News Kadaba

ಮಂಗಳೂರು : ಕಟ್ಟಡದಿಂದ ಬಿದ್ದು ಪವರ್ ಲಿಫ್ಟರ್ ಮೃತ್ಯು

(ನ್ಯೂಸ್‌ ಕಡಬ) newskadaba.com,  ಜೂ.05: ಹೊಸ ಕಟ್ಟಡವೊಂದರ ನಾಲ್ಕನೆ ಮಹಡಿಯಲ್ಲಿ ವೆಲ್ಡಿಂಗ್ ಕೆಲಸ ಮಾಡುತ್ತಿದ್ದ ರಾಷ್ಟ್ರ ಮಟ್ಟದ ಪವರ್ ಲಿಫ್ಟರೊಬ್ಬರು ಮೃತಪಟ್ಟ ಘಟನೆ ಮಂಗಳೂರು ಪದವಿನಂಗಡಿ ಸಮೀಪ ನಡೆದಿದೆ. ಮೃತಪಟ್ಟ ವ್ಯಕ್ತಿಯನ್ನು ಸಂತೋಷ್ ಪೂಜಾರಿ (45) ಎಂದು ಗುರುತಿಸಲಾಗಿದೆ. ಉಳ್ಳಾಲ ಧರ್ಮನಗರ ನಿವಾಸಿಯಾಗಿದ್ದ ಸಂತೋಷ್ ಪೂಜಾರಿ ತೊಕ್ಕೊಟ್ಟು ಶಕ್ತಿ ಭಾರತ್ ವ್ಯಾಯಾಮ ಶಾಲೆಯ ಸದಸ್ಯರೂ ಆಗಿದ್ದರು. ಪದವಿನಂಗಡಿಯ ಕಟ್ಟಡವೊಂದರಲ್ಲಿ ವೆಲ್ಡಿಂಗ್ ಕೆಲಸ ಮಾಡುತ್ತಿದ್ದಾಗ ಸಂತೋಷ್ ಆಯತಪ್ಪಿ ನಾಲ್ಕನೇ ಮಹಡಿಯಿಂದ ಕೆಳಕ್ಕೆ ಬಿದ್ದಿದ್ದಾರೆ ಎನ್ನಲಾಗಿದೆ. ಇದರಿಂದ ಸಂತೋಷ್‌ರ ತಲೆಗೆ […]

ಮಂಗಳೂರು : ಕಟ್ಟಡದಿಂದ ಬಿದ್ದು ಪವರ್ ಲಿಫ್ಟರ್ ಮೃತ್ಯು Read More »

ಕರಾವಳಿ, ಕರ್ನಾಟಕ, ಬ್ರೇಕಿಂಗ್ ನ್ಯೂಸ್

ರಾಮಲಿಂಗಾ ರೆಡ್ಡಿ ಬೆನ್ನಲ್ಲೇ ಕಾಂಗ್ರೆಸ್ಸಿನಲ್ಲಿ ಮತ್ತೊಂದು ಅಸಮಾಧಾನದ ಕಿಚ್ಚು, ಡಿಕೆಶಿಗೆ ಶಾಕ್

(ನ್ಯೂಸ್‌ ಕಡಬ) newskadaba.com,  ಜೂ.05: ಬುಧವಾರ (ಜೂನ್ 3) ಡಿಕೆ ಶಿವಕುಮಾರ್ ನೇತೃತ್ವದ ನೂತನ ಸರ್ಕಾರ ಅಧಿಕಾರಕ್ಕೆ ಬಂತು, ಒಂದು ದಿನದ ನಂತರ ಖಾತೆ ಹಂಚಿಕೆಯಾಯಿತು. ಇದಾದ ಮರುದಿನವೇ, ಒಬ್ಬರು ಸಚಿವ ಸ್ಥಾನಕ್ಕೆ ರಾಜೀನಾಮೆಯನ್ನು ನೀಡಿದರು. ಈಗ, ಇವರ ಹಿಂದೆಯೇ, ಇನ್ನೊಬ್ಬರು ಸಚಿವರು, ಬಹಿರಂಗವಾಗಿ ಅಸಮಾಧಾವನ್ನು ಹೊರಹಾಕಿದ್ದಾರೆ… ಬೆಂಗಳೂರು ಅಭಿವೃದ್ದಿ ಬಯಸಿದ್ದ ರಾಮಲಿಂಗಾ ರೆಡ್ಡಿಗೆ ಸಂಪದ್ಭರಿತ ಜಲಸಂಪನ್ಮೂಲ ಖಾತೆಯನ್ನು ನೀಡಲಾಗಿತ್ತು. ಕೃಷ್ಣ ಬೈರೇಗೌಡರಿಗೆ, ಬೆಂಗಳೂರು ಅಭಿವೃದ್ದಿ ನೀಡಲಾಗಿತ್ತು. ಇದಕ್ಕೆ ಬೇಸರ ವ್ಯಕ್ತ ಪಡಿಸಿ ರಾಮಲಿಂಗಾ ರೆಡ್ಡಿ ರಾಜೀನಾಮೆಯನ್ನು ನೀಡಿದ್ದಾರೆ. ಇವರ

ರಾಮಲಿಂಗಾ ರೆಡ್ಡಿ ಬೆನ್ನಲ್ಲೇ ಕಾಂಗ್ರೆಸ್ಸಿನಲ್ಲಿ ಮತ್ತೊಂದು ಅಸಮಾಧಾನದ ಕಿಚ್ಚು, ಡಿಕೆಶಿಗೆ ಶಾಕ್ Read More »

ಕರಾವಳಿ, ಕರ್ನಾಟಕ, ಬ್ರೇಕಿಂಗ್ ನ್ಯೂಸ್

ಸರ್ಕಾರಿ ಉದ್ಯೋಗಾಕಾಂಕ್ಷಿಗಳಿಗೆ ಸುವರ್ಣಾವಕಾಶ; ಚಾಲಕರ ನೇಮಕಾತಿ, 67,600 ರೂ. ವೇತನ

(ನ್ಯೂಸ್‌ ಕಡಬ) newskadaba.com,  ಜೂ.05: ಕರ್ನಾಟಕ ರಾಜ್ಯ ಕಾನೂನು ಸೇವೆಗಳ ಪ್ರಾಧಿಕಾರ (KSLSA) ವಾಹನ ಚಾಲಕ (Driver) ಹುದ್ದೆಗಳ ಭರ್ತಿಗಾಗಿ ಅರ್ಹ ಅಭ್ಯರ್ಥಿಗಳಿಂದ ಅರ್ಜಿಗಳನ್ನು ಆಹ್ವಾನಿಸಿದೆ. ಈ ಸಂಬಂಧ ಅಧಿಕೃತ ಅಧಿಸೂಚನೆ ಪ್ರಕಟವಾಗಿದ್ದು, ಒಟ್ಟು 2 ಹುದ್ದೆಗಳನ್ನು ನೇರ ನೇಮಕಾತಿ ಮೂಲಕ ಭರ್ತಿ ಮಾಡಲು ನಿರ್ಧರಿಸಲಾಗಿದೆ. ಸರ್ಕಾರಿ ಉದ್ಯೋಗದ ನಿರೀಕ್ಷೆಯಲ್ಲಿರುವ ಅಭ್ಯರ್ಥಿಗಳಿಗೆ ಇದು ಉತ್ತಮ ಅವಕಾಶವಾಗಿದೆ. ಆಕರ್ಷಕ ವೇತನ: ಆಯ್ಕೆಯಾಗುವ ಅಭ್ಯರ್ಥಿಗಳಿಗೆ ರಾಜ್ಯ ಸರ್ಕಾರದ ವೇತನ ಶ್ರೇಣಿಯ ಪ್ರಕಾರ 34,100 ರಿಂದ 67,600 ರೂ. ವರೆಗೆ ವೇತನ ದೊರೆಯಲಿದೆ.

ಸರ್ಕಾರಿ ಉದ್ಯೋಗಾಕಾಂಕ್ಷಿಗಳಿಗೆ ಸುವರ್ಣಾವಕಾಶ; ಚಾಲಕರ ನೇಮಕಾತಿ, 67,600 ರೂ. ವೇತನ Read More »

ಕರಾವಳಿ, ಕರ್ನಾಟಕ, ಬ್ರೇಕಿಂಗ್ ನ್ಯೂಸ್

ಕರಾವಳಿ ನಾಯಕನಿಗೆ ಬಿಗ್ ಪೋರ್ಟ್‌ಫೋಲಿಯೋ: ನೂತನ ಆರೋಗ್ಯ ಸಚಿವರಾಗಿ ಯು.ಟಿ. ಖಾದರ್ ನೇಮಕ!

(ನ್ಯೂಸ್‌ ಕಡಬ) newskadaba.com, ಜೂ.05: ಉಳ್ಳಾಲ ಶಾಸಕ ಯು.ಟಿ. ಖಾದರ್‌ಗೆ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸಚಿವ ಸ್ಥಾನ ಬೆಂಗಳೂರು: ರಾಜ್ಯ ರಾಜಕಾರಣದ ತೀವ್ರ ಕುತೂಹಲಕ್ಕೆ ಕಾರಣವಾಗಿದ್ದ ನೂತನ ಸಚಿವರ ಖಾತೆ ಹಂಚಿಕೆ ಪ್ರಕ್ರಿಯೆ ಪೂರ್ಣಗೊಂಡಿದ್ದು, ಉಳ್ಳಾಲ ಕ್ಷೇತ್ರದ ಶಾಸಕ ಯು.ಟಿ. ಖಾದರ್ ಅವರಿಗೆ ಮಹತ್ವದ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸಚಿವ ಸ್ಥಾನವನ್ನು ನೀಡಲಾಗಿದೆ. ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ನೇತೃತ್ವದ ನೂತನ ಸಚಿವ ಸಂಪುಟದ ಸದಸ್ಯರಿಗೆ ಅಧಿಕೃತವಾಗಿ ಖಾತೆಗಳನ್ನು ಹಂಚಿಕೆ ಮಾಡಲಾಗಿದ್ದು, ಕರಾವಳಿ ಭಾಗದ ಹಿರಿಯ

ಕರಾವಳಿ ನಾಯಕನಿಗೆ ಬಿಗ್ ಪೋರ್ಟ್‌ಫೋಲಿಯೋ: ನೂತನ ಆರೋಗ್ಯ ಸಚಿವರಾಗಿ ಯು.ಟಿ. ಖಾದರ್ ನೇಮಕ! Read More »

ಕರಾವಳಿ, ಕರ್ನಾಟಕ, ಬ್ರೇಕಿಂಗ್ ನ್ಯೂಸ್

ಕಾರಿನೊಳಗೆ ಸಿಲುಕಿ 3 ವರ್ಷದ ಬಾಲಕ ಮೃತ್ಯು

(ನ್ಯೂಸ್‌ ಕಡಬ) newskadaba.com,  ಜೂ.05: ಕಾರಿನೊಳಗೆ ಉಸಿರುಗಟ್ಟಿ 3 ವರ್ಷದ ಮಗು ದುರ್ಮರಣ ಕಲಬುರಗಿಯಲ್ಲಿ ಹೃದಯವಿದ್ರಾವಕ ಘಟನೆ; ಆಟವಾಡುತ್ತಿದ್ದ ಮಗು ಕಾರಿನಲ್ಲೇ ಸಿಲುಕಿ ಮೃತ್ಯು ಕಲಬುರಗಿ ಜಿಲ್ಲೆಯ ಶಹಾಬಾದ್ ತಾಲೂಕಿನ ತೊನಸನಹಳ್ಳಿ (ಎಸ್) ಗ್ರಾಮದಲ್ಲಿ ಹೃದಯವಿದ್ರಾವಕ ಘಟನೆ ಸಂಭವಿಸಿದ್ದು, ಕಾರಿನೊಳಗೆ ಸಿಲುಕಿ ಉಸಿರುಗಟ್ಟಿ ಮೂರು ವರ್ಷದ ಮಗು ಮೃತಪಟ್ಟಿದೆ. ಕೊಟ್ಟುರೇಶ್ವರ ಅವರ ಪುತ್ರ ಬಸವಪ್ರಭು ಮೃತ ಬಾಲಕನಾಗಿದ್ದಾನೆ. ಪೋಷಕರು ಮಗುವನ್ನು ಶಾಲೆಗೆ ಕರೆದುಕೊಂಡು ಹೋಗಿ ಕಾರನ್ನು ಪಾರ್ಕ್ ಮಾಡಿ ತೆರಳಿದ ವೇಳೆ, ಆಟವಾಡುತ್ತಿದ್ದ ಮಗು ಕಾರಿನೊಳಗೆ ಪ್ರವೇಶಿಸಿದೆ.

ಕಾರಿನೊಳಗೆ ಸಿಲುಕಿ 3 ವರ್ಷದ ಬಾಲಕ ಮೃತ್ಯು Read More »

ಕರ್ನಾಟಕ, ಬ್ರೇಕಿಂಗ್ ನ್ಯೂಸ್

ಯುಕೆ ಹೆಲಿಕಾಪ್ಟರ್ ಪತನದಲ್ಲಿ ಏಕೈಕ ಮಹಿಳಾ ಕಮಾಂಡೋ ಸೇರಿ ಮೂವರು ಸೇನಾಧಿಕಾರಿಗಳು ಮೃತ್ಯು

(ನ್ಯೂಸ್‌ ಕಡಬ) newskadaba.com,  ಜೂ.05: ಸೇನಾಧಿಕಾರಿಗಳ ತರಬೇತಿ ವೇಳೆ ನೌಕಾಪಡೆಯ ಏಕೈಕ ಮಹಿಳಾ ಕಮಾಂಡೋ ಹೆಲಿಕಾಪ್ಟರ್ ದುರಂತದಲ್ಲಿ ಮೃತಪಟ್ಟ ಘಟನೆ ಯುಕೆಯಲ್ಲಿ ನಡೆದಿದೆ. ಬ್ರಿಟನ್ ನೇವಿಯ ಏಕೈಕ ಮಹಿಳಾ ಕಮಾಂಡೋ 31ರ ಹರೆಯದ ಲಿಲಿ ಮೇ ಫಿಶರ್ ದುರಂತ ಅಂತ್ಯ ಕಂಡಿದ್ದಾರೆ. ಇಂಗ್ಲೆಂಡ್‌ನ ಸೌತ್‌ವೆಸ್ಟ್ ಭಾಗದಲ್ಲಿ ಹೆಲಿಕಾಪ್ಟರ್ ಪತನಗೊಂಡಿದೆ. ಪತನಕ್ಕೆ ಕಾರಣ ಸ್ಪಷ್ಟವಾಗಿಲ್ಲ. 2022ರಲ್ಲಿ ತರಬೇತಿ ಪೂರ್ಣಗೊಳಿಸಿ ಬ್ರಿಟನ್ ನೇವಿ ಸೇರಿಕೊಂಡಿದ್ದ ಏಕೈಕ ಮಹಿಳಾ ಕಮಾಂಡೋ ಇದೀಗ ಹೆಲಿಕಾಪ್ಚರ್ ಪತನದಲ್ಲಿ ಅಂತ್ಯಕಂಡಿದ್ದಾರೆ. ಬ್ರಿಟನ್ ನೌಕಾಪಡೆ ಭಾವಪೂರ್ಣ ಶ್ರದ್ಧಾಂಜಲಿ

ಯುಕೆ ಹೆಲಿಕಾಪ್ಟರ್ ಪತನದಲ್ಲಿ ಏಕೈಕ ಮಹಿಳಾ ಕಮಾಂಡೋ ಸೇರಿ ಮೂವರು ಸೇನಾಧಿಕಾರಿಗಳು ಮೃತ್ಯು Read More »

ಕರ್ನಾಟಕ, ಬ್ರೇಕಿಂಗ್ ನ್ಯೂಸ್

ಮೂಡುಬಿದಿರೆ: ಕಟ್ಟಡದ ನಾಲ್ಕನೇ ಮಹಡಿಯಿಂದ ಬಿದ್ದು ಯುವಕ ಮೃತ್ಯು

(ನ್ಯೂಸ್‌ ಕಡಬ) newskadaba.com,  ಜೂ.05: ಛಾವಣಿಯ ಶೀಟ್‌ಗಳನ್ನು ಹಾಕುವಾಗ ಕಟ್ಟಡದ ನಾಲ್ಕನೇ ಮಹಡಿಯಿಂದ ಬಿದ್ದು ಯುವಕನೊಬ್ಬ ಸಾವನ್ನಪ್ಪಿದ್ದ ಘಟನೆ ಗುರುವಾರ ಕಡೆಪಲ್ಲದಲ್ಲಿ ಸಂಭವಿಸಿದೆ. ಮೃತನನ್ನು ಮಾರ್ಪಾಡಿ ಗ್ರಾಮದ ಪಾದೆಮನೆ ನಿವಾಸಿ ಸಂತೋಷ್ ಆಚಾರ್ಯ ಅವರ ಪುತ್ರ ಶೌರ್ಯ ಆಚಾರ್ಯ ಎಂದು ಗುರುತಿಸಲಾಗಿದೆ. ಶೌರ್ಯ ಎರಡನೇ ಪದವಿ ಪೂರ್ವ (ಪಿಯು) ವಿದ್ಯಾರ್ಥಿಯಾಗಿದ್ದು, ಕಾಲೇಜು ರಜಾದಿನಗಳಲ್ಲಿ ಕೂಲಿ ಕೆಲಸ ಮಾಡಿಕೊಂಡಿದ್ದ. ಕಡೆಪಲ್ಲದ ಗಾಂಧಿನಗರದಲ್ಲಿರುವ ‘ರಾಯಲ್ ಪ್ಯಾರಡೈಸ್’ ಕಟ್ಟಡದಲ್ಲಿ ಈ ಘಟನೆ ನಡೆದಿದೆ. ಶೌರ್ಯ ನಾಲ್ಕನೇ ಮಹಡಿಯಲ್ಲಿ ಛಾವಣಿಯ ಹಾಳೆಗಳನ್ನು ಅಳವಡಿಸುವ

ಮೂಡುಬಿದಿರೆ: ಕಟ್ಟಡದ ನಾಲ್ಕನೇ ಮಹಡಿಯಿಂದ ಬಿದ್ದು ಯುವಕ ಮೃತ್ಯು Read More »

ಕರಾವಳಿ, ಕರ್ನಾಟಕ, ಬ್ರೇಕಿಂಗ್ ನ್ಯೂಸ್

ವಿದ್ಯಾರ್ಥಿಗಳಿಗೆ ಉಚಿತ ಬಸ್ ಪಾಸ್ ಘೋಷಣೆ: ಸಾರಿಗೆ ನಿಗಮಗಳಿಗೆ ಕೋಟಿ ಕೋಟಿ ರೂ. ನಷ್ಟ ಆತಂಕ..

(ನ್ಯೂಸ್‌ ಕಡಬ) newskadaba.com,  ಜೂ.05: ರಾಜ್ಯದ ಎಲ್ಲಾ ಶಾಲಾ ಹಾಗೂ ಕಾಲೇಜು ವಿದ್ಯಾರ್ಥಿಗಳಿಗೆ ಉಚಿತ ಬಸ್ ಪಾಸ್ ನೀಡುವ ರಾಜ್ಯ ಸರ್ಕಾರದ ನಿರ್ಧಾರವು ವಿದ್ಯಾರ್ಥಿಗಳಿಗೆ ಆರ್ಥಿಕ ನೆರವಾಗಲಿದ್ದರೂ, ರಾಜ್ಯದ ನಾಲ್ಕು ರಸ್ತೆ ಸಾರಿಗೆ ನಿಗಮಗಳ ಆದಾಯದ ಮೇಲೆ ಪರಿಣಾಮ ಬೀರುವ ಸಾಧ್ಯತೆ ಇದೆ.ಪ್ರಸ್ತುತ ರಾಜ್ಯದ 4ಸಾರಿಗೆ ನಿಗಮಗಳು ಪ್ರತಿವರ್ಷ ಸುಮಾರು ಏಳು ಲಕ್ಷ ವಿದ್ಯಾರ್ಥಿಗಳಿಂದ ಬಸ್ ಪಾಸ್ ಶುಲ್ಕ ರೂಪದಲ್ಲಿ ಆದಾಯ ಗಳಿಸುತ್ತಿವೆ. ಹೊಸ ಯೋಜನೆ ಜಾರಿಗೆ ಬಂದರೆ ಈ ಆದಾಯ ಸಂಪೂರ್ಣವಾಗಿ ನಿಲ್ಲಲಿದೆ ಎಂದು ಅಧಿಕಾರಿಗಳು

ವಿದ್ಯಾರ್ಥಿಗಳಿಗೆ ಉಚಿತ ಬಸ್ ಪಾಸ್ ಘೋಷಣೆ: ಸಾರಿಗೆ ನಿಗಮಗಳಿಗೆ ಕೋಟಿ ಕೋಟಿ ರೂ. ನಷ್ಟ ಆತಂಕ.. Read More »

ಕರಾವಳಿ, ಕರ್ನಾಟಕ, ಬ್ರೇಕಿಂಗ್ ನ್ಯೂಸ್

ವಾಹನ ಸವಾರರಿಗೆ ಗುಡ್ ನ್ಯೂಸ್ ಟ್ರಾಫಿಕ್ ದಂಡ ಪಾವತಿಗೆ ಮತ್ತೆ ಶೇ.50 ರಷ್ಟು ಡಿಸ್ಕೌಂಟ್ ಘೋಷಣೆ

(ನ್ಯೂಸ್‌ ಕಡಬ) newskadaba.com,  ಜೂ.05: ಸಂಚಾರಿ ನಿಯಮ ಉಲ್ಲಂಘಿಸಿ ದಂಡ ಬಾಕಿ ಉಳಿಸಿಕೊಂಡಿರುವ ವಾಹನ ಮಾಲೀಕರಿಗೆ ರಾಜ್ಯ ಸರ್ಕಾರ ಗುಡ್‌ನ್ಯೂಸ್‌ ನೀಡಿದೆ. ಮತ್ತೊಮ್ಮೆ ಟ್ರಾಫಿಕ್ ನಿಯಮ ಉಲ್ಲಂಘನೆ ದಂಡ ಪಾವತಿಗೆ ಶೇ. 50 ರಷ್ಟು ರಿಯಾಯಿತಿ ಘೋಷಿಸಿ ಗುರುವಾರ ಆದೇಶಿಸಿದೆ. ಈ ಹಿಂದೆ ಶೇ. 50ರಷ್ಟು ರಿಯಾಯಿತಿ ನೀಡಿ ಭಾರಿ ಮೊತ್ತದ ದಂಡ ಸಂಗ್ರಹಿಸಿದ್ದ ರಾಜ್ಯ ಸರ್ಕಾರ ಇದೀಗ ಮತ್ತೊಮ್ಮೆ ರಿಯಾಯಿತಿ ಘೋಷಣೆ ಮಾಡಿದ್ದು, ಜೂನ್ 21 ರಿಂದ ಜುಲೈ 10ರವರೆಗೆ ದಂಡದ ಅರ್ಧದಷ್ಟು ಹಣ ಪಾವತಿಸಲು

ವಾಹನ ಸವಾರರಿಗೆ ಗುಡ್ ನ್ಯೂಸ್ ಟ್ರಾಫಿಕ್ ದಂಡ ಪಾವತಿಗೆ ಮತ್ತೆ ಶೇ.50 ರಷ್ಟು ಡಿಸ್ಕೌಂಟ್ ಘೋಷಣೆ Read More »

ಕರಾವಳಿ, ಕರ್ನಾಟಕ, ಬ್ರೇಕಿಂಗ್ ನ್ಯೂಸ್

ಮಂಗಳೂರು: ಜೂನ್ 15 ರಿಂದ ವಿಶೇಷ ಮಾನ್ಸೂನ್ ವೇಳಾಪಟ್ಟಿ ಪ್ರಕಟಿಸಿದ ಕೊಂಕಣ ರೈಲ್ವೆ

(ನ್ಯೂಸ್‌ ಕಡಬ) newskadaba.com, ಜೂ.04: ಕೊಂಕಣ ರೈಲ್ವೆ ಮಾರ್ಗದಲ್ಲಿ ಮುಂಗಾರು ಮಳೆಯ ಅವಧಿಯಲ್ಲಿ ರೈಲುಗಳ ಸುರಕ್ಷಿತ ಕಾರ್ಯಾಚರಣೆಯನ್ನು ಖಚಿತಪಡಿಸಿಕೊಳ್ಳಲು ಕೊಂಕಣ ರೈಲ್ವೆ ಕಾರ್ಪೊರೇಷನ್ ಲಿಮಿಟೆಡ್ ಮಹತ್ವದ ನಿರ್ಧಾರ ಕೈಗೊಂಡಿದೆ…….. ಈ ಮಾರ್ಗದಲ್ಲಿ ಚಲಿಸುವ ರೈಲುಗಳಿಗಾಗಿ ವಿಶೇಷ ಮುಂಗಾರು ವೇಳಾಪಟ್ಟಿಯನ್ನು ಪ್ರಕಟಿಸಲಾಗಿದೆ. ಈ ಹೊಸ ವೇಳಾಪಟ್ಟಿಯು ಜೂನ್ 15, 2026 ರಿಂದ ಜಾರಿಗೆ ಬರಲಿದ್ದು, ಅಕ್ಟೋಬರ್ 20, 2026 ರವರೆಗೆ ಜಾರಿಯಲ್ಲಿರಲಿದೆ. ಪಶ್ಚಿಮ ಕರಾವಳಿ ಮತ್ತು ಕೊಂಕಣ ಭಾಗದಲ್ಲಿ ಮುಂಗಾರು ಮಳೆಯು ಅತ್ಯಂತ ಭೀಕರವಾಗಿರುತ್ತದೆ. ಈ ಅವಧಿಯಲ್ಲಿ ಗುಡ್ಡ

ಮಂಗಳೂರು: ಜೂನ್ 15 ರಿಂದ ವಿಶೇಷ ಮಾನ್ಸೂನ್ ವೇಳಾಪಟ್ಟಿ ಪ್ರಕಟಿಸಿದ ಕೊಂಕಣ ರೈಲ್ವೆ Read More »

ಕರಾವಳಿ, ಕರ್ನಾಟಕ, ಬ್ರೇಕಿಂಗ್ ನ್ಯೂಸ್
Scroll to Top