲಿ ವಾಸಿಸುತ್ತಿದ್ದರು, ಭಾನುವಾರ ಸಂಜೆ ಒಟ್ಟಿಗೆ ಮದ್ಯ ಸೇವಿಸಿ ಅಂದೇ ರಾತ್ರಿಯಲ್ಲಿ ಕುಸಿದು ಬಿದ್ದಿದ್ದಾರೆ, ಆದರೆ ಸೋಮವಾರದಂದು ಐವರು ಮೃತಪಟ್ಟಿದ್ದಾರೆ.ಇವರ ಜೊತೆ ಮದ್ಯ

ಮದ್ಯಕ್ಕೆ ಸ್ಯಾನಿಟೈಸರ್ ಮಿಕ್ಸ್ ಮಾಡಿ ಸೇವನೆ ➤ ಐವರು ಮೃತ್ಯು Read More »

ಕ್ರೈಮ್ ನ್ಯೂಸ್, ರಾಷ್ಟ್ರೀಯ ನ್ಯೂಸ್

ರಾಗಿಣಿ, ಸಂಜನಾಗೆ ಬೇಲ್ ಸಿಗದಿದ್ರೆ ಕಮಿಷನರ್ ಕಚೇರಿ ಬ್ಲಾಸ್ಟ್ ಆಗುತ್ತೆ.!? ➤ ನ್ಯಾಯಾಧೀಶರು ಸೇರಿ ಸಿಸಿಬಿ ತನಿಖಾಧಿಕಾರಿಗಳಿಗೆ ಬೆದರಿಕೆ ಪತ್ರ ರವಾನೆ

(ನ್ಯೂಸ್ ಕಡಬ) newskadaba.com ಬೆಂಗಳೂರು, ಅ. 20: ಡ್ರಗ್ಸ್ ಪ್ರಕರಣದಲ್ಲಿ ಬಂಧನದಲ್ಲಿರುವ ನಟಿ ರಾಗಿಣಿ ದ್ವಿವೇದಿ ಜಾಮೀನು ಸಿಗದಿದ್ರೆ ಕಮಿಷನರ್ ಕಚೇರಿ ಮತ್ತು ಸಿಟಿ ಸಿವಿಲ್ ಕೋರ್ಟಿಗೆ ಬೆದರಿಕೆ ಪತ್ರ ಬಂದಿದೆ. ಪತ್ರದ ಜೊತೆಗೆ ಕಮೀಷನರ್ ಕಚೇರಿಗೆ ಬಂಡೆ ಒಡೆಯುವ ಸ್ಫೋಟಕ ರವಾನೆ ಮಾಡಲಾಗಿದೆ ಎಂದು ತಿಳಿದು ಬಂದಿದೆ. ಡ್ರಗ್ಸ್ ಕೇಸ್ ನಲ್ಲಿ ನಟಿ ಸಂಜನಾ, ರಾಗಿಣಿ ಸೇರಿದಂತೆ 15ಕ್ಕೂ ಅಧಿಕ ಮಂದಿ ಜೈಲು ಪಾಲಾಗಿದ್ದಾರೆ. ಇತ್ತ ಎನ್.ಡಿ.ಪಿ.ಎಸ್ ಕೋರ್ಟ್ ನಲ್ಲಿ ಜಾಮೀನು ಸಿಗದೇ ಸಂಜನಾ ಹಾಗೂ ರಾಗಿಣಿ

ರಾಗಿಣಿ, ಸಂಜನಾಗೆ ಬೇಲ್ ಸಿಗದಿದ್ರೆ ಕಮಿಷನರ್ ಕಚೇರಿ ಬ್ಲಾಸ್ಟ್ ಆಗುತ್ತೆ.!? ➤ ನ್ಯಾಯಾಧೀಶರು ಸೇರಿ ಸಿಸಿಬಿ ತನಿಖಾಧಿಕಾರಿಗಳಿಗೆ ಬೆದರಿಕೆ ಪತ್ರ ರವಾನೆ Read More »

ಕರ್ನಾಟಕ, ಕ್ರೈಮ್ ನ್ಯೂಸ್, ರಾಷ್ಟ್ರೀಯ ನ್ಯೂಸ್

ಬಾಲಿವುಡ್ ನಟಿ ಝರೀನಾ ನಿಧನ

(ನ್ಯೂಸ್ ಕಡಬ) newskadaba.com ಮುಂಬೈ ಅ. 19:  ಕುಂಕುಮ್‍ಭಾಗ್ಯ ಧಾರಾವಾಹಿಯಿಂದ ಪ್ರಸಿದ್ಧರಾಗಿದ್ದ ಬಾಲಿವುಡ್ ನ ಕಿರುತೆರೆ ನಟಿ ಜರೀನಾ ರೋಷನ್ ಹೃದಯಾಘಾತದಿಂದ ನಿಧನರಾಗಿದ್ದಾರೆ. ಜರೀನಾ (54) ಕಿರುತೆರೆಯಲ್ಲಿ ಬಲು ಪ್ರಸಿದ್ಧರಾಗಿದ್ದು ಅಮ್ಮ, ಅತ್ತೆ ಪಾತ್ರಗಳಿಗೆ ನಿರ್ದೇಶಕರ ಮೊದಲ ಆಯ್ಕೆ ನಟಿಯಾಗಿದ್ದರು. ಕುಂಕುಮಭಾಗ್ಯದಲ್ಲಿ ಇವರು ನಟಿಸಿದ್ದ ಇಂದೂ ದಾಸಿ ಎಂಬ ಪಾತ್ರದ ಮೂಲಕ ಕಿರುತೆರೆ ಪ್ರೇಕ್ಷಕರ ಅಚ್ಚುಮೆಚ್ಚಿನ ನಟಿಯಾಗಿದ್ದರು.      

ಬಾಲಿವುಡ್ ನಟಿ ಝರೀನಾ ನಿಧನ Read More »

ರಾಷ್ಟ್ರೀಯ ನ್ಯೂಸ್

ಬೆಂಗಳೂರು: ಚಾಲಕನ ನಿಯಂತ್ರಣ ತಪ್ಪಿ ಲಾರಿ ಪಲ್ಟಿ

(ನ್ಯೂಸ್ ಕಡಬ) newskadaba.com ಬೆಂಗಳೂರು, ಅ.19: ತರಕಾರಿ ಸಾಗಿಸುತ್ತಿದ್ದ ಲಾರಿ ಚಾಲಕನ ನಿಯಂತ್ರಣ ತಪ್ಪಿ ಪಲ್ಟಿಯಾಗಿರುವ ಘಟನೆ ಬೆಂಗಳೂರಿನ ಬನ್ನೇರುಘಟ್ಟ ಬಳಿಯ ನೈಸ್ ರಸ್ತೆಯಲ್ಲಿ ನಡೆದಿದೆ.     ನಗರದ ಹಲವು ಕಡೆ ಭಾರಿ ಮಳೆಯಾಗಿದೆ. ಈ ಪರಿಣಾಮ ಅನಾಹುತಗಳು ಸಹ ಸಂಭವಿಸುತ್ತಿವೆ. ನೈಸ್ ರಸ್ತೆಯಲ್ಲಿ ಅಪಘಾತ ನಡೆದ ಸಮಯದಲ್ಲಿ ಜೋರಾಗಿ ಮಳೆಯಾಗಿತ್ತು. ರಸ್ತೆ ಪೂರ್ತಿ ನೀರಿನಿಂದ ತೊಯ್ದಿತ್ತು. ಈ ವೇಳೆ ಚಾಲಕನ ನಿಯಂತ್ರಣ ತಪ್ಪಿ ಲಾರಿ ನೆಲಕ್ಕೆ ಉರುಳಿದೆ. ಸ್ಥಳಕ್ಕೆ ಹುಳಿಮಾವು ಸಂಚಾರಿ ಪೊಲೀಸರು ಭೇಟಿ

ಬೆಂಗಳೂರು: ಚಾಲಕನ ನಿಯಂತ್ರಣ ತಪ್ಪಿ ಲಾರಿ ಪಲ್ಟಿ Read More »

ಕರಾವಳಿ

ಇನ್ನುಂದೆ ಹೆಲ್ಮೆಟ್ ಧರಿಸದೇ ಬೈಕ್ ಚಲಾಯಿಸಿದರೆ 3 ತಿಂಗಳು ರದ್ದಾಗುತ್ತೆ ಲೈಸೆನ್ಸ್.!!

(ನ್ಯೂಸ್ ಕಡಬ) newskadaba.com ಬೆಂಗಳೂರು ಅ. 19: ಇನ್ನುಂದೆ ಹೆಲ್ಮೆಟ್ ಧರಿಸದೇ ಬೈಕ್ ಚಲಾಯಿಸಿದರೆ ಲೈಸೆನ್ಸ್ ರದ್ದು ಮಾಡಲು ಸಾರಿಗೆ ಇಲಾಖೆ ಆದೇಶ ಹೊರಡಿಸಿದೆ. ಇನ್ನುಮುಂದೆ ಬೈಕ್ ಸವಾರ ಹಾಗೂ ಹಿಂಬದಿ ಸವಾರರು ಕಡ್ಡಾಯವಾಗಿ ಹೆಲ್ಮೆಟ್ ಧರಿಸಲೇಬೇಕು. ಒಂದು ವೇಳೆ ಹೆಲ್ಮೆಟ್ ಧರಿಸದೇ ಬೈಕ್ ಚಲಾಯಿಸಿದರೆ 3 ತಿಂಗಳ ಕಾಲ ವಾಹನ ಪರವಾನಿಗಿ ಅಮಾನತುಗೊಳಿಸಬೇಕು ಎಂದು ಸಾರಿಗೆ ಇಲಾಖೆ ಆಯುಕ್ತರ ಕಚೇರಿ ಆದೇಶ ಹೊರಡಿಸಿದೆ. ಅಪಘಾತಗಳ ಸಂಖ್ಯೆ ಹೆಚ್ಚುತ್ತಿರುವ ಹಿನ್ನೆಲೆಯಲ್ಲಿ ಈ ಮಹತ್ವದ ಆದೇಶ ಹೊರಡಿಸಲಾಗಿದೆ.    

ಇನ್ನುಂದೆ ಹೆಲ್ಮೆಟ್ ಧರಿಸದೇ ಬೈಕ್ ಚಲಾಯಿಸಿದರೆ 3 ತಿಂಗಳು ರದ್ದಾಗುತ್ತೆ ಲೈಸೆನ್ಸ್.!! Read More »

ಕರಾವಳಿ, ಕರ್ನಾಟಕ, ರಾಷ್ಟ್ರೀಯ ನ್ಯೂಸ್

ಸುಳ್ಯ :ವಸತಿಗೃಹವೊಂದರಲ್ಲಿ ಯುವಕ-ಯುವತಿ ಆತ್ಯಹತ್ಯೆಗೆ ಶರಣು.!

(ನ್ಯೂಸ್ ಕಡಬ) newskadaba.com ಸುಳ್ಯ  ಅ. 19: ಸುಳ್ಯ ನಗರದ ವಸತಿಗೃಹವೊಂದರಲ್ಲಿ ಯುವಕ ಹಾಗೂ ಯುವತಿಆತ್ಮಹತ್ಯೆಗೆ ಶರಣಾಗಿರುವ ಘಟನೆ ಇಂದು ನಡೆದಿದೆ. ಆತ್ಮಹತ್ಯೆಗೆ ಶರಣಾದ ಯುವಕನನ್ನು ಐವರ್ನಾಡಿನ ಕಟ್ಟತ್ತಾರು ತಿಮ್ಮಪ್ಪ ಗೌಡರ ಪುತ್ರ ದರ್ಶನ್ ಎಂದು ತಿಳಿದು ಬಂದಿದೆ.   ನೇಣು ಬಿಗಿದ ಸ್ಥಿತಿಯಲ್ಲಿ ಇಬ್ಬರ ಮೃತದೇಹಗಳು ಪತ್ತೆಯಾಗಿದೆ .ಇನ್ನು ಆತ್ಮಹತ್ಯೆಗೆ ಶರಣಾಗಿರುವ ಯುವತಿ ಬೆಳ್ತಂಗಡಿ ನಿವಾಸಿ ಎಂದು ತಿಳಿದು ಬಂದಿದೆ. ಆದರೆ ಯುವಕ ಹಾಗೂ ಯುವತಿಯ ಆತ್ಮಹತ್ಯೆಗೆ ನಿಖರ ಕಾರಣ ತಿಳಿದು ಬಂದಿಲ್ಲ. ಘಟನಾ ಸ್ಥಳಕ್ಕೆ

ಸುಳ್ಯ :ವಸತಿಗೃಹವೊಂದರಲ್ಲಿ ಯುವಕ-ಯುವತಿ ಆತ್ಯಹತ್ಯೆಗೆ ಶರಣು.! Read More »

ಕರಾವಳಿ, ಕರ್ನಾಟಕ, ಕ್ರೈಮ್ ನ್ಯೂಸ್

ಲಡಾಖ್ ಗಡಿಯಲ್ಲಿ ಚೀನಾ ಯೋಧನ ಬಂಧನ

(ನ್ಯೂಸ್ ಕಡಬ) newskadaba.com ಲಡಾಖ್ ಅ. 19: ಲಡಾಖ್‌ನ ಚುಮಾರ್-ಡೆಮ್‌ಚೋಕ್ ಪ್ರದೇಶದಲ್ಲಿ ಚೀನಾದ ಸೇನೆಗೆ ಸೇರಿದ್ದ ಸೈನಿಕನೊಬ್ಬನನ್ನು ಭಾರತೀಯ ಭದ್ರತಾ ಪಡೆ ಬಂಧಿಸಿದೆ. ಪೀಪಲ್ಸ್ ಲಿಬರೇಶನ್ ಆರ್ಮಿ (ಪಿಎಲ್‌ಎ) ಸೈನಿಕ ಅಜಾಗರೂಕತೆಯಿಂದ ಭಾರತೀಯ ಭೂಪ್ರದೇಶವನ್ನು ಪ್ರವೇಶಿಸಿರಬಹುದು ಎನ್ನಲಾಗಿದ್ದು ವಶಕ್ಕೆ ಪಡೆದ ಸೈನಿಕನನ್ನು ತೀವ್ರ ವಿಚಾರಣೆಗೆ ಒಳಪಡಿಸಲಾಗಿದೆ. ತನಿಖೆ ಮುಗಿದ ನಂತರ ಪ್ರೋಟೋಕಾಲ್ ಪ್ರಕಾರ ಅವನನ್ನು ಚೀನಾಗೆ ವಾಪಾಸ್ ಕಳಿಸಲಾಗುತ್ತದೆ ಎಂದು ಸುದ್ದಿ ಸಂಸ್ಥೆ ಮೂಲಗಳು  ವರದಿ ಮಾಡಿದೆ.ಲಡಾಖ್ ನಲ್ಲಿ ನಡೆಯುತ್ತಿರುವ ಗಡಿ ಸಂಘರ್ಷದ ನಡುವೆ ಈ ಬೆಳವಣಿಗೆ

ಲಡಾಖ್ ಗಡಿಯಲ್ಲಿ ಚೀನಾ ಯೋಧನ ಬಂಧನ Read More »

ರಾಷ್ಟ್ರೀಯ ನ್ಯೂಸ್

ರಾಜ್ಯದಲ್ಲಿ ಮತ್ತೆ ಮಳೆಯಾಗುವ ಸಾಧ್ಯತೆ ➤ ಹವಮಾನ ಇಲಾಖೆ ಮುನ್ಸೂಚನೆ

(ನ್ಯೂಸ್ ಕಡಬ) newskadaba.com ಕರಾವಳಿ ಅ. 19: ಬಂಗಾಳ ಕೊಲ್ಲಿಯಲ್ಲಿ ವಾಯುಭಾರ ಕುಸಿತ ಉಂಟಾಗಿದ್ದರಿಂದ ರಾಜ್ಯದ ವಿವಿಧ ಜಿಲ್ಲೆಗಳಲ್ಲಿ ಮಳೆ, ಪ್ರವಾಹ ಪರಿಸ್ಥಿತಿ ಉಂಟಾಗಿತ್ತು. ಜನರು ಸುಧಾರಿಸಿಕೊಳ್ಳಲು ಹರಸಾಹಸ ಪಡುತ್ತಿರುವ ಮಧ್ಯೆ ಮತ್ತೆ ವಾಯುಭಾರ ಕುಸಿತ ಉಂಟಾಗಿದೆ.   ಪ್ರಕೃತಿ ವಿಕೋಪ ಉಸ್ತುವಾರಿ ಕೇಂದ್ರ ಈ ಕುರಿತು ಮಾಹಿತಿ ನೀಡಿದೆ. ಬಂಗಾಳಕೊಲ್ಲಿಯಲ್ಲಿ ಸೋಮವಾರ ಮತ್ತೊಂದು ವಾಯುಭಾರ ಕುಸಿತ ಉಂಟಾಗುವ ಸಾಧ್ಯತೆ ಇದ್ದು, ಮೂರು ದಿನ ಮಳೆಯಾಗಲಿದೆ. ಕರಾವಳಿ, ಮಲೆನಾಡು ಮತ್ತು ಉತ್ತರ ಕರ್ನಾಟಕದ ವಿವಿಧ ಭಾಗಗಳಲ್ಲಿ ಮೂರು ದಿನ

ರಾಜ್ಯದಲ್ಲಿ ಮತ್ತೆ ಮಳೆಯಾಗುವ ಸಾಧ್ಯತೆ ➤ ಹವಮಾನ ಇಲಾಖೆ ಮುನ್ಸೂಚನೆ Read More »

ಕರಾವಳಿ, ಕರ್ನಾಟಕ

ಪಬ್​ಜಿ ಆಡಬೇಡ ಅಂದಿದ್ದಕ್ಕೆ ಅಪ್ಪನ ಕತ್ತು ಸೀಳಿ ಬಿಟ್ಟ ಮಗ…!

(ನ್ಯೂಸ್ ಕಡಬ) newskadaba.com ಮೇರಠ್, ಅ.19: ಪಬ್​ಜಿ ಆಡಬೇಡ, ಅದು ಒಳ್ಳೆಯದಲ್ಲ ಎಂದು ಬುದ್ಧಿವಾದ ಹೇಳಿದ್ದಕ್ಕೆ ಕೇಳಿ ಕೇಳಿ ಕೆದರಿದ ಮಗ ಪಕ್ಕದಲ್ಲೇ ಇದ್ದ ಚೂರಿ ತಗೊಂಡು ಅಪ್ಪನ ಕತ್ತು ಸೀಳಿಯೇ ಬಿಟ್ಟ! ಇಂಥದ್ದೊಂದು ವಿಲಕ್ಷಣ ಕೃತ್ಯ ಮೇರಠ್ ಜಿಲ್ಲೆಯ ಖಾರ್​ಖೋಡ ಪಟ್ಟಣದ ಜಾಮ್​ನಗರ ಎಂಬಲ್ಲಿ ನಡೆದಿದೆ. ಆರೋಪಿಯನ್ನು ಆಮಿರ್ ಎಂದು ಗುರುತಿಸಲಾಗಿದೆ.     ಈ ಕೃತ್ಯ ಗುರುವಾರವೇ ನಡೆದಿದೆ. ಆದರೆ ಪೊಲೀಸರಿಗೆ ಮಾಹಿತಿ ನೀಡಿರಲಿಲ್ಲ. ಸುದೀರ್ಘ ಹೊತ್ತು ಗೇಮ್​ನಲ್ಲೇ ಕಾಲಕಳೆಯುತ್ತಿದ್ದ ಆಮಿರ್​ಗೆ ಈ ಬಗ್ಗೆ

ಪಬ್​ಜಿ ಆಡಬೇಡ ಅಂದಿದ್ದಕ್ಕೆ ಅಪ್ಪನ ಕತ್ತು ಸೀಳಿ ಬಿಟ್ಟ ಮಗ…! Read More »

ರಾಷ್ಟ್ರೀಯ ನ್ಯೂಸ್
Scroll to Top