News Kadaba

ಉಪ್ಪಿನಂಗಡಿಯಲ್ಲಿ ನೇತ್ರಾವತಿಯ ತಟದಲ್ಲಿ ಪ್ರವಾಹ ಭೀತಿ ➤ ತುರ್ತು ಕಾರ್ಯಾಚರಣೆಗಾಗಿ ಗೃಹರಕ್ಷಕರ ತಂಡ ಸನ್ನದ್ಧವಾಗಿದ್ದು

(ನ್ಯೂಸ್ ಕಡಬ) newskadaba.com ಉಪ್ಪಿನಂಗಡಿ, ಆಗಸ್ಟ್.7.ಉಪ್ಪಿನಂಗಡಿಯಲ್ಲಿ ಆ. 6ರಿಂದ ಭಾರೀ ಮಳೆಯಿಂದಾಗಿ ಜೀವನದಿಗಳಾದ ನೇತ್ರಾವತಿ ಹಾಗೂ ಕುಮಾರಧಾರಾ ನದಿಗಳು ತುಂಬಿ ಹರಿಯುತ್ತಿದ್ದು, ನದಿ ಪಾತ್ರದ ಪ್ರದೇಶಗಳು ಜಲಾವೃತವಾಗುವ ಸಾಧ್ಯತೆ ನಿಚ್ಚಳವಾಗಿದೆ. ನೇತ್ರಾವತಿ ನದಿಯ ನೀರಿನ ಮಟ್ಟ 24 ಮೀಟರ್‌ಗೇರಿದೆ. ಕುಮಾರಧಾರಾ ನದಿಯಲ್ಲೂ ನೀರು ರಭಸವಾಗಿ ಹರಿಯುತ್ತಿದೆ. ಸಂಗಮ ಕ್ಷೇತ್ರವಾದ ಉಪ್ಪಿನಂಗಡಿಯಲ್ಲಿ ನೇತ್ರಾವತಿ ನದಿಯ ಹರಿವಿಗೆ ತಡೆಯಾಗುತ್ತಿದೆ. ಸಹಸ್ರಲಿಂಗೇಶ್ವರ- ಮಹಾಕಾಳಿ ದೇವಾಲಯದ ಬಳಿ ನೇತ್ರಾವತಿ ನದಿಗಿಳಿಯುವ 38 ಮೆಟ್ಟಿಲುಗಳಲ್ಲಿ ನಸುಕಿನ ಜಾವ ಮೂರು ಗಂಟೆಗೆ 6 ಮೆಟ್ಟಿಲುಗಳು ಮಾತ್ರ […]

ಉಪ್ಪಿನಂಗಡಿಯಲ್ಲಿ ನೇತ್ರಾವತಿಯ ತಟದಲ್ಲಿ ಪ್ರವಾಹ ಭೀತಿ ➤ ತುರ್ತು ಕಾರ್ಯಾಚರಣೆಗಾಗಿ ಗೃಹರಕ್ಷಕರ ತಂಡ ಸನ್ನದ್ಧವಾಗಿದ್ದು Read More »

ಕರಾವಳಿ

ನೈಸರ್ಗಿಕ ವಿಕೋಪ ಸಂಭವಿಸುವ ಸಾಧ್ಯತೆ: ಸಾರ್ವಜನಿಕರಾಗಲಿ ನೀರಿನೆಡೆಗೆ ಹೋಗದಂತೆ ಮುನ್ನೆಚ್ಚರಿಕೆ ಕ್ರಮ➤ಬೆಳ್ಳಾರೆ ಪೊಲೀಸ್ ಸೂಚನೆ

(ನ್ಯೂಸ್ ಕಡಬ) newskadaba.com ಮಂಗಳೂರು, ಆಗಸ್ಟ್.7.ಕಳೆದ ಒಂದು ವಾರದಿಂದ ಮಳೆಯ ಪ್ರಮಾಣ ಹೆಚ್ಚಾಗುತ್ತಿರುವುದರಿಂದ ಸಾರ್ವಜನಿಕರು ಮುಂಜಾಗೃತೆವಹಿಸುವಂತೆ ಬೆಳ್ಳಾರೆ ಪೋಲೀಸ್ ಠಾಣಾಧಿಕಾರಿಯವರು ಸೂಚನೆ ನೀಡಿದ್ದಾರೆ. ನೈಸರ್ಗಿಕ ವಿಕೋಪ ಸಂಭವಿಸುವ ಸಾಧ್ಯತೆಗಳಿದ್ದು, ಇಂತಹವುಗಳ ಕಡೆಗೆ ಸಾರ್ವಜನಿಕರಾಗಲಿ ಅಥವಾ ತಮ್ಮ ಮಕ್ಕಳಾಗಲಿ ನೀರಿನೆಡೆಗೆ ಹೋಗದಂತೆ ಮುನ್ನೆಚ್ಚರಿಕೆಯಿಂದ ವಹಿಸತಕ್ಕದ್ದು , ಹೆಚ್ಚು ಮಳೆಯಿಂದಾಗಬಹುದಾದ ಅವಘಡಗಳೇನಾದರೂ ತಮ್ಮ ಪರಿಸರದಲ್ಲಿ ಸಂಭವಿಸಿದರೆ ಸಂಬಂಧಿಸಿದ ಇಲಾಖೆಗೆ ಮಾಹಿತಿ ನೀಡಬೇಕು, ನೈಸರ್ಗಿಕ ಸಮಸ್ಯೆಗಳ ಬಗ್ಗೆ ಎಚ್ಚರವಹಿಸಿ ಆಗಬಹುದಾದ ಹೆಚ್ಚಿನ ಅನಾಹುತಗಳನ್ನು ನಿಯಂತ್ರಿಸುವಲ್ಲಿ ಸಹಕರಿಸಬೇಕಾಗಿ ಮನವಿ ಮಾಡಿದ್ದಾರೆ. ಅಂತಹ ಘಟನೆಗಳು

ನೈಸರ್ಗಿಕ ವಿಕೋಪ ಸಂಭವಿಸುವ ಸಾಧ್ಯತೆ: ಸಾರ್ವಜನಿಕರಾಗಲಿ ನೀರಿನೆಡೆಗೆ ಹೋಗದಂತೆ ಮುನ್ನೆಚ್ಚರಿಕೆ ಕ್ರಮ➤ಬೆಳ್ಳಾರೆ ಪೊಲೀಸ್ ಸೂಚನೆ Read More »

ಕರಾವಳಿ

ಅಪಾಯದಲ್ಲಿ ಕುಂಡಡ್ಕ ಸೇತುವೆ

(ನ್ಯೂಸ್ ಕಡಬ) newskadaba.com ಮಂಗಳೂರು, ಆಗಸ್ಟ್.7.ನಿರಂತರ ಸುರಿಯುತ್ತಿರುವ ಮಳೆಯಿಂದಾಗಿ ಬೆಳ್ಳಾರೆಯಿಂದ ಪೆರುವಾಜೆ-ಕುಂಡಡ್ಕ -ನಾಡೋಳಿ-ಸಾರಕರೆ-ಸರ್ವೆ-ಮೂಲಕ ವೀರಮಂಗಲ ಮೂಲಕ ಕುಮಾರಧಾರ ತಲುಪುವ ಗೌರಿ ಹೊಳೆ ತನ್ನ ಹರಿವು ಹೆಚ್ಚಿಸಿಕೊಂಡಿದೆ. ಕಡಬ ತಾಲೂಕಿನ ಪಾಲ್ತಾಡಿ ಗ್ರಾಮ ಹಾಗೂ ಸುಳ್ಯ ತಾಲೂಕಿನ ಪೆರುವಾಜೆ ಗ್ರಾಮವನ್ನು ಜೋಡಿಸುವಲ್ಲಿ ಗೌರಿಹೊಳೆಗೆ ಅಡ್ಡಲಾಗಿರುವ ಕುಂಡಡ್ಕ ಕಿರು ಸೇತುವೆಯಲ್ಲಿ ನೀರು ಅಪಾಯಕಾರಿ ಮಟ್ಟದಲ್ಲಿ ಇದೆ. ಸೇತುವೆ ತೀರಾ ಶಿಥಿಲಾವಸ್ಥೆಗೆ ತಲುಪಿ ಕುಸಿಯುವ ಹಂತಕ್ಕೆ ಬಂದಿರುವ ಸೇತುವೆಯೂ ಕೊಚ್ಚಿಹೋಗುವ ಭೀತಿಯನ್ನು ಜನತೆ ಎದುರಿಸುತ್ತಿದ್ದಾರೆ. ಈ ಸೇತುವೆ ಕುಸಿದು ಸಂಪರ್ಕ ಕಡಿತವಾದರೆ

ಅಪಾಯದಲ್ಲಿ ಕುಂಡಡ್ಕ ಸೇತುವೆ Read More »

ಕರಾವಳಿ

ಅಬ್ಬರಿಸಿದ ಆಷಾಡ ಮಳೆ ➤ ದುಮ್ಮಿಕ್ಕಿ ಹರಿಯುತ್ತಿರುವ ಕುಮಾರಧಾರ

(ನ್ಯೂಸ್ ಕಡಬ) newskadaba.com ಕಡಬ, ಆಗಸ್ಟ್.7.ಕಡಬ ಭಾಗದಲ್ಲಿ ಮಳೆಗಾಲ ಪ್ರಾರಂಭವಾಗಿದ್ದರೂ ಕಳೆದ ಭಾನುವಾರ ತನಕ ಮಳೆಯ ಆರ್ಭಟ ಕಂಡು ಬಂದಿರಲಿಲ್ಲ, ಆದರೆ ಭಾನುವಾರ ರಾತ್ರಿಯಿಂದ ಆಷಾಡ ಮಳೆ ಅಬ್ಬರಿಸುತ್ತಿದ್ದು, ಹಳ್ಳಕೊಳ್ಳ ತುಂಬಿ ಹರಿಯುತ್ತಿದೆ, ಜೀವನದಿ ಕುಮಾರಧಾರ ಸೋಮವಾರ ದುಮ್ಮಿಕ್ಕಿ ಹರಿಯಲಾರಂಭಿಸಿದೆ. ಕಡಬ, ಪುತ್ತೂರು, ಸುಳ್ಯ, ಬೆಳ್ತಂಗಡಿ ತಾಲೂಕಿನಲ್ಲಿ ಜುಲೈ ತಿಂಗಳ ಅಂತ್ಯದವರೆಗೂ ನಿರೀಕ್ಷಿತ ಮಳೆಯಾಗಿರಲಿಲ್ಲ. ಈ ವರ್ಷ ಮಳೆಯ ಪ್ರಮಾಣ ತುಂಬಾ ಕಡಿಮೆ ಎಂದೇ ಹೇಳಲಾಗುತ್ತಿತ್ತು. ಇದಕ್ಕೆ ಪೂರಕವೆಂಬಂತೆ ಸರಿಸುಮಾರು ಅರ್ಧ ಮಳೆಗಾಲ ಕಳೆದರೂ ನದಿ, ಹೊಳೆ,

ಅಬ್ಬರಿಸಿದ ಆಷಾಡ ಮಳೆ ➤ ದುಮ್ಮಿಕ್ಕಿ ಹರಿಯುತ್ತಿರುವ ಕುಮಾರಧಾರ Read More »

ಕರಾವಳಿ

“ಭಟ್ ಎಸೋಸಿಯೇಟ್ಸ್ ಸಂಸ್ಥೆಯ ಉದ್ಘಾಟನೆ”

(ನ್ಯೂಸ್ ಕಡಬ) newskadaba.com ಮಂಗಳೂರು, ಆಗಸ್ಟ್.7.ಗೃಹ ನಿರ್ಮಾಣ, ಅಡಮಾನ ಸಾಲ (Mortgag Loan) ಉದ್ದಿಮೆ ಸಾಲ ಹಾಗೂ ಇತರ ಸಾಲ ಸೌಲಭ್ಯಕ್ಕಾಗಿ ಬೇಕಾಗುವ ಪ್ರಾಜೇಕ್ಟ್ ರಿಪೋರ್ಟ್ ಇತ್ಯಾದಿ ಸೇವೆಗಳನ್ನು ಒದಗಿಸುವ ಸಲುವಾಗಿ ನಿವೃತ್ತ ಕೆನರಾ ಬ್ಯಾಂಕ್ ಅಧಿಕಾರಿ ಶ್ರೀ ಎ.ಎಸ್ ಭಟ್ ಅವರು “ಭಟ್ ಎಸೋಸಿಯೇಟ್ಸ್” ಎಂಬ ಸಂಸ್ಥೆಯನ್ನು ಬಿಜೈ ಆನೆಗುಂಡಿ ಸಮೀಪ ಇರುವ ಭಾರತಿ ರೆಸಿಡೆನ್ಸಿಯಲ್ಲಿ ಸ್ಥಾಪಿಸಿದ್ದಾರೆ. ಇದರ ಉದ್ಘಾಟನೆಯನ್ನು ಕೆನರಾ ಬ್ಯಾಂಕಿನ ಮಂಗಳೂರು ವೃತ್ತ ಕಚೇರಿಯ ಮಹಾ ಪ್ರಬಂಧಕ ಶ್ರೀ ಯೋಗೀಶ್ ಆಚಾರ್ಯ ಇವರು

“ಭಟ್ ಎಸೋಸಿಯೇಟ್ಸ್ ಸಂಸ್ಥೆಯ ಉದ್ಘಾಟನೆ” Read More »

ಕರಾವಳಿ

ಹೊಸ್ಮಠ ಹಳೆ ಮುಳುಗು ಸೇತುವೆ ಮುಳುಗಡೆ

(ನ್ಯೂಸ್ ಕಡಬ) newskadaba.com ಕಡಬ, ಆಗಸ್ಟ್.7.ಕಳೆದರಡು ದಿನಗಳಿಂದ ಈ ಭಾಗದಲ್ಲಿ ನಿರಂತರ ಧಾರಕಾರ ಮಳೆಯಾಗುತ್ತಿದ್ದು, ಉಪ್ಪಿನಂಗಡಿ – ಕಡಬ – ಸುಬ್ರಹ್ಮಣ್ಯ ರಾಜ್ಯ ಹೆದ್ದಾರಿಯ ಹೊಸ್ಮಠ ಎಂಬಲ್ಲಿ ಗುಂಡ್ಯ ಹೊಳೆಗೆ ಅಡ್ಡಲಾಗಿರುವ ಹಳೆಯದಾದ ಮುಳುಗು ಸೇತುವೆ ಕಳೆದ ರಾತ್ರಿಯಿಂದ ಹಲವು ಭಾರಿ ಮುಳುಗಡೆಯಾಗಿ ತೆರವುಗೊಳ್ಳುತ್ತಿದೆ. ಸೇತುವೆ ಮೇಲೆ ಬೃಹತ್ ಮರದ ದಿಮ್ಮಿಗಳು, ಕಸಕಡ್ಡಿಗಳು ಸಂಗ್ರವಾಗಿದೆ. ಈ ಹಳೆ ಸೇತುವೆ ಪಕ್ಕದಲ್ಲಿರುವ ನೂತನ ಸೇತುವೆ ಈ ಭಾರಿ ಸಂಚಾರಕ್ಕೆ ಮುಕ್ತವಾಗಿದೆ. ಹಾಗಾಗಿ ಸುಗಮ ಸಂಚಾರಕ್ಕೆ ತೊಡಕಾಗುವುದಿಲ್ಲ. ಹಳೆ ಸೇತುವೆ

ಹೊಸ್ಮಠ ಹಳೆ ಮುಳುಗು ಸೇತುವೆ ಮುಳುಗಡೆ Read More »

ಕರಾವಳಿ

ಕಲ್ಲುಗುಡ್ಡೆ: ಕೃಷ್ಣ ಜನ್ಮಾಷ್ಠಮಿ ಸಮಿತಿ ರಚನೆ ➤ ಅಧ್ಯಕ್ಷರಾಗಿ ಜಯಂತ್ ಬರೆಮೇಲು

(ನ್ಯೂಸ್ ಕಡಬ) newskadaba.comಕಲ್ಲುಗುಡ್ಡೆ, ಆಗಸ್ಟ್.7.ನೂಜಿಬಾಳ್ತಿಲ ರೆಂಜಿಲಾಡಿ ಶ್ರೀ ಕೃಷ್ಣ ಜನ್ಮಾಷ್ಠಮಿ ಸಮಿತಿಯನ್ನು ಆದಿತ್ಯವಾರ ಕಲ್ಲುಗುಡ್ಡೆಯಲ್ಲಿ ನಡೆದ ಸಭೆಯಲ್ಲಿ ರಚಿಸಲಾಯಿತು. ಶ್ರೀ ಕೃಷ್ಣ ಜನ್ಮಾಷ್ಠಮಿ ಸಮಿತಿಯ ಅಧ್ಯಕ್ಷರಾಗಿ ಜಯಂತ್ ಬರೆಮೇಲು ಆಯ್ಕೆಯಾಗಿದ್ದಾರೆ. ಉಪಾಧ್ಯಕ್ಷರಾಗಿ ಜಯಪ್ರಕಾಶ್ ಶಾಂತಿಗುರಿ, ಕಾರ್ಯದರ್ಶಿಯಾಘಿ ಯೋಗೀಶ್ ಹಳೆನೂಜಿ, ಜೊತೆಕಾರ್ಯದರ್ಶಿಯಾಗಿ ದಿನೇಶ್ ಕಾನ, ಕೋಶಾಧಿಕಾರಿಯಾಗಿ ಪುರುಷೋತ್ತಮ ಕುಕ್ಕುತ್ತಡಿ ಇವರುಗಳು ಆಯ್ಕೆಯಾಗದ್ದಾರೆ. ಆಗಸ್ಟ್ 25ರಂದು ಶ್ರೀ ಕೃಷ್ಣ ಜನ್ಮಾಷ್ಠಮಿಯನ್ನು ನೂಜಿಬಾಳ್ತಿಲ ಕಲ್ಲುಗುಡ್ಡೆ ಉನ್ನತ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ಆಚರಿಸಲಾಗುವುದು ಹಾಗೂ ಈ ಪ್ರಯುಕ್ತ ಮೊಸರು ಕುಡಿಕೆ, ಕಬಡ್ಡಿ, ಹಗ್ಗಜಗ್ಗಾಟ,

ಕಲ್ಲುಗುಡ್ಡೆ: ಕೃಷ್ಣ ಜನ್ಮಾಷ್ಠಮಿ ಸಮಿತಿ ರಚನೆ ➤ ಅಧ್ಯಕ್ಷರಾಗಿ ಜಯಂತ್ ಬರೆಮೇಲು Read More »

ಕರಾವಳಿ

ಕರ್ನಾಟಕ ಅಭಿವೃದ್ಧಿ ಕಾರ್ಯಕ್ರಮಗಳ ತ್ರೈಮಾಸಿಕ ಪ್ರಗತಿ ಪರಿಶೀಲನಾ ಸಭೆ

(ನ್ಯೂಸ್ ಕಡಬ) newskadaba.com ಮಂಗಳೂರು, ಆಗಸ್ಟ್.7.ಕರ್ನಾಟಕ ಅಭಿವೃದ್ಧಿ ಕಾರ್ಯಕ್ರಮಗಳ ತ್ರೈಮಾಸಿಕ ಪ್ರಗತಿ ಪರಿಶೀಲನಾ ಸಭೆನಡೆಯನ್ನು ಆಯೋಜಿಸಲಾಗಿದೆ. ಆಗಸ್ಟ್ 19 ರಂದು ಬೆಳಿಗ್ಗೆ 11 ಗಂಟೆಗೆ ಸಮುದಾಯ ಭವನ ಸುಭಾಸ್ ನಗರದಲ್ಲಿ ನಡೆಯಲಿದೆ. ಎಂದು ಪಂಚಾಯತ್ ಅಭಿವೃದ್ಧಿ ಅಧಿಕಾರಿ ಮುನ್ನೂರು ಗ್ರಾಮ ಪಂಚಾಯತ್, ಮಂಗಳೂರು ಇವರ ಪ್ರಕಟಣೆ ತಿಳಿಸಿದೆ.

ಕರ್ನಾಟಕ ಅಭಿವೃದ್ಧಿ ಕಾರ್ಯಕ್ರಮಗಳ ತ್ರೈಮಾಸಿಕ ಪ್ರಗತಿ ಪರಿಶೀಲನಾ ಸಭೆ Read More »

ಕರಾವಳಿ

ವಾರ್ಡ್ ಮಟ್ಟದ ಸಾರ್ವಜನಿಕ ಸಮಾಲೋಚನಾ ಸಭೆ

(ನ್ಯೂಸ್ ಕಡಬ) newskadaba.com ಮಂಗಳೂರು, ಆಗಸ್ಟ್.7.ಕರ್ನಾಟಕ ಸರ್ಕಾರವು ಎಡಿಬಿ ನೆರವಿನೊಂದಿಗೆ ಮಂಗಳೂರು ನಗರಕ್ಕೆ ಕ್ವಿಮಿಪ್ ಟ್ರಾಂಚ್-2ರಡಿಯಲ್ಲಿ ಒಳಚರಂಡಿ ಹಾಗೂ ನಿರಂತರ ನೀರು ಸರಬರಾಜು ಯೋಜನೆಯನ್ನು ಅನುಷ್ಠಾನ ಗೊಳಿಸಲಾಗಿದೆ. ಆಗಸ್ಟ್ 7 ರಂದು ಬೆಳಿಗ್ಗೆ 11 ಗಂಟೆಗೆ ವಾರ್ಡ್ ನಂ.4 ರಲ್ಲಿ ವಾರ್ಡ್ ಮಟ್ಟದ ಸಾರ್ವಜನಿಕ ಸಮಾಲೋಚನಾ ಸಭೆಯನ್ನು ಕೃಷ್ಣಾಪುರ 5ನೇ ಬ್ಲಾಕ್ ಯುವಕ ಮಂಡಲದಲಿ,್ಲ ಕೆಯುಐಡಿಎಫ್‍ಸಿ ಹಾಗೂ ಮಂಗಳೂರು ಮಹಾನಗರ ಪಾಲಿಕೆ ಸಹಯೋಗದಿಂದ ಆಯೋಜಿಸಲಾಗಿದೆ. ಎಂದು ಆಯುಕ್ತರು, ಮಂಗಳೂರು ಮಹಾನಗರ ಪಾಲಿಕೆ ಇವರ ಪ್ರಕಟಣೆ ತಿಳಿಸಿದೆ.

ವಾರ್ಡ್ ಮಟ್ಟದ ಸಾರ್ವಜನಿಕ ಸಮಾಲೋಚನಾ ಸಭೆ Read More »

ಕರಾವಳಿ

ಪ.ಪಂಗಡ – ಅಭಿವೃದ್ಧಿ ಕಾರ್ಯಕ್ರಮಗಳಡಿ ಅರ್ಜಿ ಆಹ್ವಾನ

(ನ್ಯೂಸ್ ಕಡಬ) newskadaba.com ಮಂಗಳೂರು, ಆಗಸ್ಟ್.7.2018-19ನೇ ಸಾಲಿನಲ್ಲಿ ಭಾರತ ಸಂವಿಧಾನ ಅನುಚ್ಛೇಧ 275(1)ರಡಿ ಹಾಗೂ ವಿಶೇಷ ಕೇಂದ್ರೀಯ ನೆರವಿನಡಿ ಪರಿಶಿಷ್ಟ ಪಂಗಡವರ ಅಭಿವೃದ್ಧಿ ಕಾರ್ಯಕ್ರಮಗಳಡಿ  ಫಲಾನುಭವಿಗಳಿಂದ ಅರ್ಜಿಯನ್ನು ಆಹ್ವಾನಿಸಲಾಗಿದೆ. ಫಲಾನುಭವಿಗಳ ಆಧಾರಿತ ಕಾರ್ಯಕ್ರಮಗಳಾದ ಹೈನುಗಾರಿಕೆ, ಹಸು/ಎಮ್ಮೆ ಕರು ಘಟಕ, ಕುರಿ/ಮೇಕೆ ಘಟಕ, ಸರಕು ಸಾಗಾಣಿಕೆ ವಾಹನ, ಹಂದಿ ಸಾಕಾಣಿಕೆ ಸೌಲಭ್ಯ ಪಡೆಯಲು ಷರತ್ತಿಗೊಳಪಟ್ಟು ಆಸಕ್ತ ಅರ್ಜಿದಾರರಿಂದ ನಿಗಧಿತ ನಮೂನೆಯಲ್ಲಿ ಅರ್ಜಿ ಆಹ್ವಾನಿಸಲಾಗಿದೆ.ಆದ್ದರಿಂದ ಮೂಲನಿವಾಸಿ ಮತ್ತು ಅರಣ್ಯ ಅವಲಂಭಿತ ಪರಿಶಿಷ್ಟ ವರ್ಗದವರು ನಿಗಧಿತ ನಮೂನೆಯ ಅರ್ಜಿಯನ್ನು ಸಂಬಂಧಪಟ್ಟ ತಾಲೂಕಿನ

ಪ.ಪಂಗಡ – ಅಭಿವೃದ್ಧಿ ಕಾರ್ಯಕ್ರಮಗಳಡಿ ಅರ್ಜಿ ಆಹ್ವಾನ Read More »

ಕರಾವಳಿ
Scroll to Top