News Kadaba

ಕೊಳ್ನಾಡು: ರಬ್ಬರ್‌ ತೋಟದಲ್ಲಿ ಕೆಲಸಕ್ಕಿದ್ದ ಕೇರಳ ಮೂಲದ ವ್ಯಕ್ತಿ ಆತ್ಮಹತ್ಯೆ

(ನ್ಯೂಸ್ ಕಡಬ) newskadaba.com ಕೊಳ್ನಾಡು, ಸೆ.26:  ರಬ್ಬರ್‌ ತೋಟದಲ್ಲಿ ಕೇರಳ ಮೂಲದ ವ್ಯಕ್ತಿಯೊಬ್ಬರು ಆತ್ಮಹತ್ಯೆ ಮಾಡಿಕೊಂಡ ಘಟನೆ ವಿಟ್ಲ ಠಾಣಾ ವ್ಯಾಪ್ತಿಯ ಕೊಳ್ನಾಡು ಗ್ರಾಮದ ಕಾಡುಮಠ ಎಂಬಲ್ಲಿ ನಡೆದಿದೆ.     ಮೃತ ವ್ಯಕ್ತಿ ಕೇರಳ ರಾಜ್ಯದ ಕಣ್ಣೂರು ಜಿಲ್ಲೆಯ ಇರುವಸ್ಯ ಸಲ್ಮೋಯಿ ತೋಮಸ್(55 ವ.) ಎಂದು ಗುರುತಿಸಲಾಗಿದೆ. ಇವರು ಕೊಳ್ನಾಡು ಗ್ರಾಮದ ಕಾಡುಮಠ ಎಂಬಲ್ಲಿ ಖಾಸಗಿ ವ್ಯಕ್ತಿಯೋರ್ವರ ಮಾಲಕತ್ವದ ರಬ್ಬರ್‌ ತೋಟದಲ್ಲಿ ಕಳೆದ ಹಲವಾರು ವರ್ಷಗಳಿಂದ ಸಲ್ಮೋಯಿ ತೋಮಸ್‌ ರವರು ಕೆಲಸ ಮಾಡಿಕೊಂಡಿದ್ದರು. ಇನ್ನು ಆತ್ಮಹತ್ಯೆಗೆ […]

ಕೊಳ್ನಾಡು: ರಬ್ಬರ್‌ ತೋಟದಲ್ಲಿ ಕೆಲಸಕ್ಕಿದ್ದ ಕೇರಳ ಮೂಲದ ವ್ಯಕ್ತಿ ಆತ್ಮಹತ್ಯೆ Read More »

ಕರಾವಳಿ

ಡ್ರಗ್ಸ್ ಪ್ರಕರಣ : ವಿಚಾರಣೆಗೆ ಹಾಜರಾದ ನಟಿ ದೀಪಿಕಾ ಪಡುಕೋಣೆ

(ನ್ಯೂಸ್ ಕಡಬ) newskadaba.com ಮುಂಬೈ, ಸೆ. 26:  ಮಾದಕ ವಸ್ತು ಸೇವನೆ ಪ್ರಕರಣ ಸಂಬಂಧ ಬಾಲಿವುಡ್’ನ ಖ್ಯಾತ ನಟಿ ದೀಪಿಕಾ ಪಡುಕೋಣೆಯವರು ಶನಿವಾರ ಮಾದಕ ವಸ್ತು ನಿಯಂತ್ರಣ ದಳ (ಎನ್’ಸಿಬಿ) ಮುಂದೆ ವಿಚಾರಣೆಗೆ ಹಾಜರಾಗಿದ್ದಾರೆ. ಡ್ರಗ್ಸ್ ಪ್ರಕರಣ ಸಂಬಂಧ ದೀಪಿಕಾ ಪಡುಕೋಣೆಯವರಿಗೆ ಶುಕ್ರವಾರ ಹಾಜರಾಗಲು ಎನ್’ಸಿಬಿ ಸೂಚನೆ ನೀಡಿತ್ತು. ಆದರೆ, ಶನಿವಾರ ವಿಚಾರಣೆಗೆ ಹಾಜರಾಗುವುದಾಗಿ ದೀಪಿಕಾ ತಿಳಿಸಿದ್ದರು. ಇದರಂತೆ ಇಂದು ದೀಪಿಕಾ ಅವರು ವಿಚಾರಣೆಗೆ ಹಾಜರಾಗಿದ್ದಾರೆ. ಬಾಲಿವುಡ್’ನ ದೀಪಿಕಾ ಪಡುಕೋಣೆಯವರು ಡ್ರಗ್ಸ್’ಗೆ ಬೇಡಿಕೆ ಇಟ್ಟಿದ್ದರು ಎನ್ನಲಾಗಿದ್ದ ವಾಟ್ಸ್’ಆಪ್

ಡ್ರಗ್ಸ್ ಪ್ರಕರಣ : ವಿಚಾರಣೆಗೆ ಹಾಜರಾದ ನಟಿ ದೀಪಿಕಾ ಪಡುಕೋಣೆ Read More »

ರಾಷ್ಟ್ರೀಯ ನ್ಯೂಸ್

ಸುಳ್ಯ : ಬಾಡಿಗೆ ಪಾವತಿಸದ ಅಂಗಡಿಗೆ ಬೀಗ ಜಡಿದ ನ.ಪಂ ಅಧಿಕಾರಿಗಳು

(ನ್ಯೂಸ್ ಕಡಬ) newskadaba.com ಸುಳ್ಯ , ಸೆ. 25:  ನಗರ ಪಂಚಾಯತ್ ವಾಣಿಜ್ಯ ಸಂಕೀರ್ಣದಲ್ಲಿ ಅಂಗಡಿ ನಡೆಸುತ್ತಿದ್ದು ನ.ಪಂ ಗೆ ಕಳೆದ ಒಂದೂವರೆ ವರುಷದಿಂದ ಬಾಡಿಗೆ ಪಾವತಿಸದ ಅಂಗಡಿಗಳನ್ನು ನ.ಪಂ ಅಧಿಕಾರಿಗಳು ಇಂದು ಮುಚ್ಚಿದರು.   ನಗರ ಪಂಚಾಯತ್ ಕಚೇರಿಯ ಎದುರು ರಸ್ತೆಯ ಇನ್ನೊಂದು ಬದಿಯಲ್ಲಿರುವ ನ.ಪಂ ವಾಣಿಜ್ಯ ಸಂಕೀರ್ಣದಲ್ಲಿರುವ ಎರಡು ಅಂಗಡಿಗಳಿಗೆ ಬಾಡಿಗೆ ಪಾವತಿಸಿಲ್ಲ ಎಂಬ ಕಾರಣಕ್ಕೆ ಇಂದು ಸ್ಥಳಕ್ಕೆ ದೌಡಯಿಸಿದ ಅಧಿಕಾರಿಗಳು ಬೀಗ ಜಡಿದಿದ್ದಾರೆ.  ಹಲವು ಬಾರಿ ನೋಟಿಸ್ ನೀಡಿದ್ದರು ವಾಣಿಜ್ಯ ಸಂಕೀರ್ಣ ಅಂಗಡಿಯನ್ನು

ಸುಳ್ಯ : ಬಾಡಿಗೆ ಪಾವತಿಸದ ಅಂಗಡಿಗೆ ಬೀಗ ಜಡಿದ ನ.ಪಂ ಅಧಿಕಾರಿಗಳು Read More »

ಕರಾವಳಿ, ಕರ್ನಾಟಕ

ಸೈನಿಕರಿಗೆ ಮಾಸ್ಕ್ ಕಳುಹಿಸಿದ ಬಾಲಕಿಗೆ ರಕ್ಷಣಾ ಸಚಿವ ರಾಜನಾಥ್ ರಿಂದ ಶ್ಲಾಘನೆ

(ನ್ಯೂಸ್ ಕಡಬ) newskadaba.com ಉಡುಪಿ , ಸೆ. 25:  ಲಾಕ್‌ಡೌನ್ ಅವಧಿಯಲ್ಲಿ 300 ಮಾಸ್ಕ್‌ಗಳನ್ನು ಹೊಲಿದು ಯೋಧರಿಗೆ ಕಳುಹಿಸಿಕೊಟ್ಟಿದ್ದ ಉಡುಪಿಯ ಇಶಿತಾ ಆಚಾರ್‌ಗೆ ರಕ್ಷಣಾ ಸಚಿವ ರಾಜನಾಥ್ ಸಿಂಗ್ ಅಭಿನಂದನಾ ಪತ್ರ ಕಳುಹಿಸಿದ್ದಾರೆ. ಮಣಿಪಾಲದ ಮಾಧವ ಕೃಪ ಶಾಲೆಯಲ್ಲಿ 8ನೇ ತರಗತಿ ಓದುತ್ತಿರುವ ಇಶಿತಾ ಆಚಾರ್ ರಕ್ಷಣಾ ಸಚಿವರ ಅಭಿನಂದನೆಗೆ ಪಾತ್ರವಾಗಿರುವ ವಿದ್ಯಾರ್ಥಿನಿ.   ‘ಸೈನಿಕರಿಗೆ ಮಾಸ್ಕ್ ಹೊಲಿದು ಕಳುಹಿಸಿದ್ದಕ್ಕೆ ಧನ್ಯವಾದಗಳು. ಯೋಧರ ಮೇಲಿರುವ ಆಕೆಯ ಕಾಳಜಿ ಹಾಗೂ ಕೋವಿಡ್-19 ಸೋಂಕು ವಿರುದ್ಧ ಜಾಗೃತಿ ಮೂಡಿಸುತ್ತಿರುವ ಪ್ರಯತ್ನ ಅಭಿನಂದನೀಯ’

ಸೈನಿಕರಿಗೆ ಮಾಸ್ಕ್ ಕಳುಹಿಸಿದ ಬಾಲಕಿಗೆ ರಕ್ಷಣಾ ಸಚಿವ ರಾಜನಾಥ್ ರಿಂದ ಶ್ಲಾಘನೆ Read More »

ಕರ್ನಾಟಕ, ರಾಷ್ಟ್ರೀಯ ನ್ಯೂಸ್

ಡಾ.ಶಿವರಾಮ ಕಾರಂತ ಹುಟ್ಟೂರ ಪ್ರಶಸ್ತಿಗೆ ಡಾ.ಎಸ್.ಎಲ್.ಭೈರಪ್ಪ ಆಯ್ಕೆ

(ನ್ಯೂಸ್ ಕಡಬ) newskadaba.com ಉಡುಪಿ , ಸೆ. 25:  ಕೋಟ ಡಾ.ಶಿವರಾಮ ಕಾರಂತ ಹುಟ್ಟೂರ ಪ್ರಶಸ್ತಿ ಪ್ರತಿಷ್ಠಾನ ಮತ್ತು ಕೋಟತಟ್ಟು ಗ್ರಾಮ ಪಂಚಾಯಿತಿ ವತಿಯಿಂದ ನೀಡಲಾಗುವ ಕೋಟ ಶಿವರಾಮ ಕಾರಂತ ಹುಟ್ಟೂರ ಪ್ರಶಸ್ತಿಗೆ ಹಿರಿಯ ಸಾಹಿತಿ ಡಾ.ಎಸ್.ಎಲ್. ಭೈರಪ್ಪ ಆಯ್ಕೆಯಾಗಿದ್ದಾರೆ.   ಪ್ರಶಸ್ತಿಯನ್ನು ಕಾರಂತರ ಜನ್ಮದಿನವಾದ ಅ.10ರಂದು ಕೋಟ ಶಿವರಾಮ ಕಾರಂತ ಥೀಂ ಪಾರ್ಕ್‌ನಲ್ಲಿ ಪ್ರದಾನ ಮಾಡಲಾಗುವುದು ಎಂದು ಆಯ್ಕೆ ಸಮಿತಿ ಸದಸ್ಯ ಯು.ಎಸ್. ಶೆಣೈ  ತಿಳಿಸಿದರು.15 ವರ್ಷದಿಂದ ಕಾರಂತರ ವಿವಿಧ ಆಸಕ್ತಿ ಕ್ಷೇತ್ರಗಳಲ್ಲಿ ಸಾಧನೆ ಮಾಡಿದ ಸಾಧಕರಿಗೆ

ಡಾ.ಶಿವರಾಮ ಕಾರಂತ ಹುಟ್ಟೂರ ಪ್ರಶಸ್ತಿಗೆ ಡಾ.ಎಸ್.ಎಲ್.ಭೈರಪ್ಪ ಆಯ್ಕೆ Read More »

ಕರ್ನಾಟಕ

ಬೆಳ್ತಂಗಡಿ : ಸ್ವಂತ ಅಣ್ಣನಿಂದಲೇ ದೌರ್ಜನ್ಯಕ್ಕೆ ಒಳಗಾದ ತಂಗಿ ➤ ಏಳು ತಿಂಗಳ ಗರ್ಭಿಣಿಯಾದ ಬಾಲಕಿ..!!

(ನ್ಯೂಸ್ ಕಡಬ) newskadaba.com ಬೆಳ್ತಂಗಡಿ, ಸೆ. 25:  ಸ್ವಂತ ಅಣ್ಣ ಹಾಗೂ ಸಂಬಂಧಿಯಿಂದ 8ನೇ ತರಗತಿ ಅಪ್ರಾಪ್ತೆಯೊಬ್ಬಳು ನಿರಂತರ ಲೈಂಗಿಕ ದೌರ್ಜನ್ಯಕ್ಕೆ ಒಳಗಾಗಿ ಆಕೆ ಗರ್ಭಿಣಿಯಾಗಿರುವ ಘಟನೆ ಬೆಳ್ತಂಗಡಿ ತಾಲೂಕಿನ ಕೊಕ್ರಾಡಿಯಲ್ಲಿ ನಡೆದಿದೆ. ಅಪ್ರಾಪ್ತೆಯ ಸಹೋದರ ಹಾಗೂ ಹತ್ತಿರದ ಸಂಬಂಧಿ 17 ವರುಷದ ಹಾಗೂ 16 ವರ್ಷದ ಅಪ್ರಾಪ್ತ ಬಾಲಕರಿಬ್ಬರು ಪದೇ ಪದೇ ಲೈಂಗಿಕ ದೌರ್ಜನ್ಯವೆಸಗಿದ್ದಾರೆ. ಇನ್ನು, ಬಾಲಕಿಯ ದೈಹಿಕ ಬದಲಾವಣೆಯನ್ನು ಗಮನಿಸಿದ ಆಕೆಯ ತಾಯಿ ಹಾಗೂ ಅಕ್ಕ ಕೂಡಲೇ ಆಕೆಯನ್ನು ಸರ್ಕಾರಿ ಆಸ್ಪತ್ರೆಗೆ ಕರೆದುಕೊಂಡು ಹೋಗಿ

ಬೆಳ್ತಂಗಡಿ : ಸ್ವಂತ ಅಣ್ಣನಿಂದಲೇ ದೌರ್ಜನ್ಯಕ್ಕೆ ಒಳಗಾದ ತಂಗಿ ➤ ಏಳು ತಿಂಗಳ ಗರ್ಭಿಣಿಯಾದ ಬಾಲಕಿ..!! Read More »

ಕರಾವಳಿ, ಕರ್ನಾಟಕ, ಕ್ರೈಮ್ ನ್ಯೂಸ್

ಕೋವಿಡ್‌ಗೆ ಬಸವಕಲ್ಯಾಣ ಶಾಸಕ ಬಿ. ನಾರಾಯಣರಾವ್ ವಿಧಿವಶ

(ನ್ಯೂಸ್ ಕಡಬ) newskadaba.com ಬೆಂಗಳೂರು, ಸೆ. 25:  ಕೊರೊನಾದಿಂದ ಬೀದರ್ ನ ಬಸವಕಲ್ಯಾಣದ ಶಾಸಕ ಬಿ.ನಾರಾಯಣರಾವ್ ಅವರು ತಮ್ಮ 65 ನೇ ವಯಸ್ಸಿನಲ್ಲಿ ಕೊನೆಯುಸಿರೆಳೆದಿದ್ದಾರೆ. ಬೆಂಗಳೂರಿನ ಮಣಿಪಾಲ್ ಆಸ್ಪತ್ರೆಯಲ್ಲಿ ಮಧಾಹ್ನ ಚಿಕಿತ್ಸೆ ಫಲಕಾರಿಯಾಗದೆ ನಿಧನರಾಗಿದ್ದಾರೆ.ಮೃತರಿಗೆ ಪತ್ನಿ ಹಾಗೂ ಇಬ್ಬರು ಪುತ್ರರಿದ್ದಾರೆ.   ಅಗಸ್ಟ್ 31 ರಂದು ನಾರಾಯಣ್ ರಾವ್ ಅವರಿಗೆ ಕೊರೊನಾ ಸೋಂಕು ಇರುವುದು ಧೃಡಪಟ್ಟಿತ್ತು.ತದನಂತರ ಅವರು ಬೆಂಗಳೂರಿನ ಮಣಿಪಾಲ್ ಆಸ್ಪತ್ರೆಯಲ್ಲಿ ದಾಖಲಾಗಿದ್ದರು. ಚಿಕಿತ್ಸೆ ಫಲಿಸದೇ ಮಣಿಪಾಲ್ ಆಸ್ಪತ್ರೆಯಲ್ಲಿ ಕಳೆದ ದಿನ ವಿಧಿವಶರಾಗಿದ್ದಾರೆ. ಶಾಸಕರ ನಿಧನಕ್ಕೆ ಸಿಎಂ

ಕೋವಿಡ್‌ಗೆ ಬಸವಕಲ್ಯಾಣ ಶಾಸಕ ಬಿ. ನಾರಾಯಣರಾವ್ ವಿಧಿವಶ Read More »

ಕರಾವಳಿ

ಗಾಯಕ ಎಸ್ ಪಿ ಬಾಲಸುಬ್ರಹ್ಮಣ್ಯಂ ಆರೋಗ್ಯ ಸ್ಥಿತಿ ಗಂಭೀರ.!!

(ನ್ಯೂಸ್ ಕಡಬ) newskadaba.com ಚೆನ್ನೈ , ಸೆ. 25:  ಖ್ಯಾತ ಹಿನ್ನಲೆ ಗಾಯಕ ಎಸ್ ಪಿ ಬಾಲಸುಬ್ರಹ್ಮಣ್ಯಂ ಅವರ ಆರೋಗ್ಯ ಸ್ಥಿತಿ ಗಂಭೀರವಾಗಿದೆ ಎಂದು ಎಂಜಿಎಂ ಆಸ್ಪತ್ರೆ ಹೆಲ್ತ್ ಬುಲೆಟಿನ್ ನಲ್ಲಿ ತಿಳಿಸಿದೆ.       ಕೊರೊನಾ ಹಿನ್ನಲೆ ಅಗಸ್ಟ್ 5 ರಂದು ಚೆನೈ ನ ಎಂಜಿಎಂ ಆಸ್ಪತ್ರೆಗೆ ದಾಖಲಾಗಿದ ಎಸ್ ಪಿಬಿ ಅವರ ಆರೋಗ್ಯ ಹದಗೆಟ್ಟ ಪರಿಣಾಮ ಅವರನ್ನು ವೆಂಟಿಲೇಟರ್ ನಲ್ಲಿ ಚಿಕಿತ್ಸೆ ಮುಂದುವರೆಸಲಾಗಿತ್ತು. ನಂತರ ಚಿಕಿತ್ಸೆಗೆ ಸ್ಪಂದಿಸಿದ ಅವರು ಕೊರೊನಾದಿಂದ ಸಂಪೂರ್ಣ ಗುಣಮುಖರಾಗಿದ್ದರು.

ಗಾಯಕ ಎಸ್ ಪಿ ಬಾಲಸುಬ್ರಹ್ಮಣ್ಯಂ ಆರೋಗ್ಯ ಸ್ಥಿತಿ ಗಂಭೀರ.!! Read More »

ಕರಾವಳಿ

ಡ್ರಗ್ಸ್‌‌‌ ಪ್ರಕರಣ : ನಿರೂಪಕಿ ಅನುಶ್ರೀಗೆ ಸಿಸಿಬಿ ನೋಟಿಸ್‌‌..!!

(ನ್ಯೂಸ್ ಕಡಬ) newskadaba.com ಬೆಂಗಳೂರು, ಸೆ. 24:   ಡ್ರಗ್ಸ್‌ ಪ್ರಕರಣಕ್ಕೆ ಸಂಬಂಧಿಸಿದಂತೆ ಖ್ಯಾತ ನಿರೂಪಕಿ, ನಟಿ ಅನುಶ್ರೀ ಅವರಿಗೆ ಮಂಗಳೂರು ಸಿಸಿಬಿ ಪೊಲೀಸರು ನೋಟಿಸ್‌ ಜಾರಿ ಮಾಡಿದ್ದಾರೆ ಎಂದು ವರದಿಯಾಗಿದೆ.     ನಿರೂಪಕಿ ಅನುಶ್ರೀ ಹೆಸರು ಡ್ರಗ್ಸ್​ ಉರುಳಿನಲ್ಲಿ ಸಿಲುಕಿದ್ದು, ವಿಚಾರಣೆಗೆ ಹಾಜರಾಗುವಂತೆ ಮಂಗಳೂರು ಸಿಸಿಬಿ ಪೊಲೀಸರು ವಾಟ್ಸ್‌ಆಯಪ್​ ಮೂಲಕ ನೋಟಿಸ್​ ಜಾರಿ ಮಾಡಿದ್ದಾರೆ ಎಂದು ಮೂಲಗಳು ತಿಳಿಸಿವೆ.

ಡ್ರಗ್ಸ್‌‌‌ ಪ್ರಕರಣ : ನಿರೂಪಕಿ ಅನುಶ್ರೀಗೆ ಸಿಸಿಬಿ ನೋಟಿಸ್‌‌..!! Read More »

ಕರಾವಳಿ, ಕರ್ನಾಟಕ

ಅಂಚೆ ಕಛೇರಿಯಿಂದ ಮನೆ ಬಾಗಿಲಿಗೆ ಬ್ಯಾಂಕಿಂಗ್‌ ➤1 ನಿಮಿಷದಲ್ಲಿ ಮನೆ ಬಾಗಿಲಲ್ಲೇ ಖಾತೆ ಓಪನ್.!

(ನ್ಯೂಸ್ ಕಡಬ) newskadaba.com ಪುತ್ತೂರು, ಸೆ.24: ಭಾರತ ಸರಕಾರ ಅಂಚೆ ಕಛೇರಿಯಿಂದ ಬ್ಯಾಂಕಿಂಗ್‌ ಮನೆ ಬಾಗಿಲಿಗೆ ಅಭಿಯಾನ ಎಲ್ಲಾ ಅಂಚೆ ಕಛೇರಿಗಳಲ್ಲೂ ಸೆ.29 ರಂದು ನಡೆಯಲಿದೆ.   ಸ್ಥಳೀಯ ಅಂಚೆ ಕಛೇರಿಯ ಅಂಚೆ ವಿತರಕರ ಮೂಲಕ 1 ನಿಮಿಷದಲ್ಲಿ ಮನೆ ಬಾಗಿಲಲ್ಲೇ ಖಾತೆ ತೆರೆಯುವ ಅಭಿಯಾನ ಇದಾಗಿದ್ದು, ಕಾಗದ ರಹಿತ, ಪಾಸ್ಬುಕ್‌ ರಹಿತ ಪೂರ್ಣ ಡಿಜಿಟಲ್‌ ಖಾತೆ ಹಾಗೂ ಶೂನ್ಯ ಮೊತ್ತದ ಖಾತೆಗೆ ಇದರಲ್ಲಿ ಅವಕಾಶವಿದೆ. ಖಾತೆ ತೆರೆಯುವವರ ಆಧಾರ್‌ ಕಾರ್ಡ್‌ ಹಾಗೂ ಮೊಬೈಲ್‌ ಸಂಖ್ಯೆ ಹೊಂದಿರಬೇಕು.

ಅಂಚೆ ಕಛೇರಿಯಿಂದ ಮನೆ ಬಾಗಿಲಿಗೆ ಬ್ಯಾಂಕಿಂಗ್‌ ➤1 ನಿಮಿಷದಲ್ಲಿ ಮನೆ ಬಾಗಿಲಲ್ಲೇ ಖಾತೆ ಓಪನ್.! Read More »

ಕರಾವಳಿ, ಕರ್ನಾಟಕ
Scroll to Top