News Kadaba

ಜಿಲ್ಲಾ ಗೃಹರಕ್ಷದಳ ಕಚೇರಿಯಲ್ಲಿ ಪ್ರವಾಹ ರಕ್ಷಣಾ ಮುನ್ಸೂಚನಾ ಸಭೆ

(ನ್ಯೂಸ್ ಕಡಬ) newskadaba.com ಮಂಗಳೂರು, ಮೇ.20.ಮೇ 17 ಜಿಲ್ಲಾ ಗೃಹರಕ್ಷಕ ದಳದ ಕಚೇರಿ, ಮೇರಿಹಿಲ್ ಇಲ್ಲಿ ಪ್ರವಾಹ ರಕ್ಷಣಾ ಮುನ್ಸೂಚನೆ ಕುರಿತು ಜಿಲ್ಲಾ ಸಮಾದೇಷ್ಟರಾದ ಡಾ; ಮುರಲೀ ಮೋಹನ್ ಚೂಂತಾರು ಇವರ ಅಧ್ಯಕ್ಷತೆಯಲ್ಲಿ ಘಟಕಾಧಿಕಾರಿಗಳ ಸಭೆಯನ್ನು ಕರೆಯಲಾಗಿತ್ತು ಮುಂಬರುವ ಮಳೆಗಾಲದಲ್ಲಿ ಸಂಭವಿಸಬಹುದಾದ ಅನಾಹುತಗಳನ್ನು ತಡೆಯುವ ಸಲುವಾಗಿ ಸೋಮೇಶ್ವರ, ಉಲ್ಲಾಳ, ಪಣಂಬೂರು, ತಣ್ಣೀರ್ ಬಾವಿ, ಸಸಿಹಿತ್ಲು, ಫಾತಿಮ ಬೀಚ್, ಮೊಗವೀರ್ ಪಟ್ನ ಸುರತ್ಕಲ್ ಬೀಚ್‍ಗಳಿಗೆ ತಲಾ 3 ಜನ ಗೃಹರಕ್ಷಕರನ್ನು ನಿಯೋಜಿಸಲು ಸೂಚಿಸಲಾಯಿತು. ಮಳೆಗಾಲದ ಸಮಯದಲ್ಲಿ ಉಪ್ಪಿನಂಗಡಿಯ ನೇತ್ರಾವತಿ […]

ಜಿಲ್ಲಾ ಗೃಹರಕ್ಷದಳ ಕಚೇರಿಯಲ್ಲಿ ಪ್ರವಾಹ ರಕ್ಷಣಾ ಮುನ್ಸೂಚನಾ ಸಭೆ Read More »

ಕರಾವಳಿ

ವಿದ್ಯಾರ್ಥಿ ನಿಲಯ/ ಆಶ್ರಮ ಶಾಲೆಗಳಿಗೆ ಅರ್ಜಿ ಆಹ್ವಾನ

(ನ್ಯೂಸ್ ಕಡಬ) newskadaba.com ಮಂಗಳೂರು, ಮೇ.20.2019-20 ನೇ ಸಾಲಿನಲ್ಲಿ ಬಂಟ್ವಾಳ ತಾಲೂಕು ಬಿ.ಸಿ ರಸ್ತೆ, ಸಹಾಯಕ ನಿರ್ದೇಶಕರವರ ಕಚೇರಿ(ಗ್ರೇಡ್ -2), ಸಮಾಜ ಕಲ್ಯಾಣ ಇಲಾಖಾ ಅಧೀನದಲ್ಲಿ ಕಾರ್ಯನಿರ್ವಹಿಸುತ್ತಿರುವ ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡದ ಮೆಟ್ರಿಕ್ ಪೂರ್ವ ವಿದ್ಯಾರ್ಥಿ ನಿಲಯಗಳಲ್ಲಿ ಹೊಸದಾಗಿ ಪ್ರವೇಶ ಪಡೆಯಲು 5 ನೇ ತರಗತಿಯಿಂದ 10 ನೇ ತರಗತಿಯವರೆಗಿನ ವಿದ್ಯಾರ್ಥಿ/ವಿದ್ಯಾರ್ಥಿನಿಯರಿಂದ ಆನ್‍ಲೈನ್ ಮೂಲಕ ಅರ್ಜಿ ಆಹ್ವಾನಿಸಲಾಗಿದೆ. ಆಸಕ್ತ ಪರಿಶಿಷ್ಟ ಜಾತಿ ವಿದ್ಯಾರ್ಥಿಗಳು www.sw.kar.nic.in  ವೆಬ್‍ಸೈಟ್ ಮೂಲಕ ಮತ್ತು ಪರಿಶಿಷ್ಟ ವರ್ಗದ ವಿದ್ಯಾರ್ಥಿಗಳು www.tw.kar.nic.in 

ವಿದ್ಯಾರ್ಥಿ ನಿಲಯ/ ಆಶ್ರಮ ಶಾಲೆಗಳಿಗೆ ಅರ್ಜಿ ಆಹ್ವಾನ Read More »

ಕರಾವಳಿ

ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಗ್ರಾಮ ಪಂಚಾಯತ್‍ಗಳಿಗೆ 2019 ರ ಸಾಲಿನ ನಡೆಯಲಿರುವ ಉಪ ಚುನವಾಣೆಗಳು➤ ಶಸ್ತ್ರಾಸ್ತ್ರಗಳ ಠೇವಣಿ

  (ನ್ಯೂಸ್ ಕಡಬ) newskadaba.com ಮಂಗಳೂರು, ಮೇ.20.ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಗ್ರಾಮ ಪಂಚಾಯತ್‍ಗಳಿಗೆ 2019 ರ ಸಾಲಿನ ಉಪ ಚುನವಾಣೆಗಳು ನಡೆಯಲಿದ್ದು, ಪೊಲೀಸ್ ಆಯುಕ್ತರ ಕಾರ್ಯವ್ಯಾಪ್ತಿಯನ್ನು ಹೊರತುಪಡಿಸಿ, ದಕ್ಷಿಣ ಕನ್ನಡ ಜಿಲ್ಲೆಯ ಪುತ್ತೂರು (1- ಕಬಕ ಮತ್ತು 5- 34 ನೆಕ್ಕಿಲಾಡಿ) ಮತ್ತು ಬೆಳ್ತಂಗಡಿ (28 ಉಜಿರೆ ಮತ್ತು 29 ಕೊಯ್ಯೂರು) ಗ್ರಾಮ ಪಂಚಾಯತಿಗಳಿಗೆ ಸಂಬಂಧಪಟ್ಟಂತೆ ಆಯುಧ ಪರವಾನಿಗೆ ಹೊಂದಿರುವ ಪರವಾನಿಗೆದಾರರು ತನ್ನ ಎಲ್ಲಾ ಶಸ್ತ್ರಾಸ್ತ್ರಗಳನ್ನು ಮೇ 27 ರೊಳಗೆ ಠೇವಣಿ ಇರಿಸಲು ದಕ್ಷಿಣ ಕನ್ನಡ ಜಿಲ್ಲಾಧಿಕಾರಿ

ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಗ್ರಾಮ ಪಂಚಾಯತ್‍ಗಳಿಗೆ 2019 ರ ಸಾಲಿನ ನಡೆಯಲಿರುವ ಉಪ ಚುನವಾಣೆಗಳು➤ ಶಸ್ತ್ರಾಸ್ತ್ರಗಳ ಠೇವಣಿ Read More »

ಕರಾವಳಿ

‘ನಮ್ಮ ಸುಬ್ರಹ್ಮಣ್ಯ’ ತಂಡದಿಂದ ಶ್ರಮದಾನ ➤ ಯಾತ್ರಾರ್ಥಿಗಳು ರಸ್ತೆ ಬದಿಯಲ್ಲಿ ಬಿಸಾಡಿದ್ದ ತ್ಯಾಜ್ಯ ಸಂಗ್ರಹ

(ನ್ಯೂಸ್ ಕಡಬ) newskadaba.com ಸುಬ್ರಹ್ಮಣ್ಯ, ಮೇ.20. ದಕ್ಷಿಣ ಭಾರತದ ಪ್ರಮುಖ ಧಾರ್ಮಿಕ ಕ್ಷೇತ್ರವಾದ ಕುಕ್ಕೇ ಸುಬ್ರಹ್ಮಣ್ಯದ ರಸ್ತೆ ಬದಿಯಲ್ಲಿ ಯಾತ್ರಾರ್ಥಿಗಳು ಬಿಸಾಡಿದ್ದ ತ್ಯಾಜ್ಯವನ್ನು ‘ನಮ್ಮ ಸುಬ್ರಹ್ಮಣ್ಯ’ ತಂಡದ ಯುವಕರು ಶ್ರಮದಾನದ ಮೂಲಕ ಸ್ವಚ್ಛ ಮಾಡಿದರು. ಶನಿವಾರ ಬೆಳಗ್ಗೆ 7 ಗಂಟೆಯಿಂದ 9 ಗಂಟೆಯವರೆಗೆ ತಂಡದ 15 ಕ್ಕೂ ಹೆಚ್ಚು ಕಾರ್ಯಕರ್ತರು ಕುಕ್ಕೇ ಸುಬ್ರಹ್ಮಣ್ಯದ ದೇವರಗದ್ದೆ ರಸ್ತೆಯ ಎರಡೂ ಬದಿಗಳಲ್ಲಿ 2 ಕಿಮೀ ವ್ಯಾಪ್ತಿಯಲ್ಲಿ ಸ್ವಚ್ಛ ಮಾಡಿ ಸುಮಾರು 3 ಪಿಕಪ್ ನಷ್ಟು ಪ್ಲಾಸ್ಟಿಕ್, ಬಿಯರ್ ಬಾಟಲಿ ಹಾಗೂ

‘ನಮ್ಮ ಸುಬ್ರಹ್ಮಣ್ಯ’ ತಂಡದಿಂದ ಶ್ರಮದಾನ ➤ ಯಾತ್ರಾರ್ಥಿಗಳು ರಸ್ತೆ ಬದಿಯಲ್ಲಿ ಬಿಸಾಡಿದ್ದ ತ್ಯಾಜ್ಯ ಸಂಗ್ರಹ Read More »

ಕರಾವಳಿ

ಯಾರಾಗ್ತಾರೆ ಭಾರತದ ಮುಂದಿನ ಪ್ರಧಾನಿ..? ➤ ಕರ್ನಾಟಕದಲ್ಲಿ ಯಾವ ಪಕ್ಷ ಹೆಚ್ಚು ಸ್ಥಾನಗಳನ್ನು ಗೆಲ್ಲುತ್ತೆ..? ➤ ಹೊರಬಿತ್ತು 2019ರ ಲೋಕಸಭಾ ಚುನಾವಣೋತ್ತರ ಸಮೀಕ್ಷೆ

(ನ್ಯೂಸ್ ಕಡಬ) newskadaba.com ನವದೆಹಲಿ, ಮೇ.19. ಲೋಕಸಭಾ ಚುನಾವಣೆಯ ಏಳನೇ ಹಂತದ ಮತದಾನವು ಭಾನುವಾರದಂದು ಮುಕ್ತಾಯವಾಗಿದ್ದು, ವಿವಿಧ ಸಂಸ್ಥೆಗಳು ಚುನಾವಣೋತ್ತರ ಸಮೀಕ್ಷೆಯ ಫಲಿತಾಂಶಗಳನ್ನು ಪ್ರಕಟಿಸಿದೆ. ಬಹುತೇಕ ಸಂಸ್ಥೆಗಳ ಎಕ್ಸಿಟ್ ಪೋಲ್ ಗಳ ಪ್ರಕಾರ ಕೇಂದ್ರದಲ್ಲಿ ಎರಡನೇ ಬಾರಿಗೆ ನರೇಂದ್ರ ಮೋದಿ ನೇತೃತ್ವದ ಎನ್‌ಡಿಎ ಮೈತ್ರಿ ಕೂಟವು ಸರ್ಕಾರ ರಚಿಸುವುದು ಖಚಿತವಾಗಿದೆ. ಕರ್ನಾಟಕದಲ್ಲೂ ಬಿಜೆಪಿಯು ಹೆಚ್ಚಿನ ಸ್ಥಾನಗಳನ್ನು ಗೆಲ್ಲುವ ಮೂಲಕ ದೊಡ್ಡ ಪಕ್ಷವಾಗಿ ಹೊರ ಹೊಮ್ಮಲಿದ್ದು, ಕಾಂಗ್ರೆಸ್ – ಜೆಡಿಎಸ್ ಮೈತ್ರಿಕೂಟಕ್ಕೆ ಶಾಕ್‌ ನೀಡಲಿದೆ.   ಎಬಿಪಿ ನ್ಯೂಸ್:

ಯಾರಾಗ್ತಾರೆ ಭಾರತದ ಮುಂದಿನ ಪ್ರಧಾನಿ..? ➤ ಕರ್ನಾಟಕದಲ್ಲಿ ಯಾವ ಪಕ್ಷ ಹೆಚ್ಚು ಸ್ಥಾನಗಳನ್ನು ಗೆಲ್ಲುತ್ತೆ..? ➤ ಹೊರಬಿತ್ತು 2019ರ ಲೋಕಸಭಾ ಚುನಾವಣೋತ್ತರ ಸಮೀಕ್ಷೆ Read More »

ರಾಷ್ಟ್ರೀಯ ನ್ಯೂಸ್

ಮಾಜಿ ಎಂಇಎಸ್ ಶಾಸಕ ಸಂಭಾಜಿ ಪಾಟೀಲ್ ವಿಧಿವಶ

(ನ್ಯೂಸ್ ಕಡಬ) newskadaba.com ಬೆಳಗಾವಿ, ಮೇ.18. ಮಾಜಿ ಎಂಇಎಸ್ ಶಾಸಕ ಸಂಭಾಜಿ ಪಾಟೀಲ ತೀವ್ರ ಅನಾರೋಗ್ಯದಿಂದ ಬಳಲುತ್ತಿದ್ದ ಬೆಳಗಾವಿ ನಗರದ ಖಾಸಗಿ ಆಸ್ಪತ್ರೆಯಲ್ಲಿ ನಿಧನರಾಗಿದ್ದಾರೆ.ಹಿಂದಿನ ಮುಖ್ಯಮಂತ್ರಿ ಎಸ್ ಬಂಗಾರಪ್ಪ ಅವರೊಂದಿಗೆ ಉತ್ತಮ ಭಾಂದವ್ಯ ಹೊಂದಿದ್ದ ಸಂಭಾಜಿ ಪಾಟೀಲ 1990 ರಲ್ಲಿ ಮಹಾಪೌರರಾಗಿದ್ದಾಗ ಹಿಡಕಲ್ ಜಲಾಶಯದಿಂದ ಬೆಳಗಾವಿ ಜಿಲ್ಲೆಗೆ ನೀರು ತರುವಲ್ಲಿ ಪ್ರಮುಖ ಪಾತ್ರ ವಹಿಸಿದ್ದರು. ಆಗ ಮುಖ್ಯಮಂತ್ರಿ ಬಂಗಾರಪ್ಪ ಅವರಿಗೆ ಕೇಸರಿಪೇಟಾ ತೊಡಿಸಿ ಬಹಿರಂಗವಾಗಿ ಸನ್ಮಾನ ಮಾಡಿದ ಮೊದಲ ಎಂಇಎಸ್ ಮಹಾಪೌರ ಕನ್ನಡ ಭಾಷಿಕ ಜನರ ಜೊತೆಗೆ ಒಳ್ಳೆಯ

ಮಾಜಿ ಎಂಇಎಸ್ ಶಾಸಕ ಸಂಭಾಜಿ ಪಾಟೀಲ್ ವಿಧಿವಶ Read More »

ರಾಷ್ಟ್ರೀಯ ನ್ಯೂಸ್

ಧೋನಿಗೆ ಆಕ್ರಮಣಕಾರಿಯಾಗಿ ಆಡಲು ಪೂರ್ತಿ ಸ್ವಾತಂತ್ರ್ಯ ನೀಡುವುದು ಉತ್ತಮ: ಹರ್ಭಜನ್ ಸಿಂಗ್

(ನ್ಯೂಸ್ ಕಡಬ) newskadaba.com ನವದೆಹಲಿ, ಮೇ.18. “ಆರಂಭದಿಂದಲೇ ಆಕ್ರಮಣಕಾರಿ ಆಟಕ್ಕೆ ಇಳಿದಾಗಲೆಲ್ಲ ಧೋನಿ ಉತ್ತಮ ಪ್ರದರ್ಶನ ನೀಡುವುದನ್ನು ನಾವು ಕಂಡಿದ್ದೇವೆ. ಇದೇ ರೀತಿಯ ಬ್ಯಾಟಿಂಗ್‌ ನಡೆಸಲು ಅವರಿಗೆ ತಂಡದ ಆಡಳಿತ ಮಂಡಳಿ ಅನುಮತಿ ನೀಡಬೇಕು.  ಮಹೇಂದ್ರ ಸಿಂಗ್‌ ಧೋನಿ ಅವರಲ್ಲಿ ಈಗಲೂ ಸಿಕ್ಸ್‌-ಹಿಟ್ಟಿಂಗ್‌ ಪವರ್‌ ಇದೆ. ಹೀಗಾಗಿ ವಿಶ್ವಕಪ್‌ ವೇಳೆ ಆಕ್ರಮಣಕಾರಿ ಆಟವಾಡಲು ಅವರಿಗೆ ಆಡಳಿತ ಮಂಡಳಿ ಸ್ವಾತಂತ್ರ್ಯ ನೀಡಬೇಕು ಎಂದು ಹರ್ಭಜನ್‌ ಸಿಂಗ್‌ ಹೇಳಿದ್ದಾರೆ. ಹಾರ್ದಿಕ್‌ ಪಾಂಡ್ಯ ಅವರ ಬಿರುಸಿನ ಆಟಕ್ಕೂ ನಿರ್ಬಂಧ ವಿಧಿಸಬಾರದು’ ಎಂದು

ಧೋನಿಗೆ ಆಕ್ರಮಣಕಾರಿಯಾಗಿ ಆಡಲು ಪೂರ್ತಿ ಸ್ವಾತಂತ್ರ್ಯ ನೀಡುವುದು ಉತ್ತಮ: ಹರ್ಭಜನ್ ಸಿಂಗ್ Read More »

ಕ್ರೀಡಾ ನ್ಯೂಸ್

ರಾಜ್ಯ ಸರ್ಕಾರಿ ನೌಕರರ ಸಂಘ – ಜಿಲ್ಲಾ ಶಾಖೆ ಚುನಾವಣೆ

(ನ್ಯೂಸ್ ಕಡಬ) newskadaba.com,ಮಂಗಳೂರು,ಮೇ.18.  ಕರ್ನಾಟಕ ರಾಜ್ಯ ಸರ್ಕಾರಿ ನೌಕರರ ಸಂಘ ದಕ್ಷಿಣ ಕನ್ನಡ ಜಿಲ್ಲಾ ಶಾಖೆಯ ಕಾರ್ಯಾಕಾರಿ ಸಮಿತಿ ಸದಸ್ಯರು, ಅಧ್ಯಕ್ಷರು, ಖಜಾಂಚಿ ಮತ್ತು ರಾಜ್ಯ ಪರಿಷತ್ ಸದಸ್ಯರ ಸ್ಥಾನಗಳಿಗೆ ಚುನಾವಣಾ ಅಧಿಸೂಚನೆ ಹೊರಡಿಸಲಾಗಿದ್ದು ಚುನಾವಣಾಧಿಕಾರಿಯಾಗಿ ಎನ್. ಎಸ್. ಶೋಭಾ ಮಾರಾಟಾಧಿಕಾರಿ ಸಹಕಾರ ಸ0ಘಗಳ ಸಹಾಯಕ ನಿಬ0ಧಕರ ಕಚೇರಿ, ಪುತ್ತೂರು ಇವರನ್ನು ನೇಮಕ ಮಾಡಲಾಗಿದೆ. ಅರ್ಹ ಮತದಾರರ ಪಟ್ಟಿಯನ್ನು ಹಾಗೂ ಚುನಾವಣಾ ವೇಳಾಪಟ್ಟಿಯನ್ನು ಕರ್ನಾಟಕ ರಾಜ್ಯ ಸರ್ಕಾರಿ ನೌಕರರ ಸಂಘದ ದಕ್ಷಿಣ ಕನ್ನಡ. ಜಿಲ್ಲಾ ಶಾಖೆ ಕಚೇರಿಯ ಸೂಚನಾ

ರಾಜ್ಯ ಸರ್ಕಾರಿ ನೌಕರರ ಸಂಘ – ಜಿಲ್ಲಾ ಶಾಖೆ ಚುನಾವಣೆ Read More »

ಕರಾವಳಿ

ಮೊರಾರ್ಜಿ ದೇಸಾಯಿ ವಸತಿ ಶಾಲೆಗಳಿಗೆ ಅತಿಥಿ ಶಿಕ್ಷಕರು/ಉಪನ್ಯಾಸಕರ ಹುದ್ದೆಗೆ ಅರ್ಜಿ ಆಹ್ವಾನ

(ನ್ಯೂಸ್ ಕಡಬ) newskadaba.com ಮಂಗಳೂರು, ಮೇ.18. ದಕ್ಷಿಣ ಕನ್ನಡ ಜಿಲ್ಲೆಯ ಸಮಾಜ ಕಲ್ಯಾಣ ಇಲಾಖಾ ಅಧೀನದಲ್ಲಿ ಕಾರ್ಯನಿರ್ವಹಿಸುತ್ತಿರುವ ಮಂಗಳೂರು ತಾಲೂಕಿನ ಮೆನ್ನಬೆಟ್ಟು ಗ್ರಾಮದ ಕಮ್ಮಾಜೆಯ ಮೊರಾರ್ಜಿ ದೇಸಾಯಿ ವಸತಿ ಶಾಲಾ ವಿಭಾಗದಲ್ಲಿನ ಗಣಿತ, ವಿಜ್ಞಾನ, ಕನ್ನಡ ಸಹಶಿಕ್ಷಕರ ಹುದ್ದೆಗಳಿಗೆ ಹಾಗೂ ಕಾಲೇಜು ವಿಭಾಗದ ಗಣಿತ, ಭೌತಶಾಸ್ತ್ರ, ಜೀವಶಾಸ್ತ್ರ, ರಸಾಯನಶಾಸ್ತ್ರ ಮತ್ತು ಗಣಕ ವಿಜ್ಞಾನ ಹುದ್ದೆಗಳಿಗೆ ಅರ್ಜಿ ಆಹ್ವಾನಿಸಲಾಗಿದೆ. ಮಾಸಿಕ ಗೌರವಧನದ ಮೇರೆಗೆ ನಿಗದಿತ ವಿದ್ಯಾರ್ಹತೆಯನ್ನು ಹೊಂದಿರುವ ಆಸಕ್ತ ಅಭ್ಯರ್ಥಿಗಳು ಅತಿಥಿü ಶಿಕ್ಷಕರು ಹಾಗೂ ಉಪನ್ಯಾಸಕರ ಹುದ್ದೆಗಳಿಗೆ ಮೇ

ಮೊರಾರ್ಜಿ ದೇಸಾಯಿ ವಸತಿ ಶಾಲೆಗಳಿಗೆ ಅತಿಥಿ ಶಿಕ್ಷಕರು/ಉಪನ್ಯಾಸಕರ ಹುದ್ದೆಗೆ ಅರ್ಜಿ ಆಹ್ವಾನ Read More »

ಕರಾವಳಿ

ಪರಿಶಿಷ್ಟವರ್ಗ ಮತ್ತು ಸಮಾಜ ಕಲ್ಯಾಣ ಇಲಾಖಾ ವತಿಯಿಂದ ವಿದ್ಯಾರ್ಥಿನಿಲಯಗಳಿಗೆ ಅರ್ಜಿ ಆಹ್ವಾನ

(ನ್ಯೂಸ್ ಕಡಬ) newskadaba.com ಮಂಗಳೂರು, ಮೇ.18. ಸಮಾಜ ಕಲ್ಯಾಣ ಇಲಾಖಾ ವತಿಯಿಂದ ಮತ್ತು ಪರಿಶಿಷ್ಟವರ್ಗ ಕಲ್ಯಾಣ ಇಲಾಖಾ ವತಿಯಿಂದ ನಡೆಸಲ್ಪಡುತ್ತಿರುವ ವಿದ್ಯಾರ್ಥಿನಿಲಯಗಳಿಗೆ 2019-20 ನೇ ಸಾಲಿಗೆ ವಿದ್ಯಾರ್ಥಿಗಳನ್ನು ಸೇರ್ಪಡೆಗೊಳಿಸಲು ಆನ್‍ಲೈನ್ ಮೂಲಕ ಅರ್ಜಿ ಅಹ್ವಾನಿಸಲಾಗಿದೆ. ಆಸಕ್ತ ಪ.ಜಾತಿ ವಿದ್ಯಾರ್ಥಿಗಳು www://admissions.kar.nic.in/hosteladmission ವೆಬ್‍ಸೈಟ್ ಮೂಲಕ ಮತ್ತು ಪರಿಶಿಷ್ಟ ವರ್ಗದ ವಿದ್ಯಾರ್ಥಿಗಳು www:kar.nic.in/hosteladmission  ವೆಬ್‍ಸೈಟ್ ಮೂಲಕ ಅರ್ಜಿ ಸಲ್ಲಿಸಬಹುದಾಗಿದೆ. ಮೆಟ್ರಿಕ್ ಪೂರ್ವ ವಿದ್ಯಾರ್ಥಿನಿಲಯಗಳಿಗೆ ವಿದ್ಯಾರ್ಥಿಗಳ ಹೆತ್ತವರ ಆದಾಯ ರೂ. 2 ಲಕ್ಷ ಮತ್ತು ಮೆಟ್ರಿಕ್ ನಂತರದ ವಿದ್ಯಾರ್ಥಿನಿಲಯಗಳಿಗೆ ವಿದ್ಯಾರ್ಥಿಗಳ ಹೆತ್ತವರ

ಪರಿಶಿಷ್ಟವರ್ಗ ಮತ್ತು ಸಮಾಜ ಕಲ್ಯಾಣ ಇಲಾಖಾ ವತಿಯಿಂದ ವಿದ್ಯಾರ್ಥಿನಿಲಯಗಳಿಗೆ ಅರ್ಜಿ ಆಹ್ವಾನ Read More »

ಕರಾವಳಿ
Scroll to Top