News Kadaba

ತಾಲೂಕು ಮಟ್ಟದಲ್ಲಿಯೂ ವಿಪತ್ತು ನಿರ್ವಹಣಾ ಪ್ರಾಧಿಕಾರ

(ನ್ಯೂಸ್ ಕಡಬ) newskadaba.com, ಮಂಗಳೂರು, ಜ.24   ಪ್ರಕೃತಿ ವಿಕೋಪದ ಸಂದರ್ಭಗಳನ್ನು ಸಮರ್ಥವಾಗಿ ಎದುರಿಸಲು ತಾಲೂಕು ಮಟ್ಟದಲ್ಲಿಯೂ ತಹಶೀಲ್ದಾರ್ ನೇತೃತ್ವದಲ್ಲಿ ವಿಪತ್ತು ನಿರ್ವಹಣಾ ಕಾರ್ಯಪಡೆಗಳನ್ನು ರಚಿಸಲಾಗುವುದು ಎಂದು ಜಿಲ್ಲಾಧಿಕಾರಿ ಸಿಂಧು ಬಿ. ರೂಪೇಶ್ ತಿಳಿಸಿದ್ದಾರೆ. ಅವರು ಗುರುವಾರ ಜಿಲ್ಲಾಧಿಕಾರಿ ಕಚೇರಿ ಸಭಾಂಗಣದಲ್ಲಿ ಜಿಲ್ಲಾ ವಿಪತ್ತು ನಿರ್ವಹಣಾ ಪ್ರಾಧಿಕಾರ ಸಭೆಯಲ್ಲಿ ವಿಪತ್ತು ನಿರ್ವಹಣೆಯ ಕುರಿತು ವಿವಿಧ ಇಲಾಖೆ ಅಧಿಕಾರಿಗಳ  ಜೊತೆ ಸಭೆ ನಡೆಸಿದರು. ತುರ್ತು ಪ್ರವಾಹ ಅಣುಕು ಪ್ರದರ್ಶನ, ಆರೋಗ್ಯ ಇಲಾಖೆಯಿಂದ ತುರ್ತು ಪ್ರವಾಹ ನಿರ್ವಹಣೆ, ತಾಲೂಕು ಮಟ್ಟದಲ್ಲಿ […]

ತಾಲೂಕು ಮಟ್ಟದಲ್ಲಿಯೂ ವಿಪತ್ತು ನಿರ್ವಹಣಾ ಪ್ರಾಧಿಕಾರ Read More »

ಕರಾವಳಿ

ಭ್ರಷ್ಟಾಚಾರ ನಿಗ್ರಹ ದಳ ಅಧಿಕಾರಿಗಳ ಪ್ರವಾಸ

(ನ್ಯೂಸ್ ಕಡಬ) newskadaba.com, ಮಂಗಳೂರು, ಜ.23   ದಕ್ಷಿಣ ಕನ್ನಡ ಜಿಲ್ಲೆಯ ಭ್ರಷ್ಟಾಚಾರ ನಿಗ್ರಹ ದಳದ (ಎಸಿಬಿ) ಅಧಿಕಾರಿಗಳು ಜನವರಿ 27, 29 ಹಾಗೂ 30 ರಂದು ಜಿಲ್ಲೆಯ ವಿವಿದೆಡೆ ಪ್ರವಾಸ ಕೈಗೊಂಡು ಸಾರ್ವಜನಿಕರಿಂದ ಭ್ರಷ್ಟಾಚಾರ ಸಂಬಂಧಪಟ್ಟ  ದೂರುಗಳನ್ನು ಸ್ವೀಕರಿಸಲಿದ್ದಾರೆ. ಜನವರಿ 27 ರಂದು ಬೆಳಿಗ್ಗೆ 11 ಗಂಟೆಯಿಂದ ಮಧ್ಯಾಹ್ನ 1 ಗಂಟೆಯವರೆಗೆ ಕಡಬ ಗ್ರಾಮ ಪಂಚಾಯತ್ ಕಚೇರಿ ಹಾಲ್‍ನಲ್ಲಿ, ಮಧ್ಯಾಹ್ನ 2.30 ಗಂಟೆಯಿಂದ ಸಂಜೆ 4.30 ಗಂಟೆಯವರೆಗೆ ಪುತ್ತೂರು ಸರ್ಕಾರಿ ಪ್ರವಾಸಿ ಮಂದಿರ. ಜನವರಿ 29

ಭ್ರಷ್ಟಾಚಾರ ನಿಗ್ರಹ ದಳ ಅಧಿಕಾರಿಗಳ ಪ್ರವಾಸ Read More »

ಕರಾವಳಿ

 ದ.ಕ ಜಿಲ್ಲಾ ವಕ್ಫ್ ಸಲಹಾ ಸಮಿತಿಗೆ ನೇಮಕ

(ನ್ಯೂಸ್ ಕಡಬ) newskadaba.com, ಮಂಗಳೂರು, ಜ.23    ದಕ್ಷಿಣ ಕನ್ನಡ ಜಿಲ್ಲಾ ವಕ್ಫ್ ಸಲಹಾ ಸಮಿತಿ ಅಧ್ಯಕ್ಷರಾಗಿ ಅಬ್ದುಲ್ ಅಝೀಝ್ ಕೃಷ್ಣಾಪುರ ಅವರನ್ನು ನೇಮಕಗೊಳಿಸಿ ಕರ್ನಾಟಕ ರಾಜ್ಯ ವಕ್ಫ್ ಮಂಡಳಿ ಆದೇಶಿಸಿದೆ. ಉಪಧ್ಯಾಕ್ಷರಾಗಿ ಎ.ಕೆ ಜಮಾಲುದ್ದೀನ್, ಟಿ.ಎ ಶಾನವಾಜ್, ಸದಸ್ಯರಾಗಿ ಮುತ್ತಲಿಬ್, ಎಂ ರಝಾಕ್, ಶಂಶುದ್ಧೀನ್ ಜೋಕಟ್ಟೆ, ಜುಬೈರ್, ಇಬ್ರಾಹಿಂ, ಮಹಮ್ಮದ್ ಶರೀಫ್, ಎಂ ಸಲೀಂ, ಅರ್ಶದ್ ಸಬಹಿ, ಅಬ್ದುಲ್ ಕುಂಞ ನೇಲಡ್ಕ, ಇಸ್ಮಾಯಿಲ್ ಕಾನಾವು, ಮಹಮ್ಮದ್ ಅಶ್ರಫ್ ಅವರನ್ನು ನೇಮಿಸಲಾಗಿದೆ. ಅಬ್ದುಲ್ ಅಝೀಝ್ ಕೃಷ್ಣಾಪುರ ಅವರು

 ದ.ಕ ಜಿಲ್ಲಾ ವಕ್ಫ್ ಸಲಹಾ ಸಮಿತಿಗೆ ನೇಮಕ Read More »

ಕರಾವಳಿ

ಜ.24 ರಿಂದ 26 ರವರೆಗೆ ಫಲಪುಷ್ಪ ಪ್ರದರ್ಶನ-2020

(ನ್ಯೂಸ್ ಕಡಬ) newskadaba.com, ಮಂಗಳೂರು, ಜ.22    ತೋಟಗಾರಿಕೆ ಇಲಾಖೆ, ದ.ಕ ಜಿಲ್ಲಾ ಪಂಚಾಯತ್, ದ.ಕ ಜಿಲ್ಲಾಡಳಿತ ಹಾಗೂ ಕದ್ರಿ ಉದ್ಯಾನವನ ಅಭಿವೃದ್ಧಿ ಸಮಿತಿ, ಮಂಗಳೂರು ಇವರ ಸಂಯುಕ್ತ ಆಶ್ರಯದಲ್ಲಿ ಹಾಗೂ ಸಿರಿ ತೋಟಗಾರಿಕೆ ಸಂಘ (ರಿ) ಮಂಗಳೂರು, ಮತ್ತು ಇತರೆ ಅಭಿವೃದ್ಧಿ ಇಲಾಖೆಗಳ ಸಹಭಾಗಿತ್ವದಲ್ಲಿ ಫಲಪುಷ್ಪ ಪ್ರದರ್ಶನ-2020 ಕಾರ್ಯಕ್ರಮ ಜನವರಿ 24 ರಿಂದ 26 ರವರೆಗೆ ಮಂಗಳೂರಿನ ಕದ್ರಿ ಉದ್ಯಾನವನದಲ್ಲಿ ನಡೆಯಲಿದೆ. ಫಲಪುಷ್ಪ ಪ್ರದರ್ಶನ-2020 ಕಾರ್ಯಕ್ರಮವನ್ನು ಜನವರಿ 24 ರಂದು ಬೆಳಿಗ್ಗೆ 11 ಗಂಟೆಗೆ ಕದ್ರಿ

ಜ.24 ರಿಂದ 26 ರವರೆಗೆ ಫಲಪುಷ್ಪ ಪ್ರದರ್ಶನ-2020 Read More »

ಕರಾವಳಿ

ತುಳುನಾಡ ಸಿರಿ ಮದಿಪು – 2020

(ನ್ಯೂಸ್ ಕಡಬ) newskadaba.com, ಮಂಗಳೂರು, ಜ.22    ಕರ್ನಾಟಕ ತುಳು ಸಾಹಿತ್ಯ ಅಕಾಡೆಮಿ ವತಿಯಿಂದ  ಮಹಾವೀರ ಕಾಲೇಜು, ಮೂಡಬಿದ್ರೆ, ಹಳೆ ವಿದ್ಯಾರ್ಥಿ ಸಂಘ ಮಹಾವೀರ ಕಾಲೇಜು ಮತ್ತು ತುಳುಕೂಟ ಮೂಡಬಿದ್ರೆ ಸಹಯೋಗದೊಂದಿಗೆ ಕಾಲೇಜಿನಲ್ಲಿ ತುಳುನಾಡ ಸಿರಿ “ಮದಿಪು” ಕಾರ್ಯಕ್ರಮವನ್ನು ಆಯೋಜಿಸಲಾಗಿದೆ. ಜನವರಿ 24 ರಂದು ಬೆಳಿಗ್ಗೆ 9.15  ಗಂಟೆಗೆ ಕಾರ್ಯಕ್ರಮ ಉದ್ಘಾಟನೆ ನಡೆಯಲಿದೆ. ಅಧ್ಯಕ್ಷತೆಯನ್ನು ಮಹಾವೀರ ಕಾಲೇಜಿನ ಆಡಳಿತ ಮಂಡಳಿ ಅಧ್ಯಕ್ಷ ಕೆ.ಅಭಯಚಂದ್ರ ಜೈನ್ ವಹಿಸಲಿದ್ದಾರೆ. ಕರ್ನಾಟಕ ತುಳು ಸಾಹಿತ್ಯ ಅಕಾಡೆಮಿ ಅಧ್ಯಕ್ಷ ದಯಾನಂದ ಜಿ. ಕತ್ತಲ್‍ಸಾರ್

ತುಳುನಾಡ ಸಿರಿ ಮದಿಪು – 2020 Read More »

ಕರಾವಳಿ

ಜೆಸಿಐ ಅಲಂಕಾರಿನ ವತಿಯಿಂದ “ಚೈತನ್ಯ”-ರಾಷ್ಟ್ರೀಯ ಯುವ ದಿನದ ಆಚರಣೆ

(ನ್ಯೂಸ್ ಕಡಬ) newskadaba.com, ಕಡಬ, ಜ.20    ಜೆಸಿಐ ಘಟಕ ಆಲಂಕಾರು ಇದರ ಆಶ್ರಯದಲ್ಲಿ ಸ್ವಾಮಿ ವಿವೇಕಾನಂದರ ಜನ್ಮ ದಿನಾಚರಣೆಯನ್ನು “ಚೈತನ್ಯ” ಎಂಬ ಶೀರ್ಷಿಕೆಯಡಿಯಲ್ಲಿ ರಾಷ್ಟ್ರೀಯ ಯುವ ದಿನದ ಆಚರಣೆಯನ್ನು ಆಚರಿಸಲಾಯಿತು. ಕುಂತೂರು ಪದವು ಸಂತಜಾರ್ಜ್ ಪ್ರೌಢ ಶಾಲೆಯ ಸಭಾಂಗಣದಲ್ಲಿ ನಡೆದ ಸಮಾರಂಭವನ್ನು ಮುಖ್ಯಗುರು ಹರಿಶ್ಚಂದ್ರ ಕೆ ಉದ್ಟಾಟಿಸಿ ಶುಭ ಹಾರೈಸಿದರು. ಮುಖ್ಯ ಅತಿಥಿಗಳಾದ ಶಾಲೆಯ ಅಧ್ಯಾಪಕಿಯಾದ ಭುವನೇಶ್ವರಿಯವರು ವಿದ್ಯಾರ್ಥಿಗಳನ್ನು ಉದ್ದೇಶಿಸಿ ಸ್ವಾಮಿ ವಿವೆಕಾನಂದರ ಚಿಂತನೆಗಳ ಬಗ್ಗೆ ತಿಳಿ ಹೇಳಿದರು. ಈ ಕಾರ್ಯಕ್ರಮದಲ್ಲಿ ತರಬೇತುದಾರರಾಗಿ ಆಗಮಿಸಿದ್ದ ಜೆಸಿಐ

ಜೆಸಿಐ ಅಲಂಕಾರಿನ ವತಿಯಿಂದ “ಚೈತನ್ಯ”-ರಾಷ್ಟ್ರೀಯ ಯುವ ದಿನದ ಆಚರಣೆ Read More »

ಕರಾವಳಿ

ಕಟೀಲು ರಸ್ತೆ ಅಭಿವೃದ್ಧಿ- ಸಂಚಾರ ಮಾರ್ಪಾಡು

(ನ್ಯೂಸ್ ಕಡಬ) newskadaba.com, ಮಂಗಳೂರು, ಜ.17    ಕಟೀಲು ದೇವಸ್ಥಾನದ ಬ್ರಹ್ಮಕಲಶೋತ್ಸವ ನಿಮಿತ್ತ ಕ್ಷೇತ್ರಕ್ಕೆ ಬರುವ ಮುಖ್ಯ ರಸ್ತೆಯ ಅಗಲೀಕರಣ ಮತ್ತು ಅಭಿವೃದ್ಧಿ ಕಾಮಗಾರಿ ನಡೆಯುತ್ತಿದೆ. ಈ ನಿಟ್ಟಿನಲ್ಲಿ ಸುಗಮ ರಸ್ತೆ ಸಂಚಾರ ನಿಟ್ಟಿನಲ್ಲಿ ಮಂಗಳೂರು-ಬಜಪೆ-ಕಟೀಲು ರಸ್ತೆಯಲ್ಲಿ ವಾಹನಗಳ ಸಂಚಾರದಲ್ಲಿ ತಾತ್ಕಾಲಿಕವಾಗಿ ಮಾರ್ಪಾಡು ಮಾಡಲಾಗಿದೆ. ಮಂಗಳೂರಿನಿಂದ ಬಜಪೆ ಮಾರ್ಗವಾಗಿ ಬರುವ ವಾಹನಗಳು ಶಿಬರೂರು ದ್ವಾರದ ಬಳಿ ಎಡಕ್ಕೆ ತಿರುಗಿ ಶಿಬರೂರು ಜಂಕ್ಷನ್ -ಕಿನ್ನಿಗೋಳಿ – ಮೂರು ಕಾವೇರಿ ಮೂಲಕ ಕಟೀಲಿಗೆ ಆಗಮಿಸಬಹುದು. ಕಟೀಲಿನಿಂದ ಮಂಗಳೂರು ಹೋಗುವ ರಸ್ತೆ

ಕಟೀಲು ರಸ್ತೆ ಅಭಿವೃದ್ಧಿ- ಸಂಚಾರ ಮಾರ್ಪಾಡು Read More »

ಕರಾವಳಿ

ಜ.20- ಕೆಡಿಪಿ ಸಭೆ

(ನ್ಯೂಸ್ ಕಡಬ) newskadaba.com, ಮಂಗಳೂರು, ಜ.10   2020-21ನೇ ಸಾಲಿನ ಪ್ರಥಮ ತ್ರೈಮಾಸಿಕ ಕರ್ನಾಟಕ ಅಭಿವೃದ್ಧಿ ಕಾರ್ಯಕ್ರಮಗಳ ಸಮೀಕ್ಷಾ ಸಭೆ ದ.ಕ ಜಿಲ್ಲಾ ಉಸ್ತುವಾರಿ ಸಚಿವ ಕೋಟ ಶ್ರೀನಿವಾಸ ಪೂಜಾರಿ ಅಧ್ಯಕ್ಷತೆಯಲ್ಲಿ ಜನವರಿ 20 ರಂದು ಬೆಳಿಗ್ಗೆ 11 ಗಂಟೆಗೆ ದ.ಕ ಜಿಲ್ಲಾ ಪಂಚಾಯತ್ ನೇತ್ರಾವತಿ ಸಭಾಂಗಣದಲ್ಲಿ ನಡೆಯಲಿದೆ.

ಜ.20- ಕೆಡಿಪಿ ಸಭೆ Read More »

ಕರಾವಳಿ

ಜ.11: ಒರುಂಬಾಳು ದೇವಸ್ಥಾನದ ಪ್ರತಿಷ್ಠಾ ವಾರ್ಷಿಕೋತ್ಸವ

(ನ್ಯೂಸ್ ಕಡಬ) newskadaba.com, ಕಡಬ, ಜ.9    ನೂಜಿಬಾಳ್ತಿಲ ಗ್ರಾಮದ ಒರುಂಬಾಳು ಶ್ರೀ ಉಮಾಮಹೇಶ್ವರ ದೇವಸ್ಥಾನದಲ್ಲಿ ಪ್ರತಿಷ್ಠಾ ವಾರ್ಷಿಕೋತ್ಸವ ಹಾಗೂ ಸಾಮೂಹಿಕ ಶ್ರೀ ಸತ್ಯನಾರಾಯಣ ದೇವರ ಪೂಜೆ ಹಾಗೂ ಗಣಹೋಮ ಕಾರ್ಯಗಳು ಬ್ರಹ್ಮಶ್ರೀ ಕೆಮ್ಮಿಂಜೆ ನಾಗೇಶ ತಂತ್ರಿಗಳ ನೇತೃತ್ವದಲ್ಲಿ ಜ.11ರಂದು ನಡೆಯಲಿದೆ. ಜ.10ರಂದು ಭಕ್ತಾಧಿಗಳಿಂದ ಕ್ಷೇತ್ರಕ್ಕೆ ಹಸುರುವಾಣಿ ಸಮರ್ಪಣೆ ನಡೆಯಲಿದೆ. ಜ.11ರಂದು ದೇವತಾ ಪ್ರಾರ್ಥನೆ, ಆಚಾರ್ಯವರಣ, ಮಹಾಗಣಪತಿ ಹೋಮ, ಪಂಚವಿಂಶತಿ ಕಲಶಪೂಜೆ ಬಳಿಕ ಸಾರ್ವಜನಿಕ ಶ್ರೀ ಸತ್ಯನಾರಾಯಣ ದೇವರ ಪೂಜೆ, ಶ್ರೀ ದೇವರಿಗೆ ಕಲಶಾಭಿಷೇಕ, ನಾಗದೇವರಿಗೆ ತಂಬಿಲ

ಜ.11: ಒರುಂಬಾಳು ದೇವಸ್ಥಾನದ ಪ್ರತಿಷ್ಠಾ ವಾರ್ಷಿಕೋತ್ಸವ Read More »

ಕರಾವಳಿ

ಮಸೀದಿ, ಮದರಸ- ವಕ್ಫ್ ಮಂಡಳಿಯಲ್ಲಿ ನೋಂದಣಿ

(ನ್ಯೂಸ್ ಕಡಬ) newskadaba.com, ಮಂಗಳೂರು, ಜ.9  ಕರ್ನಾಟಕ ರಾಜ್ಯ ವಕ್ಫ್ ಮಂಡಳಿಯಲ್ಲಿ ನೊಂದಾವಣೆಯಾಗದ ಮಸೀದಿ, ಮದರಸ, ದರ್ಗಾ, ಖಬರಸ್ಥಾನದ ವಿವರಗಳನ್ನು ಸಂಬಂಧಪಟ್ಟ ಸಂಸ್ಥೆಯ ಪದಾಧಿಕಾರಿಗಳು ಜಿಲ್ಲಾ ವಕ್ಪ್ ಕಚೇರಿ, ಮೌಲಾನಾ ಅಝಾದ್ ಭವನ, ಎರಡನೇ ಮಹಡಿ, ಓಲ್ಡ್ ಕೆಂಟ್ ರಸ್ತೆ, ಪಾಂಡೇಶ್ವರ, ಮಂಗಳೂರು ಕಚೇರಿಗೆ ಮಾಹಿತಿ ನೀಡಬೇಕು. ಹೆಚ್ಚಿನ ಮಾಹಿತಿಗಾಗಿ ದೂರವಾಣಿ ಸಂಖ್ಯೆ 0824-2420078ನ್ನು ಸಂಪರ್ಕಿಸಬಹುದು ಎಂದು ಜಿಲ್ಲಾ ವಕ್ಫ್ ಸಲಹಾ ಸಮಿತಿ ಅಧ್ಯಕ್ಷ ಹಾಜಿ ಯು.ಕೆ. ಮೋನು ಅವರ ಪ್ರಕಟಣೆ ತಿಳಿಸಿದೆ.

ಮಸೀದಿ, ಮದರಸ- ವಕ್ಫ್ ಮಂಡಳಿಯಲ್ಲಿ ನೋಂದಣಿ Read More »

ಕರಾವಳಿ
Scroll to Top