News Kadaba

ಇಂಡಿಗೋ ಬಿಕ್ಕಟ್ಟು: ನಾಲ್ವರು ವಿಮಾನ ಕಾರ್ಯಾಚರಣೆ ಇನ್ಸ್ಪೆಕ್ಟರ್ಗಳು ಅಮಾನತು

(ನ್ಯೂಸ್‌ ಕಡಬ) newskadaba.com ಡಿ.12: ಇಂಡಿಗೋ ಕಾರ್ಯಾಚರಣೆಯಲ್ಲಿ ಭಾರಿ ಅಡಚಣೆಗಳು ಉಂಟಾಗಿ ಸಾವಿರಾರು ವಿಮಾನಗಳು ರದ್ದಾದವು ಮತ್ತು ಲಕ್ಷಾಂತರ ಜನರು ವಿಮಾನ ನಿಲ್ದಾಣಗಳಲ್ಲಿ ಸಿಲುಕಿಕೊಂಡ ಪರಿಣಾಮವಾಗಿ ವಿಮಾನಯಾನ ಸುರಕ್ಷತಾ ನಿಯಂತ್ರಕ ಡಿಜಿಸಿಎ ನಾಲ್ವರು ವಿಮಾನ ಕಾರ್ಯಾಚರಣೆ ಇನ್ಸ್‌ಪೆಕ್ಟರ್‌ಗಳನ್ನು (ಎಫ್‌ಒಐ) ಅಮಾನತುಗೊಳಿಸಿದೆ. ಬೆಂಗಳೂರು ವಿಮಾನ ನಿಲ್ದಾಣದಿಂದ ಶುಕ್ರವಾರ 50ಕ್ಕೂ ಹೆಚ್ಚು ವಿಮಾನಗಳನ್ನು ವಿಮಾನಯಾನ ಸಂಸ್ಥೆ ರದ್ದುಗೊಳಿಸಿದೆ. ಎಫ್‌ಒಐಗಳು ನಾಗರಿಕ ವಿಮಾನಯಾನ ನಿರ್ದೇಶನಾಲಯದೊಳಗಿನ ಹಿರಿಯ ಅಧಿಕಾರಿಗಳಾಗಿದ್ದು, ಅದರ ನಿಯಂತ್ರಣ ಮತ್ತು ಸುರಕ್ಷತಾ ಮೇಲ್ವಿಚಾರಣಾ ಕಾರ್ಯಗಳ ಭಾಗವಾಗಿ ಕಾರ್ಯನಿರ್ವಹಿಸುತ್ತಾರೆ. ಆಗಾಗ್ಗೆ ವಿಮಾನಯಾನ […]

ಇಂಡಿಗೋ ಬಿಕ್ಕಟ್ಟು: ನಾಲ್ವರು ವಿಮಾನ ಕಾರ್ಯಾಚರಣೆ ಇನ್ಸ್ಪೆಕ್ಟರ್ಗಳು ಅಮಾನತು Read More »

ಅಂತರ್ರಾಷ್ಟ್ರೀಯ ನ್ಯೂಸ್, ಬ್ರೇಕಿಂಗ್ ನ್ಯೂಸ್

ವಾಯವ್ಯ ಸಾರಿಗೆಗೆ ಎಲೆಕ್ಟ್ರಿಕ್‌ ಬಸ್‌ಗಳ ಬೇಡಿಕೆ: 507 ಕೋಟಿ ರೂ ವೆಚ್ಚದ ಸಾವಿರ ಬಸ್‌ಗಳಿಗೆ ಪ್ರಸ್ತಾವನೆ

(ನ್ಯೂಸ್‌ ಕಡಬ) newskadaba.com ಡಿ.12 ಹುಬ್ಬಳ್ಳಿ: ಶಕ್ತಿ ಮತ್ತು ಶಕ್ತಿಯೇತರ ಸಾರಿಗೆಯಲ್ಲಿ ತನ್ನದೇ ಆದ ಹೆಸರು ಮಾಡಿರುವ ವಾಯವ್ಯ ಕರ್ನಾಟಕ ರಸ್ತೆ ಸಾರಿಗೆ(ವಾಕರಸಾ)ಸಂಸ್ಥೆಯು, ಸಾರ್ವಜನಿಕರಿಗೆ ಇನ್ನಷ್ಟು ಸಾರಿಗೆ ವ್ಯವಸ್ಥೆ ಕಲ್ಪಿಸಲು ಒಂದು ಸಾವಿರ ಎಲೆಕ್ಟ್ರಿಕ್‌ ಬಸ್‌ಗಳ ಖರೀದಿಗೆ ಮುಂದಾಗಿದೆ. ರಾಜ್ಯ ಸರಕಾರದ ಮಹತ್ವಾಕಾಂಕ್ಷಿ ಮಹಿಳೆಯರ ಉಚಿತ ಪ್ರಯಾಣ ಶಕ್ತಿ ಯೋಜನೆ ಆರಂಭವಾದ ಬಳಿಕ ಪ್ರಯಾಣಿಕರ ಸಂಖ್ಯೆಯು ನಿರೀಕ್ಷೆಗೂ ಮೀರಿ ಹೆಚ್ಚಿದೆ. ಈ ಹಿನ್ನೆಲೆಯಲ್ಲಿ ಸರಕಾರ ಈಗಾಗಲೇ 700 ಬಸ್‌ಗಳನ್ನು ಪೂರೈಸಿದೆ. ಇದಲ್ಲದೇ ಪ್ರಧಾನ ಮಂತ್ರಿ ಇ-ಬಸ್‌ ಸೇವಾ

ವಾಯವ್ಯ ಸಾರಿಗೆಗೆ ಎಲೆಕ್ಟ್ರಿಕ್‌ ಬಸ್‌ಗಳ ಬೇಡಿಕೆ: 507 ಕೋಟಿ ರೂ ವೆಚ್ಚದ ಸಾವಿರ ಬಸ್‌ಗಳಿಗೆ ಪ್ರಸ್ತಾವನೆ Read More »

ಕರ್ನಾಟಕ, ಬ್ರೇಕಿಂಗ್ ನ್ಯೂಸ್

ಮೇಕೆದಾಟು ಯೋಜನೆ ತ್ವರಿತ ಅನುಷ್ಠಾನ

(ನ್ಯೂಸ್‌ ಕಡಬ) newskadaba.com ಡಿ.12: ಕರ್ನಾಟಕದ ಪರ ಸುಪ್ರೀಂ ಕೋರ್ಟ್ ಆದೇಶದ ಹಿನ್ನೆಲೆಯಲ್ಲಿ ಮೇಕೆದಾಟು ಸಮತೋಲಿತ ಜಲಾನಯನ ಯೋಜನೆ ತ್ವರಿತ ಅನುಷ್ಠಾನಕ್ಕೆ ಕೆಇಆರ್ ಎಸ್ (ಕರ್ನಾಟಕ ಇಂಜಿನಿಯರಿಂಗ್ ಸಂಶೋಧನಾ ಕೇಂದ್ರ) ನಿರ್ದೇಶಕರ ನೇತೃತ್ವದಲ್ಲಿ ತಂಡವನ್ನು ರಚಿಸಿ ರಾಜ್ಯ ಸರ್ಕಾರ ಆದೇಶ ಹೊರಡಿಸಿದೆ. ಈ ತಂಡವು ಉಪ ಮುಖ್ಯ ಇಂಜಿನಿಯರ್ ಹಾಗೂ ಸಿಬ್ಬಂದಿಯನ್ನು ಒಳಗೊಂಡಿದ್ದು, ಬೆಂಗಳೂರು ದಕ್ಷಿಣ ಜಿಲ್ಲೆಯ ರಾಮನಗರವನ್ನು ಕೇಂದ್ರ ಸ್ಥಾನವಾಗಿಟ್ಟುಕೊಂಡು ಕೆಲಸ ನಿರ್ವಹಿಸಲಿದೆ. ರಾಮನಗರದಲ್ಲೇ ಮೇಕೆದಾಟು ಯೋಜನೆ ಕಚೇರಿ ಸ್ಥಾಪಿಸಲಾಗುವುದು ಎಂದು ಆದೇಶದಲ್ಲಿ ತಿಳಿಸಲಾಗಿದೆ. ನ.

ಮೇಕೆದಾಟು ಯೋಜನೆ ತ್ವರಿತ ಅನುಷ್ಠಾನ Read More »

ಕರ್ನಾಟಕ, ಬ್ರೇಕಿಂಗ್ ನ್ಯೂಸ್

ಕಂದಕಕ್ಕೆ ಉರುಳಿದ ಬಸ್; 9 ಪ್ರಯಾಣಿಕರು ಮೃತ್ಯು, 12ಕ್ಕೂ ಅಧಿಕ ಮಂದಿ ಗಂಭೀರ

(ನ್ಯೂಸ್‌ ಕಡಬ) newskadaba.com ಡಿ.12: ಬಸ್ ನಿಯಂತ್ರಣ ತಪ್ಪಿ ಕಂದಕಕ್ಕೆ ಉರುಳಿದ ಪರಿಣಾಮ 9 ಮಂದಿ ಪ್ರಯಾಣಿಕರು ಮೃತಪಟ್ಟಿದ್ದು, 12ಕ್ಕೂ ಅಧಿಕ ಮಂದಿ ಗಂಭೀರವಾಗಿ ಗಾಯಗೊಂಡಿರುವ ಘಟನೆ ಆಂಧ್ರಪ್ರದೇಶದ ಅಲ್ಲೂರಿನಲ್ಲಿ ನಡೆದಿದೆ. ಈ ಅಪಘಾತವು ಬೆಳಗಿನ ಜಾವ 5.30ರ ಸಮಯದಲ್ಲಿ, ತುಳಸಿಪಕಲು ಗ್ರಾಮದ ಬಳಿ ನಡೆದಿದೆ. ಘಟನೆಯಲ್ಲಿ ಬಸ್ ಸಂಪೂರ್ಣ ನಜ್ಜುಗುಜ್ಜಾಗಿದೆ. ಸ್ಥಳದಲ್ಲಿ ಮೃತದೇಹಗಳು ಚೆಲ್ಲಾಪಿಲ್ಲಿಯಾಗಿ ಬಟ್ಟೆಯ ರಾಶಿಯಂತೆ ಬಿದ್ದಿರುವುದು ಕಂಡುಬಂದಿದೆ. “ಬಸ್ಸಿನಲ್ಲಿ 35 ಪ್ರಯಾಣಿಕರು, ಇಬ್ಬರು ಚಾಲಕರು ಮತ್ತು ಒಬ್ಬ ಕ್ಲೀನರ್ ಇದ್ದರು. 9 ಮಂದಿ

ಕಂದಕಕ್ಕೆ ಉರುಳಿದ ಬಸ್; 9 ಪ್ರಯಾಣಿಕರು ಮೃತ್ಯು, 12ಕ್ಕೂ ಅಧಿಕ ಮಂದಿ ಗಂಭೀರ Read More »

ಕರ್ನಾಟಕ, ಬ್ರೇಕಿಂಗ್ ನ್ಯೂಸ್

ನಮ್ಮ ಮೆಟ್ರೋ ಗುಡ್‌ ನ್ಯೂಸ್‌, ಗುಲಾಬಿ ಮಾರ್ಗದಲ್ಲಿ ಮೊದಲ ಚಾಲಕರಹಿತ ರೈಲು ಅನಾವರಣ

(ನ್ಯೂಸ್‌ ಕಡಬ) newskadaba.com ಡಿ.12 ಬೆಂಗಳೂರು: ಬೆಂಗಳೂರಿನಲ್ಲಿ ನಮ್ಮ ಮೆಟ್ರೋ ಪ್ರಯಾಣಿಕರಿಗೆ ಇದೀಗ ಬಿಎಂಆರ್‌ಸಿಎಲ್ ಮತ್ತೊಂದು ಗುಡ್ ನ್ಯೂಸ್ ನೀಡಿದ್ದು, ನಮ್ಮ ಮೆಟ್ರೋ ಗುಲಾಬಿ ಮಾರ್ಗದ (Pink line) ಪ್ರೋಟೋಟೈಪ್ ಚಾಲಕ ರಹಿತ ರೈಲನ್ನು ಇಂದು ಬಿಎಂಆರ್‌ಸಿಎಲ್‌ ಅನಾವರಣಗೊಳಿಸಿದೆ. ಪಿಂಕ್ ಲೈನ್‌ನ ಮೂಲಮಾದರಿಯನ್ನು ಬೆಂಗಳೂರು ಮೆಟ್ರೋ ರೈಲು ನಿಗಮ ಲಿಮಿಟೆಡ್ ವ್ಯವಸ್ಥಾಪಕ ನಿರ್ದೇಶಕ ಜೆ ರವಿಶಂಕರ್ ಅವರು ಬಿಇಎಂಎಲ್ ಅಧ್ಯಕ್ಷ ಮತ್ತು ವ್ಯವಸ್ಥಾಪಕ ನಿರ್ದೇಶಕ ಶಾಂತನು ರಾಯ್ ಮತ್ತು ಹಿರಿಯ ಅಧಿಕಾರಿಗಳ ಸಮ್ಮುಖದಲ್ಲಿ ಔಪಚಾರಿಕವಾಗಿ ಅನಾವರಣಗೊಳಿಸಿದರು. ಬಳಿಕ

ನಮ್ಮ ಮೆಟ್ರೋ ಗುಡ್‌ ನ್ಯೂಸ್‌, ಗುಲಾಬಿ ಮಾರ್ಗದಲ್ಲಿ ಮೊದಲ ಚಾಲಕರಹಿತ ರೈಲು ಅನಾವರಣ Read More »

ಕರ್ನಾಟಕ, ಬ್ರೇಕಿಂಗ್ ನ್ಯೂಸ್

ಮಾಜಿ ಸಚಿವ ರೇವಣ್ಣ ಪುತ್ರನ ಕಾರು ಡಿಕ್ಕಿ; ಬೈಕ್ ಸವಾರ ಸ್ಥಳದಲ್ಲೇ ಸಾವು

(ನ್ಯೂಸ್‌ ಕಡಬ) newskadaba.com ಡಿ.12: ಗ್ಯಾರಂಟಿ ಯೋಜನೆ ಅಧ್ಯಕ್ಷ, ಮಾಜಿ ಸಚಿವ ಹೆಚ್ ಎಂ ರೇವಣ್ಣ ಪುತ್ರ ಆರ್. ಶಶಾಂಕ್ ಅವರ ಕಾರು ಡಿಕ್ಕಿಯಾಗಿ ಬೈಕ್ ಸವಾರನೊಬ್ಬ ಮೃತಪಟ್ಟ ಘಟನೆ ಮಾಗಡಿ ತಾಲೂಕಿನ ಗುಡೇಮಾರನಹಳ್ಳಿ ಬಳಿ ನಡೆದಿದೆ. ಮಾಗಡಿ ತಾಲೂಕಿನ ಬೆಳಗುಂಬ ಗ್ರಾಮದ ನಿವಾಸಿ ರಾಜೇಶ್ (27) ಅವರು ಬೈಕ್‌ನಲ್ಲಿ ತೆರಳುತ್ತಿದ್ದಾಗ ರೇವಣ್ಣ ಪುತ್ರ ಶಶಾಂಕ್ ಫಾರ್ಚೂನರ್ ಕಾರು ಡಿಕ್ಕಿಯಾಗಿ ಸವಾರ ಸ್ಥಳದಲ್ಲೇ ಮೃತಪಟ್ಟಿದ್ದಾರೆ. ಅಪಘಾತದ ವೇಳೆ ಶಶಾಂಕ್ ಕಾರು ಚಲಾಯಿಸುತ್ತಿದ್ದರು ಎಂದು ಆರೋಪಿಸಲಾಗಿದೆ. ಈ ಬಗ್ಗೆ

ಮಾಜಿ ಸಚಿವ ರೇವಣ್ಣ ಪುತ್ರನ ಕಾರು ಡಿಕ್ಕಿ; ಬೈಕ್ ಸವಾರ ಸ್ಥಳದಲ್ಲೇ ಸಾವು Read More »

ಕರ್ನಾಟಕ

ಜಪಾನ್ನಲ್ಲಿ 6.7 ತೀವ್ರತೆಯ ಪ್ರಬಲ ಭೂಕಂಪ; 24 ಗಂಟೆಗಳಲ್ಲಿ 5 ಬಾರಿ ಕಂಪಿಸಿದ ಭೂಮಿ

(ನ್ಯೂಸ್‌ ಕಡಬ) newskadaba.com ಡಿ.12: ಜಪಾನ್‌ನಲ್ಲಿ 6.7 ತೀವ್ರತೆಯ ಪ್ರಬಲ ಭೂಕಂಪ ಸಂಭವಿಸಿದೆ. ಕಳೆದ 24 ಗಂಟೆಗಳಲ್ಲಿ 5 ಬಾರಿ ಭೂಮಿ ಕಂಪಿಸಿದೆ ಎಂದು ತಿಳಿದುಬಂದಿದೆ. ಭೂಕಂಪದಿಂದ ಉಂಟಾದ ಹಾನಿಯ ಪ್ರಮಾಣ ಇನ್ನೂ ತಿಳಿದುಬಂದಿಲ್ಲ ಆದರೆ 33 ಮಂದಿ ಗಾಯಗೊಂಡಿದ್ದಾರೆ ಎಂದು ತಿಳಿದುಬಂದಿದೆ. ಭದ್ರತಾ ಸಂಸ್ಥೆಗಳು ಮಾಹಿತಿಯನ್ನು ಸಂಗ್ರಹಿಸುತ್ತಿವೆ. ಈ ಬಗ್ಗೆ ವಿವರವಾದ ಮಾಹಿತಿಯನ್ನು ನಿರೀಕ್ಷಿಸಲಾಗುತ್ತಿದೆ. ಭೂಕಂಪದ ಕೇಂದ್ರಬಿಂದು ಮೇಲ್ಮೈಯಿಂದ ಕೇವಲ 10 ಕಿಲೋಮೀಟರ್ ಆಳದಲ್ಲಿ ಪತ್ತೆಯಾಗಿದೆ. ಹೆಚ್ಚಿನ ಹಾನಿ ಸಂಭವಿಸುವ ಸಾಧ್ಯತೆ ಇದೆ. ಕಳೆದ 24

ಜಪಾನ್ನಲ್ಲಿ 6.7 ತೀವ್ರತೆಯ ಪ್ರಬಲ ಭೂಕಂಪ; 24 ಗಂಟೆಗಳಲ್ಲಿ 5 ಬಾರಿ ಕಂಪಿಸಿದ ಭೂಮಿ Read More »

ಅಂತರ್ರಾಷ್ಟ್ರೀಯ ನ್ಯೂಸ್, ಬ್ರೇಕಿಂಗ್ ನ್ಯೂಸ್

ಆರ್ಸಿಬಿ ಅಭಿಮಾನಿಗಳಿಗೆ ಗುಡ್ ನ್ಯೂಸ್ ನೀಡಿದ ಡಿಕೆ ಶಿ

(ನ್ಯೂಸ್‌ ಕಡಬ) newskadaba.com ಡಿ.12: ಬೆಂಗಳೂರಿನ ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ಐಪಿಎಲ್ ಮತ್ತು ಇತರ ಅಂತರರಾಷ್ಟ್ರೀಯ ಮಟ್ಟದ ಕ್ರಿಕೆಟ್ ಪಂದ್ಯಗಳ ಆಯೋಜನೆಗೆ ಅನುಮತಿ ನೀಡಿ ಸಚಿವ ಸಂಪುಟ ಈಗಾಗಲೇ ನಿರ್ಧಾರ ಕೈಗೊಂಡಿದೆ. ಕ್ರಿಕೆಟ್ ಪ್ರಿಯರಿಗೆ ಶುಭ ಸುದ್ದಿ ನೀಡಿದ್ದೇವೆ ಎಂದು ಡಿಸಿಎಂ ಡಿ.ಕೆ. ಶಿವಕುಮಾರ್ ತಿಳಿಸಿದ್ದಾರೆ. ಕ್ರೀಡಾಂಗಣದಲ್ಲಿ ಕೈಗೊಳ್ಳಬೇಕಾದ ಮುನ್ನೆಚ್ಚರಿಕೆಗಳ ಬಗ್ಗೆ ಗೃಹ ಸಚಿವ ಡಾ. ಜಿ ಪರಮೇಶ್ವರ್ ಅವರು ಸಂಬಂಧಪಟ್ಟ ಎಲ್ಲರನ್ನು ಕರೆದು ಮಾತನಾಡಲಿದ್ದಾರೆ. ನ್ಯಾಯಮೂರ್ತಿ ಜಾನ್ ಮೈಕೆಲ್ ಕುನ್ಹಾ ಸಮಿತಿ ಸಲ್ಲಿಸಿರುವ ಶಿಫಾರಸುಗಳನ್ನು ಕಡ್ಡಾಯವಾಗಿ ಜಾರಿಗೊಳಿಸುವಂತೆ

ಆರ್ಸಿಬಿ ಅಭಿಮಾನಿಗಳಿಗೆ ಗುಡ್ ನ್ಯೂಸ್ ನೀಡಿದ ಡಿಕೆ ಶಿ Read More »

ಕ್ರೀಡಾ ನ್ಯೂಸ್

ಆಭರಣ ಪ್ರಿಯರಿಗೆ ಶಾಕಿಂಗ್ ನ್ಯೂಸ್; ಭಾರೀ ಏರಿಕೆ ಕಂಡ ಚಿನ್ನದ ಬೆಲೆ

(ನ್ಯೂಸ್‌ ಕಡಬ) newskadaba.com ಡಿ.12 : ಬಹುಶಃ ನಿರಂತರವಾಗಿ ಏರಿಕೆಯಾಗುತ್ತಿರುವ ಪ್ರಪಂಚದ ಏಕೈಕ ವಸ್ತು ಚಿನ್ನ ಎನಿಸುತ್ತದೆ. ಹಾಗೆಯೇ ದುಡ್ಡಿನ ಬಳಿಕ ಜಗತ್ತಿನಲ್ಲಿ ಅತಿ ಹೆಚ್ಚು ಜನ ಇಷ್ಟಪಡುವ ವಸ್ತು ಕೂಡ ಚಿನ್ನ ಎನಿಸುತ್ತದೆ. ಅಲ್ಲದೆ ಹೂಡಿಕೆಗೆ ಜನ ಅತ್ಯಂತ ಹೆಚ್ಚು ನಂಬುವುದು ಕೂಡ ಬಂಗಾರವನ್ನು ಎನಿಸುತ್ತದೆ. ಇಲ್ಲದಿದ್ದರೆ ಚಿನ್ನ ಈ ಪರಿ ಏರಿಕೆಯಾಗುತ್ತಿತ್ತೆ? ಬಹಳ ಹಿಂದಿನ ಮಾತು ಬಿಡಿ, 2025ರ ಡಿಸಂಬರ್ ವೇಳೆಗೆ 24 ಕ್ಯಾರಟ್ ಚಿನ್ನ 10 ಗ್ರಾಂಗೆ 1,30,000 ರೂಪಾಯಿ ಇತ್ತು. 2026ರಲ್ಲಿ ಇದೇ

ಆಭರಣ ಪ್ರಿಯರಿಗೆ ಶಾಕಿಂಗ್ ನ್ಯೂಸ್; ಭಾರೀ ಏರಿಕೆ ಕಂಡ ಚಿನ್ನದ ಬೆಲೆ Read More »

ಕರಾವಳಿ, ಕರ್ನಾಟಕ, ಬ್ರೇಕಿಂಗ್ ನ್ಯೂಸ್

ಸಾಮಾಜಿಕ ಬಹಿಷ್ಕಾರ ಹಾಕಿದ್ರೆ 1 ಲಕ್ಷ ದಂಡ, 3 ವರ್ಷ ಜೈಲು ಶಿಕ್ಷೆ

(ನ್ಯೂಸ್‌ ಕಡಬ) newskadaba.com ಡಿ.12: ವಿಧಾನಸಭೆಯಲ್ಲಿ ಇಂದು ಕರ್ನಾಟಕ ಸಾಮಾಜಿಕ ಬಹಿಷ್ಕಾರದಿಂದ ಜನರ ರಕ್ಷಣೆ (ತಡೆ, ನಿಷೇಧ ಮತ್ತು ಪರಿಹಾರ) ಮಸೂದೆ ಮಂಡಿಸುವ ಮೂಲಕ ಮಹತ್ವದ ಹೆಜ್ಜೆ ಇಟ್ಟಿದೆ. ಈ ಮಸೂದೆ ಅನ್ವಯ ಇನ್ಮುಂದೆ ಯಾವುದೇ ವ್ಯಕ್ತಿ, ಕುಟುಂಬ ಅಥವಾ ಕುಟುಂಬದ ಸದಸ್ಯರನ್ನು ಸಾಮಾಜಿಕವಾಗಿ ಬಹಿಷ್ಕರಿಸಿದರೆ, 1 ಲಕ್ಷ ರೂ. ದಂಡ ಹಾಗೂ 3 ವರ್ಷ ಜೈಲು ಶಿಕ್ಷೆಗೆ ಗುರಿಯಾಗಬೇಕಾಗುತ್ತದೆ. ಬಹಿಷ್ಕಾರ ಹಾಕುವ ಬಗ್ಗೆ ಸಭೆ-ಪಂಚಾಯಿತಿ ನಡೆಸುವುದು, ಬಹಿಷ್ಕಾರಕ್ಕೆ ಸಹಾಯ, ಪ್ರಚೋದನೆ ಕೊಡುವುದು ಶಿಕ್ಷಾರ್ಹ ಅಪರಾಧವಾಗಲಿದೆ. ಬಹಿಷ್ಕಾರಕ್ಕೆ

ಸಾಮಾಜಿಕ ಬಹಿಷ್ಕಾರ ಹಾಕಿದ್ರೆ 1 ಲಕ್ಷ ದಂಡ, 3 ವರ್ಷ ಜೈಲು ಶಿಕ್ಷೆ Read More »

ಕರ್ನಾಟಕ, ಬ್ರೇಕಿಂಗ್ ನ್ಯೂಸ್
Scroll to Top