News Kadaba

ಮಂಗಳೂರಿನಲ್ಲಿ ಮತ್ತಿಬ್ಬರನ್ನು ಬಲಿ ಪಡೆದ ಕೊರೊನಾ

(ನ್ಯೂಸ್ ಕಡಬ) newskadaba.com.ಮಂಗಳೂರು,ಜೂ.28: ದ.ಕ ಜಿಲ್ಲೆಯಲ್ಲಿ ಕೊರೊನಾಗೆ ಇಂದು ಮತ್ತಿಬ್ಬರ ಬಲಿಯಾಗಿದೆ. ಇದರೊಂದಿಗೆ ದ.ಕ ಜಿಲ್ಲೆಯಲ್ಲಿ ಕೊರೊನಾಗೆ ಬಲಿಯಾದವರ ಸಂಖ್ಯೆ 12ಕ್ಕೇರಿದೆ. ಬಂಟ್ವಾಳ ಸಮೀಪದ ಲೊರೆಟ್ಟೊಪದವಿನ 58 ವರ್ಷದ ಪ್ರಾಯದ ಮಹಿಳೆ ಹಾಗೂ ಸುರತ್ಕಲ್‍ನ ಇಡ್ಯಾ ನಿವಾಸಿ 31 ವರ್ಷದ ಯುವಕ ಕೊರೊನಾ ಸೋಂಕಿನಿಂದಾಗಿ ಸಾವನ್ನಪ್ಪಿದ್ದಾರೆ. ಮೃತಪಟ್ಟ ಮಹಿಳೆಯು ಕಳೆದೊಂದು ವಾರದಿಂದ ಖಾಸಗಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದರು ಹಾಗೂ ಯುವನಿಗೆ ಜ್ವರದಿಂದಾಗಿ ಆಸ್ಪತ್ರೆಗೆ ತೆರಳಿ ತಪಾಸಣೆಗೊಳಪಡಿಸುವಾಗ ಕೊರೊನಾ ದೃಢಪಟ್ಟಿತ್ತು ನಂತರ ದೇರಳಕಟ್ಟೆಯ ಖಾಸಗಿ ಆಸ್ಪತ್ರೆಯಲ್ಲಿ ಚಿಕಿತ್ಸೆ ನೀಡಲಾಗುತ್ತಿತ್ತು […]

ಮಂಗಳೂರಿನಲ್ಲಿ ಮತ್ತಿಬ್ಬರನ್ನು ಬಲಿ ಪಡೆದ ಕೊರೊನಾ Read More »

ಕರಾವಳಿ

11 ಗಂಟೆಗೆ ಮೋದಿ ಮನ್ ಕಿ ಬಾತ್ ➤ ಜನತಾ ಸಲಹೆಗಳ ಬುತ್ತಿ ಬಿಚ್ಚಿಡಲಿರುವ ಪ್ರಧಾನಿ

(ನ್ಯೂಸ್ ಕಡಬ) newskadaba.com ನವದೆಹಲಿ,ಜೂ.28:  ಮಾರಕ ಕೊರೊನಾ ವೈರಸ್ ಹಾವಳಿ, ನಡುವೆ, ಇಂದು(ಭಾನುವಾರ) ಪ್ರಧಾನಿ ಮೋದಿ ತಮ್ಮ ಮನ್ ಕಿ ಬಾತ್ ಕಾರ್ಯಕ್ರಮ ಉದ್ದೇಶಿಸಿ ಮಾತನಾಡಲಿದ್ದಾರೆ. ಇಂದು ಬೆಳಗ್ಗೆ 11 ಗಂಟೆಗೆ ಪ್ರಧಾನಿ ಮೋದಿ ಮನ್ ಕಿ ಬಾತ್ ಕಾರ್ಯಕ್ರಮ ಉದ್ದೇಶಿಸಿ ಮಾತನಾಡಲಿದ್ದು, ಪ್ರಮುಖವಾಗಿ ಈ ಕಾರ್ಯಕ್ರಮಕ್ಕೆ ಜನರು ಕಳುಹಿಸಿರುವ ಸಲಹೆಗಳನ್ನು ಪ್ರಧಾನಿ ಮೋದಿ ದೇಶದ ಮುಂದಿಡಲಿದ್ದಾರೆ.   ಪ್ರಮುಖವಾಗಿ ಕೊರೊನಾ ವೈರಸ್ ಹಾವಳಿ ವಿಷಯವೇ ಚರ್ಚೆಗೆ ಬರಲಿದ್ದು, ಮಾರಕ ವೈರಾಣುವನ್ನು ನಿಯಂತ್ರಿಸುವ ಕುರಿತು ಪ್ರಧಾನಿ ಮೋದಿ

11 ಗಂಟೆಗೆ ಮೋದಿ ಮನ್ ಕಿ ಬಾತ್ ➤ ಜನತಾ ಸಲಹೆಗಳ ಬುತ್ತಿ ಬಿಚ್ಚಿಡಲಿರುವ ಪ್ರಧಾನಿ Read More »

ರಾಷ್ಟ್ರೀಯ ನ್ಯೂಸ್

ಕಾರ್ಯನಿರತ ಪತ್ರಕರ್ತರನ್ನು ಕೋವಿಡ್ ವಿಮೆ ವ್ಯಾಪ್ತಿಗೆ ಒಳಪಡಿಸಬೇಕು ➤ H.D. ಕುಮಾರಸ್ವಾಮಿ

(ನ್ಯೂಸ್ ಕಡಬ) newskadaba.com ಬೆಂಗಳೂರು,ಜೂ.27:  ಪತ್ರಕರ್ತರನ್ನು ಕೇವಲ ಹೆಸರಿಗೆ ಮಾತ್ರ ಕೊರೋನಾ ವಾರಿಯರ್ಸ್ ಎಂದು ಘೋಷಿಸಲಾಗಿದೆ ಎಂದು ಮಾಜಿ ಮುಖ್ಯಮಂತ್ರಿ ಎಚ್ ಡಿ ಕುಮಾರಸ್ವಾಮಿ ಅಸಮಾಧಾನ ವ್ಯಕ್ತಪಡಿಸಿದ್ದಾರೆ.ದೃಶ್ಯ ಮತ್ತು ಮುದ್ರಣ ಮಾಧ್ಯಮದ ಕಾರ್ಯನಿರತ ಪತ್ರಕರ್ತರನ್ನು ಕೋವಿಡ್ ವಿಮೆ ವ್ಯಾಪ್ತಿಗೆ ಒಳಪಡಿಸಬೇಕು ಎಂದು ಅವರು ಸರ್ಕಾರವನ್ನು ಒತ್ತಾಯಿಸಿದ್ದಾರೆ. ಕೊರೋನಾ ಸೋಂಕು ತಗುಲಿದ ಪತ್ರಕರ್ತರಿಗೆ ಖಾಸಗಿ ಆಸ್ಪತ್ರೆಗಳಲ್ಲಿಯೂ ಉಚಿತವಾಗಿ ಚಿಕಿತ್ಸೆ ಒದಗಿಸಲು ರಾಜ್ಯಸರ್ಕಾರ ತಕ್ಷಣವೇ ನಿರ್ಧಾರ ಕೈಗೊಳ್ಳಬೇಕು ಎಂದು ಕುಮಾರಸ್ವಾಮಿ ಆಗ್ರಹಿಸಿದ್ದಾರೆ.    

ಕಾರ್ಯನಿರತ ಪತ್ರಕರ್ತರನ್ನು ಕೋವಿಡ್ ವಿಮೆ ವ್ಯಾಪ್ತಿಗೆ ಒಳಪಡಿಸಬೇಕು ➤ H.D. ಕುಮಾರಸ್ವಾಮಿ Read More »

ಕರಾವಳಿ, ಕರ್ನಾಟಕ

SSLC ಪರೀಕ್ಷೆಗೆ ಹಾಜರಾದ ವಿದ್ಯಾರ್ಥಿಗೆ ಕೊರೊನಾ ಪಾಸಿಟಿವ್‌

(ನ್ಯೂಸ್ ಕಡಬ) newskadaba.com ಹಾಸನ,ಜೂ.27:  ಹಾಸನದಲ್ಲಿ ಎಸ್‌ಎಸ್‌ಎಲ್‌ಸಿ ಪರೀಕ್ಷೆಗೆ ಹಾಜರಾದ ವಿದ್ಯಾರ್ಥಿಗೆ ಕೊರೊನಾ ಪಾಸಿಟಿವ್‌ ಆಗಿದೆ. ಅರಕಲಗೂಡು ತಾಲ್ಲೂಕಿನ ಮಲ್ಲಿಪಟ್ಟಣ ಗ್ರಾಮದ ಪರೀಕ್ಷಾ ಕೇಂದ್ರದಲ್ಲಿ ೧೬ ವರ್ಷ ಪ್ರಾಯದ ವಿದ್ಯಾರ್ಥಿ ಪರೀಕ್ಷೆ ಬರೆದಿದ್ದು ಎರಡು ದಿನಗಳ ಹಿಂದೆ ವಿದ್ಯಾರ್ಥಿಯ ಗಂಟಲು ದ್ರವದ ಮಾದರಿಯನ್ನು ಪರೀಕ್ಷೆಗೆ ಕಳುಹಿಸಲಾಗಿದ್ದು ಶನಿವಾರ ಬಂದ ವರದಿಯಲ್ಲಿ ಕೊರೊನಾ ಇರುವುದು ದೃಢಪಟ್ಟಿದೆ ಎಂದು ವರದಿ ತಿಳಿಸಿದೆ.  

SSLC ಪರೀಕ್ಷೆಗೆ ಹಾಜರಾದ ವಿದ್ಯಾರ್ಥಿಗೆ ಕೊರೊನಾ ಪಾಸಿಟಿವ್‌ Read More »

ಕರಾವಳಿ, ಕರ್ನಾಟಕ

ಯಶಸ್ವಿಯಾಯಿತು ಮಾತೃಪೂರ್ಣ ಯೋಜನೆಯ ಕಿಟ್ ವಿತರಣೆ

(ನ್ಯೂಸ್ ಕಡಬ) newskadaba.com.ಉಡುಪಿ,ಜೂ.27:ಅವಿಭಜಿತ ದಕ್ಷಿಣ ಕನ್ನಡ ಜಿಲ್ಲೆಯ ಮಹಿಳಾ ಮತ್ತು ಮಕ್ಕಳ ಇಲಾಖೆಯು ಮೂರು ವರ್ಷಗಳ ಬಳಿಕ ಮಾತೃಪೂರ್ಣ ಯೋಜನೆಯಲ್ಲಿ ಸಫಲತೆಯನ್ನು ಕಾಣುತ್ತಿದೆ. ಇದರೊಂದಿಗೆ ಸರಕಾರದ ಉದ್ದೇಶ ಯಶಸ್ವಿಯತ್ತ ಸಾಗುತ್ತಿದೆ. ಈ ಯೋಜನೆಯಡಿ ಬಿಸಿಯೂಟದ ಬದಲು ಸಾಮಗ್ರಿಗಳ ಕಿಟ್ ವಿತರಣೆ ಮಾಡುತ್ತಿರುವುದರಿಂದ ಕೋವಿಡ್-19ನ ನಡುವೆಯು ಅರ್ಹರಿಗೆ ಪೌಷ್ಟಿಕ ಆಹಾರ ಸರಿಯಾಗಿ ತಲುಪುತ್ತಿರುವುದು ಈ ಯಶಸ್ಸಿಗೆ ಕಾರಣ. ಸರಕಾರ ಮಾತೃಪೂರ್ಣದಡಿ ಅಂಗನವಾಡಿಗಳಲ್ಲಿ ಪೌಷ್ಟಿಕ ಆಹಾರ ತಯಾರಿಸಿ ನೀಡುವುದನ್ನು ಸ್ಥಗಿತಗೊಳಿಸಿದೆ.ಇದರ ಬದಲಾಗಿ ಕಿಟ್ ನೀಡುವ ವ್ಯವಸ್ಥೆಯನ್ನು ಜಾರಿಗೊಳಿಸಿದೆ.ಎಪ್ರಿಲ್, ಮೇ ತಿಂಗಳಿನಲ್ಲಿ

ಯಶಸ್ವಿಯಾಯಿತು ಮಾತೃಪೂರ್ಣ ಯೋಜನೆಯ ಕಿಟ್ ವಿತರಣೆ Read More »

ಕರ್ನಾಟಕ

ಉಳ್ಳಾಲ ಕೊರೊನಾ ಅಟ್ಟಹಾಸ ರ್ಯಾಂಡಮ್ ಟೆಸ್ಟ್‍ಗೆ ನಿರ್ಧಾರ

(ನ್ಯೂಸ್ ಕಡಬ) newskadaba.com.ಉಳ್ಳಾಲ,ಜೂ.27: ಉಳ್ಳಾಲದಲ್ಲಿ ದಿನೇ ದಿನೇ ಹೆಚ್ಚುತ್ತಿರುವ ಕೊರೊನಾ ಪ್ರಕರಣಗಳಿಂದಾಗಿ ರ್ಯಾಂಡಮ್ ಪರೀಕ್ಷೆ ನಡೆಸಲು ನಿರ್ಧರಿಸಲಾಗಿದೆ. ಉಳ್ಳಾದಲ್ಲಿ ವೃದ್ದೆ ಸಾವಿನ ಬಳಿಕ ಇಬ್ಬರು ಪೋಲಿಸ್ ಸಹಿತ ಐವರಿಗೆ ಕೊರೊನಾ ದೃಢಪಟ್ಟಿತ್ತು. ಈ ಹಿನ್ನಲೆಯಲ್ಲಿ ಸೋಂಕಿತ ಪ್ರದೇಶದಲ್ಲಿ ರ್ಯಾಂಡಮ್ ಪರೀಕ್ಷೆ ಮಾಡಲಾಗುದೆಂದು ಮಂಗಳೂರು ಶಾಸಕ ಯು.ಟಿ.ಖಾದರ್ ಹೇಳಿದ್ದಾರೆ. ಉಳ್ಳಾಲದ ಅಜಾದ್ ನಗರ, ಕೋಡಿ, ಬಂಗೇರ್ ಲೇನ್, ಪೊಲೀಸ್ ಠಾಣೆ, ಸಹರಾ ಆಸ್ಪತ್ರೆ ವ್ಯಾಪ್ತಿಯಲ್ಲಿ ಸೋಂಕು ಪತ್ತೆಯಾಗಿದ್ದು ಈ ಪ್ರದೇಶದಲ್ಲಿ ರ್ಯಾಂಡಮ್ ಆಗಿ ಪರೀಕ್ಷೆ ನಡೆಸಲು ಸ್ಥಳೀಯ ಜನಪ್ರತಿನಿಧಿಗಳು,ಧಾರ್ಮಿಕ

ಉಳ್ಳಾಲ ಕೊರೊನಾ ಅಟ್ಟಹಾಸ ರ್ಯಾಂಡಮ್ ಟೆಸ್ಟ್‍ಗೆ ನಿರ್ಧಾರ Read More »

ಕರಾವಳಿ

ಕುಕ್ಕೆ ಸುಬ್ರಹ್ಮಣ್ಯ; ಮಾಸ್ಟರ್ ಪ್ಲಾನ್ ಯೋಜನೆಯ ಕಾಮಗಾರಿ ಉದ್ಘಾಟನೆ ದಿನಾಂಕ ಫಿಕ್ಸ್

(ನ್ಯೂಸ್ ಕಡಬ) newskadaba.com ಕುಕ್ಕೆ ಸುಬ್ರಹ್ಮಣ್ಯ,ಜೂ.27:  ಕುಕ್ಕೆ ಸುಬ್ರಹ್ಮಣ್ಯದಲ್ಲಿ 29 ರ ಸೋಮವಾರ ದಂದು ಪೂರ್ವಾಹ್ನ 11 ಗಂಟೆಗೆ  ಕುಕ್ಕೆ ಸುಬ್ರಹ್ಮಣ್ಯ ದೇವಸ್ಥಾನದ ಮಾಸ್ಟರ್ ಪ್ಲಾನ್ ಯೋಜನೆಯಡಿಯ ಕಾಮಗಾರಿ    ಶ್ರೀ ದೇವಳದ ನೂತನ ಗೋಶಾಲೆ, ಆದಿ ಸುಬ್ರಹ್ಮಣ್ಯ ಬಳಿ ಇರುವ ನೂತನ ವಸತಿಗೃಹ , ಆದಿ ಸುಬ್ರಹ್ಮಣ್ಯ ಬಳಿಯ ಪುರುಷ ಹಾಗೂ ಮಹಿಳೆಯರ ಶೌಚಾಲಯ ಕಟ್ಟಡ ಮತ್ತು ಸವಾರಿ ಮಂಟಪ ಬಳಿಯ ಶೌಚಾಲಯ ಕಟ್ಟಡವನ್ನು ಶ್ರೀ ಯಸ್ ಅಂಗಾರ. ಮಾನ್ಯ ಶಾಸಕರು. ಸುಳ್ಯ ವಿಧಾನಸಭಾ ಕ್ಷೇತ್ರ

ಕುಕ್ಕೆ ಸುಬ್ರಹ್ಮಣ್ಯ; ಮಾಸ್ಟರ್ ಪ್ಲಾನ್ ಯೋಜನೆಯ ಕಾಮಗಾರಿ ಉದ್ಘಾಟನೆ ದಿನಾಂಕ ಫಿಕ್ಸ್ Read More »

ಕರಾವಳಿ, ಕರ್ನಾಟಕ

ಪುತ್ತೂರು; ಕಾನೂನು ಮಹಾವಿದ್ಯಾಲಯದಲ್ಲಿ ಕಳವಿಗೆ ಯತ್ನ

(ನ್ಯೂಸ್ ಕಡಬ) newskadaba.com ಪುತ್ತೂರು,ಜೂ.27: ನೆಹರು ನಗರ ವಿವೇಕಾನಂದ ಕಾನೂನು ಮಹಾವಿದ್ಯಾಲಯದ ಕಛೇರಿ ಮತ್ತು ಪ್ರಾಂಶುಪಾಲ ಕೊಠಡಿ ಬೀಗ ಮುರಿದು ಕಳ್ಳರು ಒಳನುಗ್ಗಿ ಕಳವಿಗೆ ಯತ್ನಿಸಿದ ಘಟನೆ ಶುಕ್ರವಾರ ದಂದು ಬೆಳಕಿಗೆ ಬಂದಿದೆ. ವಿವೇಕಾನಂದ ಕಾನೂನು ಮಹಾವಿದ್ಯಾಲಯದ ಕಛೇರಿಯ ಬೀಗ ಮುರಿಯಲೆತ್ನಿಸಿದ ಕಳ್ಳರು ಪ್ರಾಶುಂಪಾಲರ ಕೊಠಡಿಯ ಬೀಗ ಮುರಿದು ಕಪಾಟಿನೊಳಗಿದ್ದ ದಾಖಲೆಪತ್ರಗಳನ್ನು ಚೆಲ್ಲಾಪಿಲ್ಲಿ ಮಾಡಿ ಕಳವಿಗೆ ಯತ್ನಿಸಿದ್ದಾರೆ. ಕಾಲೇಜಿನ ಸಿಬ್ಬಂದಿಗಳು ಎಂದಿನಂತೆ ಶುಕ್ರವಾರ ಬೆಳಿಗ್ಗೆ ಕಚೇರಿಗೆ ಆಗಮಿಸಿದ ವೇಳೆ ಕಳವಿಗೆ ಯತ್ನಿಸಿದ ವಿಚಾರ ಬೆಳಕಿಗೆ ಬಂದಿದೆ. ಘಟನೆ

ಪುತ್ತೂರು; ಕಾನೂನು ಮಹಾವಿದ್ಯಾಲಯದಲ್ಲಿ ಕಳವಿಗೆ ಯತ್ನ Read More »

ಕರಾವಳಿ, ಕರ್ನಾಟಕ, ಕ್ರೈಮ್ ನ್ಯೂಸ್

ಜೋಡುಪಾಲದ ಪ್ರಾಕೃತಿ ವಿಕೋಪಕ್ಕೆ ಸಿಲುಕಿ ಮನೆ ಕಳೆದುಕೊಂಡ ಜೀವಕ್ಕೆ ಕೊನೆಗೂ ಮುಕ್ತಿ

(ನ್ಯೂಸ್ ಕಡಬ) newskadaba.com.ಸುಳ್ಯ,ಜೂ.27:ಪ್ರಾಕೃತಿ ವಿಕೋಪಕ್ಕೆ ಸಿಲುಕಿ ತನ್ನ ಮನೆವರು ಮತ್ತು ಮನೆಯನ್ನೇ ಕಳೆದುಕೊಂಡು ತೀವ್ರ ನೊಂದ ಜೀವಕ್ಕೆ ಕೊನೆಗೂ ಪ್ರಾಕೃತಿಕವಿಕೋಪದಡಿ ನಿರ್ಮಿಸಿದ ಮನೆ ದೊರೆತಿದೆ. ಎರಡು ವರ್ಷಗಳ ಹಿಂದೆ ಜೋಡುಪಾಲದಲ್ಲಿ ಸಂಭವಿಸಿದ ಭೀಕರ ಜಲ ಸ್ಪೋಟ ಸಂಭವಿಸಿದ ವೇಳೆ ಮೋಹಿತ್ ಎಂಬ ಯುವಕನ ತಂದೆ ಬಸಪ್ಪ, ತಾಯಿ ಗೌರಮ್ಮ .ಸಹೋದರಿ ಮೋನಿಶಾ ಮತ್ತು ಸಂಬಂಧಿ ಮದೆ ಗ್ರಾಮದ ಬೆಟ್ಟತ್ತೂರು ನಿವಾಸಿ ಮಂಜುಳಾ ಮೃತಪಟ್ಟಿದ್ದರು.ಬೆಟ್ಟದಿಂದ ಬಂದ ಪ್ರವಾಹ ಶೀಟು ಹಾಕಿದ ಮನೆ ಸಹಿತ ಮನೆ ಮಂದಿಯನ್ನು ಕೊಚ್ಚಿಕೊಂಡು ಹೋಗಿತ್ತು.

ಜೋಡುಪಾಲದ ಪ್ರಾಕೃತಿ ವಿಕೋಪಕ್ಕೆ ಸಿಲುಕಿ ಮನೆ ಕಳೆದುಕೊಂಡ ಜೀವಕ್ಕೆ ಕೊನೆಗೂ ಮುಕ್ತಿ Read More »

ಕರ್ನಾಟಕ

ಕರಾವಳಿಯಲ್ಲಿ ‘ಆರೆಂಜ್ ಅಲರ್ಟ್’ ಘೋಷಣೆ

(ನ್ಯೂಸ್ ಕಡಬ) newskadaba.com ಮಂಗಳೂರು,ಜೂ.27:  ಕಳೆದ ಕೆಲವು ದಿನಗಳಿಂದ ಕರಾವಳಿ ಭಾಗದಲ್ಲಿ ಮುಂಗಾರು ದುರ್ಬಲಗೊಂಡಿದ್ದು, ಮುಂದಿನ ಮೂರು ದಿನಗಳಲ್ಲಿ ಭಾರೀ ಮಳೆಯಾಗುವ ಸಂಭವವಿದ್ದು, ಭಾರತೀಯ ಹವಾಮಾನ ಇಲಾಖೆಯು “ಆರೆಂಜ್‌ ಅಲರ್ಟ್‌’ ಘೋಷಣೆ ಮಾಡಿದೆ.   ಈ ವೇಳೆ ಕರಾವಳಿ ಭಾಗದಲ್ಲಿ 115.6 ಮಿ.ಮೀ. ನಿಂದ 204.4 ಮಿ.ಮೀ.ವರೆಗೆ ಮಳೆಯಾಗುವ ಸಾಧ್ಯತೆ ಇದೆ.ಮಂಗಳೂರು ನಗರದಲ್ಲಿ ಶುಕ್ರವಾರದಂದು ಬಿಸಿಲು ಮತ್ತು ಸೆಕೆಯಿಂದ ಕೂಡಿದ ವಾತಾವರಣ ಇತ್ತು. ರಾತ್ರಿ ಭಾರೀ ಮಳೆಯಾಗಿದ್ದು ರಸ್ತೆಯಲ್ಲಿ ನೀರು ನಿಂತ ಕಾರಣ ವಾಹನ ಸಂಚಾರಕ್ಕೆ ಅಡಚಣೆಯಾಗಿದೆ.

ಕರಾವಳಿಯಲ್ಲಿ ‘ಆರೆಂಜ್ ಅಲರ್ಟ್’ ಘೋಷಣೆ Read More »

ಕರಾವಳಿ, ಕರ್ನಾಟಕ
Scroll to Top