News Kadaba

ರಾಜ್ಯದಲ್ಲಿ ಮುಂದುವರಿದ ಚಳಿ

(ನ್ಯೂಸ್‌ ಕಡಬ)com,ಡಿ.26: ರಾಜ್ಯದಲ್ಲಿ ಮಾಗಿಚಳಿಯ ತೀವ್ರತೆ ಮುಂದುವರೆದಿದ್ದು, ಬೀದರ್‌ನಲ್ಲಿ ಕನಿಷ್ಠ ತಾಪಮಾನ 6.3 ಡಿ.ಸೆಂ.ನಷ್ಟು ದಾಖಲಾಗಿದೆ.ನಿನ್ನೆಯಿಂದೀಚೆಗೆ ಕನಿಷ್ಠ ತಾಪಮಾನದಲ್ಲಿ ಅಲ್ಪ ಏರಿಕೆ ಕಂಡುಬಂದಿದೆ. ಆದರೆ ವಾಡಿಕೆಗಿಂತಲೂ ಹೆಚ್ಚು ಚಳಿ ಕಂಡುಬರುತ್ತಿದೆ. 29 ರಿಂದ ಮೂರ್ನಾಲ್ಕು ದಿನಗಳ ಕಾಲ ಕನಿಷ್ಠ ತಾಪಮಾನದಲ್ಲಿ ಅಲ್ಪ ಹೆಚ್ಚಳ ಕಂಡುಬರಲಿದೆ. ಆದರೆ ಶೀತ ಗಾಳಿ ಮಾತ್ರ ಮುಂದುವರೆಯಲಿದೆ. ಇದರಿಂದ ಹಗಲು-ರಾತ್ರಿ ಎನ್ನದೆ ಚಳಿ ಜನರನ್ನು ಕಾಡತೊಡಗಿದೆ. ಕರ್ನಾಟಕ ರಾಜ್ಯ ನೈಸರ್ಗಿಕ ವಿಕೋಪ ಉಸ್ತುವಾರಿ ಕೇಂದ್ರದ ಮಾಹಿತಿ ಪ್ರಕಾರ, ರಾಜ್ಯದ ಕಲ್ಯಾಣ ಕರ್ನಾಟಕ ಭಾಗದಲ್ಲಿ ಕನಿಷ್ಠ […]

ರಾಜ್ಯದಲ್ಲಿ ಮುಂದುವರಿದ ಚಳಿ Read More »

ಕರ್ನಾಟಕ, ಬ್ರೇಕಿಂಗ್ ನ್ಯೂಸ್

ನೆಟ್ಟಣ: ಬಾರ್ ಮಾಲಕರಿಗೆ ಲಕ್ಷಾಂತರ ರೂಪಾಯಿ ವಂಚಿಸಿ ಸಿಬ್ಬಂದಿ ಪರಾರಿ-ಪ್ರಕರಣ ದಾಖಲು

(ನ್ಯೂಸ್‌ ಕಡಬ)com,ಡಿ.26:  ವ್ಯವಹಾರದಲ್ಲಿ ವಂಚಿಸಿ ಬಾರ್ ಸಿಬ್ಬಂದಿಯೋರ್ವ ಪರಾರಿಯಾಗಿರುವ ಬಗ್ಗೆ ಕಡಬ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಬಿಳಿನೆಲೆ ಗ್ರಾಮದ ವಿಶಾಲ್ ಸ್ಟೀಫನ್ (25) ಎಂಬವರು ಠಾಣೆಗೆ ದೂರು ನೀಡಿದ್ದಾರೆ. ಸ್ಟೀಫನ್ ಅವರ ತಾಯಿ ನೆಟ್ಟಣ ಎಂಬಲ್ಲಿ ಬಾರ್ ಹೊಂದಿದ್ದು, ಬಾರ್ ನಲ್ಲಿ ಕಡಬದ ಹರ್ಷಿತ್ ಬಿ.ಕೆ. ಎಂಬಾತ ಸುಮಾರು 7 ವರ್ಷಗಳಿಂದ ಕೆಲಸ ಮಾಡುತ್ತಿದ್ದ. ಆತನೇ ನಿತ್ಯದ ಹಣಕಾಸಿನ ವ್ಯವಹಾರ, ಸ್ಟಾಕ್ ನಿರ್ವಹಣೆ ಹಾಗೂ ಮೇಲ್ವಿಚಾರಣೆ ನಿರ್ವಹಿಸುತ್ತಿದ್ದ. ಡಿ.21ರಂದು ಸ್ಟೀಫನ್ ಅವರು ಬಾರಿನ ವಹಿವಾಟು ಬಗ್ಗೆ

ನೆಟ್ಟಣ: ಬಾರ್ ಮಾಲಕರಿಗೆ ಲಕ್ಷಾಂತರ ರೂಪಾಯಿ ವಂಚಿಸಿ ಸಿಬ್ಬಂದಿ ಪರಾರಿ-ಪ್ರಕರಣ ದಾಖಲು Read More »

ಕರಾವಳಿ, ಕ್ರೈಮ್ ನ್ಯೂಸ್, ಬ್ರೇಕಿಂಗ್ ನ್ಯೂಸ್

ಸಿರಿಯಾ: ಮಸೀದಿಯಲ್ಲಿ ಭೀಕರ ಸ್ಪೋಟ-8 ಮಂದಿ ಮೃತ್ಯು, 20 ಕ್ಕೂ ಹೆಚ್ಚು ಮಂದಿಗೆ ತೀವ್ರ ಗಾಯ

(ನ್ಯೂಸ್‌ ಕಡಬ)com,ಡಿ.26: ಸಿರಿಯಾದ ಹೋಮ್ಸ್ ನಗರದ ಮಸೀದಿಯೊಂದರಲ್ಲಿ ಪ್ರಾರ್ಥನೆಯ ಸಮಯದಲ್ಲಿ ಸಂಭವಿಸಿದ ಭೀಕರ ಸ್ಫೋಟದಲ್ಲಿ ಕನಿಷ್ಠ 8 ಮಂದಿ ಮೃತಪಟ್ಟಿದ್ದು, 20ಕ್ಕೂ ಹೆಚ್ಚು ಮಂದಿ ಗಾಯಗೊಂಡಿದ್ದಾರೆ. ಸರ್ಕಾರಿ ನಿಯಂತ್ರಣದಲ್ಲಿರುವ ವಾಡಿ ಅಲ್-ದಹಾಬ್ ಪ್ರದೇಶದ ಇಮಾಮ್ ಅಲಿ ಬಿನ್ ಅಬಿ ತಾಲಿಬ್ ಮಸೀದಿಯೊಳಗೆ ಸ್ಫೋಟ ಸಂಭವಿಸಿದೆ ಎಂದು ಸಿರಿಯನ್ ಅರಬ್ ಸುದ್ದಿ ಸಂಸ್ಥೆ (SANA) ವರದಿ ಮಾಡಿದೆ. ಪ್ರಾರ್ಥನೆಯಲ್ಲಿ ತೊಡಗಿದ್ದ ಜನರ ನಡುವೆ ಸ್ಫೋಟ ಸಂಭವಿಸಿದ್ದರಿಂದ ಹೆಚ್ಚಿನ ಆತಂಕ, ಗೊಂದಲ ಉಂಟಾಗಿದೆ. ಸ್ಫೋಟದ ತಕ್ಷಣವೇ ತುರ್ತು ಪ್ರತಿಕ್ರಿಯಾ ತಂಡಗಳು

ಸಿರಿಯಾ: ಮಸೀದಿಯಲ್ಲಿ ಭೀಕರ ಸ್ಪೋಟ-8 ಮಂದಿ ಮೃತ್ಯು, 20 ಕ್ಕೂ ಹೆಚ್ಚು ಮಂದಿಗೆ ತೀವ್ರ ಗಾಯ Read More »

ಅಂತರ್ರಾಷ್ಟ್ರೀಯ ನ್ಯೂಸ್, ಬ್ರೇಕಿಂಗ್ ನ್ಯೂಸ್

ರಾತ್ರಿ ವೇಳೆ ವಾಹನ ಸಂಚಾರಕ್ಕೆ ಬ್ರೇಕ್-ಕೇಂದ್ರಕ್ಕೆ ಪತ್ರ ಬರೆಯಲು ಚಿಂತನೆ

(ನ್ಯೂಸ್‌ ಕಡಬ)com,ಡಿ.26: ಚಿತ್ರದುರ್ಗ ಜಿಲ್ಲೆಯ ಹಿರಿಯೂರು ಬಳಿ ಸಂಭವಿಸಿದ ಬಸ್ ಅಪಘಾತ ಇಡೀ ರಾಜ್ಯವನ್ನೇ ಬೆಚ್ಚಿ ಬೀಳಿಸಿದೆ. ಲಾರಿ ಡಿಕ್ಕಿ ಹೊಡೆದು ಬಸ್‌ ಬೆಂಕಿ ಹೊತ್ತಿಕೊಂಡು ಉರಿದು 7 ಮಂದಿ ಸಜೀವ ದಹನಗೊಂಡಿದ್ದ ಈ ದುರಂತದ ಬೆನ್ನಲ್ಲೇ ಸಾರಿಗೆ ಸಚಿವ ರಾಮಲಿಂಗಾ ರೆಡ್ಡಿ ವಾಹನಗಳ ರಾತ್ರಿ ಸಂಚಾರದ ಬಗ್ಗೆ ಕೇಂದ್ರಕ್ಕೆ ಪತ್ರ ಬರೆಯಲು ಮುಂದಾಗಿದ್ದಾರೆ. ಇತ್ತೀಚಿನ ದಿನಗಳಲ್ಲಿ ರಾತ್ರಿ ಸಮಯದಲ್ಲಿ ಅಪಘಾತಗಳು ಹೆಚ್ಚಾಗಿ ನಡೆಯುತ್ತಿವೆ. ಇದಕ್ಕೆ ಪ್ರಮುಖ ಕಾರಣ ಚಾಲಕರು ನಿದ್ರೆ ಮಂಪರಿನಲ್ಲಿ ವಾಹನ ಚಾಲನೆ ಮಾಡುತ್ತಿರೋದು.

ರಾತ್ರಿ ವೇಳೆ ವಾಹನ ಸಂಚಾರಕ್ಕೆ ಬ್ರೇಕ್-ಕೇಂದ್ರಕ್ಕೆ ಪತ್ರ ಬರೆಯಲು ಚಿಂತನೆ Read More »

ಕರ್ನಾಟಕ, ಬ್ರೇಕಿಂಗ್ ನ್ಯೂಸ್

ರೌಡಿಶೀಟರ್ ಬಿಕ್ಲು ಶಿವ ಕೊಲೆ ಪ್ರಕರಣ: ಬೈರತಿ ಬಸವರಾಜ್ಗೆ ಬಿಗ್ ರಿಲೀಫ್!

(ನ್ಯೂಸ್‌ ಕಡಬ)com,ಡಿ.26: ರೌಡಿಶೀಟರ್ ಬಿಕ್ಲು ಶಿವ ಕೊಲೆ ಪ್ರಕರಣದಲ್ಲಿ ಬಂಧನದ ಭೀತಿ ಎದುರಿಸುತ್ತಿದ್ದ ಶಾಸಕ ಬೈರತಿ ಬಸವರಾಜ್‌ಗೆ ಹೈಕೋರ್ಟ್‌ನಿಂದ ದೊಡ್ಡ ರಿಲೀಫ್ ಸಿಕ್ಕಿದೆ. ಪ್ರಕರಣ ಸಂಬಂಧ ಹೈಕೋರ್ಟ್ ಏಕಸದಸ್ಯ ಪೀಠವು ಷರತ್ತುಬದ್ಧ ಮಧ್ಯಂತರ ನಿರೀಕ್ಷಣಾ ಜಾಮೀನು ಮಂಜೂರು ಮಾಡಿದೆ. ನ್ಯಾ. ಬಿ. ಬಸವರಾಜ ಅವರಿದ್ದ ಪೀಠ, ಶಾಸಕ ಬೈರತಿ ಬಸವರಾಜ್ ಪರ ವಾದ ಮಂಡಿಸಿದ ವಕೀಲ ಸಂದೇಶ್ ಚೌಟ ಅವರ ವಾದವನ್ನು ಪರಿಗಣಿಸಿ, ಬಂಧನವಾದರೆ ತಕ್ಷಣವೇ ಬಿಡುಗಡೆ ಮಾಡುವಂತೆ ಮಧ್ಯಂತರ ಆದೇಶ ನೀಡಿದೆ. ವಕೀಲ ಸಂದೇಶ್ ಚೌಟ

ರೌಡಿಶೀಟರ್ ಬಿಕ್ಲು ಶಿವ ಕೊಲೆ ಪ್ರಕರಣ: ಬೈರತಿ ಬಸವರಾಜ್ಗೆ ಬಿಗ್ ರಿಲೀಫ್! Read More »

ಕರ್ನಾಟಕ, ಕ್ರೈಮ್ ನ್ಯೂಸ್, ಬ್ರೇಕಿಂಗ್ ನ್ಯೂಸ್

‘ಕೇಂದ್ರದಿಂದ ರೈಲು ಪ್ರಯಾಣ ದರ ಹೆಚ್ಚಳ : ರಾಜ್ಯದ ಬಿಜೆಪಿ ನಾಯಕರು ಇದನ್ನು ಪ್ರಶ್ನಿಸುವುದಿಲ್ಲ’-ಸಿಎಂ

(ನ್ಯೂಸ್‌ ಕಡಬ)com,ಡಿ.26: ಕೇಂದ್ರ ಸರ್ಕಾರ ರೈಲ್ವೆ ಪ್ರಯಾಣ ದರ ಏರಿಕೆ ಮಾಡಿದೆ. ಜನಸಾಮಾನ್ಯರ ಮೇಲೆ ದರ ಏರಿಕೆ ಹೊರೆಯಾಗುತ್ತಿರುವ ಬಗ್ಗೆ ರಾಜ್ಯದ ಬಿಜೆಪಿ ನಾಯಕರು ಪ್ರಶ್ನಿಸುವುದಿಲ್ಲ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದರು.. ಅವರು ಇಂದು ದಾವಣಗೆರೆಯಲ್ಲಿ ಮಾಧ್ಯಮದವರೊಂದಿಗೆ ಮಾತನಾಡುತ್ತಾ, ಕೇಂದ್ರ ಸರ್ಕಾರ ರೈಲು ಪ್ರಯಾಣ ದರ ಏರಿಕೆ ಮಾಡಿರುವ ಬಗ್ಗೆ ಪ್ರತಿಕ್ರಿಯೆ ನೀಡಿದರು.

‘ಕೇಂದ್ರದಿಂದ ರೈಲು ಪ್ರಯಾಣ ದರ ಹೆಚ್ಚಳ : ರಾಜ್ಯದ ಬಿಜೆಪಿ ನಾಯಕರು ಇದನ್ನು ಪ್ರಶ್ನಿಸುವುದಿಲ್ಲ’-ಸಿಎಂ Read More »

ರಾಷ್ಟ್ರೀಯ ನ್ಯೂಸ್

ಬೆಂಗಳೂರು: ಪಾರ್ಕ್‌, ಉದ್ಯಾನವನಗಳಲ್ಲಿ ಹೊಸ ವರ್ಷಾಚರಣೆಗೆ ಬ್ರೇಕ್‌

(ನ್ಯೂಸ್‌ ಕಡಬ)com,ಡಿ.26: ಹೊಸ ವರ್ಷಾಚರಣೆ ಸಂದರ್ಭದಲ್ಲಿ ನಗರದಲ್ಲಿರುವ ಪಾರ್ಕ್‌, ಉದ್ಯಾನವರ, ಕೆರೆಗಳಿಗೆ ಎಂಟ್ರಿ ನಿಷೇಧಿಸಲಾಗಿದೆ.ಡಿ. 31 ರ ಸಂಜೆ 6 ರಿಂದ ಬೆಳಗಿನ ಜಾವ 6ರವರೆಗೆ ಜಿಬಿಎ ವ್ಯಾಪ್ತಿಯ ಪಾರ್ಕ್‌ಗಳು, ಉದ್ಯಾನವನಗಳು, ಕೆರೆಗಳಿಗೆ ಪ್ರವೇಶ ನಿಷೇಧಿಸಲಾಗಿದೆ ಎಂದು ಮುಖ್ಯ ಆಯುಕ್ತ ಮಹೇಶ್ವರ್‌ ರಾವ್‌ ಆದೇಶ ಹೊರಡಿಸಿದ್ದಾರೆ. ಹೊಸ ವರ್ಷಾಚರಣೆ ಸಂದರ್ಭದಲ್ಲಿ ಯಾವುದೇ ಅಹಿತಕರ ಘಟನೆಗಳು ಸಂಭವಿಸಬಾರದು ಎಂಬ ಉದ್ದೇಶದಿಂದ ಇಂತಹ ತೀರ್ಮಾನ ಕೈಗೊಳ್ಳಲಾಗಿದ್ದು ನಾಗರೀಕರು ಸಹಕರಿಸಬೇಕು ಎಂದು ಅವರು ಮನವಿ ಮಾಡಿಕೊಂಡಿದ್ದಾರೆ.

ಬೆಂಗಳೂರು: ಪಾರ್ಕ್‌, ಉದ್ಯಾನವನಗಳಲ್ಲಿ ಹೊಸ ವರ್ಷಾಚರಣೆಗೆ ಬ್ರೇಕ್‌ Read More »

ಕರ್ನಾಟಕ, ಬ್ರೇಕಿಂಗ್ ನ್ಯೂಸ್

ಹೊಸ ವರ್ಷದ ಆಚರಣೆಗೆ ವಿದೇಶಕ್ಕೆ ತೆರಳಿದ ವಿಜಯ್, ರಶ್ಮಿಕಾ ಜೋಡಿ

(ನ್ಯೂಸ್‌ ಕಡಬ)com,ಡಿ.26: ವಿಜಯ್ ದೇವರಕೊಂಡ ಹಾಗೂ ರಶ್ಮಿಕಾ ಜೋಡಿ ಜೊತೆಯಾಗಿ ವಿದೇಶ ಪ್ರಯಾಣ ಮಾಡಿದ್ದಾರೆ. ಇಬ್ಬರೂ ಒಂದೇ ದಿನ ಒಂದೇ ಸಮಯಕ್ಕೆ ಹೈದರಾಬಾದ್‌ನಲ್ಲಿ ಕಾಣಿಸಿಕೊಂಡಿದ್ದು ಹೊಸ ವರ್ಷದ ಆಚರಣೆಗೆ ವಿದೇಶಕ್ಕೆ ಹಾರಿದ್ದಾರೆ ಎನ್ನಲಾಗುತ್ತಿದೆ. ಮದುವೆಗೂ ಮುನ್ನ ಈ ಜೋಡಿ ಬ್ಯಾಚುಲರ್ ಜೀವನದ ಕೊನೆಯ ನ್ಯೂಇಯರ್ ಸೆಲೆಬ್ರೇಷನ್ ಎಂಜಾಯ್ ಮಾಡಲು ವಿದೇಶಕ್ಕೆ ಹೋಗಿರುವ ಸಾಧ್ಯತೆಯಿದೆ. ಹಿಂದೆ ಅನೇಕ ಬಾರಿ ಒಟ್ಟಿಗೆ ಪ್ರಯಾಣ ಮಾಡಿರುವ ರಶ್ಮಿಕಾ, ವಿಜಯ್ ಈಗಲೂ ಜಂಟಿಯಾಗಿ ಎಂಜಾಯ್‌ ಮಾಡಲಿದ್ದಾರೆ. ಸದ್ಯಕ್ಕೆ ಸೋಶಿಯಲ್ ಮೀಡಿಯಾ ಆಫ್‌ಮೋಡ್‌ನಲ್ಲಿಟ್ಟುಕೊಂಡು ಎಂಜಾಯ್

ಹೊಸ ವರ್ಷದ ಆಚರಣೆಗೆ ವಿದೇಶಕ್ಕೆ ತೆರಳಿದ ವಿಜಯ್, ರಶ್ಮಿಕಾ ಜೋಡಿ Read More »

ಸಿನಿಮಾ

ನೈಜೀರಿಯಾ ಮೇಲೆ ಬಾಂಬ್‌ ದಾಳಿ ಮಾಡಿದ ಅಮೇರಿಕಾ

(ನ್ಯೂಸ್‌ ಕಡಬ)com,ಡಿ.26: ನೈಜೀರಿಯಾದಲ್ಲಿ ಕ್ರೈಸ್ತರನ್ನು ಗುರಿಯಾಗಿಸಿಕೊಂಡು ದಾಳಿ ನಡೆಸುತ್ತಿದ್ದ ಐಸಿಸ್ ಉಗ್ರರ ವಿರುದ್ಧ ಅಮೆರಿಕ ಭಾರೀ ಬಾಂಬ್ ದಾಳಿ ನಡೆಸಿದೆ. ಕ್ರೈಸ್ತರ ಮೇಲಿನ ಹಿಂಸಾಚಾರಕ್ಕೆ ಪ್ರತೀಕಾರವಾಗಿ ಈ ಏರ್‌ಸ್ಟ್ರೈಕ್ ನಡೆಸಲಾಗಿದೆ ಎಂದು ಅಮೆರಿಕ ತನ್ನ ಕ್ರಮವನ್ನು ಸಮರ್ಥಿಸಿಕೊಂಡಿದೆ. ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಅವರು ತಮ್ಮ ‘ಟ್ರೂಥ್ ಸೋಶಿಯಲ್’ ಜಾಲತಾಣದ ಮೂಲಕ ಈ ದಾಳಿಯ ಬಗ್ಗೆ ಅಧಿಕೃತವಾಗಿ ಮಾಹಿತಿ ನೀಡಿದ್ದಾರೆ. “ಇಂದು ರಾತ್ರಿ ನನ್ನ ನಿರ್ದೇಶನದ ಮೇರೆಗೆ ವಾಯುವ್ಯ ನೈಜೀರಿಯಾದಲ್ಲಿ ಐಸಿಸ್ ಭಯೋತ್ಪಾದಕರ ವಿರುದ್ಧ ಅಮೆರಿಕ ಪ್ರಬಲ

ನೈಜೀರಿಯಾ ಮೇಲೆ ಬಾಂಬ್‌ ದಾಳಿ ಮಾಡಿದ ಅಮೇರಿಕಾ Read More »

ಅಂತರ್ರಾಷ್ಟ್ರೀಯ ನ್ಯೂಸ್, ಬ್ರೇಕಿಂಗ್ ನ್ಯೂಸ್

ಇಂದಿನಿಂದ ರೈಲು ಟಿಕೆಟ್ ದರ ಹೆಚ್ಚಳ

(ನ್ಯೂಸ್‌ ಕಡಬ)com,ಡಿ.26: ಭಾರತದಲ್ಲಿ ದೀರ್ಘ ದೂರದ ರೈಲು ಪ್ರಯಾಣ ಇದೀಗ ಮತ್ತಷ್ಟು ದುಬಾರಿಯಾಗಿದೆ. ರೈಲ್ವೆ ಸಚಿವಾಲಯವು ಶುಕ್ರವಾರ ಟಿಕೆಟ್ ದರಗಳನ್ನು ಹೆಚ್ಚಿಸಿದ್ದು, ಇದು ಆರು ತಿಂಗಳೊಳಗಿನ ಎರಡನೇ ದರ ಏರಿಕೆಯಾಗಿದೆ. “ಪ್ರಯಾಣಿಕರಿಗೆ ಕೈಗೆಟುಕುವಿಕೆಯನ್ನು ಕಾಪಾಡಿಕೊಳ್ಳುವುದರ ಜೊತೆಗೆ ರೈಲ್ವೆ ಕಾರ್ಯಾಚರಣೆಗಳ ಸುಸ್ಥಿರತೆಯನ್ನು ಸಮತೋಲನಗೊಳಿಸುವ ಉದ್ದೇಶದಿಂದ ದರ ಪರಿಷ್ಕರಣೆ ಮಾಡಲಾಗಿದೆ,” ಎಂದು ರೈಲ್ವೆ ಸಚಿವಾಲಯ ತಿಳಿಸಿದೆ. ಪರಿಷ್ಕೃತ ದರ ರಚನೆಯ ಪ್ರಕಾರ, ಉಪನಗರ ಹಾಗೂ ಉಪನಗರೇತರ ಸೇವೆಗಳು, ಸೀಸನ್ ಟಿಕೆಟ್‌ಗಳು ಸೇರಿದಂತೆ ಉಪನಗರ ಮಾರ್ಗಗಳ ದರಗಳಲ್ಲಿ ಯಾವುದೇ ಬದಲಾವಣೆ ಮಾಡಲಾಗಿಲ್ಲ.

ಇಂದಿನಿಂದ ರೈಲು ಟಿಕೆಟ್ ದರ ಹೆಚ್ಚಳ Read More »

ಕರ್ನಾಟಕ, ಬ್ರೇಕಿಂಗ್ ನ್ಯೂಸ್, ರಾಷ್ಟ್ರೀಯ ನ್ಯೂಸ್
Scroll to Top