News Kadaba

ರಾಜ್ಯದಲ್ಲಿ ಕೊರೋನಾ ಭೀತಿ ನಡುವೆ ಬಾಲ್ಯ ವಿವಾಹದ‌ ಸದ್ಧು ➤ 2 ತಿಂಗಳಲ್ಲಿ 17 ಮದುವೆಗೆ ತಡೆ

(ನ್ಯೂಸ್ ಕಡಬ) newskadaba.com ಬೆಂಗಳೂರು, ಜು.25:  ಕೊರೋನಾ ಭೀತಿ ನಡುವೆಯೇ ರಾಜ್ಯದಲ್ಲಿ ಬಾಲ್ಯ ವಿವಾಹ ಸದ್ದು ಮಾಡುತ್ತಿದೆ. ಹೌದು ರಾಜ್ಯದ ಕೆಲ ಜಿಲ್ಲೆಗಳಲ್ಲಿ ಸದ್ದಿಲ್ಲದೇ ಬಾಲ್ಯ ವಿವಾಹಗಳು ನಡೆಯುತ್ತಿವೆ. ಕೊರೋನಾ‌ ಭೀತಿ ನಡುವೆ ಅಪ್ರಾಪ್ತ ಹೆಣ್ಣು ಮಕ್ಕಳಿಗೆ ಮದುವೆ ಮಾಡಲು  ಪೋಷಕರು ಮುಂದಾಗುತ್ತಿದ್ದಾರೆ. ಅದೂ ಹಳ್ಳಿಗಳಲ್ಲೇ ಹೆಚ್ಚು ಬಾಲ್ಯ ವಿವಾಹದ ಸಿದ್ದತೆ ಮಾಡಿಕೊಳ್ಳಲಾಗ್ತಿದೆ ಎಂದು ವನಿತಾ ಸಹಾವಾಣಿಯಿಂದ ಆತಂಕದ ಮಾಹಿತಿ ಬೆಳಕಿಗೆ ಬಂದಿದೆ.       ಹೀಗೆ ತುಮಕೂರು, ಚನ್ನಪಟ್ಟಣ, ಹಾಸನ, ಬೆಂಗಳೂರು  ಗ್ರಾಮಾಂತರ, ಮಂಡ್ಯ […]

ರಾಜ್ಯದಲ್ಲಿ ಕೊರೋನಾ ಭೀತಿ ನಡುವೆ ಬಾಲ್ಯ ವಿವಾಹದ‌ ಸದ್ಧು ➤ 2 ತಿಂಗಳಲ್ಲಿ 17 ಮದುವೆಗೆ ತಡೆ Read More »

ಕರಾವಳಿ, ಕರ್ನಾಟಕ, ಬ್ರೇಕಿಂಗ್ ನ್ಯೂಸ್

ಮೈಸೂರು ಮೃಗಾಲಯದ ‘ಬ್ರಹ್ಮ’ ಗಂಡು ಹುಲಿ ಸಾವು

(ನ್ಯೂಸ್ ಕಡಬ) newskadaba.com ಮೈಸೂರು, ಜು.25: ಚಾಮರಾಜೇಂದ್ರ ಮೃಗಾಲಯದಲ್ಲಿ ʻಬ್ರಹ್ಮʼ ಹೆಸರಿನ ಗಂಡು ಹುಲಿಯು (20) ಶುಕ್ರವಾರ ಮಧ್ಯಾಹ್ನ ಸಾವನ್ನಪ್ಪಿದೆ.ಹುಲಿಯು ವೃದ್ಧಾಪ್ಯಕ್ಕೆ ಸಂಬಂಧಿಸಿದ ಕಾರಣದಿಂದಾಗಿ ಇಂದು ಮಧ್ಯಾಹ್ನ ಮೃತಪಟ್ಟಿದೆ.   ಬ್ರಹ್ಮ ಹುಲಿಯನ್ನು 2008ರ ಮಾರ್ಚ್‌ 18ರಂದು ಕರ್ನಾಟಕ ಅರಣ್ಯ ಇಲಾಖೆಯಿಂದ ಮಾನವ-ಪ್ರಾಣಿ ಸಂಘರ್ಷ ಕಾರ್ಯಾಚರಣೆಯಡಿ ವಿರಾಜಪೇಟೆ ತಾಲ್ಲೂಕಿನ ತೆರಾಲು ಗ್ರಾಮದಿಂದ ಸೆರೆಹಿಡಿದು ರಕ್ಷಿಸಿ ಮೃಗಾಲಯಕ್ಕೆ ತರಲಾಗಿತ್ತು. ಹುಲಿಯನ್ನು ಮೃಗಾಲಯದ ಪುನರ್ವಸತಿ ಕೇಂದ್ರದಲ್ಲಿ ಇರಿಸಲಾಗಿತ್ತು. ಯೋಗ ಗುರು ಬಿ.ಕೆ.ಎಸ್‌. ಅಯ್ಯಂಗಾರ್‌ ಅವರು ಹುಲಿಯ ಜೀವಮಾನ ಪರ್ಯಂತರಕ್ಕೂ ದತ್ತು

ಮೈಸೂರು ಮೃಗಾಲಯದ ‘ಬ್ರಹ್ಮ’ ಗಂಡು ಹುಲಿ ಸಾವು Read More »

ಕರಾವಳಿ, ಕರ್ನಾಟಕ

ಬೆಳ್ತಂಗಡಿ : ನೇಣಿಗೆ ಶರಣಾದ 25ರ ಯುವಕ

(ನ್ಯೂಸ್ ಕಡಬ) newskadaba.com ಬೆಳ್ತಂಗಡಿ, ಜು.25: ಬೆಳ್ತಂಗಡಿ ತಾಲೂಕಿನ ರೆಖ್ಯಾ ಗ್ರಾಮದ ಕುರುಡೇಲು ಮನೆಯ ಯುವಕನೊಬ್ಬ ಆತ್ಮಹತ್ಯೆಗೆ ಶರಣಾಗಿದ್ದಾನೆ. ಮೃತ ಯುವಕನನ್ನು ಕುರುಡೇಲು ಅಣ್ಣಿ ಗೌಡರ ಪುತ್ರ ಸನತ್ (25) ಎಂದು ಗುರುತಿಸಲಾಗಿದೆ.   ತನ್ನ ಮನೆಯ ಸಮೀಪವಿರುವ ಮರವೊಂದಕ್ಕೆ ನೇಣು ಬಿಗಿದುಕೊಂಡು ಯುವಕ ಆತ್ಮಹತ್ಯೆ ಗೆ ಶರಣಾಗಿದ್ದಾನೆ. ಈತನ ಆತ್ಮಹತ್ಯೆ ನಿಖರ ಕಾರಣ ತಿಳಿದು ಬಂದಿಲ್ಲ. ಧರ್ಮಸ್ಥಳ ಪೊಲೀಸ್ ಠಾಣೆಗೆ ಮನೆಯವರು ದೂರು ನೀಡಿದ್ದು, ಸ್ಥಳಕ್ಕೆ ಭೇಟಿ ನೀಡಿದ ಪೊಲೀಸರು ಪರಿಶೀಲನೆ ನಡೆಸಿದ್ದಾರೆ.    

ಬೆಳ್ತಂಗಡಿ : ನೇಣಿಗೆ ಶರಣಾದ 25ರ ಯುವಕ Read More »

ಕರಾವಳಿ

ದ. ಕ ಹಾಗೂ ಉಡುಪಿಯಲ್ಲಿ ಭಾನುವಾರ ಲಾಕ್‌ಡೌನ್‌ ಮುಂದುವರಿಯಲಿದೆ ➤ ಜಿಲ್ಲಾಧಿಕಾರಿ ಸ್ಪಷ್ಟನೆ

(ನ್ಯೂಸ್ ಕಡಬ) newskadaba.com ಉಡುಪಿ: ಜು.25., ಕೊರೊನಾ ಸೋಂಕಿನ ಹರಡುವಿಕೆಯನ್ನು ನಿಯಂತ್ರಿಸುವ ನಿಟ್ಟಿನಲ್ಲಿ ದಕ್ಷಿಣ ಕನ್ನಡ ಮತ್ತು ಉಡುಪಿ ಜಿಲ್ಲೆಗಳಲ್ಲಿ ಭಾನುವಾರ ಲಾಕ್‌ಡೌನ್‌ ಮುಂದುವರೆಯಲಿದೆ. ದಕ್ಷಿಣ ಕನ್ನಡ ಜಿಲ್ಲಾಧಿಕಾರಿ ಸಿಂಧು ಬಿ ರೂಪೇಶ್ ಮತ್ತು ಉಡುಪಿ ಜಿಲ್ಲಾಧಿಕಾರಿ ಜಿ ಜಗದೀಶ್‌ ಅವರು ಉಭಯ ಜಿಲ್ಲೆಗಳಲ್ಲಿ ಶನಿವಾರ ರಾತ್ರಿ 9 ಗಂಟೆಯಿಂದ ಭಾನುವಾರದ ಲಾಕ್‌ಡೌನ್‌ ಆರಂಭವಾಗಲಿದೆ ಎಂದು ತಿಳಿಸಿದ್ದಾರೆ. ಕಳೆದ ಮಂಗಳವಾರ ಮುಖ್ಯಮಂತ್ರಿ ಬಿ ಎಸ್‌ ಯಡಿಯೂರಪ್ಪ ಅವರು ಯೂಟ್ಯೂಬ್‌ ಹಾಗೂ ಫೇಸ್‌ಬುಕ್‌ ಲೈವ್‌ ಮೂಲಕ ರಾಜ್ಯದ ಜನತೆಯನ್ನು

ದ. ಕ ಹಾಗೂ ಉಡುಪಿಯಲ್ಲಿ ಭಾನುವಾರ ಲಾಕ್‌ಡೌನ್‌ ಮುಂದುವರಿಯಲಿದೆ ➤ ಜಿಲ್ಲಾಧಿಕಾರಿ ಸ್ಪಷ್ಟನೆ Read More »

ಕರಾವಳಿ

ಆನ್‌ಲೈನ್‌ ತರಗತಿ ➤ ಗುಡ್ಡ ಹತ್ತಿ ನೆಟ್‌ವರ್ಕ್‌ಗಾಗಿ ವಿದ್ಯಾರ್ಥಿಗಳ ಪ್ರಯಾಸ

(ನ್ಯೂಸ್ ಕಡಬ) newskadaba.com ಮಂಗಳೂರು, ಜು.25:  ಕೋವಿಡ್-19 ಸಾಂಕ್ರಾಮಿಕದಿಂದಾಗಿ ಶಾಲೆ-ಕಾಲೇಜುಗಳು ಆರಂಭವಾಗಿಲ್ಲ. ಆದರೆ, ಆನ್‌ಲೈನ್‌ ಪಾಠಗಳೂ ನಿಂತಿಲ್ಲ. ಜಿಲ್ಲೆಯ ಗ್ರಾಮೀಣ ಭಾಗದಲ್ಲಿ ನೆಟ್‌ವರ್ಕ್‌ನ ಸಮಸ್ಯೆ ತೀವ್ರವಾಗುತ್ತಿದ್ದು, ಇದಕ್ಕಾಗಿ ಜಿಲ್ಲೆಯ ವಿದ್ಯಾರ್ಥಿಗಳು ಹರಸಾಹಸ ಮಾಡುತ್ತಿದ್ದಾರೆ. ಕಡಬ ತಾಲ್ಲೂಕಿನ ಕೊಯಿಲಾ ಗ್ರಾಮದ ಕುದ್ಲೂರು ಪರಿಸರದ ವಿದ್ಯಾರ್ಥಿಗಳು ಅನಿವಾರ್ಯವಾಗಿ ಗುಡ್ಡ ಹತ್ತಿ ನೆಟ್‌ವರ್ಕ್‌ಗಾಗಿ ಪ್ರಯಾಸ ಪಡುತ್ತಿದ್ದಾರೆ. ಇಲ್ಲಿ ಯಾವುದೇ ಸಿಮ್‌ನ ನೆಟ್‌ವರ್ಕ್ ಕೂಡ ಸಿಗುತ್ತಿಲ್ಲ.       ‘ತಂತ್ರಜ್ಞಾನ ಯುಗದಲ್ಲಿ ಅಂತರ್ಜಾಲವನ್ನೇ ನೋಡಲಾಗದ ಸ್ಥಿತಿ ನಮ್ಮದಾಗಿದೆ. ಮಾತನಾಡಲು ನೆಟ್‌ವರ್ಕ್ ಸಿಗುತ್ತಿಲ್ಲ.

ಆನ್‌ಲೈನ್‌ ತರಗತಿ ➤ ಗುಡ್ಡ ಹತ್ತಿ ನೆಟ್‌ವರ್ಕ್‌ಗಾಗಿ ವಿದ್ಯಾರ್ಥಿಗಳ ಪ್ರಯಾಸ Read More »

ಕರಾವಳಿ

ಕೋವಿಡ್-19 ಸಂಕಷ್ಟ ➤ ನಾಗರ ಪಂಚಮಿಗೆ ಖರೀದಿ ಡಲ್

(ನ್ಯೂಸ್ ಕಡಬ) newskadaba.com ಮಂಗಳೂರು, ಜು.25: ಕೋವಿಡ್-19 ನಿಯಂತ್ರಣ ನಿಟ್ಟಿನಲ್ಲಿ ಈ ಬಾರಿ ಸಾರ್ವಜನಿಕವಾಗಿ ನಾಗರ ಪಂಚಮಿ ಆಚರಣೆ ಇಲ್ಲದಿದ್ದರೂ ಸಾಕಷ್ಟು ಪ್ರಮಾಣದಲ್ಲಿ ಹೂವು, ಸೀಯಾಳ, ಕೇದಗೆ, ಹಿಂಗಾರ ಶುಕ್ರವಾರ ಮಾರುಕಟ್ಟೆಗೆ ಬಂದಿದೆ. ಆದರೆ ಗ್ರಾಹಕರು ಖರೀದಿಗೆ ಆಸಕ್ತಿ ತೋರಿಲ್ಲ.     ಶ್ರೀ ಕ್ಷೇತ್ರ ಕುಕ್ಕೆ, ಕುಡುಪು ಶ್ರೀ ಅನಂತ ಪದ್ಮನಾಭ ದೇವಸ್ಥಾನ ಸೇರಿದಂತೆ ಜಿಲ್ಲೆಯ ಪ್ರಮುಖ ಸುಬ್ರಹ್ಮಣ್ಯ ದೇವಸ್ಥಾನಗಳಲ್ಲಿ ಪ್ರತಿ ವರ್ಷ ನಾಗರ ಪಂಚಮಿ ದಿನದಂದು ಬೆಳಗ್ಗಿನ ಜಾವವೇ ಭಕ್ತರು ಸಾಲಿನಲ್ಲಿ ನಿಲ್ಲುತ್ತಿದ್ದರು. ಈ ವರ್ಷ

ಕೋವಿಡ್-19 ಸಂಕಷ್ಟ ➤ ನಾಗರ ಪಂಚಮಿಗೆ ಖರೀದಿ ಡಲ್ Read More »

ಕರಾವಳಿ

ತಾಯಿಯ 11ನೇ ದಿನದ ತಿಥಿ ವಿಧಿ ವಿಧಾನದ ಬಳಿಕ ಮಕ್ಕಳಿಬ್ಬರು ಮೃತ್ಯು.!!!

(ನ್ಯೂಸ್ ಕಡಬ) newskadaba.com ಪಡುಬಿದ್ರಿ: ಜು.25., ತಾಯಿ ಮೃತಪಟ್ಟ 11ನೇ ದಿನಕ್ಕೆ ಇನ್ನಿಬ್ಬರು ಮಕ್ಕಳು ಮೃತಪಟ್ಟ ದಾರುಣ ಘಟನೆ ಉಡುಪಿಯ ಪಡುಬಿದ್ರಿಯಲ್ಲಿ ನಡೆದಿದೆ. o ಪಡುಬಿದ್ರಿಯ ದಿ.ವೆಂಕಟರಾಯ ಆಚಾರ್ಯ ಅವರ ಪತ್ನಿ ವಾರಿಜಾಕ್ಷಿ ಆಚಾರ್ಯ (80) ನಿಧನ ಹೊಂದಿದ್ದರು. ಜುಲೈ 22ರ ಬುಧವಾರದಂದು 11ನೇ ದಿನದ ತಿಥಿ ವಿಧಿ ವಿಧಾನಗಳು ನಡೆದು ಕೆಲ ಗಂಟೆಗಳಲ್ಲಿ ಮಕ್ಕಳ ಪೈಕಿ ಹಿರಿಯ ಮಗನಾದ ಉದಯ ಆಚಾರ್ಯ(55) ಎಂಬವರು ಮಧ್ಯಾಹ್ನದ ಊಟ ಮುಗಿಸಿ 4 ಗಂಟೆಯ ಸುಮಾರಿಗೆ ಹೃದಯಾಘಾತದಿಂದ ನಿಧನ ಹೊಂದಿದ್ದರು.

ತಾಯಿಯ 11ನೇ ದಿನದ ತಿಥಿ ವಿಧಿ ವಿಧಾನದ ಬಳಿಕ ಮಕ್ಕಳಿಬ್ಬರು ಮೃತ್ಯು.!!! Read More »

ಕರಾವಳಿ

ಕಂಟೈನರ್ ನಲ್ಲಿ 17 ಜಾನುವಾರುಗಳ ಸಾಗಾಟ ➤ ಇಬ್ಬರ ಹೆಡೆಮುರಿ ಕಟ್ಟಿದ ಪೊಲೀಸರು

(ನ್ಯೂಸ್ ಕಡಬ) newskadaba.com ಹೊಸಂಗಡಿ, ಜು.25: ಅಕ್ರಮವಾಗಿ ಕಂಟೈನರ್ ವಾಹನದಲ್ಲಿ 17 ಜಾನುವಾರುಗಳನ್ನು ಸಾಗಾಟ ಮಾಡುತ್ತಿರುವುದನ್ನು ಅಮಾಸೆಬೈಲು ಠಾಣೆಯ ಪೋಲಿಸರು ಹೊಸಂಗಡಿ ಚೆಕ್ ಪೋಸ್ಟ್ ನಲ್ಲಿ ಪತ್ತೆ ಹಚ್ಚಿದ್ದು, ಇಬ್ಬರು ಆರೋಪಿಗಳನ್ನು ಪೊಲೀಸರು  ಹೆಡೆಮುರಿ ಕಟ್ಟಿದಾರೆ.  ಬಂಧಿತ ಆರೋಪಿಗಳನ್ನು ಹನೀಫ್ ಮಂಗಳೂರು, ಜಾಫರ್ ಸಾಧಿಕ್ ಎಂದು ಗುರುತಿಸಲಾಗಿದೆ.     ಜು.25 ಬೆಳಿಗ್ಗೆ 5 ಗಂಟೆಗೆ ಹೊಸಂಗಡಿ ಚೆಕ್‍ಪೋಸ್ಟ್‍ನಲ್ಲಿ ವಾಹನ ತಪಾಸಣೆಯ ವೇಳೆ ಹುಲಿಕಲ್ ಘಾಟಿ ಕಡೆಯಿಂದ ಚೆಕ್‍ಪೋಸ್ಟ್ ಕಡೆಗೆ ಬರುತ್ತಿದ್ದ ಕೆ.ಎ 17 ಡಿ 6471

ಕಂಟೈನರ್ ನಲ್ಲಿ 17 ಜಾನುವಾರುಗಳ ಸಾಗಾಟ ➤ ಇಬ್ಬರ ಹೆಡೆಮುರಿ ಕಟ್ಟಿದ ಪೊಲೀಸರು Read More »

ಕರಾವಳಿ

ಉಡುಪಿಯಲ್ಲಿಂದು 190 ಮಂದಿಯಲ್ಲಿ ಕೊರೊನಾ ಸೋಂಕು

(ನ್ಯೂಸ್ ಕಡಬ) newskadaba.com ಉಡುಪಿ, ಜು.24: ಉಡುಪಿ ಜಿಲ್ಲೆಯಲ್ಲಿ ಮತ್ತೆ ಕೊರೊನಾ ಸೋಂಕಿನ ಸಂಖ್ಯೆ ದಿನದಿಂದ ದಿನಕ್ಕೆ ಹೆಚ್ಚಳವಾಗಿದೆ. ಶುಕ್ರವಾರ ಒಂದೇ ದಿನ 190 ಹೊಸ ಪ್ರಕರಣಗಳು ಪತ್ತೆಯಾಗಿವೆ.     ಜಿಲ್ಲೆಯಲ್ಲಿ ಒಟ್ಟು ಸೋಂಕಿತರ ಸಂಖ್ಯೆ 3036ಕ್ಕೆ ಏರಿಕೆಯಾಗಿವೆ. ಜಿಲ್ಲೆಯಲ್ಲಿ ಇಂದು ಮತ್ತೆ 88 ಮಂದಿ ಗುಣಮುಖರಾಗಿ ಬಿಡುಗಡೆಯಾಗಿದ್ದು, ಒಟ್ಟು 1096 ಸೋಂಕಿತರು ಗುಣಮುಖರಾಗಿ ಆಸ್ಪತ್ರೆಗಳಿಂದ ಬಿಡುಗಡೆಗೊಂಡಿದ್ದಾರೆ. ಸದ್ಯ 1940 ಮಂದಿಗೆ ಆಸ್ಪತ್ರೆಗಳಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ.      

ಉಡುಪಿಯಲ್ಲಿಂದು 190 ಮಂದಿಯಲ್ಲಿ ಕೊರೊನಾ ಸೋಂಕು Read More »

ಕರಾವಳಿ

ಮುಂದುವರಿದ ಕೊರೋನಾ ಆರ್ಭಟ ➤ ದ. ಕನ್ನಡದಲ್ಲಿ ಸಾವಿನ ಸಂಖ್ಯೆ 107ಕ್ಕೆ ಏರಿಕೆ

(ನ್ಯೂಸ್ ಕಡಬ) newskadaba.com ಮಂಗಳೂರು, ಜು.24:  ಕರ್ನಾಟದಲ್ಲಿ ಕೊರೋನಾ ವೈರಸ್ ಮರಣ ಮೃದಂಗ ಮುಂದುವರೆದಿದೆ.  ದ.ಕ. ಜಿಲ್ಲೆಯಲ್ಲಿ ಒಂದೆಡೆ ಕೊರೊನಾ ಪ್ರಕರಣಗಳು ಹೆಚ್ಚುತ್ತಿದ್ದು, ಮತ್ತೊಂದೆಡೆ ಸಾವಿನ ಸಂಖ್ಯೆ ಏರಿಕೆಯಾಗುತ್ತಿದೆ.     ಮಂಗಳೂರು ನಿವಾಸಿ 44 ವರ್ಷದ ವ್ಯಕ್ತಿ ಬಲಿಯಾಗಿದ್ದಾರೆ. ಮಂಗಳೂರು ಮೂಲದ 56 ವರ್ಷದ ವ್ಯಕ್ತಿ ಮೃತಪಟ್ಟಿದ್ದಾರೆ. ಮಂಗಳೂರಿನ 67 ವರ್ಷದ ವ್ಯಕ್ತಿ ಬಲಿಯಾಗಿದ್ದಾರೆ. ಬಂಟ್ವಾಳದ 42 ವರ್ಷದ ವ್ಯಕ್ತಿ ಸಾವನ್ನಪ್ಪಿದ್ದಾರೆ. ಶಿವಮೊಗ್ಗ ಮೂಲದ 67 ವರ್ಷದ ವ್ಯಕ್ತಿ ಸಾವನ್ನಪ್ಪಿದ್ದಾರೆ. ಮಂಗಳೂರಿನ 75 ವರ್ಷದ ಮಹಿಳೆ ಮೃತಪಟ್ಟಿದ್ದಾರೆ. ಮಂಗಳೂರು ನಿವಾಸಿ 65 ವರ್ಷದ ಮಹಿಳೆ ಸಾವನ್ನಪ್ಪಿದ್ದಾರೆ.

ಮುಂದುವರಿದ ಕೊರೋನಾ ಆರ್ಭಟ ➤ ದ. ಕನ್ನಡದಲ್ಲಿ ಸಾವಿನ ಸಂಖ್ಯೆ 107ಕ್ಕೆ ಏರಿಕೆ Read More »

ಕರಾವಳಿ, ಕರ್ನಾಟಕ, ಬ್ರೇಕಿಂಗ್ ನ್ಯೂಸ್
Scroll to Top